Breaking News

ಆ. 21 ವರೆಗೂ ಭಾರೀ ಮಳೆಯಾಗುವ ಸಾಧ್ಯತೆಬೆಳಗಾವಿ ಸೇರಿ 6 ಜಿಲ್ಲೆಗಳಲ್ಲಿಮುನ್ನಚ್ಚರಿಕೆ

ಬೆಂಗಳೂರು:   ಬೆಳಗಾವಿ, ಧಾರವಾಡ ಸೇರಿ ಕರಾವಳಿ ಭಾಗದಲ್ಲಿ ಆ. 21 ವರೆಗೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಜನರು ಮುನ್ನಚ್ಚರಿಕೆ ವಹಿಸಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಕಲಬುರಗಿ ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕೈದು ದಿನಗಳ ಕಾಲ ಭಾರೀ ಮಳೆ ಸುರಿಯಬಹುದು. ಈ ಹಿನ್ನೆಲೆಯಲ್ಲಿ ಈ  ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಉತ್ತರ ಒಳನಾಡುಗಳಲ್ಲಿ ಚದುರಿದಂತೆ ಇಂದು ಮತ್ತು ನಾಳೆ …

Read More »

ಖಾನಾಪುರ ತಾಲೂಕಿನ ನಾಲ್ಕು ಗ್ರಾಮಗಳಿಗೆ ಸಂಪರ್ಕ ಕಡಿತ

ಖಾನಾಪುರ: ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಸೇತುವೆಯೊಂದು ಜಲಾವೃತವಾದ ಹಿನ್ನೆಲೆಯಲ್ಲಿ  ಖಾನಾಪುರ ತಾಲೂಕಿನ  ನಾಲ್ಕು ಗ್ರಾಮಗಳಿಗೆ ಸಂಪರ್ಕ ಕಡಿತಗೊಂಡಿದೆ. ಸಾತಾಳಿ ಗ್ರಾಮದ ತೂಗು ಸೇತುವೆ ಜಲಾವೃತವಾಗಿದೆ. ಈ ಸೇತುವೆ ಮೂಲಕ ಸಾತನಾಳಿ, ಮಾಚಾಳಿ ಸೇರಿದಂತೆ ನಾಲ್ಕೈದು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುತ್ತಿತ್ತು. ನದಿ ನೀರಿನ ಮಟ್ಟ ಹೆಚ್ಚಿ ಸೇತುವೆ ಜಲಾವೃತವಾದರಿಂದ ನಾಲ್ಕು ಗ್ರಾಮಗಳಿಗೆ ಸಂಪರ್ಕ ಕಡಿತವಾಗಿ ಪ್ರವಾಹ ಪರಿಸ್ಥಿತಿ ಎದುರಾಗಿದೆ

Read More »

ಪುತ್ರನ ನಿಶ್ಚಿತಾರ್ಥದಲ್ಲಿ ನಿಯಮ ಉಲ್ಲಂಘಿಸಿದ ಲಕ್ಷ್ಮಿ ಹೆಬ್ಬಾಳ್ಕರ್

ಶಿವಮೊಗ್ಗ: ತಮ್ಮ ಮಗನ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಬೆಳಗಾವಿ ಗ್ರಾಮಾಂತರ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕೊರೊನಾ ನಿಯಮವನ್ನು ಉಲ್ಲಂಘಿಸಿದ್ದಾರೆ. ಹೌದು. ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹಾಗೂ ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ ಸಹೋದರ ಬಿ.ಕೆ ಶಿವಕುಮಾರ್ ಪುತ್ರಿ ಹಿತಾ ನಿಶ್ಚಿತಾರ್ಥ ಕಾರ್ಯಕ್ರಮ ನಡೆಯಿತು. ಕೊರೊನಾ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳಲ್ಲಿ 50ಕ್ಕಿಂತ ಹೆಚ್ಚು ಜನರು ಸೇರಬಾರದೆಂಬ ನಿಯಮವಿದ್ದರೂ, ಸಮಾರಂಭದಲ್ಲಿ 50ಕ್ಕಿಂತ ಹೆಚ್ಚು ಜನರು ಭಾಗಿಯಾಗಿದ್ದಾರೆ. ಈ ಮೂಲಕ ಶಾಸಕಿ ಕೊರೊನಾ ನಿಯಮವನ್ನು …

Read More »

ಆಸ್ತಿಗಾಗಿ ಸಂಬಂಧಿಕರೇ ಮಹಿಳೆಯನ್ನು ಬರ್ಬರವಾಗಿ ಕೊಲೆ

ಮೈಸೂರು: ಆಸ್ತಿಗಾಗಿ ಸಂಬಂಧಿಕರೇ ಮಹಿಳೆಯನ್ನು ಬರ್ಬರವಾಗಿ ಕೊಲೆಗೈದ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ಘಟನೆ ನಡೆದಿದೆ.ಹತ್ಯೆಯಾದ ಮಹಿಳೆಯನ್ನು ಬೆಟ್ಟದಪುರ ಗ್ರಾಮದ ಗಂಗಮ್ಮ (45) ಎಂದು ಗುರುತಿಸಲಾಗಿದೆ. ಆರೋಪಿಗಳು ಗಂಗಮ್ಮರನ್ನು ಕೊಲೆ ಮಾಡಿ ಬಳಿಕ ಮೃತದೇಹವನ್ನು ಕಾವೇರಿ ನದಿಗೆ ಎಸೆದಿದ್ದಾರೆ. ಮೃತ ಗಂಗಮ್ಮಗೆ ಮಕ್ಕಳಿಲ್ಲ. ಗಂಡ ಸತ್ತು ಹೋಗಿದ್ದಾರೆ. ಆಗಸ್ಟ್ 7 ರಿಂದ ಗಂಗಮ್ಮ ನಾಪತ್ತೆಯಾಗಿದ್ದರು. ಕೊಲೆ ಆರೋಪಿಗಳು ಮದ್ಯದ ಅಮಲಿನಲ್ಲಿ ಹತ್ಯೆ ಬಗ್ಗೆ ಮಾತನಾಡಿದ್ದಾರೆ. ವಿಚಾರ ತಿಳಿದು …

Read More »

ಒನ್ ಸೈಡ್ ಲವ್ – 16 ವರ್ಷದ ಹುಡುಗ ನೇಣಿಗೆ ಶರಣು

ಮುಂಬೈ: 16 ವರ್ಷದ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿರುವ ಘಟನೆ ಮುಂಬೈನ ಸಂತಾಕ್ರೂಜ್ ನ ಕೊಲಿವೆರಿಯಲ್ಲಿ ನಡೆದಿದೆ. ವಿದ್ಯಾರ್ಥಿ ಆತ್ಮಹತ್ಯೆಗೂ ಮುನ್ನ ತಾನು ಪ್ರೀತಿಸುತ್ತಿದ್ದ ಗೆಳತಿಗೆ ಗುಡ್ ಬೈ ಮೆಸೇಜ್ ಕಳುಹಿಸಿದ್ದಾನೆ. 12ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಒನ್ ಸೈಡ್ ಪ್ರೀತಿಯಲ್ಲಿದ್ದನು. ಶುಕ್ರವಾರ ಪೋಷಕರು ಕೆಲಸಕ್ಕೆ ಹೋದಾಗ ಮನೆಯನ್ನು ಲಾಕ್ ಮಾಡಿಕೊಂಡಿದ್ದಾನೆ. ನೆರೆ ಮನೆಯ ಮಹಿಳೆ ಬಾಗಿಲು ತಟ್ಟಿದ್ದಾರೆ. ಬಾಗಿಲು ತೆಗೆಯದಿದ್ದಾಗ, ಮಹಿಳೆ ಕಿಟಕಿಯಲ್ಲಿ ಇಣುಕಿ ನೋಡಿದ್ದಾರೆ. ವಿದ್ಯಾರ್ಥಿ …

Read More »

ಡಿಜೆ ಹಳ್ಳಿ, ಕೆಜಿಹಳ್ಳಿಗೆ ಇಂದು ಕಟೀಲ್ ನೇತೃತ್ವದ ನಿಯೋಗ ಭೇಟಿ

ಬೆಂಗಳೂರು,ಆ.17- ರಾಜ್ಯಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ರಾಜಧಾನಿ ಬೆಂಗಳೂರಿನ ಡಿಜೆ ಹಳ್ಳಿ, ಕೆಜಿಹಳ್ಳಿ ಗಲಭೆ ಪ್ರಕರಣದ ಘಟನಾ ಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದ ನಿಯೋಗ ಇಂದು ಸಂಜೆ ಭೇಟಿ ನೀಡಲಿದೆ. ಬಿಜೆಪಿ ಮುಖಂಡರ ನಿಯೋಗದ ಜೊತೆಗೆ ನಳಿನ್ ಕುಮಾರ್ ಕಟೀಲ್ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಿದ್ದು, ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ನಿವಾಸಕ್ಕೂ ಭೇಟಿ ನೀಡುವರು. ಇದಕ್ಕೂ ಮುನ್ನ ಗೃಹ ಸಚಿವರ …

Read More »

ಸತೀಶ್ ಜಾರಕಿಹೊಳಿ ಸೋಮವಾರ ಸನ್ಮಾನ ಮಾಡಿ,  ವಿದ್ಯಾರ್ಥಿಗಳಿಗೆ ತಲಾ 5  ಸಾವಿರ ಚೆಕ್ ವಿತರಿಸಿದರು.

ಬೆಳಗಾವಿ : ಯಮಕನಮರಡಿ ಕ್ಷೇತ್ರದ ವ್ಯಾಪ್ತಿಯ ಎಸ್ಸೆಸ್ಸೆಲ್ಸಿ ಯಲ್ಲಿ ಉತ್ತಮ ಅಂಕ ಪಡೆದ ಟಾಫ್ 10 ವಿದ್ಯಾರ್ಥಿಗಳಿಗೆ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸೋಮವಾರ ಸನ್ಮಾನ ಮಾಡಿ,  ವಿದ್ಯಾರ್ಥಿಗಳಿಗೆ ತಲಾ 5  ಸಾವಿರ ಚೆಕ್ ವಿತರಿಸಿದರು. ಇದೇ ವೇಳೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯಲ್ಲಿಯೇ ಯಮಕನಮರಡಿ ಕ್ಷೇತ್ರದಲ್ಲಿ ಮೊಲದಲಿನಿಂದಲೂ ಶಿಕ್ಷಣ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಸನ್ಮಾನ ಮಾಡುವ ಮೂಲಕ ಮಕ್ಕಳಿಗೆ ಪ್ರೋತ್ಸಾಹಿಸುವ ಕೆಲಸ ಮಾಡಲಾಗುತ್ತಿದೆ. ಅದೇ …

Read More »

ಹಂದಿ ಕಳ್ಳರಿಂದ ತ್ರಿಬಲ್ ಮರ್ಡರ್ – ಓರ್ವನ ಶಿರ ನಾಪತ್ತೆ

ಚಿತ್ರದುರ್ಗ: ಹಂದಿ ಕದಿಯಲು ಬಂದಿದ್ದ ಕಳ್ಳರು ಮೂವರನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದಲ್ಲಿ ನಡೆದಿದೆ. ಮಾರೇಶ್ (50), ಯಲ್ಲೇಶ್ (30) ಮತ್ತು ಸೀನಪ್ಪ (30) ಕೊಲೆಯಾದ ದುರ್ದೈವಿಗಳು. ಒಂದು ವಾರದ ಹಿಂದೆ ನಾಯಕನಹಟ್ಟಿಗೆ ಬುಲೇರೊ ವಾಹನದಲ್ಲಿ ಬಂದಿದ್ದ ಆಂಧ್ರ ಮೂಲದ ಗುಂಪೊಂದು ನಿಮಗೆ ಪಾಠ ಕಲಿಸುವುದಾಗಿ ಎಚ್ಚರಿಕೆ ಕೊಟ್ಟು ತೆರಳಿದ್ದರು. ಹಂದಿ ವ್ಯಾಪಾರದ ವಿಚಾರದಲ್ಲಿ ಪರಸ್ಪರ ದ್ವೇಷವಿರಬಹುದೆಂಬ ಶಂಕೆ ನಾಯಕನಹಟ್ಟಿಯಲ್ಲಿ ವ್ಯಕ್ತವಾಗಿತ್ತು. …

Read More »

ನವೀನ್‌ ವಿರುದ್ಧ ದೂರು ನೀಡಿದ್ಧ ವ್ಯಕ್ತಿಯಿಂದ ಈಗ ಗಲಭೆಕೋರರ ವಿರುದ್ಧ ದೂರು

ಬೆಂಗಳೂರು: ಆರೋಪಿ ನವೀನ್‌ ವಿರುದ್ಧ ದೂರು ನೀಡಿದ್ದ ವ್ಯಕ್ತಿಯೇ ಈಗ ಡಿಜೆ ಹಳ್ಳಿ ಠಾಣೆಯಲ್ಲಿ ಗಲಾಟೆ ಮಾಡಿದ ಕಿಡಿಗೇಡಿಗಳ ವಿರುದ್ಧ ದೂರು ನೀಡಿದ್ದಾರೆ.ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್‌ ಪ್ರಕಟಿಸಿದ್ದಕ್ಕೆ ನವೀನ್‌ ವಿರುದ್ಧ ಫಿರ್ದೋಸ್‌ ಪಾಶಾ ನೀಡಿದ್ದರು. ಆದರೆ ಈಗ ತನ್ನ ಸ್ಕೂಟರ್‌ ಅನ್ನು ಕಿಡಿಗೇಡಿಗಳು ಸುಟ್ಟು ಹಾಕಿದ್ದಾರೆ ಎಂದು ಆರೋಪಿಸಿ ಡಿಜೆ ಹಳ್ಳಿ ಠಾಣೆಯಲ್ಲಿ ದೂರು ನೀಡಿದ್ದಾರೆ. ಸ್ವತ್ತಿನ ನಾಶ ಹಾಗೂ ನಷ್ಟ ಪ್ರತಿಬಂಧಕ ಅಧಿನಿಯಮ 1981 ಮತ್ತು ಐಪಿಸಿ ಸೆಕ್ಷನ್‌ …

Read More »

ಇಂದಿನಿಂದ 5 ದಿನ ತೆರೆದಿರುತ್ತೆ ಶಬರಿಮಲೆ ಅಯ್ಯಪ್ಪ ದೇವಸ್ಥಾನ

ಪಟ್ಟಣಂತಿಟ್ಟ, ಆ.17- ವಿಶ್ವವಿಖ್ಯಾತ ಶಬರಿ ಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲನ್ನು ಐದು ದಿನಗಳ ಮಾಸಿಕ ವಿಶೇಷ ಪೂಜೆಗಾಗಿ ಇಂದು ಬೆಳಗ್ಗೆ ತೆರೆಯಲಾಗಿದೆ. ಮಲೆಯಾಳಂ ಪಂಚಾಂಗದ ಪ್ರಕಾರ ಇಂದಿನಿಂದ ಆಗಸ್ಟ್ 21ರ ವರೆಗೆ ಅಯ್ಯಪ್ಪ ಸ್ವಾಮಿಗೆ ಮಾಸಿಕ ವಿಶೇಷ ಪೂಜೆ ನೆರವೇರಿಸಲಾಗುತ್ತದೆ ಎಂದು ಟ್ರವಾಂಕುರ್ ದೇವಸ್ಥಾನದ ಟ್ರಸ್ಟ್ ಅಧ್ಯಕ್ಷ ಎನ್.ವಾಸು ತಿಳಿಸಿದ್ದಾರೆ.ದೇವಸ್ಥಾನಕ್ಕೆ ಭೇಟಿ ನೀಡುವವರು ಕಡ್ಡಾಯವಾಗಿ ಕೊರೊನಾ ನೆಗೆಟಿವ್ ಪ್ರಮಾಣ ಪತ್ರ ಹಾಜರುಪಡಿಸಬೇಕು. ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದೇವಸ್ಥಾನವು ಕಟ್ಟುನಿಟ್ಟಿನ …

Read More »