Breaking News

ಮದ್ಯ ಸೇವಿಸುವವರಿಗೆ ‘ಕೊರೊನಾ’ದಿಂದ ಗಂಭೀರ ಸಮಸ್ಯೆ ಎದುರಾಗಲಿದೆ.

      ಬೆಂಗಳೂರು: ಮದ್ಯ ಸೇವಿಸುವವರಿಗೆ ‘ಕೊರೊನಾ’ದಿಂದ ಗಂಭೀರ ಸಮಸ್ಯೆ ಎದುರಾಗಲಿದೆ. ಮದ್ಯಪ್ರಿಯರ ಲಿವರ್ ಮೇಲೆ ‘ಕೊರೊನಾ’ ಪ್ರಭಾವ ಅಪಾರವಾಗಿರುತ್ತೆ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಸೋಂಕಿನಿಂದ ಮೃತಪಟ್ಟ ಕೆಲವರಲ್ಲಿ ಲಿವರ್ ಸಮಸ್ಯೆ ಕಂಡು ಬಂದಿದೆ. ಹೀಗಾಗಿ ಮದ್ಯಪಾನ ಮಾಡುವವರಿಗೆ ವೈದ್ಯರು ವಾರ್ನಿಂಗ್ ಕೊಟ್ಟಿದ್ದಾರೆ. ಸೋಂಕಿತರು ಲಿವರ್ ಮೇಲಾಗುವ ಪರಿಣಾಮದ ಬಗ್ಗೆ ಎಚ್ಚರಿಕೆ ವಹಿಸಬೇಕು. ಶ್ವಾಸಕೋಶದೊಂದಿಗೆ ವಿವಿಧ ಅಂಗಗಳ ಮೇಲೂ ಪರಿಣಾಮ ಬೀರುತ್ತೆ. ಮದ್ಯಪಾನ ಮಾಡುವವರ ಲಿವರ್ ದುರ್ಬಲವಾಗುವ …

Read More »

ಕನ್ನಡಿ ಅಂದ್ರೆ ಒಂದು ಶಕ್ತಿ.. ಇಂತಹ ಶಕ್ತಿ ಪ್ರತಿಯೊಬ್ಬ ಕನ್ನಡಿಗನ ನರನಾಡಿಯಲ್ಲೂ ಹರಿಯುತ್ತಿದೆ.

    ಚಿಕ್ಕಮಗಳೂರು: ಕನ್ನಡಿ ಅಂದ್ರೆ ಒಂದು ಶಕ್ತಿ.. ಇಂತಹ ಶಕ್ತಿ ಪ್ರತಿಯೊಬ್ಬ ಕನ್ನಡಿಗನ ನರನಾಡಿಯಲ್ಲೂ ಹರಿಯುತ್ತಿದೆ. ಕನ್ನಡಕ್ಕೆ ತನ್ನದೆ ಆದ ಇತಿಹಾಸವಿದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಕನ್ನಡ ಬಳಕೆ ಮಾಡೋರು ಕಮ್ಮಿ. ಆದ್ರೆ ನೀವು ದೇಗುಲಕ್ಕೆ ಹೋದ್ರೆ ಎಲ್ಲವೂ ಕನ್ನಡಮಯ. ಕನ್ನಡ ಅನ್ನೋ ಭಾಷೆಗೆ ತನ್ನದೇ ಆದ ತಾಕತ್ತು ಇದೆ.. ಈ ಭಾಷೆ ಸಾಕಷ್ಟು ಮಹತ್ವವನ್ನ ಹೊಂದಿದೆ. ಕನ್ನಡ ಪದಗಳು ಕಿವಿಗೆ ಬೀಳುತ್ತಿದ್ದರೆ ಮನಸ್ಸಿಗೆ ನೆಮ್ಮದಿ. ಆದ್ರೆ ಇತ್ತೀಚಿನ …

Read More »

ಇದೇ‌ ಮೊದಲ ಬಾರಿಗೆ ಜಿಲ್ಲಾಡಳಿತ ಕರಾಳ ದಿನಾಚರಣೆಗೆ ಅನುಮತಿ ನಿರಾಕರಿಸಿದೆ.

ಬೆಳಗಾವಿ: ಕುಂದಾನಗರಿಯಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದೆ. ಆದರೆ ಎಂಇಎಸ್ ಈ ದಿನವನ್ನು ಕರಾಳ ದಿನವಾಗಿ ಆಚರಿಸಲು ಮುಂದಾಗಿದ್ದು ಇದೇ ಮೊದಲ ಬಾರಿಗೆ ಮುಖಭಂಗವಾಗಿದೆ. ಇದೇ‌ ಮೊದಲ ಬಾರಿಗೆ ಜಿಲ್ಲಾಡಳಿತ ಕರಾಳ ದಿನಾಚರಣೆಗೆ ಅನುಮತಿ ನಿರಾಕರಿಸಿದೆ. ಜಿಲ್ಲಾಧಿಕಾರಿ ಎಂ‌ಜಿ ಹಿರೇಮಠ ಕರಾಳ ದಿನಾಚರಣೆ ಮಾಡದಂತೆ ಖಡಕ್ ಆದೇಶ ನೀಡಿದ್ದಾರೆ. ಜಿಲ್ಲಾಡಳಿತ ಅನುಮತಿ ನೀಡದ ಹಿನ್ನೆಲೆಯಲ್ಲಿ ನಾಡದ್ರೋಹಿಗಳು ಪ್ರತಿಭಟನೆಗೆ ಮುಂದಾಗಿದ್ದಾರೆ. 10 ಗಂಟೆಗೆ ಶಿವಾಜಿ ಗಾರ್ಡನ್ ಬಳಿ ಪ್ರತಿಭಟನೆಗೆ ಪ್ಲಾನ್ ಮಾಡಿಕೊಂಡಿದ್ದಾರೆ. …

Read More »

ಹೆತ್ತ ತಾಯಿಯೇ ಮಗಳಿಗೆ ನಿರಂತರವಾಗಿ ದೈಹಿಕ ಹಿಂಸೆ ನೀಡಿ ವಿಕೃತಿ ಮೆರೆದಿದ್ದಾಳೆ ಮಗುವನ್ನು ಪೊಲೀಸರ ರಕ್ಷಣೆಯಲ್ಲಿ ಮಕ್ಕಳ ಸಹಾಯವಾಣಿಗೆ ಒಪ್ಪಿಸಲಾಗಿದೆ

ನೆಲಮಂಗಲ : ಕೆಲಸಕ್ಕಾಗಿ ಮುಂಜಾನೆ 5.30ಕ್ಕೆಲ್ಲಾ ಹೊರಡುತ್ತಿದ್ದ ಚಂದ್ರಮ್ಮ ಮಗುವನ್ನ ಮನೆಯ ಹೊರಗೆ ಬಿಟ್ಟು ಬೀಗ ಹಾಕಿಕೊಂಡು ಹೋದರೆ ರಾತ್ರಿ ಮನೆಗೆ ಬರುತ್ತಿದ್ದಳು. ಕರೋನಾ ಹಿನ್ನಲೆಯಲ್ಲಿ ಶಾಲೆಗೆ ರಜೆ ಇರುವುದರಿಂದ ತಾನು ವಾಸವಿದ್ದು ಬಾಡಿಗೆ ಮನೆಯ ಮಾಲೀಕರ ತೋಟದಲ್ಲಿ ದನ ಕುರಿ ಮೇಯಿಸುವ ಕೆಲಸಕ್ಕೆ ಸೇರಿಸಿದ್ದಳು.ಬಾಲಕಿ ಮನೆಮಾಲೀಕರ ಮನೆ ಹಾಗೂ ಅಕ್ಕಪಕ್ಕದ ಮನೆಯವರು ಕೊಟ್ಟ ತಿಂಡಿ, ಊಟ ಮಾಡಿಕೊಂಡು ತಾಯಿ ಬರುವವರೆಗೂ ಕಾಯುತ್ತಿದ್ದಳು. ಈ ನಡುವೆ ನಿತ್ಯ ಒಂದಲ್ಲ ಒಂದು …

Read More »

ಕಿಂಗ್ಸ್ ಸಂಕಟ : ಚನ್ನೈ ಗೆ ಚಿನ್ನಾಟ

ಹೈದರಾಬಾದ್ : ಯುವನಾಯಕ ಕೆ.ಎಲ್. ರಾಹುಲ್‌ಗೆ ಕಿಂಗ್ಸ್ ಇಲೆವನ್ ತಂಡವನ್ನು ಪ್ಲೇಆಫ್‌ಗೆ ಕೊಂಡೊಯ್ಯುವ ಛಲದಲ್ಲಿದ್ದಾರೆ. ಅದಕ್ಕಾಗಿ ಅವರು ಈಗ ‘ಕೂಲ್ ಕ್ಯಾಪ್ಟನ್’ ಮಹೇಂದ್ರಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್‌ ಸವಾಲನ್ನು ಮೀರಿ ನಿಲ್ಲಬೇಕಿದೆ. ಧೋನಿ ಬಳಗಕ್ಕೆ ಈಗಾಗಲೇ ಪ್ಲೇ ಆಫ್‌ ಬಾಗಿಲು ಮುಚ್ಚಿದೆ. ಉಳಿದಿರುವ ಒಂದು ಪಂದ್ಯವನ್ನು ಗೆದ್ದು ಸಂಭ್ರಮದೊಂದಿಗೆ ಹೊರ ನಡೆಯುವತ್ತ ಚಿತ್ತ ನೆಟ್ಟಿದೆ. ಕಿಂಗ್ಸ್‌ ತಂಡಕ್ಕೆ ಶುಕ್ರವಾರ ರಾಜಸ್ಥಾನ ರಾಯಲ್ಸ್‌ ಎದುರು ಜಯಿಸಿದ್ದರೆ ಹಾದಿ ಸುಲಭವಾಗುತ್ತಿತ್ತು. …

Read More »

ಶಾಲೆಗಳಿಗೆ ನೀಡಿದ್ದ ಮಧ್ಯಾಂತರ ರಜೆ ಮುಗಿದಿದೆ ಶಿಕ್ಷಕರು ಶಾಲೆಗೆ ಬರಬೇಕು ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ಶಾಲೆಗಳಿಗೆ ನೀಡಿದ್ದ ಮಧ್ಯಾಂತರ ರಜೆ ಮುಗಿದಿದ್ದು, ಕನ್ನಡ ರಾಜ್ಯೋತ್ಸವ ಆಚರಣೆಗೆ ನ.1ರಂದು ಎಲ್ಲ ಶಿಕ್ಷಕರು ಹಾಜರಾಗಬೇಕು, 2ರಿಂದ ಶಿಕ್ಷಕರು ಶಾಲೆಗೆ ಬರಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಶಾಲಾರಂಭಕ್ಕೆ ಸಂಬಂಧಿಸಿ ಶಿಕ್ಷಣ ಇಲಾಖೆ ಅಥವಾ ಸರಕಾರ ಯಾವುದೇ ನಿರ್ಧಾರ ಪ್ರಕಟಿಸಿಲ್ಲ. ವಿದ್ಯಾಗಮವೂ ತಾತ್ಕಾಲಿಕವಾಗಿ ರದ್ದಾಗಿದೆ. ಹೀಗಾಗಿ ಶಿಕ್ಷಕರು ಶಾಲೆಗೆ ಬಂದು ಯಾವ ಕಾರ್ಯ ಮಾಡಬೇಕು ಎಂಬುದನ್ನು ಇಲಾಖೆ ಸ್ಪಷ್ಟಪಡಿಸಬೇಕು ಎಂದು ಶಿಕ್ಷಕರು ಆಗ್ರಹಿಸಿದ್ದಾರೆ. ವಿದ್ಯಾಗಮ ಚಟುವಟಿಕೆಯಲ್ಲಿ ಈವರೆಗೆ …

Read More »

ರಾಜ್ಯೋತ್ಸವ: ಕನ್ನಡಿಗರು ಮತ್ತು ತಾಯಿ ಭುವನೇ ಶ್ವರಿ ನಡುವಿನ ಈ ನಂಟು 1956ರಲ್ಲಿ ಆರಂಭವಾದದ್ದಲ್ಲ.

ಬೆಂಗಳೂರು: ಕರ್ನಾಟಕ ಏಕೀಕರಣದ ಕನಸು 1956ರ ನವೆಂಬರ್‌ 1ರಂದು ನನಸಾದಾಗ, ‘ಕನ್ನಡದ ಕುಲಪು ರೋಹಿತ’ ಆಲೂರು ವೆಂಕಟರಾಯರು ಹಂಪಿಯ ವಿರೂಪಾಕ್ಷ ದೇವಸ್ಥಾನದಲ್ಲಿ ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸುವ ಮೂಲಕ ರಾಜ್ಯೋತ್ಸವ ಆಚರಿ ಸಿದ್ದರು. ಆ ನಂತರ ಪ್ರತಿವರ್ಷವೂ ರಾಜ್ಯೋತ್ಸವದ ದಿನದಂದು ನಾಡಿನಾ ದ್ಯಂತ ಭುವನೇಶ್ವರಿಯ ಭಾವಚಿತ್ರದ ಮೆರವಣಿಗೆ, ವಿಶೇಷ ಪೂಜೆ- ಪುನಸ್ಕಾರಗಳು ನಡೆಯುತ್ತಲೇ ಇವೆ. ಕನ್ನಡಿಗರು ಮತ್ತು ತಾಯಿ ಭುವನೇ ಶ್ವರಿ ನಡುವಿನ ಈ ನಂಟು 1956ರಲ್ಲಿ ಆರಂಭವಾದದ್ದಲ್ಲ. ಭುವನೇಶ್ವರಿಯು ಕನ್ನಡದ …

Read More »

ರಾಜ್ಯೋತ್ಸವ ಆಚರಣೆಗೆ ಸಿಂಗಾರಗೊಂಡ ಬೆಳಗಾವಿ

ಬೆಳಗಾವಿ- ರಾಜ್ಯೋತ್ಸವ ದಿನವನ್ನು ಕರ್ನಾಟಕ ರಾಜ್ಯಾದ್ಯಂತ ಮಹದಾನಂದ ಮತ್ತು ಚಟುವಟಿಕೆಯಿಂದ ಆಚರಿಸಲಾಗುತ್ತದೆ. ಕೆಂಪು ಮತ್ತು ಹಳದಿ ಕನ್ನಡ ಧ್ವಜಗಳು ರಾಜ್ಯದ ಎಲ್ಲೆಡೆ ಹಾರಿಸಲ್ಪಡುತ್ತವೆ. ಕನ್ನಡ ನಾಡಗೀತೆ “ಜಯ ಭಾರತ ಜನನಿಯ ತನುಜಾತೆ”ಯನ್ನು ಹಾಡಲಾಗುತ್ತದೆ. ಸರ್ಕಾರಿ ಕಚೇರಿ ಮತ್ತು ಹಲವಾರು ಪ್ರಮುಖ ಪ್ರದೇಶಗಳಲ್ಲಿ ವಾಹನಗಳ ಮೇಲೆ ಭುವನೇಶ್ವರಿ ಚಿತ್ರವನ್ನಿಟ್ಟು ಮೆರವಣಿಗೆ ನಡೆಸಲಾಗುತ್ತದೆ. ಚನ್ನಮ್ಮಾಜಿಯ ಹೋರಾಟದ ಚಿತ್ರಣ,ಕಿತ್ತೂರು ಕೋಟೆಯ ಗತವೈಭವ ಮರಕಳಿಸುವ ಅಲಂಕಾರವನ್ನು ಚನ್ನಮ್ಮನ ಮೂರ್ತಿಯ ನಾಲ್ಕು ದಿಕ್ಕುಗಳಲ್ಲಿ ಬೇರೆ,ಬೇರೆ ಚಿತ್ರಗಳನ್ನು ಅಳವಡಿಸಿ,ಈ …

Read More »

ದೇಶದಲ್ಲಿ ಅತ್ಯುತ್ತಮ ಆಡಳಿತವಿರುವ ರಾಜ್ಯಗಳ ಪಟ್ಟಿ :ಕೇರಳ ಆಗ್ರಸ್ಥಾನ, ಉತ್ತರ ಪ್ರದೇಶ ಕೊನೆಯ ಸ್ಥಾನ

ನವದೆಹಲಿ: ದೇಶದಲ್ಲಿ ಅತ್ಯುತ್ತಮ ಆಡಳಿತವಿರುವ ರಾಜ್ಯಗಳ ಪಟ್ಟಿಯಲ್ಲಿ ಸಿಎಂ ಪಿಣರಾಯಿ ವಿಜಯನ್ ಅವರ ಕೇರಳ ಆಗ್ರಸ್ಥಾನದಲ್ಲಿದ್ದು, ಯೋಗಿ ಆದಿತ್ಯಾನಾಥ್ ಆಡಳಿತ ವಿರುವ ಉತ್ತರ ಪ್ರದೇಶ ಕೊನೆಯ ಸ್ಥಾನದಲ್ಲಿದೆ. ಪಬ್ಲಿಕ್ ಅಫೇರ್ಸ್ ಸೆಂಟರ್ ಎಂಬ ಸಂಸ್ಥೆ ಬಿಡುಗಡೆಗೊಳಿಸಿದ ‘ಪಬ್ಲಿಕ್ ಅಫೇರ್ಸ್ ಇಂಡೆಕ್ಸ್-2020’ ಇದರಲ್ಲಿ ಕೇರಳ ದೇಶದ ಅತ್ಯುತ್ತಮ ಆಡಳಿತವಿರುವ ರಾಜ್ಯವೆಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದರೆ ಉತ್ತರ ಪ್ರದೇಶ ಈ ಸೂಚ್ಯಂಕದಲ್ಲಿ ಕೊನೆಯ ಸ್ಥಾನ ಪಡೆದಿದೆ. ಕೇಂದ್ರಾಡಳಿತ ಪ್ರದೇಶಗಳ ಪೈಕಿ ಚಂಡೀಗಢ ಮೊದಲ ಸ್ಥಾನ ಪಡೆದಿದೆ. …

Read More »

ಕುಸುಮ ನಾನೂ ಕೂಡ ದರ್ಶನ್​ರ ದೊಡ್ಡ​ ಅಭಿಮಾನಿ

ಬೆಂಗಳೂರು: ಆರ್​.ಆರ್​ ನಗರ ಉಪಚುನಾವಣೆ ಕಣ ರಂಗೇರುತ್ತಿದ್ದು, ಮೂರು ಪಕ್ಷಗಳು ಜಿದ್ದಾಜಿದ್ದಿ ಪ್ರಚಾರ ನಡೆಸುತ್ತಿದ್ದಾರೆ. ನಿನ್ನೆ ಬಿಜೆಪಿ ಪರ ಚಾಲೆಂಜಿಂಗ್​ ಸ್ಟಾರ್​ ದರ್ಶನ್ ಪ್ರಚಾರ ನಡೆಸಿದ್ದರು. ಈ ಬಗ್ಗೆ ಕಾಂಗ್ರೆಸ್​ ಅಭ್ಯರ್ಥಿ ಕುಸುಮ ಪ್ರತಿಕ್ರಿಯಿಸಿದ್ದು, ನಾನೂ ಕೂಡ ದರ್ಶನ್​ರ ದೊಡ್ಡ​ ಅಭಿಮಾನಿ ಎಂದಿದ್ದಾರೆ. ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಪ್ರಚಾರ ಮಾಡಲು ಅವಕಾಶ ಇದೆ. ಅದೇ ರೀತಿ ದರ್ಶನ್ ಅವರೂ ಪ್ರಚಾರ ಮಾಡಿದ್ದಾರೆ. ಈ ಹಿಂದೆ …

Read More »