ನವದೆಹಲಿ : ಗುರುವಾರ ಬೆಳಿಗ್ಗೆ ದಕ್ಷಿಣ ದೆಹಲಿಯ ಪೊಲೀಸ್ ಠಾಣೆಗೆ ಅನಾಮಧೇಯ ಕರೆಯೊಂದು ಬಂದಿದ್ದು ಅದರಲ್ಲಿ ಮಾತನಾಡಿದ ವ್ಯಕ್ತಿ ದೇಶದ ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಕರೆ ಮಾಡಿದ್ದಾನೆ. ಬೆದರಿಕೆ ಕರೆ ಬಂದ ಕೂಡಲೇ ಎಚ್ಚೆತ್ತ ಪೆÇಲೀಸ್ ಇಲಾಖೆ ಕರೆ ಬಂದ ಮೂಲಗಳನ್ನು ಪತ್ತೆ ಹಚ್ಚಲು ಶುರುಮಾಡಿದ್ದಾರೆ ಅಷ್ಟೂತ್ತಿಗೆ ಬೆದರಿಕೆ ಕರೆ ಬಂದಿದ್ದು ದೆಹಲಿಯ ದಕ್ಷಿಣಪುರಿ ಪ್ರದೇಶದಿಂದ ಎಂಬುದು ತಿಳಿದುಬಂದಿದೆ ಕೂಡಲೇ ಅಲ್ಲಿಗೆ ಹೋರಾಟ ಪೊಲೀಸರ ತಂಡ …
Read More »ಸಂವಿಧಾನ ದಿನಾಚರಣೆ ಹಿನ್ನೆಲೆಯಲ್ಲಿ ನಾಡಿನ ಜನತೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಟ್ವೀಟ್ ಮೂಲಕ ಶುಭಾಶಯ
ಬೆಂಗಳೂರು : ಸಂವಿಧಾನ ದಿನಾಚರಣೆ ಹಿನ್ನೆಲೆಯಲ್ಲಿ ನಾಡಿನ ಜನತೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಟ್ವೀಟ್ ಮೂಲಕ ಶುಭಾಶಯಗಳನ್ನು ಕೋರಿದ್ದಾರೆ. ಪ್ರತಿಯೊಬ್ಬ ಭಾರತೀಯನ ಹಕ್ಕು, ಘನತೆಯನ್ನು ನಮ್ಮ ಸಂವಿಧಾನ ರಕ್ಷಿಸುತ್ತಿದೆ. ನಮ್ಮ ಶ್ರೇಷ್ಠ ಸಂವಿಧಾನದ ಸದಾಶಯಗಳನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ. ಸಂವಿಧಾನ ಕರಡು ಸಮಿತಿ ಅಧ್ಯಕ್ಷ ಡಾ ಬಿ.ಆರ್.ಅಂಬೇಡ್ಕರ್ ಸೇರಿದಂತೆ ಸಂವಿಧಾನ ರಚನೆಗೆ ಕೊಡುಗೆ ನೀಡಿದ ಎಲ್ಲ ಮಹನೀಯರಿಗೆ ವಂದಿಸುತ್ತಾ, ಎಲ್ಲರಿಗೂ ಸಂವಿಧಾನ ದಿನದ ಹಾರ್ದಿಕ ಶುಭಾಶಯಗಳು ಎಂದು …
Read More »ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ 62 ವರ್ಷದ ವೃದ್ಧ
ಬೆಂಗಳೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ 62 ವರ್ಷದ ವೃದ್ಧನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ನವೆಂಬರ್ 24ರಂದು ಬೆಂಗಳೂರಿನ ದೇವನಹಳ್ಳಿ ಪ್ರದೇಶದಲ್ಲಿ ನಡೆದಿದೆ. ವ್ಯಕ್ತಿ ತನ್ನ ಮಗಳ ಮನೆಯಲ್ಲಿ ಬಾಲಕಿಯ ಮೇಲೆ ಈ ಕೃತ್ಯ ಎಸಗಿದ್ದಾನೆ. ಆರೋಪಿಯನ್ನು ವೆಂಕಟರಮಣಪ್ಪ ಎಂದು ಗುರುತಿಸಲಾಗಿದೆ. ದೇವಾಲಯವೊಂದರ ಅರ್ಚಕನಾಗಿರುವ ಈತ ದೇವನಹಳ್ಳಿಯ ಚೌಡೇಶ್ವರಿ ದೇವಸ್ಥಾನದ ಪಕ್ಕ ಗಂಡನ ಜೊತೆ ವಾಸವಾಗಿರುವ ತನ್ನ ಮಗಳ ಮನೆಗೆ ತೆರಳಿದ್ದನು. ಮಗಳ ಪತಿಯೂ ಚೌಡೇಶ್ವರಿ ದೇಗುಲದ ಅರ್ಚಕನಾಗಿದ್ದಾನೆ. ಹೀಗಾಗಿ …
Read More »ಸಾಲ ತೀರಿಸಲು ಹಣವಿಲ್ಲದೆ 6 ತಿಂಗಳ ಮಗುವನ್ನು ತಂದೆ 1 ಲಕ್ಷ ರೂಪಾಯಿಗೆ ಮಾರಾಟ
ಚೆನ್ನೈ: ಸಾಲ ತೀರಿಸಲು ಹಣವಿಲ್ಲದೆ 6 ತಿಂಗಳ ಮಗುವನ್ನು ತಂದೆ 1 ಲಕ್ಷ ರೂಪಾಯಿಗೆ ಮಾರಾಟ ಮಾಡಿರುವ ಘಟನೆ ಸೇಲಂನ ಲಿನೆಮೇಡನಲ್ಲಿ ನಡೆದಿದೆ. ಸಾಲ ತೀರಿಸಲು ಹಣವಿಲ್ಲದೆ ಇರುವಾಗ ತಂದೆಯೇ ತನ್ನ 6 ತಿಂಗಳ ಮಗುವನ್ನು ಒಂದು ಲಕ್ಷರೂಪಾಯಿಗೆ ಮಾರಿದ್ದಾನೆ. ಆರೋಪಿ ತಂದೆಯನ್ನು ಸೌಕತ್ ಆಲಿ ಎಂದು ಗುರುತಿಸಲಾಗಿದೆ. ಈತನನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಸೌಕತ್ನ ಗೆಳೆಯ ಸೆಡ್ಡು ಹಾಗೂ ಮಗುವನ್ನು ಖರೀದಿಸಿದ ಸುಂದರಮ್ ಮಗು ಮಾರಾಟದಲ್ಲಿ ಶಾಮಿಲಾಗಿದ್ದಾರೆ. ಮಗುವನ್ನು …
Read More »ಐಸಿಸಿಆರ್ ಅಧ್ಯಕ್ಷರನ್ನು ಭೇಟಿಯಾದ ಡಾ. ಸೋನಾಲಿ ಸರನೋಬಾತ್
ಐಸಿಸಿಆರ್ ಅಧ್ಯಕ್ಷರನ್ನು ಭೇಟಿಯಾದ ಡಾ. ಸೋನಾಲಿ ಸರನೋಬಾತ್ ದೆಹಲಿ: ಭಾರತೀಯ ಸಂಸ್ಕೃತಿಕ ಸಂಬಂಧಗಳ ಮಂಡಳಿಯ ಅಧ್ಯಕ್ಷ (ಐಸಿಎಂಆರ್) ಡಾ. ವಿನಯ ಸಹಸ್ತ್ರಬುದ್ಧೆ ಅವರು ನವದೆಹಲಿಯಲ್ಲಿ ಲಲಿತಕಲಾ ಅಕಾಡೆಮಿ ಸದಸ್ಯೆ ಡಾ. ಸೋನಾಲಿ ಸರನೋಬಾತ್ ಅವರು ಭೇಟಿ ಮಾಡಿ ಕೆಲಹೊತ್ತು ಚರ್ಚೆ ನಡೆಸಿದರು. ಡಾ. ಸೋನಾಲಿಗೆ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಉತ್ತಮ ಪರ್ಚಾನೆ ಸಾಥ್ ನೀಡಿದ್ದಾರೆ. ಲಲಿತಕಲಾ ಅಕಾಡೆಮಿಯ ಯೋಜನೆಗಳ ಅನುಷ್ಠಾನ ಹಾಗೂ ಅದಕ್ಕೆ ಎದುರಾಗುವ ಸವಾಲುಗಳು, ಅಕಾಡೆಮಿ ಕಾರ್ಯವ್ಯಾಪ್ತಿ ವಿಸ್ತರಣೆ …
Read More »ಅಹ್ಮದ್ ಪಟೇಲ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಸತೀಶ್ ಜಾರಕಿಹೊಳಿ ಅವರು
ಬೆಳಗಾವಿ : ಕೋವಿಡ್ ಸೋಂಕಿನಿಂದ ಇತ್ತಿಚೇಗೆ ನಿಧನರಾದ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಗುರುವಾರ ಶ್ರದ್ಧಾಂಜಲಿ ಸಲ್ಲಿಸಿದರು. ಅಹ್ಮದ್ ಪಟೇಲ್ ಅವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸುವ ಮೂಲಕ ಮೌನಾಚರಣೆ ಮಾಡಿದರು. ಇದೇ ವೇಳೆ ಕಾಂಗ್ರೆಸ್ ಪಕ್ಷದಲ್ಲಿ ಮಾಡಿದ ಕಾರ್ಯಗಳನ್ನು ಸ್ಮರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ನಗರಾಧ್ಯಕ್ಷ ರಾಜು ಸೇಠ್, ಮುಂಚೂಣಿ ಘಟಕ ಅಧ್ಯಕ್ಷರು, ಕಾಂಗ್ರೆಸ್ …
Read More »ಬಂಗಾಳಕೊಲ್ಲಿಯಲ್ಲಿ ನಿವಾರ್ ಸೈಕ್ಲೋನ್ ಆರ್ಭಟ ಬೆಂಗಳೂರಿನಲ್ಲಿಯೂ ಗಾಳಿ ಸಹಿತ ತುಂತುರು ಮಳೆ
ಚೆನ್ನೈ/ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ನಿವಾರ್ ಸೈಕ್ಲೋನ್ ಆರ್ಭಟ ಆರಂಭವಾಗಿದ್ದು, ತಮಿಳುನಾಡಿಗೆ ತಡರಾತ್ರಿ ಎಂಟ್ರಿ ಕೊಟ್ಟಿದೆ. ಇದೀಗ ಬೆಂಗಳೂರಿನಲ್ಲಿಯೂ ಗಾಳಿ ಸಹಿತ ತುಂತುರು ಮಳೆ #WATCH Tamil Nadu: Mahabalipuram braves strong winds, landfall process of #CycloneNivar continues. Centre of Nivar moved NW with a speed of 16 kmph during past 6 hrs, lying 45 km E-NE of Cuddalore & …
Read More »ಕೊರೊನಾ ಎರಡನೇ ಅಲೆ ಭೀತಿ ಡಿಸೆಂಬರ್ 31ರವರೆಗೆ ಅಂತಾರಾಷ್ಟ್ರೀಯ ವಿಮಾನ ಸಂಚಾರವನ್ನು ನಿಷೇಧ
ನವದೆಹಲಿ: ಕೊರೊನಾ ಎರಡನೇ ಅಲೆ ಭೀತಿ ಹಿನ್ನೆಲೆಯಲ್ಲಿ ಕೇಂದ್ರ ವಿಮಾನಯಾನ ನಿರ್ದೇಶನಾಲಯ ಡಿಸೆಂಬರ್ 31ರವರೆಗೆ ಅಂತಾರಾಷ್ಟ್ರೀಯ ವಿಮಾನ ಸಂಚಾರವನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಜಾಗತಿಕ ಮಟ್ಟದಲ್ಲಿ ಕೊರೊನಾ ವೈರಸ್ ಅಬ್ಬರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ವಿದೇಶ ಸಂಚಾರವನ್ನು ನಿರ್ಬಂಧಿಸಲು ವಿಮಾನಯಾನ ನಿರ್ದೇಶನಾಲಯ ಗುರುವಾರ ಈ ಆದೇಶ ಹೊರಡಿಸಿದೆ. ಪ್ರಯಾಣಿಕರ ವಿಮಾನ ಸಂಚಾರವನ್ನು ನಿಬರ್ಂಧಿಸಲಾಗಿದ್ದರೂ ಸರಕು ಸಾಗಾಣೆ ವಿಮಾನಗಳ ಹಾರಾಟದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Read More »ಲೋಕಸಭಾ ಉಪಚುನಾವಣೆಗೆ ಸ್ಪರ್ಧಿಸಲು ನನಗೆ ಆಸಕ್ತಿ ಇಲ್ಲ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಸ್ಪರ್ಧಿಸಲು ನನಗೆ ಆಸಕ್ತಿ ಇಲ್ಲ ಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು , ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕುರಿತು ಮುಂದಿನ ತಿಂಗಳಿನ ಮೊದಲ ವಾರದಲ್ಲಿ ಎರಡನೇ ಸುತ್ತಿನ ಸಭೆ ನಡೆಸಲಾಗುತ್ತದೆ. ಈ ವೇಳೆ ಅಭ್ಯರ್ಥಿ ಆಯ್ಕೆ ಮಾಡಲಾಗುವುದು ಎಂದರು. ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಗಳ ಕೊರತೆ ಇಲ್ಲ. ಮುಂದಿನ …
Read More »ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅಭಿಮತ… ಬೆಳಗಾವಿ ಜಿಲ್ಲೆ ವಿಭಜನೆಯಾಗಿ ಚಿಕ್ಕೋಡಿ, ಗೋಕಾಕ ಹೊಸ ಜಿಲ್ಲೆ ಅಸ್ತಿತ್ವಕ್ಕೆ ಬರಲಿ…
ಚಿಕ್ಕೋಡಿ ಹಾಗೂ ಗೋಕಾಕ ಹೊಸ ಜಿಲ್ಲೆ ರಚನೆಯಾಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಕಾಂಗ್ರೆಸ್ ಶಾಸಕ ಸತೀಶ ಜಾರಕಿಹೊಳಿ ಅಭಿಮತ ವ್ಯಕ್ತಪಡಿಸಿದ್ದಾರೆ. ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಭಿವೃದ್ದಿ ನಿಟ್ಟಿನಲ್ಲಿ 18 ಶಾಸಕರನ್ನು ಹೊಂದಿರುವ ದೊಡ್ಡ ಜಿಲ್ಲೆ ಬೆಳಗಾವಿ ವಿಭಜನೆಯಾಗುವುದು ಅನಿವಾರ್ಯ. ಜಿಲ್ಲೆ ವಿಭಜನೆ ಬಗ್ಗೆ ಮೊದಲಿನಿಂದಲೂ ನಾವು ಆ ಕುರಿತು ಪ್ರತಿಪಾದಿಸುತ್ತ ಬಂದಿರುವುದಾಗಿ ಹೇಳಿದರು. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಕುರಿತು ತಮ್ಮ ಹೆಸರು ಕೇಳಿ …
Read More »