Breaking News

ಸಿಡಿ ಪ್ರಕರಣದಲ್ಲಿ ಕಾಂಗ್ರೆಸ್‌ ನಾಯಕನ ಹೆಸರು ಬಹಿರಂಗ ಇನ್ನೊಬ್ಬ ಸೂತ್ರಧಾರನಾದ ಸಿಎಂ ಪುತ್ರನ ಹೆಸರು ಹೊರ ಬಂದಿಲ್ಲ: ಶಾಸಕ ಯತ್ನಾಳ

ವಿಜಯಪುರ: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಸಿಡಿ ಪ್ರಕರಣದ ಹಿಂದೆ ಬಿಜೆಪಿ, ಕಾಂಗ್ರೆಸ್‌ ನಾಯಕರೇ ಇದ್ದಾರೆ ಎಂಬುದು ಇದೀಗ ಸ್ಪಷ್ಟವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹೆಸರು ಮಾತ್ರ ಹೊರ ಬಂದಿದ್ದು, ಒಳ ಒಪ್ಪಂದದ ಕಾರಣ ಇನ್ನೊಬ್ಬ ಸೂತ್ರಧಾರನಾದ ಸಿಎಂ ಪುತ್ರನ ಹೆಸರು ಹೊರ ಬಂದಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಮಂಗಳವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ ಹಾಗೂ ಸಿಎಂ …

Read More »

ಮುನಿಸು ಬಿಟ್ಟು ಒಗ್ಗಟ್ಟು ಪ್ರದರ್ಶಿಸಿದ ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್..!

ಬೆಳಗಾವಿ/ರಾಯಚೂರು: ಲೋಕಸಭಾ ಚುನಾವಣೆಗೆ ಬೆಳಗಾವಿ ಕಾಂಗ್ರೆಸ್ಸಿನಲ್ಲಿ ಈಗ ಒಗ್ಗಟ್ಟಿನ ಪ್ರದರ್ಶನ ಆಗ್ತಿದೆ. ಕಳೆದ ಬಾರಿ ಪಿಎಲ್‍ಡಿ ಬ್ಯಾಂಕ್ ಚುನಾವಣೆಯಲ್ಲಿ ವೈಮನಸ್ಸು ಹೊಂದಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸತೀಶ್ ಜಾರಕಿಹೊಳಿ ಈಗ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಕೆಲ ಹೊತ್ತು ಸಮಾಲೋಚನೆ ಮಾಡಿದ್ದಾರೆ. ಬಳಿಕ ಸತೀಶ್ ಜಾರಕಿಹೊಳಿ ಪರ ಲಕ್ಷ್ಮಿ ಹೆಬ್ಬಾಳ್ಕರ್ ಬೆಳಗಾವಿ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ರು. ಪ್ರಚಾರ ಭಾಷಣದ ವೇಳೆಯೂ ಸತೀಶ್ ಜಾರಕಿಹೊಳಿಯರನ್ನೂ …

Read More »

ಯುವತಿಗೆ ಕೊರೊನಾ ನೆಗೆಟಿವ್ – ಧ್ವನಿ ಪರೀಕ್ಷೆ ವೇಳೆ ಯುವತಿ ಹೇಳಿದ್ದೇನು..?

ಬೆಂಗಳೂರು: ಸಿಡಿ ರಾಡಿ ಎಪಿಸೋಡ್ ಮುಂದುವರಿದಿದೆ. ಸಿಡಿ ಯುವತಿಗೆ ಇಂದು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಮುಕ್ತ ಅನ್ನೋ ಮೆಡಿಕಲ್ ಟೀಂ 3 ಗಂಟೆಗಳ ಕಾಲ ತಪಾಸಣೆ ನಡೆಸ್ತು. ಅತ್ಯಾಚಾರ, ಹಲ್ಲೆ, ದೇಹದ ಪರಿಶೀಲನೆ, ಮಾಸಿಕ ಖಿನ್ನತೆ ಸೇರಿದಂತೆ ಬೇರೆ ಖಾಯಿಲೆ ಬಗ್ಗೆ ಪರಿಶೀಲನೆ ಮಾಡಲಾಯಿತು. ಈ ಮುಕ್ತ ತಂಡದಲ್ಲಿ ಸ್ತ್ರೀ ರೋಗ ತಜೆ, ತುರ್ತ ಚಿಕಿತ್ಸಾ ವಿಭಾಗ ವೈದ್ಯರು, ಮಾನಸಿಕ ರೋಗ ತಜ್ಞರು ಮತ್ತು ಮೆಡಿಸನ್ …

Read More »

ಎಸ್‍ಐಟಿ ಮುಂದೆ ಯುವತಿ ಹೇಳಿದ್ದೇನು..?

ಬೆಂಗಳೂರು:  ವಿಶೇಷ ತನಿಖಾ ದಳ (ಎಸ್‍ಐಟಿ) ವಿಚಾರಣೆಯ ವೇಳೆ ಸಂತ್ರಸ್ತ ಯುವತಿ ಕೆಲವೊಂದು ರಹಸ್ಯ ವಿಚಾರಗಳನ್ನು ಬಿಚ್ಚಿಟ್ಟಿದ್ದಾಳೆ ಅಂತ ಹೇಳಲಾಗಿದೆ. ರಮೇಶ್ ಜಾರಕಿಹೊಳಿ ಒಡನಾಟಕ್ಕೆ ಯುವತಿ ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾಳೆ. ಯಾಕಾದ್ರೂ ಇವರ ಸಹವಾಸ ಮಾಡಿದ್ನೋ…? ಕುಟುಂಬ ನಿರ್ವಹಣೆಗಾಗಿ ಕೆಲಸದ ಅವಶ್ಯಕತೆ ಇತ್ತು. ಕೆಲಸಕ್ಕೆ ಸೇರಿಕೊಳ್ಳೋ ಆಸೆಯಿಂದಾಗಿ ಇವರ ಸಹವಾಸ ಮಾಡಿದೆ. ಈಗ ನಾನು ಮೋಸ ಹೋದೆ, ಏಕಾಂಗಿಯಾದೆ ಅನ್ನೋ ನೋವು ಕಾಡ್ತಿದೆ. ನಾನು ಏಕಾಂಗಿ ಆಗಿ ನೋವನ್ನು ಅನುಭವಿಸ್ತಾ ಇದ್ದೇನೆ …

Read More »

ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಹೈಕೋರ್ಟ್ ಮೆಟ್ಟಿಲೇರಿದ ಯುವತಿ ತಂದೆ

ಬೆಂಗಳೂರು: ಮಾಜಿ ಸಚಿವರ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸಿಡಿ ಸಂತ್ರಸ್ತೆ ಹೇಳಿಕೆಗಳ ಬೆನ್ನಲ್ಲೇ ಯುವತಿಯ ತಂದೆ ಕೂಡ ಕೋರ್ಟ್ ಮೊರೆ ಹೋಗಿದ್ದಾರೆ. ನನ್ನ ಮಗಳ ಹೇಳಿಕೆಯನ್ನು ಪರಿಗಣಿಸದಂತೆ 21 ಪುಟಗಳ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಸಂತ್ರಸ್ತೆಯ ತಂದೆ ಏನ್ ಮನವಿ ಮಾಡಿದ್ದಾರೆ. ನನ್ನ ಮಗಳು ಒತ್ತಡ, ಬಲವಂತದಿಂದ ಹೇಳಿಕೆ ಕೊಡ್ತಿದ್ದಾಳೆ. ಸಿಆರ್‍ಪಿಸಿ 164 ಅಡಿ ದಾಖಲಾಗಿರುವ ಹೇಳಿಕೆ ರದ್ದು ಮಾಡಿ. ಮೆಡಿಕಲ್ ಟೆಸ್ಟ್ ಮಾಡಿಸದೇ ಸಿಆರ್‍ಪಿಸಿ 164 …

Read More »

ಯಡಿಯೂರಪ್ಪನವ್ರೇ, ರಾಜಿನಾಮೆ ನೀಡಿ.. ಇಲ್ಲವೇ ಈಶ್ವರಪ್ಪನ್ನ ಸಂಪುಟದಿಂದ ವಜಾ ಮಾಡಿ: ಡಿ.ಕೆ ಶಿವಕುಮಾರ್

ಬೆಂಗಳೂರು: ಸಚಿವ ಕೆ.ಎಸ್ ಈಶ್ವರಪ್ಪ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವ್ರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವ್ರು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿಡುವ ಡಿಕೆಶಿ, ‘ಬಿಜೆಪಿ ಸರ್ಕಾರದ ಹಿರಿಯ ಸಚಿವರು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದು, ದೂರಿನಲ್ಲಿ ಗಂಭೀರ ಆರೋಪ ಮಾಡಿದ್ದಾರೆ. ಹಾಗಾಗಿ ಅವ್ರು ಈ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡ್ಬೇಕು. ಇಲ್ಲವೇ …

Read More »

ಪಂಚ ರಾಜ್ಯಗಳ ಚುನಾವಣೆ ಹಿನ್ನೆಲೆ,ಪೆಟ್ರೋಲ್, ಡೀಸೆಲ್ ಎಲ್ ಪಿಜಿ 10 ರೂ ಕಡಿತ

ನವದೆಹಲಿ, ಮಾ.31 : ಕಳೆದ ಕೆಲವು‌ ದಿನಗಳಿಂದ‌ ಹೆಚ್ಚಳವಾಗುತ್ತಿದ್ದ ಪ್ರತಿ ಸಿಲಿಂಡರ್ ಬೆಲೆ ಅದರಲ್ಲಿಯೂ ಗೃಹ ಬಳಕೆಯ ಸಿಲಿಂಡರ್ 10 ರೂಪಾಯಿ ಕಡಿಮೆಯಾಗಿಲಿದೆ. ಕಳೆದ ಕೆಲ ತಿಂಗಳಿನಿಂದ ನಿತ್ಯ ಏರಿಕೆಯಾಗುತ್ತಿದ್ದ ಬೆಲೆ ಏರಿಕೆ‌ ಇಳಿಕೆಯಾಗುವುದರಿಂದ ತುಸು ನೆಮ್ಮದಿಯ ನಿಟ್ಟಿಸಿರುವ ಬಿಡುವಂತಾಗಿದೆ. ಪ್ರತಿ ಸಿಲಿಂಡರ್ ಬೆಲೆಯನ್ನು ನಾಳೆಯಿಂದ 10 ರೂಪಾಯಿ ಕಡಿತ ಮಾಡುವ ನಿರ್ಧಾರವನ್ನು ಭಾರತೀಯ ತೈಲ‌ ನಿಗಮ ಖಚಿತ ಪಡಿಸಿದೆ‌ ಜನವರಿಯಲ್ಲಿ ಪ್ರತಿ‌ ಸಿಲಿಂಡರ್ ಬೆಲೆ ದೆಹಲಿಯಲ್ಲಿ 819 ರೂಪಾಯಿಗೆ …

Read More »

ದೇಶದ ಜನತೆಗೆ ಮತ್ತೊಂದು ‘ಬಿಗ್‌ ಶಾಕ್’‌: ಇಂದಿನಿಂದ ಔಷಧಿಗಳ ಬೆಲೆ ಹೆಚ್ಚಳ.!

ನವದೆಹಲಿ: ಗ್ಯಾಸ್‌, ಪೆಟ್ರೋಲ್‌, ಸೇರಿದಂತೆ ದಿನ ಬಳಕೆಯ ವಸ್ತುಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಳವಾಗುತ್ತಿದ್ದು, ಈ ನಡುವೆ ಇನ್ನೊಂದು ಬೆಲೆ ಏರಿಕೆಯ ಬಿಸಿ ದೇಶದ ಜನರನ್ನು ತಟ್ಟಲಿದೆ. ಹೌದು, ನೋವು ನಿವಾರಕಗಳು, ಆಂಟಿಇನ್ಫೆಕ್ಟಿವ್ಸ್, ಕಾರ್ಡಿಯಾಕ್ ಮತ್ತು ಆಂಟಿಬಯಾಟಿಕ್‌ಗಳು ಸೇರಿದಂತೆ ಅಗತ್ಯ ಔಷಧಿಗಳ ಬೆಲೆಗಳು ಏಪ್ರಿಲ್‌ನಿಂದ ಅಂದ್ರೆ ಇಂದಿನಿಂದ ಏರಿಕೆಯಾಗಬಹುದು ಎನ್ನಲಾಗಿದೆ. ಬೆಲೆ ಹೆಚ್ಚಳಕ್ಕೆ ಮೂಲ ಕಾರಣ ಡಬ್ಲ್ಯುಪಿಐ ಅಧಿಸೂಚನೆಯಲ್ಲಿನ ವಾರ್ಷಿಕ ಬದಲಾವಣೆಯು 2020 ಕ್ಕೆ 0.5 ಪ್ರತಿಶತದಷ್ಟು ಕೆಲಸ ಮಾಡುತ್ತದೆ ಎಂದು …

Read More »

ರಾಜ್ಯದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ರಾಜ್ಯದ ಡಿಪ್ಲೊಮಾ ವಿದ್ಯಾರ್ಥಿಗಳ ಸೆಮಿಸ್ಟರ್ ಪರೀಕ್ಷಾ ಶುಲ್ಕ ಪಾವತಿಗೆ ಏಪ್ರಿಲ್ 3 ರವರೆಗೂ ಅವಕಾಶ ನೀಡಲಾಗಿದೆ.   ಡಿಪ್ಲೊಮಾ ಸೆಮಿಸ್ಟರ್ ಪರೀಕ್ಷೆಗೆ ಶುಲ್ಕ ಪಾವತಿಸದ ವಿದ್ಯಾರ್ಥಿಗಳಿಗೆ ದಂಡಶುಲ್ಕದೊಂದಿಗೆ ಪಾವತಿಸಲು ಏಪ್ರಿಲ್ 3 ರವರೆಗೆ ಅವಕಾಶ ನೀಡಲಾಗಿದೆ. ಈ ಸೆಮಿಸ್ಟರ್ ಪರೀಕ್ಷೆಗೆ ಅನ್ವಯವಾಗುವಂತೆ 2 ಸಾವಿರ ರೂ ದಂಡ ಶುಲ್ಕದೊಂದಿಗೆ ಪರೀಕ್ಷಾ ಶುಲ್ಕವನ್ನು ಏಪ್ರಿಲ್ 3 ರೊಳಗೆ ಪಾವತಿಸುವಂತೆ ಸೂಚನೆ ನೀಡಲಾಗಿದೆ.   ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ಡಿಪ್ಲೊಮಾ …

Read More »

‘ಪರೀಕ್ಷಾ ಪ್ರಶ್ನೆಪತ್ರಿಕೆ’ : `SSLC’ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : 2020-21ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಪ್ರಶ್ನೆಪತ್ರಿಕೆಯ ಸ್ವರೂಪದ ಬಗ್ಗೆ ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗಿದ್ದರು. ಇಂತಹ ಗೊಂದಲಕ್ಕೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷಾ ಪ್ರಶ್ನೆಪತ್ರಿಕೆ ಸ್ವರೂಪದ ಗೊಂದಲಕ್ಕೆ ತೆರೆ ಎಳೆದಿದೆ.   ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಹಾಗೂ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧ್ಯಕ್ಷರು ಮಾಹಿತಿ …

Read More »