ಬೆಂಗಳೂರು: ರಾಜ್ಯದಲ್ಲಿ ಎಲ್ಲಿಯೂ ಬಲವಂತದ ಬಂದ್ ಗೆ ಸರ್ಕಾರ ಅವಕಾಶ ಕೊಡಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಕನ್ನಡ ಪರ ಸಂಘಟನೆಗಳಿಗೆ ಎಚ್ಚರಿಕೆ ನೀಡಿದ್ದಾರೆ. ಮರಾಠ ಪ್ರಾಧಿಕಾರ ರಚನೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಡಿಸೆಂಬರ್ 5ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ.ವಿಶ್ವ ಮೀನುಗಾರಿಕಾ ದಿನಾಚರಣೆಗೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ, ನಾನು ಕನ್ನಡದ ಪರವಾಗಿ, ಕನ್ನಡಿಗರ ಪರವಾಗಿ ಇರುವಂಥವನು. ಕನ್ನಡಿಗರಿಗೆ ಬೇಕಾದ ಹೆಚ್ಚಿನ ಸೌಲಭ್ಯ …
Read More »ಸಮಾಜ ಕಲ್ಯಾಣಇಲಾಖೆ ವತಿಯಿಂದತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಕ್ಷೌರಿಕ ಅಂಗಡಿಗಳನ್ನು ತೆರೆಯಲು ಮುಂದಾಗಿದೆ.ಸರ್ಕಾರ
ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಜಾತಿ ತಾರತಮ್ಯ ಹೊಗಲಾಡಿಸಲು ಸರ್ಕಾರ ಹೊಸ ಹೆಜ್ಜೆ ಇಡುತ್ತಿದೆ. ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಕ್ಷೌರಿಕ ಅಂಗಡಿಗಳನ್ನು ತೆರೆಯಲು ಮುಂದಾಗಿದೆ. ಇತ್ತೀಚೆಗೆ ದಲಿತರು ಹಾಗೂ ಕೆಲವು ನಿರ್ದಿಷ್ಟ ಸಮುದಾಯಕ್ಕೆ ಗ್ರಾಮೀಣ ಭಾಗಗಳಲ್ಲಿ ಕ್ಷೌರ ಮಾಡಲು ಹಿಂದೇಟು ಹಾಕಿರುವ ಘಟನೆಗಳು ಮರುಕಳಿಸುತ್ತಿವೆ. ಈ ತಾರತಮ್ಯ ಹೋಗಲಾಡಿಸಲು ಸರ್ಕಾರ ಈ ನಿರ್ಣಯ ತೆಗೆದುಕೊಂಡಿದೆ. ಸಮಾಜ ಕಲ್ಯಾಣ ಇಲಾಖೆ ಹಿರಿಯ ಅಕಾರಿಗಳ ಜತೆ ಈಚಗೆ ಸಭೆ ನಡೆಸಿದ ಮುಖ್ಯಮಂತ್ರಿ …
Read More »ಬೆಳಗಾವಿಯಲ್ಲಿ ಅಧಿವೇಶನ ನಡೆಸಬೇಕು ಇಲ್ಲದಿದ್ದಲ್ಲಿ ಉಗ್ರ ಹೋರಾಟ:ಕ. ರ, ವೇ.ದೂಪದಾಳ
ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಸಬೇಕು ಎಂದು ಆಗ್ರಹಿಸಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ದೂಪದಾಳ ಕಾರ್ಯಕರ್ತರು ಘಟಪ್ರಭಾ ಮೃತ್ಯುಂಜಯ ವೃತ್ತದಲ್ಲಿ ರಾಜ್ಯ ಹೆದ್ದಾರಿ ತಡೆಯುವ ಮೂಲಕ ಪ್ರತಿಭಟನೆ ನಡೆಸಿದರು ಘಟಪ್ರಭಾ ವೃತ್ತದಲ್ಲಿ ಸೇರಿದ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಹಾಗೂ ಮುಖ್ಯಮಂತ್ರಿಗಳ ವಿರುದ್ಧ ಘೋಷಣೆ ಕೂಗಿ ಸುಮಾರು ಹತ್ತು ನಿಮಿಷಗಳ ಕಾಲ ರಾಜ್ಯ ಹೆದ್ದಾರಿ ತಡೆದರು ಹಾಗೂ ಘಟಪ್ರಭಾ ಪಿಎಸ್ಆಯ್ ,ಗ್ರಾಮ ಲೆಕ್ಕಾಧಿಕಾರಿ ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ದೂಪದಾಳ …
Read More »ಶಶಿಕಲಾ ಜೊಲ್ಲೆ51ನೇ ಹುಟ್ಟು ಹಬ್ಬನೇಸರಗಿ ಶ್ರೀ ಜ್ಯೋತಿ ವಿವಿಧ ಉದ್ದೇಶಗಳ ಸೌಹಾರ್ದ ಸಹಕಾರಿ 53ನೇ ನೂತನ ಶಾಖೆಯ ಉದ್ಘಾಟನೆ
ನೇಸರಗಿ :ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ನೇಸರಗಿ ಗ್ರಾಮದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಅವರ 51ನೇ ಹುಟ್ಟು ಹಬ್ಬದ ಪ್ರಯುಕ್ತ ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆಯ ಅಂಗಸಂಸ್ಥೆಯಾದ ಶ್ರೀ ಜ್ಯೋತಿ ವಿವಿಧ ಉದ್ದೇಶಗಳ ಸೌಹಾರ್ದ ಸಹಕಾರಿ ನಿ.,ಯಕ್ಸಂಬಾ. ಶಾಖೆ ನೇಸರಗಿ 53ನೇ ನೂತನ ಶಾಖೆಯ ಉದ್ಘಾಟನೆ ಹಾಗೂ ಪೂಜಾ ಸಮಾರಂಭವನ್ನು ಜಡಿಸಿದ್ದೇಶ್ವರ …
Read More »ಯತ್ನಾಳ್ಗೆ ನಾರಾಯಣಗೌಡರ 2 ಸಾವಲು
ಬೆಂಗಳೂರು: ಮರಾಠ ಪ್ರಾಧಿಕಾರ ರಚನೆ ವಿರೋಧಿಸಿ ಡಿ.5ಕ್ಕೆ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ಸಂಬಂಧಿಸಿದಂತೆ ‘ರೋಲ್ಕಾಲ್ ಹೋರಾಟಗಾರರು ಕರೆ ನೀಡಿರುವ ಕರ್ನಾಟಕ ಬಂದ್ಗೆ ಮುಖ್ಯಮಂತ್ರಿಗಳು ಹೆದರಬೇಕಿಲ್ಲ. ವಿಜಯಪುರವನ್ನು ಯಾರು ಬಂದ್ ಮಾಡುತ್ತಾರೋ ನೋಡೋಣ’ ಎಂಬ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆಗೆ ಆಕ್ರೋಶಗೊಂಡಿರುವ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ ನಾರಾಯಣಗೌಡ, ಯತ್ನಾಳಗೆ ಎರಡು ಸವಾಲುಗಳನ್ನು ಹಾಕಿದ್ದಾರೆ. ಈ ಕುರಿತು ಫೇಸ್ಬುಕ್ನಲ್ಲಿ ಬರೆದುಕೊಂಡಿರುವ ಅವರು, ‘ಶಾಸಕ ಬಸವನಗೌಡ …
Read More »ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಅಂತಾ, ಸಚಿವ ಶ್ರೀರಾಮಲು, ಮತ್ತೊಂದು ಕಡೆ ರಮೇಶ್ ಜಾರಕಿಹೊಳಿ ಇಬ್ಬರು ನಾಯಕರಲ್ಲಿ ತೀವ್ರ ಪೈಪೋಟಿ
ಬೆಂಗಳೂರು : ಸಚಿವ ರಮೇಶ ಜಾರಕಿಹೊಳಿ ಈಗಿರುವ ಜಲಸಂಪನ್ಮೂಲ ಖಾತೆಯ ಜೊತೆಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಅಂತಾ, ದೆಹಲಿ ಭೇಟಿ ವೇಳೆ ಹೈಕಮಾಂಡ್ ಬಳಿ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗುತ್ತಿದೆ. ಆಪರೇಷನ್ ಕಮಲ ವೇಳೆಯಲ್ಲಿ ಬಿಜೆಪಿ ನಾಯಕರು ಡಿಸಿಎಂ ಮಾಡುವ ಭರವಸೆ ನೀಡಿದ್ದರು ಎನ್ನಲಾಗಿದೆ. ವಾಲ್ಮೀಕಿ ಕೋಟಾದಲ್ಲಾದ್ರೂ ಸರಿ, ಈ ಹಿಂದೆ ಮಾತು ಕೊಟ್ಟ ಮಾತಿನಂತೆ ಡಿಸಿಎಂ ಸ್ಥಾನ ಕೋಡಬೇಕು ಎಂದು ಮನವಿ ಮಾಡಿದ್ದಾರಂತೆ. ಎರಡ್ಮೂರು ದಿನಗಳಲ್ಲಿ ಸಚಿವ ಸಂಪುಟ ಪುನಾರಚನೆಗೊಳ್ಳಲಿದ್ದು, …
Read More »ಕೋವಿಡ್ಗೆ ಲಸಿಕೆ ಸಿಕ್ಕರೆ ಜನರ ಗಮನವನ್ನು ಬೇರೆಡೆ ಸೆಳೆದು ಅದೇ ವೇಳೆ ಯಡಿಯೂರಪ್ಪ ನಾಯಕತ್ವ ಬದಲಾವಣೆಗೆ ವರಿಷ್ಠರು ವೇದಿಕೆಯನ್ನು ಸಿದ್ದಪಡಿಸುತ್ತಿದ್ದಾರೆ………..?
ಬೆಂಗಳೂರು : ಆಡಳಿತಾರೂಢ ಬಿಜೆಪಿಯಲ್ಲಿ ನಾಯಕತ್ವ ಗೊಂದಲ ಇತ್ಯರ್ಥವಾಗುವವರೆಗೂ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಗಗನಕುಸುಮವಾಗೇ ಉಳಿಯಲಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಯಕತ್ವವನ್ನು ಬದಲಾವಣೆ ಮಾಡಬೇಕೆ ಇಲ್ಲವೇ 2023ರ ವಿಧಾನಸಭೆ ಚುನಾವಣೆವರೆಗೂ ಅವರನ್ನೇ ಮುಂದುವರೆಸಬೇಕೆ ಎಂಬುದರ ಕುರಿತು ಈ ಬಾರಿ ವರಿಷ್ಠರು ಸ್ಪಷ್ಟ ನಿರ್ಧಾರ ಕೈಗೊಳ್ಳುವುದು ಖಚಿತವಾಗಿದೆ. ಹೆಚ್ಚೆಂದರೆ ಈ ಬಾರಿ ಪುನರಚನೆಗೆ ಅವಕಾಶ ಕೊಡದೆ ಕೇವಲ ವಿಸ್ತರಣೆಗೆ ಮಾತ್ರ ಅವಕಾಶ ನೀಡಲಿದ್ದು, ಆಪರೇಷನ್ ಕಮಲಕ್ಕೆ ಒಳಗಾಗಿದ್ದ ವಿಧಾನಪರಿಷತ್ ಸದಸ್ಯರಾಗಿರುವ …
Read More »ಡ್ರಗ್ಸ್ ಪ್ರಕರಣದಲ್ಲಿ ಹೆಡ್ಕಾನ್ಸ್ಟೆಬಲ್ ಬಂಧನ..!
ಬೆಂಗಳೂರು,ನ.- ಕೆಂಪೇಗೌಡನಗರ ಪೊಲೀಸ್ ಠಾಣೆಯ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಸಹಾಯ ಮಾಡಿದ ಆರೋಪದಡಿ ಸದಾಶಿವನಗರ ಠಾಣೆಯ ಹೆಡ್ಕಾನ್ಸ್ಟೆಬಲ್ ಪ್ರಭಾಕರ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಸುನೀಶ್ ಮತ್ತು ಹೇಮಂತ್ ಸೇರಿದಂತೆ 8 ಮಂದಿಯನ್ನು ಬಂಧಿಸಲಾಗಿದೆ. ತನಿಖೆ ಸಂದರ್ಭದಲ್ಲಿ ಆರೋಪಿಗಳಿಗೆ ಮೊಬೈಲ್ ನಂಬರ್ಗಳ ಲೊಕೇಶನ್ ಮತ್ತು ಸಿಮ್ ವಿಳಾಸಗಳನ್ನು ವಾಟ್ಸಪ್ ಮೂಲಕ ಹಣಕ್ಕಾಗಿ ವಿನಿಮಯ ಮಾಡಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಹೆಡ್ಕಾನ್ಸ್ಟೆಬಲ್ ಪ್ರಭಾಕರ್ ಅವರನ್ನು ಅಮಾನತು …
Read More »ಸ್ಮಾರ್ಟ್ ಸಿಟಿ ಕಾಮಗಾರಿ ಶೀಘ್ರ ಪೂರ್ಣಗೊಳಿಸದಿದ್ದರೆ ಗುತ್ತಿಗೆದಾರರ ವಿರುದ್ದ ಕ್ರಿಮಿನಲ್ ಕೇಸ್..!
ಬೆಂಗಳೂರು,ನ.- ಸ್ಮಾರ್ಟ್ ಯೋಜನೆಯಡಿ ಬೆಂಗಳೂರಿನಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸದಿದ್ದರೆ ಅಂತಹ ಗುತ್ತಿಗೆದಾರರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ನಗರಾಭಿವೃದ್ದಿ ಸಚಿವ ಭೈರತಿ ಬಸವರಾಜ್ ಎಚ್ಚರಿಕೆ ನೀಡಿದ್ದಾರೆ. ನಗರದ ಬೇರೆ ಬೇರೆ ಇಂದು ಕಾಮಗಾರಿ ನಡೆಯುತ್ತಿರುವ ಪ್ರದೇಶಗಳಲ್ಲಿ ಭೇಟಿ ಕೊಟ್ಟು ನಂತರ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಡಿಫೆನ್ಸ್ರಸ್ತೆಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಹಲವು ಬಾರಿ ಎಚ್ಚರಿಕೆ ನೀಡಲಾಗಿತ್ತು. ಆದರೆ ಅವರು ಈವರೆಗೂ ಕಾಮಗಾರಿಯನ್ನು ಪೂರ್ಣಗೊಳಿಸಿಲ್ಲ.ಹೀಗಾಗಿ ಅವರ ವಿರುದ್ಧ ಕ್ರಿಮಿನಲ್ …
Read More »ಸಚಿವ ಸ್ಥಾನಕ್ಕೆ ಫುಲ್ ಫೈಟಿಂಗ್.ಯಾರು ಇನ್ ಯಾರು ಔಟ್….?
ಬೆಂಗಳೂರು :-ಸಚಿವ ಸಂಪುಟ ವಿಸ್ತರಣೆಯಾಗುವುದು ಖಚಿತವಾಗುತ್ತಿದ್ದಂತೆ ಆಕಾಂಕ್ಷಿಗಳು ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿಯಾಗಿ ತಮ್ಮನ್ನು ಪರಿಗಣಿಸಬೇಕೆಂದು ಮನವಿ ಮಾಡಿದ್ದಾರೆ. ನಿನ್ನೆಯಷ್ಟೇ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿದ್ದ ಶಾಸಕರ ನಿಯೋಗ ಇಂದು ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸಂಪುಟಕ್ಕೆ ನಮ್ಮನ್ನು ಪರಿಗಣಿಸಬೇಕೆಂದು ಪ್ರಸ್ತಾವನೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ಶಾಸಕರಾದ ಶಂಕರ್ ಪಟೇಲ್ ಮುನೇನಕೊಪ್ಪ, ಲಿಂಗಣ್ಣ ಸೇರಿದಂತೆ ಮತ್ತಿತರರ ನಿಯೋಗ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿಎಂ ಅವರನ್ನು …
Read More »