Breaking News

ಗೋಕಾಕ: ಸರ್ಕಾರಿ ಗೌರವದೊಂದಿಗೆ ಯೋಧನ ಅಂತ್ಯಕ್ರಿಯೆ

ಗೋಕಾಕ: ರಾಜಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುವಾಗ ಅನಾರೋಗ್ಯದಿಂದ ಸಾವನ್ನಪ್ಪಿದ್ದ ತಾಲೂಕಿನ ಲೋಳಸೂರ ಗ್ರಾಮದ ಹುತಾತ್ಮ ಯೋಧ ಕಲ್ಲಪ್ಪ ಸಿದ್ದಪ್ಪ ಬಾಂವಚಿ (45) ಅವರ ಅಂತ್ಯಕ್ರಿಯೆಯನ್ನು ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಮಧ್ಯಾಹ್ನ 12.30ಕ್ಕೆ ನೆರವೇರಿಸಲಾಯಿತು.ಬುಧವಾರದಂದು ಬೆಳಿಗ್ಗೆ 11.00ಕ್ಕೆ ಯೋಧ ಕಲ್ಲಪ್ಪ ಅವರ ಪಾರ್ಥಿವ ಶರೀರ ಗೋವಾ ಮಾರ್ಗವಾಗಿ ಲೋಳಸೂರ ಗ್ರಾಮಕ್ಕೆ ತಲುಪಿತು.  ಅವರ ಜಮೀನಿನಲ್ಲಿ ಸಾರ್ವಜನಿಕರ ದರ್ಶನಕ್ಕಾಗಿ ಇಡಲಾಯಿತು.  ನೂರಾರು ಜನ   ಆಗಮಿಸಿ ಅಂತಿಮ ದರ್ಶನ ಪಡೆದರು. ಯೋಧ ಕಲ್ಲಪ್ಪ ಬಾಂವಚಿ …

Read More »

ಗೋಕಾಕ: ಡಿ. 19 ರಂದು ಎಸ್ಎಸ್ಎಲ್ ಸಿ, ಪಿಯುಸಿ ಟಾಪರ್ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

ಗೋಕಾಕ: ಅಖಿಲ ಭಾರತ ವೀರಶೈವ ಮಹಾಸಭಾ ಗೋಕಾಕ ತಾಲೂಕು ಘಟಕದ ವತಿಯಿಂದ ಡಿ. 19 ರಂದು ಮುಂಜಾನೆ 10 ಘಂಟೆಗೆ ನಗರದ ಕೆ.ಎಲ್.ಇ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾದ ತಾಲೂಕು ಘಟಕದ ಅಧ್ಯಕ್ಷ ಸೋಮಶೇಖರ್ ಮಗದುಮ್ಮ ಹೇಳಿದರು. ನಗರದ ಕೆಎಲ್ಇ ಶಾಲಾ ಆವರಣದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಎಸ್ ಎಸ್ ಎಲ್ …

Read More »

ಮನೆ ಪಾಠಕ್ಕೆ ಹೋಗಿದ್ದ ಅಪ್ರಾಪ್ತ ಬಾಲಕಿ ಮೇಲೆ ಶಿಕ್ಷಕಿಯ ಪತಿಯೇ ಅತ್ಯಾಚಾರ

ಬೆಂಗಳೂರು: ಮನೆ ಪಾಠಕ್ಕೆ ಹೋಗಿದ್ದ ಅಪ್ರಾಪ್ತ ಬಾಲಕಿ ಮೇಲೆ ಶಿಕ್ಷಕಿಯ ಪತಿಯೇ ಅತ್ಯಾಚಾರ ನಡೆಸಿರುವ ಘಟನೆಯೊಂದು ಮಾಚೋಹಳ್ಳಿಯಲ್ಲಿ ನಡೆದಿದೆ. ರವಿ ಕಿರಣ್ ಅಲಿಯಾಸ್ ಕಿರಣ್ (26) ಅತ್ಯಾಚಾರ ನಡೆಸಿದ ಆರೋಪಿಯಾಗಿದ್ದಾನೆ. ಆರೋಪಿಯ ಪತ್ನಿ ಟ್ಯೂಷನ್ ನಡೆಸುತ್ತಿದ್ದರು. ಆರೋಪಿ ಕ್ಯಾಬ್ ಚಾಲಕನಾಗಿದ್ದನೆಂದು ವರದಿಯಾಗಿದೆ. ವರ್ಷದ ಹಿಂದೆ ಘಟನೆ ನಡೆದಿದ್ದು, ಇದೀಗ ಘಟನೆ ಬೆಳಕಿಗೆ ಬಂದಿದೆ. 10ನೇ ತರಗತಿ ಓದುತ್ತಿದ್ದ ಬಾಲಕಿ ಮನೆಪಾಠಕ್ಕೆಂದು ಶಿಕ್ಷಕಿಯ ಮನೆಗೆ ಬಂದಿದ್ದಾಳೆ. ಈ ವೇಳೆ ಶಿಕ್ಷಕಿ ಮನೆಯಲ್ಲಿರಲಿಲ್ಲ …

Read More »

ರಾಜೀನಾಮೆ ನೀಡಲು ಮುಂದಾಗಿದ್ದಸಭಾಪತಿ ಪ್ರತಾಪ್‍ಚಂದ್ರ ಶೆಟ್ಟಿಕಾಂಗ್ರೆಸ್ ಅವರನ್ನು ತಡೆದಿದೆ.

ಬೆಂಗಳೂರು,ಡಿ.16- ವಿಧಾನಪರಿಷತ್‍ನಲ್ಲಿ ನಿನ್ನೆ ನಡೆದ ಕೋಲಾಹಲದ ಹಿನ್ನೆಲೆಯಲ್ಲಿ ಸಭಾಪತಿ ಪ್ರತಾಪ್‍ಚಂದ್ರ ಶೆಟ್ಟಿ ರಾಜೀನಾಮೆ ನೀಡಲು ಮುಂದಾಗಿದ್ದರಾದರೂ ಕಾಂಗ್ರೆಸ್ ಅವರನ್ನು ತಡೆದಿದೆ. ಸಭಾಪತಿ ಪ್ರತಾಪ್‍ಚಂದ್ರ ಶೆಟ್ಟಿ ಅವರು ಇಷ್ಟೆಲ್ಲಾ ರಂಪಾಟವಾದ ಮೇಲೂ ಹುದ್ದೆಯಲ್ಲಿ ಮುಂದುವರೆದರೆ ತಾವು ಅಧಿಕಾರಕ್ಕೆ ಅಂಟಿಕೊಂಡವರು ಎಂಬ ತಪ್ಪು ಸಂದೇಶ ರವಾನೆಯಾಗುತ್ತದೆ. ಸಭಾಪತಿ ಹುದ್ದೆಗೆ ಅದು ಘನತೆ ತರುವುದಿಲ್ಲ. ಹಾಗಾಗಿ ನಾನು ರಾಜೀನಾಮೆ ನೀಡುತ್ತೇನೆ ಎಂದು ಅವಿಶ್ವಾಸ ಮಂಡನೆಯಾದ ದಿನದಿಂದಲೂ ಆಂತರಿಕವಾಗಿ ಹೇಳುತ್ತಲೇ ಬಂದಿದ್ದಾರೆ. ಆದರೆ ಅದಕ್ಕೆ ಪ್ರತಿಪಕ್ಷದ …

Read More »

66 ರ ಇಳಿ ವಯಸ್ಸಿನಲ್ಲಿಯೂ ಚು.ಅಖಾಡಕ್ಕಿಳಿದ ಪತಿ- ಪತ್ನಿ!!

ವಿಜಯಪುರ: ರಾಜ್ಯದೆಲ್ಲೆಡೆ ಗ್ರಾಮ ಪಂಚಾಯಿತಿ ಚುನಾವಣೆ ಕಾವು ಜೋರಾಗಿದೆ. ಚುನಾವಣಾ ಅಭ್ಯರ್ಥಿಗಳು ಲೋಕಲ್ ದಂಗಲ್ ನಲ್ಲಿ ಜಯಗಳಿಸಲು ತೀವ್ರ ಕಸರತ್ತು ನಡೆಸುತ್ತಿದ್ದಾರೆ. ಇನ್ನು ವಿಜಯಪುರ ಜಿಲ್ಲೆಯಲ್ಲಿ ಒಂದೇ ವಾರ್ಡ್ ನಲ್ಲಿ  ಪತಿ- ಪತ್ನಿ ಅಖಾಡಕ್ಕಿಳಿಯುವ ಮೂಲಕ ಜನರ ಗಮನ ಸೆಳೆದಿದ್ದಾರೆ. ಹೌದು.. ವಿಜಯಪುರ ಜಿಲ್ಲೆಯ  ಬಸವನ ಬಾಗೇವಾಡಿ ತಾಲೂಕಿನ ಗುಣಶ್ಯಾಳ ಪಿ.ಬಿ. ಗ್ರಾಮ ಪಂಚಾಯತಿಯ ಸಂನಾಳ ಗ್ರಾಮದಲ್ಲಿ ಒಂದೇ ವಾರ್ಡ್ ನಲ್ಲಿ ಚುನಾವಣೆ ಅಖಾಡಕ್ಕಿಳಿಯುವ ಮೂಲಕ ಪತ್ನಿ ಪತ್ನಿ ಎಲ್ಲರ …

Read More »

ಜಮೀನಿಗೆ ನುಗ್ಗಿದ ಬಸ್: ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

ಧಾರವಾಡ:  ರಾಜ್ಯ  ಸಾರಿಗೆ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಹೊಲಕ್ಕೆ ನುಗ್ಗಿದ  ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಶಿರಕೋಳ ಮತ್ತು ಮೊರಬ ಗ್ರಾಮಗಳ ರಸ್ತೆಯ ಮಧ್ಯ ಸಂಭವಿಸಿದೆ. ನವಲಗುಂದ ತಾಲೂಕಿನ ಹನಸಿ ಗ್ರಾಮದಿಂದ ಧಾರವಾಡದತ್ತ ಬರುತ್ತಿದ್ದ ಬಸ್  ಚಾಲಕನ ನಿಯಂತ್ರಣ ತಪ್ಪಿ, ಹೊಲದೊಳಗೆ ನುಗ್ಗಿದೆ. ಕೆಲವರು ಕಿಡಕಿಯಿಂದ ಜಿಗಿದು ಹೊರಗಡೆ ಹೋಗಿದ್ದಾರೆ. ಇನ್ನೂ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಳುಗಳನ್ನು ಆಸ್ಪತ್ರೆಗೆ  ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.  ಅದೃಷ್ಟವಶಾಹತ್ …

Read More »

ಗಡಿಯಲ್ಲಿ ಚೀನಾ ಕಿರಿಕ್ : ಭಾರತದ ಬೆಂಬಲಕ್ಕೆ ನಿಂತ ಅಮೆರಿಕಾ

ವಾಷಿಂಗ್ಟನ್, ಡಿ.16-ಭಾರತದ ಗಡಿಯಲ್ಲಿ ಚೀನಾ ತೋರುತ್ತಿರುವ ಕ್ರೂರ ವರ್ತನೆ ಖಂಡಿಸುವುದು ಸೇರಿದಂತೆ 740 ಬಿಲಿಯನ್ ಅಮೆರಿಕನ್ ಡಾಲರ್ ಮೌಲ್ಯದ ರಕ್ಷಣಾ ನೀತಿ ಮಸೂದೆಗೆ ಅಮೆರಿಕಾ ಕಾಂಗ್ರೆಸ್ ಒಪ್ಪಿಗೆ ಸೂಚಿಸಿದೆ. ಗಡಿಯಲ್ಲಿ ಭಾರತ ಸೇನೆಯ ವಿರುದ್ಧ ಚೀನಿಯರು ನಡೆಸುತ್ತಿರುವ ಕ್ರೂರ ವರ್ತನೆಯನ್ನು ಖಂಡಿಸಿರುವ ಅಮೆರಿಕಾ ಈ ಕೂಡಲೆ ಚೀನಿಯರು ತಮ್ಮ ಧೋರಣೆಯನ್ನ ಕೈಬಿಡಬೇಕು ಎಂದು ಅಮೆರಿಕಾ ಒತ್ತಾಯಿಸಿದೆ. 740 ಬಿಲಿಯನ್ ಅಮೆರಿಕನ್ ಡಾಲರ್ ಮೌಲ್ಯದ ರಕ್ಷಣಾ ಮಸೂದೆಗೆ ಅಮೆರಿಕ ಜನಪ್ರತಿನಿಧಿಗಳ ಸಭೆ …

Read More »

ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಬೆಂಬಲಿಸಿ ಹುಬ್ಬಳ್ಳಿಯಲ್ಲೂ ರೈತರಿಂದ ಪ್ರತಿಭಟನೆ

ಹುಬ್ಬಳ್ಳಿ; ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಬೆಂಬಲಿಸಿ ಹುಬ್ಬಳ್ಳಿಯಲ್ಲೂ ರೈತರಿಂದ ಪ್ರತಿಭಟನೆ ನಡೆಸಲಾಗುತ್ತಿದೆ.  ಶಿರಗುಪ್ಪಿ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ರೈತರು ಪ್ರತಿಭಟನೆ ಮಾಡಿದ್ದು, ರೈತ ಮತ್ತು ಕಾರ್ಮಿಕ ವಿರೋಧಿ ಕಾನೂನುಗಳನ್ನು ಕೈಬಿಡಲು ಒತ್ತಾಯಿಸಲಾಗಿದೆ. ರೈತರು ಹೆದ್ದಾರಿ ಮಧ್ಯ ಟ್ರ್ಯಾಕ್ಟರ್ ನಿಲ್ಲಿಸಿ ರಸ್ತೆ ತಡೆ ಮಾಡಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ರೈತರ ಬೇಡಿಕೆಗಳನ್ನು ಮೋದಿಯವರ ಸರ್ಕಾರ ಕೂಡಲೇ ಈಡೇರಿಸಬೇಕೆಂದು ಆಗ್ರಹಿಸಿದ್ದಾರೆ. ರೈತ ಮುಖಂಡರಾದ ಶಿವಣ್ಣ ಹುಬ್ಬಳ್ಳಿ, ಅಮೃತ …

Read More »

ರೈತರು ಮತ್ತೆ ಪ್ರತಿಭಟನೆ ಆರಂಭಿಸಿದರೆ ಇನ್ನೊಂದೆಡೆ ಖಾಸಗಿ ಶಾಲಾ ಶಿಕ್ಷಕರು ಧರಣಿ ನಡೆಸುತ್ತಿದಾರೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ ರೈತರು ಮತ್ತೆ ಪ್ರತಿಭಟನೆ ಆರಂಭಿಸಿದರೆ ಇನ್ನೊಂದೆಡೆ ಖಾಸಗಿ ಶಾಲಾ ಶಿಕ್ಷಕರು ಧರಣಿ ನಡೆಸುತ್ತಿದಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ವಿಶೇಷ ಅನುದಾನ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ವಿಮಾ ಸೌಲಭ್ಯ, ಶಿಕ್ಷಕರನ್ನು ಕೊರೊನಾ ಯೋಧರೆಂದು ಪರಿಗಣಿಸಬೇಕು, ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜಧಾನಿಯಲ್ಲಿ ಶಿಕ್ಷಕರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಪ್ರತಿಭಟನಾ ರ್ಯಾಲಿ ಬಳಿಕ ಶಿಕ್ಷಕರು ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸುತ್ತಿದ್ದು, ಬಸವರಾಜ್ ಹೊರಟ್ಟಿ …

Read More »

ರಾಜ್ಯ ಸರ್ಕಾರ ಬಿಡಿಗಾಸೂ ನೆರೆಪರಿಹಾರ ಕೊಟ್ಟಿಲ್ಲ : ರೇವಣ್ಣ

ಹಾಸನ, ಡಿ.16- ಹಾಸನ ಜಿಲ್ಲೆಯಲ್ಲಿ ಮಳೆ ಹಾನಿಯಿಂದ ಉಂಟಾಗಿರುವ ಹಾನಿಗೆ ರಾಜ್ಯ ಸರ್ಕಾರ ಬಿಡಿಗಾಸೂ ಕೊಟ್ಟಿಲ್ಲ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆಯಿಂದಾಗಿ ಬೆಳೆನಷ್ಟವಲ್ಲದೆ ಮನೆಗಳೂ ಬಿದ್ದು ಹೋಗಿವೆ. ಅವುಗಳಿಗೆ ಪರಿಹಾರ ನೀಡಿಲ್ಲ. ಹೂವಿನ ಬೆಳೆ ಕೂಡ ಹಾನಿಯಾಗಿದ್ದು, ಅದರ ಸರ್ವೆ ಕೂಡ ಸರ್ಕಾರ ಮಾಡಿಲ್ಲ ಎಂದು ದೂರಿದರು. ಈ ಎಲ್ಲ ವಿಚಾರವನ್ನು ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದಿದ್ದೇನೆ. ಆದರೆ, ಅವರು ಗ್ರಾಪಂ …

Read More »