Breaking News

ಬಿಸಿಲಿಗೆ ಗೂಡಿನಿಂದೆದ್ದ ಹೆಜ್ಜೇನು; ಉಪಪ್ರಾಚಾರ್ಯ, ವಿದ್ಯಾರ್ಥಿಗಳು ಸೇರಿ 10 ಜನ ಆಸ್ಪತ್ರೆಗೆ ದಾಖಲು

ಬಾಗಲಕೋಟೆ: ಬೇಸಿಗೆಯ ಝಳ ಈಗಾಗಲೇ ಎಲ್ಲರನ್ನೂ ಕಂಗೆಡಿಸಲಾರಂಭಿಸಿದೆ. ದಿನೇ ದಿನೇ ಹೆಚ್ಚುತ್ತಿರುವ ಸೂರ್ಯನ ತಾಪಮಾನ ಮೈ ಸುಡುತ್ತಿದೆ. ಸೂರ್ಯನ ಶಾಖ ಮನುಷ್ಯ ಮಾತ್ರರಿಗಷ್ಟೇ ಅಲ್ಲದೇ ಪ್ರಾಣಿ, ಪಕ್ಷಿ, ಕೀಟ ಸಂಕುಲಗಳ ಮೇಲೂ ಪರಿಣಾಮ ಬೀರುತ್ತಿದೆ. ಬಾಗಲಕೋಟೆ ಜಿಲ್ಲೆಯ ಗಮಖಂಡಿಯಲ್ಲಿ ಬಿಸಿಲಿನ ತಾಪ ತಾಳಲಾರದೆ ಗೂಡಿನಿಂದ ಎದ್ದ ಹೆಜ್ಜೇನುಗಳು ಏಕಾಏಕಿ ದಾಳಿ ನಡೆಸಿರುವ ಘಟನೆ ವರದಿಯಾಗಿದೆ. ಜಮಖಂಡಿ ನಗರದ ಸರ್ಕಾರಿ ಪಿಬಿ ಪ್ರೌಢಶಾಲೆ ಬಳಿ ಘಟನೆ ನಡೆದಿದ್ದು ಉಪಪ್ರಾಚಾರ್ಯರು ಹಾಗೂ 9 …

Read More »

ಕರ್ನಾಟಕದಲ್ಲಿ ವಕೀಲಿ ವೃತ್ತಿ ನಡೆಸಲು ಜಗದೀಶ್ ಕುಮಾರ್​ ಹೆಸರನ್ನೇ ನೋಂದಾಯಿಸಿಲ್ಲ: ಬಾರ್​ ಕೌನ್ಸಿಲ್​ ಸ್ಪಷ್ಟನೆ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಡಿ ಸಂತ್ರಸ್ತೆಯ ಪರ ವಕಾಲತ್ತು ವಹಿಸಿರುವ ವಕೀಲ ಕೆ.ಎನ್.ಜಗದೀಶ್ ಕುಮಾರ್ ಮತ್ತೊಂದು ವಿವಾದಕ್ಕೆ ಸಿಲುಕಿದ್ದಾರೆ. ಕರ್ನಾಟಕದಲ್ಲಿ ವಕೀಲಿ ವೃತ್ತಿ ನಡೆಸಲು ಕೆ.ಎನ್.ಜಗದೀಶ್ ಕುಮಾರ್ ಹೆಸರನ್ನು ನೋಂದಾಯಿಸಿಯೇ ಇಲ್ಲ ಎಂಬ ಮಾಹಿತಿ ಇದೀಗ ಹೊರಬಿದ್ದಿದೆ. ಈ ಕುರಿತು ವಕೀಲ ಎಸ್.ಬಸವರಾಜ್ ಎಂಬುವವರು ಕೇಳಿದ್ದ ಪ್ರಶ್ನೆಗೆ ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ಸ್ಪಷ್ಟನೆ ನೀಡಿದ್ದು, ಕೆ.ಎನ್.ಜಗದೀಶ್ ಕುಮಾರ್ ಕರ್ನಾಟಕದಲ್ಲಿ ವಕೀಲಿ ವೃತ್ತಿಗೆ …

Read More »

ಮಾಜಿ ಸಿಎಂ ಕುಮಾರಸ್ವಾಮಿ ಸೇರಿ ಐವರು ಶಾಸಕರಿಗೆ ಸಮನ್ಸ್ ಜಾರಿ

ಬೆಂಗಳೂರು: ಜೆಡಿಎಸ್ ತೊರೆಯಲು 5 ಕೋಟಿ ರೂಪಾಯಿ ಆಮಿಷವೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಶಾಸಕ ಶ್ರೀನಿವಾಸ್ ಗೌಡ, ಡಿಸಿಎಂ ಅಶ್ವತ್ಥ ನಾರಾಯಣ, ಸಚಿವ ಯೋಗೇಶ್ವರ್, ಎಸ್.ಆರ್. ವಿಶ್ವನಾಥ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿದೆ. ಜೆಡಿಎಸ್ ಪಕ್ಷ ತ್ಯಜಿಸಲೆಂದು ಬಿಜೆಪಿ ನಾಯಕರಿಂದ ಬರೋಬ್ಬರಿ 5 ಕೋಟಿ ರೂಪಾಯಿ ಆಮಿಷವೊಡ್ಡಲಾಗಿತ್ತು ಎಂದು ಆರೋಪಿಸಿ ಟಿ.ಜೆ. ಅಬ್ರಾಹಂ ಖಾಸಗಿ ದೂರು ದಾಖಲಿಸಿದ್ದರು. ಅಲ್ಲದೇ ಈ ಬಗ್ಗೆ ವಿಧಾನಸಭೆಯಲ್ಲಿಯೂ ಕೆ. ಶ್ರೀನಿವಾಸ್ …

Read More »

ಈಶ್ವರಪ್ಪ ರಾಜ್ಯಪಾಲರ ಅಂಗಳಕ್ಕೆ ಹೋಗಿದ್ದು ಸರಿಯಲ್ಲ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಹಿರಿಯ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಯಾವುದೇ ಅಸಮಾಧಾನ ಇದ್ದರೆ, ಅದನ್ನು ಸರ್ಕಾರದ ಒಳಗೇ ಬಗೆಹರಿಸಿಕೊಳ್ಳಬೇಕು. ರಾಜ್ಯಪಾಲರ ಅಂಗಳಕ್ಕೆ ಒಯ್ಯವುದು ಸರಿಯಲ್ಲ ಎಂದು ಗೃಹ ಮತ್ತು ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮುಖ್ಯಮಂತ್ರಿಯವರ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಮುಖ್ಯಮಂತ್ರಿಯವರ ಭೇಟಿಯ ಬಳಿಕ ಅವರು ಮಾತನಾಡಿ, ನಮ್ಮದು ಶಿಸ್ತಿನ ಪಕ್ಷವಾಗಿದ್ದು, ಶಿಸ್ತಿನ ಉಲ್ಲಂಘನೆಯಾಗಬಾರದು ಎಂದು ತಿಳಿಸಿದರು. ಮುಖ್ಯಮಂತ್ರಿಯವರ ನೇತೃತ್ವದಲ್ಲಿ ಸರ್ಕಾರ ರಚನೆ ಆಗಿದೆ. ಅವರ ಮಾರ್ಗದರ್ಶನದಲ್ಲಿಯೇ ಕೆಲಸ ಮಾಡುತ್ತಿದ್ದೇವೆ. ಯಾವುದೇ …

Read More »

ಮಸ್ಕಿ ಉಪಚುನಾವಣೆಯಲ್ಲಿ ರಮೇಶ್ ಜಾರಕಿಹೊಳಿ ಪ್ರಚಾರ ಇಲ್ಲ: ಬಿಜೆಪಿ ಅಭ್ಯರ್ಥಿ ಸ್ಪಷ್ಟನೆ

ರಾಯಚೂರು: ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರ ಪತನವಾಗಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಬರಲು ಕಾರಣವಾದ ಮುಂಬೈ ಫ್ರೆಂಡ್ಸ್ ಎಂದು ಖ್ಯಾತರಾದ 17 ಜನ ಶಾಸಕರ ನೇತೃತ್ವ ವಹಿಸಿದ್ದ ರಮೇಶ್ ಜಾರಕಿಹೊಳಿ ಇದೀಗ ಸಿಡಿ ಪ್ರಕರಣದಲ್ಲಿ ಸಿಕ್ಕು ಒತ್ತಾಡುತ್ತಿದ್ದಾರೆ. ಈ ಗೊಂದಲ ಮಧ್ಯೆ ಬೆಳಗಾವಿ ಸಾಹುಕಾರ್ ಮಸ್ಕಿ ಬೈ ಎಲೆಕ್ಷನ್ ಪ್ರಚಾರದಿಂದ ದೂರ ಉಳಿಯುವ ಸಾಧ್ಯತೆ ಇದೆ. ರಮೇಶ್ ಜಾರಕಿಹೊಳಿ ಅವರು ಮಸ್ಕಿ ಉಪಚುನಾವಣೆಯಿಂದ ದೂರ ಉಳಿಯುತ್ತಾರೆ ಎಂದು ಸ್ವತಃ …

Read More »

ಸಿಡಿ ಕೇಸ್: ಆರ್‌ಟಿ ನಗರದ ಪಿಜಿಯಲ್ಲಿ ಎಸ್‌ಐಟಿ ಮಹಜರು

ಬೆಂಗಳೂರು, ಏಪ್ರಿಲ್ 01: ಸಿಡಿ ಪ್ರಕರಣ ಸಂಬಂಧ ಸಂತ್ರಸ್ತ ಯುವತಿ ತಂಗಿದ್ದ ಆರ್‌.ಟಿ. ಪಿಜಿಯಲ್ಲಿ ಎಸ್‌ಐಟಿ ಅಧಿಕಾರಿಗಳು ಗುರುವಾರ ಬೆಳಗ್ಗೆ ಮಹಜರು ನಡೆಸಿದ್ದಾರೆ. ಸಿಡಿ ಸಂತ್ರಸ್ತ ಲೇಡಿ ತಂಗಿದ್ದ ಪಿಜಿ ಮೇಲೆ ಈ ಹಿಂದೆ ಎಸ್‌ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. 9 ಲಕ್ಷ ರೂ. ನಗದು ಹಣವನ್ನು ವಶಪಡಿಸಿಕೊಂಡಿದ್ದರು. ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಅರೋಪ ಹೊರಿಸಿರುವ ಸಿಡಿಲೇಡಿ ಸಮ್ಮುಖದಲ್ಲಿ ಇದೀಗ ಆಕೆ ತಂಗಿದ್ದ ಪಿಜಿಯಲ್ಲಿ ಮಹಜರು ನಡೆಸಿದರು. ಜತೆಗೆ …

Read More »

ಈಶ್ವರಪ್ಪ ನೀಡಿರುವ ದೂರು ಸರ್ಕಾರದ ಆಡಳಿತ ವೈಖರಿಗೆ ಹಿಡಿದ ಕನ್ನಡಿ : ಎಚ್‌ಡಿಕೆ

ಬೆಂಗಳೂರು,ಏ.1- ರಾಜ್ಯ ಸರ್ಕಾರದ ಹಿರಿಯ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರು ಮುಖ್ಯಮಂತ್ರಿ ವಿರುದ್ದ ನೀಡಿರುವ ದೂರು ಸರ್ಕಾರದ ಆಡಳಿತ ವೈಖರಿಗೆ ಹಿಡಿದ ಕನ್ನಡಿಯಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಈಶ್ವರಪ್ಪ ಅವರು ನೀಡಿರುವ ದೂರನ್ನು ರಾಜ್ಯದ ಆಡಳಿತದ ಮುಖ್ಯಸ್ಥರಾಗಿರುವ ರಾಜ್ಯಪಾಲರು ಹಗುರವಾಗಿ ತೆಗೆದುಕೊಳ್ಳದೆ ಗಂಭೀರವಾಗಿ ಪರಿಗಣಿಸಿ ಮುಖ್ಯಮಂತ್ರಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಅವರು ಮನವಿ ಮಾಡಿದರು. ಈ ಸಂಜೆಯೊಂದಿಗೆ ಮಾತನಾಡಿದ ಅವರು, ಸಚಿವರು ನೀಡಿದ ದೂರಿನಿಂದಾಗಿ ಅನುದಾನ ಎಲ್ಲ …

Read More »

ಪೋಷಕರನ್ನು ಮಾತನಾಡಿಸಬೇಕು ಎಂದು ಬಿಕ್ಕಿಬಿಕ್ಕಿ ಅತ್ತಿದ್ದಾರೆ ಯುವತಿ,

ಬೆಂಗಳೂರು: ರಮೇಶ್​ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಎಸ್​ಐಟಿ ವಿಚಾರಣೆ ವೇಳೆ ಸಿಡಿ ಸಂತ್ರಸ್ತೆ ಬಿಕ್ಕಿಬಿಕ್ಕಿ ಅತ್ತಿದ್ದಾರೆ ಎಂದು ತಿಳಿದುಬಂದಿದೆ. ಎಸ್​ಐಟಿ ಅಧಿಕಾರಿಗಳ ಯಾವುದೇ ಪ್ರಶ್ನೆಗಳಿಗೆ ಉತ್ತರಿಸದೇ ಪೋಷಕರನ್ನು ಮಾತನಾಡಿಸಬೇಕು ಎಂದು ಪಟ್ಟು ಹಿಡಿದಿರುವ ಯುವತಿ, ಪೋಷಕರ ಭೇಟಿಗೆ ಅನುಮತಿ ನೀಡುವಂತೆ ಅಧಿಕಾರಿಗಳ ಮುಂದೆ ಕಣ್ಣೀರಿಟ್ಟಿದ್ದಾರೆ. ಆದರೆ, ಈ ವೇಳೆ ಸಂತ್ರಸ್ತೆಯನ್ನು ಸಮಾಧಾನ ಮಾಡಿರುವ ಎಸ್​ಐಟಿ ಅಧಿಕಾರಿಗಳು ಅನುಮತಿ ನೀಡಲಾಗುವುದಿಲ್ಲ ಎಂದು ಮನವೊಲಿಸುವ ಯತ್ನ ಮಾಡಿದ್ದಾರೆ. ನಾವು …

Read More »

CD ಕೇಸ್: ನನ್ನ ಸೋದರಿ ಮೇಲೆ ಡಿ.ಕೆ. ಶಿವಕುಮಾರ್ ಒತ್ತಡ ಇದೆ, ನಮ್ಮ ಬಳಿ 9 ಸಾಕ್ಷಿಗಳಿವೆ- ಸಂತ್ರಸ್ತೆಯ ಸಹೋದರ

ವಿಜಯಪುರ: ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಯ ಸಹೋದರ ಸ್ಫೋಟಕ ಹೇಳಿಕೆಯೊಂದನ್ನ ನೀಡಿದ್ದಾರೆ. ನನ್ನ ಸಹೋದರಿ ಮೇಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಒತ್ತಡ ಇದೆ ಎಂದು ಅವರು ಆರೋಪಿಸಿದ್ದಾರೆ. ಇಂದು ವಿಜಯಪುರದಲ್ಲಿ ಮಾತನಾಡಿದ ಅವರು, ನಾನು ಪ್ರೂಫ್ ಸಮೇತ ಹೇಳ್ತಿದ್ದೇನೆ.. ಪ್ರಕರಣದ ತನಿಖೆಯಾಗಲಿ, ಎಲ್ಲವೂ ಹೊರ ಬರುತ್ತೆ. ಸತ್ಯ ಮುಚ್ಚಲು ಆಗಲ್ಲ. ಇಂದಿಲ್ಲ ನಾಳೆ ಡಿ.ಕೆ. ಶಿವಕುಮಾರ್ ಹೆಸರು ಹೊರಗೆ ಬಂದೇ ಬರುತ್ತೆ. ನಾವು ಎಲ್ಲ ಸಾಕ್ಷಿಗಳನ್ನ …

Read More »

ಲಿವಿಂಗ್ ಟುಗೆದರ್ ಇದ್ದಾಗ ಹುಟ್ಟಿರೋ ಸರ್ಕಾರವಿದು- ಎಸ್​.ಆರ್. ಪಾಟೀಲ್ ವಾಗ್ದಾಳಿ

ಬಾಗಲಕೋಟೆ: ರಾಜ್ಯದಲ್ಲಿ ಇರುವುದು ಲಿವಿಂಗ್ ಟುಗೆದರ್​ನಿಂದ ಹುಟ್ಟಿದ ಅನೈತಿಕ ಶಿಶುವಿನಿಂದ ಕೂಡಿದ ಸರ್ಕಾರ.. ಹೀಗಾಗಿ ಈ ಸರ್ಕಾರದಲ್ಲಿ ಮುಂದೆ ನಡೆಯುತ್ತಿರುವುದೆಲ್ಲವೂ ಅನೈತಿಕವೇ ಎಂದು ಬಾಗಲಕೋಟೆಯಲ್ಲಿ ಪರಿಷತ್ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್ ವ್ಯಂಗ್ಯವಾಡಿದ್ದಾರೆ. ಸಿಡಿ ವಿಚಾರದಲ್ಲಿ ಬಹಳಷ್ಟು ಕೆಸರೆರಚಾಟ ನಡೆದಿದೆ. ಈ ಸರ್ಕಾರದಲ್ಲಿ 6 ಜನ ಮಂತ್ರಿಗಳು ಸ್ಟೇ ತಂದ್ರು. ಒಬ್ಬರ ಮೇಲೆ ಈಗಾಗಲೇ ಕಂಪ್ಲೇಂಟ್, ಎಫ್ ಆರ್ ಐ ಫೈಲ್ ಆಗಿದೆ. ಬಿಎಸ್​ವೈ ಸರ್ಕಾರ ಸಿಡಿ ಸರ್ಕಾರ. ನೈತಿಕ ಅಧಃಪತನಕ್ಕೆ …

Read More »