ನವದೆಹಲಿ: ದಾಂಡೇಲಿ ಅರಣ್ಯದ ಮೂಲಕ ಹಾದು ಹೋಗುವ ಬೆಳಗಾವಿ-ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ- 4ಎ ವಿಸ್ತರಣೆ ಕಾಮಗಾರಿಗೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ನವೆಂಬರ್ 2019ರಲ್ಲಿ ಕಾಮಗಾರಿಗೆ ತಡೆ ಪರಿಸರವಾದಿ ಹಾಗೂ ನಿರ್ದೇಶಕ ಸುರೇಶ್ ಹೆಬ್ಳಿಕರ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ ಹೆದ್ದಾರಿ ವಿಸ್ತರಣೆ ಕಾಮಗಾರಿಗೆ ತಡೆಯಾಜ್ಞೆ ನೀಡಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಲ್ಲಿಸಿದ್ದ …
Read More »ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಕಾಂಗ್ರೆಸ್ ನಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಬೆಂಗಳೂರು : ಕುತೂಹಲ ಮೂಡಿಸಿರುವ ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಕಾಂಗ್ರೆಸ್ ನಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ ಎನ್ನಲಾಗಿದೆ. ಬೆಳಗಾವಿ ಭಾಗದಲ್ಲಿ ಸತೀಶ್ ಜಾರಕಿಹೊಳಿ ಅವರು ಸಾಕಷ್ಟು ಪ್ರಭಾವ ಹೊಂದಿದ್ದು, ಹೀಗಾಗಿ ಸತೀಶ್ ಜಾರಿಕಿಹೊಳಿಗೆ ಟಿಕೆಟ್ ನೀಡಲು ಕಾಂಗ್ರೆಸ್ ನಾಯಕರು ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಸೋಮವಾರ ವಿಧಾನಸೌಧದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ವಿವಿಧ ಕಾಂಗ್ರೆಸ್ …
Read More »ಜನ್ಮ ದಿನದಂದೇ ಗಂಡು ಮಗುವಿನ ತಂದೆಯಾದ ಪವನ್ ಒಡೆಯರ್
ಬೆಂಗಳೂರು: ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ನಿರ್ದೇಶಕ ಪವನ್ ಒಡೆಯರ್ ಹಾಗೂ ನಟಿ ಅಪೇಕ್ಷಾ ಪುರೋಹಿತ್ ದಂಪತಿಗೆ ಗಂಡು ಮಗುವಿನ ಜನನವಾಗಿದೆ ವಿಶೇಷ ಅಂದ್ರೆ ಇಂದು ಪವನ್ ಒಡೆಯರ್ ಅವರ ಹುಟ್ಟುಹಬ್ಬವಾಗಿದೆ. ಹೀಗಾಗಿ ಇಂದೇ ಮಗನ ಜನನ ಕೂಡ ಆಗಿರುವುದು ಕುಟುಂಬದ ಸಂತಸ ಮತ್ತಷ್ಟು ಹೆಚ್ಚಿಸಿದೆ. ಈ ಖುಷಿಯ ವಿಚಾರವನ್ನು ಪವನ್ ಒಡೆಯರ್ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯ ಮೂಲಕ ಹಂಚಿಕೊಂಡಿದ್ದಾರೆ. ಪತ್ನಿ ಹಾಗೂ ಮಗು ಆಸ್ಪತ್ರೆಯಲ್ಲಿರುವ ಫೋಟೋವನ್ನು ಪವನ್ …
Read More »ಸೋನು ಸೂದ್ ಕಷ್ಟದಲ್ಲಿರುವವರಿಗೆ ಸಹಾಯ ಮಾಡಲು 10 ಕೋಟಿ ರೂ.ಆಸ್ತಿಯನ್ನು ಅಡವಿಟ್ಟಿದ್ದಾರೆ.
ಮುಂಬೈ: ಲಾಕ್ಡೌನ್ ವೇಳೆ ವಲಸೆ ಕಾರ್ಮಿಕರಿಗೆ ಹಾಗೂ ಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಮೂಲಕ ಬಾಲಿವುಡ್ ನಟ ಸೋನು ಸೂದ್ ನೆರವಾಗಿದ್ದರು. ಈ ಕುರಿತು ಸಾಕಷ್ಟು ಮೆಚ್ಚುಗೆ ಸಹ ವ್ಯಕ್ತವಾಗಿತ್ತು. ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ಸೋನು ಸೂದ್ ಕಷ್ಟದಲ್ಲಿರುವವರಿಗೆ ಸಹಾಯ ಮಾಡಲು 10 ಕೋಟಿ ರೂ.ಆಸ್ತಿಯನ್ನು ಅಡವಿಟ್ಟಿದ್ದಾರೆ. ಮುಂಬೈನ ವಿವಿಧ ಪ್ರದೇಶಗಳಲ್ಲಿರುವ 8 ಆಸ್ತಿಗಳನ್ನು ಸೋನು ಸೂದ್ ಅಡವಿಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಕಷ್ಟದಲ್ಲಿರುವವರಿಗೆ ಸಹಾಯ ಮಾಡಲು …
Read More »ಸ್ಪಾ ಹೆಸರಿನಲ್ಲಿ ಸೆಕ್ಸ್ ದಂಧೆ…….7 ಯುವತಿಯರು ಸೇರಿದಂತೆ 18 ಜನ ಅರೆಸ್ಟ್,…..
ಲಕ್ನೊ: ಸ್ಪಾ ಹೆಸರಿನಲ್ಲಿ ಸೆಕ್ಸ್ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು 7 ಯುವತಿಯರು ಸೇರಿದಂತೆ 18 ಜನರನ್ನ ಬಂಧಿಸಿದ್ದಾರೆ. ಮಂಗಳವಾರ ತಡರಾತ್ರಿ ಕಾರ್ಯಚರಣೆ ನಡೆಸಿದ್ದ ಗ್ರೇಟರ್ ನೋಯ್ಡಾದ ಕೋತವಾಲಿಯ ಬೀಟಾ-2 ಪೊಲೀಸರು 18 ಜನರನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗ್ರೇಟರ್ ನೋಯ್ಡಾದ ಜಗತ್ ಫಾರಂನೊಳಗೆ ಸ್ಪಾ ಹೆಸರಿನಲ್ಲಿ ಅನೈತಿಕ ಚುಟವಟಿಕೆಗಳು ನಡೆಯುತ್ತಿರುವ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ದೂರುಗಳ ಬಂದ ಹಿನ್ನೆಲೆ ಡಿಸಿಪಿ ರಾಜೇಶ್ ಕುಮಾರ್ …
Read More »ಹಠ ಬಿಡದ ಅನ್ನದಾತರಿಂದ ಹೋರಾಟ ತೀವ್ರ
ನವದೆಹಲಿ: ಕೇಂದ್ರ ಒಪ್ತಿಲ್ಲ – ರೈತರು ಪಟ್ಟು ಸಡಿಲಿಸ್ತಿಲ್ಲ. ಕೇಂದ್ರ ಕಳಿಸಿದ ಲಿಖಿತ ಭರವಸೆಯನ್ನು ಕೂಡ ರೈತರು ಒಪ್ಪಿಲ್ಲ. ಪರಿಣಾಮ, ಸತತ 14ನೇ ದಿನವೂ ದೆಹಲಿ ಹೊರ ವಲಯದಲ್ಲಿ ಅನ್ನದಾತರ ಪ್ರತಿಭಟನೆ ಮುಂದುವರಿದಿದೆ. ಮಂಗಳವಾರ ರಾತ್ರಿ ಅಮಿತ್ ಶಾ ಜೊತೆಗಿನ ಸಂಧಾನ ಸಭೆ ವಿಫಲವಾದ ಬಳಿಕ ಇವತ್ತಿನ ಸಭೆ ರದ್ದು ಮಾಡಿದ ಕೇಂದ್ರ ಸರ್ಕಾರ, ರೈತರ ಬೆಳೆಗಳಿಗೆ ಬೆಂಬಲ ಬೆಲೆ ಇರುತ್ತೆ ಎಂಬ ಭರವಸೆ ಸೇರಿ ಹಲವು ತಿದ್ದುಪಡಿಗಳಿಗೆ ಸಮ್ಮತಿ …
Read More »ರಿಯಾ ಚಕ್ರವರ್ತಿ ಮತ್ತು ಶೋವಿಕ್ಗೆ ಡ್ರಗ್ಸ್ ಪೂರೈಸುತ್ತಿದ್ದ ಪೆಡ್ಲರ್ ಅರೆಸ್ಟ್
ನವದೆಹಲಿ: ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿರುವ ರಿಯಾ ಚಕ್ರವರ್ತಿ ಮತ್ತು ಸಹೋದರ ಶೋವಿಕ್ಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಡ್ರಗ್ ಪೆಡ್ಲರ್ ರೆಗೆಲ್ ಮಹಕಲ್ನನ್ನು ನಾರ್ಕೋಟಿಕ್ಸ್ ಬ್ಯೂರೋ(ಎನ್ಸಿಬಿ) ಬಂಧಿಸಿದೆ.ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ ಬೆಳಕಿಗೆ ಬಂದ ನಂತರ ಪರಾರಿಯಾಗಿದ್ದ ಪೆಡ್ಲರ್ ರೆಗೆಲ್ ಮಹಕಲ್ನನ್ನು ಎನ್ಸಿಬಿ ಈಗ ಮುಂಬೈನ ಪಶ್ಚಿಮ ಉಪನಗರದಲ್ಲಿ ಬಂಧಿಸಿದೆ. ಮಹಕಲ್ ಈ ಪ್ರಕರಣದ ಆರೋಪಿ ಅನುಜ್ ಕೇಶ್ವಾನಿಗೆ ಮಾದಕವಸ್ತುಗಳನ್ನು ಪೂರೈಸುತ್ತಿದ್ದನು. ನಂತರ ಅದನ್ನು ಕೈಜಾನ್ ಎಂಬ ವ್ಯಕ್ತಿಗೆ …
Read More »ಯುವಕನೋರ್ವ ವಿಶೇಷ ಚೇತನ ಯುವತಿಯ ಕೈ ಹಿಡಿಯುವ ಮೂಲಕ ಮಾದರಿ
ಧಾರವಾಡ: ಯುವಕನೋರ್ವ ವಿಶೇಷ ಚೇತನ ಯುವತಿಯ ಕೈ ಹಿಡಿಯುವ ಮೂಲಕ ಮಾದರಿಯಾಗಿದ್ದಾರೆ. ನಗರದ ನಿವಾಸಿಯಾದ ವಿನಾಯಕ್ ಶಿಂಧೆ ಮತ್ತು ಮಿನಾಕ್ಷಿ ಕ್ಷೀರಸಾಗರ ಜೋಡಿ ಇಂದು ಹಸೆಮಣೆ ಎರಿದೆ. ಮೀನಾಕ್ಷಿ ಹುಟ್ಟಿದಾಗಿನಿಂದ ವಿಶೇಷ ಚೇತನೆ. ಇದು ಗೊತ್ತಿದ್ದರೂ ಯುವಕ ಮೀನಾಕ್ಷಿಯನ್ನು ವರಿಸಿಕೊಳ್ಳಲು ಒಪ್ಪಿದ್ದು, ನಗರದ ಸೈದಾಪೂರದ ನಿವಾಸಿಯಾದ ಮೀನಾಕ್ಷಿ ಜೊತೆ ಕಮಲಾಪುರದ ನಿವಾಸಿ ವಿನಾಯಕ ವಿವಾಹವಾಗಿದ್ದಾರೆ. ವಿನಾಯಕ್ ಮೊದಲಿನಿಂದಲೂ ವಿಶೇಷ ಚೇತನ ಹುಡುಗಿ ಕೈ ಹಿಡಿಯಬೇಕೆಂಬ ಸಂಕಲ್ಪ ಹೊಂದಿದ್ದರು. ಮೀನಾಕ್ಷಿ ವಿಶೇಷ …
Read More »ಬಾಳು ಕೊಡುತ್ತೇನೆಂದು ನಂಬಿಸಿ ಮೋಸ
ಚಾಮರಾಜನಗರ: ಚಿಕ್ಕ ವಯಸ್ಸಿನಲ್ಲೇ ಮದುವೆಯಾಗಿ ಸಂಸಾರದ ನೌಕೆ ಹೊತ್ತ ಯುವತಿ, ಮದುವೆಯಾದ 5 ವರ್ಷದಲ್ಲೇ ಗಂಡನಿಂದ ದೂರವಾಗಿ ತವರು ಮನೆ ಸೇರಿ ಹೆಣ್ಣು ಮಗುವಿನೊಂದಿಗೆ ಜೀವನ ನಡೆಸುತ್ತಿದ್ದಳು. ಹೀಗಿರುವಾಗಲೇ ಯುವಕನೊಬ್ಬ ಜೀವನ ಕೊಡುವುದಾಗಿ ನಂಬಿಸಿ ಮೋಸ ಮಾಡಿದ್ದು, ಯುವತಿ ಕಣ್ಣಿರಿನಲ್ಲಿ ಕೈ ತೊಳೆಯುತ್ತಿದ್ದಾಳೆ.ಚಾಮರಾಜನಗರ ತಾಲೂಕಿನ ಹರದನಹಳ್ಳಿಯ ಅಮಚವಾಡಿ ಗ್ರಾಮದ ಪುಷ್ಪಾ, 14ನೇ ವಯಸ್ಸಿನಲ್ಲಿ ತನ್ನ ತಾಯಿ ಕಳೆದುಕೊಂಡು ಸಾಕಷ್ಟು ಕಷ್ಟ ಅನುಭವಿಸುತ್ತಿದ್ದಳು. ಅಷ್ಟರಲ್ಲಾಗಲೇ ಪುಷ್ಪಾಳ ತಂದೆ ತಾಯಿ ಇಲ್ಲದವಳನ್ನು ಯಾರೂ …
Read More »ರೈತರ ಜೊತೆಗೆ ಕೆಎಸ್ಆರ್ಟಿಸಿ, ಬಿಎಂಟಿಸಿ ಸಿಬ್ಬಂದಿಯೂ ಪ್ರತಿಭಟನೆ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರೈತರ ಜೊತೆಗೆ ಕೆಎಸ್ಆರ್ಟಿಸಿ, ಬಿಎಂಟಿಸಿ ಸಿಬ್ಬಂದಿಯೂ ಪ್ರತಿಭಟನೆ ನಡೆಸ್ತಿದ್ದಾರೆ. 10 ಸಾವಿರಕ್ಕೂ ಅಧಿಕ ಸಿಬ್ಬಂದಿ ರೈತರ ಜೊತೆಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಘೋಷಣೆ ಮಾಡ್ಬೇಕು, ಸಿಬ್ಬಂದಿ ಮೃತಪಟ್ಟರೆ ಕೋವಿಡ್ ವಾರಿಯರ್ಸ್ ಎಂದು ಪರಿಗಣಿಸಿ 30 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆಗ್ರಹಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ. ಸಾರಿಗೆ ಸಿಬ್ಬಂದಿಯ ಪ್ರತಿಭಟನೆಯಿಂದ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ಗಳ ಓಡಾಟದಲ್ಲಿ ವ್ಯತ್ಯಯ …
Read More »