Breaking News

ಕೇರಳ ಗಡಿ ದಾಟಲು ಯತ್ನ- ತಡೆದ ಪೊಲೀಸರ ಮೇಲೆ ಕಲ್ಲು ತೂರಾಟ

ಮಂಗಳೂರು: ಕೊರೊನಾ ಮುನ್ನೆಚ್ಚರಿಕೆ ಸಲುವಾಗಿ ವಾಹನಗಳ ತಪಾಸಣೆ ಮಾಡುತ್ತಿದ್ದ ಕರ್ತವ್ಯ ನಿರತ ಪೊಲೀಸರಿಗೆ ಹಲ್ಲೆ ಮಾಡಿ ತಪ್ಪಿಸಿಕೊಂಡ ಆರೋಪಿಯನ್ನು ಬಂಧಿಸಿ, ಆಸ್ಪತ್ರೆಗೆ ದಾಖಲು ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.     ಪೆಪ್ಪರೆಯ ಸಿನಾನ್ ಬಂಧಿತ ಆರೋಪಿಯಾಗಿದ್ದಾನೆ. ಎ.ಎಸ್.ಐ. ಭಾಸ್ಕರ್ ಪ್ರಸಾದ್ ಹಾಗೂ ಹೆಡ್ ಕಾನ್ಸ್ ಟೇಬಲ್ ರಾಮನಾಯ್ಕ ಅವರು ಜನ ಹಾಗೂ ವಾಹನಗಳ ತಪಾಸಣೆ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಸಿನಾನ್ …

Read More »

ನಮಾಜ್‍ಗೆ ತಡೆ- ಪೊಲೀಸರ ಮೇಲೆ ಕಲ್ಲು ತೂರಾಟ

ಹುಬ್ಬಳ್ಳಿ: ನಮಾಜ್ ವಿಷಯಕ್ಕೆ ಸಂಬಂಧಿಸಿದಂತೆ ಮುಸ್ಲಿಮರು ಮತ್ತು ಪೊಲೀಸ್ ಸಿಬ್ಬಂದಿಯ ಮಧ್ಯೆ ಗಲಾಟೆ ನಡೆದಿರುವ ಘಟನೆ ಹುಬ್ಬಳ್ಳಿ ಮಂಟೂರ್ ರೋಡ್ ಹತ್ತಿರದ ಅರಳಿಕಟ್ಟಿ ಕಾಲೋನಿ ಬಳಿ ನಡೆದಿದೆ.   ಲಾಕ್‍ಡೌನ್ ಮಧ್ಯೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ನಮಾಜ್ ಮಾಡುವುದನ್ನು ನಿಲ್ಲಿಸಲಾಗಿದೆ. ಕೆಲ ಮೌಲ್ವಿಗಳೇ ನಮಾಜ್ ಮಾಡಲು ಮಸೀದಿಗೆ ಬರಬೇಡಿ ಎಂದು ಮನವಿ ಕೂಡ ಮಾಡಿದ್ದಾರೆ. ಆದರೆ ಈ ಮಧ್ಯೆಯೂ ಕೂಡ ನಮಾಜ್ ಮಾಡುವ ವಿಚಾರಕ್ಕೆ ಮುಸ್ಲಿಮರು ಮತ್ತು ಪೊಲೀಸರ …

Read More »

ಸಚಿವ ಜಗದೀಶ್ ಶೆಟ್ಟರ್ ಪಾಸಿಟಿವ್ ಕೇಸಸ್ ಇದೆ ಅಂತಾರೆ ಜಿಲ್ಲಾಡಳಿತ ಪಾಸಿಟಿವ್ ಇಲ್ಲ ಅಂತಾರೆ ಯಾವದು ನಿಜ ಯವದು ಸುಳ್ಳು ಬೆಳಗಾವಿ ಜನರಲ್ಲಿ ಆತಂಕ …

ಬೆಳಗಾವಿ – ಬೆಳಗಾವಿಯಲ್ಲಿ ಈವರೆಗೆ ಬಂದಿರುವ ವರದಿಯಲ್ಲಿ ಯಾವುದೇ ಪಾಸಿಟಿವ್ ಇಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ. ಇದೀಗ ಮಾಧ್ಯಮ ಪ್ರಕಟಣೆ ನೀಡಿರುವ ಜಿಲ್ಲಾಧಿಕಾರಿಗಳು, ಮಧ್ಯಾಹ್ನ 12 ಗಂಟೆಯವರೆಗಿನ ಮಾಹಿತಿ ಪ್ರಕಾರ ಯಾವೊಂದೂ ಪಾಸಿಟಿವ್ ಬಂದಿಲ್ಲ ಎಂದಿದ್ದಾರೆ. ಆದರೆ ಬೆಂಗಳೂರಿನಲ್ಲಿ ರಾಜ್ಯ ಸರಕಾರಿ ಬಿಡುಗಡೆ ಮಾಡಿರುವ ಮಾಧ್ಯಮ ಪ್ರಕಟಣೆಯಲ್ಲಿ ಬೆಳಗಾವಿಯಲ್ಲಿ ಮೂವರಿಗೆ ಪಾಸಿಟಿವ್ ಬಂದಿದೆ ಎಂದು ತಿಳಿಸಿದೆ. ಧಾರವಾಡದಲ್ಲಿ ಹೇಳಿಕೆ ನೀಡಿರುವ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಅವರೂ …

Read More »

ರವಿ.ಡಿ. ಚನ್ನಣ್ಣನವರ್ ಅವರು ನಿನ್ನೆ ರಾತ್ರಿ  ಲಾರಿ ಚಾಲಕನ ಮಾರುವೇಷದಲ್ಲಿ

ಬೆಂಗಳೂರು: ಕರ್ನಾಟಕದ ದಕ್ಷ ಪೊಲೀಸ್ ಅಧಿಕಾರಿ ರವಿ.ಡಿ. ಚನ್ನಣ್ಣನವರ್ ಅವರು ನಿನ್ನೆ ರಾತ್ರಿ  ಲಾರಿ ಚಾಲಕನ ಮಾರುವೇಷದಲ್ಲಿ ಹೋಗಿ ಲಂಚ ಪಡೆಯುತ್ತಿದ್ದ ಭ್ರಷ್ಟ ಆರ್ ಟಿಒ ಅಧಿಕಾರಿಗಳನ್ನು ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ. ಕರ್ನಾಟಕ ಮತ್ತು ತಮಿಳುನಾಡು ಗಡಿ ಭಾಗದ ಅತ್ತಿಬೆಲೆ ಬಳಿ ಇರುವ  ಚೆಕ್ ಪೋಸ್ಟ್ ನಲ್ಲಿ ಹೋಮ್ ಗಾರ್ಡ್ ವಿವೇಕ್, ಆರ್‌ಟಿಒ ಬ್ರೇಕ್ ಇನ್ ಪೆಕ್ಟರ್ ಗಳಾದ ಕರಿಯಪ್ಪ ಮತ್ತು ಜಯಣ್ಣ ಅವರನ್ನು ಲಂಚ ಪಡೆದ ಆರೋಪದ ಮೇಲೆ …

Read More »

ನೀರು ಮತ್ತು ದಿನ ಬಳಕೆ ವಸ್ತುಗಳ ತೊಂದರೆಯಾಗದಂತೆ ಅಧಿಕಾರಿಗಳು ಜಾಗೃತಿ ವಹಿಸಬೇಕು; ದುರ್ಯೋಧನ ಐಹೋಳೆ

ಚಿಕ್ಕೋಡಿ: ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರು ಮತ್ತು ದಿನ ಬಳಕೆ ವಸ್ತುಗಳ ತೊಂದರೆಯಾಗದಂತೆ ಅಧಿಕಾರಿಗಳು ಜಾಗೃತಿ ವಹಿಸಬೇಕು ಎಂದು ರಾಯಬಾಗ ಶಾಸಕ ದುರ್ಯೋಧನ ಐಹೋಳೆ ಹೇಳಿದರು. ತಾಲೂಕಿನ ಉಮರಾಣಿ ಗ್ರಾಮದಲ್ಲಿ ಶುಕ್ರವಾರ ಕೊರೊನಾ ವೈರಸ್ ಕುರಿತು ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಡೆಸಿದ ತಾಲೂಕಾ ಮಟ್ಟದ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶದ ಜನರಿಗೆ ಗ್ರಾಮ ಪಂಚಾಯತಿ ವತಿಯಿಂದ ಮಾಸ್ಕ್ …

Read More »

ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿ ಬಹುತೇಕ ಗುಣಮುಖ: ಸಚಿವ ಶೆಟ್ಟರ್,

ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿ ಬಹುತೇಕ ಗುಣಮುಖರಾಗಿದ್ದು, ಮೂರು ಸಲದ ಪರೀಕ್ಷೆಯಲ್ಲಿ ನೆಗಟಿವ್ ಬಂದಿದೆ. ಇನ್ನೊಂದು ಸಲದ ಪರೀಕ್ಷೆ ಮಾತ್ರವೇ ಬಾಕಿ ಉಳಿದಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಶೆಟ್ಟರ್, ಧಾರವಾಡದ ಕೊರೊನಾ ಪಾಸಿಟಿವ್ ವ್ಯಕ್ತಿ ಗುಣಮುಖರಾಗಿದ್ದಾರೆ. ಮೂರನೇ ಹಂತದ ಪ್ರಯೋಗಾಲಯ ಪರೀಕ್ಷೆಯಲ್ಲಿ ಆ ವ್ಯಕ್ತಿಯ ಫಲಿತಾಂಶ ನೆಗಟಿವ್ ಬಂದಿದೆ. ಇನ್ನೊಂದು ಸಲ ಪ್ರಯೋಗಾಲಯದಲ್ಲಿ …

Read More »

ಛತ್ತೀಸ್‍ಗಢ ರಾಜ್ಯದ ದಂಪತಿ ತಮಗೆ ಜನಿಸಿದ ಅವಳಿ ಮಕ್ಕಳಿಗೆ ‘ಕೊರೊನಾ’ ಮತ್ತು ‘ಕೋವಿಡ್’ ಎಂದು ನಾಮಕರಣ

ರಾಯ್ಪುರ: ದೇಶಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಕೋವಿಡ್-19 ಹಾಗೂ ಕೊರೊನಾ ಎಂಬ್ ಹೆಸರು ಕೇಳಿದರೇ ಜನರು ಬೆಚ್ಚಿ ಬೀಳುವ ಸ್ಥಿತಿ ಎದುರಾಗಿದೆ. ಇಂತಹ ಸಂದರ್ಭದಲ್ಲಿ ಛತ್ತೀಸ್‍ಗಢ ರಾಜ್ಯದ ದಂಪತಿ ತಮಗೆ ಜನಿಸಿದ ಅವಳಿ ಮಕ್ಕಳಿಗೆ ‘ಕೊರೊನಾ’ ಮತ್ತು ‘ಕೋವಿಡ್’ ಎಂದು ನಾಮಕರಣ ಮಾಡಿರುವುದು ಅಚ್ಚರಿ ಮೂಡಿಸಿದೆ. ರಾಯ್ಪುರ ಮೂಲದ ದಂಪತಿಗೆ ಮಾರ್ಚ್ 27ರ ಮುಂಜಾನೆ ಅವಳಿ ಮಕ್ಕಳು ಜನಿಸಿದ್ದು, ಒಂದು ಗಂಡು ಮತ್ತು ಒಂದು ಹೆಣ್ಣು ಮಗುವಾಗಿದೆ. ಕೊರೊನಾ …

Read More »

ಸೋಮವಾರದಿಂದ ನಗರದ ಹೊರವಲಯದ ಹಿಂಡಾಲ್ಕೋ ಮೈದಾನ, ಆರ್.ಟಿ.ಓ ಮೈದಾನ, ಪೊದ್ದಾರ್ ಶಾಲಾ ಮೈದಾನ ಮಾತ್ರವೇ ತರಕಾರಿ ಮಾರಾಟಕ್ಕೆ ಅವಕಾಶ

ಕೊರೋನಾ ಹಿನ್ನೆಲೆಯಲ್ಲಿ ಇಲ್ಲಿನ ಎಪಿಎಂಸಿ ಪ್ರಾಂಗಣದಲ್ಲಿ ಜನಸಂದಣಿ ಕಡಿಮೆಗೊಳಿಸುವ ದೃಷ್ಟಿಯಿಂದ ನಗರದ ಹೊರವಲಯದ ನಾಲ್ಕು ದಿಕ್ಕುಗಳಲ್ಲಿ ಪ್ರತ್ಯೇಕ ಹೋಲಸೇಲ್ ತರಕಾರಿ ಮಾರಾಟಕ್ಕೆ ಸ್ಥಳ ನಿಗದಿಪಡಿಸಲಾಗಿದ್ದು, ಸೋಮವಾರದಿಂದ ನಿಗದಿತ ನಾಲ್ಕು ಸ್ಥಳಗಳಲ್ಲಿ ಮಾತ್ರವೇ ತರಕಾರಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದರು. ಎಪಿಎಂಸಿ ಕಚೇರಿಯಲ್ಲಿ ಶುಕ್ರವಾರ (ಏ.೩) ನಡೆದ ವರ್ತಕರ ಸಭೆಯಲ್ಲಿ ಅವರು ಮಾತನಾಡಿದರು. ಸೋಮವಾರದಿಂದ ನಗರದ ಹೊರವಲಯದ ಹಿಂಡಾಲ್ಕೋ ಮೈದಾನ, ಆರ್.ಟಿ.ಓ ಮೈದಾನ, ಪೊದ್ದಾರ್ ಶಾಲಾ ಮೈದಾನ …

Read More »

ಕೊರೋನಾ ಹಾವಳಿ : ಭಾರತಕ್ಕೆ 1 ಬಿಲಿಯನ್ ಡಾಲರ್ ನೆರವು ನೀಡಿದ ವಿಶ್ವಬ್ಯಾಂಕ್

ವಾಷಿಂಗ್ಟನ್ : ವಿಶ್ವದಾದ್ಯಂತ ಕೊರೋನಾ ಮಹಾಮಾರಿ ರಣಕೇಕೆ ಹಾಕುತ್ತಿದ್ದು, ಬಲಿಷ್ಠ ರಾಷ್ಟ್ರಗಳ ಜಂಗಾಭಲವನ್ನೇ ಕುಸಿಯುವಂತೆ ಮಾಡಿದೆ. ಕೊರೋನಾ ಪೀಡಿತ ರಾಷ್ಟ್ರಗಳ ಆರ್ಥಿಕತೆ ಪಾತಾಳಕ್ಕೆ ಕುಸಿಯುತ್ತಿದ್ದು ಸಂಕಷ್ಟಗಳನ್ನು ಎದುರಿಸುತ್ತಿವೆ. ಈ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದಷ್ಟೇ ಅನೇಕ ದೇಶಗಳಿಗೆ ನೆರವಾಗಲು ಮಂದಾಗಿದ್ದ ವಿಶ್ವಬ್ಯಾಂಕ್, 12 ಶತಕೋಟಿ ಡಾಲರ್ ವರೆಗೆ ನೆರವು ನೀಡುವುದಾಗಿ ಘೋಷಣೆ ಮಾಡಿತ್ತು. ಇದರಂತೆ ಇದೀಗ ಭಾರತಕ್ಕೆ 1 ಬಿಲಿಯನ್ ಡಾಲರ್ ಗಳಷ್ಟು ತುರ್ತು ನೆರವು ನೀಡಲು ಇದೀಗ ಒಪ್ಪಿಗೆ …

Read More »

ಮೇಣದಬತ್ತಿ ಎಲ್ಲಿಂದ ತರೋದು ಎಲ್ಲಾ ಕಡೆ ಲಾಕ್ ಡೌನ್ ಆಗಿದೆ.:ಹೆಚ್ ಡಿ ರೇವಣ್

ಬೆಂಗಳೂರು: ದೇಶದ ಜನತೆ 5ನೇ ತಾರೀಖು ಮೇಣದಬತ್ತಿ ಹಚ್ಚಿ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಈಗ ಮೇಣದಬತ್ತಿ ಎಲ್ಲಿಂದ ತರೋದು ಎಲ್ಲಾ ಕಡೆ ಲಾಕ್ ಡೌನ್ ಆಗಿದೆ. ಮೇಣದಬತ್ತಿ ತರೋಕೆ ಮನೆಯಿಂದ ಹೊರಗೆ ಹೋದ್ರೆ ಲಾಠಿ ಏಟು ಬೀಳುತ್ತವೆ ಎಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಶೇ.30 ರಷ್ಟು ಜನರು ಹಸಿವಿನಿಂದ ಸಾಯುತ್ತಿದ್ದಾರೆ. ಮೋದಿಯವರು ಹೇಳ್ತಾರೆ ದೀಪ ಹಚ್ಚಿ, …

Read More »