Breaking News

ಕುಮಾರಸ್ವಾಮಿ ಬೆನ್ನಲ್ಲೇ ಇನ್ನಿಬ್ಬರು ನಾಯಕರ ಭೇಟಿಗೆ ಮುಂದಾದ ಸತೀಶ್‌ ಜಾರಕಿಹೊಳಿ

ನವದೆಹಲಿ, ಮಾರ್ಚ್ 27: ಶತ್ರುವಿನ ಶತ್ರು ಮಿತ್ರ ಎಂಬುದು ಎದುರಾಳಿಗಳನ್ನು ಹಣಿಯಲು ಬಳಸುವ ರಾಜಕೀಯ ರಣತಂತ್ರ. ಈಗ ಸಚಿವ ಸತೀಶ್‌ ಜಾರಕಿಹೊಳಿ (Satish Jarkiholi) ಅದೇ ತಂತ್ರ ಹೆಣೆದಿದ್ದಾರಾ ಎಂಬ ಅನುಮಾನ ಸೃಷ್ಟಿಯಾಗಿದೆ. ಯಾಕೆಂದರೆ, ಹನಿಟ್ರ್ಯಾಪ್‌ (Honeytrap) ಪ್ರಕರಣ ಸದ್ದು ಮಾಡುತ್ತಿರುವ ಹೊತ್ತಿನಲ್ಲೇ, ಹೈಕಮಾಂಡ್​ಗೆ ದೂರು ನೀಡುತ್ತೇನೆ ಎಂದು ದೆಹಲಿಗೆ ತೆರಳಿದ್ದ ಸತೀಶ್‌ ಜಾರಕಿಹೊಳಿ, ಎದುರಾಳಿ ಪಕ್ಷದ ನಾಯಕನ ಭೇಟಿ ಮಾಡಿದ್ದಾರೆ. ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ (HD Kumaraswamy), ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡರನ್ನು ಭೇಟಿ ಮಾಡಿ ಮಾತುಕತೆ …

Read More »

ಮೈಸೂರು ಕುಶಾಲನಗರ ಹೆದ್ದಾರಿ ನಿರ್ಮಾಣ: ಕೇಂದ್ರದಿಂದ ಗುಡ್ ನ್ಯೂಸ್

ಬೆಂಗಳೂರು, ಮಾರ್ಚ್ 27: ಮೈಸೂರು ಕುಶಾಲನಗರ ಹೆದ್ದಾರಿ ಯೋಜನೆ  (Mysuru-Kushalnagar highway) ಸಂಬಂಧ ದೀರ್ಘ ಕಾಲದಿಂದ ಬಾಕಿ ಉಳಿದಿದ್ದ ಪ್ಯಾಕೇಜ್ 3 ರ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ಅಂತಿಮವಾಗಿ ಅನುಮೋದನೆ ದೊರೆತಿದೆ. ಮೈಸೂರು ಕುಶಾಲನಗರ ಹೈವೇಗೆ 2023ರ ಮಾರ್ಚ್​​ನಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಶಂಕುಸ್ಥಾಪನೆ ನೆರವೇರಿಸಿದ್ದರು. ಇದೀಗ ಮೂರನೇ ಹಂತದ ಪ್ಯಾಕೇಜ್​​ಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿ ಮಾಹಿತಿ ಹಂಚಿಕೊಂಡಿರುವ ಸಂಸದ ಯದುವೀರ್ …

Read More »

ಸತ್ಯವಂತರಿಗಿದು ಕಾಲವಲ್ಲ: ಯತ್ನಾಳ್​

ಬೆಂಗಳೂರು: ಬಿಜೆಪಿಯಿಂದ ತಮ್ಮನ್ನು ಉಚ್ಚಾಟನೆ ಮಾಡಿರುವ ಬಗ್ಗೆ ವಿಜಯಪುರದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. “ಇದು ಸತ್ಯವಂತರಿಗೆ ಕಾಲವಲ್ಲ” ಎಂದು ಹೇಳುವ ಮೂಲಕ ಪುರಂದರದಾಸರ ಕೀರ್ತನೆ ಬರೆದು ಎಕ್ಸ್​ ಖಾತೆಯಲ್ಲಿ ಯತ್ನಾಳ್​ ಪೋಸ್ಟ್​ ಮಾಡಿಕೊಂಡಿದ್ದಾರೆ. “ಸತ್ಯವಂತರಿಗಿದು ಕಾಲವಲ್ಲ, ದುಷ್ಟಜನರಿಗೆ ಸುಭಿಕ್ಷಕಾಲ || ಉಪಕಾರ ಮಾಡಿದರೆ ಅಪಕರಿಸುವ ಕಾಲ. ಸಕಲವು ತಿಳಿದವಗೆ ದುರ್ಭಿಕ್ಷ ಕಾಲ. ಧರ್ಮ ಮಾಡುವಗೆ ನಿರ್ಮೂಲವಾಗುವ ಕಾಲ ಕರ್ಮಿ ಪಾತಕರಿಗೆ ಬಹು ಸೌಖ್ಯಕಾಲ ಸತ್ಯವಂತರಿಗಿದು ಕಾಲವಲ್ಲ” …

Read More »

ಎರಡನೇ ಬಾರಿ ಉಚ್ಚಾಟನೆಗೊಂಡ ಬಸನಗೌಡ ಪಾಟೀಲ್ ಯತ್ನಾಳ್

ಬೆಂಗಳೂರು : ಕೇಂದ್ರ ಸಚಿವರಾಗಿ, ಶಾಸಕರಾಗಿ ಹಾಗೂ ಪಕ್ಷದಲ್ಲಿ ಹಲವು ಹುದ್ದೆಗಳನ್ನು ಅಲಂಕರಿಸಿ ಮೂರು ದಶಕದ ಕರ್ನಾಟಕ ರಾಜಕಾರಣದಲ್ಲಿ ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೆಸರು ಜನಜನಿತವಾಗಿದೆ. ವಿಭಿನ್ನ ಮಾತು, ನೇರ ನಡೆ, ನುಡಿ, ಹಿಂದುತ್ವದ ಚಿಂತನೆಗಳಿಂದ ಫೈರ್ ಬ್ರಾಂಡ್ ರಾಜಕಾರಣಿ ಎಂದೇ ಗುರುತಿಸಿಕೊಂಡಿದ್ದಾರೆ. ಕರ್ನಾಟಕದ ರಾಜಕೀಯ ವಲಯದಲ್ಲಿ ನಿರೀಕ್ಷಿತ ಸ್ಥಾನಮಾನ ಸಿಕ್ಕಿಲ್ಲವೆಂಬ ಕೊರಗು ಅವರನ್ನು ಕಾಡುತ್ತಲೇ ಇತ್ತು. ಬಿಜೆಪಿಯಲ್ಲೇ ರಾಜಕೀಯ ವಿರೋಧಿಗಳನ್ನು ಮಾಡಿಕೊಂಡಿರುವುದು ತಿಳಿದ ವಿಚಾರವೇ. ರಾಜಕೀಯ …

Read More »

ಅಕ್ರಮ ಮರ ಕಡಿಯುವಿಕೆಗೆ ವಿಧಿಸುವ ದಂಡ ಮತ್ತು ಶಿಕ್ಷೆಯನ್ನು ಹತ್ತು ಪಟ್ಟು ಹೆಚ್ಚಿಸಲು ವೃಕ್ಷ ಸಂರಕ್ಷಣಾ ಕಾಯಿದೆ 1976ಕ್ಕೆ ತಿದ್ದುಪಡಿ ತರಲು ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಅಕ್ರಮ ಮರ ಕಡಿತಲೆಗೆ ಪ್ರಸಕ್ತ ವಿಧಿಸಲಾಗುತ್ತಿರುವ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು ಹತ್ತುಪಟ್ಟು ಹೆಚ್ಚಿಸಲು ಅನುವಾಗುವಂತೆ ವೃಕ್ಷ ಸಂರಕ್ಷಣಾ ಕಾಯಿದೆ 1976ಕ್ಕೆ ತಿದ್ದುಪಡಿ ತರಲು ಕ್ರಮ ವಹಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ತತ್ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಿಗೆ ಸೂಚನೆ ನೀಡಿರುವ ಸಚಿವರು, ದೊಡ್ಡ ಸಂಖ್ಯೆಯಲ್ಲಿ ಮರಗಳನ್ನು ಕಡಿಯುವುದು, ಮಾನವ ಹತ್ಯೆ ಮಾಡಿದಂತೆ ಅಥವಾ ಅದಕ್ಕಿಂತ ಘನ ಎಂದು ಸುಪ್ರೀಂಕೋರ್ಟ್ …

Read More »

ಯತ್ನಾಳ್​ ಉಚ್ಚಾಟನೆ ಹಿಂಪಡೆಯುವಂತೆ ಮೃತ್ಯುಂಜಯ ಸ್ವಾಮೀಜಿ ಒತ್ತಾಯ

ಧಾರವಾಡ: ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್​ ಉಚ್ಚಾಟನೆ ವಿಚಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರಿಗೆ ಗೊತ್ತಿಲ್ಲ ಎಂದು ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು. ಉಚ್ಚಾಟನೆ ಕುರಿತು ಧಾರವಾಡದಲ್ಲಿ ಮಾತನಾಡಿದ ಅವರು, ಯತ್ನಾಳ್​ ಎಂದಿಗೂ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ. ಕಾಣದ ಕೈಗಳು ಅವರನ್ನು ಉಚ್ಚಾಟನೆ ಮಾಡುವಂತೆ ಮಾಡಿವೆ. ಯತ್ನಾಳ್​ ಅವರೇ ಮುಂದೆ ರಾಜ್ಯದ ಚುಕ್ಕಾಣಿ ಹಿಡಿಯುತ್ತಾರೆ ಎಂಬ ಕಾರಣದಿಂದ ಹೀಗೆ …

Read More »

ಆಬಾ ಸ್ಫೋರ್ಟ್ಸ್ ಕ್ಲಬ್’ನ ವತಿಯಿಂದ ಆಯೋಜಿಸಿದ್ದ ದಿವ್ಯಾಂಗ ಈಜು ಸ್ಪರ್ಧೆಯ ಸಮಾರೋಪ

ಆಬಾ ಸ್ಫೋರ್ಟ್ಸ್ ಕ್ಲಬ್’ನ ವತಿಯಿಂದ ಆಯೋಜಿಸಿದ್ದ ದಿವ್ಯಾಂಗ ಈಜು ಸ್ಪರ್ಧೆಯ ಸಮಾರೋಪ ಮಾರ್ಚ್ 3 ರಿಂದ 18 ರ ವರೆಗೆ ಬೆಳಗಾವಿಯ ಆಬಾ ಸ್ಫೋರ್ಟ್ಸ್ ಕ್ಲಬ್’ನ ವತಿಯಿಂದ ಬೆಳಗಾವಿಯ ಮಹಾನಗರ ಪಾಲಿಕೆ ಈಜುಕೊಳದಲ್ಲಿ ದಿವ್ಯಾಂಗ ಈಜು ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ಸ್ಪರ್ಧೆಯಲ್ಲಿ ದಿವ್ಯಾಂಗ ಹಾಗೂ ಬಡ ಮಕ್ಕಳು ಹೀಗೆ 50 ಕ್ಕೂ ಹೆಚ್ಚೂ ಮಕ್ಕಳು ಭಾಗಿಯಾಗಿದ್ಧರು. ವಿಜೇತರಿಗೆ ಮಹಾಪೌರ ಮಂಗೇಶ ಪವಾರ್ ಮತ್ತು ನಗರಸೇವಕ ನಿತೀನ್ ಜಾಧವ್ ಅವರು ಪಾರಿತೋಷಕವನ್ನು ವಿತರಿಸಿದರು. …

Read More »

ಧಾರವಾಡ ತಾಲೂಕಿನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೊಸ ಸಕ್ಕರೆ ಕಾರ್ಖಾನೆಗೆ ವಿರೋಧ

ಧಾರವಾಡ ತಾಲೂಕಿನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೊಸ ಸಕ್ಕರೆ ಕಾರ್ಖಾನೆಗೆ ವಿರೋಧ.. ಸಕ್ಕರೆ ಕಾರ್ಖಾನೆ ಆರಂಭಿಸುತ್ತಿರುವುದಕ್ಕೆ ಯಾದವಾಡ ಗ್ರಾಮಸ್ಥರ ವಿರೋಧ ಧಾರವಾಡ ತಾಲೂಕಿನ ಕರಡಿಗುಡ್ಡ, ಯಾದವಾಡ ಹಾಗೂ ಪುಡಕಲಕಟ್ಟಿ ಗ್ರಾಮಗಳ ಮಧ್ಯೆದ ಜಮೀನಿನಲ್ಲಿ ಆರಂಭವಾಗುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಒಡೆತನದ ಮೃಣಾಲ್ ಸಕ್ಕರೆ ಕಾರ್ಖಾನೆಗೆ ಯಾದವಾಡ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ಯಾವುದೇ ಕಾರಣಕ್ಕೂ ಸಕ್ಕರೆ ಕಾರ್ಖಾನೆ ಆರಂಭಿಸಬಾರದು ಇದರಿಂದ ಮೂರೂ ಗ್ರಾಮಗಳ ರೈತರಿಗೆ ತೀವ್ರ ತೊಂದರೆಯಾಗುತ್ತದೆ ಎಂದು ಆರೋಪಿಸಿ ಪ್ರತಿಭಟನೆ …

Read More »

ಉಚಿತ ಬಸ್ ಟಿಕೆಟ್ ಕಳೆದುಕೊಂಡು ಪರದಾಡಿದ ಅಜ್ಜಿ

ವೃದ್ದೆಯೊಬ್ಬರು ಸಾರಿಗೆ ಬಸ್‌ನಲ್ಲಿ ಟಿಕೆಟ್ ಕಳೆದುಕೊಂಡು ಪರದಾಡಿದ ಘಟನೆ ನಡೆದಿದೆ. ಸಾರಿಗೆ ಬಸ್ ನಲ್ಲಿ ಕಂಡಕ್ಟರ್ ಕೊಟ್ಟ ಉಚಿತ ಪ್ರಯಾಣ ಟಿಕೆಟ್ ನ್ನು ವೃದ್ಧೆ ಕಳೆದುಕೊಂಡ ಘಟನೆ ವಿಜಯಪುರ ಜಿಲ್ಲೆಯ ಇಂಡಿ – ಚಡಚಣ ಮಾರ್ಗದ ಬಸ್ ನಲ್ಲಿ ನಡೆದಿದೆ‌. ಟಿಕೆಟ್ ಕಳೆದುಕೊಂಡ ಅಜ್ಜಿ ಮತ್ತೊಂದು ‌ಟಿಕೆಟ್ ನೀಡುವಂತೆ ಕಂಡಕ್ಟರ್ ಗೆ ಮನವಿ ಮಾಡಿಕೊಂಡರು. ಆಗ ಕಂಡಕ್ಟರ್ ಟಿಕೆಟ್ ನೀಡಲು ನಿರಾಕರಿಸಿದ್ದಾರೆ‌. ಅಜ್ಜಿ ಟಿಕೆಟ್ ಎಲ್ಲಿ ಹೋಯ್ತು ಅಂತ ಬಸ್ …

Read More »

ಬೋರವೆಲ್ ಗಳನ್ನು ರೀ ಚಾರ್ಜ ಮಾಡಿಸಲು ಕ್ರಮ ಕೈಗೊಳ್ಳಿ; ವಿನಾಯಕ ಪೂಜಾರ

ಹುಕ್ಕೇರಿ : ಹೋಸದಾಗಿ ಬೋರವೆಲ್ ಗಳನ್ನು ಹಾಕುವ ಬದಲು ಇದ್ದ ಕೋಳವೇ ಭಾವಿಗಳಿಗೆ ನೀರು ಸಂಗ್ರಹವಾಗುವಂತೆ ನೋಡಿಕೋಳ್ಳ ಬೇಕು ಎಂದು ಹುಕ್ಕೇರಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ವಿನಾಯಕ ಪೂಜಾರ ಹೇಳಿದರು. ವಿಶ್ವ ಜಲ ದಿನ ಅಂಗವಾಗಿ ಹುಕ್ಕೇರಿ ಕಾನೂನು ಸೇವಾ ಸಮಿತಿ,ನ್ಯಾಯವಾದಿಗಳ ಸಂಘ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಕಾರದಿಂದ ಜರುಗಿದ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಹಿರಿಯ …

Read More »