Breaking News

ಆರೋಗ್ಯ ಇಲಾಖೆ ಕ್ವಾಟರ್ಸ್ ನಲ್ಲಿಯೇ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ; ಮೂವರು ಆರೋಪಿಗಳು ಅರೆಸ್ಟ್

ಆರೋಗ್ಯ ಇಲಾಖೆ ಕ್ವಾಟರ್ಸ್ ನಲ್ಲಿಯೇ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ; ಮೂವರು ಆರೋಪಿಗಳು ಅರೆಸ್ಟ್ ಮಂಡ್ಯ: ರಾಜ್ಯದಲ್ಲಿ ಮತ್ತೊಂದು ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಅದು ಆರೋಗ್ಯ ಇಲಾಖೆಯ ಕ್ವಾಟರ್ಸ್ ನಲ್ಲಿಯೇ ಇಂತದ್ದೊಂದು ಕೃತ್ಯವೆಸಗಲಾಗುತ್ತಿತ್ತು ಎಂಬುದು ಆಘಾತಕ್ಕೆ ಕಾರಣವಾಗಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ಆರೋಗ್ಯ ಇಲಾಖೆ ಕ್ವಾಟರ್ಸ್ ನಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಮಾಡಲಾಗುತ್ತಿತ್ತು.

Read More »

ಮಹಿಳೆ ಕಿಡ್ನಾಪ್ ಕೇಸ್ : ಆರೋಪಿ ಸತೀಶ್ ಬಾಬು 8 ದಿನ ‘SIT’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

ಬೆಂಗಳೂರು : ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಾಸಕ ಎಚ್ ಡಿ ರೇವಣ್ಣ ಅವರನ್ನು ಬಂಧಿಸಲಾಗಿದ್ದು ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿಯಾಗಿರುವ ಭವಾನಿ ರೇವಣ್ಣ ಸಂಬಂಧಿಯಾಗಿರುವ ಸತೀಶ್ ಭಾವವನ್ನು ಇದೀಗ ಎಂಟು ದಿನಗಳ ಕಾಲ ಎಸ್ ಐ ಟಿ ಕಸ್ಟಡಿಗೆ ನೀಡಿ ಬೆಂಗಳೂರಿನ 17ನೇ ಎಸಿ ಎಂ ಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ಹೌದು ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಎಸ್‌ಐಟಿ ಸತೀಶ್ …

Read More »

ಚುನಾವಣಾ ಚೆಕ್‌ಪೋಸ್ಟ್‌ ಅಧಿಕಾರಿ ಹೃದಯಾಘಾತದಿಂದ ಸಾವು

ಬೀದರ್‌ ಜಿಲ್ಲೆಯ ಚಿಟಗುಪ್ಪ ತಾಲ್ಲೂಕಿನ ಕುಡಂಬಲ್‌ ಚುನಾವಣಾ ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಹಾಯಕ ಕೃಷಿ ಅಧಿಕಾರಿ ಆನಂದ ತೆಲಂಗ್‌ (32) ಹೃದಯಾಘಾತದಿಂದ ಸೋಮವಾರ ಮಧ್ಯಾಹ್ನ ನಿಧನರಾದರು. ‘ನಿರ್ಣಾ ರೈತ ಸಂಪರ್ಕ ಕೇಂದ್ರದ ಸಹಾಯಕ ಕೃಷಿ ಅಧಿಕಾರಿಯಾಗಿದ್ದ ಆನಂದ ಅವರು ಚುನಾವಣಾ ಕರ್ತವ್ಯಕ್ಕಾಗಿ ಕುಡಂಬಲ್‌ ಚೆಕ್‌ಪೋಸ್ಟ್‌ನಲ್ಲಿ ನಿಯೋಜನೆಗೊಂಡಿದ್ದರು.   ಬೆಳಿಗ್ಗೆ 8ರಿಂದ ಮಧ್ಯಾಹ್ನ 3ರ ಪಾಳಿ ಕರ್ತವ್ಯದಲ್ಲಿದ್ದರು. ಮಧ್ಯಾಹ್ನ ತೀವ್ರ ತೆರನಾದ ಹೃದಯಾಘಾತವಾಗಿದೆ. ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗ ಮಧ್ಯೆ ಮಧ್ಯಾಹ್ನ 1ಕ್ಕೆ ಕೊನೆಯುಸಿರೆಳೆದಿದ್ದಾರೆ’ …

Read More »

ಮಂಗಳವಾರ ಮತದಾನ: ಮತದಾರರಿಗೆ ವಿಶೇಷ ಮನವಿ ಮಾಡಿದ ಆಯೋಗ

ಬೆಂಗಳೂರು, ಮೇ 06: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರ ಮಂಗಳವಾರ ಮತದಾನ ನಡೆಯಲಿದೆ. ಬಿಸಿಲಿನ ಝಳ, ಶಾಖದ ಅಲೆಯ ನಡುವೆಯೇ ಉತ್ತರ ಕರ್ನಾಟಕ ಭಾಗದಲ್ಲಿ ಜನರು ಮತದಾನ ಮಾಡಬೇಕಿದೆ. ಮತದಾನದ ಹಿನ್ನಲೆಯಲ್ಲಿ ಚುನಾವಣಾ ಆಯೋಗ ಮತದಾರರಿಗೆ ವಿಶೇಷ ಮನವಿ ಮಾಡಿದೆ. ಮತದಾನಕ್ಕೆ ಚುನಾವಣಾ ಆಯೋಗ ಸಕಲ ರೀತಿಯಲ್ಲಿ ಸಜ್ಜಾಗಿದೆ. ಮಾಸ್ಟರಿಂಗ್ ಕಾರ್ಯ ಮುಗಿಸಿಕೊಂಡು ಚುನಾವಣಾ ಸಿಬ್ಬಂದಿಗಳು ಸೋಮವಾರ ಸಂಜೆಯ ವೇಳೆಗೆ ಮತಗಟ್ಟೆಗೆ ತಲುಪಲಿದ್ದಾರೆ. ಮಂಗಳವಾರ ಬೆಳಗ್ಗೆ 7 …

Read More »

ವಾರಣಾಸಿಯಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆಗೆ ಮುಹೂರ್ತ ಫಿಕ್ಸ್!

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮೇ 14 ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಭಾನುವಾರ ಈ ವಿಷಯ ತಿಳಿಸಿದ ವಾರಣಾಸಿ ಬಿಜೆಪಿ ನಗರಾಧ್ಯಕ್ಷ ವಿದ್ಯಾಸಾಗರ್ ರೈ, ಮೇ 13 ಸೋಮವಾರ ಮೋದಿ ಅವರು ಕ್ಷೇತ್ರದಲ್ಲಿ ಬೃಹತ್ ರೋಡ್‌ಶೋ ನಡೆಸಲಿದ್ದು, ಅದಕ್ಕಾಗಿ ಎಲ್ಲಾ ಸಿದ್ಧತೆಗಳು ನಡೆಯುತ್ತಿದೆರುವುದಾಗಿ ತಿಳಿಸಿದರು. ‘ರೋಡ್‌ಶೋಗೆ ಮಾರ್ಗವನ್ನು ಅಂತಿಮಗೊಳಿಸಲಾಗಿದೆ, ಮೇ 14 ರಂದು ಪ್ರಧಾನಿ ಮೋದಿ ವಾರಣಾಸಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ’ …

Read More »

ನಾಳೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ : ಈ ದಾಖಲೆ ಇದ್ರೂ ನೀವು ‘ವೋಟ್’ ಹಾಕಬಹುದು!

ಬೆಂಗಳೂರು : ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೇ 7 ರ ನಾಳೆ ಮತದಾನ ನಡೆಯಲಿದ್ದು, ಮತದಾನ ಮಾಡಲು ಭಾವಚಿತ್ರ ಹೊಂದಿರುವ ಮತದಾರರ ಗುರುತಿನ ಚೀಟಿ (ಎಪಿಕ್ ಕಾರ್ಡ್) ವನ್ನು ಹೊಂದಿಲ್ಲದಿದ್ದರೂ ಮತದಾರರು ಚುನಾವಣಾ ಆಯೋಗ ತಿಳಿಸಿದ ಕೆಳಕಂಡ 12 ಪರ್ಯಾಯ ದಾಖಲಾತಿಗಳಲ್ಲಿ ಒಂದು ದಾಖಲಾತಿಯನ್ನು ಮತಗಟ್ಟೆ ಅಧಿಕಾರಿಗಳಿಗೆ ತೋರಿಸಿ ಮತದಾನ ಮಾಡಬಹುದಾಗಿದೆ. ಮೇ 7ರ ಬೆಳಗಿನ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ಮಾಡಲು ಅವಧಿಯನ್ನು ನಿಗದಿಪಡಿಸಿದ್ದು, …

Read More »

ಬೆಳಗಾವಿ ಲೋಕಸಭೆ: 4,524 ಮತಗಟ್ಟೆ, 24 ಸಾವಿರ ಸಿಬ್ಬಂದಿ ಸನ್ನದ್ಧ

ಬೆಳಗಾವಿ: ‘ಜಿಲ್ಲೆಯಲ್ಲಿ ಮೇ 7ರಂದು ನಡೆಯಲಿರುವ ಲೋಕಸಭೆ ಚುನಾವಣೆ ಮತದಾನ ಪ್ರಕ್ರಿಯೆಯನ್ನು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸಲು ಜಿಲ್ಲಾಡಳಿತದಿಂದ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ’ ಎಂದು ಜಿಲ್ಲಾ ಚುನಾವಣಾಧಿಕಾರಿ ನಿತೇಶ್‌ ‍ಪಾಟೀಲ ಹೇಳಿದರು. ಇಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ 13 ಮಂದಿ, ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಮಹಿಳೆ ಸೇರಿದಂತೆ 18 ಅಭ್ಯರ್ಥಿಗಳು ಕಣದಲ್ಲಿದ್ದಾರೆ.ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ 2,086, ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ 1,896, ಉತ್ತರ ಕನ್ನಡ ಲೋಕಸಭೆ …

Read More »

ಲೋಕಸಭಾ ಚುನಾವಣೆ 2024: ಭಾರತದ ಚುನಾವಣಾ ಪ್ರಕ್ರಿಯೆ ನೋಡಲು ಬಂದ 23 ದೇಶಗಳ 75 ಪ್ರತಿನಿಧಿಗಳು

ಲೋಕಸಭೆ ಚುನಾವಣೆ ಆರಂಭವಾಗಿದೆ. ಈ ಬಾರಿಯ ಚುನಾವಣೆಯಲ್ಲಿ 400 ಸ್ಥಾನಗಳ ಗುರಿಯೊಂದಿಗೆ ಬಿಜೆಪಿ ಅಖಾಡಕ್ಕಿಳಿದಿದೆ. ಇದೇ ಸಂದರ್ಭದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳ ಮೈತ್ರಿಕೂಟ ಚುನಾವಣೆ ಎದುರಿಸುತ್ತಿದೆ. ದೇಶಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಪ್ರಕ್ರಿಯೆಯನ್ನು ನೋಡಲು ಮತ್ತು ಅರ್ಥಮಾಡಿಕೊಳ್ಳಲು ಪ್ರಪಂಚದಾದ್ಯಂತದ ಜನರು ಭಾರತಕ್ಕೆ ಬಂದಿದ್ದಾರೆ.ವಿಶ್ವದಾದ್ಯಂತ 23 ದೇಶಗಳಿಂದ ಚುನಾವಣಾ ನಿರ್ವಹಣಾ ಸಂಸ್ಥೆಗಳಿಗೆ (ಇಎಂಬಿ) ಸಂಬಂಧಿಸಿದ 75 ಪ್ರತಿನಿಧಿಗಳು ಭಾರತಕ್ಕೆ ಬಂದಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಭಾರತದಲ್ಲಿ ಲೋಕಸಭೆ …

Read More »

ಮಗನಿಗೆ ಈಜು ಕಲಿಸಲು ಹೋಗಿ ದುರಂತ ಅಂತ್ಯ ಕಂಡ ತಂದೆ

ಚಿಕ್ಕಬಳ್ಳಾಪುರ: ಮಗನಿಗೆ ಈಜು (Swimming) ಕಲಿಸಲು ಹೋದ ತಂದೆ ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯಲ್ಲಿ ನಡೆದಿದೆ. ಅಂಗಡಿ ಬಾಬು (45) ಮೃತ ತಂದೆ. ಜಿಲ್ಲೆಯ ಚಿಂತಾಮಣಿ (Chintamani) ತಾಲೂಕಿನ ಕೋನಪ್ಪಲ್ಲಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.ಬಾಬು ತನ್ನ ಮಗ ತೇಜುವಿಗೆ ಗ್ರಾಮದ ಕೆ.ನಾರಾಯಣಸ್ವಾಮಿ ಎಂಬವರ ಕೃಷಿ ಹೊಂಡದಲ್ಲಿ ಈಜು ಕಲಿಸಲು ಮುಂದಾಗಿದ್ದರು. ಮಗನಿಗೆ ತರಬೇತಿ ನೀಡಿ ದಡಕ್ಕೆ ತಲುಪಿಸಿದ ತಂದೆ ಮರಳಿ ಕಾಲುಜಾರಿ ಕೃಷಿ …

Read More »

ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರ ಸಾವು

ಗದಗ: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆ ಮುಂಡರಗಿ ತಾಲೂಕಿನ ಹೈತಾಪುರ ಗ್ರಾಮದಲ್ಲಿ ನಡೆದಿದೆ. ತಂಗಿಯ ಮಗನೊಂದಿಗೆ ಮಹಿಳೆಯೊಬ್ಬರು ನೀರು ತರಲು‌ ಕೃಷಿ ಹೊಂಡಕ್ಕೆ ಹೋದಾಗ ಘಟನೆ ನಡೆದಿದೆ. ಗೀತಾ ಹೆಸರೂರು (34), ಮನೋಜ ಕವಲೂರು (5) ಮೃತರು.ಮೊದಲಿಗೆ ಮನೋಜ್ ಹೊಂಡದಲ್ಲಿ ಕಾಲು‌ ಜಾರಿ ಬಿದ್ದಿದ್ದಾನೆ. ಬಾಲಕನ ರಕ್ಷಣೆಗೆ ಹೋಗಿದ್ದ ಗೀತಾ ಕೂಡ ನೀರಿನಲ್ಲಿ ಮುಳುಗಿದ್ದಾರೆ. ಶಾಲೆ ರಜೆ ಹಿನ್ನೆಲೆ ದೊಡ್ಡಮ್ಮನ ಮನೆಗೆ ಮನೋಜ್ ಬಂದಿದ್ದ. ಬಾಲಕನ ಜತೆಗೆ …

Read More »