Breaking News

ಸೋನಂ ವಾಂಗ್ ಚುಕ್ ಹೋರಾಟಕ್ಕೆ ಬೆಂಬಲ

ಬೆಳಗಾವಿ : ಜಂತರ್ ಮಂತರ್‌ನಿಂದ ಸೋನಂ ವಾಂಗ್‌ಚುಕ್‌ಗೆ ಬಲವಂತವಾಗಿ ತೆರವುಗೊಳಿಸಿವ ಕ್ರಮ ು ಹಾಗೂ ಪ್ರತಿಭಟನಾಕಾರರ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ಶನಿವಾರ ಚನ್ನಮ್ಮ ವೃತ್ತದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ನಡೆಸಲಾಯಿತು. ವಾಂಗ್‌ಚುಕ್ ಹೋರಾಟ ಬೆಂಬಲಿಸಿ ನಡೆದ ಪ್ರತಿಭಟನೆಯಲ್ಲಿ ಬಸವರಾಜ ಕಟ್ಟಿಮನಿ ಪ್ರತಿಷ್ಠಾನದ ಅಧ್ಯಕ್ಷ ಪ್ರೊ.ಯಲ್ಲಪ್ಪ ಹಿಮ್ಮಡಿ ಮಾತನಾಡಿ, ಈವರೆಗೆ ನೀಟ್ ಪರೀಕ್ಷಾ ಅಕ್ರಮದಿಂದಾಗಿ 20 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಾವುಗಳಿಗೆ ನ್ಯಾಯ ಸಿಗಬೇಕು ಮತ್ತು ದೇಶದ ಶಿಕ್ಷಣ …

Read More »

ಡಿಜಿಟಲ್ ಬ್ಯಾಂಕಿಂಗ್‌ನಿಂದ ಅನುಕೂಲ

ಬೋರಗಾಂವ: ಇಂದಿನ ಯುಗದಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳುವುದು ಅಗತ್ಯ. ಆದ್ದರಿಂದ ಸಂಸ್ಥೆಯಲ್ಲಿ ಕ್ಯೂಆರ್ ಕೋಡ್ ಮತ್ತು ಮೊಬೈಲ್ ಬ್ಯಾಂಕಿಂಗ್ ಅಪ್ಲಿಕೇಶನ್ ಅನಾವರಣಗೊಳಿಸುವ ಮೂಲಕ ಡಿಜಿಟಲ್ ಬ್ಯಾಂಕಿಂಗ್‌ಗೆ ಅವಕಾಶ ಕಲ್ಪಿಸಿದ್ದೇವೆ ಎಂದು ಅರಿಹಂತ ಸೊಸೈಟಿ ಅಧ್ಯಕ್ಷ ಅಭಿನಂದನ ಪಾಟೀಲ ಹೇಳಿದರು. ಅರಿಹಂತ ಸೊಸೈಟಿಯಲ್ಲಿ ಶನಿವಾರ ಡಿಜಿಟಲ್ ಮೊಬೈಲ್ ಅಪ್ಲಿಕೇಶನ್ ಮತ್ತು ಕ್ಯೂಆರ್ ಕೋಡ್ ಅನಾವರಣಗೊಳಿಸಿ ಮಾತನಾಡಿ, ಡಿಜಿಟಲ್ ವಹಿವಾಟುಗಳು ಪಾರದರ್ಶಕತೆ ಹೆಚ್ಚಿಸುತ್ತವೆ, ಐಎ್ಎಸ್‌ಸಿ ಕೋಡ್, ಕ್ಯೂಆರ್ ಕೋಡ್, ಮೊಬೈಲ್ ಅಪ್ಲಿಕೇಶನ್ ಗ್ರಾಹಕರು ಬ್ಯಾಂಕಿನ …

Read More »

ಗಮನ ಬೇರೆ ಕಡೆ ಸೆಳೆದು ಕಳ್ಳತನ: ಇಬ್ಬರ ಬಂಧನ

ಬೆಳಗಾವಿ: ಗಮನ ಬೇರೆ ಕಡೆ ಸೆಳೆದು ವಯಸ್ಸಾದ ಮಹಿಳೆಯ ಚಿನ್ನದ ಆಭರಣ ಕದ್ದು ವಂಚಿಸಿದ ಅಂತರ್ ಜಿಲ್ಲಾ ಆರೋಪಿಗಳನ್ನು ಬಂಧಿಸುವಲ್ಲಿ ಬೆಳಗಾವಿಯ ರಾಯಬಾಗ ಪೊಲೀಸರು ಯಶಸ್ಚಿಯಾಗಿದ್ದಾರೆ. ರಾಯಬಾಗ ಮುಧೋಳ ಆಸ್ಪತ್ರೆಯ ರಸ್ತೆಯಲ್ಲಿ ಓರ್ವ ವಯಸ್ಸಾದ ಮಹಿಳೆಗೆ ಆಮಿಷವೊಡ್ಡಿ, ನಕಲಿ ಬಂಗಾರದ ಸರವನ್ನು ನೀಡಿ, ವಂಚಿಸಿ ಮಹಿಳೆಯ ಕೊರಳಲ್ಲಿದ್ದ ಬಂಗಾರದ ಸರವನ್ನು ತೆಗೆದುಕೊಂಡಿದ್ದಾರೆ ಎಂದು ವಂಚನೆಗೆ ಒಳಗಾದ ಮಹಾದೇವಿ ಎಂಬುವರು ರಾಯಬಾಗ ಪೊಲೀಸ್ ಠಾಣೆಯಲ್ಲಿ ನೀಡಿದ ದೂರು ನೀಡಿದರು. ತಂಡ ರಚನೆ …

Read More »

ಅಂಗಾಂಗ ದಾನ: ಬಾಗಲಕೋಟೆ ಟು ಬೆಳಗಾವಿಗೆ ಗ್ರೀನ್ ಕಾರಿಡಾರ್ ವ್ಯವಸ್ಥೆ

ಬೆಳಗಾವಿ: ರೈಲು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ವ್ಯಕ್ತಿಯೊಬ್ಬರ ಕುಟುಂಬಸ್ಥರು ಅಂಗಾಂಗ ದಾನ ಮುಂದಾಗಿದ್ದು, ಬಾಗಲಕೋಟೆಯಿಂದ  ಬೆಳಗಾವಿಗೆ ರೋಗಿಯನ್ನು ತಲುಪಿಸಲು ಎರಡು ಜಿಲ್ಲೆಯ ಪೊಲೀಸರು ‘ಗ್ರೀನ್ ಕಾರಿಡಾರ್’ ಹಾಗೂ ‘ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸುವ ಮೂಲಕ ಸಮಯಕ್ಕೆ ಸರಿಯಾಗಿ ಅಂಗಾಂಗ ದಾನ ಪ್ರಕ್ರಿಯೆ ಯಶಸ್ವಿಯಾಗಲು ನೆರವಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಜೂನ್ನೂರ ಗ್ರಾಮದ ನಿವಾಸಿ ದುಂಡಪ್ಪ ಕೆಂಚಕನ್ನವರ (55) ಎಂಬುವವರೇ ಅಂಗಾಂಗ ದಾನ ಮಾಡಿದ ಪುಣ್ಯಾತ್ಮ ಧಾರವಾಡ …

Read More »

ಮನೆಗಳ್ಳತನ ಮಾಡಿದ ಕಳ್ಳ ಅರೆಸ್ಟ್

ಹಗಲು ಮನೆ ಕಳ್ಳತನ ಪ್ರಕರಣವನ್ನು ಬೈಲಹೊಂಗಲ ಪೊಲೀಸರು ಕೇವಲ 24 ಗಂಟೆಗಳಲ್ಲೇ ಭೇದಿಸಿ, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತರಿಂದ ₹5.49 ಲಕ್ಷ ಮೌಲ್ಯದ 58 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಜುಲೈ 12ರಂದು ಮಹಾಂತೇಶ ಬಸಪ್ಪ ಬೋಗೂರ ಹಾಗೂ ಅವರ ಕುಟುಂಬಸ್ಥರು ಜಮೀನಿನಲ್ಲಿ ಸೋಯಾಬಿನ್ ಬೆಳೆಗೆ ಕೀಟನಾಶಕ ಸಿಂಪಡಿಸಲು ತೆರಳಿದ್ದ ವೇಳೆ, ಮನೆಗೆ ಹಾಕಿದ್ದ ಬೀಗವನ್ನು ಮುರಿದು ಕಳ್ಳರು ಒಳನುಗ್ಗಿದ್ದರು. ಮನೆಯ ಟ್ರೆಜರಿಯಲ್ಲಿ ಇರಿಸಿದ್ದ 58 ಗ್ರಾಂ ಚಿನ್ನಾಭರಣಗಳು ಹಾಗೂ ₹48 …

Read More »

ಶೀಘ್ರದಲ್ಲೇ ಭಾರತಕ್ಕೂ ಬರಲಿದೆ `Sex Education’

ಭಾರತೀಯ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಒಂದು ಅತ್ಯಂತ ಪ್ರಮುಖ ಹಾಗೂ ಕ್ರಾಂತಿಕಾರಿ ಬದಲಾವಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಶಾಲೆ ಹಾಗೂ ಕಾಲೇಜುಗಳ ಪಠ್ಯಕ್ರಮದಲ್ಲಿ ಸಮಗ್ರ ಲೈಂಗಿಕ ಶಿಕ್ಷಣವನ್ನು  ಅಳವಡಿಸಲು ನಿರ್ಧರಿಸಲಾಗಿದ್ದು, ಈ ಕುರಿತು ಸರ್ಕಾರವು ಸುಪ್ರೀಂಕೋರ್ಟ್‌ಗೆ ಮಾಹಿತಿ ನೀಡಿದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಗಳು, ಸೈಬರ್ ಅಪರಾಧಗಳು, ಹದಿಹರೆಯದವರಲ್ಲಿ ಕಂಡುಬರುತ್ತಿರುವ ಗರ್ಭಧಾರಣೆ ಹಾಗೂ ಮಾನಸಿಕ ಆರೋಗ್ಯದ ಸಮಸ್ಯೆಗಳ ಹಿನ್ನೆಲೆ ಈ ನಿರ್ಧಾರ ಅತ್ಯಂತ ಮಹತ್ವದ್ದಾಗಿ ಹೊರಹೊಮ್ಮಿದೆ. …

Read More »

ಡಿಸೆಂಬರ್‌ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುತ್ತೇವೆ: ಡಿಕೆ ಶಿವಕುಮಾರ್‌

ಬೆಂಗಳೂರು: ಈ ವರ್ಷ ಡಿಸೆಂಬರ್‌ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುತ್ತೇವೆ ಎಂದು ಸಿಎಂ ಡಿಕೆ ಶಿವಕುಮಾರ್‌  ಹೇಳಿದರು. ಬೆಂಗಳೂರಿನ 5 ಪಾಲಿಕೆಗಳ 369 ವಾರ್ಡ್‌ಗಳಿಗೆ ಚುನಾವಣೆ ನಡೆಸುವ ಗಡುವನ್ನು ಡಿಸೆಂಬರ್ ವರೆಗೆ ವಿಸ್ತರಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ  ಮತ್ತು ಕರ್ನಾಟಕ ರಾಜ್ಯ ಚುನಾವಣಾ ಆಯೋಗದಿಂದ ಪ್ರತ್ಯೇಕ ಮನವಿಗಳನ್ನು ಸುಪ್ರೀಂ ಕೋರ್ಟ್ ಅನುಮತಿಸಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಎಸ್‌ಐಆರ್‌ ನಡೆಯುತ್ತಿರುವ ಹಿನ್ನೆಲೆ ಸಮಯ ಕೇಳಿದ್ದೆವು. ಸುಪ್ರೀಂ …

Read More »

ಮನೆಬಿಟ್ಟು ಬಂದಿದ್ದ ಬಾಲಕಿ ಬೇರೊಬ್ಬನ ಜೊತೆ ಚಾಟಿಂಗ್ ಮಾಡ್ತಿದ್ದಾಳೆಂದು ಗುಂಡಿಕ್ಕಿ ಹತ್ಯೆ!

ರಾಮನಗರ: 16 ವರ್ಷದ ಅಪ್ರಾಪ್ತರ ಪ್ರೀತಿಯಲ್ಲಿ ಮೂಡಿದ ಅನುಮಾನ ಬಾಲಕಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕನಕಪುರ ತಾಲೂಕಿನ ಕೋಡಿಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತನ್ನನ್ನೇ ನೆಚ್ಚಿಕೊಂಡು ಮನೆ ಬಿಟ್ಟು ಬಂದಿದ್ದ ಹುಡುಗಿ ಬೇರೊಬ್ಬರ ಜೊತೆ ಸಂಬಂಧ ಹೊಂದಿದ್ದಾಳೆಂದು ಅನುಮಾನಿಸಿದ ಬಾಲಕ, ಆಕೆಯನ್ನು ನಾಡ ಬಂದೂಕಿನಿಂದ ಗುಂಡಿಟ್ಟು ಕೊಂದಿರುವ ಘಟನೆ ಜುಲೈ 10 ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿ ಶವವನ್ನು ಮನೆ ಬಳಿಯೇ ಹೂತು ಹಾಕಿ ಬಾಲಕನನ್ನ …

Read More »

ಬೇರೆ ಯಾವ ತೊಂದರೆಯೂ ಇಲ್ಲ, ಉಸಿರಾಟದ ಸಮಸ್ಯೆ ಬಗೆಹರಿಯಬೇಕು: ಪತ್ನಿ ಬಗ್ಗೆ ಹೆಚ್‌ಡಿಡಿ ಮಾತು

ಬೆಂಗಳೂರು: ಪತ್ನಿ ಚೆನ್ನಮ್ಮ ಅವರಿಗೆ ಬೇರೆ ಯಾವ ತೊಂದರೆಯೂ ಇಲ್ಲ, ಉಸಿರಾಟದ ಸಮಸ್ಯೆ ಇದೆ. ಅದೊಂದು ಬಗೆಹರಿಯಬೇಕು ಎಂದು ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರು  ಹೇಳಿದ್ದಾರೆ. ಪತ್ನಿ ಆರೋಗ್ಯದ ಬಗ್ಗೆ ಮಾಧ್ಯಮಗಳಿಗೆ ಅವರು ಮಾಹಿತಿ ನೀಡಿದರು. ಈ ವೇಳೆ, ಉಸಿರಾಟದ ಸಮಸ್ಯೆ ಇದೆ ಎಂದು ಬುಧವಾರ (ಜು.15) ಆಸ್ಪತ್ರೆಗೆ ದಾಖಲಿಸಿದ್ದೆವು. ಮೊನ್ನೆ‌ ನಿನ್ನೆ ಇವತ್ತು ಅವರನ್ನು ವಿಚಾರಿಸಿದ್ದೇನೆ. ಅವರ ಹಾರ್ಟ್, ಕಿಡ್ನಿ ಎಲ್ಲಾ ಸರಿಯಾಗಿದೆ. ಲಂಗ್ಸ್ ಸಮಸ್ಯೆ ಇದೆ. ಉಸಿರಟಾದ …

Read More »

ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯ ಸ್ಥಿರವಾಗಿದೆ: ಆರ್‌. ಅಶೋಕ್‌

ಬೆಂಗಳೂರು: ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌  ಹೇಳಿದ್ದಾರೆ. ನಗರದ ಮಣಿಪಾಲ್‌ ಆಸ್ಪತ್ರೆಗೆ ಭೇಟಿ ನೀಡಿ ಚೆನ್ನಮ್ಮ ಅವರ ಆರೋಗ್ಯವನ್ನು ಅವರು ವಿಚಾರಿಸಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಈ ವೇಳೆ, ಚೆನ್ನಮ್ಮನವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ವೈದ್ಯರು ಸಹ ಆರೋಗ್ಯ ಸುಧಾರಣೆ ಕಾಣುತ್ತಿದೆ ಎಂದು ತಿಳಿಸಿದ್ದಾರೆ ಎಂದರು. ಚೆನ್ನಮ್ಮ  ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ನಗರದ …

Read More »