ಕೋಲಾರ: ಕೊರೊನಾ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳಿಂದ ಲಕ್ಷ ಲಕ್ಷ ಲೂಟಿ ಮಾಡುತ್ತಿದ್ದ ಪ್ರಕರಣ ಬಯಲಾಗಿದೆ. ಕೋಲಾರದ ಲಕ್ಷ್ಮೀ ಆಸ್ಪತ್ರೆಯಲ್ಲಿ 11 ದಿನಕ್ಕೆ 3.9 ಲಕ್ಷ ಬಿಲ್ ಮಾಡಿರುವುದು ಬೆಳಕಿಗೆ ಬಂದಿದೆ. ಅರವಿಂದ್ ಎಂಬ ಸೋಂಕಿತನ ಹೆಸರಲ್ಲಿ ಲಕ್ಷಗಟ್ಟಲೆ ಬಿಲ್ ಮಾಡಲಾಗಿದ್ದು, 3 ಲಕ್ಷ 90 ಸಾವಿರ ಬಿಲ್ ಮಾಡಿರುವ ರಸೀದಿ ಎಲ್ಲೆಡೆ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ರೋಗಿಯ ಬಿಲ್ ವೈರಲ್ ಆಗಿದ್ದು, ಸರ್ಕಾರ, ಆರೋಗ್ಯ ಸಚಿವರಿಗೆ ಜನರು ಹಿಗ್ಗಾಮುಗ್ಗಾ …
Read More »ವೆಂಟಿಲೇಟರ್ ಬೆಡ್ ಸಿಗದೇ ಮೂವರ ದುರ್ಮರಣ; ಮುಂಡರಗಿ ಆಸ್ಪತ್ರೆಯಲ್ಲಿ ದುರಂತ
ಗದಗ: ರಾಜ್ಯದಲ್ಲಿ ಮತ್ತೆ ಆಕ್ಸಿಜನ್, ವೆಂಟಿಲೇಟರ್ ಗಾಗಿ ಹಾಹಾಕಾರ ಆರಂಭವಾಗಿದೆ. ವೆಂಟಿಲೇಟರ್ ಬೆಡ್ ಇಲ್ಲದೇ ಮೂವರು ಕೊರೊನಾ ಸೋಂಕಿತರು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ಆಸ್ಪತ್ರೆಯಲ್ಲಿ ನಡೆದಿದೆ. ನಿನ್ನೆ ರಾತ್ರಿಯಿಂದ ಇಂದು ಬೆಳಗಿನವರೆಗೆ ಮೂವರು ರೋಗಿಗಳು ಸಾವನ್ನಪ್ಪಿದ್ದಾರೆ. ಮುಂಡರಗಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಇಲ್ಲದೇ ಸೋಂಕಿತರು ಪರದಾಡುತ್ತಿದ್ದು, ನಿನ್ನೆ ರಾತ್ರಿ 55 ವರ್ಷದ ಮಹಿಳೆ ಮೃತಪಟ್ಟಿದ್ದರೆ, ಇಂದು ಬೆಳಿಗ್ಗೆ ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. ಈ ನಡುವೆ ಆಸ್ಪತ್ರೆಯಲ್ಲಿ ಇನ್ನಿಬ್ಬರು ಸೋಂಕಿತರು …
Read More »ಬೆಳ್ಳಂಬೆಳಗ್ಗೆ ಹುಬ್ಬಳ್ಳಿಯಲ್ಲಿ 20ಕ್ಕೂ ಹೆಚ್ಚು ಬೈಕ್ ಸೀಜ್ ಮಾಡಿದ ಪೊಲೀಸರು!
ಹುಬ್ಬಳ್ಳಿ: ರಾಜ್ಯದಲ್ಲಿ ಇಂದಿನಿಂದ ಆರಂಭವಾಗಿರುವ ಲಾಕ್ ಡೌನ್ ಕಟ್ಟುನಿಟ್ಟಾಗಿ ಜಾರಿ ಮಾಡಲು ಪೊಲೀಸರು ನಸುಕಿನ ಜಾವದಿಂದಲೇ ಕಾರ್ಯಾಚರಣೆಗೆ ಇಳಿದಿದ್ದಾರೆ. ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ 20ಕ್ಕೂ ಹೆಚ್ಚು ವಾಹನಗಳನ್ನ ಸೀಜ್ ಮಾಡಿ ಅನಗತ್ಯವಾಗಿ ಹೊರಗೆ ಬರೋರಿಗೆ ಬಿಸಿ ಮುಟ್ಟಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ವಿವಿಧ ಸರ್ಕಲ್ ಗಳಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ ಪರಿಶೀಲನೆ ನಡೆಸುತ್ತಿದ್ದು ಅನಗತ್ಯವಾಗಿ ಓಡಾಡುವ ವಾಹನಗಳನ್ನ ಸೀಜ್ ಮಾಡುತ್ತಿದ್ದಾರೆ. ಹುಬ್ಬಳ್ಳಿಯ ಚೆನ್ನಮ್ಮ ಸರ್ಕಲ್ ನಲ್ಲಿ ನಸುಕಿನ ಜಾವದಿಂದಲೇ ಪೊಲೀಸರು ಬೈಕ್ ಗಳನ್ನು …
Read More »ಕೊರೊನಾಗೆ ತಂದೆ ಮಗ ಬಲಿ
ಧಾರವಾಡ: ಸೋಂಕು ಹಿನ್ನೆಲೆ ಕಳೆದ ನಾಲ್ಕು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ತಂದೆ ಮಗ ಇಬ್ಬರು ಕೊರೊನಾಗೆ ಬಲಿಯಾದ ಘಟನೆ ಧಾರವಾಡದಲ್ಲಿ ನಡೆದಿದೆ. ತಂದೆ ರವೀಂದ್ರನಾಥ ವಸ್ತ್ರದ (74) ಮಗ ವಿಶ್ವನಾಥ ವಸ್ತ್ರದ (47) ಮೃತರಾಗಿದ್ದಾರೆ. ಕೊರೊನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ತಂದೆ ಮಗ ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದರು. ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ನಿನ್ನೆ ತಂದೆ ನಿಧನರಾಗಿದ್ದರೆ. …
Read More »ಲಾಕ್ಡೌನ್ ಮಧ್ಯೆ ಇಂದಿನಿಂದ ಲಿಕ್ಕರ್ ಹೋಮ್ ಡೆಲಿವರಿಗೆಅನುಮತಿ
ಛತ್ತೀಸ್ಗಢದಲ್ಲಿ ಬಿಗಿಯಾದ ಲಾಕ್ಡೌನ್ ಜಾರಿಗೊಳಿಸಿದ್ದರೂ ಮದ್ಯ ಮಾರಾಟಕ್ಕೆ ತುಸು ಸಡಿಲ ನೀತಿ ಅನುಸರಿಸಲಾಗುತ್ತಿದೆ. ಆಹಾರ ಮತ್ತು ಅಗತ್ಯ ವಸ್ತುಗಳ ರೀತಿ ಇಂದಿನಿಂದ ಮದ್ಯದ ಹೋಮ್ ಡೆಲಿವರಿಗೆ ರಾಜ್ಯ ಸರ್ಕಾರ ಅವಕಾಶ ನೀಡಿದೆ. ಲಾಕ್ಡೌನ್ನಿಂದ ಮನೆಯಲ್ಲೇ ಉಳಿಯುವ ಎಣ್ಣೆಪ್ರಿಯರು ಸರ್ಕಾರದ ಈ ನೀತಿಯಿಂದ ನಿಟ್ಟುಸಿರುಬಿಟ್ಟಿದ್ದಾರೆ. ಜನ ಸಂಚಾರ, ಅಂಗಡಿ ಮುಂಗಟ್ಟುಗಳು ಬಂದ್ ಮಾಡಿರುವ ಸಂದರ್ಭದಲ್ಲಿ ಲಿಕ್ಕರ್ ಮಾರಾಟಕ್ಕೆ ಅನುವು ಮಾಡಿಕೊಡಲಾಗಿದೆ. ಆನ್ಲೈನ್ ಮೂಲಕ ಲಿಕ್ಕರ್ ಆರ್ಡರ್ ಪಡೆದು ಹೋಮ್ ಡೆಲಿವರಿ ಕೊಡುವುದಕ್ಕೆ …
Read More »ಜನರಲ್ ಆಸ್ಪತ್ರೆಯನ್ನು ಕೋವಿಡ್ ಕೇಂದ್ರವಾಗಿ ಪರಿವರ್ತನೆ: ಬೆಳಗಾವಿಯ ಶಹಾಪುರದಲ್ಲಿ ನರ್ಸ್ ಗಳ ಅಂಗಿ ಹರಿದು ದುಷ್ಕರ್ಮಿಗಳಿಂದ ಹಲ್ಲೆ
ಬೆಳಗಾವಿ: ಸಾಮಾನ್ಯ ಇತರ ರೋಗಗಳಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯಾಗಿ ಬದಲಿಸಿದ್ದಕ್ಕೆ ಕೆಲವು ದುಷ್ಕರ್ಮಿಗಳು ಕರ್ತವ್ಯದಲ್ಲಿದ್ದ ನರ್ಸ್ ಗಳ ಮೇಲೆ ಹಲ್ಲೆ ಮಾಡಿ ಅವರ ಬಟ್ಟೆಗಳನ್ನು ಹರಿದ ಘಟನೆ ಬೆಳಗಾವಿಯ ಶಹಾಪುರದಲ್ಲಿ ನಡೆದಿದೆ. ಕಳೆದ ರಾತ್ರಿ ಈ ಅಸಹಜ ಘಟನೆ ನಡೆದಿದ್ದು ದುಷ್ಕರ್ಮಿಗಳಿಂದ ಏಟು ತಿಂದು ಅಂಗಿ ಹರಿಸಿಕೊಂಡದ್ದಲ್ಲದೆ ತೀವ್ರ ವಾಗ್ವಾದ ನಡೆಯುತ್ತಿರುವ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪೊಲೀಸರಿದ್ದರು ಜನರು ಕ್ಯಾರೇ ಅನ್ನುತ್ತಿಲ್ಲ. ಸರ್ಕಾರದ ಆದೇಶ …
Read More »ಬಡವರಿಗೆ ಉಚಿತ ದಿನಸಿ ವಿತರಿಸಿ, ಟೋಟಲ್ ಲಾಕ್ಡೌನ್ಗೆ ಒತ್ತಾಯಿಸಿದ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ವೇಗವಾಗಿ ಹರಡುತ್ತಿರುವ ಕೊರೊನಾ ಎರಡನೇ ಅಲೆಯನ್ನ ನಿಯಂತ್ರಣಕ್ಕೆ ತರಲು ಲಾಕ್ಡೌನ್ ವಿಧಿಸಲಾಗಿದೆ. ಈ ಹಿನ್ನಲೆ ಇಂದು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಪುಲಿಕೇಶಿನಗರದ ಬಡ ಜನರಿಗೆ ಉಚಿತ ದಿನಸಿ ವಿತರಣೆ ಕಾರ್ಯಕ್ರಮ ಆಯೋಜಿಸಿದ್ದರು. ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ದಿನಸಿ ಸಾಮಗ್ರಿಗಳನ್ನ ಹಂಚಿದರು. ಈ ವೇಳೆ ಮಾಜಿ ಸಚಿವ ಕೃಷ್ಣ ಭೈರೇಗೌಡ ಹಾಗೂ ಶಾಸಕ ಜಮೀರ್ ಅಹ್ಮದ್ ಖಾನ್ ಉಪಸ್ಥಿತರಿದ್ದರು. ಬಳಿಕ ಮಾತನಾಡಿದ ಸಿದ್ದರಾಮಯ್ಯ, ಪುಲಿಕೇಶಿನಗರದ ಶಾಸಕ …
Read More »ಲಾಕ್ ಡೌನ್: ಸಂಚಾರಕ್ಕೆ ಕಠಿಣ ನಿರ್ಬಂಧ
ವಿಜಯಪುರ: ನಗರದಲ್ಲಿ ಸೋಮವಾರ ಬೆಳಿಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಅರಸಿದ್ದಿ ಸಿಬ್ಬಂದಿಯೊಂದಿಗೆ ಸ್ವತಃ ರಸ್ತೆಗಳಿದು ವಾಹನಗಳ ತಪಾಸಣೆ ನಡೆಸಿ, ಅನಗತ್ಯ ಓಡಾಟಕ್ಕೆ ಕಡಿವಾಣ ಹಾಕಿದರು. ಅನಗತ್ಯವಾಗಿ ಸಂಚರಿಸುತ್ತಿದ್ದ ವಾಹನಗಳನ್ನು ವಶಕ್ಕೆ ಪಡೆದು, ದಂಡ ವಿಧಿಸಿದರು. ವಾಹನಗಳನ್ನು ಠಾಣೆಯಲ್ಲಿ ನಿಲ್ಲಿಸಿ, ನಡೆದುಕೊಂಡು ಹೋಗುವಂತೆ ಕೆಲವರಿಗೆ ಎಚ್ಚರಿಕೆ ನೀಡಿ ಕಳುಹಿಸಿದರು. ಮಹಾರಾಷ್ಟ್ರ-ಕರ್ನಾಟಕ ಗಡಿಯ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿಗೊಳಿಸಲಾಗಿದೆ. ವಿಜಯಪುರ ನಗರ …
Read More »ಜೂನಿಯರ್ ಆರ್ಟಿಸ್ಟ್ಗಳಿಗೆ ಪಡಿತರ ಕಿಟ್ ವಿತರಣೆ; ಮಾನವೀಯತೆ ಮೆರೆದ ಹಿರಿಯ ನಟಿ ಲೀಲಾವತಿ ಹಾಗೂ ನಟ ವಿನೋದ್ ರಾಜ್
ಬೆಂಗಳೂರು: ಕೊರೊನಾ ದೇಶದೆಲ್ಲೇಡೆ ಹಬ್ಬಿದ್ದು, ಸಾವು-ನೋವು ಸಂಭವಿಸಿದೆ. ಹೀಗಿರುವಾಗಲೇ ರಾಜ್ಯ ಸರ್ಕಾರ ಪತಿಸ್ಥಿತಿಯನ್ನು ಹತೋಟಿಗೆ ತರಲು ಲಾಕ್ಡೌನ್ ಘೋಷಣೆ ಮಾಡಿದ್ದು, ಜನರು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ಸಿನಿಮಾ ರಂಗದವರು ಕೂಡ ಈ ಸಂಕಷ್ಟದಿಂದ ಹೊರತಾಗಿಲ್ಲ. ಹೀಗಾಗಿ ಅನೇಕರು ಸಾಮಾಜಿಕ ಕಾರ್ಯಕ್ಕೆ ಮುಂದಾಗಿದ್ದು, ಸಹಾಯ ಹಸ್ತ ನೀಡುತ್ತಿದ್ದಾರೆ. ಈ ರೀತಿ ನೆರವಿಗೆ ದಾವಿಸಿದವರಲ್ಲಿ ಹಿರಿಯ ನಟಿ ಲೀಲಾವತಿ ಹಾಗೂ ಅವರ ಪುತ್ರ ನಟ ವಿನೋದ್ ರಾಜ್ ಕೂಡ ಒಬ್ಬರು. ಇದೀಗ ಸಿನಿಮಾ …
Read More »ಇಂದಿನಿಂದ ಕಟ್ಟುನಿಟ್ಟಿನ ಲಾಕ್ಡೌನ್
ಕೊರೊನಾ ಸೋಂಕು ಹರಡುವಿಕೆ ತಡೆಗೆ ರಾಜ್ಯ ಸರ್ಕಾರ ಮೇ 10ರಿಂದ 24ರ ವರೆಗೆ ಘೋಷಿಸಿರುವ ಲಾಕ್ಡೌನ್ ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತರಲು ಜಿಲ್ಲಾ ಆಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಜಿಲ್ಲಾ ದಂಡಾಧಿಕಾರಿ ರಾಮಚಂದ್ರನ್ ಆರ್ ಅವರು ಈಗಾಗಲೇ ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಅನಗತ್ಯವಾಗಿ ಓಡಾಡುವವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ನಿಯಮ ಉಲ್ಲಂಘಿಸಿ ರಸ್ತೆಗಿಳಿಸಿದರೆ ವಾಹನಗಳನ್ನೂ ವಶಕ್ಕೆ ತೆಗೆದುಕೊಳ್ಳಲಿದ್ದಾರೆ. ಅನಗತ್ಯ ಸಂಚರಿಸುವಂತಿಲ್ಲ: …
Read More »
Laxmi News 24×7