Breaking News

ಫೈಝರ್ ಕೋವಿಡ್ ಲಸಿಕೆ ಬಳಕೆ ಬಗ್ಗೆ ಭಾರತದಲ್ಲಿ ಗೊಂದಲ

ನವದೆಹಲಿ: – ಕೊರೊನಾ ನಿಯಂತ್ರಣಕ್ಕೆ ತುರ್ತು ಸಂದರ್ಭದಲ್ಲಿ ಬಳಸಲು ಮಾನ್ಯತೆ ಪಡೆದಿರುವ ಫೈಝರ್ ಲಸಿಕೆ ಗುಣಮಟ್ಟದ ಬಗ್ಗೆ ಉತ್ಪಾದಕ ಕಂಪೆನಿಯೇ ಗೊಂದಲಕಾರಿ ಹೇಳಿಕೆ ನೀಡಿದೆ. ಇಂಗ್ಲೆಂಡ್ ಸರ್ಕಾರ ಮತ್ತು ಬಹರೈನ್ ಆರೋಗ್ಯ ಪ್ರಾಧಿಕಾರದಿಂದ ಅಂಗೀಕಾರ ಪಡೆದಿರುವ ಫೈಝರ್‍ಲಸಿಕೆಯನ್ನು ಕೊರೊನಾ ವಿರುದ್ಧ ಹೋರಾಟಕ್ಕೆ ತುರ್ತು ಸಂದರ್ಭದಲ್ಲಿ ಬಳಸಬಹುದೆಂದು ನಿರ್ಣಯಿಸಲಾಗಿದೆ. ಭಾರತ ಸರ್ಕಾರ ಕೂಡ ಈ ಲಸಿಕೆಯನ್ನು ತುರ್ತು ಸಂದರ್ಭದಲ್ಲಿ ಬಳಸಲು ಒಪ್ಪಿ ಕೊಂಡಿದ್ದು, ಲಕ್ಷಾಂತರ ಡೊಸೇಜ್‍ಗಳನ್ನು ಆಮದು ಮಾಡಿಕೊಳ್ಳುತ್ತಿದೆ. ಈಗ ಫೈಝರ್‍ನ …

Read More »

ರಮೇಶ್ ಜಾರಕಿಹೊಳಿ ಮನಸು ಮಾಡಿದರೆ , ಗೋಕಾಕ್ ಜಿಲ್ಲೆ ಆಗಿಸಬಹುದು

ಗೋಕಾಕ : ಗ್ರಾ.ಪ ಚುನಾವಣೆಯಲ್ಲಿ ಯಾವುದೇ ಪಕ್ಷದ ಚಿನ್ನೆಯ ಮೇಲೆ ನಡೆಯುವುದಿಲ್ಲ. ಪರೋಕ್ಷವಾಗಿ ಬೆಂಬಲಿತ ಅಭ್ಯರ್ಥಿ ಪರ ಕೆಲಸ ಮಾಡಲಿದ್ದಾರೆ. ಗೋಕಾಕ ನಲ್ಲಿ ಈ ಬಾರಿ ಚುನಾವಣೆಯಲ್ಲಿ  ಹೆಚ್ಚು ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ ವಿಶ್ವಾಸ ವ್ಯಕ್ತ ಪಡಿಸಿದರು. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಾದ್ಯಂತ ಗ್ರಾಮ ಪಂಚಾಯಿತಿ ಚುನಾವಣೆಗೆ ಭಾರೀ ತಯಾರಿಗಳು ನಡೆದಿವೆ. ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಬೆಂಬಲಿತ …

Read More »

ಕೆಂದ್ರದ ಹೊಸ ಕೃಷಿ ಕಾನೂನುಗಳ ಬಗ್ಗೆ ಇರುವ ಕಳವಳವನ್ನು ತುರ್ತಾಗಿ ಪರಿಹರಿಸಬೇಕು:ಪ್ರಿಯಾಂಕ್ರಾ ಚೋಪ್ರಾ

ನವದೆಹಲಿ: ಕೆಂದ್ರದ ಹೊಸ ಕೃಷಿ ಕಾನೂನುಗಳ ಬಗ್ಗೆ ಇರುವ ಕಳವಳವನ್ನು ತುರ್ತಾಗಿ ಪರಿಹರಿಸಬೇಕು ಎಂದು ಬಾಲಿವುಡ್ ನಟಿ ಪ್ರಿಯಾಂಕ್ರಾ ಚೋಪ್ರಾ ಮನವಿ ಮಾಡಿದ್ದಾರೆ.ಪ್ರಿಯಾಂಕಾ ಚೋಪ್ರಾ ಅವರು ಭಾನುವಾರ ರೈತರ ಪ್ರತಿಭಟನೆಯ ಸಂಬಂಧ ತಮ್ಮ ಟ್ವೀಟ್ ನಲ್ಲಿ ಹಂಚಿಕೊಂಡರು. ಗಾಯಕ-ನಟ ದಿಲ್ಜಿತ್ ದೋಸಾಂಜ್ ಅವರ ಟ್ವೀಟ್ ಅನ್ನು ಅನುಮೋದಿಸಿದರು ಮತ್ತು ಕೇಂದ್ರದ ಹೊಸ ಕೃಷಿ ಕಾನೂನುಗಳ ಬಗ್ಗೆ ತಮ್ಮ ಕಳವಳವನ್ನು ತುರ್ತಾಗಿ ಪರಿಹರಿಸಬೇಕೆಂದು ಎಂದು ತಿಳಿಸಿದ್ದಾರೆ. ಟ್ವೀಟ್‍ನಲ್ಲಿ ಏನಿದೆ? ಗಾಯಕ-ನಟ ದಿಲ್ಜಿತ್ …

Read More »

ಗೋ ಕಡಿಯೋಕೆ ಅವಕಾಶ ಕೊಡ್ತೀವಿ ಅಂತ ತಾಕತ್ ಇದ್ರೆ ಘೋಷಣೆ ಮಾಡ್ಲಿ- ‘ಕೈ’ಗೆ ಈಶ್ವರಪ್ಪ ಸವಾಲ್

ಬೆಂಗಳೂರು: ಕಾಂಗ್ರೆಸ್ಸಿನವರು ಮುಂಬರುವ ಗ್ರಾಮ ಪಂಚಾಯ್ತಿ ಚುನಾವಣೆ ಪ್ರಣಾಳಿಕೆಯಲ್ಲಿ ನಾವು ಗೋಹತ್ಯೆ ನಿಷೇಧ ಮಾಡಲ್ಲ ಅಂತ ಹೇಳಲಿ. ಗೋ ಕಡಿಯೋಕೆ ಅವಕಾಶ ಕೊಡ್ತೀವಿ ಅಂತ ತಾಕತ್ ಇದ್ದರೆ ಘೋಷಣೆ ಮಾಡಲಿ ಎಂದು ಸಚಿವ ಈಶ್ವರಪ್ಪ ಸವಾಲೆಸೆದಿದ್ದಾರೆ. ವಿಧಾನಸೌಧದಲ್ಲಿ ಲವ್ ಜಿಹಾದ್ ಮತ್ತು ಗೋಹತ್ಯೆ ನಿಷೇಧ ಕಾಯ್ದೆಗೆ ಕಾಂಗ್ರೆಸ್ ವಿರೋಧ ವಿಚಾರಕ್ಕೆ ಪ್ರತಿಕ್ರಿಯಿಸಿ, ಗೋವನ್ನ ನಾವು ತಾಯಿ ಅಂತೀವಿ. ಗೋವನ್ನ ತಾಯಿ ಸ್ವರೂಪ ಅಂತ ನಾವು ಕಾಣ್ತೀವಿ. ನಮ್ಮ ತಾಯಿಗೆ ವಯಸ್ಸಾಯ್ತು …

Read More »

ಸುರೇಶ್ ಅಂಗಡಿಧರ್ಮಪತ್ನಿ ಮಂಗಳಾ ಅಂಗಡಿ ಅವರು ಚುನಾವಣೆಗೆ ಸ್ಪರ್ದಿಸಬೇಕು ಎನ್ನುವದು ಅಭಿಮಾನಿಗಳ ಒತ್ತಾಯ

ಬೆಳಗಾವಿ-ಸೋಲಿಲ್ಲದ ಸರದಾ,ಸರಳ ಸಜ್ಜನ ರಾಜಕಾರಣಿಯಾಗಿದ್ದ ಸುರೇಶ್ ಅಂಗಡಿ ಅವರನ್ನು ಅವರ ಅಭಿಮಾನಿಗಳು ಮರೆತಿಲ್ಲ,ಪ್ರತಿದಿನ ಅವರ ಮನೆಗೆ ಅಭಿಮಾನಿಗಳ ದಂಡು ಹರಿದು ಬರುತ್ತಿದೆ. ಸುರೇಶ ಅಂಗಡಿಯವರ ನಿಧನದಿಂದ ತೆರವಾದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸುವಂತೆ ಕೋರಿ ವಿವಿಧ ಗ್ರಾಮಗಳ ಅವರ ಅಭಿಮಾನಿಗಳು ಹಾಗೂ ಭಾಜಪ ಕಾರ್ಯಕರ್ತರು ಇಂದು ಅವರ ಕುಟುಂಬ ಸದಸ್ಯರಿಗೆ ಮನವಿ ಮಾಡಿಕೊಂಡಿದ್ದಾರೆ.ಸುರೇಶ್ ಅಂಗಡಿ ಅವರು ಬಿಜೆಪಿ ಕಾರ್ಯಕರ್ತರ ಜೀವಾಳವಾಗಿದ್ದರು.ಅವರ ಧರ್ಮಪತ್ನಿ ಮಂಗಳಾ ಅಂಗಡಿ ಅವರು ಚುನಾವಣೆಗೆ ಸ್ಪರ್ದಿಸಬೇಕು ಎನ್ನುವದು …

Read More »

ಬೆಳಗಾವಿಯಲ್ಲಿ 30ಕ್ಕೂ ಹೆಚ್ಚು ಸಂಘಟನೆಗಳ ಪದಾಧಿಕಾರಿಗಳ ಸಭೆ

ಬೆಳಗಾವಿ- ಕೇಂದ್ರ ಸರ್ಕಾರದ ರೈತ ವಿರೋಧ ನಿಲುವು ಖಂಡಿಸಿ ರೈತ ಸಂಘಟನೆಗಳು ನಾಳೆ ಭಾರತ್ ಬಂದ ಕರೆ ನೀಡಿರುವ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ 30ಕ್ಕೂ ಹೆಚ್ಚು ಸಂಘಟನೆಗಳ ಪದಾಧಿಕಾರಿಗಳು ಸಭೆ ನಡೆಸಿದರು. ಬೆಳಗಾವಿ ಡಾ. ಬಿ ಆರ್ ಅಂಬೇಡ್ಕರ್ ಗಾರ್ಡನ್ ನಲ್ಲಿ ಸಭೆ ನಡೆಸಿದ ರೈತ ಮುಖಂಡರು, ಬೆಳಗ್ಗೆ 6 ಗಂಟೆಯಿಂದಲೇ ಪ್ರತಿಭಟನೆ ನಡೆಸಲು ನಿರ್ಧರಿಸಿದರು. ರೈತ ಸಂಘಟನೆ, ‌ಕಾರ್ಮಕ ಸಂಘಟನೆ, ಕನ್ನಡ ಪರ ಸಂಘಟನೆ, ಆಟೋ ಚಾಲಕರ ಸಂಘಟನೆ ಬೆಂಬಲ …

Read More »

ಬಿ.ಎಸ್.ಯಡಿಯೂರಪ್ಪ ಅವರನ್ನು ಅವಧೂತ ವಿನಯ್ ಗುರೂಜಿ ಸೋಮವಾರ ಭೇಟಿತೀವ್ರ ಕುತೂಹಲಕ್ಕೆ ಕಾರಣ

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಅವಧೂತ ವಿನಯ್ ಗುರೂಜಿ ಸೋಮವಾರ ಭೇಟಿ ಮಾಡಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಇಲ್ಲಿನ ಡಾಲರ್ಸ್ ಕಾಲೋನಿಯ ತಮ್ಮ ನಿವಾಸಕ್ಕೆ ಸಿಎಂ ವಿನಯ್ ಗುರೂಜಿಯನ್ನು ಕರೆಸಿಕೊಂಡಿದ್ದಾರೆ. ಸುಮಾರು ಗಂಟೆಗಳ ಕಾಲ ಚರ್ಚಿಸಿದ್ದಾರೆ ಎನ್ನಲಾಗಿದೆ. ಭೇಟಿ ಕಾರಣ ತಿಳಿದು ಬಂದಿಲ್ಲ.  ಚಿಕ್ಕಮಂಗಳೂರಿನ ವಿನಯ್ ಗುರೂಜಿ ಅವರು,  ಇತ್ತಿಚೇಗೆಹುಬ್ಬಳಿಯಲ್ಲಿ ನಮ್ಮ ಮುಖ್ಯಮಂತ್ರಿಗಳಿಗೆ ದೇವರ ಆಶೀರ್ವಾದ ಉಂಟು ಎಂದಿದ್ದರು. ಸದ್ಯ ವಿನಯ್ ಗುರೂಜಿ, ಸಿಎಂ ಬಿ.ಎಸ್. ಯಡಿಯೂರಪ್ಪ ಭೇಟಿ …

Read More »

ಬೆಂಗಳೂರಿಗೆ ಬಂದುತನ್ನ ಅಣ್ಣನ ಆಶೀರ್ವಾದ ಪಡೆದರಜನಿಕಾಂತ್

ಬೆಂಗಳೂರು: ಸೂಪರ್ ಸ್ಟಾರ್ ರಜನಿಕಾಂತ್ ಅವರು ಬೆಂಗಳೂರಿಗೆ ಬಂದು ಸಿಲಿಕಾನ್ ಸಿಟಿಯಲ್ಲಿ ನೆಲೆಸಿರುವ ತನ್ನ ಅಣ್ಣನ ಆಶೀರ್ವಾದ ಪಡೆದುಕೊಂಡಿದ್ದಾರೆ. ಸೌತ್ ಇಂಡಿಯನ್ ಸೂಪರ್ ಸ್ಟಾರ್ ರಜಿನಿಕಾಂತ್ ಅವರು, ಇದೇ ಡಿಸೆಂಬರ್ 31ಕ್ಕೆ ತಮ್ಮ ಹೊಸ ಪಕ್ಷವನ್ನು ಲಾಂಚ್ ಮಾಡುವ ಯೋಜನೆಯನ್ನು ಹಾಕಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ ಬೆಂಗಳೂರಿಗೆ ಬಂದಿರುವ ರಜನಿಕಾಂತ್ ಅವರು, ಬೆಂಗಳೂರಿನಲ್ಲಿ ನೆಲೆಸಿರುವ ತಮ್ಮ ಸೋದರ ಸತ್ಯನಾರಾಯಣ್ ರಾವ್ ಅವರನ್ನು ಭೇಟಿ ಮಾಡಿ ರಾಜಕೀಯ ಪಕ್ಷ ಘೋಷಣೆ …

Read More »

ಸ್ಮಶಾನದಲ್ಲಿ ವಾಹನಕ್ಕೆ ಚಾಲನೆ, ಬರ್ತ್ ಡೇ ಸೆಲೆಬ್ರೆಷನ್ : ವಿನೂತನ ಕಾರ್ಯಕ್ರಮಕ್ಕೆ ಸಾಕ್ಷಿಯಾದ MBV

ಗೋಕಾಕ : ಮಾನವ ಬಂಧುತ್ವ ವೇದಿಕೆಯ ಡಿ.6ರಂದು ನಡೆಸುವ ಮಹಾ ಪರಿನಿರ್ಮಾಣ ದಿನ ಈ ಬಾರಿ ವಿಶೇಷತೆಯಿಂದ ಕೂಡಿತ್ತು. ಸ್ಮಶಾನ ಭೂಮಿಯಲ್ಲಿ ವಾಹನಕ್ಕೆ ಚಾಲನೆ, ಬರ್ತಡೇ ಆಚರಿಸಿ, ವಿನೂತನ ಕಾರ್ಯಕ್ರಮಕ್ಕೆ ಸಾಕ್ಷಿಯಾಯಿತು. ಶಾಸಕ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಬಿ.ಆರ್.ಅಂಬೇಡ್ಕರ್ ಅವರ ಪರಿನಿರ್ವಾಣ ದಿನವನ್ನು 2014ರಿಂದ ಮೌಢ್ಯ ವಿರೋಧಿ ದಿನವನ್ನಾಗಿ ಆಚರಿಸಲಾಗುತ್ತಿದೆ. ಪ್ರತಿ ವರ್ಷವೂ ಸಹ ವಿಶೇಷ , ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಜನರಲ್ಲಿರುವ ಮೂಢನಂಬಿಕೆ ಹೊಗಲಾಡಿಸಲು ಸಮಾರಂಭ ಏರ್ಪಡಿಸಲಾಗಿತ್ತು. …

Read More »

3 ವರ್ಷದ ಬಾಲಕಿ ಮೇಲೆ ಅತ್ಯಾಚಾರ- ಇಬ್ಬರಿಗೆ 20 ವರ್ಷ ಜೈಲು ಶಿಕ್ಷೆ

ಮುಂಬೈ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಕ್ಕಾಗಿ ಇಬ್ಬರು ನೆರೆಹೊರೆಯವರಿಗೆ 20 ವರ್ಷ ಜೈಲು ಶಿಕ್ಷೆಯಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ.ಲೈಂಗಿಕ ಅಪರಾಧಗಳಿಗೆ ಮಕ್ಕಳ ವಿಶೇಷ ಸಂರಕ್ಷಣಾ ಕಾಯ್ದೆ (ಪೋಸ್ಕೊ) ಅಡಿಯಲ್ಲಿ ನ್ಯಾಯಾಲಯವು 19 ವರ್ಷದ ಇಬ್ಬರು ಆರೋಪಿಗಳಿಗೆ 20 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿದೆ. 2018 ರಲ್ಲಿ ನೆರೆ ಮನೆಯ 3 ವರ್ಷದ ಬಾಲಕಿಯ ಮೇಲೆ ಈ ಇಬ್ಬರು ಅತ್ಯಾಚಾರ ನಡೆಸಿದ್ದರು. ಈ ಕುರಿತಾಗಿ ತನಿಖೆ ನಡೆಯುತ್ತಿತ್ತು. ಇದೀಗ ಈ …

Read More »