Breaking News

ಸಿದ್ದರಾಮಯ್ಯನವರ ಚೇಲಾ ಎಂದ ಶ್ರೀನಿವಾಸ್ ಪ್ರಸಾದ್ ಸ್ನೇಹದ ಮಹತ್ವದ ವ್ಯತ್ಯಾಸ ಗೊತ್ತಿಲ್ಲ”

ಮಾನ್ಯ ಸಂಸದರಾದ ಶ್ರೀನಿವಾಸ್ ಪ್ರಸಾದ್ ಅವರಿಗೆ ಅತ್ಯಂತ ಗೌರವಪೂರ್ವಕವಾಗಿ ನೀಡಿದ ಪ್ರತಿಕ್ರಿಯೆಗೆ ಎದುರಾಗಿ ಶ್ರೀನಿವಾಸ್ ಪ್ರಸಾದ್ ಅವರು ಅತ್ಯಂತ ಕೀಳು ಮಟ್ಟದಲ್ಲಿ ಪ್ರತಿಕ್ರಿಯಿಸಿದ್ದು ನನ್ನನ್ನು ಸಿದ್ದರಾಮಯ್ಯನವರ ಚೇಲಾ ಎಂದು ಕರೆದಿದ್ದು ಒಂದು ಜಿಲ್ಲಾ ಪಂಚಾಯತ್ ಸ್ಥಾನವನ್ನೂ ಸಹ ಗೆಲ್ಲಲಾಗದವ ಎಂಬ ಮಾತನ್ನು ಆಡಿರುತ್ತಾರೆ. ಸ್ನೇಹದ ಮಹತ್ವದ ವ್ಯತ್ಯಾಸ ಗೊತ್ತಿಲ್ಲದೇ ಚೇಲಾ ಎಂಬ ಪದವನ್ನು :ಬಳಸಿರುವ ಸಂಸದರು ತಮ್ಮ ಸ್ಥಾನದ ಘನತೆಯನ್ನು ಅರಿತು ಮಾತನಾಡಬೇಕು. ಇಲ್ಲವಾದರೆ ಮುತ್ಸದ್ಧಿತನಕ್ಕೂ ಅವಿವೇಕತನಕ್ಕೂ ಅಂತಹ ವ್ಯತ್ಯಾಸ …

Read More »

ಕ್ಯಾನ್ಸರ್ ಪೀಡಿತ ಮಕ್ಕಳ ಸೇವೆಯಲ್ಲಿ ಲಯನ್ಸ್ ಕ್ಲಬ್.

ಅಂತರರಾಷ್ಟ್ರೀಯ ಮಟ್ಟದ ಸೇವಾ ಸಂಸ್ಥೆಯಾದ ಲಯನ್ಸ್ ಕ್ಲಬ್ ಸದಾ ಸಮಾಜದ ಪಿಡುಗುಗಳ ವಿರುದ್ಧ ಹೋರಾಡುತ್ತಾ ಸ್ವಸ್ಥ ಸಮಾಜಕ್ಕಾಗಿ ಪರಿಶ್ರಮಿಸುತ್ತಿರುವ ಸಂಸ್ಥೆ. ಲಯನ್ಸ್ ಸಂಸ್ಥೆ ಜಿಲ್ಲೆ 317F ವತಿಯಿಂದ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ, ಕ್ಯಾನ್ಸರ್ ಪೀಡಿತರಾಗಿ ತಮ್ಮ ಜೀವನದ ಕೊನೆಯ ಕ್ಷಣಗಳನ್ನು ಕಳೆಯುತ್ತಿರುವಂತಹ ಮಕ್ಕಳ ಮನೋರಂಜನೆಗಾಗಿ ಪ್ರತಿವರ್ಷದಂತೆ ಈ ವರ್ಷವೂ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಶ್ರೀಮತಿ ಶೋಭಾ ಶ್ರೀನಿವಾಸ್ ರವರು ಈ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಲಯನ್ಸ್ ಕ್ಲಬ್ ನ ಗೌರ್ನರ್ ದೀಪಕ್ ಸುಮನ್ …

Read More »

ರಸ್ತೆ ಮಾಡದಿದ್ರೆ ವೋಟ್ ಇಲ್ಲ ಐದು ಸರಿ ಚುನಾವಣೆ ಬಹಿಷ್ಕಾರ ಮಾಡಿದ ಗ್ರಾಮಸ್ಥರು

ಕೋಲಾರ: ರಸ್ತೆಗಾಗಿ ಗ್ರಾಮ ಪಂಚಾಯಿತಿ ಮತದಾನದಿಂದ ದೂರ ಉಳಿಯುವ ಮೂಲಕ ಗ್ರಾಮಸ್ಥರು ಬಹಿಷ್ಕಾರ ಹಾಕಿದ್ದಾರೆ. ಈ ಮೂಲಕ ಗ್ರಾಮಸ್ಥರು 5 ಚುನಾವಣೆ ಬಹಿಷ್ಕರಿಸಿದಂತಾಗಿದೆ.ಜಿಲ್ಲೆಯ ಮಾಲೂರು ತಾಲೂಕಿನ ಮತಗಟ್ಟೆ ಸಂಖ್ಯೆ 17 ಕಂಬಿಪುರ ಗ್ರಾಮಸ್ಥರು ಮತದಾನದಿಂದ ದೂರ ಉಳಿಯುವ ಮೂಲಕ ಬಹಿಷ್ಕಾರ ಹಾಕಿದರು. ಬೆಳಗ್ಗೆ 9 ಗಂಟೆಯಾದರೂ ಮತ ಕೇಂದ್ರದತ್ತ ಸುಳಿಯದ ಮತದಾರರು, ಬಹಿಷ್ಕಾರ ಹಾಕಿದ್ದಾರೆ. ಈ ಮೂಲಕ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಗ್ರಾಮಸ್ಥರು ಮತದಾನ ಬಹಿಷ್ಕಾರ ಮಾಡಿದರ ಹಿನ್ನೆಲೆಯಲ್ಲಿ ಮತಗಟ್ಟೆ …

Read More »

ಕೇಂದ್ರ ಗೃಹ ಮಂತ್ರಿ ಅವರಿಗೆ ಸುಳ್ಳು ಹೇಳುವುದು ಶೋಭೆ ತರಲ್ಲ: ಮಮತಾ ಬ್ಯಾನರ್ಜಿ ಬಿಜೆಪಿಗೆ ಗುದ್ದು ನೀಡಿದ್ದಾರೆ.

ಕೋಲ್ಕತ್ತಾ: ಕೇಂದ್ರ ಗೃಹ ಮಂತ್ರಿ ಅವರಿಗೆ ಸುಳ್ಳು ಹೇಳುವುದು ಶೋಭೆ ತರಲ್ಲ ಎಂದು ಹೇಳುವ ಮೂಲಕ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಬಿಜೆಪಿಗೆ ಗುದ್ದು ನೀಡಿದ್ದಾರೆ. ಇಂದಿನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬ್ಯಾನರ್ಜಿ ಬಿಜೆಪಿ ವಿರುದ್ಧ ವಾಗ್ದಾಳಿ ನಡಸಿದರು. ಗೃಹ ಮಂತ್ರಿಗಳಾದವರು ಸರಿಯಾದ ಅಂಕಿ ಅಂಶಗಳನ್ನಿಟ್ಟುಕೊಂಡು ಮಾತನಾಡಬೇಕು. ಶಾ ತಮ್ಮ ಪಕ್ಷ ಅಧಿಕಾರದಲ್ಲಿರುವ ರಾಜ್ಯಗಳ ಅಂಕಿ ಅಂಶಗಳನ್ನ ನೋಡಿಲ್ಲ. ರಾಜ್ಯದಲ್ಲಿ ನಡೆಯುವ ಆತ್ಮಹತ್ಯೆಗಳನ್ನ ಕೊಲೆ ಎಂದು ಬಿಂಬಿಸಿ ಸುಳ್ಳು …

Read More »

ನಾನು ಫೋಟೋಶೂಟ್ ಮಾಡಿಸಿದ್ದೆ ಅಷ್ಟೆ. ಆ ಫೋಟೋಗಳನ್ನು ಅಪ್ಲೋಡ್ ಮಾಡುತ್ತಿರುತ್ತೇನೆ. ಸದ್ಯ ನಾನು ಬೆಂಗಳೂರಿನಲ್ಲಿಯೇ ಇದ್ದೇನೆ.

ಬೆಂಗಳೂರು: ನಾನು ಬೆಂಗಳೂರಲ್ಲಿಯೇ ಇದ್ದೀನಿ. ಆರಾಮಾಗಿದ್ದೀನಿ ಎಂದು ನಟಿ ಹರ್ಷಿಕಾ ಪೂಣಚ್ಚ ಸ್ಪಷ್ಟಪಡಿಸಿದ್ದಾರೆ. ವಿಡಿಯೋ ಮೂಲಕ ಲಂಡನ್ ಪ್ರವಾಸದ ಬಗ್ಗೆ ಮಾಹಿತಿ ನೀಡಿರುವ ನಟಿ, ಹೌದು ನಾನು ಲಂಡನ್ ಗೆ ಹೋಗಿದ್ದೆ. ಆದರೆ ಎರಡು ವಾರಗಳ ಹಿಂದೆನೆ ನಾನು ಅಲ್ಲಿಂದ ವಾಪಸ್ ಬಂದಿದ್ದೇನೆ. ಮತ್ತೆ ಅಲ್ಲಿಗೆ ಹೋಗಲಿಲ್ಲ. ಲಂಡನ್ ನನಗೆ ತುಂಬಾ ಇಷ್ಟವಾದ ಜಾಗವಾಗಿರುವುದರಿಂದ ಆಗಾಗ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುತ್ತಿರುತ್ತೇನೆ. ಎಂದರು. ವಾರದ ಹಿಂದೆ ಅಲ್ಲಿ ನಾನು ಫೋಟೋಶೂಟ್ …

Read More »

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಮಲತಂದೆ ಮಗುವನ್ನೇ ಕೊಲೆ

ಮಡಿಕೇರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಮಲತಂದೆ ಮಗುವನ್ನೇ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ವೆಸ್ಟ್ ನೆಮ್ಮಲೆ ಗ್ರಾಮದಲ್ಲಿ ಘಟನೆ ನಡೆದಿದ್ದು, ಆರೋಪಿ ರವಿ ಐದು ವರ್ಷದ ಮಗುವನ್ನು ಕೊಂದಿದ್ದಾನೆ. ಮೈಸೂರು ಜಿಲ್ಲೆಯ ಹುಣುಸೂರಿನ ಲಕ್ಷ್ಮಿ ಎಂಬುವರ ಮಗುವನ್ನು ರವಿ ಕೊಲೆ ಮಾಡಿದ್ದಾನೆ. ಪತಿಯನ್ನು ಬಿಟ್ಟು ಬಂದ ಲಕ್ಷ್ಮಿ ರವಿಯೊಂದಿಗೆ ವಾಸವಿದ್ದಳು. ಕಳೆದ ಆರು ತಿಂಗಳಿಂದ ರವಿ ಹಾಗೂ ಲಕ್ಷ್ಮಿ ಒಟ್ಟಿಗೆ ಇದ್ದರು. ನಮ್ಮಿಬ್ಬರ …

Read More »

ಲೋಕೋಪಯೋಗಿ ಇಲಾಖೆಯಲ್ಲಿ ಹೊರಗುತ್ತಿಗೆ ಮೂಲಕ 950 ಎಂಜಿನಿಯರ್ ಗಳ ನೇಮಕ: ಗೋವಿಂದ ಕಾರಜೋಳ

ಧಾರವಾಡ(ಡಿಸೆಂಬರ್​​.22): ಲೋಕೋಪಯೋಗಿ ಇಲಾಖೆಯಲ್ಲಿ ಇಂಜಿನಿಯರ್ ಗಳ ಕೊರತೆ ಇದೆ, ಹೊರಗುತ್ತಿಗೆ ಮೂಲಕ 950 ಇಂಜಿನಿಯರ್ ಗಳನ್ನ ತೆಗೆದುಕೊಳ್ಳಲು ಕ್ರಮ ವಹಿಸಲಾಗಿದೆ. ಏಜೆನ್ಸಿಯಿಂದ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಲೋಕೋಪಯೋಗಿ ಸಚಿವ ಹಾಗೂ ಉಪಮುಖ್ಯ ಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ. ಧಾರವಾಡದಲ್ಲಿ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ‌ ಮಾತನಾಡಿ ಅವರು, ರಾಜ್ಯದಲ್ಲಿನ ಟೂರಿಸಂ ಪ್ರದೇಶಗಳಲ್ಲಿನ ಪ್ರವಾಸಿ ಮಂದಿರಗಳನ್ನು ಪ್ರವಾಸೋದ್ಯಮ ಇಲಾಖೆಗೆ ವಹಿಸಲಾಗುತ್ತದೆ. ಇದರಿಂದ ಪ್ರವಾಸಿಗರಿಗೆ ಅನುಕೂಲವಾಗಲಿದೆ. ಅಲ್ಲದೇ ಲೋಕೋಪಯೋಗಿ ಇಲಾಖೆಗೂ ಸಹ …

Read More »

ಬಿಜೆಪಿ-ಜೆಡಿಎಸ್ ವಿಲೀನ..? ರಾಜ್ಯದಲ್ಲಿ ಮತ್ತೊಮ್ಮೆ ರಾಜಕೀಯ ಧ್ರುವೀಕರಣ..!

ಬೆಂಗಳೂರು,ಡಿ.22- ರಾಜ್ಯದಲ್ಲಿ ಮತ್ತೊಮ್ಮೆ ರಾಜಕೀಯ ಧ್ರುವೀಕರಣದ ಮಾತುಗಳು ಕೇಳಿ ಬರುತ್ತಿದೆ. ರಾಜ್ಯದ ಏಕೈಕ ಪ್ರಭಾವಿ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಆಡಳಿತಾರೂಢ ಬಿಜೆಪಿಯೊಂದಿಗೆ ವಿಲೀನವಾಗುತ್ತದೆ ಎನ್ನುವ ಚರ್ಚೆ ಆರಂಭಗೊಂಡಿದೆ. ಸ್ವತಃ ಉಭಯ ಪಕ್ಷಗಳ ಪ್ರಮುಖ ನಾಯಕರೇ ನೇರವಾಗಿ ಸ್ಪಷ್ಟೀಕರಣ ನೀಡುತ್ತಿರುವುದು ಎರಡೂ ಪಕ್ಷಗಳ ನಡುವೆ ಏನೋ ನಡೆಯುತ್ತಿದೆ ಎನ್ನುವ ಅನುಮಾನಕ್ಕೆ ಪುಷ್ಟಿ ನೀಡಿದೆ. ಮೈತ್ರಿ ಸರ್ಕಾರ ಪತನಗೊಂಡು ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾದನಂತರ ಹಳೇ ದೋಸ್ತಿಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ …

Read More »

ಶಾಲೆಗಳು ಓಪನ್ ಆಗೋದು ಡೌಟ್..!ಡಾ.ಸುಧಾಕರ್

ಬೆಂಗಳೂರು, ಡಿ.22- ರಾಜ್ಯದಲ್ಲಿ ಜನವರಿ ಒಂದರಿಂದ ಶಾಲೆ ಪ್ರಾರಂಭಿಸಬೇಕೆ, ಬೇಡವೆ ಎಂಬ ವಿಚಾರ ಕುರಿತು ತಾಂತ್ರಿಕ ಸಲಹಾ ಸಮಿತಿ ವರದಿಯನ್ನು ಕೇಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ವೈರಾಣು ಹೊಸ ರೂಪಾಂತರ ಪಡೆದಿರುವ ಹಿನ್ನೆಲೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ವರದಿ ಕೇಳಿದ್ದು, ವರದಿ ಬಂದ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚೆ ಮಾಡಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು. …

Read More »

117 ತಾಲ್ಲೂಕುಗಳಲ್ಲಿ ಮೊದಲ ಹಂತದ ಗ್ರಾಮ ಸಮರ, ಎಲ್ಲೆಡೆ ಭರ್ಜರಿ ಮತದಾನ

ಬೆಂಗಳೂರು,ಡಿ.22- ಕೋವಿಡ್ ಆತಂಕದ ನಡುವೆ ರಾಜ್ಯದಲ್ಲಿ ಗ್ರಾಮ ಪಂಚಾಯ್ತಿಗಳ ಮೊದಲ ಹಂತದ ಚುನಾವಣೆಯ ಮತದಾನ ಇಂದು ಬಿರುಸಾಗಿತ್ತು.  ಅಲ್ಲಲ್ಲಿ ಮಾತಿನ ಚಕಮಕಿ, ಅಭ್ಯರ್ಥಿಗಳ ನಡುವೆ ಪರಸ್ಪರ ಆರೋಪ, ಪ್ರತ್ಯಾರೋಪ, ತಳ್ಳಾಟ-ನೂಕಾಟ, ಮತಪತ್ರಗಳ ದೋಷದಿಂದ ಹಲವೆಡೆ ಮತದಾನ ಸ್ಥಗಿತ, ಗುಂಪು ಚದುರಿಸಲು ಪೊಲೀಸರಿಂದ ಲಘು ಲಾಠಿ ಪ್ರಹಾರದಂತಹ ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿ 30 ಜಿಲ್ಲೆಗಳ 117 ತಾಲ್ಲೂಕುಗಳ 3,019 ಗ್ರಾಪಂಚಾಯ್ತಿಗಳಿಗೆ ನಡೆದ ಮತದಾನ ಬಹುತೇಕ ಶಾಂತಿಯುತವಾಗಿತ್ತು. ಗ್ರಾಮಪಂಚಾಯ್ತಿಗಳ 43,238 ಸ್ಥಾನಗಳಿಗೆ ಸ್ಪರ್ಧಿಸಿದ್ದ …

Read More »