Breaking News

ಸೋದರಿಯರು. ಆತ್ಮಹತ್ಯೆ

ಕಲಬರುಗಿ: ಸೋದರಿಯರಿಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಐನಾಪುರ ಗ್ರಾಮದಲ್ಲಿ ನಡೆದಿದೆ. ಐಶ್ವರ್ಯ(19) ಮತ್ತು ಸಾರಿಕಾ (17) ಆತ್ಮಹತ್ಯೆಗೆ ಶರಣಾದ ಸೋದರಿಯರು. ಐನಾಪುರ ಗ್ರಾಮದ ವಿಶ್ವನಾಥ್ ಎಂಬವರು ಮಕ್ಕಳು. ಮನೆಯಲ್ಲಿ ಯಾರು ಇಲ್ಲದಿದ್ದಾಗ ಡೆತ್ ನೋಟ್ ಬರೆದಿಟ್ಟು ನೇಣು ಹಾಕಿಕೊಂಡಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮನೆಯಲ್ಲಿರುವ ಡೆತ್ ನೋಟ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಆತ್ಮಹತ್ಯೆಗೆ …

Read More »

ಪತ್ನಿಯ ಜೊತೆ ಮೊಬೈಲ್ ನಲ್ಲಿ ಮಾತುನಾಡುತ್ತಲೇ ಕಾರ್ಮಿಕನೊಬ್ಬ ನೇಣಿಗೆ

ಹುಬ್ಬಳ್ಳಿ: ಪತ್ನಿಯ ಜೊತೆ ಮೊಬೈಲ್ ನಲ್ಲಿ ಮಾತುನಾಡುತ್ತಲೇ ಕಾರ್ಮಿಕನೊಬ್ಬ ನೇಣಿಗೆ ಶರಣಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಮೋಹನ್ ಸಿಂಗ್ ಆತ್ಮಹತ್ಯೆಗೆ ಶರಣಾದ ಕಾರ್ಮಿಕನಾಗಿದ್ದು, ಪಶ್ಚಿಮಬಂಗಾಳ ಮೂಲದ ನಿವಾಸಿ. ಹುಬ್ಬಳ್ಳಿಯ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಮೋಹನ್ ಸಿಂಗ್ ತಂದೆಯ ಸಾವಿನಿಂದ ಮನನೊಂದಿದ್ದರು.ಕಳೆದ ಎರಡು ತಿಂಗಳ ಹಿಂದೆ ಪಶ್ಚಿಮ ಬಂಗಾಳದಿಂದ ಕೆಲಸಕ್ಕೆಂದು ಬಂದು ಹುಬ್ಬಳ್ಳಿಯ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿನ ಫೇವರ್ಸ್ ಕಂಪನಿಯಲ್ಲಿ ಮೋಹನಸಿಂಗ್ ಕೆಲಸಕ್ಕೆ ಸೇರಿಕೊಂಡಿದ್ದರು. ತಂದೆಯ ಸಾವಿನ …

Read More »

ಸಾಲುಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು

ಬೆಂಗಳೂರು: ಸಾಲುಮರದ ತಿಮ್ಮಕ್ಕ ಅವರನ್ನು ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಭಾನುವಾರ ಮನೆಯಲ್ಲಿ ಬಿದ್ದ ಪರಿಣಾಮ ತಿಮ್ಮಕ್ಕ ಅವರ ಸೊಂಟದ ಮೂಳೆ ಮುರಿದಿದೆ. ಈ ಹಿನ್ನೆಲೆ ವೃಕ್ಷ ಮಾತೆಯನ್ನ ಇಂದು ಅವರ ಮಗ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಂಗಳವಾರ ಸಾಲುಮರದ ತಿಮ್ಮಕ್ಕ ಅವರಿಗೆ ವೈದ್ಯರು ಶಸ್ತ್ರ ಚಿಕಿತ್ಸೆ ನಡೆಸಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಸದ್ಯ ತಿಮ್ಮಕ್ಕ ಅವರು ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಸಾಲು ಮರದ ತಿಮ್ಮಕ್ಕನವರು ನೆಟ್ಟ …

Read More »

ಬಂದ್‌ಗೆ ಬೆಂಬಲ ನೀಡಿದವರು ಯಾರು?

ಬೆಂಗಳೂರು: ಕೃಷಿ ಸಂಬಂಧಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳುಭಾರತ್ ಬಂದ್‍ಗೆ ಕರೆ ನೀಡಿದೆ. ಸಹಜವಾಗಿಯೇ ಕರ್ನಾಟಕದಲ್ಲಿಯೂ ಕೂಡ ಭಾರತ್ ಬಂದ್‍ಗೆ ರೈತ ನಾಯಕರು ಕರೆ ನೀಡಿದ್ದಾರೆ. ರೈತರ ಈ ಉದ್ದೇಶಿತ ಬಂದ್‍ಗೆ ಬೆಂಬಲ ಸೂಚಿಸುವ ವಿಚಾರದಲ್ಲಿ ಹಲವು ಸಂಘ ಸಂಸ್ಥೆಗಳಿಂದ ಮಿಶ್ರ ಪ್ರತಿಕ್ರಿಯೆ. ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಭಾರತ್ ಬಂದ್‍ಗೆ ಬೆಂಬಲ ಘೋಷಿಸಿವೆ. ಆದರೆ ಕನ್ನಡ ಪರ ಸಂಘಟನೆಗಳಲ್ಲಿ ಈ ಬಗ್ಗೆ ಭಿನ್ನಾಭಿಪ್ರಾಯಗಳಿವೆ. ಕೆಲ ಸಂಘಟನೆಗಳು ಬಂದ್‍ನಲ್ಲಿ ಪಾಲ್ಗೊಳ್ಳುವುದಾಗಿ …

Read More »

ಬೆಳಗಾವಿ ಲೋಕಸಭೆ ಉಪಚುನಾವಣೆ: ಜಿಲ್ಲಾ ಕಾಂಗ್ರೆಸ್ ನಾಯಕರ ಜೊತೆ ಡಿಕೆಶಿ ಚರ್ಚೆ

ಬೆಂಗಳೂರು: ಲೋಕಸಭೆ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ಕುರಿತಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಇಂದು ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ನಾಯಕರ ಜೊತೆ ಸಮಾಲೋಚನೆ ನಡೆಸಿದರು. ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಈಶ್ವರ ಖಂಡ್ರೆ, ಉಪ ಚುನಾವಣೆಯ ಉಸ್ತುವಾರಿ ವಹಿಸಿರುವ ಎಂ.ಬಿ. ಪಾಟೀಲ್, ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ್, ಮಹಾಂತೇಶ ಕೌಜಲಗಿ …

Read More »

ಸಚಿವ ಆರ್.ಅಶೋಕ್ ವಿರುದ್ಧ ಸ್ಪೀಕರ್ ಗರಂ

ಬೆಂಗಳೂರು, ಡಿ.7- ಸಾಫ್ಟ್‍ವೇರ್‍ನಲ್ಲಿರುವ ದೋಷದಿಂದಾಗಿ ಪಹಣಿಯ ಬೆಳೆ ಕಾಲಂನಲ್ಲಿ ಕುಷ್ಕಿ ಎಂದು ಅಧಿಕಾರಿಗಳು ನಮೂನೆ ಮಾಡುತ್ತಿದ್ದು, ರೈತರಿಗೆ ಯಾವುದೇ ರೀತಿಯ ಸಾಲ ಸೌಲಭ್ಯ ಸಿಗುತ್ತಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರ ಮೇಲೆ ವಿಧಾನಸಭೆ ಸ್ಪೀಕರ್ ಸೇರಿದಂತೆ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರು ಮುಗಿಬಿದ್ದ ಘಟನೆ ವಿಧಾನಸಭೆಯಲ್ಲಿ ನಡೆಯಿತು. ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‍ನ ಡಿ.ಪಿ.ರಾಜೇಗೌಡ ಆವರು ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಲು ಕಂದಾಯ ಸಚಿವ ಅಶೋಕ್ ಆವರು ಮುಂದಾಗುತ್ತಿದ್ದಂತೆ ಸ್ಪೀಕರ್ ಕಾಗೇರಿ …

Read More »

ಅಧಿವೇಶನದ ಮೊದಲ ದಿನವೇ ವಿಧಾನಸಭೆ ಖಾಲಿ ಖಾಲಿ..!

ಬೆಂಗಳೂರು, ಡಿ.7- ಚಳಿಗಾಲದ ಅಧಿವೇಶನದ ಮೊದಲ ದಿನವೇ ವಿಧಾನಸಭೆ ಖಾಲಿ ಖಾಲಿ ಹೊಡೆದಿತ್ತು. ಆಡಳಿತ ಮತ್ತು ಪ್ರತಿಪಕ್ಷಗಳ ಸಾಲಿನಲ್ಲಿ ಬೆರಳೆಣಿಕೆಯಷ್ಟು ಸದಸ್ಯರು ಮಾತ್ರ ಹಾಜರಿದ್ದರು. ಉಳಿದಂತೆ ಬಹುತೇಕ ಆಸನಗಳು ಖಾಲಿ ಖಾಲಿಯಾಗಿದ್ದವು. ಆಡಳಿತ ಪಕ್ಷದಿಂದ ಮುಖ್ಯಮಂತ್ರಿ ಸೇರಿದಂತೆ 12 ಸಚಿವರು, 26 ಶಾಸಕರು, ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‍ನ 25 ಶಾಸಕರು ಹಾಗೂ ಜೆಡಿಎಸ್‍ನಿಂದ ಪಕ್ಷದ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಸೇರಿದಂತೆ ಐವರು ಶಾಸಕರು ಮಾತ್ರ ಹಾಜರಾಗಿದ್ದರು. ಸದನದ …

Read More »

ಭಾರತ್ ಬಂದ್‍ಗೆ ಕಾಂಗ್ರೆಸ್ -ಟಿಎಸ್‍ಆರ್ ಬೆಂಬಲ

ನವದೆಹಲಿ, ಡಿ.6- ಕೃಷಿಗೆ ಸಂಬಂಧಪಟ್ಟ ಕಾನೂನುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯ ಭಾಗವಾಗಿ ಕರೆ ನೀಡಲಾರಿಗುವ ಭಾರತ್ ಬಂದ್‍ಗೆ ಕಾಂಗ್ರೆಸ್ ಸೇರಿದಂತೆ ವಿವಿಧ ರಾಜ್ಯಗಳು ಬೆಂಬಲ ಘೋಷಿಸಿವೆ. ಕೃಷಿ ಕಾನೂನುಗಳನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಬಾರದು. ಅವುಗಳನ್ನು ಸಂಸತ್‍ನಲ್ಲಿ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಪಂಜಾಬ್‍ನ ರೈತರು ದೆಹಲಿಗೆ ತೆರಳಿ ರಸ್ತೆಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಪ್ರತಿಭಟನೆ 11ನೇ ದಿನಕ್ಕೆ ಕಾಲಿಟ್ಟಿದೆ. ಈವರೆಗೂ ಕೇಂದ್ರ …

Read More »

ಫೈಝರ್ ಕೋವಿಡ್ ಲಸಿಕೆ ಬಳಕೆ ಬಗ್ಗೆ ಭಾರತದಲ್ಲಿ ಗೊಂದಲ

ನವದೆಹಲಿ: – ಕೊರೊನಾ ನಿಯಂತ್ರಣಕ್ಕೆ ತುರ್ತು ಸಂದರ್ಭದಲ್ಲಿ ಬಳಸಲು ಮಾನ್ಯತೆ ಪಡೆದಿರುವ ಫೈಝರ್ ಲಸಿಕೆ ಗುಣಮಟ್ಟದ ಬಗ್ಗೆ ಉತ್ಪಾದಕ ಕಂಪೆನಿಯೇ ಗೊಂದಲಕಾರಿ ಹೇಳಿಕೆ ನೀಡಿದೆ. ಇಂಗ್ಲೆಂಡ್ ಸರ್ಕಾರ ಮತ್ತು ಬಹರೈನ್ ಆರೋಗ್ಯ ಪ್ರಾಧಿಕಾರದಿಂದ ಅಂಗೀಕಾರ ಪಡೆದಿರುವ ಫೈಝರ್‍ಲಸಿಕೆಯನ್ನು ಕೊರೊನಾ ವಿರುದ್ಧ ಹೋರಾಟಕ್ಕೆ ತುರ್ತು ಸಂದರ್ಭದಲ್ಲಿ ಬಳಸಬಹುದೆಂದು ನಿರ್ಣಯಿಸಲಾಗಿದೆ. ಭಾರತ ಸರ್ಕಾರ ಕೂಡ ಈ ಲಸಿಕೆಯನ್ನು ತುರ್ತು ಸಂದರ್ಭದಲ್ಲಿ ಬಳಸಲು ಒಪ್ಪಿ ಕೊಂಡಿದ್ದು, ಲಕ್ಷಾಂತರ ಡೊಸೇಜ್‍ಗಳನ್ನು ಆಮದು ಮಾಡಿಕೊಳ್ಳುತ್ತಿದೆ. ಈಗ ಫೈಝರ್‍ನ …

Read More »

ರಮೇಶ್ ಜಾರಕಿಹೊಳಿ ಮನಸು ಮಾಡಿದರೆ , ಗೋಕಾಕ್ ಜಿಲ್ಲೆ ಆಗಿಸಬಹುದು

ಗೋಕಾಕ : ಗ್ರಾ.ಪ ಚುನಾವಣೆಯಲ್ಲಿ ಯಾವುದೇ ಪಕ್ಷದ ಚಿನ್ನೆಯ ಮೇಲೆ ನಡೆಯುವುದಿಲ್ಲ. ಪರೋಕ್ಷವಾಗಿ ಬೆಂಬಲಿತ ಅಭ್ಯರ್ಥಿ ಪರ ಕೆಲಸ ಮಾಡಲಿದ್ದಾರೆ. ಗೋಕಾಕ ನಲ್ಲಿ ಈ ಬಾರಿ ಚುನಾವಣೆಯಲ್ಲಿ  ಹೆಚ್ಚು ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ ವಿಶ್ವಾಸ ವ್ಯಕ್ತ ಪಡಿಸಿದರು. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಾದ್ಯಂತ ಗ್ರಾಮ ಪಂಚಾಯಿತಿ ಚುನಾವಣೆಗೆ ಭಾರೀ ತಯಾರಿಗಳು ನಡೆದಿವೆ. ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಬೆಂಬಲಿತ …

Read More »