Breaking News

ಜನರನ್ನು ಭೀತಿಗೊಳಿಸಬೇಡಿ, ವೈಜ್ಞಾನಿಕವಾಗಿ ನಡೆದುಕೊಳ್ಳುವಂತೆ ಮಾಡಿ:CMಗೆ ಸಿದ್ದರಾಮಯ್ಯ ಪತ್ರ

ಬೆಂಗಳೂರು : ಕೋವಿಡ್‍ನ ಎರಡನೇ ಅಲೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಅತ್ಯಂತ ವೈಜ್ಞಾನಿಕವಾದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಿದೆ. ಜನರನ್ನು ಹೆಚ್ಚು ಭೀತಿಗೆ ಒಳಪಡಿಸದೇ ಆರ್ಥಿಕ ಚಟುವಟಿಕೆಗಳನ್ನು ನಿರ್ಬಂಧಿಸದೆ ಜನರು ವೈಜ್ಞಾನಿಕವಾಗಿ ನಡೆದುಕೊಳ್ಳುವಂತೆ ತಿಳುವಳಿಕೆಯನ್ನು ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ಕಡ್ಡಾಯವಾಗಿ ಮಾಸ್ಕ್ ಧರಿಸುವ, ಸ್ಯಾನಿಟೈಸರ್ ಬಳಸುವ, ಸಣ್ಣ ರೋಗ ಲಕ್ಷಣಗಳು ಕಂಡು ಬಂದರೂ …

Read More »

ಮೇಯಲ್ಲಿ ಚುನಾವಣೆ ಕಷ್ಟ ?

ಬೆಂಗಳೂರು: ಚುನಾವಣೆಗಳನ್ನು ಮುಂದೂಡುವುದಿಲ್ಲ ಎಂದು ಸರಕಾರ ಹೇಳುತ್ತಿದೆ, ನಿಗದಿತ ಅವಧಿಯೊಳಗೆ ಚುನಾವಣೆ ನಡೆಸಿಯೇ ಸಿದ್ಧ ಎಂದು ರಾಜ್ಯ ಚುನಾವಣ ಆಯೋಗ ಸಿದ್ಧತೆ ಮಾಡಿಕೊಳ್ಳುತ್ತಿದೆ. ಆದರೆ ಕ್ಷೇತ್ರ ಮರುವಿಂಗಡಣೆ, ಮೀಸಲಾತಿಗೆ ಸಂಬಂಧಿಸಿದ ಸದ್ಯದ ಬೆಳವಣಿಗಳನ್ನು ಗಮನಿಸಿದರೆ ಮೇ ತಿಂಗಳಿನಲ್ಲಿ ಜಿ.ಪಂ. ಮತ್ತು ತಾ.ಪಂ. ಚುನಾವಣೆ ನಡೆಯುವುದು ಅನುಮಾನ. ಜಿ.ಪಂ. ಮತ್ತು ತಾ.ಪಂ.ಗಳಿಗೆ ಸದಸ್ಯ ಸ್ಥಾನಗಳ ಸಂಖ್ಯೆ ನಿಗದಿಪಡಿಸಿ ಚುನಾವಣ ಆಯೋಗ ಮಾ. 24ರ ಬುಧವಾರ ಅಧಿಸೂಚನೆ ಹೊರಡಿಸಿದೆ. ಇದರ ಬಳಿಕ ಸದಸ್ಯ …

Read More »

ಕೋವಿಡ್: ಮತ್ತಷ್ಟು ಕ್ರಮ

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕಾಗಿ ಸರಕಾರವು ಎಲ್ಲ ಹಬ್ಬಗಳ ಸಾರ್ವಜನಿಕ ಆಚರಣೆಯ ಮೇಲೆ ನಿರ್ಬಂಧ ಹೇರಿ ಆದೇಶ ಹೊರಡಿಸಿದೆ. ಹೊಸ ಆದೇಶದಂತೆ ಮುಂಬರುವ ಯುಗಾದಿ, ಹೋಳಿ, ಷಬ್‌-ಎ- ಬರಾತ್‌, ಗುಡ್‌ ಫ್ರೈಡೇ ಸಹಿತ ಹಲವು ಹಬ್ಬಗಳು ಮತ್ತು ಸಂಬಂಧಿತ ಸಮಾರಂಭಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಆಚರಿಸಬಾರದು. ಈ ಹಬ್ಬಗಳ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳ, ಮೈದಾನ, ಉದ್ಯಾನವನ, ಮಾರುಕಟ್ಟೆ, ಧಾರ್ಮಿಕ ಪ್ರದೇಶಗಳು ಮತ್ತಿತರ ಕಡೆಗಳಲ್ಲಿ ಸಭೆ-ಸಮಾರಂಭ ನಡೆಸದಂತೆ ಸೂಚಿಸಲಾಗಿದೆ. ನಿಯಮ ಉಲ್ಲಂ‍ಘಿಸುವವರ ವಿರುದ್ಧ ವಿಪತ್ತು …

Read More »

ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟ, ಕೊರೋನಾ 2 ನೇ ಅಲೆ ಆರ್ಭಟ ತಡೆಗೆ ಹಬ್ಬ ಆಚರಣೆಗೆ ನಿರ್ಬಂಧ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಎರಡನೇ ಅಲೆ ಆರ್ಭಟದ ಹಿನ್ನೆಲೆಯಲ್ಲಿ ಮುಂದಿನ ಹಬ್ಬ-ಹರಿದಿನ ಆಚರಣೆಗೆ ಮಾರ್ಗಸೂಚಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಆಚರಣೆ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ. ಯುಗಾದಿ ಹಬ್ಬ, ಹೋಳಿ ಹಬ್ಬ, ಗುಡ್ ಫ್ರೈಡೇ, ಶಬ್ ಎ ಬರಾತ್ ಮೊದಲಾದ ಹಬ್ಬಗಳಂದು ಸಾರ್ವಜನಿಕ ಸ್ಥಳಗಳಲ್ಲಿ ಆಚರಣೆ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ. ಸಾರ್ವಜನಿಕ ಸ್ಥಳಗಳು, ಮೈದಾನ, ಮಾರ್ಕೆಟ್, ಪಾರ್ಕ್, ಪ್ರಾರ್ಥನಾ ಮಂದಿರಗಳಲ್ಲಿ ಆಚರಿಸುವುದಕ್ಕೆ ನಿಷೇಧ …

Read More »

ಬಿಪಿಎಲ್ ಕಾರ್ಡುದಾರರಿಗೆ ಉಚಿತವಾಗಿ ನೀಡುತ್ತಿರುವ ಅಕ್ಕಿಯ ಪ್ರಮಾಣ ಕಡಿತ

ಬೆಂಗಳೂರು: ಆರ್ಥಿಕ ಹೊರೆ ತಗ್ಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡುದಾರರಿಗೆ ಉಚಿತವಾಗಿ ನೀಡುತ್ತಿರುವ ಅಕ್ಕಿಯ ಪ್ರಮಾಣವನ್ನು ಕಡಿತಗೊಳಿಸಿದೆ. ಇದಾದ ನಂತರದಲ್ಲಿ ಅಂತ್ಯೋದಯ ಕಾರ್ಡ್ ಅಕ್ಕಿಯನ್ನು ಕೂಡ ಕಡಿತ ಮಾಡಲು ನಿರ್ಧರಿಸಲಾಗಿದ್ದು 35 ಕೆಜಿ ಅಕ್ಕಿಯ ಬದಲು 15 ಕೆಜಿ ಅಕ್ಕಿ ಜೊತೆಗೆ 20 ಕೆಜಿ ರಾಗಿ ವಿತರಣೆ ಮಾಡಲಾಗುವುದು ಎಂದು ಹೇಳಲಾಗಿದೆ. ಅಂತ್ಯೋದಯ ಕಾರ್ಡ್ ಫಲಾನುಭವಿಗಳಿಗೆ ಪ್ರತಿ ತಿಂಗಳು 35 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತದೆ. …

Read More »

ವಿದ್ಯಾರ್ಥಿಗಳೇ ಗಮನಿಸಿ: ರದ್ದಾಗಿದೆ ಈ 7 ಬಿ.ಇಡಿ ಕಾಲೇಜುಗಳ ಮಾನ್ಯತೆ

ಬಿ.ಇಡಿ ವ್ಯಾಸಂಗ ಮಾಡಬಯಸುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿ ರಾಜ್ಯದ 7 ಬಿ.ಇಡಿ ಕಾಲೇಜುಗಳ ಮಾನ್ಯತೆಯನ್ನು ರದ್ದುಗೊಳಿಸಿದ್ದು, ಜೊತೆಗೆ ಎರಡು ಕಾಲೇಜುಗಳಲ್ಲಿ ಸೀಟುಗಳ ಸಂಖ್ಯೆಯನ್ನು ಕಡಿತಗೊಳಿಸಿದೆ. ಮಾನ್ಯತೆ ರದ್ದುಗೊಂಡಿರುವ ಕಾಲೇಜುಗಳ ಪಟ್ಟಿ ಇಂತಿದ್ದು, ಬೆಳಗಾವಿಯ ಕೆಎಸ್‌ಆರ್ ಕಾಲೇಜ್ ಆಫ್ ಎಜುಕೇಶನ್ ಹಾಗೂ ಶ್ರೀ ಸಿದ್ಧಿವಿನಾಯಕ ರೂರಲ್ ಕಾಲೇಜ್, ವಿಜಯಪುರದ ಎಸ್ ಎಂ ಆರ್ ಕೆ ಮಹಿಳಾ ವಿದ್ಯಾವರ್ಧಕ ಕಾಲೇಜ್ ಆಫ್ ಎಜುಕೇಶನ್, ಶ್ರೀ ಫುಲ್ಸಿಂಗ್ …

Read More »

ಮಾಧ್ಯಮ ಕಣ್ಗಾವಲು ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಭೇಟಿ

ಬೆಳಗಾವಿ: ಬೆಳಗಾವಿ ಲೋಕಸಭಾ ಉಪ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣೆಗೆ ಸಂಬಂಧಿಸಿದ ಸುದ್ದಿ ಮತ್ತು ಜಾಹೀರಾತುಗಳ ಮೇಲೆ ನಿಗಾ ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ.ಹರಿಶ್ ಕುಮಾರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಉಪ ಚುನಾವಣೆ ಹಿನ್ನೆಲೆಯಲ್ಲಿ ನಗರದ “ವಾರ್ತಾಭವನ” ದಲ್ಲಿ ಆರಂಭಿಸಲಾಗಿರುವ ಮಾಧ್ಯಮ ಕಣ್ಗಾವಲು ಕೇಂದ್ರ(ಮೀಡಿಯಾ ಮಾನಿಟರಿಂಗ್ ಸೆಲ್)ಕ್ಕೆ ಗುರುವಾರ(ಮಾ.25) ಭೇಟಿ ನೀಡಿ ಅವರು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಪಕ್ಷ …

Read More »

ಕುಟುಂಬಕ್ಕೆ ಮಣೆ ಹಾಕುವುದಿಲ್ಲ ಎನ್ನುವ ಮಾತನ್ನು ಮೀರಿ ಸುರೇಶ ಅಂಗಡಿ ಅವರ ಪತ್ನಿಗೇ ಟಿಕೆಟ್ ನೀಡಲಾಗಿದೆ.

ಬೆಳಗಾವಿ – ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ದಿ.ಸುರೇಶ ಅಂಗಡಿ ಅವರ ಪತ್ನಿ ಮಂಗಲಾ ಅಂಗಡಿಗೆ ಟಿಕೆಟ್ ನೀಡಲಾಗಿದೆ. ಕುಟುಂಬಕ್ಕೆ ಮಣೆ ಹಾಕುವುದಿಲ್ಲ ಎನ್ನುವ ಮಾತನ್ನು ಮೀರಿ ಸುರೇಶ ಅಂಗಡಿ ಅವರ ಪತ್ನಿಗೇ ಟಿಕೆಟ್ ನೀಡಲಾಗಿದೆ.

Read More »

ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಮಾರ್ಚ್ 29ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಬೆನ್ನಲ್ಲೇ ಕೈ ನಾಯಕರ ಚುನಾವಣಾ ಸಿದ್ಧತೆ ಜೋರಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಮಾರ್ಚ್ 29ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಗಾವಿ ಉಪಚುನಾವಣಾ ಅಖಾಡ ರಂಗೇರುತ್ತಿದ್ದು, ಭಾನುವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕುಂದಾನಗರಿ ಬೆಳಗಾವಿಗೆ ಆಗಮಿಸಲಿದ್ದಾರೆ. ಮರುದಿನ, ಸೋಮವಾರ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಸಲಿದ್ದಾರೆ. ಡಿ.ಕೆ.ಶಿವಕುಮಾರ್ ಮಾರ್ಚ್ 28ರಿಂದ ಉತ್ತರ ಕರ್ನಾಟ ಭಾಗದಲ್ಲಿ ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ರಾಯಚೂರು ಹಾಗೂ …

Read More »

2 ನೇ ವಿಡಿಯೋ ಬಿಡುಗಡೆ ಆಗುವಷ್ಟರಲ್ಲಿ ಸಿಡಿ ಗರ್ಲ್ ಹೇರ್ ಕಟ್ ಚೇಂಜ್ !

ಬೆಂಗಳೂರು, ಮಾರ್ಚ್‌ 25: ಐದು ನೋಟಿಸ್ ಕೊಟ್ಟರೂ ವಿಚಾಣೆಗೆ ಹಾಜರಾಗದ ಸಿಡಿ ಗರ್ಲ್ ಎರಡನೇ ವಿಡಿಯೋದಲ್ಲಿ ಮಹತ್ವದ ಸಂಗತಿಯೊಂದು ಬೆಳಕಿಗೆ ಬಂದಿದೆ. ಆಕೆ ಈವರೆಗೂ ಬಿಡುಗಡೆ ಮಾಡಿರುವ ಎರಡು ವಿಡಿಯೋ ಹೇಳಿಕೆ ನೋಡಿದರೆ ಈ ಅಂಶ ಗಮನಿಸಬಹುದು. ಅಮೃಂತಾಜನ್/ವಿಕ್ಸ್ ಇಟ್ಟುಕೊಂಡು ಮೊದಲ ಹೇಳಿಕೆ ಬಿಡುಗಡೆ ಮಾಡಿದ್ದ ಸಿಡಿ ಗರ್ಲ್ ಈ ಬಾರಿ ತನ್ನ ಹೇರ್ ಸ್ಟೈಲ್ ಬದಲಿಸಿದ್ದಾರೆ. ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಣ್ಣು ಮಕ್ಕಳು ಹೆಚ್ಚಾಗಿ ಇಷ್ಟ ಪಡುವ ಫೆದರ್ ಹೇರ್ …

Read More »