ಬೆಂಗಳೂರು: ಇಂದು ಕರೆಯಲಾಗಿದ್ದ ವಿಧಾನ ಮಂಡಲದ ವಿಶೇಷ ಅಧಿವೇಶನದಲ್ಲಿ ಕಾಂಗ್ರೆಸ್-ಬಿಜೆಪಿ ಸದಸ್ಯರು ಕೈಕೈ ಮಿಲಾಯಿಸಿರುವ ಘಟನೆ ನಡೆದಿದೆ. ವಿಧಾನ ಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆಯೇ ಸಭಾಪತಿ ಕುರ್ಚಿಯಲ್ಲಿ ಉಪಸಭಾಪತಿ ಧರ್ಮೇಗೌಡ ಕುಳಿತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ಸದಸ್ಯರು ಗದ್ದಲ ಆರಂಭಿಸಿದ್ದಾರೆ. ಪರಿಷತ್ ಉಪಸಭಾಪತಿಯನ್ನು ಕುರ್ಚಿಯಿಂದ ಕೆಳಗೆಳೆದು ತಂದಿದ್ದಾರೆ. ಈ ವೇಳೆ ಬಿಜೆಪಿ ಸದಸ್ಯರು ಮಧ್ಯಪ್ರವೇಶಿಸಿದ್ದಾರೆ. ಒಂದು ಹಂತದಲ್ಲಿ ಕಾಂಗ್ರೆಸ್-ಬಿಜೆಪಿ-ಜೆಡಿಎಸ್ ಸದಸ್ಯರ ನಡುವೆ ನೂಕಾಟ-ತಳ್ಳಾಟ ನಡೆದಿದ್ದು, ಕೊರಳಪಟ್ಟಿ ಹಿಡಿದು ಎಳೆದಾಡಿಕೊಂಡಿದ್ದಾರೆ. ತಳ್ಳಾಟದ ವೇಳೆ …
Read More »ಕೃಷ್ಣಾ ನದಿಯಲ್ಲಿ ಮುಳುಗಿ ಯುವಕ ಸಾವು
ಸುರಪುರ: ತಾಲೂಕಿನ ವಾಗಣಗೇರಾ ಗ್ರಾಮದ ಹನುಮಾನ ದೇವರ ಕಾರ್ತಿಕೋತ್ಸವದ ಅಂಗವಾಗಿ ದೇವರ ಪಲ್ಲಕ್ಕಿಯನ್ನು ತೆಗೆದುಕೊಂಡು ಗಂಗಾ ಸ್ನಾನಕ್ಕೆಂದು ನದಿಗೆ ಹೋದಾಗ, ನದಿಯಲ್ಲಿ ಈಜಲು ಹೋದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಹಾಂತೇಶ ಕವಡಿಮಟ್ಟಿ(19) ಮೃತ ಯುವಕ. ಸೆಳ್ಳಗಿ ಗ್ರಾಮದ ಬಳಿಯಲ್ಲಿನ ಕೃಷ್ಣಾ ನದಿಗೆ ಹನುಮಾನ ದೇವರ ಪಲ್ಲಕ್ಕಿಯನ್ನು ತೆಗೆದುಕೊಂಡು ಹೋಗಲಾಗಿತ್ತು. ಈ ವೇಳೆ ಗಂಗಾ ಸ್ನಾನಕ್ಕೆಂದು ತೆರಳಿದ ವೇಳೆ ನೀರಿನ ಸುಳಿವಿಗೆ ಸಿಲುಕಿ ಈ ದುರ್ಘಟನೆ ನಡೆದಿದೆ. ಯುವಕನ ಸಾವಿನ …
Read More »ಸಂಸತ್ ನ ಈ ವರ್ಷದ ಚಳಿಗಾಲದ ಅಧಿವೇಶನ ರದ್ದು
ಹೊಸದಿಲ್ಲಿ: ಕೊರೋನ ವೈರಸ್ ಹಾವಳಿಯ ಕಾರಣಕ್ಕೆ ಈ ಬಾರಿ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಸದಿರಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ. ಕೋವಿಡ್-19 ಹರಡುವುದನ್ನು ತಡೆಯಲು ಹಾಗೂ ಜನವರಿಯಲ್ಲಿ ನೇರವಾಗಿ ಬಜೆಟ್ ಅಧಿವೇಶನ ನಡೆಸುವ ಉದ್ದೇಶದಿಂದ ಚಳಿಗಾಲದ ಅಧಿವೇಶನ ರದ್ದುಪಡಿಸುವ ಕುರಿತಂತೆ ಸರ್ವಪಕ್ಷಗಳು ಒಲವು ಹೊಂದಿವೆ ಎಂದು ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ದಿಲ್ಲಿಯ ಹೈವೇಗಳಲ್ಲಿ ಸಾವಿರಾರು ರೈತರು ವಿವಾದಾತ್ಮಕ ರೈತ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡಸುತ್ತಿರುವ …
Read More »ಗೋ ಹತ್ಯೆ ನಿಷೇಧ ಕಾಯ್ದೆಗೆ ಜೆಡಿಎಸ್ ವಿರೋಧ: ಹೆಚ್.ಡಿ.ದೇವೇಗೌಡ
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೋಹತ್ಯೆ ನಿಷೇಧ ವಿಧೇಯಕವನ್ನು ಜಾತ್ಯಾತೀತ ಜನತಾದಳ ಪಕ್ಷವು ಸಂಪೂರ್ಣವಾಗಿ ವಿರೋಧಿಸುತ್ತದೆ ಎಂದು ಜೆಡಿಎಸ್ ಅಧ್ಯಕ್ಷ ಎಚ್ ಡಿ ದೇವೇಗೌಡ ಹೇಳಿದ್ದಾರೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಅವರು, 2010ರಲ್ಲಿ ಬಿಜೆಪಿ ಸರ್ಕಾರ ಈ ಕಾಯ್ದೆಯನ್ನು ತಂದಾಗ ನಾವು ವಿರೋಧಿಸಿದ್ದೆವು. ಇದೀಗ ಬಿಜೆಪಿ ಸರ್ಕಾರ ಮತ್ತೊಮ್ಮೆ ಮಸೂದೆಯನ್ನು ವಿಧಾನಮಂಡಲದಲ್ಲಿ ಮಂಡಿಸಿ ಸಮಾಜದಲ್ಲಿ ಅಶಾಂತಿ ಮತ್ತು ಜನರ ಬಾಳನ್ನು ಅಲ್ಲೋಲ ಕಲ್ಲೋಲ ಮಾಡಲು ಹೊರಟಿದೆ. ಹೀಗಾಗಿ ಈ …
Read More »ಯಾವುದೇ ಶಾಲೆಗೆ ಮಕ್ಕಳ ಮರು ದಾಖಲಾತಿ ಕಡ್ಡಾಯ; ಸಚಿವ ಸುರೇಶ್ ಕುಮಾರ್
ಬೆಂಗಳೂರು: ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಹಾಗೂ ಕಡ್ಡಾಯ ಶಿಕ್ಷಣ ಕಾಯ್ದೆಯ ಆಶಯದಂತೆ ಮಕ್ಕಳನ್ನು ಮುಂದಿನ ತರಗತಿಗಳಿಗೆ ಮರು ದಾಖಲಾತಿ ಮಾಡುವುದು ಪೋಷಕರ ಕರ್ತವ್ಯವಾಗಿದ್ದು, ಪೋಷಕರು ತಮ್ಮ ಮಕ್ಕಳನ್ನು ಶಾಲೆಗಳಿಗೆ ದಾಖಲು ಮಾಡಲು ಮುಂದಾಗಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ರಾಜ್ಯದ ವಿವಿಧ ಖಾಸಗಿ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಗಳ ಪ್ರತಿನಿಧಿಗಳೊಂದಿಗೆ ಶಾಲಾ ಮಂಡಳಿಗಳು, ರಾಜ್ಯದ ಮಕ್ಕಳ ಹಿತದೃಷ್ಟಿಯಿಂದ ಕೈಗೊಳ್ಳಬೇಕಾದ ಉಪಕ್ರಮಗಳ ಕುರಿತು …
Read More »ಸೋಲುಂಡ ನಂತರ ತಟಸ್ಥವಾಗಿದ್ದ ಜೆಡಿಎಸ್ ಇದೀಗ ತನ್ನ ಕಾರ್ಯಚಟುವಟಿಕೆ ಆರಂಭ
ಬೆಂಗಳೂರು: ಉಪಚುನಾವಣೆಯಲ್ಲಿ ಸೋಲುಂಡ ನಂತರ ತಟಸ್ಥವಾಗಿದ್ದ ಜೆಡಿಎಸ್ ಇದೀಗ ತನ್ನ ಕಾರ್ಯಚಟುವಟಿಕೆ ಆರಂಭಿಸಿದೆ. ಪ್ರಾದೇಶಿಕ ಪಕ್ಷವಾಗಿರುವ ಜೆಡಿಸ್ ಅನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳಬೇಕೆಂದು ಪಣತೊಟ್ಟಿರುವ ನಾಯಕರು ರಾಜಕೀಯ ಕಸರತ್ತಿಗೆ ಮುಂದಾಗಿದ್ದಾರೆ. ಜೆಡಿಎಸ್ನಲ್ಲೂ ಬದಲಾವಣೆ ಗಾಳಿ ಬೀಸುತ್ತಿದ್ದು, ಆಹ್ವಾನದ ಮೇರೆಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರನ್ನು ಇಂದು ಮಾಜಿ ಕೇಂದ್ರ ಸಚಿವ ಮತ್ತು ವಿಧಾನಪರಿಷತ್ ಕಾಂಗ್ರೆಸ್ ಸದಸ್ಯ ಸಿ.ಎಂ.ಇಬ್ರಾಹಿಂ ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ. ಪದ್ಮನಾಭನಗರದಲ್ಲಿರುವ ತಮ್ಮ ನಿವಾಸದಲ್ಲಿ …
Read More »ಏರ್ಟೆಲ್, ವಿಐ ಸಾರ್ವಜನಿಕರನ್ನು ಪ್ರಚೋದಿಸುತ್ತಿದ್ದಾರೆ ಎಂದು ರಿಲಾಯನ್ಸ್ ಟ್ರಾಯ್ಗೆ ನೀಡಿರುವ ದೂರಿನಲ್ಲಿ ತಿಳಿಸಿದೆ.
ಕೃಷಿ ಸುಧಾರಣೆ ಕಾನೂನಿನ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಜಿಯೋ ಕಂಪನಿ ವಿರುದ್ಧ ಏರ್ಟೆಲ್ ಮತ್ತು ವೋಡಾಫೋನ್ ಐಡಿಯಾ ಸುಳ್ಳು ಗಾಳಿಸುದ್ದಿ ಹಬ್ಬಿಸುತ್ತಿದೆ ಎಂದು ರಿಲಾಯನ್ಸ್ ಜಿಯೋ ಇನ್ಫೋಕಾಮ್ (ಆರ್ಜಿಯೋ) ಆರೋಪಿಸಿದೆ. ಹೊಸದಾಗಿ ಸರ್ಕಾರ ಜಾರಿಗೆ ತಂದಿರುವ ಕೃಷಿ ಸುಧಾರಣೆ ಕಾನೂನಿನಿಂದ ರಿಲಾಯನ್ಸ್ ಲಾಭ ಮಾಡಿಕೊಳ್ಳಲು ಮುಂದಾಗಿದೆ ಎಂದು ಈ ಎರಡು ಸಂಸ್ಥೆಗಳು ಸುಳ್ಳು ಸುದ್ದಿ ಹಬ್ಬಿಸುತ್ತಿವೆ. ಈ ಎರಡು ಕಂಪನಿಗಳ ವಿರುದ್ಧ ಭಾರತೀಯ ಟೆಲಿಕಾಂ ರೆಗ್ಯುಲೆಟರ್ ಆಥಾರಿಟಿ …
Read More »ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ರಾಜ್ಯಾದ್ಯಂತ ಜನವರಿ 9 ರಂದು ರೈಲು: ವಾಟಾಳ್ ನಾಗರಾಜ್
ಚಾಮರಾಜನಗರ: ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ರಾಜ್ಯಾದ್ಯಂತ ಜನವರಿ 9 ರಂದು ರೈಲು ಬಂದ್ ಚಳವಳಿ ನಡೆಸಲಾಗುವುದು ಎಂದು ಕನ್ನಡ ಚಳವಳಿ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ. ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿದ ಅವರು ಜಿಲ್ಲಾಡಳಿತ ಭವನದ ಮುಂದೆ ತಮ್ಮ ಬೆಂಬಲಿಗರೊಂದಿಗೆ ರಾಜ್ಯ ಸರ್ಕಾರದ ವಿರುದ್ದ ದಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಮರಾಠ ಅಭಿವೃದ್ಧಿ ನಿಗಮ …
Read More »ಮೇಲ್ಮನೆ ಕಲಾಪದತ್ತ ಎಲ್ಲರ ಚಿತ್ತ, ಕೋಲಾಹಲ ನಿಶ್ಚಿತ
ಬೆಂಗಳೂರು, ಡಿ.15- ಗೋ ಹತ್ಯೆ ನಿಷೇಧ ವಿಧೇಯಕ, ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯ ಕುರಿತು ಚರ್ಚೆಯ ಉದ್ದೇಶದಿಂದ ನಾಳೆ ಕರೆಯಲಾಗಿರುವ ಒಂದು ದಿನದ ವಿಧಾನಪರಿಷತ್ನ ಅಧಿವೇಶನ ರಣಾಂಗಣವಾಗುವ ಪರಿಸ್ಥಿತಿ ಎದುರಾಗಿದೆ. ಸಭಾಪತಿ ಚುನಾವಣೆ ವಿಷಯದಲ್ಲಿ ಬಿಜೆಪಿ, ಜೆಡಿಎಸ್ನದು ಒಂದು ನಿಲುವಾದರೆ, ಕಾಂಗ್ರೆಸ್ ಪಕ್ಷದ್ದು ಪ್ರತ್ಯೇಕ ನಿಲುವಾಗಿದೆ. ಬಿಜೆಪಿ ರಾಜ್ಯಪಾಲರ ಮೊರೆ ಹೋಗಿ ಅಧಿವೇಶನಕ್ಕೆ ಸಮಯ ನಿಗದಿ ಮಾಡಿರುವುದು ಪ್ರಮುಖವಾಗಿ ಸಭಾಪತಿ ವಿರುದ್ಧದ ಅವಿಶ್ವಾಸ ಗೊತ್ತುವಳಿಯನ್ನು ಅಂಗೀಕಾರ ಮಾಡಲಿಕ್ಕಾಗಿ. ಆದರೆ, ಬಿಜೆಪಿಯ …
Read More »ಬುಧವಾರ ಜೆಡಿಎಸ್ ಪ್ರಮುಖರ ಸಭೆ,ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ
ಬೆಂಗಳೂರು,ಡಿ.- ಗ್ರಾಮಪಂಚಾಯ್ತಿ ಚುನಾವಣೆ, ಪಕ್ಷ ಸಂಘಟನೆ, ಪ್ರಚಲಿತ ರಾಜಕೀಯ ವಿದ್ಯಮಾನ ಮೊದಲಾದ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲು ನಾಳೆ ಮತ್ತು ಬುಧವಾರ ಜೆಡಿಎಸ್ ಪ್ರಮುಖರ ಸಭೆ ನಡೆಸಲು ಉದ್ದೇಶಿಸಲಾಗಿದೆ. ಇತ್ತೀಚೆಗೆ ಪಕ್ಷದಲ್ಲಿ ಉಂಟಾಗಿರುವ ಕೆಲವು ಗೊಂದಲಗಳನ್ನು ತಿಳಿಗೊಳಿಸುವ ಹಿನ್ನೆಲೆಯಲ್ಲಿ ಜೆಡಿಎಸ್ ಪ್ರಮುಖರ ಸಭೆ ನಡೆಸಲಾಗುತ್ತದೆ. ಪಕ್ಷದ ಮುಖಂಡರು, ಕಾರ್ಯಕರ್ತರಲ್ಲಿರುವ ಕೆಲವೊಂದು ಗೊಂದಲಗಳನ್ನು ನಿವಾರಿಸುವ ಹಾಗೂ ಪಕ್ಷದ ನಿಲುವನ್ನು ಸ್ಪಷ್ಟಪಡಿಸುವ ಉದ್ದೇಶದಿಂದ ಸಭೆ ನಡೆಸಲಾಗುತ್ತದೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ …
Read More »