ನವದೆಹಲಿ : ರೈತರ ಹೋರಾಟವನ್ನು ಬೆಂಬಲಿಸಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷ (ಎಎಪಿ)ದ ಶಾಸಕರು ವಿಧಾನಸಭೆಯಲ್ಲಿ ಕೇಂದ್ರದ ಮೂರು ಹೊಸ ಕೃಷಿ ಕಾನೂನುಗಳ ಪ್ರತಿಗಳನ್ನು ಹರಿದು ಹಾಕಿದರು ನಾನು ಮೊದಲು ಈ ದೇಶದ ಪ್ರಜೆ, ನಂತರ ಮುಖ್ಯಮಂತ್ರಿ ಕೇಂದ್ರದ ಹೊಸ ಕೃಷಿ ಕಾನೂನುಗಳನ್ನು ವಿರುದ್ಧ ಆಪ್ ಸರ್ಕಾರ ದೆಹಲಿ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದೆ. ವಿಧಾನಸಭೆಯನ್ನುದ್ದೇಶಿಸಿ ಮಾತನಾಡಿದ ಸಿಎಂ ಕೇಜ್ರಿವಾಲ್, ಬಿಜೆಪಿ ಚುನಾವಣೆಗಾಗಿ ಹಣ ಸಂಗ್ರಹಿಸಲು …
Read More »ಎರಡು ಗಂಟೆಯಲ್ಲಿ ಬರೋಬ್ಬರಿ 26.26 ಲಕ್ಷ ರೂ. ದಂಡವನ್ನು ಸಂಗ್ರಹಿಸಿದ್ದಾರೆ. ಸಂಚಾರಿ ಪೊಲೀಸರು
ಬೆಂಗಳೂರು: ಬೆಂಗಳೂರು ಸಂಚಾರಿ ಪೊಲೀಸರು ಕಾರ್ಯಾಚರಣೆ ನಡೆಸಿ ಎರಡು ಗಂಟೆಯಲ್ಲಿ ಬರೋಬ್ಬರಿ 26.26 ಲಕ್ಷ ರೂ. ದಂಡವನ್ನು ಸಂಗ್ರಹಿಸಿದ್ದಾರೆ. ಕೇವಲ ಎರಡು ಗಂಟೆಯಲ್ಲಿ ಬರೋಬ್ಬರಿ 5,672 ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, ಎರಡು ಗಂಟೆ ಅವಧಿಯಲ್ಲಿ 26,26,800 ರೂಪಾಯಿ ದಂಡ ಸಂಗ್ರಹಿಸಿದ್ದಾರೆ. ನಗರದ 44 ಸಂಚಾರ ಪೊಲೀಸ್ ಠಾಣೆಗಳಲ್ಲಿ 5,672 ಪ್ರಕರಣ ದಾಖಲಾಗಿವೆ. ನಿತ್ಯ ಇರುವ ಸ್ಥಳಗಳನ್ನು ಬಿಟ್ಟು ಬೇರೆ ಸ್ಥಳಗಳಲ್ಲಿ ನಿಂತು. ವಾಹನ ಸವಾರರಿಗೆ ಬಲೆ ಬೀಸಿದ್ದಾರೆ. …
Read More »ಜನಪದ ಕಲಾವಿದರು ತಮ್ಮ ಕಲೆಯ ಬಗೆಗೆ ಸ್ವಾಭಿಮಾನಿಗಳಾಗಿದ್ದು,
ಗೋಕಾಕ: ಜನಪದ ಕಲಾವಿದರು ತಮ್ಮ ಕಲೆಯ ಬಗೆಗೆ ಸ್ವಾಭಿಮಾನಿಗಳಾಗಿದ್ದು, ಆತ್ಮಗೌರವವುಳ್ಳವರಾಗಿರಬೇಕೆಂದು ಜಾನಪದತಜ್ಞ, ಕರ್ನಾಟಕ ಜಾನಪದ ಪರಿಷತ್ತಿನ, ಬೆಳಗಾವಿ ಜಿಲ್ಲಾಧ್ಯಕ್ಷ ಡಾ| ಸಿ.ಕೆ.ನಾವಲಗಿ ಅಭಿಪ್ರಾಯಿಸಿದರು. ಅವರು ನಗರದ ಸಿದ್ಧಾರ್ಥ ಲಲಿತ ಕಲಾ ಮಹಾವಿದ್ಯಾಲಯದಲ್ಲಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತೆ, ಬಯಲಾಟ ಹಿರಿಯ ಕಲಾವಿದೆ ಕೆಂಪವ್ವ ಹರಿಜನ ಇವರನ್ನು ಕಜಾಪದ ಪರವಾಗಿ ಸನ್ಮಾನಿಸಿ, ಮಾತನಾಡಿದ ಅವರು, ಕಲಾವಿದರಿಂದಲೇ ಕಲೆಗಳ ಉಳಿವು-ಬೆಳವಣಿಗೆ, ಸರಕಾರ-ಸಾರ್ವಜನಿಕರು ಕಲಾವಿದರನ್ನು ಪೋಷಿಸಬೇಕಾದ ಅಗತ್ಯವಿದೆಯೆಂದು ಮಾತನಾಡಿದರು. ಕಲಾವಿದರ ಬದುಕು ಕುರಿತು ಪ್ರಾ. …
Read More »ಮತ್ತೆ ಹೆಲಿಕಾಪ್ಟರ್ ಹಾರಿಸುತ್ತಿರುವುದಕ್ಕೆ ಸತೀಶ ಜಾರಕಿಹೊಳಿ ಕೊಟ್ಟ ಉತ್ತರ ಏನು..?
ಬೆಳಗಾವಿ ಲೋಕಸಭೆ ಬೈಎಲೆಕ್ಷನ್ಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನನ್ನ ಹೆಸರನ್ನು ಯಾರೂ ಮುಂಚೂಣಿಗೆ ತರುತ್ತಿಲ್ಲ. ಸಭೆಯಲ್ಲಿ ನನ್ನ ಹೆಸರು ಚರ್ಚೆ ಆಗಿದೆ ಹೀಗಾಗಿ ಬರುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. : ಬೆಳಗಾವಿ ಲೋಕಸಭೆಯಲ್ಲಿ ನಿಮ್ಮ ಹೆಸರು ಪದೇ ಪದೇ ಕೇಳಿ ಬರುತ್ತಿದೆ. ರಾಜ್ಯ ರಾಜ ರಾಜಕಾರಣದಿಂದ ನಿಮ್ಮನ್ನು ದೂರ ಮಾಡಲು ಏನಾದ್ರು ಷಡ್ಯಂತ್ರ ನಡೆದಿದೆಯಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಉತ್ತರಿಸಿದ …
Read More »ತಿಂಗಳಾಂತ್ಯದಲ್ಲಿ ಅಥವಾ ಜನವರಿ ಮೊದಲ ವಾರದಲ್ಲಿ ಸಂಪುಟ ವಿಸ್ತರಣೆ-ಸಚಿವ ರಮೇಶ ಜಾರಕಿಹೋಳಿ
ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆ ಸಂಪುಟ ವಿಸ್ತರಣೆಯಾಗಿದ್ದು, ಈ ತಿಂಗಳ ಕೊನೆಯ ವಾರದಲ್ಲಿ ಇಲ್ಲವೇ ಜನವರಿ ಮೊದಲ ವಾರದಲ್ಲಿ ಸಂಪುಟ ವಿಸ್ತರಣೆಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೋಳಿ ಹೇಳಿದರು. ಗುರುವಾರದಂದು ಬೆಳಗಾವಿಯಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿದ ಸಚಿವ ರಮೇಶ ಜಾರಕಿಹೊಳಿ ಪಂಚಾಯತ ಚುನಾವಣೆ ಹಿನ್ನೆಲೆ ಸಂಪುಟ ವಿಸ್ತರಣೆಗೆ ತಡವಾಗಿದೆ. ಈ ತಿಂಗಳ ಕೊನೆಯಲ್ಲಿ ಅಥವಾ ಜನವರಿ ಮೊದಲ ವಾರದಲ್ಲಿ ಆಗುವ ಸಾಧ್ಯತೆ ಇದೆ ಎಂದ್ರು. …
Read More »ಗಣರಾಜ್ಯೋತ್ಸವದಂದು ಹೊಸ ಬಾಬರಿ ಮಸೀದಿಗೆ ಶಂಕುಸ್ಥಾಪನೆ
ಅಯೋಧ್ಯ,,ಡಿ.17-ಬಾಬರಿ ಮಸೀದಿ ಸ್ಥಳದಿಂದ ಸ್ಥಳಾಂತರಿಸಿರುವ ಮಸೀದಿ ನಿರ್ಮಾಣ ಕಾರ್ಯಕ್ಕೆ ಗಣರಾಜ್ಯೋತ್ಸವದಂದು ಶಂಕು ಸ್ಥಾಪನೆ ನೆರವೇರಿಸಲು ತೀರ್ಮಾನಿಸಲಾಗಿದೆ. ಮಸೀದಿ ನಿರ್ಮಾಣಕ್ಕಾಗಿ ನೀಡಲಾಗಿರುವ ಐದು ಎಕರೆ ಪ್ರದೇಶದಲ್ಲಿ ಹೊಸ ಮಸೀದಿ ನಿರ್ಮಾಣ ಮಾಡಲು ಟ್ರಸ್ಟ್ ಸದಸ್ಯರು ತೀರ್ಮಾನಿಸಿದ್ದಾರೆ. ದೇಶದಲ್ಲಿ ಪ್ರಜಾಪ್ರಭುತ್ವ ಜಾರಿಗೆ ಬಂದ ದಿನವಾದ ಗಣರಾಜ್ಯೋತ್ಸವದಂದು ಏಕತೆ ಸಂಕೇತವಾಗಿ ಅಂದು ಮಸೀದಿ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಲಿದ್ದೇವೆ ಎಂದು ಇಂಡೋ ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ ಕಾರ್ಯದರ್ಶಿ ಅತ್ತಾರ್ ಹುಸೇನ್ ತಿಳಿಸಿದ್ದಾರೆ. ಮಸೀದಿ ನಿರ್ಮಾಣ …
Read More »ರೈಲ್ವೆ ಪ್ಲಾಟ್ಫಾರಂ ಟಿಕೆಟ್ ದರ ಹೆಚ್ಚಳಕ್ಕೆ ವ್ಯಾಪಕ ಆಕ್ರೋಶ
ಬೆಂಗಳೂರು, ಡಿ.17- ರೈಲಿನಲ್ಲಿ ಹೋಗುವವರನ್ನು ಬೀಳ್ಕೊಡಲು ಅಪ್ಪಿತಪ್ಪಿಯೂ ರೈಲ್ವೆ ನಿಲ್ದಾಣಗಳತ್ತ ತಲೆ ಹಾಕಬೇಡಿ. ಏಕೆಂದರೆ, ಬೆಂಗಳೂರಿನ ಪ್ರಮುಖ ರೈಲ್ವೆ ಪ್ಲಾಟ್ಫಾರಂಗಳ ಟಿಕೆಟ್ ದರವನ್ನು ಐದು ಪಟ್ಟು ಹೆಚ್ಚಿಸಲಾಗಿದೆ. ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ, ಕಂಟೋನ್ಮೆಂಟ್, ಯಶವಂತಪುರ, ಕೆಂಗೇರಿ, ಕೆಆರ್ ಪುರಂ, ಬಾಣಸವಾಡಿ, ಯಲಹಂಕ, ವೈಟ್ಫೀಲ್ಡ್, ಬೆಂಗಳೂರು ಹೊರತುಪಡಿಸಿ ಬಂಗಾರಪೇಟೆ, ತುಮಕೂರು, ಹೊಸೂರು, ಮಂಡ್ಯ ರೈಲ್ವೆ ನಿಲ್ದಾಣಗಳ ಪ್ಲಾಟ್ಫಾರಂ ಟಿಕೆಟ್ಗಳನ್ನು 10ರೂ.ನಿಂದ 50ರೂ.ಗೆ ಹೆಚ್ಚಿಸಲಾಗಿದೆ. ಇದು ನವೆಂಬರ್ 30 …
Read More »ಬಿಜೆಪಿ ರೈತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸಭೆಗೆ ಮುಹೂರ್ತ ನಿಗದಿ
ಬೆಂಗಳೂರು,ಡಿ.17-ಬಿಜೆಪಿ ರೈತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸಭೆಗೆ ಮುಹೂರ್ತ ನಿಗದಿಯಾಗಿದೆ. ರಾಜ್ಯಸಭಾ ಸದಸ್ಯರೂ ಆದ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅಧ್ಯಕ್ಷತೆಯಲ್ಲಿ ಇದೇ 19ರಂದು ಕೋರಮಂಗಲದ ಕಲಾದ್ವಾರಕಾ ಸಭಾಂಗಣದಲ್ಲಿ ಕಾರ್ಯಕಾರಿಣಿ ಸಭೆ ನಡೆಯಲಿದೆ. ಅಂದು ಬೆಳಿಗ್ಗೆ 10.30ಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್ ಅವರು ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕಾರಿಣಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇತ್ತೀಚೆಗೆ ಜಾರಿಗೊಳಿಸಿದ ರೈತಪರ ಕೃಷಿ ಸುಧಾರಣಾ ಮಸೂದೆಗಳನ್ನು ಬೆಂಬಲಿಸಿ ಅಭಿನಂದಿಸುವ …
Read More »ರಾಜ್ಯದಲ್ಲಿ ಈವರೆಗೆ ಮೂವರು ಡಿವೈಎಸ್ಪಿಗಳ ಆತ್ಮಹತ್ಯೆ
ಬೆಂಗಳೂರು, ಡಿ.17- ಕಳೆದ ರಾತ್ರಿ ಸಿಐಡಿ ಡಿವೈಎಸ್ಪಿ ವಿ.ಲಕ್ಷ್ಮೀ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣವೂ ಸೇರಿದಂತೆ ರಾಜ್ಯದಲ್ಲಿ ಈವರೆಗೂ ಮೂರು ಮಂದಿ ಡಿವೈಎಸ್ಪಿಗಳು ಆತ್ಮಹತ್ಯೆ ಮೂಲಕ ಜೀವ ಕಳೆದುಕೊಂಡಂತಾಗಿದೆ. ಲಕ್ಷ್ಮೀ ಅವರಿಗೂ ಮೊದಲು ಇಬ್ಬರು ಡಿವೈಎಸ್ಪಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು. ಆ ಎರಡು ಪ್ರಕರಣಗಳು ಭಾರೀ ಚರ್ಚೆಗೆ ಗ್ರಾಸವಾಗಿದ್ದವು. 2016 ಜುಲೈ 5ರಂದು ಚಿಕ್ಕಮಗಳೂರು ಗ್ರಾಮಾಂತರ ಉಪವಿಭಾಗದಲ್ಲಿ ಡಿವೈಎಸ್ಪಿ ಆಗಿದ್ದ ಕಲ್ಲಪ್ಪ ಹಂಡಿಬಾಗ್ ಬೆಳಗಾವಿ ಜಿಲ್ಲೆ ಸವದತ್ತಿ ತಾಲ್ಲೂಕಿನ ಮುರ್ಗೋಡು ಗ್ರಾಮದಲ್ಲಿರುವ …
Read More »ಹುಬ್ಬಳ್ಳಿಯಿಂದ ರಾಜಹಂಸ, ಸ್ಲೀಪರ್, ವೋಲ್ವೋ ಬಸ್ಗಳ ಪುನರಾರಂಭ
ಹುಬ್ಬಳ್ಳಿ (ಡಿ. 17): ಕೊರೋನಾ ಲಾಕ್ ಡೌನ್ ನಂತರ ದಿನ ಕಳೆದಂತೆ ದೂರ ಮಾರ್ಗದ ಬಸ್ಸುಗಳ ಪ್ರಯಾಣಿಕರ ಸಂಖ್ಯೆಯಲ್ಲಿ ಚೇತರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಳೆದ ಒಂಭತ್ತು ತಿಂಗಳಿಂದ ಸ್ಥಗಿತಗೊಂಡಿದ್ದ ಹೈದರಾಬಾದ್, ಸೊಲ್ಲಾಪುರ, ಮಂಗಳೂರು ಮತ್ತು ಬೆಂಗಳೂರಿಗೆ ಮತ್ತಷ್ಟು ಸ್ಲೀಪರ್, ವೋಲ್ವೊ ಮತ್ತು ರಾಜಹಂಸ ಬಸ್ಸುಗಳ ಸಂಚಾರವನ್ನು ಪುನರಾರಂಭಿಸಲಾಗಿದೆ. ಈ ಬಸ್ಗಳು ಗೋಕುಲ ರಸ್ತೆಯ ಬಸ್ ನಿಲ್ದಾಣದಿಂದ ಹೊರಡುತ್ತವೆ ಎಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. …
Read More »