Breaking News

ಮನೆಯಲ್ಲೇ ಪೂಜೆ ಮಾಡಿ, ಬೀದಿಗೆ ಬರಬೇಡಿ..!!

ಬೆಂಗಳೂರು : ಗಣೇಶ ಚತುರ್ಥಿಗೆ ಕೆಲವೇ ಗಂಟೆಗಳು ಬಾಕಿ ಇರುವಂತೆ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ಮನವಿ ಮಾಡಿದೆ. ಯಾವುದೇ ಕಾರಣಕ್ಕೂ ಜನತೆ ಬಹಿರಂಗವಾಗಿ ಬೀದಿಗಳಲ್ಲಿ ಗಣಪತಿಯನ್ನು ಕೂರಿಸಿ ಹಬ್ಬ ಆಚರಿಸಬಾರದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಿದ್ದಾರೆ.  ಈ ಕುರಿತು ಜನತೆಗೆ ಕಳಕಳಿಯ ವಿನಂತಿ ಮಾಡಿರುವ ಅವರು, ಕೊರೊನಾ ಸಾಂಕ್ರಾಮಿಕ ಕಾಯಿಲೆ ಹಿನ್ನೆಲೆಯಲ್ಲಿ ಯಾವುದೇ ಬಹಿರಂಗ ಕಾರ್ಯಕ್ರಮ ಆಯೋಜಿಸಬೇಡಿ. ನಿಮ್ಮ ನಿಮ್ಮ ಮನೆಗಳಲ್ಲಿ ಗಣಪನನ್ನು ಆರಾಧಿಸಿ ಎಂದು ಸಿಎಂ …

Read More »

ರಾಜ್ಯಕಾರಣದಲ್ಲಿ ಸದ್ದು ಮಾಡಿದ ಫೋನ್ ಟ್ಯಾಪ್

ಬೆಂಗಳೂರು,  : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಫೋನ್ ಟ್ಯಾಪ್ ಆಗಿದೆ ಎಂಬ ಗಂಭೀರ ಆರೋಪವನ್ನು ಮಾಡಿದ್ದಾರೆ. ಇಂದು (ಶುಕ್ರವಾರ) ಮಾತನಾಡಿರುವ ಅವರು, ನನ್ನ ಫೋನ್ ಟ್ಯಾಪ್ ಆಗಿದೆ. ಟ್ಯಾಪ್ ಮಾಡಿರುವ ಬಗ್ಗೆ ದೂರು ದಾಖಲಿಸುತ್ತೇನೆ. ನಿನ್ನೆಯಿಂದ ಕರೆಗಳೇ ಬರುತ್ತಿಲ್ಲ, ಹೋಗುತ್ತಿಲ್ಲ. ಶೇಕಡ 100 ರಷ್ಟು ಫೋನ್ ಟ್ಯಾಪ್ ಆಗಿದೆ ಎಂದು ಆರೋಪಿಸಿದರು. ನಿರ್ಮಲಾನಂದ ಸ್ವಾಮೀಜಿಯ ಫೋನ್ ಟ್ಯಾಪ್: ಅಶೋಕ್ ಕ್ಷಮೆ ಪ್ರಶ್ನಿಸಿದ ಕುಮಾರಸ್ವಾಮಿ ನಮ್ಮ ಸುದರ್ಶನ್ 25 ಕಾಲ್ …

Read More »

ಭಾರತದಲ್ಲಿ IPL ಅನ್ನೋದು ದೊಡ್ಡ ಹಬ್ಬ. ದೇಶದಲ್ಲಿ

ಚೆನ್ನೈ: ಜಾತ್ಯಾತೀತ ಭಾರತದಲ್ಲಿ IPL ಅನ್ನೋದು ದೊಡ್ಡ ಹಬ್ಬ. ದೇಶದಲ್ಲಿ ಕೊರೊನಾ ಹಾವಳಿಯಿಂದಾಗಿ IPL ಪಂದ್ಯಾವಳಿಯನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಮುಂದಿನ ತಿಂಗಳು ಸೆಪ್ಟೆಂಬರ್ 19ರಿಂದ ನವೆಂಬರ್ 10ರವರೆಗೆ ನಡೆಯಲಿರುವ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಗಳಿಗಾಗಿ ಎಲ್ಲಾ ತಂಡಗಳು ಭರ್ಜರಿ ತಯಾರಿ ಮಾಡಿಕೊಳ್ಳುತ್ತಿವೆ. ಈ ಹಿನ್ನೆಲೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಸಹ ಕಪ್ ಗೆಲ್ಲುವ ಹಾಟ್ ಫೇವರೀಟ್ ತಂಡವಾಗಿದ್ದು, ಇಂದು ಚೆನ್ನೈ ವಿಮಾನ ನಿಲ್ದಾಣದಿಂದ ದುಬೈಗೆ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ …

Read More »

ನಡು ರಸ್ತೆಯಲ್ಲಿ ಪುಂಡರಿಗೆ ಬಸ್ಕಿ ಹೊಡೆಸಿದ ಪೊಲೀಸರು.. ಎಲ್ಲಿ?

ಇಂದೋರ್: ಅಪರಾಧಿಗಳನ್ನು ಬಂಧಿಸಿ ಶಿಕ್ಷೆ ನೀಡುವ ಪದ್ದತಿ ಸಾಮಾನ್ಯವಾಗಿ ಕಾಣಬಹುದು. ಆದರೆ ಇಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಇಬ್ಬರು ಅಪರಾಧಿಗಳಿಗೆ ಅವರ ಅಡ್ಡಾದಲ್ಲೇ ಶಿಕ್ಷೆ ನೀಡಿದ್ದಾರೆ. ಹಾಗೂ ಅಲ್ಲಿನ ಜನರಿಗೆ ಅಪರಾಧಿಗಳು ಕ್ಷಮೆ ಕೇಳುವಂತೆ ಮಾಡಿದ್ದಾರೆ. ಅಪರಾಧ ಎಸಗಿದ ಇಬ್ಬರು ವ್ಯಕ್ತಿಗಳನ್ನು ನಡು ರಸ್ತೆಯಲ್ಲೇ ಕಿವಿ ಹಿಡಿದು ಬಸ್ಕಿ ಹೊಡೆಸಿರುವ ಅಪರೂಪದ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ಗುರುವಾರ ಸಂಜೆ ನಡೆದಿದೆ. ಈ ವೇಳೆ ನೆರೆಹೊರೆಯವರು ತಮ್ಮ ಬಾಲ್ಕನಿಗಳಿಂದಲೇ ಚಪ್ಪಾಳೆ ತಟ್ಟಿ ಅಪರಾಧಿಗಳ …

Read More »

ಕೃಷ್ಣಾರೋಗಿಗೆ ‘ಡ್ರೋನ್‌’ನಿಂದ ಮಾತ್ರೆ ರವಾನೆ

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಕೃಷ್ಣಾನದಿಯ ಕರಕಲಗಡ್ಡಿ ನಡುಗಡ್ಡೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ರೋಗಿಗೆ ಡ್ರೋನ್‌ ಮೂಲಕ ಮಾತ್ರೆ ಹಾಗೂ ಔಷಧಿಗಳನ್ನು ಶುಕ್ರವಾರ ಯಶಸ್ವಿಯಾಗಿ ತಲುಪಿಸಲಾಯಿತು. ಕರಕಲಗಡ್ಡಿಯಲ್ಲಿ ಒಂದೇ ಕುಟುಂಬದ ನಾಲ್ಕು ಜನರು ಉಳಿದುಕೊಂಡಿದ್ದಾರೆ. ತಿಪ್ಪಣ್ಣ ಎನ್ನುವವರು ಪಾರ್ಶ್ವವಾಯುವಿನಿಂದ ಬಳಲುತ್ತಿದ್ದಾರೆ. ವೈದ್ಯರ ಸಲಹೆಯಂತೆ ಅವರು ನಿರಂತರ ತೆಗೆದುಕೊಳ್ಳುತ್ತಿದ್ದ ಮಾತ್ರೆಗಳು ಖಾಲಿಯಾಗಿದ್ದವು. ಮಾತ್ರೆಗಳನ್ನು ಕಳುಹಿಸುವ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ನಡುಗಡ್ಡೆ ಜನರು ಗುರುವಾರ ಮನವಿ ಮಾಡಿದ್ದರು. ನಾರಾಯಣಪುರ ಜಲಾಶಯದಿಂದ 2.72 ಲಕ್ಷ ಕ್ಯುಸೆಕ್‌ ನೀರನ್ನು …

Read More »

ರೈತರ `ಪಶು ಸಂಜೀವಿನಿ’ ಸಂಚಾರಿ ಚಿಕಿತ್ಸಾಲಯಕ್ಕೆ ಸಿಎಂ ಚಾಲನೆ

ಬೆಂಗಳೂರು,  : ಕರ್ನಾಟಕ ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಜಾನುವಾರುಗಳ ಆರೋಗ್ಯ ರಕ್ಷಣೆಗೆ ಸರಕಾರ ಸಜ್ಜಾಗಿದ್ದು, ರೈತರ ಕರೆಗಳಿಗೆ ತುರ್ತಾಗಿ ಸ್ಪಂದಿಸಿ ಕಾರ್ಯ ನಿರ್ವಹಿಸಲಿದೆ. ಈ ಸೇವೆಗಳನ್ನು ಇಲಾಖೆಯ ಸಹಾಯವಾಣಿ ಸೇವೆಗಳಿಗೆ ಲಿಂಕ್ ಮಾಡಿ 24/7 ಜಾನುವಾರುಗಳ ರಕ್ಷಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಗುರುವಾರ ವಿಧಾನಸೌಧದ ಪೂರ್ವದ್ವಾರದ ಮೆಟ್ಟಿಲುಗಳ ಬಳಿ ಪಶುಸಂಗೋಪನಾ ಇಲಾಖೆಯ ವತಿಯಿಂದ ಆಯೋಜಿಸಿದ್ದ `ಪಶುಸಂಜೀವಿನಿ’ ಸುಸಜ್ಜಿತ ಸಂಚಾರಿ ಪಶುಚಿಕಿತ್ಸಾ ವಾಹನಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಹಸಿರು …

Read More »

ಗ್ರಾಮಚುನಾವಣೆ ವಾರ್ಡಗಳ ಮೀಸಲಾತಿ ಪಟ್ಟಿ ಯಾದಿಯ ಸರ್ಕಾರ ಅಧಿಕೃತ

ಚಿಕ್ಕೋಡಿ: ತಾಲೂಕಿನ ಹಿರೇಕೋಡಿ ಗ್ರಾಮ ಪಂಚಾಯತಿಗೆ 2020-21 ರಲ್ಲಿ ನಡೆಯುವ ಪಂಚಾಯತಿ ಚುನಾವಣೆ ವಾರ್ಡಗಳ ಮೀಸಲಾತಿ ಪಟ್ಟಿ ಯಾದಿಯ ಸರ್ಕಾರ ಅಧಿಕೃತ ಪ್ರಕಟಿಸುವ ಮುನ್ನವೇ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿರುವುದು ಹಲವು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ ಎಂದು ಗ್ರಾ. ಪಂ. ಮಾಜಿ ಸದಸ್ಯ ವಿಕ್ರಮ ಬಣಗೆ ಆರೋಪಿಸಿದ್ದಾರೆ. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೀಸಲಾತಿ ಪಟ್ಟಿ  ಸರ್ಕಾರ ಪ್ರಕಟಿಸುವ 20 ದಿನಗಳ ಮೊದಲೇ ಸಾಮಾಜಿಕ ಜಾಲತಾಣದಲ್ಲಿ ಹರದಾಡಿರುವ ಪಟ್ಟಿ …

Read More »

ಮಾರುತಿ ಕಾರ್ ಪಲ್ಟಿ: ಸ್ಥಳದಲ್ಲೇ ಇಬ್ಬರ ಸಾವು, ಐವರು ಗಂಭೀರ

ಚಿತ್ರದುರ್ಗ: ಭೀಕರ ಕಾರು ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಐದು ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಆನೆಸಿದರೆ ಗ್ರಾಮದ ಬಳಿ ಈ ಘಟನೆ ಸಂಭವಿಸಿದ್ದು, ಮಾರುತಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 7 ಜನರ ಪೈಕಿ, ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಉಳಿದ ಐದು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಸ್ಥಳಕ್ಕಾಗಮಿಸಿದ ಸಿಪಿಐ ರಾಘವೇಂದ್ರ, …

Read More »

KCET Result 2020- ಎಂಜಿನಿಯರಿಂಗ್ ವಿಭಾಗದಲ್ಲಿ ರಕ್ಷಿತ್ ನಂ. 1; ಇಲ್ಲಿದೆ ವಿವಿಧ ವಿಭಾಗಗಳ ಟಾಪ್ ರ್‍ಯಾಂಕರ್ಸ್

ಬೆಂಗಳೂರು: ರಾಜ್ಯದ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಎಂಜಿನಿಯರಿಂಗ್, ಫಾರ್ಮಾ, ಕೃಷಿ, ನ್ಯಾಚುರೋಪಥಿ ವಿಭಾಗಗಳಲ್ಲಿ ವಿದ್ಯಾರ್ಥಿಗಳ ರ್‍ಯಾಂಕಿಂಗ್ ಲಿಸ್ಟ್ ಪ್ರಕಟಗೊಂಡಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದ ಫಲಿತಾಂಶದಲ್ಲಿ ಬೆಂಗಳೂರಿನ ಆರ್.ವಿ. ಕಾಲೇಜು ವಿದ್ಯಾರ್ಥಿ ರಕ್ಷಿತ್ ಎಂ ಅವರು ಎಂಜಿನಿಯರಿಂಗ್​ನಲ್ಲಿ ನಂಬರ್ ಒನ್ ಸ್ಥಾನ ಅಲಂಕರಿಸಿದ್ದಾರೆ. ಸಿಇಟಿ ಪರೀಕ್ಷೆ ಬರೆದ 1.75 ಲಕ್ಷ ವಿದ್ಯಾರ್ಥಿಗಳ ಪೈಕಿ 1,55,668 ಮಕ್ಕಳು ಅರ್ಹತೆ ಗಿಟ್ಟಿಸಿದ್ದಾರೆ. ಉನ್ನತ ಶಿಕ್ಷಣ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ. ಅಶ್ವಥ …

Read More »

ಕಬಿನಿ ಜಲಾಶಯಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಾಗಿನ

ಮೈಸೂರು : ಜಿಲ್ಲೆಯ ಎಚ್.ಡಿ.ಕೋಟೆಯ ಕಬಿನಿ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಬಾಗಿನ ಅರ್ಪಿಸಿದರು. ಇದೇ ವೇಳೆ ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರುಗಳು ಭಾಗಿಯಾಗಿದ್ದರು. ಬಳಿಕ ಕಬಿನಿ ಜಲಾಶಯದ ಕೆಳಭಾಗದಲ್ಲಿ ಮೇಲ್ಮಟ್ಟದ ಸೇತುವೆ ಹಾಗೂ ಸಂಪರ್ಕ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳು ಗುದ್ದಲಿಪೂಜೆ ನೆರವೇರಿಸುವ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು. ಸಚಿವರಾದ ಸೋಮಶೇಖರ್, ರಮೇಶ್ ಜಾರಕಿಹೊಳಿ, ಶಾಸಕರಾದ ಎಸ್.ಎ.ರಾಮದಾಸ್, …

Read More »