Breaking News

ಕಮ್ಮರ್ ತೋಡ್, ಪಲ್ಲಂಗ್ ತೋಡ್ ಸರ್ಕಾರವೆಂದು ಕಾಂಗ್ರೆಸ್ ನ ಸಿ.ಎಂ.ಇಬ್ರಾಹಿಂ ಲೇವಡಿ

ಬೆಂಗಳೂರು: ಕಮ್ಮರ್ ತೋಡ್, ಪಲ್ಲಂಗ್ ತೋಡ್ ಸರ್ಕಾರವೆಂದು ಕಾಂಗ್ರೆಸ್ ನ ಸಿ.ಎಂ.ಇಬ್ರಾಹಿಂ ಲೇವಡಿ ಮಾಡಿದರೆ, ಪ್ರತಿಪಕ್ಷಗಳಿಗೆ ತಾಕತ್ತಿದ್ದರೆ ತಮ್ಮ ತಮ್ಮ ಕುಟುಂಬ ಸದಸ್ಯರನ್ನು ಸದನಕ್ಕೆ ಕರೆ ತಂದು ಸಿಡಿ ಪ್ರಕರಣದ ಬಗ್ಗೆ ಚರ್ಚಿಸಲಿ ಎಂದು ಬಿಜೆಪಿಯ ತೇಜಸ್ವಿನಿಗೌಡ ಸವಾಲೆಸೆದರು. ವಿಧಾನ ಪರಿಷತ್ ಅಧಿವೇಶನ ಬುಧವಾರ ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗುವ ಮುನ್ನ ಈ ಪ್ರಹಸನ ನಡೆಯಿತು. ಭೋಜನ ವಿರಾಮದ ಬಳಿಕ ಸದನ ಮತ್ತೆ ಸೇರುತ್ತಿದ್ದಂತೆಯೇ ಸಭಾಪತಿ ಪೀಠದ ಮುಂದೆ ಪ್ರತಿಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ …

Read More »

ಸುಧಾಕರ್ ಕಾಮಿಡಿ ಮಾಡ್ತಿದ್ದಾರಾ : ಸುಧಾಕರ್ ಗೆ ಸೌಮ್ಯ ರೆಡ್ಡಿ ಟಾಂಗ್

ಬೆಂಗಳೂರು : ಡಾ.ಕೆ.ಸುಧಾಕರ್ ಅವರಿಗೆ ಮಾಡೋಕೆ ಏನೂ ಕೆಲಸ ಇಲ್ವಾ. ಜನ ನಗ್ತಾ ಇದ್ದಾರೆ ಎಂದು ಸಚಿವ ಡಾ.ಕೆ.ಸುಧಾಕರ್ ವಿರುದ್ಧ ಶಾಸಕ ಸೌಮ್ಯ ರೆಡ್ಡಿ ಟಾಂಗ್ ನೀಡಿದ್ದಾರೆ. ಇಂದು ಬೆಳಗ್ಗೆ ಸಚಿವ ಡಾ.ಕೆ.ಸುಧಾಕರ್, ಸಿದ್ದರಾಮಯ್ಯ, ಕುಮಾರಸ್ವಾಮಿ, ಮುನಿಯಪ್ಪ, ಡಿ.ಕೆ.ಶಿವಕುಮಾರ್ ಮತ್ತು ನನ್ನನ್ನು ಸೇರಿದಂತೆ ಎಲ್ಲ 224 ಶಾಸಕರ ವೈಯಕ್ತಿಕ ಜೀವನದ ಬಗ್ಗೆ ತನಿಖೆ ಆಗಲಿ. ಯಾರಿಗೆ ಅನೈತಿಕ ಸಂಬಂಧ ಇದೆ, ವಿವಾಹವೇತರ ಸಂಬಂಧ ಇದೆ ಎಂಬುವುದು ಗೊತ್ತಾಗಲಿ. ಸಿಎಂ ಆಗಿದ್ದಾಗ …

Read More »

ಕಂಡವರ ಹೆಂಡಿರ ಲೆಕ್ಕ ಹಾಕುವ ಮೊದಲು ಏರುತ್ತಿರುವ ಕೊರೊನಾ ಕೇಸ್‌ ಲೆಕ್ಕ ಹಾಕಿ

ಬೆಂಗಳೂರು, ಮಾರ್ಚ್ 24: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಖಾತೆಯ ಸಚಿವ ಡಾ.ಸುಧಾಕರ್ ಅವರ ‘ಏಕಪತ್ನೀವ್ರತಸ್ಥ’ ಹೇಳಿಕೆ ರಂಪ ರಾಮಾಯಣವಾಗಿ, ಕೊನೆಗೆ ಸಚಿವರು ಕ್ಷಮೆಯಾಚನೆ ಮಾಡಿದ್ದಾರೆ. “ನನ್ನ ಹೇಳಿಕೆ ಯನ್ನು ಅರ್ಥ ಮಾಡಿಕೊಳ್ಳಬೇಕಾದ ಮಹಾನಾಯಕರುಗಳು ಅರ್ಥ ಮಾಡಿಕೊಂಡರೆ ಸಾಕು. ಇಡೀ ರಾಜ್ಯದ ಜನರನ್ನು ತಪ್ಪು ದಾರಿಗೆ ಎಳೆದು ರಾಜಕೀಯ ದ್ವೇಷ ಸಾಧಿಸಲು ಹೊರಟಿರುವ ಮಹಾನಾಯಕರ ಮುಖವಾಡ ಕಳಚುವ ಉದ್ದೇಶ ನನ್ನ ಹೇಳಿಕೆಯ ಹಿಂದೆ ಇತ್ತು ಅಷ್ಟೇ. ನಮ್ಮಗಳ ತೇಜೋವಧೆ ಮಾಡಲು …

Read More »

ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆ..?

ಬೆಂಗಳೂರು, ಮಾ.24- ತೀವ್ರ ಹಣಾಹಣಿಗೆ ಸಾಕ್ಷಿಯಾಗಲಿರುವ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಇಂದು ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ. ಮಸ್ಕಿಯಿಂದ ಮಾಜಿ ಶಾಸಕ ಪ್ರತಾಪ್‍ಗೌಡ ಪಾಟೀಲ್, ಬಸವ ಕಲ್ಯಾಣದಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ, ಮಾಜಿ ಶಾಸಕ ಖೂಬಾ, ಸೂರ್ಯವಂಶಿ ನಾಗಮಾರಪಲ್ಲಿ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸಚಿವ ಜಗದೀಶ್ ಶೆಟ್ಟರ್, ಮಾಜಿ ಸಚಿವ ದಿ.ಸುರೇಶ್ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್ ಇಲ್ಲವೆ ಅವರ ಪತ್ನಿ ಹೆಸರನ್ನು …

Read More »

ಮಸ್ಕಿ ಉಪ ಚುನಾವಣೆ; ಪ್ರತಾಪ್ ಗೌಡ ಪಾಟೀಲ್ ನಾಮಪತ್ರ

ರಾಯಚೂರು, ಮಾರ್ಚ್ 24: ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಘೋಷಣೆಯಾಗಿದೆ. ಪ್ರತಾಪ್ ಗೌಡ ಪಾಟೀಲ್ ಬುಧವಾರ ನಾಮಪತ್ರವನ್ನು ಸಲ್ಲಿಸಿದ್ದಾರೆ. ಬಿಜೆಪಿ ಇನ್ನೂ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಿಲ್ಲ. ಬುಧವಾರ ಪ್ರತಾಪ್ ಗೌಡ ಪಾಟೀಲ್ ಅಂಕಲಿಮಠಕ್ಕೆ ಭೇಟಿ ನೀಡಿದರು. ಗಚ್ಚಿನಮಠಕ್ಕೆ ಭೇಟಿ ಕೊಟ್ಟರು. ಬಳಿಕ ಬಿಜೆಪಿ ಕಚೇರಿಗೆ ಆಗಮಿಸಿದರು. ಅಲ್ಲಿಂದ ಕಾರ್ಯಕರ್ತರ ಜೊತೆ ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಗೆ ಬಂದರು.   ಚುನಾವಣಾಧಿಕಾರಿ ಹಾಗೂ …

Read More »

ಹೈಕಮಾಂಡ್ ಟಿಕೆಟ್ ನೀಡಿದರೆ ಬೆಳಗಾವಿ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ: ಶ್ರದ್ಧಾ ಶೆಟ್ಟರ್

ಬೆಳಗಾವಿ, ಮಾರ್ಚ್ 24: ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಿದರೆ ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ ಎಂದು ದಿ.ಸುರೇಶ್ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್ ಹೇಳಿದರು. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಶ್ರದ್ಧಾ ಶೆಟ್ಟರ್, ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಸ್ಪರ್ಧಿಸಲು ಮಾನಸಿಕವಾಗಿ ಸಿದ್ಧಳಾಗಿದ್ದೇನೆ ಎಂದರು. ದಿ.ಸುರೇಶ್ ಅಂಗಡಿ ಪುತ್ರಿ ಹಾಗೂ ಸಚಿವ ಜಗದೀಶ್ ಶೆಟ್ಟರ್ ಸೊಸೆ ಅಗಿರುವ ಶ್ರದ್ಧಾ ಶೆಟ್ಟರ್, ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ …

Read More »

ಎಫ್‌ಡಿಐ ಆಕರ್ಷಣೆ: ಮೂರನೇ ಸ್ಥಾನದಲ್ಲಿ ರಾಜ್ಯ

ಬೆಂಗಳೂರು: ವಿದೇಶಿ ನೇರ ಬಂಡವಾಳ (ಎಫ್‌ಡಿಐ) ಆಕರ್ಷಣೆಯಲ್ಲಿ ಕರ್ನಾಟಕವು ದೇಶದಲ್ಲಿ ಮೂರನೇ ಸ್ಥಾನವನ್ನು ಉಳಿಸಿಕೊಂಡಿದೆ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಅವರು ಮಂಗಳವಾರ ವಿಧಾನ ಪರಿಷತ್‌ನಲ್ಲಿ ತಿಳಿಸಿದರು. ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎFdಸ್‌ನ ಕೆ.ಎ. ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘2017-18ರಲ್ಲಿ ರಾಜ್ಯಕ್ಕೆ ₹55,334 ಕೋಟಿ ಎಫ್‌ಡಿಐ ಬಂದಿದ್ದು, ದೇಶದಲ್ಲಿ ಮೂರನೇ ಸ್ಥಾನದಲ್ಲಿತ್ತು. 2018-19ರಲ್ಲಿ ₹46,963 ಕೋಟಿ ಹೂಡಿಕೆ ಮತ್ತು 2019-20ರಲ್ಲಿ ₹ 63,177 ಕೋಟಿ ಹೂಡಿಕೆಯೊಂದಿಗೆ ಎರಡನೇ …

Read More »

ಸಿ.ಡಿ. ಪ್ರಕರಣ: ಕಾರು ಚಾಲಕನ ಸಮೇತ ಉದ್ಯಮಿ ನಾಪತ್ತೆ

ಬೆಂಗಳೂರು: ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸಂಬಂಧಪಟ್ಟಿದ್ದು ಎನ್ನಲಾದ ಸಿ.ಡಿ. ಪ್ರಕರಣ ಸಂಬಂಧ ಎಸ್‌ಐಟಿ ಅಧಿಕಾರಿಗಳು ತಮ್ಮ ಮನೆ ಮೇಲೆ ದಾಳಿ ಮಾಡುತ್ತಿದ್ದಂತೆ ಗ್ರಾನೈಟ್ ಉದ್ಯಮಿ ಶಿವಕುಮಾರ್ ಕಾರು ಚಾಲಕನ ಸಮೇತ ನಾಪತ್ತೆಯಾಗಿದ್ದಾರೆ. ಸಿ.ಡಿ ಸೃಷ್ಟಿಸಿದ್ದ ಆರೋಪಿಗಳಿಗೆ ನೆರವು ನೀಡಿದ್ದ ಮಾಹಿತಿ ಮೇರೆಗೆ ಎಸ್‌ಐಟಿ ಅಧಿಕಾರಿಗಳು, ಜೆ.ಪಿ.ನಗರದಲ್ಲಿರುವ ಶಿವಕುಮಾರ್ ಮನೆ ಮೇಲೆ ಇತ್ತೀಚೆಗೆ ದಾಳಿ ಮಾಡಿದ್ದರು. ಕೆಲ ದಾಖಲೆಗಳನ್ನೂ ಜಪ್ತಿ ಮಾಡಿದ್ದರು. ಅದಾದ ಮರುದಿನದಿಂದಲೇ ಶಿವಕುಮಾರ್ ಹಾಗೂ ಅವರ …

Read More »

ಹುತಾತ್ಮರ ದಿನಾಚರಣೆಯಂದೇ ರಕ್ತದಾನ

ಕಾರವಾರ: ಹುತಾತ್ಮ ದಿನದ ಪ್ರಯುಕ್ತ ಭಾರತೀಯ ರೆಡ್‌ಕ್ರಾಸ್‌ ಸಂಸ್ಥೆ ಜಿಲ್ಲಾ ಘಟಕ ಕಾರವಾರ, ನಿಫಾ, ಕ್ರಿಮ್ಸ್‌ ಕಾರವಾರ, ಪಹರೆ ವೇದಿಕೆ ಹಾಗೂ ಇತರ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ದೇಶಾದ್ಯಂತ ನಡೆದ ರಕ್ತದಾನದ ಕಾರ್ಯಕ್ರಮ ಜಿಲ್ಲಾ ವೈದ್ಯಕೀಯ ಕಾಲೇಜು ಹಾಗೂ ಜಿಲ್ಲಾಸ್ಪತ್ರೆ ಆವರಣದಲ್ಲಿ ರೆಡ್‌ಕ್ರಾಸ್‌ ಸಂಸ್ಥೆ ನೇತೃತ್ವದಲ್ಲಿ ನಡೆಯಿತು. ಡಿಸಿ ಮುಲ್ಲೈ ಮುಹಿಲನ್‌ ಅಧ್ಯಕ್ಷತೆ ವಹಿಸಿ ಇಂದು ರೆಡ್‌ಕ್ರಾಸ್‌ ಸಂಸ್ಥೆ ಜಗತ್ತಿನಾದ್ಯಾಂತ ಅತ್ಯಂತ ಪ್ರಭಾವಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಜಗತ್ತಿನಾದ್ಯಂತ ರಕ್ತದ ಅವಶ್ಯಕತೆ …

Read More »

45+ ಎಲ್ಲರಿಗೂ ಲಸಿಕೆ : ಎ. 1ರಿಂದಲೇ ಜಾರಿಗೆ ಕೇಂದ್ರ ಸಂಪುಟ ನಿರ್ಧಾರ

ಹೊಸದಿಲ್ಲಿ: ನಿಮಗೆ 45 ವರ್ಷ ತುಂಬಿದ್ದರೆ ಎ. 1ರಿಂದ ನೀವು ಕೂಡ ಕೊರೊನಾ ಲಸಿಕೆ ಹಾಕಿಸಿಕೊಳ್ಳಬಹುದು. ಇದು ಕೇಂದ್ರ ಸಚಿವ ಸಂಪುಟ ಸಭೆಯ ನಿರ್ಣಯ. ಇದುವರೆಗೆ 45 ವರ್ಷಕ್ಕಿಂತ ಮೇಲ್ಪಟ್ಟ ಇತರ ರೋಗಪೀಡಿತರು ಮಾತ್ರ ಲಸಿಕೆ ಪಡೆಯಬಹುದಾಗಿತ್ತು. ಆದರೆ ಲಸಿಕೆ ವ್ಯರ್ಥವಾಗುವುದನ್ನು ತಪ್ಪಿಸಲು ಮತ್ತು ಲಸಿಕೆಗೆ ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ 45 ವರ್ಷ ತುಂಬಿದ ಆರೋಗ್ಯವಂತರಿಗೂ ಲಸಿಕೆ ನೀಡಲು ನಿರ್ಧರಿಸಲಾಗಿದೆ. ಈ ಬಗ್ಗೆ ಕೇಂದ್ರ ಸಚಿವ ಕೇಂದ್ರ ಸಚಿವ ಪ್ರಕಾಶ್‌ ಜಾಬ್ಡೇಕರ್‌ …

Read More »