ಬೆಂಗಳೂರು: ಮಾಗಡಿ ರಸ್ತೆಯ ಅಂಡರ್ ಪಾಸ್ ಮೇಲ್ಭಾಗದಲ್ಲಿ ವಿಷ್ಣುವರ್ಧನ್ ಪ್ರತಿಮೆ ಸ್ಥಳಾಂತರದ ಬಗ್ಗೆ ನಟ ಅನಿರುದ್ಧ್ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮದಜೊತೆ ಮಾತನಾಡಿದ ಅನಿರುದ್ಧ್, ಪ್ರತಿಷ್ಠಾಪನೆಯಾಗಿರುವ ಮೂರ್ತಿಯನ್ನ ರಾತ್ರೋ ರಾತ್ರಿ ಯಾರಿಗೂ ಹೇಳದೇ ತೆಗೆಯುವುದು ಎಷ್ಟು ಸೂಕ್ತ. ಈ ರೀತಿಯ ಕೆಲಸಗಳಿಂದ ಹಿರಿಯ ವ್ಯಕ್ತಿಗೆ ಅವಮಾನ ಮಾಡಿದಂತೆ ಆಗಲ್ವಾ? ಇದರಿಂದ ಅಭಿಮಾನಿಗಳಿಗೆ ದುಃಖ ಆಗುತ್ತೆ. ವಿಷ್ಣುವರ್ಧನ್ ಅಪ್ಪಾಜಿ ಪ್ರತಿಮೆಯನ್ನ ಯಾರು ತೆಗೆದ್ರು ಮತ್ತು ಯಾಕೆ ತೆಗೆದರು ಎಂದು ಬೇಸರ ವ್ಯಕ್ತಪಡಿಸಿದರು. : …
Read More »ಮಾಗಡಿ ರಸ್ತೆಯ ಟೋಲ್ಗೇಟ್ ಅಂಡರ್ಪಾಸ್ ಮೇಲಿದ್ದ ನಟ ಸಾಹಸ ಸಿಂಹ ವಿಷ್ಣುವರ್ಧನ್ ಪ್ರತಿಮೆಯನ್ನ ರಾತ್ರೋ ರಾತ್ರಿ ತೆಗೆಯಲಾಗಿದೆ.
ಬೆಂಗಳೂರು: ಮಾಗಡಿ ರಸ್ತೆಯ ಟೋಲ್ಗೇಟ್ ಅಂಡರ್ಪಾಸ್ ಮೇಲಿದ್ದ ನಟ ಸಾಹಸ ಸಿಂಹ ವಿಷ್ಣುವರ್ಧನ್ ಪ್ರತಿಮೆಯನ್ನ ರಾತ್ರೋ ರಾತ್ರಿ ತೆಗೆಯಲಾಗಿದೆ. ವಿಷಯ ತಿಳಿದು ಸ್ಥಳದಲ್ಲಿ ಜಮಾಯಿಸಿರುವ ವಿಷ್ಣುವರ್ಧನ್ ಅಭಿಮಾನಿಗಳು ಆಕ್ರೋಶ ಹೊರ ಹಾಕಿದ್ದಾರೆ. ಮುನ್ನೇಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಟೋಲ್ಗೇಟ್ ಸರ್ಕಲ್ ಗೆ ಶ್ರೀ ಬಾಲ ಗಂಗಾಧರ ಸ್ವಾಮೀಜಿ ವೃತ್ತ ಅಂತ ಹೆಸರಿಡಲಾಗಿದೆ. ಹಾಗಾಗಿ ವಿಷ್ಣುವರ್ಧನ್ ಪ್ರತಿಮೆ ಸ್ಥಳದಲ್ಲಿ ಬಾಲಗಂಗಾಧರ ಸ್ವಾಮೀಜಿ ಸ್ಟ್ಯಾಚು ಇಡಲು ನಿರ್ಧರಿಸಲಾಗಿದೆ. ಹೀಗಾಗಿ ರಾತ್ರಿ …
Read More »ತಾಯಿಯೇ ಮಗಳನ್ನು ಅಪಹರಿಸಿ ಪರಾರಿ
ಕಾರವಾರ: ತನಗೆ ಇಷ್ಟವಿಲ್ಲದೇ ಪ್ರೀತಿಸಿ ಮದುವೆಯಾಗಿದ್ದಕ್ಕೆ ತಾಯಿಯೇ ಮಗಳನ್ನು ಅಪಹರಿಸಿ ಪರಾರಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಇಂದು ವರದಿಯಾಗಿದೆ. ತಾಯಿಯಿಂದ ಅಪಹರಣಕ್ಕೊಳಗಾದ ಯುವತಿಯನ್ನು ರುತಿಕಾ ಎಂದು ಗುರುತಿಸಲಾಗಿದೆ. ಈಕೆಯ ತಾಯಿ ರೂಪ ಶಿರ್ಸಿಕರ್ ಆಗಿದ್ದು, ಶಿರಸಿ ನಗರದಲ್ಲಿ ಬ್ಯೂಟಿಪಾರ್ಲರ್ ನಡೆಸುತ್ತಿದ್ದಳು. ರುತಿಕಾ ಶಿರಸಿಯ ಬಸವೇಶ್ವರ ನಗರದ ಮಣಿಕಂಠ ಎಂಬ ಯುವಕನನ್ನು ಪ್ರೀತಿಸಿ ಕೆಲವು ದಿನದ ಹಿಂದೆ ವಿವಾಹವಾಗಿದ್ದಳು. ಈ ಬಗ್ಗೆ ತಾಯಿ ರೂಪ ಶಿರ್ಸಿಕರ್ಗೆ ಇಷ್ಟವಿರಲಿಲ್ಲ. ಮಗಳು ತನ್ನ …
Read More »ಹೊಸವೈರಸ್ ಬಗ್ಗೆ ಯಾವುದೇ ಘೋಷಣೆ ಮಾಡದಂತೆ ರಾಜ್ಯಗಳಿಗೆ ಕೇಂದ್ರದಿಂದ ಕಟ್ಟಪ್ಪಣೆ
ಬೆಂಗಳೂರು,ಡಿ.26- ಬ್ರಿಟನ್ನಲ್ಲಿ ರೂಪಾಂತರಗೊಂಡ ಹೊಸ ಸ್ವರೂಪದ ಕೊರೊನಾ ವೈರಸ್ ಕಾಣಿಸಿಕೊಂಡರೂ ಅದನ್ನು ಅಧಿಕೃತವಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡದಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೂ ಕಟ್ಟಪ್ಪಣೆ ವಿಧಿಸಿದೆ. ಯಾವುದೇ ವ್ಯಕ್ತಿಗೆ ಹೊಸ ಮಾದರಿಯ ಸೋಂಕು ವರದಿಯಲ್ಲಿ ಖಚಿತವಾದರೆ ಅದನ್ನು ತಕ್ಷಣವೇ ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್(ಐಸಿಎಂಆರ್ಗೆ) ಕಳುಹಿಸಿಕೊಡಬೇಕೆಂದು ಸೂಚನೆ ನೀಡಿದೆ. ಸ್ವತಃ ಪ್ರಧಾನಿ ಕಾರ್ಯಾಲಯದ ಅಧಿಕಾರಿಗಳೇ ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರು, ಮುಖ್ಯ ಕಾರ್ಯದರ್ಶಿಗಳು ಹಾಗೂ ಇಲಾಖೆ ಅಧಿಕಾರಿಗಳ ಜೊತೆ ದೂರವಾಣಿ …
Read More »FDA, SDA ಅಬ್ಯರ್ಥಿಗಳ ಆದೇಶಕ್ಕೆ ಒಪ್ಪಿಗೆ ಸೂಚಿಸಲು ಅಬ್ಯರ್ಥಿಗಳಿಂದ ಸಚಿವರಿಗೆ ಮನವಿ
FDA, SDA ಅಬ್ಯರ್ಥಿಗಳ ಆದೇಶಕ್ಕೆ ಒಪ್ಪಿಗೆ ಸೂಚಿಸಲು ಅಬ್ಯರ್ಥಿಗಳಿಂದ ಸಚಿವರಿಗೆ ಮನವಿ 2017 ನೇ ಸಾಲಿನ ಎಸ್.ಡಿ.ಎ.ಹಾಗೂ ಎಫ್, ಡಿ,ಎ ಹುದ್ದೆಗಳಿಗೆ ನೇಮಕಾತಿ ಆದೇಶ ನೀಡಲು ಆರ್ಥಿಕ ಇಲಾಖೆಗೆ ಒಪ್ಪಿಗೆ ಸೂಚಿಸುವಂತೆ ಸಚಿವ ರಮೇಶ ಜಾರಕಿಹೊಳಿ ಅವರಿಗೆ SDA ಹಾಗೂ FDA ಅಭ್ಯರ್ಥಿಗಳು ಮನವಿ ಮಾಡಿಕೊಂಡರು. 2017 ನೇ ಸಾಲಿನ SDA ಹಾಗೂ FDA ಪರೀಕ್ಷೆಯಲ್ಲಿ ಆಯ್ಕೆಗೊಂಡು ನಿಯಮಾನುಸಾರ ಎಲ್ಲ ಮೂಲ ದಾಖಲಾತಿ ಪರಿಶೀಲನೆ ಪ್ರಕ್ರಿಯೆ ಮುಗಿದಿದ್ದು, ಹಾಗೂ ಆರ್ಥಿಕ …
Read More »ಕೊಣ್ಣೂರಲ್ಲಿ ಪೋಲಿಸ ಇಲಾಖೆಯಿಂದ ಅಪರಾದ ತಡೆ ಕಾರ್ಯಕ್ರಮ
ಬೆಳಗಾವಿ ಜಿಲ್ಲೆಯಲ್ಲಿ ಅಪರಾದ ಮಾಸಾಚಾರಣೆ ತಡೆ ನಿಮಿತ್ಯವಾಗಿ ಗೋಕಾಕ ತಾಲೂಕಿನ ಕೊಣ್ಣೂರ ಉಪ ಪೋಲಿಸ್ ಠಾಣಾವತಿಯಿಂದ ASI ಟಿ,ಎಸ್,ದಳವಾಯಿ, ನೇತೃತ್ವದಲ್ಲಿ ಪೋಲಿಸ್ ಸಿಬ್ಬಂದಿಗಳಾದ ದುಂಡೇಶ ಅಂತರಗಟ್ಟಿ, ಸಂಜೀವ ಮಾನೆಪ್ಪಗೋಳ, ಮಹೇಶ ಕಾಂಬಳೆ ಹಾಗೂ ಸರದಾರ ಹಸರಂಗಿಯವರು ಉಪಸ್ಥಿತರಿದ್ದು ಸಾರ್ವಜನಿಕರಿಗೆ ಅಪರಾದ ಮಾಡುವುದರಿಂದ ಎನೆನು ಹಾನಿಯಾಗುತ್ತದೆ ಎಂದು ತಿಳುವಳಿಕೆ ನೀಡಿದರು, ಅದರಂತೆ ಕೊರಾನಾದ ಬಗ್ಗೆ ಎಲ್ಲರೂ ಮಾಸ್ಕ್ ದರಿಸಿ ,ಸಾಮಾಜಿಕ ಅಂತರ ಕಾಯ್ದುಕೊಳ್ಳಲು ತಿಳಿಸಿದರು.
Read More »ಅವಸಾನದ ಅಂಚಿನಲ್ಲಿನ 5 ಸರ್ಕಾರಿ ಶಾಲೆಗಳನ್ನ ದತ್ತು ಪಡೆದ ಸಚಿವ ರಮೇಶ್ ಜಾರಕಿಹೊಳಿ
ಬೆಳಗಾವಿ : ಗೋಕಾಕ್ ತಾಲ್ಲೂಕಿನ ಮಮದಾಪುರ ಗ್ರಾಮದಲ್ಲಿರುವ ಸರ್ಕಾರಿ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ಸೇರಿ ಒಟ್ಟು ಐದು ಶಾಲೆಗಳನ್ನು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ದತ್ತು ಪಡೆದು, ಮಾನವೀಯತೆ ಮೆರೆದಿದ್ದಾರೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಗೋಕಾಕ್ ತಾಲ್ಲೂಕಿನಲ್ಲಿರುವ ಖನಗಾಂವ ಗ್ರಾಮದ ಕನ್ನಡ ಪ್ರಾಥಮಿಕ ಶಾಲೆ, ಮಮದಾಪೂರದ ಸರಕಾರಿ ಮಾದರಿ ಗಂಡು ಮಕ್ಕಳ ಶಾಲೆ, ಅಂಕಲಗಿಯ ಕನ್ನಡ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ, ಧುಪಧಾಳದ …
Read More »ಅಸಲಿ-ನಕಲಿ ದೇಶಭಕ್ತರು ಯಾರು ಎಂಬುದ್ದನ್ನು ಜನರು ತೀರ್ಮಾನ ಮಾಡುತ್ತಾರೆ: ಸತೀಶ್ ಜಾರಕಿಹೊಳಿ
ಗೋಕಾಕ: ಇತಿಹಾಸದಲ್ಲಿ ಬಹಳಷ್ಟು ಘಟನೆಗಳು ನಡೆದಿವೆ. ಬಿಜೆಪಿ ಪಕ್ಷವು ದೇಶದ ಇತಿಹಾಸವನ್ನು ತಿರುಚುವ ಮೂಲಕ ಜನರನ್ನು ದಾರಿ ತಪ್ಪಿ ಸುತ್ತಿದೆ. ದೇಶದಲ್ಲಿರುವ ಪ್ರತಿಯೊಂದು ಸಮುದಾಯವು ಸಮಾನತೆ ಹಾಗೂ ಪ್ರೀತಿಯಿಂದ ಬಾಳುತ್ತಿದೆ. ಆದರೆ ಬಿಜೆಪಿಯು ಜಾತಿ ಜಾತಿಗಳ ಮಧ್ಯೆ ಜಗಳ ಹಚ್ಚಿ ದೇಶದಲ್ಲಿನ ಶಾಂತಿ ಕದಡಲು ಮುಂದಾಗಿದೆ ಎಂದು ಬಿಜೆಪಿ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ. ಗೋಕಾಕನ ತಮ್ಮ ಹಿಲ್ ಗಾರ್ಡನ್ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …
Read More »ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಸುಧಾಕರ್ ಮುಂದೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದುರ್ಬಲರಾಗಿದ್ದಾರೆ : ಡಿ.ಕೆ.ಶಿ
ಬೆಂಗಳೂರು, – ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಸುಧಾಕರ್ ಮುಂದೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದುರ್ಬಲರಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾತ್ರಿ ಕಫ್ರ್ಯೂ ಜಾರಿಗೆ ತರುವಾಗ ಯಾವ ಮಂತ್ರಿಯ ಮಾತನ್ನು ಕೇಳಿಲ್ಲ. ಒಬ್ಬ ಸಚಿವ ಹೇಳಿದ ಎಂಬ ಕಾರಣಕ್ಕೆ ಯಡಿಯೂರಪ್ಪ ಸಹಿ ಮಾಡಿದ್ದರು. ಕೊನೆಗೆ ಅವರದೇ ಸರ್ಕಾರದ ಸಚಿವರು, ಪಕ್ಷದವರು ಟೀಕಿಸಿದರೆ ಎಂಬ ಕಾರಣಕ್ಕೆ …
Read More »ಸ್ಯಾಂಡಲ್ವುಡ್ ಮತ್ತೊಬ್ಬ ನಿರ್ದೇಶಕನ್ನು ಬಲಿ ಪಡೆದ ಕೊರೊನಾ..!
ಬೆಂಗಳೂರು, ಡಿ.25- ಕೊರೊನಾ ಮಾರಿಯು ಸ್ಯಾಂಡಲ್ವುಡ್ ಅನ್ನು ಬೆಂಬಿಡದಂತೆ ಕಾಡುತ್ತಿದ್ದು ಅನಾರೋಗ್ಯದಿಂದ ಬಳಲುತ್ತಿದ್ದ ನಿರ್ದೇಶಕ ಭರತ್ (45) ನಿನ್ನೆ ರಾತ್ರಿ ಚಾಮರಾಜನಗರದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ರೋರಿಂಗ್ ಸ್ಟಾರ್ ಶ್ರೀಮುರಳಿ ಹಾಗೂ ಮೋಹಕ ತಾರೆ ರಮ್ಯಾ ಅಭಿನಯದ ಕಂಠಿ ಚಿತ್ರ ನಿರ್ದೇಶಿಸುವ ಮೂಲಕ ಚಿತ್ರ ಪಯಣ ಆರಂಭಿಸಿದ ರಾಮನಗರ ಚಿಕ್ಕಮುಳುವಾಡಿ ಗ್ರಾಮದ ಭರತ್ ಹೊಸ ಸಿನಿಮಾದ ತಯಾರಿಯಲ್ಲಿರುವಾಗಲೇ ತಮ್ಮ ಬಣ್ಣದ ಲೋಕದ ಪಯಣ ಮುಗಿಸಿದ್ದಾರೆ. ಕ್ರೇಜಿಸ್ಟಾರ್ ರವಿಚಂದ್ರನ್ ಅವರ ನಿರ್ದೇಶನದ …
Read More »