Breaking News

ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರ ಬಂಧನ‌ಖಂಡನೀಯ.:ರಮೇಶ ಜಾರಕಿಹೊಳಿ

ಬೆಂಗಳೂರು –  ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರ ಬಂಧನ‌ ಖಂಡನೀಯ. ಇದು ಮಾಧ್ಯಮದ ಮುಕ್ತ ನಿರ್ವಹಣೆಗೆ ಬಿದ್ದ ಪೆಟ್ಟು ಎಂದು ಕರ್ನಾಟಕ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮಹಾರಾಷ್ಟ್ರ ಸರ್ಕಾರದ ಈ ನಡೆ ಅಧಿಕಾರದ ದುರುಪಯೋಗವಾಗಿದ್ದು ಮುಕ್ತ ಮಾಧ್ಯಮ ಸ್ವಾತಂತ್ರ್ಯದ ಮೇಲೆ ನಡೆದ ದಾಳಿಯಾಗಿದೆ  ಎಂದಿದ್ದಾರೆ. ಗೋಸ್ವಾಮಿ ಅವರನ್ನು ಬಂಧಿಸುವ ಮೂಲಕ ಮಹಾರಾಷ್ಟ್ರ ಸರ್ಕಾರ ಮತ್ತೆ ತುರ್ತು ಪರಿಸ್ಥಿತಿಯನ್ನು ನೆನಪಿಸುತ್ತಿದೆ. …

Read More »

ಹುಳುಹತ್ತಿದ ಕಳಪೆ ಬೀಜ ಮಾರಾಟ- ವಿವಿಧ ತಾಲೂಕುಗಳ ರೈತರು ಮೋಸಹೋಗಿದ್ದಾರೆ.

ರಾಯಚೂರು: ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಹುಳು ಹತ್ತಿದ ಕಳಪೆ ಬೀಜ ವಿತರಣೆ ಮಾಡಿದ್ದರಿಂದ ವಿವಿಧ ತಾಲೂಕುಗಳ ರೈತರು ಮೋಸಹೋಗಿದ್ದಾರೆ. ಮಸ್ಕಿ ತಾಲೂಕಿನ ಕುಣಿಕಲ್ ಗ್ರಾಮದ ರೈತರು ರೈತ ಸಂಪರ್ಕ ಕೇಂದ್ರದಲ್ಲಿ ಕಡಲೇಬೀಜ ಖರೀದಿ ಮಾಡಿ ಕಂಗಾಲಾಗಿದ್ದಾರೆ. ಜಿಲ್ಲೆಯಲ್ಲಿ ಈ ವರ್ಷ ಉತ್ತಮ ಮಳೆಯಾಗಿದ್ದರೂ ರೈತರ ಕಷ್ಟಕ್ಕೆ ಮಾತ್ರ ಕೊನೆಯಿಲ್ಲ. ಒಂದೆಡೆ ಭಾರೀ ಮಳೆಯಿಂದ ಜಿಲ್ಲೆಯ ರೈತರು ಹಲವು ತೊಂದರೆಗೆ ಒಳಗಾಗಿದ್ದಾರೆ. ಇನ್ನೊಂದೆಡೆ ರೈತರು ಮಳೆ ಚೆನ್ನಾಗಿ ಆಗಿದ್ದರಿಂದ ಖುಷಿಯಾಗಿ …

Read More »

ಕಾಲಾವಕಾಶ ತೆಗೆದುಕೊಂಡು ಶಾಲೆ ತೆರೆಯುವುದು ಸೂಕ್ತ: ಪ್ರತಾಪ್ ಸಿಂಹ

ಮಡಿಕೇರಿ: ಕಾಲಾವಕಾಶ ತೆಗೆದುಕೊಂಡು ಪೋಷಕರು ಹಾಗೂ ಶಿಕ್ಷಕ ಸಮುದಾಯವನ್ನು ಕೊರೊನಾ ಟೆಸ್ಟ್ ತಪಾಸಣೆ ಬಳಿಕ ಶಾಲೆ ತೆರೆಯುವ ತೀರ್ಮಾನ ತೆಗೆದುಕೊಳ್ಳುವುದು ಸೂಕ್ತ ಎಂದು ಸಂಸದ ಪ್ರತಾಪ್ ಸಿಂಹ ಅಭಿಪ್ರಾಯಪಟ್ಟರು.ಮಡಿಕೇರಿಯಲ್ಲಿ ಮಾತಾನಾಡಿದ ಅವರು, ಶಾಲೆಗಳನ್ನು ಆದಷ್ಟು ಬೇಗ ತೆರೆಯಬೇಕು. ಹಾಗೆಯೇ ಬೇಡ ಎನ್ನುವ ಭಾವನೆ ಇದೆ. ಈಗಾಗಲೇ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವರು ಎಲ್ಲರೊಂದಿಗೆ ಶಾಲೆ ತೆರೆಯುವ ಬಗ್ಗೆ ಸಮಾಲೋಚನೆ ಮಾಡಿದ್ದಾರೆ. ದೆಹಲಿಯ ಎನ್‍ಸಿಆರ್ ಭಾಗದಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಶಾಲೆಗಳನ್ನು …

Read More »

ಸುಣಧೋಳಿ ಜಡಿಸಿದ್ದೇಶ್ವರ ಮಠದ ಬಿಕ್ಕಟ್ಟನ್ನು ಬಗೆ ಹರಿಸಿದ ಶೂನ್ಯ ಸಂಪಾದನ ಮಠ ಶ್ರೀಗಳು ಮತ್ತು ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ.

. ಗೋಕಾಕ: ಕಳೆದ ಆರೇಳು ತಿಂಗಳಿನಿಂದ ಮೂಡಲಗಿ ತಾಲೂಕಿನ ಸುಣಧೋಳಿ ಗ್ರಾಮದ ಜಡಿಸಿದ್ದೇಶ್ವರ ಮಠದಲ್ಲಿ ಎರಡು ಗುಂಪುಗಳ ಮಧ್ಯ ಭಿನ್ನಾಭಿಪ್ರಾಯಗಳು ಮೂಡಿದ್ದರಿಂದ ಅಲ್ಲಿನ ಪೀಠಾಧಿಕಾರಿಗಳಿಗೆ ಸೇವೆಯನ್ನು ನಿರ್ವಹಿಸಲು ತೊಂದರೆಯಾಗುತ್ತಿರುವದನ್ನು ಮನಗಂಡು ಗೋಕಾಕ ಶೂನ್ಯ ಸಂಪಾದನಾಮಠದ ಸ್ವಾಮಿಜೀ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರುಗಳು ಮಧ್ಯಸ್ಥಿಕೆ ವಹಿಸಿ ಪ್ರಕರಣವನ್ನು ಸುಖಾಂತ್ಯಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳವಾರ ರಾತ್ರಿ ನಗರದ ಶೂನ್ಯ ಸಂಪಾದನಮಠದಲ್ಲಿ ಮುರುಘರಾಜೇಂದ್ರ ಮಹಾಸ್ವಾಮಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಭಕ್ತರ ಸಭೆಯಲ್ಲಿ ಮಠದ ಆಸ್ತಿ ವ್ಯವಹಾರಕ್ಕೆ …

Read More »

ನೆಲ,ಜಲ,ಭಾಷೆಗೆ ವಿರೋಧ ಮಾಡಿದ್ದನ್ನು ನೋಡಬೇಕಿತ್ತು,ಹತ್ತು ಬಾರಿ ಯೋಚಿಸಬೇಕಿತ್ತು…

ಬೆಳಗಾವಿ- ಎಂಈಎಸ್ ಮಾಜಿ ಶಾಸಕ ಅರವಿಂದ್ ಪಾಟೀಲ್ ಅವರನ್ನು ಬಿಜೆಪಿಗೆ ಕರ್ಕೊಂಡ ಬರ್ತೀವಿ ಎಂದು ಸಚಿವ ರಮೇಶ್ ಜಾರಕಿಹೊಳಿ ಅವರ ಹೇಳಿಕೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಘಟಪ್ರಭಾದಲ್ಲಿರುವ ಸೇವಾದಳದ ಕಚೇರಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು,ಕರಾಳ ದಿನಾಚರಣೆಯಲ್ಲಿ ಪಾಲ್ಗೊಂಡು,ನಾಡಿನ ನೆಲ,ಜಲ,ಭಾಷೆಗೆ ವಿರೋಧ ಮಾಡಿದ್ದನ್ನು ಮಂತ್ರಿಗಳು ನೋಡಬೇಕಾಗಿತ್ತು,ರಾಷ್ಟ್ರೀಯ ಪಕ್ಷವೊಂದು ನಾಡಿನ ವಿರುದ್ಧ ಕೆಲಸ ಮಾಡಿದವರಿಗೆ,ಪಕ್ಷಕ್ಕೆ ಅಹ್ವಾನ ನೀಡುತ್ತಿದೆ.ಅದು ಅವರ ಪಕ್ಷದ ಸಿದ್ಧಾಂತ ಈಬಗ್ಗೆ ನಾವು ಏನೂ …

Read More »

ಭೀಮಾತೀರದ ಮಹಾದೇವ ಸಾಹುಕಾರ್ ಪ್ರಕರಣ : ಒಂದೂವರೆ ಸಾವಿರ ಪೊಲೀಸರು ನಿಯೋಜನೆ

ಭೀಮಾತೀರದ ಮಹಾದೇವ ಸಾಹುಕಾರ್ ಪ್ರಕರಣ : ಒಂದೂವರೆ ಸಾವಿರ ಪೊಲೀಸರು ನಿಯೋಜನೆ   ವಿಜಯಪುರ : ಭೀಮಾತೀರದ ಮಹಾದೇವ ಸಾಹುಕಾರ ಭೈರಗೊಂಡ ಮೇಲಿನ ಗುಂಡಿನ ದಾಳಿ ಪ್ರಕರಣ ತನಿಖೆಗಾಗಿ, ಒಂದೂವರೆ ಸಾವಿರ ಪೊಲೀಸರು ಒಳಗೊಂಡ ಹತ್ತು ತಂಡಗಳುನ್ನು ನಿಯೋಜನೆ ಮಾಡಲಾಗಿದೆ.   ಅಚ್ಚರಿಯಾದರು ಸತ್ಯ. ಯಾವುದಾದರೂ ಒಂದು ಅಪರಾಧ ಪ್ರಕರಣವನ್ನು ಒಬ್ಬಿಬ್ಬರು ಪೊಲೀಸರು ಅಥವಾ ಹತ್ತಾರು ಪೊಲೀಸರ ಒಂದು ತಂಡ ಬೆನ್ನು ಹತ್ತುವುದು ಸಾಮಾನ್ಯ. ಆದರೆ ಈ ಪ್ರಕರಣದ ತನಿಖೆಗಾಗಿ …

Read More »

ಸೇನಾ ಅಧಿಕಾರಿಗಳ ಹೆಸರಿನಲ್ಲಿ ವಂಚಿಸ್ತಿದ್ದ ಆರೋಪಿಗಳನ್ನ ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಸೇನಾ ಅಧಿಕಾರಿಗಳ ಹೆಸರಿನಲ್ಲಿ ವಂಚಿಸ್ತಿದ್ದ ಆರೋಪಿಗಳನ್ನ ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ಉಮರ್ ಖಾನ್, ಸೈದ್, ವಜೀಬ್, ಸಹಿಲ್‌ ಬಂಧಿಸಿತ ಆರೋಪಿಗಳು. ಬಂಧಿತ ಖದೀಮರು OLX‌ನಲ್ಲಿ ಕಡಿಮೆ ಬೆಲೆಗೆ ವಾಹನಗಳ ಫೋಟೋ ಹಾಕುತ್ತಿದ್ದರು. ಅದನ್ನು ನೋಡಿ ವಾಹನ ಖರೀದಿಗೆ ಕರೆ ಮಾಡುತ್ತಿದ್ದ ಜನರಿಗೆ ತಾವು ಸೇನೆಯಲ್ಲಿದ್ದೇವೆ ಎಂದು ಸುಳ್ಳು ಹೇಳಿ ನಂಬಿಸಿ ಮೋಸ ಮಾಡುತ್ತಿದ್ದರು. ಗೂಗಲ್ ಪೇ, ಫೋನ್ ಪೇ ಮೂಲಕ ಹಣ ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದರು. …

Read More »

ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿ ಕೇಸ್​ಗಳಲ್ಲಿ ಸಿಲುಕಿಕೊಂಡಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ.

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿ ಕೇಸ್​ಗಳಲ್ಲಿ ಸಿಲುಕಿಕೊಂಡಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ. ಮುಖ್ಯಮಂತ್ರಿಗಳ ವಿರುದ್ಧ ಮೂರು ಪ್ರಕರಣ ದಾಖಲಿಸಿದ್ದ ವಕೀಲ ಬಿ.ವಿನೋದ್ ಕೇಸ್​ಗಳನ್ನು ಹಿಂಪಡೆದಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಸಂಬಂಧಿಸಿದ ಮೂರು ಕೇಸ್​ಗಳನ್ನು ಸಿಎಂ ಯಡಿಯೂರಪ್ಪ ಕುಟುಂಬದ ಸದಸ್ಯರ ವಿರುದ್ಧ ದಾಖಲಾಗಿತ್ತು. ಶಿವಮೊಗ್ಗದ ಮೂಲದ ವಕೀಲ ಬಿ.ವಿನೋದ್ ಕೇಸ್ ದಾಖಲಿಸಿದ್ದರು. ಮೂವರು ಕೇಸ್​ಗಳು ನ್ಯಾ. ಜಾನ್ ಮೈಕೆಲ್ ಕುನ್ಹಾ ಪೀಠದಲ್ಲಿ ವಿಚಾರಣೆ ನಡೆಯಬೇಕಿತ್ತು. ಆದರೆ, ವಕೀಲ ಬಿ.ವಿನೋದ್ …

Read More »

ಏಕೆಂದರೆ ನಿನ್ನೆ ಸಂಪತ್ ನೋಡಲು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದ ಸಿಸಿಬಿಗೆ ಶಾಕ್ ಎದುರಾಗಿತ್ತು. ಸಂಪರ್ ರಕ್ಷಣೆ ಮಾಡಲು ಬ್ಯಾಪ್ಟಿಸ್ಟ್ ಆಸ್ಪತ್ರೆ ಮಹಾ ನಾಟಕವನ್ನೇ ಆಡಿದೆ.

ಬೆಂಗಳೂರು: ಬ್ಯಾಪ್ಟಿಸ್ಟ್ ಆಸ್ಪತ್ರೆಯಿಂದ ಸಂಪತ್ ರಾಜ್ ಎಸ್ಕೇಪ್ ಪ್ರಕರಣಕ್ಕೆ ಸಂಬಂಧಿಸಿ ಸಂಪತ್ ರಾಜ್ ರಕ್ಷಣೆ ಮಾಡಲು ಹೋಗಿ ಆಸ್ಪತ್ರೆ ತಗಲಾಕಿಕೊಂಡಿದೆ. ಏಕೆಂದರೆ ನಿನ್ನೆ ಸಂಪತ್ ನೋಡಲು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದ ಸಿಸಿಬಿಗೆ ಶಾಕ್ ಎದುರಾಗಿತ್ತು. ಸಂಪರ್ ರಕ್ಷಣೆ ಮಾಡಲು ಬ್ಯಾಪ್ಟಿಸ್ಟ್ ಆಸ್ಪತ್ರೆ ಮಹಾ ನಾಟಕವನ್ನೇ ಆಡಿದೆ. ಸಂಪತ್ ರಾಜ್ ಆಸ್ಪತ್ರೆಯಲ್ಲಿ ಎರಡು ತಿಂಗಳು ಠಿಕಾಣಿ ಹಾಕಿದ್ದರು. ಎರಡು ತಿಂಗಳಲ್ಲಿ 4 ಬಾರಿ ಆಡ್ಮಿಟ್, 4 ಬಾರಿ ಡಿಸ್ಚಾರ್ಜ್ …

Read More »

2020 US election results Updates: ಬೈಡನ್‌ಗೆ 223, ಟ್ರಂಪ್‌ಗೆ 145 ಎಲೆಕ್ಟೋರಲ್ ಮತ:

2020 US election results Updates: ಬೈಡನ್‌ಗೆ 223, ಟ್ರಂಪ್‌ಗೆ 145 ಎಲೆಕ್ಟೋರಲ್ ಮತ: ಇನ್ನು ಈಗ USA ಅಧ್ಯಕ್ಷೀಯ ಚುನಾವಣೆ ತಾಜಾ ಫಲಿತಾಂಶ ಹೀಗಿದೆ. ಬೈಡನ್‌ -223, ಟ್ರಂಪ್ -145 ಅಮೆರಿಕ ಸಂಯುಕ್ತ ಸಂಸ್ಥಾನಗಳಿಗೆ (USA) ನಡೆದ ಅಧ್ಯಕ್ಷೀಯ ಚುನಾವಣೆಯ ಮತ ಎಣಿಕೆ‌ ಪ್ರಕ್ರಿಯೆ ಮುಂದುವರೆದಿದೆ. ಡೆಮಾಕ್ರಟಿಕ್ ಪಕ್ಷದ ಜೋ ಬಿಡೆನ್​ಗೆ 223 ಮತ ಹಾಗೂ ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್‌ಗೆ 145 ಮತಗಳು ಸಿಕ್ಕಿದ್ದು ಜೋ ಬಿಡೆನ್‌ …

Read More »