Breaking News

ಅಂಗನವಾಡಿ ಕಾರ್ಯಕರ್ತೆಯರು ಜೀವದ ಹಂಗು ತೊರೆದು ನಿರ್ವಹಿಸಿದ ಕಾರ್ಯಕ್ಕೆ ಸರ್ಕಾರದಿಂದ SMART PHONE

ರಾಯಬಾಗ: ‘ಕೊರೊನಾ ಸಂಕಷ್ಟದಲ್ಲೂ ಅಂಗನವಾಡಿ ಕಾರ್ಯಕರ್ತೆಯರು ಜೀವದ ಹಂಗು ತೊರೆದು ನಿರ್ವಹಿಸಿದ ಕಾರ್ಯಕ್ಕೆ ಸರ್ಕಾರವು ಮೆಚ್ಚುಗೆ ವ್ಯಕ್ತಪಡಿಸಿ ಹೆಚ್ಚಿನ ಜವಾಬ್ದಾರಿ ನೀಡಿದೆ. ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಕೇಂದ್ರದ ಕಾರ್ಯ ಚಟುವಟಿಕೆಗಳ ಮಾಹಿತಿಯನ್ನು ಪ್ರತಿ ದಿನ ಕಳುಹಿಸಲು ಸರ್ಕಾರದಿಂದ ಸ್ಮಾರ್ಟ್ ಫೆÇೀನ್‍ಗಳನ್ನು ವಿತರಿಸಲಾಗುತ್ತಿದೆ. ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಶಾಸಕ ಡಿ.ಎಂ. ಐಹೊಳೆ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸ್ಮಾರ್ಟ್ ಫೆÇೀನ್‍ಗಳನ್ನು ಕಾರ್ಯಕರ್ತೆಯರಿಗೆ ವಿತರಿಸಿ ಅವರು ಮಾತನಾಡಿದರು. ಶ್ರೀದೇವಿ …

Read More »

ಅವನ್ಯಾರೋ ಸತ್ರೆ ನನಗೆ ಯಾಕೆ ಪ್ರಶ್ನೆ: ಈಶ್ವರಪ್ಪ

ಬೆಳಗಾವಿ: ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಆತ್ಮಹತ್ಯೆ ಯತ್ನಿಸಿರುವ ವಿಚಾರವಾಗಿ ಸಚಿವ ಈಶ್ವರಪ್ಪ ಅವರನ್ನು ಪ್ರಶ್ನೆ ಮಾಡಲಾಗಿದ್ದು, ಅವನ್ಯಾರೋ ಸತ್ರೆ ನನಗೆ ಯಾಕೆ ಪ್ರಶ್ನೆ ಎಂದು ಉತ್ತರಿಸಿದ್ದಾರೆ. ಇಂದು ಈ ವಿಚಾರವಾಗಿ ಬೆಳಗಾವಿಯಲ್ಲಿ ಮಾತನಾಡಿದ ಅವರು, ನಾನು ಮಾಧ್ಯಮಗಳಲ್ಲಿ ರಾತ್ರಿ ಈ ಬಗ್ಗೆ ನೋಡಿದೆ. ಮಾತ್ರೆ ತೆಗೆದುಕೊಂಡು ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾರೆ ಎಂದು ಗೊತ್ತಾಗಿದೆ. ಅವನ್ಯಾರೋ ಸತ್ರೆ ನನಗೆ ಯಾಕೆ ಪ್ರಶ್ನೆ ಮಾಡುತ್ತಿದ್ದೀರಾ ಎಂದು ವಾಪಸ್ ಮಾಧ್ಯಮದವರನ್ನೇ ಪ್ರಶ್ನೆ ಮಾಡಿದ್ದಾರೆ.

Read More »

ಸಚಿವರ ಭೋಜನಕೂಟ ತಿರಸ್ಕರಿಸಿದ ವಿದ್ಯಾ- ಮರುದಿನ ಅಧಿಕಾರಿಗಳಿಂದ ಶೂಟಿಂಗ್ ಸ್ಥಗಿತ

ಮುಂಬೈ/ಭೋಪಾಲ್: ಅರಣ್ಯ ಸಚಿವರ ಔತನಕೂಟ ತಿರಸ್ಕರಿಸಿದ್ದಕ್ಕೆ ವಿದ್ಯಾ ಬಾಲನ್ ಸಿನಿಮಾದ ಚಿತ್ರೀಕರಣ ತಡೆಯಲಾಗಿರುವ ಬಗ್ಗೆ ರಾಷ್ಟ್ರೀಯ ಮಾಧ್ಯಮಗಳು ವರದಿ ಪ್ರಕಟಿಸುತ್ತಿವೆ. ಮಧ್ಯಪ್ರದೇಶದ ಅರಣ್ಯ ಸಚಿವ ವಿಜಯ್ ಶಾ ತಮ್ಮ ರಾಜ್ಯದಲ್ಲಿ ಶೂಟಿಂಗ್ ನಡೆಸುತ್ತಿರುವ ನಟಿ ವಿದ್ಯಾ ಬಾಲನ್ ಅವರನ್ನು ಊಟಕ್ಕೆ ಆಹ್ವಾನಿಸಿದ್ದರು. ಆದ್ರೆ ವಿದ್ಯಾ ಬಾಲನ್ ತಮ್ಮ ಶೆಡ್ಯೂಲ್ ಮೊದಲ ನಿಗದಿಯಾಗಿದ್ದರಿಂದ ಭೋಜನಕೂಟಕ್ಕೆ ತೆರಳಿರಲಿಲ್ಲ. ಇದರಿಂದ ಸಚಿವರು ಮರುದಿನ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಚಿತ್ರೀಕರಣಕ್ಕೆ ತಡೆ ನೀಡಿದ್ದರು ಎನ್ನಲಾಗಿದೆ. …

Read More »

ಡಿಕೆಶಿ ಬಳಿ ವೀಡಿಯೋಗಳಿದ್ದರೆ ಕೊಡಲಿ ತನಿಖೆ ಮಾಡುತ್ತೇವೆ: ಬೊಮ್ಮಾಯಿ

ರಾಯಚೂರು: ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣ ಕುರಿತು ಸೂಕ್ತ ತನಿಖೆ ನಡೆಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ರಾಯಚೂರಿನಲ್ಲಿ ಹೇಳಿದ್ದಾರೆ. ರಾಯಚೂರು ಪ್ರವಾಸದಲ್ಲಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸಂತೋಷ ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಒಂದೆರಡು ದಿನದಲ್ಲಿ ಸರಿಹೋಗಬಹುದು. ಈಗಾಗಲೇ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಕುರಿತು ತನಿಖೆ ಮಾಡಲಾಗುವುದು ಎಂದರು. ಎಂಎಲ್‍ಸಿ ಹಾಗೂ ಮಿನಿಸ್ಟರ್ ವೀಡಿಯೋ ವಿಚಾರದಲ್ಲಿ ಒತ್ತಡ ಹಿನ್ನೆಲೆ ಆತ್ಮಹತ್ಯೆಗೆ …

Read More »

ದೆಹಲಿ ನಾಯಕರಿಗೆ 2-3 ದಿನದ ಹಿಂದೆ ಅವರ ಪರ್ಸನಲ್ ವೀಡಿಯೊ ತೋರಿಸಿದ್ದಾರೆ. ಹೀಗಾಗಿ ಬೇಸರದಿಂದ ಆತ್ಮಹತ್ಯೆಗೆ ಯತ್ನಿಸಿರಬಹುದು: ಡಿಕೆ ಶಿವಕುಮಾರ್.

ಕಾರವಾರ: ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಅವರು ಏನೋ ಬೇಜಾರಾಗಿ ಆತ್ಮಹತ್ಯೆಗೆ ಯತ್ನಿಸಿರಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.ಕಾರವಾರದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಸಂತೋಷ್‍ರವರು ಯಾವುದೋ ವೀಡಿಯೋ ಮಾಡಿ ಎಂಎಲ್‍ಸಿಗೆ ಮತ್ತು ಮಿನಿಸ್ಟರ್ ಕೈಗೆ ಕೊಟ್ಟಿದ್ದಾರೆ ಎನ್ನುವ ಮಾಹಿತಿ ಇತ್ತು. ಅದನ್ನು ಮಿನಿಸ್ಟರ್ ಮತ್ತು ಎಂಎಲ್‍ಸಿಗೆ ಸೇರಿ ದೆಹಲಿ ನಾಯಕರಿಗೆ ತಲುಪಿಸಿದ್ದಾರೆ ಎನ್ನುವುದು ಮಾಹಿತಿ ಇದೆ ಎಂದರು. ದೆಹಲಿ ನಾಯಕರಿಗೆ 2-3 ದಿನದ ಹಿಂದೆ ಅವರ …

Read More »

ಆನ್‍ಲೈನ್ ಗೇಮ್ ಹುಚ್ಚಿನಿಂದ ವ್ಯಕ್ತಿಯೊಬ್ಬ 16 ಲಕ್ಷ ರೂ. ಕಳೆದುಕೊಂಡು ಇದೀಗ ಆತ್ಮಹತ್ಯೆಗೆ ಶರಣಾದ

ಹೈದರಾಬಾದ್: ಆನ್‍ಲೈನ್ ಗೇಮ್ ಹುಚ್ಚಿನಿಂದ ವ್ಯಕ್ತಿಯೊಬ್ಬ 16 ಲಕ್ಷ ರೂ. ಕಳೆದುಕೊಂಡು ಇದೀಗ ಆತ್ಮಹತ್ಯೆಗೆ ಶರಣಾದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಜಗದೀಶ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು, ಈತ ಎಲ್‍ಬಿ ನಗರ ನಿವಾಸಿ. ಆನ್‍ಲೈನ್ ಗೇಮ್ ಚಟದಿಂದಾಗಿ ಜಗದೀಶ್ ಲಕ್ಷಾಂತರ ರೂಪಾಯಿಗಳನ್ನು ಕಳೆದುಕೊಂಡನು. ಅಲ್ಲದೆ ಸಾಲ ತೀರಿಸಲು ಅಸಾಧ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಬೇರೆ ದಾರಿ ಕಾಣದೆ ತನ್ನ ಪ್ರಾಣವನ್ನೇ ಕಳೆದುಕೊಳ್ಳಲು ನಿರ್ಧರಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೆಲವು ದಿನಗಳ ಹಿಂದೆ ಜಗದೀಶ್ ತಂದೆ …

Read More »

B.S.Y. ಭೇಟಿ‌ ಮಾಡಿದ ರಮೇಶ್ ಜಾರಕಿಹೊಳಿ‌, ತಮ್ಮದೇ ಮಿತ್ರಮಂಡಳಿ ವಿರುದ್ಧ ಸಾಹುಕಾರ್ ಗರಂ..!

ಬೆಂಗಳೂರು : ರಾಜ್ಯದ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಮಧ್ಯೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರು, ಇಂದು ನವ ದುರ್ಗಾ ಪೂಜೆ ಮತ್ತು ಹೋಮದಲ್ಲಿ ಪಾಲ್ಗೊಂಡು ಗಮನ ಸೆಳೆದಿದ್ದಾರೆ. ವಾರಕ್ಕೆರಡು ಬಾರಿಯಂತೆ ನವದೆಹಲಿಯ ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತಿರುವ ರಮೇಶ್ ಜಾರಕಿಹೊಳಿ‌, ರಾಜ್ಯ ರಾಜಕೀಯದ ಸಂದಿಗ್ಧ ಪರಿಸ್ಥಿತಿಯಲ್ಲಿ ದೇವರ ಮೊರೆ ಹೋಗಿರುವುದು ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ. ಅದಕ್ಕೂ ಮೊದಲು ರಾಜ್ಯದ ಮುಖ್ಯಮಂತ್ರಿಗಳನ್ನು ಭೇಟಿ‌ ಮಾಡಿ ರಾಜ್ಯದ ಅಣೆಕಟ್ಟೆಗಳ …

Read More »

ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ನೀಡಿದರೆ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯ : ಸತೀಶ್ ಜಾರಕಿಹೊಳಿಯ

ಶಿರಸಿ: ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ನೀಡುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕಿದೆ. ಇದರಲ್ಲಿ ಅತ್ಯಂತ ಮುಖ್ಯವಾದ ಪಾತ್ರ ಕಾರ್ಯಕರ್ತರದ್ದಾಗಿರುತ್ತದೆ. ವಿಧಾನಸಭೆ, ಲೋಕಸಭೆ, ಗ್ರಾಮ ಪಂಚಾಯತ್, ಜಿಲ್ಲಾ ಪಂಚಾಯತ್ ಸೇರಿದಂತೆ ಯಾವ ಚುನಾವಣೆಯೇ ಆಗಿರಲಿ ನಾವೆಲ್ಲ ಒಗ್ಗೂಡಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಿದರೆ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ತೋಟಗಾರರ ಕಲ್ಯಾಣಮಂಟಪದಲ್ಲಿ ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ …

Read More »

ಪ್ರತ್ಯೇಕವಾಗಿ ನಡೆದ ಸಚಿವರು ಹಾಗೂ ಶಾಸಕರು ಸಭೆ ಅಸಮಾಧಾನ ಹೊರಹಾಕಿದ ರಮೇಶ್ ಜಾರಕಿಹೊಳಿ

ಬೆಂಗಳೂರು: ನಿನ್ನೆ ರಾತ್ರಿ ಖಾಸಗಿ ಹೋಟೆಲ್‍ನಲ್ಲಿ ಪ್ರತ್ಯೇಕವಾಗಿ ನಡೆದ ಸಚಿವರು ಹಾಗೂ ಶಾಸಕರು ಸಭೆಗೆ ಸಂಬಂಧಿಸಿದಂತೆ ಸಚಿವ ರಮೇಶ್ ಜಾರಕಿಹೊಳಿ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದು, ‘ಈಗಲೂ ಕೂಡ ಅವರೆಲ್ಲರೂ ನನ್ನ ಸ್ನೇಹಿತರೆ. ನಮ್ಮಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ. ಮುಂದೆ ಈ ರೀತಿ ಸಭೆಗಳು ನಡೆಯಬಾರದು. ಪ್ರತ್ಯೇಕ ಸಭೆಗಳನ್ನು ನಡೆಸುವುದಕ್ಕೆ ಕಡಿವಾಣ ಹಾಕಬೇಕು. ಇದರಿಂದ ಕಾರ್ಯಕರ್ತರಿಗೆ ಕೆಟ್ಟ ಸಂದೇಶ ಹೋಗುತ್ತದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ನಾನು ನಾಯಕ ಎಂದು ಎಲ್ಲಿಯೂ ಹೇಳಿಲ್ಲ. …

Read More »

BJP ಸಂಘಟನಾ ಕಾರ್ಯದರ್ಶಿ ರವಿ ಹಿರೇಮಠ ನಿಧನರಾಗಿದ್ದಾರೆ.

ಬೆಳಗಾವಿ – ಭಾರತೀಯ ಜನತಾ ಪಾರ್ಟಿಯ ಬೆಳಗಾವಿ ವಿಭಾಗದ ಸಹ ಸಂಘಟನಾ ಕಾರ್ಯದರ್ಶಿ ರವಿ ಹಿರೇಮಠ ನಿಧನರಾಗಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು. ಕೊರೋನಾ ಸೋಂಕು ತಗುಲಿದ್ದ ಅವರು 2 ಬಾರಿ ಗುಣಮುಖರಾಗಿ ಹೊರಬಂದಿದ್ದರು. ಆದರೆ ಆ ವೇಳೆ ದೇಹದ ಅನೇಕ ಅಂಗಾಂಗಗಳಿಗೆ ಡ್ಯಾಮೇಜ್ ಆಗಿತ್ತು. ಸಧ್ಯ ಅವರು ಕೆ.ಎಲ್.ಇ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿಯೇ ನಿಧನರಾದರು. ಯಮಕನಮರಡಿ ಸಮೀಪ ಕುರಣಿಯವರಾಗಿದ್ದ ಅವರು ಬಿಜೆಪಿಯಲ್ಲಿ ನಿಷ್ಠಾವಂತ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದರು.

Read More »