ಮೂಡಲಗಿ : ಅರಭಾವಿ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ವಿವಿಧ ರಸ್ತೆ ಕಾಮಗಾರಿಗಳಿಗಾಗಿ 21.27 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಮಂಗಳವಾರದಂದು ಉದಗಟ್ಟಿಯಿಂದ ನಾಗನೂರ ವ್ಹಾಯಾ ವಡೇರಹಟ್ಟಿ ರಸ್ತೆ ಸುಧಾರಣಾ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಈ …
Read More »ಲಾರಿ ಚಾಲಕನ ಅವಘಡದಿಂದಾಗಿ ಲಾರಿ, ಬೈಕ್, ಕಾರು, ನಡುವೆ ಭೀಕರ ಅಪಘಾತ
ನೆಲಮಂಗಲ: ಇಲ್ಲಿನ ಬಸ್ ನಿಲ್ದಾಣದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಕಾರು ಚಾಲಕನನ್ನು ಸುನೀಲ್ ಎಂದು ಗುರುತಿಸಲಾಗಿದೆ. ಬೈಕ್ ಸವಾರನ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಲಾರಿ ಚಾಲಕನ ಅವಘಡದಿಂದಾಗಿ ಲಾರಿ, ಬೈಕ್, ಕಾರು, ನಡುವೆ ಭೀಕರ ಅಪಘಾತ ಸಂಭವಿಸಿದೆ.ಸ್ತೆಯಲ್ಲಿ ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿಯಾಗಿ ಸರಣಿ ಅಪಘಾತವೆಸಗಿ ಚಾಲಕ ನಾಪತ್ತೆಯಾಗಿದ್ದಾನೆ. ಸ್ಥಳಕ್ಕೆ ನೆಲಮಂಗಲ ಟೌನ್ ಹಾಲ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »ಕನ್ನಡಿಗರ ಸ್ಟಾರ್ಟಪ್ ಆ್ಯಪ್ ಆಧಾರಿತ ಹೊಯ್ಸಳ ಕ್ಯಾಬ್ ಗಳಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಚಾಲನೆ ನೀಡಿದರು.
ಬೆಂಗಳೂರು: ಕನ್ನಡಿಗರ ಸ್ಟಾರ್ಟಪ್ ಆ್ಯಪ್ ಆಧಾರಿತ ಹೊಯ್ಸಳ ಕ್ಯಾಬ್ ಗಳಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಸಿಎಂ, ಹೊಯ್ಸಳ ಕ್ಯಾಬ್ ಕನ್ನಡಿಗರ ಸ್ಟಾರ್ಟಪ್ ಆಗಿದ್ದು, ಕನ್ನಡತಿ ಸುಧಾ ಉಮಾಶಂಕರ್ ಅವರು ಈ ಕ್ಯಾಬ್ ಸೇವೆ ಅರ್ಪಿಸಿದ್ದಾರೆ. ನಗರಗಳಲ್ಲಿದ್ದ ಕ್ಯಾಬ್ ಸೇವೆ ಇನ್ನು ರಾಜ್ಯದ ಎಲ್ಲೆಡೆ ಸೇವೆಗೆ ಆರಂಭಿಸಲಿದೆ. ಈ ಕ್ಯಾಬ್ಗಳು ಕಡಿಮೆ ದರದಲ್ಲಿ ಸುಭದ್ರ ಸೇವೆ ನೀಡಲಿವೆ. ಹೊಯ್ಸಳ …
Read More »ದೇವರ ಮುಂದೆ ಅಪ್ಪ- ಅಮ್ಮ ಕುಳಿತಿರುವ ಫೋಟೋ ಹಾಕಿಭಾವುಕರಾದ ಜಗ್ಗೇಶ್
ಬೆಂಗಳೂರು: ಇತ್ತೀಚೆಗಷ್ಟೇ ತಮ್ಮ ಸಿನಿ ಜರ್ನಿಗೆ 40 ವರ್ಷ ತುಂಬಿದ ಹಿನ್ನೆಲೆಯಲ್ಲಿ ಅಭಿಮಾನಿಗಳಲ್ಲಿ ಮಾಹಿತಿ ಹಂಚಿಕೊಂಡಿದ್ದ ನವರಸ ನಾಯಕ ಜಗ್ಗೇಶ್ ಅವರು ಇದೀಗ ತಮ್ಮ ಅಪ್ಪ- ಅಮ್ಮನ ಫೋಟೋವನ್ನು ಇನ್ಸ್ಟಾದಲ್ಲಿ ಶೇರ್ ಮಾಡಿಕೊಂಡು ಭಾವುಕರಾಗಿದ್ದಾರೆ. ದೇವರ ಮುಂದೆ ಅಪ್ಪ- ಅಮ್ಮ ಕುಳಿತಿರುವ ಫೋಟೋ ಹಾಕಿ ಬರೆದುಕೊಂಡಿರುವ ಜಗ್ಗೇಶ್, ಹಿರಿ ಅಕ್ಕನಿಗೆ ಸಿಕ್ಕ ಕಳೆದು ಹೋಗಿದ್ದ ಅಮ್ಮ-ಅಪ್ಪನ ಜೊತೆಯಿದ್ದ ಅಪರೂಪದ ಚಿತ್ರ. ಇಬ್ಬರು ಹೀಗೆ ಒಟ್ಟಿಗೆ ಕೂತು ದಿನನಿತ್ಯ ಭಕ್ತಿಯಿಂದ ಶಿವಪೂಜೆ …
Read More »ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯನಿಶ್ಚಿತಾರ್ಥನವ ಜೋಡಿಗೆ ಹಾರೈಸಿದ B.S.Y.
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯ ಹಾಗೂ ಕಾಫಿ ಡೇ ಸಿದ್ಧಾರ್ಥ್ ಹೆಗ್ಡೆ ಪುತ್ರ ಅಮರ್ಥ್ಯ ಸುಬ್ರಮಣ್ಯ ಹೆಗ್ಡೆ ನಿಶ್ಚಿತಾರ್ಥ ಅದ್ಧೂರಿಯಾಗಿ ನಡೆಯುತ್ತಿದ್ದು, ಕಡಿಮೆ ಜನರನ್ನು ಆಹ್ವಾನಿಸಿದ್ದರೂ ಸಂಭ್ರಮಕ್ಕೆ ಮಾತ್ರ ಕೊರತೆ ಇಲ್ಲ ಎಂಬಂತೆ ನಡೆಸಲಾಗುತ್ತಿದೆ. ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಖಾಸಗಿ ಹೋಟೆಲ್ನಲ್ಲಿ ಅದ್ಧೂರಿಯಾಗಿ ನಿಶ್ಚಿತಾರ್ಥ ಕಾರ್ಯಕ್ರಮ ನಡೆಯುತ್ತಿದೆ. ಆಯ್ದ ಗಣ್ಯರು ಹಾಗೂ ಕುಟುಂಬಸ್ಥರು, ಸ್ನೇಹಿತರಿಗಷ್ಟೇ ಆಹ್ವಾನ ನೀಡಲಾಗಿದ್ದು, ಒಟ್ಟು 250 ಜನರನ್ನು ಆಹ್ವಾನಿಸಲಾಗಿದೆ. ಈಗಾಗಲೇ …
Read More »ಜನರ ರಕ್ತ ಹೀರುವ ಹೆದ್ದಾರಿ ಟೋಲ್ಗಳು, ಹಗಲು ದರೋಡೆಗೆ ಮತ್ತೊಂದು ಲೈಸೆನ್ಸ್..!
ಬೆಂಗಳೂರು, ನ.19-ಮುಂದಿನ ವರ್ಷದಿಂದ ಹೆದ್ದಾರಿಗಳ ಟೋಲ್ಗಳಲ್ಲಿ ಹಾದು ಹೋಗಬೇಕಾದರೆ ಫಾಸ್ಟ್ಯಾಗ್ ಕಡ್ಡಾಯ ಎಂಬ ನಿರ್ಧಾರ ವಾಹನ ಸವಾರರನ್ನು ಕೆರಳಿಸಿದ್ದು, ಎಲ್ಲೆಡೆ ವ್ಯಾಪಕ ಆಕ್ರೋಶ ಕೇಳಿಬರುತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸರ್ಕಾರದ ನಿರ್ಧಾರದ ವಿರುದ್ಧ ವಾಗ್ದಾಳಿಗಳು ನಡೆಯುತ್ತಿವೆ. ಸರ್ಕಾರ ಸರಿಯಾದ ಸೌಲಭ್ಯ ನೀಡದೆ, ಬದಲಿ ರಸ್ತೆ ನಿರ್ಮಿಸದೆ ಜನರನ್ನು ಸುಲಿಗೆ ಮಾಡುವಂತಹ ಹುಚ್ಚು ನಿರ್ಧಾರಗಳನ್ನು ಪ್ರಕಟಿಸಿರುವುದು ಪ್ರಶ್ನಾರ್ಹವಾಗಿದೆ. ಜನವರಿ 1ರಿಂದ ಟೋಲ್ ಇರುವ ಹೆದ್ದಾರಿಗಳಲ್ಲಿ ಸಂಚರಿಸಬೇಕಾದರೆ ಫಾಸ್ಟ್ಯಾಗ್ ಕಡ್ಡಾಯ. ಫಾಸ್ಟ್ಯಾಗ್ …
Read More »ಯಡಿಯೂರಪ್ಪ ಮತ್ತು ದೆಹಲಿ ನಾಯಕರ ನಡುವಿನ ಸಂಬಂಧ ಅಷ್ಟೇಕಷ್ಟೇ……..?
ಬೆಂಗಳೂರು,ನ.19- ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕೇಂದ್ರ ಬಿಜೆಪಿ ವರಿಷ್ಠರ ನಡುವೆ ಸಂಬಂಧ ಹಳಸಿದೆಯೇ? ಇತ್ತೀಚಿಗೆ ಪಕ್ಷ ಮತ್ತು ಸರ್ಕಾರದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ದೆಹಲಿ ನಾಯಕರು ಮತ್ತು ಬಿಎಸ್ವೈ ಅವರ ನಡುವಿನ ಸಂಬಂಧ ಹಾವು-ಮುಂಗೂಸಿ ಎಂಬಂತಿದೆ. ಇದಕ್ಕೆ ಪುಷ್ಠಿ ನೀಡುವಂತೆ ನಿನ್ನೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಅವರನ್ನು ಕೇವಲ 15 ನಿಮಿಷದಲ್ಲಿ ಭೇಟಿಯಾಗಿ ಹಿಂತಿರುಗಿರುವುದು. ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಲು ಬಿಎಸ್ವೈ ಉತ್ಸುಕತೆ …
Read More »ಬಾಲಿವುಡ್ ನಟ ಸಲ್ಮಾನ್ ಖಾನ್ ಐಸೋಲೇಶನ್ಗೆ..!
ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಸ್ವತಃ ಐಸೋಲೇಶನ್ಗೆ ಒಳಗಾಗಿದ್ದಾರೆ. ಕಾರು ಚಾಲಕ ಮತ್ತು ಇಬ್ಬರು ಸಿಬ್ಬಂದಿಗಳಿಗೆ ಕೋವಿಡ್ 19 ಪಾಸಿಟವ್ ಕಂಡುಬಂದ ಹಿನ್ನೆಲೆಯಲ್ಲಿ ಸಲ್ಮಾನ್ ಈ ನಿರ್ಧಾರಕ್ಕೆ ಬಂದಿದ್ದಾರೆ. ಸೋಂಕು ತಾಗಿದ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅವರೊಂದಿಗೆ ಸಂಪರ್ಕಕ್ಕೆ ಬಂದ ಕಾರಣ ಸಲ್ಮಾನ್ ಮನೆಯಲ್ಲಿ 14 ದಿನಗಳ ಕಾಲ ಪ್ರತ್ಯೇಕವಾಗಿರಲು ನಿರ್ಧರಿಸಿದ್ದಾರೆ. ಸಲೀಮ್ ಖಾನ್ ಮತ್ತು ಸಲ್ಮಾಖಾನ್ರ ವಿವಾಹ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಕೆಲವೇ ದಿನಗಳಲ್ಲಿ …
Read More »ಪ್ರವೇಶಾತಿ ದಿನಾಂಕವನ್ನು ವಿಸ್ತರಿಸಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಆದೇಶ ಹೊರಡಿಸಿದೆ.
ಬೆಂಗಳೂರು: 2020-21ನೇ ಸಾಲಿನ (ಜುಲೈ ಆವೃತ್ತಿ) ವಿವಿಧ ಸರ್ಟಿಫಿಕೇಟ್ ಪೆÇ್ರೀಗ್ರಾಮ್ಗಳಿಗೆ ಪ್ರವೇಶಾತಿ ದಿನಾಂಕವನ್ನು ವಿಸ್ತರಿಸಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಆದೇಶ ಹೊರಡಿಸಿದೆ. ದಂಡಶುಲ್ಕವಿಲ್ಲದೆ ನ.30ರವರೆಗೆ ಪ್ರವೇಶಾತಿ ವಿಸ್ತರಿಸಲಾಗಿರುವ ಪ್ರಥಮ ವರ್ಷದ ಕೋರ್ಸ್ಗಳು ಈ ಕೆಳಗಿನಂತಿವೆ. ಸ್ನಾತಕ/ಸ್ನಾತಕೋತ್ತರ ಕೋರ್ಸ್ಗಳಾದ ಬಿಎ, ಬಿಕಾಂ, ಬಿ.ಲಿಬ್.ಐ.ಎಸ್ಸಿ, ಎಂಎ/ಎಂಕಾಂ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಎಂ.ಎಸ್ಸಿ, ಎಂಬಿಎ, ಪಿ.ಜಿ. ಡಿಪ್ಲೊಮಾ ಪ್ರೋಗ್ರಾಮ್ಸ್, ಮತ್ತು ಸರ್ಟಿಫಿಕೇಟ್ ಪ್ರೋಗ್ರಾಮ್ಸ್ ಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ. ಬಿಪಿಎಲ್ ಕಾರ್ಡ್ ಹೊಂದಿರುವ …
Read More »ರಾಷ್ಟ್ರಗೀತೆಯನ್ನೇ ತಪ್ಪಾಗಿ ಹಾಡಿದ ಬಿಹಾರ ಶಿಕ್ಷಣ ಸಚಿವ
ಬಿಹಾರ: ಬಿಹಾರ ಶಿಕ್ಷಣ ಸಚಿವ ಮೆವಾಲಾಲ್ ಚೌಧರಿ ರಾಷ್ಟ್ರಗೀತೆಯನ್ನು ತಪ್ಪಾಗಿ ಹಾಡುವ ಮೂಲಕ ನೆಟ್ಟಿಗರಿಂದ ವ್ಯಾಪಕ ಟೀಕೆಗೆ ಗುರಿಯಾಗುತ್ತಿದ್ದಾರೆ. ಇದು ಹಳೆಯ ವಿಡಿಯೋವಾಗಿದ್ದು, ಮೆವಾಲಾಲ್ ಚೌಧರಿ ಜನಗಣ ಮನವನ್ನು ತಪ್ಪುತಪ್ಪಾಗಿ ಹಾಡಿದ್ದಾರೆ. ಈ ವಿಡಿಯೋ ಪೊಸ್ಟ್ ಮಾಡಿರುವ ಆರ್ ಜೆಡಿ, 7 ಭ್ರಷ್ಟಾಚಾರ ಪ್ರಕರಣಗಳ ಆರೋಪ ಹೊತ್ತಿರುವ ಮೆವಾಲಾಲ್ಗೆ ರಾಷ್ಟ್ರಗೀತೆಯೇ ಗೊತ್ತಿಲ್ಲ. ಇಂತಹ ವ್ಯಕ್ತಿಯನ್ನು ನೀವು ಶಿಕ್ಷಣ ಮಂತ್ರಿಯನ್ನಾಗಿ ಮಾಡೋಕೆ ನಿತೀಶ್ ಕುಮಾರ್ ಸರ್ಕಾರಕ್ಕೆ ನಾಚಿಕೆ ಆಗೋದಿಲ್ವಾ ಅಂತಾ ಪ್ರಶ್ನೆ …
Read More »