Breaking News

ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಒತ್ತಾಯ : ಸಚಿವ ರಮೇಶ್ ಜಾರಕಿಹೊಳಿ‌ ಭೇಟಿಯಾದ ರೈತರ ನಿಯೋಗ

ಕಳಸಾ ಬಂಡೂರ ಕುಡಿಯುವ ನೀರಿನ ಯೋಜನೆಯ ಅನುಷ್ಠಾನ ನಮ್ಮ ಸರ್ಕಾರದ ಆದ್ಯತೆಯ ಯೋಜನೆಯಾಗಿದ್ದು ಶೀಘ್ರದಲ್ಲಿಯೇ ಕಾಮಗಾರಿ ಪ್ರಾರಂಭಕ್ಕೆ ಕ್ರಮ ಕೈಗೊಳ್ಳುವ ಕುರಿತು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸುವುದಾಗಿ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ‌* ಹೇಳಿದರು.   ಮಹದಾಯಿ ಹೋರಾಟಗಾರರು ಮತ್ತು ನವಲಗುಂದದ ರೈತ ಮುಖಂಡರ ನಿಯೋಗದೊಂದಿಗೆ ಮಾತನಾಡಿದ ಸಚಿವ *ರಮೇಶ್ ಜಾರಕಿಹೊಳಿ‌*, ನಮ್ಮ ಪಾಲಿನ‌ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವುದು ನಮ್ಮ ಹಕ್ಕು ಎಂದು ಹೇಳಿದರು. ಅತಿವೃಷ್ಟಿಯಿಂದ ರೈತರ ಬೆಳೆ ಹಾಳಾಗಿದ್ದು, ಕೂಡಲೇ …

Read More »

ಏರೋ‌ ಇಂಡಿಯಾ 2021 ಚಾಲನೆಗೆ ಕ್ಷಣಗಣನೆ : ಟ್ರಾಫಿಕ್ ದಟ್ಟಣೆ

ಬೆಂಗಳೂರು    ಐತಿಹಾಸಿಕ‌ 13ನೇ ಆವೃತ್ತಿಯ ಏರೋ ಇಂಡಿಯಾ 2021ಗೆ ಕ್ಷಣಗಣನೆ ಆರಂಭವಾಗಿದ್ದು, ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್‌ ಏರೋ‌ ಇಂಡಿಯಾ 2021 ಉದ್ಘಾಟಿಸಲಿದ್ದಾರೆ.. ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ‌ ಹಲವಾರು ಗಣ್ಯರು ಭಾಗಿಯಾಗಲಿದ್ದಾರೆ. ಫೆ.3ರಿಂದ 5ರ ತನಕ ಏರ್​​ ಶೋ ನಡೆಯಲಿದೆ. ಏರ್ ಶೋ ವೀಕ್ಷಿಸಲು ಸಾರ್ವಜನಿಕರಿಗೂ ಅವಕಾಶವಿದ್ದು, ಬೆಳ್ಳಂಬೆಳಗ್ಗೆಯೇ ಹೆಬ್ಬಾಳದ ಎಸ್ಟೀಮ್ ಮಾಲ್‌ ಬಳಿಯಿಂದಲೇ ಟ್ರಾಫಿಕ್ ಜಾಮ್‌ ಶುರುವಾಗಿದೆ. ಸಾರ್ವಜನಿಕರು ಏರ್ ಶೋ ವೀಕ್ಷಿಸಲು …

Read More »

ತಮಿಳು ನಟ ಸಿಂಬು ಹೊಸ ಚಿತ್ರಕ್ಕೆ ಸಾಥ್ ನೀಡಿದ ಕಿಚ್ಚ ಸುದೀಪ್

ತಮಿಳು ನಟ ಸಿಂಬು ಅಭಿನಯಿಸಿರುವ ಹೊಸ ಚಿತ್ರಕ್ಕೆ ಪ್ಯಾನ್ ಇಂಡಿಯಾ ಸ್ಟಾರ್ಸ್ ಸಾಥ್ ನೀಡುತ್ತಿದ್ದಾರೆ. ಸಿಂಬು ನಟಿಸಿರುವ ‘ಮಾನಡು’ ಸಿನಿಮಾ ಬಹುಭಾಷೆಯಲ್ಲಿ ತೆರೆಕಾಣಲು ಸಜ್ಜಾಗಿದ್ದು, ಸ್ಟಾರ್ ನಟರು ಹಾಗೂ ಸ್ಟಾರ್ ಮೇಕರ್ಸ್ ಕೈ ಜೋಡಿಸಿದ್ದಾರೆ. ಫೆಬ್ರವರಿ 3 ರಂದು ಸಿಂಬು ಅವರ ಮಾನಡು ಚಿತ್ರದ ಟೀಸರ್ ರಿಲೀಸ್ ಆಗುತ್ತಿದೆ. ಐದು ಭಾಷೆಯಲ್ಲಿ ಮಾನಡು ಟೀಸರ್ ಬಿಡುಗಡೆಯಾಗುತ್ತಿದ್ದು, ಕನ್ನಡದಲ್ಲಿ ಕಿಚ್ಚ ಸುದೀಪ್ ರಿಲೀಸ್ ಮಾಡಲಿದ್ದಾರೆ. ಮಧ್ಯಾಹ್ನ 2.34 ಗಂಟೆಗೆ ಮಾನಡು ಕನ್ನಡ …

Read More »

ನಟಿಯ ಕಾರನ್ನು ಹಿಂಬಾಲಿಸಿ ಅಪಘಾತ ಮಾಡಿದ ಕುಡುಕರು: ದೂರು ದಾಖಲು

ಪತಿಯೊಂದಿಗೆ ರಾತ್ರಿ ಊಟ ಮುಗಿಸಿ ಕಾರಿನಲ್ಲಿ ಮನೆಗೆ ವಾಪಸ್ಸಾಗುತ್ತಿದ್ದ ನಟಿಯ ಕಾರನ್ನು ನಾಲ್ವರು ಕುಡುಕರು ಹಿಂಬಾಲಿಸಿ ಅಪಘಾತ ಮಾಡಿದ್ದಾರೆ. ಹಿಂದಿ ಧಾರಾವಾಹಿ ನಟಿಗೆ ಈ ಕೆಟ್ಟ ಅನುಭವ ಆಗಿದ್ದು, ನಟಿಯು ತನ್ನ ಪತಿಯೊಂದಿಗೆ ಜನವರಿ 31 ರಂದು ದೆಹಲಿಯ ಐಶಾರಾಮಿ ಹೋಟೆಲ್ ಒಂದಕ್ಕೆ ಕಾರ್ಯಕ್ರಮಕ್ಕೆಂದು ಹೋಗಿದ್ದರು. ಊಟ ಮುಗಿಸಿ ರಾತ್ರಿ 2 ಗಂಟೆ ವೇಳೆಗೆ ವಾಪಸ್ಸಾಗಬೇಕಾದರೆ ಘಟನೆ ನಡೆದಿದೆ. ದೆಹಲಿಯ ಮಧುಬನ್ ಚೌಕ್ ಬಳಿ ನಟಿಯ ಕಾರು ಹೋಗಬೇಕಾದರೆ ನಾಲ್ವರು …

Read More »

ಸ್ಪ್ಯಾನಿಷ್ ಸಿನಿಮಾ ರೀಮೇಕ್ ನಲ್ಲಿ ಅಮೀರ್ ಖಾನ್?

ತಾವು ನಟಿಸುವ ಸಿನಿಮಾಗಳ ಕತೆಗಳನ್ನು ಬಹಳ ಜಾಗರೂಕತೆಯಿಂದ ಆಯ್ಕೆ ಮಾಡಿಕೊಳ್ಳುತ್ತಾರೆ ನಟ ಅಮೀರ್ ಖಾನ್. ಅವರು, ರೀಮೇಕ್ ಸಿನಿಮಾಗಳಲ್ಲಿ ನಟಿಸುವುದು ಬಹಳ ಅಪರೂಪ. ರೀಮೇಕ್ ಸಿನಿಮಾ ಗಜಿನಿಯಲ್ಲಿ ನಟಿಸಿದ್ದ ಅಮೀರ್ ಖಾನ್, ಪ್ರಸ್ತುತ, ಹಾಲಿವುಡ್ ಸಿನಿಮಾ ‘ಫಾರೆಸ್ಟ್ ಗಂಫ್’ ಸಿನಿಮಾದ ರೀಮೇಕ್ ನಲ್ಲಿ ನಟಿಸುತ್ತಿದ್ದಾರೆ. ಈ ನಡುವೆ ಸ್ಪ್ಯಾನಿಷ್ ಸಿನಿಮಾದ ರೀಮೇಕ್ ನಲ್ಲಿ ನಟಿಸುವಂತೆ ಅಮೀರ್ ಖಾನ್ ಅವರನ್ನು ಸಂಪರ್ಕ ಮಾಡಲಾಗಿದೆ. ಅಮೀರ್ ಖಾನ್‌ಗೂ ಕತೆ ಇಷ್ಟವಾಗಿದೆ ಎನ್ನಲಾಗುತ್ತಿದೆ. ಸ್ಪ್ಯಾನಿಷ್ …

Read More »

ರೈತ ಪ್ರತಿಭಟನೆಗೆ ಬೆಂಬಲ ಸೂಚಿಸಿದ ಹಾಲಿವುಡ್ ತಾರೆ

ಕೇಂದ್ರದ ಕೃಷಿ ಕಾಯ್ದೆ ವಿರುದ್ಧ ರೈತರು ಮಾಡುತ್ತಿರುವ ಪ್ರತಿಭಟನೆಗೆ ಕೆಲವು ಬಾಲಿವುಡ್ ತಾರೆಗಳು ಬೆಂಬಲ ಸೂಚಿಸಿದ್ದಾರೆ. ಕೆಲವರು ವಿರೋಧವನ್ನೂ ವ್ಯಕ್ತಪಡಿಸಿದ್ದಾರೆ. ಇದೀಗ ಖ್ಯಾತ ಪಾಪ್ ಗಾಯಕಿ, ಹಾಲಿವುಡ್ ಸಿನಿಮಾ ನಟಿ ರಿಹಾನಾ ದೆಹಲಿ ರೈತ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ. ದೆಹಲಿ ರೈತ ಪ್ರತಿಭಟನೆ ಬಗ್ಗೆ ಮಂಗಳವಾರ ಟ್ವೀಟ್ ಮಾಡಿರುವ ರಿಹಾನಾ, ‘ಇದರ ಬಗ್ಗೆ ನಾವೇಕೆ ಮಾತನಾಡುತ್ತಿಲ್ಲ’ ಎಂದು ಪ್ರಶ್ನೆ ಮಾಡಿದ್ದಾರೆ. ‘ಪ್ರತಿಭನಾಕಾರ ರೈತರು ಪೊಲೀಸರ ನಡುವೆ ತಿಕ್ಕಾಟದ ನಂತರ ಸರ್ಕಾರವು …

Read More »

ನಾಯಕಿಯ ಅರ್ಧ ಫೋಟೋ ಶೇರ್ ಮಾಡಿ ಕುತೂಹಲ ಮೂಡಿಸಿದ ರಕ್ಷಿತ್ ಶೆಟ್ಟಿ & ತಂಡ; ಆ ನಟಿ ಇವರೇ ನೋಡಿ?

ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಸದ್ಯ ‘777 ಚಾರ್ಲಿ’ ಸಿನಿಮಾದ ಚಿತ್ರೀಕರಣ ಮುಗಿಸಿದ್ದಾರೆ. ಇದೀಗ ಚಿತ್ರದ ಪ್ಯಾಚ್ ವರ್ಕ್ ಕೆಲಸದಲ್ಲಿ ನಿರತರಾಗಿದ್ದಾರೆ. ಇತ್ತೀಚಿಗಷ್ಟೆ ಕಾಶ್ಮೀರದಲ್ಲಿ ಚಿತ್ರೀಕರಣ ಮುಗಿಸಿ ವಾಪಸ್ ಆಗಿದ್ದ ಸಿನಿಮಾತಂಡ ತುಂಬಾ ಕಷ್ಟದ ಭಾಗದ ಚಿತ್ರೀಕರಣವನ್ನು ಸಂಪೂರ್ಣ ಮಾಡುವ ಮೂಲಕ ಚಾರ್ಲಿ ಶೂಟಿಂಗ್ ಮುಕ್ತಾಯವಾಗಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ಚಾರ್ಲಿ ಮುಗಿಯುತ್ತಿದ್ದಂತೆ ರಕ್ಷಿತ್ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದಲ್ಲಿ ಬ್ಯುಸಿಯಾಗುತ್ತಿದ್ದಾರೆ. ಈಗಾಗಲೇ ಪ್ರಿ ಪ್ರೊಡಕ್ಷನ್ …

Read More »

ಪೌರತ್ವ ತಿದ್ದುಪಡಿ ನಿಯಮಗಳು ಜುಲೈ ಒಳಗೆ ಸಿದ್ಧವಾಗಲಿವೆ: ಕೇಂದ್ರ ಸರ್ಕಾರ

ನವದೆಹಲಿ,ಫೆಬ್ರವರಿ 02: ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿನ ನಿಯಮಗಳು ಜುಲೈ ಒಳಗೆ ಸಿದ್ಧವಾಗಲಿವೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ಮಾಹಿತಿ ನೀಡಿದೆ. ಬಾಂಗ್ಲಾದೇಶ,ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ ಕಿರುಕುಳಕ್ಕೊಳಗಾದ ಮುಸ್ಲಿಮೇತರ ಅಲ್ಪ ಸಂಖ್ಯಾತರಿಗೆ ಹಿಂದೂ, ಸಿಖ್,ಜೈನ,ಬೌದ್ಧ,ಪಾರ್ಸಿ ಮತ್ತು ಕ್ರೈಸ್ತರಿಗೆ ಭಾರತೀಯ ಪೌರತ್ವ ನೀಡಲು ಅನುಕೂಲವಾಗುವ ಸಿಎಎಯನ್ನು 2019ರಡಿಸೆಂಬರ್‌ನಲ್ಲಿ ಸಂಸತ್ ಅಂಗೀಕರಿಸಿತ್ತು. 2019ರ ನಾಗರಿಕ ಕಾಯ್ದೆಯನ್ನು 2019ರ ಡಿಸೆಂಬರ್ ರಂದು ಅಧಿಸೂಚಿಸಲಾಗಿದೆ. 2020ರ ಜನವರಿ 10ರಿಂದ ಕಾಯ್ದೆ ಜಾರಿಗೆ ಬಂದಿದೆ.ನಿಯಮಗಳನ್ನು ರೂಪಿಸಲು ಲೋಕಸಭೆ ಮತ್ತು …

Read More »

ರೈತ ಹೋರಾಟ: ಹರಿಯಾಣದ 7 ಜಿಲ್ಲೆಗಳಲ್ಲಿ ಇಂಟರ್ ನೆಟ್ ಸೇವೆ ಸ್ಥಗಿತ

ನವದೆಹಲಿ, ಫೆಬ್ರವರಿ.03: ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ನವದೆಹಲಿಯಲ್ಲಿ ನಡೆದ ಹಿಂಸಾಚಾರದ ಹಿನ್ನೆಲೆ ಹರಿಯಾಣ ಸರ್ಕಾರವು ಏಳು ಜಿಲ್ಲೆಗಳಲ್ಲಿ ಇಂಟರ್ ನೆಟ್ ಸೇವೆಗಳ ಮೇಲೆ ವಿಧಿಸಿದ ನಿರ್ಬಂಧವನ್ನು ಫೆಬ್ರವರಿ.3ರ ಸಂಜೆ 5 ಗಂಟೆವರೆಗೂ ವಿಸ್ತರಿಸಿದೆ. ಹರಿಯಾಣದ ಕೈಥಲ್, ಪಾಣಿಪತ್, ಜಿಂದ್, ರೋಹ್ಟಕ್, ಚರ್ಖಿ ದಾದ್ರಿ, ಸೋನಿಪತ್ ಮತ್ತು ಝಜ್ಜರ್ ಜಿಲ್ಲೆಗಳಲ್ಲಿ ದೂರವಾಣಿ ಕರೆಯನ್ನು ಹೊರತುಪಡಿಸಿದಂತೆ ಇಂಟರ್ ನೆಟ್, ಎಸ್‌ಎಂಎಸ್ ಮತ್ತು ಡೋಂಗಲ್ ಸೇವೆಯನ್ನು ನಿರ್ಬಂಧಿಸಲಾಗಿದೆ. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರೈತರ …

Read More »

ಫೆ. 28ರ ವರೆಗೆ ಚಿತ್ರಮಂದಿರಗಳಲ್ಲಿ ಶೇ. 50 ರಷ್ಟು ಆಸನ ಭರ್ತಿ ಆದೇಶ ಮುಂದುವರಿಕೆ

ಬೆಂಗಳೂರು: ಕೊರೋನಾ ವೈರಸ್ ಅಬ್ಬರ ಕಡಿಮೆಯಾಗುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಚಿತ್ರಮಂದಿರಗಳ ಭರ್ತಿಗೆ ಆದೇಶ ನೀಡಿ ಮಾರ್ಗಸೂಚಿ ಪ್ರಕಟಿಸಿತ್ತು. ಅಲ್ಲದೇ, ರಾಜ್ಯ ಸರ್ಕಾರಗಳು ಈ ಸಂಬಂಧ ನಿರ್ಧಾರ ಕೈಗೊಳ್ಳಬಹುದು ಎಂದು ಕೂಡ ಸೂಚಿಸಿತ್ತು. ಹೀಗಾಗಿ ರಾಜ್ಯ ಸರ್ಕಾರ ಚಿತ್ರಮಂದಿರಗಳ ಭರ್ತಿಗೆ ಅವಕಾಶ ನೀಡದೆ ಶೇ. 50 ರಷ್ಟು ಆಸನ ಮಾತ್ರ ಭರ್ತಿ ಮಾಡಲು ಅವಕಾಶ ನೀಡಿ ಆದೇಶ ಹೊರಡಿಸಿದೆ. ಈ ಸಂಬಂಧ ರಾಜ್ಯ ಸರ್ಕಾರ ಮಂಗಳವಾರ ಹೊಸ ಮಾರ್ಗಸೂಚಿ ಬಿಡುಗಡೆ …

Read More »