Breaking News

ಮಲೈ ಮಹದೇಶ್ವರನ ಹುಂಡಿಯಲ್ಲಿ ಇತಿಹಾಸದಲ್ಲಿ ಮೊದಲ ಬಾರಿಗೆ ದಾಖಲೆ ಕಾಣಿಕೆ ಸಂಗ್ರಹ..!

ಹನೂರು, ಡಿ.25- ತಾಲ್ಲೂಕಿನ ಶ್ರೀ ಕ್ಷೇತ್ರ ಮಲೈ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ ನಡೆದಿದ್ದು, 42 ದಿನಗಳಲ್ಲಿ 1.92 ಕೋಟಿ ರೂ. ನಗದು ಸಂಗ್ರಹವಾಗಿದ್ದು, ಚಿನ್ನ ಮತ್ತು ಬೆಳ್ಳಿ ಸಂಗ್ರಹಣೆಯಲ್ಲಿ ದೇವಸ್ಥಾನದ ಇತಿಹಾಸದಲ್ಲಿ ಐತಿಹಾಸಿಕ ದಾಖಲೆ ನಿರ್ಮಿಸಿದೆ. ಮ.ಬೆಟ್ಟದ ಖಾಸಗಿ ಬಸ್ ನಿಲ್ದಾಣದ ವಾಣಿಜ್ಯ ಸಂಕೀರ್ಣದಲ್ಲಿ ಜರುಗಿದ ಹುಂಡಿ ಎಣಿಕೆ ಕಾರ್ಯವು ಸಾಲೂರು ಬೃಹನ್ಮಠದ ಶಾಂತಮಲ್ಲಿಕಾರ್ಜುನ ಸ್ವಾಮಿಗಳ ಸಮಕ್ಷಮದಲ್ಲಿ ನಡೆಯಿತು. ಭಕ್ತಾದಿಗಳು ಹರಕೆ ರೂಪದಲ್ಲಿ ಸಲ್ಲಿಸಿದ ಕಾಣಿಕೆ 42 ದಿನಗಳಲ್ಲಿ …

Read More »

29ರಂದು ಬಿಎಸ್‍ವೈ-ಷಾ ಭೇಟಿ, ಸಂಕ್ರಾಂತಿಗೆ ಸಂಪುಟಕ್ಕೆ ಸರ್ಜರಿ ಫಿಕ್ಸ್..?

ಬೆಂಗಳೂರು,ಡಿ.25- ಕಳೆದ ಹಲವು ತಿಂಗಳಿನಿಂದ ನೆನೆಗುದಿಗೆ ಬಿದ್ದಿರುವ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುನ್ನೆಲೆಗೆ ಬಂದಿದ್ದು, ಸಂಕ್ರಾಂತಿ ಹಬ್ಬದ ನಂತರ ವಿಸ್ತರಣೆಯಾಗುವ ಸಾಧ್ಯತೆಯಿದೆ. ಇದಕ್ಕೆ ಪುಷ್ಟಿ ನೀಡುವಂತೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರ ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಬೀಡುಬಿಟ್ಟು ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿಯಾಗಿ ಕರ್ನಾಟಕದ ಬೆಳವಣಿಗೆಗಳ ಕುರಿತಂತೆ ವಿಜಯೇಂದ್ರ ಮಾತುಕತೆ …

Read More »

” ಬೆಳಗಾವಿ” ಯನ್ನು” ಬೆಳಗಾಂ” ಎಂದು ಕರೆಯುವದು ಸರಿಕಾಣಿಸುವದಿಲ್ಲ. ಮಾನ್ಯ ಶ್ರೀ ಡಿ.ಕೆ.ಶಿವಕುಮಾರ: ಅಶೋಕ ಚಂದರಗಿ

ಮಾನ್ಯ ಶ್ರೀ ಡಿ.ಕೆ.ಶಿವಕುಮಾರ ಅಧ್ಯಕ್ಷರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪಕ್ಷದ ಚಿನ್ಹೆಯ ಮೇಲೆ ಅಭ್ಯರ್ಥಿಗಳನ್ನು ನಿಲ್ಲಿಸಲು ತಾವು ಒಂದು ಸಮಿತಿಯನ್ನು ರಚಿಸಿದ್ದೀರಿ. ಈ ಬಗ್ಗೆ ಚುನಾವಣೆ ಬಂದಾಗ ನಾವು ನಮ್ಮ ನಿಲುವನ್ನು ಸೂಕ್ತ ಸಮಯದಲ್ಲಿ ಹೇಳುತ್ತೇವೆ. ಆದರೆ ಒಂದು ಜವಾದ್ಬಾರಿಯುತ ಪಕ್ಷವಾಗಿ ತಾವು ” ಬೆಳಗಾವಿ” ಯನ್ನು” ಬೆಳಗಾಂ” ಎಂದು ಕರೆಯುವದು ಹಾಗೂ ತಮ್ಮ ಅಧಿಕೃತ ಪ್ರಕಟಣೆಗಳಲ್ಲಿ ಬರೆಯುವದು ಸರಿಕಾಣಿಸುವದಿಲ್ಲ.ಅಚ್ಚರಿಯೆಂದರೆ ತಮ್ಮ ಸರಕಾರವಿದ್ದಾಗಲೇ2015 …

Read More »

ಗೋಕಾಕ ಫಾಲ್ಸ್ ಅತೀ ಶೀಘ್ರದಲ್ಲಿ ದೊಡ್ಡ ಮಾದರಿಯ ಪ್ರವಾಸಿ ತಾಣ ವಾಗಲಿದೆ -. ರಮೇಶ್ ಜಾರಕಿಹೊಳಿ

: ಗೋಕಾಕ: ಗೋಕಾಕ ಅಭಿವೃದ್ಧಿ ಆಗುತ್ತಿದೆ ಸಚಿವ ರಮೇಶ್ ಜಾರಕಿಹೊಳಿ ಗೋಕಾಕ ನಗರವನ್ನು ಫಾರಿನ್ ಮಾದರಿಯಲ್ಲಿ ನಿರ್ಮಾಣ ಮಾಡಲಿದ್ದೇವೆ ಎಂದು ಇಂದು ಸುದ್ದಿ ಗಾರ ರೊಂದಿಗೆ ಮಾತನಾಡಿದಾಗ ಹೇಳಿದರು, ಗೋಕಾಕ ಫಾಲ್ಸ್ ಬ್ರಿಡ್ಜ್ ಕಾಮಗಾರಿ ಪ್ರಗತಿ ಯಲ್ಲ್ಲಿದೆ ಇನ್ನು ಇದು ಒಂದು ವರೆ ವರ್ಷದಲ್ಲಿ ಮುಗಿಯ ಬಹುದು ಈಗಾಗಲೇ 300ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ, ಹರಿದ್ವಾರ ಮಾದರಿ ಘಾಟ ನಿರ್ಮಾಣ ಮಾಡಿ, ಪ್ರಯಾಣಿಕರಿಗೆ ಅನಕ್ಕೂಲಕ್ಕ ತಕ್ಕ ಹಾಗೆ …

Read More »

ಕೆಎಲ್‌ಇ ಸಂಸ್ಥೆಯು ಕಲ್ಪನೆ ಮೀರಿ ಬೆಳೆದಿದೆ.:500 ಕೋಟಿ ರೂ ವೆಚ್ಚದಲ್ಲಿ ಕಾಲೇಜು ಆರಂಭ – ಡಾ.ಪ್ರಭಾಕರ ಕೋರೆ

ಹುಬ್ಬಳ್ಳಿ – ಕೆಎಲ್‌ಇ ಸಂಸ್ಥೆಯು ಕಲ್ಪನೆ ಮೀರಿ ಬೆಳೆದಿದೆ. ಸಪ್ತರ್ಷಿಗಳ ಕೊಡುಗೆ, ಮಹಾದಾನಿಗಳ ಸೇವಾ ಮನೋಭಾವ, ಡಾ.ಪ್ರಭಾಕರ ಕೋರೆ ಹಾಗೂ ತಂಡದವರ ಪರಿಶ್ರಮದಿಂದ ಕೆಎಲ್‌ಇ ಸಂಸ್ಥೆ ಜಾಗತಿಕ ಮನ್ನಣೆಗೆ ಪಾತ್ರವಾಗಿದೆ ಎಂದು ಕೇಂದ್ರ ಕಲ್ಲಿದ್ದಲು, ಸಂಸದೀಯ ವ್ಯವಹಾರ ಹಾಗೂ ಗಣಿ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಅವರು ಕೆಎಲ್‌ಇ ವಿಶ್ವವಿದ್ಯಾಲಯವು (ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಆಂಡ್ ರಿಸರ್ಚ್) ಹುಬ್ಬಳ್ಳಿಯ ಗಬ್ಬೂರ ಕ್ರಾಸ್‌ದಲ್ಲಿ ಗುರುವಾರ ಆಯೋಜಿಸಿದ್ದ ’ಕೆಎಲ್‌ಇ ಜಗದ್ಗುರು ಗಂಗಾಧರ …

Read More »

ಪಪುವಾ ನ್ಯೂಗಿನಿಯಲ್ಲಿ, ಶೇಕಡಾ 70 ರಷ್ಟು ಮಹಿಳೆಯರು ಅತ್ಯಾಚಾರ ಅಥವಾ ಲೈಂಗಿಕ ದೌರ್ಜನ್ಯಕ್ಕೆ ಬಲಿಯಾಗುತ್ತಾರೆ.

ನವದೆಹಲಿ: Bizarre Tradition- ಪ್ರಪಂಚದ ವಿವಿಧ ಪ್ರದೇಶಗಳಲ್ಲಿ ಅನೇಕ ರೀತಿಯ ವಿಚಿತ್ರ ಸಂಪ್ರದಾಯಗಳು ಜಾರಿಯಲ್ಲಿದ್ದು, ಅವು ಇಂದಿನ ಕಾಲದಲ್ಲಿ ಮನುಕುಳವನ್ನೇ ಬೆಚ್ಚಿಬೀಳಿಸುತ್ತವೆ. ಇಂತಹ ವಿಚಿತ್ರ ಸಂಪ್ರದಾಯಗಳ ಬಗ್ಗೆ ಆಗಾಗ ಸುದ್ದಿ ಹೊರಬರುತ್ತಲೇ ಇರುತ್ತವೆ. ಸಮಾಜದಲ್ಲಿ ಋತುಚಕ್ರ ಮತ್ತು ಲೈಂಗಿಕತೆಯ ಬಗ್ಗೆ ಅನೇಕ ಅಪನಂಬಿಕೆಗಳು ಮತ್ತು ಮಿಥ್ ಗಳಿವೆ.  ಇಂತಹುದೇ ಒಂದು ಮೈನಡುಕ ಹುಟ್ಟಿಸುವ ವಿಚಿತ್ರ ಸಂಪ್ರದಾಯದ ಕುಳಿತು ತಿಳಿದುಕೊಳ್ಳೋಣ ಬನ್ನಿ.ಶಾರೀರಿಕ ಸಂಬಂಧ ಬೆಳೆಸಲು ಸಂಪ್ರದಾಯ ಸಮಾಜದಲ್ಲಿ ಋತುಚಕ್ರಕ್ಕೆ ಸಂಬಂಧಿಸಿದಂತೆ ಹಲವು ವಿಚಿತ್ರ …

Read More »

ವೈಕುಂಠ ಏಕಾದಶಿಯ ಆಚರಣೆ, ಮಹತ್ವ ಮತ್ತು ವಿಶೇಷತೆಯನ್ನು ತಿಳಿಯಿರಿ

ಹಿಂದೂ ಪಂಚಾಗದಲ್ಲಿ ಏಕಾದಶಿ ದಿನಕ್ಕೆ ಹೆಚ್ಚು ಮಹತ್ವವನ್ನು ನೀಡಲಾಗಿದೆ. ಏಕಾದಶಿಯು ತಿಂಗಳಿನಲ್ಲಿ ಎರಡು ಬಾರಿ ಬರುತ್ತದೆ. ಆದರೆ ಧನುರ್ಮಾಸದಲ್ಲಿ (ಡಿಸೆಂಬರ್-ಜನವರಿ) ಬರುವ ಏಕಾದಶಿಯು ವಿಶೇಷವಾಗಿದ್ದು, ಇದನ್ನು ವೈಕುಂಠ ಏಕಾದಶೀ ಎಂದು ಕರೆಯಲಾಗುತ್ತದೆ. ಇದು ದಕ್ಷಿಣ ಭಾರತದ ಪ್ರಮುಖ ಉತ್ಸವಗಳಲ್ಲಿ ಒಂದಾಗಿದ್ದು ಎಲ್ಲ ವಿಷ್ಣು ಮಂದಿರಗಳಲ್ಲಿ ಆಚರಿಸಲಾಗುತ್ತದೆ. ಶ್ರೀ ಸಂಪ್ರದಾಯದ ಶ್ರೇಷ್ಠ ಭಕ್ತರಲ್ಲಿ ಒಬ್ಬರಾದ ನಮ್ಮಾಳ್ವಾರ್ ಅವರು ಇದೇ ದಿನ ಭಗವದ್ಧಾಮಕ್ಕೆ ಹಿಂದಿರುಗಿದರು. ಇದರ ಸಂಸ್ಮರಣೆಯಾಗಿ, ವಿಷ್ಣು ಮಂದಿರಗಳಲ್ಲಿ, ದೇವಸ್ಥಾನದ ಉತ್ತರ …

Read More »

ಕರ್ತವ್ಯಲೋಪ ಎಸಗಿದ ಪೊಲೀಸ್ ಇನ್ಸ್ ಪೆಕ್ಟರ್ ಗೆ ಒಂದು ವಾರಗಳ ತನಕ ರಸ್ತೆ ಸ್ವಚ್ಛಗೊಳಿಸುವ ಶಿಕ್ಷೆ: ಕಲಬುರ್ಗಿ  ಹೈಕೋರ್ಟ್

ಬೆಂಗಳೂರು : ಕರ್ತವ್ಯಲೋಪ ಎಸಗಿದ ಪೊಲೀಸ್ ಇನ್ಸ್ ಪೆಕ್ಟರ್ ಗೆ ಒಂದು ವಾರಗಳ ತನಕ ರಸ್ತೆ ಸ್ವಚ್ಛಗೊಳಿಸುವ ಶಿಕ್ಷೆ ನೀಡಿ ಕಲಬುರ್ಗಿ  ಹೈಕೋರ್ಟ್ ವಿಭಾಗೀಯ ಪೀಠ (Kalburgi Bench) ಆದೇಶ ನೀಡಿದೆ. ಮಗ ನಾಪತ್ತೆಯಾಗಿದ್ದಾನೆ ಎಂದು ದೂರು ನೀಡಲು ತೆರಳಿದ ಮಹಿಳೆಯಿಂದ ದೂರು ಸ್ವೀಕರಿಸಲು ಮತ್ತು ತನಿಖೆ ನಡೆಸಲು ವಿಫಲವಾದ ಪೊಲೀಸ್ ಇನ್ಸ್ ಪೆಕ್ಟರ್ ಗೆ ರಾಜ್ಯ ಹೈಕೋರ್ಟ್ ಈ ಅಪರೂಪದ ಶಿಕ್ಷೆ ಪ್ರಕಟಿಸಿದೆ. ಮುಂದಿನ ಒಂದು ವಾರಗಳ ತನಕ ಠಾಣೆಯ …

Read More »

“ಮತ ರಾಜಕಾರಣ” ಮಾಡುವ ಬದಲು ಸರ್ಕಾರವು ನಾಡಿನ ಭಾಷೆಯಾದ ಕನ್ನಡಕ್ಕಾಗಿಯೇ ಇರುವ ಏಕೈಕ ವಿವಿ: ಸಾಮಾಜಿಕ ಹೋರಾಟಗಾರರು, ಚಿತ್ರರಂಗದ ಗಣ್ಯರು,ಗೆ ಅನುದಾನವನ್ನು ಸಕಾಲದಲ್ಲಿ ಬಿಡುಗಡೆ ಮಾಡಬೇಕು

ಬೆಂಗಳೂರು; ಜಾತಿಗಳಿಗೆ, ಮಠಗಳಿಗೆ ಕೋಟ್ಯಾಂತರ ಹಣವನ್ನು ನೀಡುತ್ತಾ “ಮತ ರಾಜಕಾರಣ” ಮಾಡುವ ಬದಲು ಸರ್ಕಾರವು ನಾಡಿನ ಭಾಷೆಯಾದ ಕನ್ನಡಕ್ಕಾಗಿಯೇ ಇರುವ ಏಕೈಕ ವಿವಿಗೆ ಅನುದಾನವನ್ನು ಸಕಾಲದಲ್ಲಿ ಬಿಡುಗಡೆ ಮಾಡಬೇಕು. ಈ ಮೂಲಕ ಕನ್ನಡದ ಸಂಶೋಧನೆಗಳು, ಕನ್ನಡದ ಹಳಮೆಯನ್ನು ಸಾಧಿಸುತ್ತಲೇ ಕನ್ನಡದ ನಾಳೆಯನ್ನು ಕಟ್ಟಬಹುದಾದ ಕನ್ನಡದ್ದೇ ಕೆಲಸಗಳನ್ನು ಮಾಡಲು ಆದ್ಯತೆ ನೀಡಬೇಕು. ತುರ್ತಾಗಿ ಕನ್ನಡ ವಿಶ್ವವಿದ್ಯಾಲಯಕ್ಕೆ ಅನುದಾನ ಬಿಡುಗಡೆ ಮಾಡಬೇಕು ಎಂದು ಚಲನಚಿತ್ರ ನಿರ್ದೇಶಕ, ರಂಗಕರ್ಮಿ ಬಿ.ಸುರೇಶ ಆಗ್ರಹಿಸಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ …

Read More »

ನಾ ಕಾವೂಂಗಾ, ನಾ ಕಾನೇ ದೂಂಗಾ’ ಎಂದು ಘೋಷಿಸಿದ್ದ ಪ್ರಧಾನಿ ನರೇಂದ್ರಮೋದಿಯವರಿಗೆ ಅವರದ್ದೇ ಪಕ್ಷದ ಮುಖ್ಯಮಂತ್ರಿಯವರ ಮೇಲಿನ ಈ ಗಂಭೀರ ಆರೋಪ ಕಣ್ಣಿಗೆ ಕಾಣುತ್ತಿಲ್ಲವೇ? :

ಕೆಐಎಡಿಬಿ ಜಮೀನಿನ ಡಿನೋಟಿಫಿಕೇಷನ್ ಆರೋಪದ ತನಿಖೆಯ ರದ್ದತಿಗೆ ರಾಜ್ಯ ಹೈಕೋರ್ಟ್ ನಿರಾಕರಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ತಕ್ಷಣ ರಾಜೀನಾಮೆ ನೀಡಿ ಮುಕ್ತ ಮತ್ತು ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಬೇಕು. ‘’ ಬಿ.ಎಸ್. ಯಡಿಯೂರಪ್ಪ ಕಾನೂನುಬಾಹಿರವಾಗಿ ಜಮೀನನ್ನು ಡಿನೋಟಿಫೈ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಅವರ ವಿರುದ್ಧದ ಆರೋಪಗಳು Cognizable offence ಆಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಡಿಸೆಂಬರ್ 22ರ ಆದೇಶದಲ್ಲಿ ಹೈಕೋರ್ಟ್ ಹೇಳಿರುವುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ. ಕೆಐಎಡಿಬಿ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ …

Read More »