Breaking News

ರೌಡಿಯಲ್ಲ ಕ್ರಿಮಿನಲ್ ಅಲ್ಲ ಆದರೂ ಭೀಕರ ಹತ್ಯೆ

ಆತ ಆ ಏರಿಯಾದ ಯುವಕರಿಗೆಲ್ಲಾ ಅಚ್ಚು ಮೆಚ್ಚಿನ ಗೆಳೆಯ. ಮಾಡೊಕೆ ಕೆಲಸ ಇಲ್ಲ ಅಂದ್ರು, ಹುಡುಗರ ಜೊತೆ ಸೇರಿ ಓಡಾಡ್ಕೊಂಡು ಎಣ್ಣೆ ಪಾರ್ಟಿ ಮಾಡ್ಕೊಂಡು ಆರಾಮಾಗಿದ್ದ. ಆದರೆ, ಇತ್ತಿಚಿಗೆ ಅವೆಲ್ಲ ಬಿಟ್ಟು ಸೈಲೆಂಟ್ ಆಗಲು ನಿರ್ಧರಿಸಿದ್ದ. ಹೀಗಂತ ಎಲ್ಲಾ ಬಿಟ್ಟವನು ಇಂದು ಬೆಳಿಗ್ಗೆ ತನ್ನ ಪ್ರಾಣವನ್ನೇ ಬಿಟ್ಟಿದ್ದಾನೆ. ಅದು ದುಷ್ಕರ್ಮಿಗಳ ಸ್ಕೆಚ್​ಗೆ ಕೊಲೆಯಾಗಿದ್ದಾನೆ. ನಗರದಲ್ಲಿ ಭೀಕರವಾಗಿ ಹತ್ಯೆಯಾಗಿದೆ. ಮುಖ ಮೂತಿ ನೋಡದೆ ಮಚ್ಚೇಟು ನೀಡಿ ಎಸ್ಕೇಪ್ ಆಗಿದ್ದಾರೆ. ಮಂಜುನಾಥ್ ಅಲಿಯಾಸ್ …

Read More »

ಅಹೋರಾತ್ರನ ವಿರುದ್ಧ ಗುಡುಗಿದ ಸುನೀಲ್ ಕುರಿಬಾಂಡ್

ಕನ್ನಡ ನಟ ಕಿಚ್ಚ ಸುದೀಪ್ ಅವರ ಬಗ್ಗೆ ವೈಯಕ್ತಿಕವಾಗಿ ತೇಜೋವಧೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬರಹಗಾರ ಅಹೋರಾತ್ರ ವಿರುದ್ಧ ಸುನೀಲ್ ಕುರಿಬಾಂಡ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಹೋರಾತ್ರ ಮತ್ತು ಸುದೀಪ್ ಅಭಿಮಾನಿಗಳ ನಡುವಿನ ವಾಗ್ವಾದಕ್ಕೆ ಸಂಬಂಧಿಸಿದಂತೆ ವಿಡಿಯೋ ಮಾಡಿರುವ ಸುನೀಲ್ ಕುರಿಬಾಂಡ್, ಅಹೋರಾತ್ರರ ವಿರುದ್ಧ ಕಿಡಿಕಾರಿದ್ದಾರೆ. ’25 ವರ್ಷದಿಂದ ಚಿತ್ರಜಗತ್ತಿನಲ್ಲಿ ಕಲಾಸೇವೆ ಮಾಡಿಕೊಂಡು ಬಂದಿರುವ ಒಬ್ಬ ಮೇರು ಕಲಾವಿದನ ಬಗ್ಗೆ ಏಕವಚನದಲ್ಲಿ ಹೀಯಾಳಿಸುವುದು ಸರಿಯಲ್ಲ, ನಿನಗೆ ತಾಕತ್ ಇದ್ದರೆ, ಧೈರ್ಯ ಇದ್ದರೆ …

Read More »

ಪ್ರಕರಣ ದಾಖಲಿಸಿರುವುದಕ್ಕೆ ಹೆದರುವುದಿಲ್ಲ, ಮಸೂದೆ ಹಿಂಪಡೆಯದ ಹೊರತು ಪ್ರತಿಭಟನೆ ಕೈಬಿಡುವುದಿಲ್ಲ: ರಾಕೇಶ್ ಟಿಕಾಯತ್

ಬೆಂಗಳೂರು: ನನ್ನ ವಿರುದ್ಧ ಪ್ರಕರಣ ದಾಖಲಿಸುವುದಕ್ಕೆ ಹೆದರುವುದಿಲ್ಲ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಮಸೂದೆಗಳನ್ನು ರದ್ದುಪಡಿಸಿದರೆ ಮಾತ್ರ ಪ್ರತಿಭಟನೆ ಕೈಬಿಡುತ್ತೇವೆಂದು ಸಂಯುಕ್ತ ಕಿಸಾನ್ ಮೋರ್ಚಾ ನಾಯಕ ರಾಕೇಶ್ ಸಿಂಗ್ ಟಿಕಾಯತ್ ಹೇಳಿದ್ದಾರೆ. ದೆಹಲಿ ರೀತಿ ಬೆಂಗಳೂರನ್ನು ಮುತ್ತಿಗೆ ಹಾಕುವಂತೆ ಕರೆ ನೀಡಿದ ಹಿನ್ನೆಲೆಯಲ್ಲಿ ಟಿಕಾಯತ್ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಟಿಕಾಯತ್, ದೂರಿಗೆ ಹೆದರುವುದಿಲ್ಲ. ಕೇಂದ್ರ ಸರ್ಕಾರ ಜಾರಿಗೆ …

Read More »

ಹೈಕೋರ್ಟ್‌ಗೆ ಇಬ್ಬರು ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕಕ್ಕೆ ಅಧಿಸೂಚನೆ

ನವದೆಹಲಿ, ಮಾ.25- ಕರ್ನಾಟಕ ಉಚ್ಛ ನ್ಯಾಯಾಲಯಕ್ಕೆ ಇಬ್ಬರು ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕಕ್ಕೆ ಕೇಂದ್ರ ಕಾನೂನು ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಇಬ್ಬರು ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕದಿಂದ ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ 62ಕ್ಕೆ ಏರಿಕೆಯಾಗಿದೆ. ದೇಶದ 25 ಹೈಕೋರ್ಟ್‍ಗಳಲ್ಲಿ 1080 ನ್ಯಾಯಮೂರ್ತಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, 419 ನ್ಯಾಯಮೂರ್ತಿಗಳ ಹುದ್ದೆ ಖಾಲಿ ಇತ್ತು. ಇದೀಗ ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕದಿಂದ ಎಲ್ಲಾ ಹುದ್ದೆಗಳು ಭರ್ತಿಯಾಗಿವೆ. ಅಲಹಬಾದ್ ಹೈಕೋರ್ಟ್‍ಗೆ 40 ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕದಿಂದ ನ್ಯಾಯಾಧೀಶರ …

Read More »

ಸುಧಾಕರ್ ಹೇಳಿಕೆಯನ್ನು ಅಸ್ತ್ರವಾಗಿ ಬಳಸಿಕೊಂಡ ಸಿದ್ದರಾಮಯ್ಯ

ಬೆಂಗಳೂರು, ಮಾ.25- ಡಾ.ಕೆ.ಸುಧಾಕರ್ ಅವರ ಹೇಳಿಕೆಯನ್ನೇ ಮುಂದಿಟ್ಟುಕೊಂಡು ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಲು ಮುಂದಾಗಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಯಡಿಯೂರಪ್ಪ, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಎಲ್ಲರೂ ತಮ್ಮ ವೈವಾಹಿಕ ಸಂಬಂಧವನ್ನು ಸಾರ್ವಜನಿಕವಾಗಿ ಸ್ಪಷ್ಟಪಡಿಸುವಂತೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ ಸಿದ್ದರಾಮಯ್ಯ ಅವರು, ಸಚಿವ ಸುಧಾಕರ್ ಹೇಳಿಕೆಯನ್ನು ಬಿಜೆಪಿ ಶಾಸಕರು ಒಪ್ಪಿಕೊಳ್ಳುವುದಾದರೆ ಕೂಡಲೇ ಬಿಜೆಪಿ ಸರ್ಕಾರ ಸುಧಾಕರ್ ವಿರುದ್ಧ ಐಪಿಎಸ್ ಸೆಕ್ಷನ್ 494 ಮತ್ತು 495ರ ಅನ್ವಯ …

Read More »

ಅವರೇನು ಕೊಚ್ಚಿ- ಕೊಲ್ಲಿ ಎಂದಿಲ್ಲ, ಟಿಕಾಯತ್ ವಿರುದ್ಧದ ಕೇಸು ರದ್ದಾಗಬೇಕು: ಎಚ್ ಡಿಕೆ ಆಗ್ರಹ

ಬೆಂಗಳೂರು: ರೈತ ನಾಯಕ ರಾಕೇಶ್ ಟಿಕಾಯತ್ ವಿರುದ್ಧ ಶಿವಮೊಗ್ಗ, ಹಾವೇರಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಅವರ ಮೇಲಿದೆ. ರೈತರ ಧ್ವನಿ ಹತ್ತಿಕ್ಕುವ ಸರ್ಕಾರದ ಪ್ರಯತ್ನಗಳಿವು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಪ್ರಚೋದನಕಾರಿ ಭಾಷಣದ ಆರೋಪದ ಮೇಲೆ ನಿಜಕ್ಕೂ ಕೇಸು ದಾಖಲಿಸುವುದೇ ಆದರೆ ಬಿಜೆಪಿಯ ಎಷ್ಟು ನಾಯಕರ ಮೇಲೆ ಎಷ್ಟೆಷ್ಟು ಪ್ರಕರಣ ದಾಖಲಾಗಬೇಕಿತ್ತು ಎಂದು ಎಚ್ ಡಿಕೆ ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ. “ಹೋರಾಟ …

Read More »

ಬಿಜೆಪಿಯವರಿಗೆ ರಾಜ್ಯದಲ್ಲಿ ಅಧಿಕಾರ ನಡೆಸಲು ಬರಲ್ಲ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಕಲಬುರಗಿ : ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸ್ವತಂತ್ರವಾಗಿ ಅಧಿಕಾರ ನಡೆಸಲು ಕೇಂದ್ರದವರು ಬಿಟ್ಟಿಲ್ಲ. ಬಿಜೆಪಿ ಸರ್ಕಾರಕ್ಕೆ ಅಧಿಕಾರ ನಡೆಸಲು ಬರಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಕುತಂತ್ರದಿಂದ ಬಂದಿದೆ. ಹೀಗಾಗಿ ಬಿಜೆಪಿಯವರಿಗೆ ರಾಜ್ಯದಲ್ಲಿ ಅಧಿಕಾರ ನಡೆಸಲು ಬರಲ್ಲ. ಕೇಂದ್ರದಿಂದ ಪ್ರಜಾಪ್ರಭುತ್ವವನ್ನು ಹಂತ ಹಂತವಾಗಿ ನಾಶ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಮೈತ್ರಿ ಸರ್ಕಾರದ ಪತನದ …

Read More »

CD ಯುವತಿಯಿಂದ ಮತ್ತೊಂದು ವಿಡಿಯೋ.. ಸಿದ್ದರಾಮಯ್ಯ, ಡಿಕೆಶಿ ಹೆಸರು ಉಲ್ಲೇಖ

ರಮೇಶ್ ಜಾರಕಿಹೊಳಿ ವಿಡಿಯೋದಲ್ಲಿರೋ ಯುವತಿ ಇವತ್ತು ಮತ್ತೊಂದು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾಳೆ. ಅದರಲ್ಲಿ ತನ್ನ ತಂದೆ, ತಾಯಿಗೆ ರಕ್ಷಣೆ ಕೊಡಿ ಅಂತ ವಿಪಕ್ಷ ನಾಯಕರ ಬಳಿ ಕೇಳಿಕೊಂಡಿದ್ದಾಳೆ. ಜೊತೆಗೆ ಎಸ್​ಐಟಿ ತನಿಖೆ ಬಗ್ಗೆನೇ ಅನುಮಾನ ವ್ಯಕ್ತಪಡಿಸಿದ್ದಾಳೆ. ಆಕೆ ವಿಡಿಯೋದಲ್ಲಿ ಹೇಳಿರೋದೇನು ಅನ್ನೋದು ಇಲ್ಲಿದೆ ನೋಡಿ.. ನನಗೆ ನನ್ನ ತಂದೆ, ತಾಯಿಯ ಸುರಕ್ಷತೆಯೇ ಮುಖ್ಯ. ಅದರ ಬಗ್ಗೆ ಗ್ಯಾರಂಟಿ ಸಿಕ್ಕ ಬಳಿಕ ಎಸ್​ಐಟಿ ಮುಂದೆ ವಿಚಾರಣೆಗೆ ಬರುತ್ತೇನೆ. ಏನು ಹೇಳಿಕೆ …

Read More »

ಮತ್ತೊಂದು ವಿಡೀಯೋ ಮಾಡಿ ಹೊರಗೆ ಬಿಟ್ಟಿದ್ದಾಳೆ ,ಸಿಡಿ ಯುವತಿ

ಬೆಂಗಳೂರು – ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಯಲ್ಲಿದ್ದಾಳೆ ಎನ್ನಲಾದ ಯುವತಿ ಮತ್ತೊಂದು ವಿಡೀಯೋ ಮಾಡಿ ಹೊರಗೆ ಬಿಟ್ಟಿದ್ದಾಳೆ. ಇದರಲ್ಲಿ 2-3 ಸ್ಫೋಟಕ ಅಂಶಗಳನ್ನು ಪ್ರಸ್ತಾಪಿಸಿದ್ದಾಳೆ. ನನ್ನ ಅಪ್ಪ, ಅಮ್ಮ ಸ್ವ ಇಚ್ಛೆಯಿಂದ ಪೊಲೀಸ್ ದೂರು ನೀಡಿಲ್ಲ. ನಾನು ತಪ್ಪು ಮಾಡಿಲ್ಲ ಎಂದು ಅವರಿಗೆ ಗೊತ್ತಿದೆ. ಹಾಗಾಗಿ ಅವರು ಸ್ವಇಚ್ಛೆಯಿಂದ ದೂರು ನೀಡಲು ಸಾಧ್ಯವೇ ಇಲ್ಲ ಎಂದಿದ್ದಾಳೆ. ನನಗೆ ನನ್ನ ಅಪ್ಪ, ಅಮ್ಮನ ಸೇಫ್ಟಿ ಮುಖ್ಯ. …

Read More »

ಇನ್ಮುಂದೆ ‘ಸರ್ಕಾರಿ ನೌಕರ’ರಿಗೆ ವಾರದಲ್ಲಿ 4 ದಿನ ಕೆಲಸ ‘3 ದಿನ’ ರಜೆ.?

ನವದೆಹಲಿ : ಈಗಾಗಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರ ಕೆಲಸದ ನಿಯಮದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಮುಂದುವರೆದ ಭಾಗವಾಗಿ ಕೇಂದ್ರ ಸರ್ಕಾರಿ ನೌಕರರಿಗೆ ಇನ್ಮುಂದೆ ವಾರದಲ್ಲಿ 4 ದಿನ ಮಾತ್ರ ಕೆಲಸ ಮಾಡಿ, ಮೂರು ದಿನ ರಜೆ ನೀಡಲಾಗುತ್ತದೆ ಎಂಬುದಾಗಿ ಹೇಳಲಾಗುತ್ತಿದೆ. ಇಂತಹ ಊಹಾಪೋಹಳಿಗೆ ಕೇಂದ್ರ ಕಾರ್ಮಿಕ ಸಚಿವರು ಸಂಸತ್ ನಲ್ಲಿ ಕೇಳಲಾದ ಪ್ರಶ್ನೆಗೆ ಏನ್ ಉತ್ತರಿಸಿದ್ದಾರೆ ಎನ್ನುವ ಬಗ್ಗೆ ಮುಂದೆ ಓದಿ.. ದೇಶದಲ್ಲಿ ಕೆಲವು ದಿನಗಳಿಂದ, ಮುಂಬರುವ …

Read More »