Breaking News

ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಇಂದು ಚಾಲನೆ ನೀಡಿದರು.:ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಗ್ರಾಮೀಣ ಕ್ಷೇತ್ರದ ಹಂಗರಗಾ ಗ್ರಾಮದಲ್ಲಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಇಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಚಾಲನೆ ನೀಡಿದರು.:ಲಕ್ಷ್ಮೀ ಹೆಬ್ಬಾಳ್ಕರ್ ಸಮಾಜ ಕಲ್ಯಾಣ ಇಲಾಖೆ ಹಾಗೂ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ ಒಟ್ಟು 12 ಲಕ್ಷ ರೂ. ವೆಚ್ಚದಲ್ಲಿ ” ಅಂಬೇಡ್ಕರ್ ಭವನ ” ಕಟ್ಟಡ ನಿರ್ಮಾಣದ ಕಾಮಗಾರಿಗೆ ಗ್ರಾಮಸ್ಥರ ಹಾಗೂ ಸ್ಥಳೀಯ ಜನ ಪ್ರತಿನಿಧಿಗಳ ಸಮ್ಮುಖದಲ್ಲಿ ಭೂಮಿ ಪೂಜೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮದ …

Read More »

15 ಕೋಟಿ ರೂ. ಮೊಬೈಲ್ ಗಳನ್ನು ಹೊತ್ತು ಸಾಗುತ್ತಿದ್ದ ಟ್ರಕ್‍ಅನ್ನು 10 ಮಂದಿ ಇದ್ದ ದರೋಡೆಕೋರರ ಗುಂಪು ಹೈಜಾಕ್

ಚೆನ್ನೈ: 15 ಕೋಟಿ ರೂ. ಮೊಬೈಲ್ ಗಳನ್ನು ಹೊತ್ತು ಸಾಗುತ್ತಿದ್ದ ಟ್ರಕ್‍ಅನ್ನು 10 ಮಂದಿ ಇದ್ದ ದರೋಡೆಕೋರರ ಗುಂಪು ಹೈಜಾಕ್ ಮಾಡಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿ ಸಮೀಪ ನಡೆದಿದೆ. ಸುಮಾರು 14 ಸಾವಿರ ಮೊಬೈಲ್ ಗಳು ಕಂಟೈನರ್ ನಲ್ಲಿತ್ತು ಎಂಬ ಮಾಹಿತಿ ಲಭಿಸಿದ್ದು, ಇವುಗಳ ಒಟ್ಟು ಮೌಲ್ಯ 15 ಕೋಟಿ ರೂ. ಆಗಲಿದೆ ಎನ್ನಲಾಗಿದೆ. ಘಟನೆ ಮಾಹಿತಿ ನೀಡಿರುವ ಹೊಸೂರು ಡಿಎಸ್‍ಪಿ ಮುರಳಿ ಅವರು, ಚೆನ್ನೈನ ಪೂನಮಲ್ಲಿ ಮೊಬೈಲ್ ಘಟಕದಿಂದ …

Read More »

ಇಬ್ಬರು ಭ್ರಷ್ಟ ಅಧಿಕಾರಿಗಳು ಎಸಿಬಿ ಬಲೆಗೆ

ಬೆಂಗಳೂರು, ಅ.22- ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ಭ್ರಷ್ಟ ಅಧಿಕಾರಿಗಳ ಮೇಲೆ ಎಸಿಬಿ ಪೊಲೀಸರು ದಾಳಿ ನಡೆಸಿ ಭಾರೀ ಪ್ರಮಾಣದ ಅಕ್ರಮ ಪತ್ತೆಹಚ್ಚಿದ್ದಾರೆ. ಬಾಗಲಕೋಟೆ ಜಿ.ಪಂ. ಕುಡಿಯುವ ನೀರು ಪೂರೈಕೆ ಹಾಗೂ ನೈರ್ಮಲ್ಯ ವಿಭಾಗದ ಸಹಾಯಕ ಎಂಜಿನಿಯರ್ ಅಶೋಕ್ ತೋಪಲಕಟ್ಟಿ ಅವರ ಮನೆ, ಕಚೇರಿ, ಗ್ಯಾಸ್ ಏಜೆನ್ಸಿ ಮೇಲೆ ಇಂದು ಮುಂಜಾನೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿ ಭಾರೀ ಪ್ರಮಾಣದ ಅಕ್ರಮ ಆಸ್ತಿ ಪತ್ತೆ …

Read More »

ಈ ಉಪ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸುತ್ತೆನೆ ಇಲ್ಲಿ ಹಣ ಬಲವೊ ಜನ ಬಲವೊ ನೋಡಿಯೇ ಬಿಡೋಣ:H,D.D.

ತುಮಕೂರು/ಶಿರಾ, ಅ.22- ಶಿರಾ ಉಪ ಚುನಾವಣೆ ಮುಗಿಯುವವರೆಗೂ ನಾನು ಇಲ್ಲೇ ಇದ್ದು ಹೋರಾಟ ಮಾಡುತ್ತೇನೆ. ಕೆ.ಆರ್.ಪೇಟೆ ಮಾದರಿಯಲ್ಲಿ ಏನಾದರೂ ಚುನಾವಣೆ ನಡೆಸಲು ಹೋದರೆ ನಾನು ರಸ್ತೆಗೆ ಇಳಿದು ಉಗ್ರ ಪ್ರತಿಭಟನೆ ನಡೆಸಲು ಹಿಂದೆ ಮುಂದೆ ನೋಡುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರು ಗುಡುಗಿದ್ದಾರೆ.ಏನಾದರೂ ನನ್ನ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆದರೆ ಸಿಡಿದೇಳುತ್ತೇನೆ. ಈ ಉಪ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸುತ್ತೆನೆ ಇಲ್ಲಿ ಹಣ ಬಲವೊ ಜನ ಬಲವೊ ನೋಡಿಯೇ …

Read More »

ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಮತ ಹಾಕುವಂತೆ ಮತದಾರರಿಗೆ ಎಲ್​ಇಡಿ ಟಿ.ವಿಗಳನ್ನ ಹಂಚಲಾಗ್ತಿದೆ ಎಂಬ ಆರೋಪ ಕೇಳಿಬಂದಿದೆ.!

ಬೆಂಗಳೂರು:  ರಾಜರಾಜೇಶ್ವರಿ ನಗರದ ಉಪ ಚುನಾವಣಾ ಕಣ ರಂಗೇರುತ್ತಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಮತ ಹಾಕುವಂತೆ ಮತದಾರರಿಗೆ ಎಲ್​ಇಡಿ ಟಿ.ವಿಗಳನ್ನ ಹಂಚಲಾಗ್ತಿದೆ ಎಂಬ ಆರೋಪ ಕೇಳಿಬಂದಿದೆ. ಮುನಿರತ್ನ ಅವರ ಬೆಂಬಲಿಗ, ಮಾಜಿ ಬಿಬಿಎಂಪಿ ಸದಸ್ಯ ಜಿ.ಕೆ ವೆಂಕಟೇಶ್ ವಾರ್ಡ್ ನಂಬರ್ 37ರ ವಿ.ಆರ್. ಗಾರ್ಡನ್​​ನ ಖಾಸಿಂ ಸಾಬ್ ಎನ್ನುವವರಿಗೆ, ಎಲ್.ಜಿ. ಕಂಪನಿಯ ಎಲ್‌ಇಡಿ ಟಿವಿ ಕೊಟ್ಟಿದ್ದಾರೆ. ಟಿ.ವಿ. ಮೇಲೆ ಮುನಿರತ್ನ ಫೋಟೋ ಅಂಟಿಸಲಾಗಿದೆ. ರಾಜರಾಜೇಶ್ವರಿ ‌ನಗರ ಕ್ಷೇತ್ರದ ಮತದಾರರಿಗೆ …

Read More »

ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣ ಮಾಸುವ  ಮುನ್ನವೇ    ಇದೀಗ ಅಂತಹುದೇ  ಮತ್ತೊಂದು ಘಟನೆ ಉತ್ತರ ಪ್ರದೇಶದಲ್ಲಿ  15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ

ಉತ್ತರ ಪ್ರದೇಶ:  ದೇಶವನ್ನೇ ಬೆಚ್ಚಿ ಬೀಳಿಸಿದ್ದ  ಉತ್ತರಪ್ರದೇಶದ ಹತ್ರಾಸ್ ನಲ್ಲಿ ಗ್ಯಾಂಗ್ ರೇಪ್ ಪ್ರಕರಣ ಮಾಸುವ  ಮುನ್ನವೇ    ಇದೀಗ ಅಂತಹುದೇ  ಮತ್ತೊಂದು ಘಟನೆ ಉತ್ತರ ಪ್ರದೇಶದಲ್ಲಿ  ಸಂಭವಿಸಿದೆ. 15 ವರ್ಷದ ಬಾಲಕಿಯ ಮೇಲೆ ಇಬ್ಬರು ಕಾಮುಕರು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಉತ್ತರಪ್ರದೇಶದ ರಾಂಪುರ ಜಿಲ್ಲೆಯ ಕೆಮ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ಈ ಭೀಕರ ಘಟನೆ ನಡೆದಿದ್ದು, ಬಾಲಕಿಯ ಮನೆಯಲ್ಲಿಯೇ ಮನೆ ನಿರ್ಮಾಣದ ಕೆಲಸ ಮಾಡುತ್ತಿದ್ದ ಇಬ್ಬರು ಕಟ್ಟಡ …

Read More »

ದೇವಸ್ಥಾನದ ನವರಾತ್ರಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾದ ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕ ಮೊಯಿದ್ದೀನ್ ಬಾವಾಗೆ ಮುಂಬೈನಿಂದ ಬೆದರಿಕೆ ಕರೆ ಬಂದಿದೆ.

ಮಂಗಳೂರು: ದೇವಸ್ಥಾನದ ನವರಾತ್ರಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾದ ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕ ಮೊಯಿದ್ದೀನ್ ಬಾವಾಗೆ ಮುಂಬೈನಿಂದ ಬೆದರಿಕೆ ಕರೆ ಬಂದಿದೆ. ಮಂಗಳೂರು ಹೊರವಲಯದ ಬಜಪೆ ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನವರಾತ್ರಿಯ ಪ್ರಯುಕ್ತ ಕೊಪ್ಪರಿಗೆ ಇಡುವ ಕಾರ್ಯಕ್ರಮವಿತ್ತು. ಇದಕ್ಕೆ ಕ್ಷೇತ್ರದ ಆಹ್ವಾನದಂತೆ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಭೇಟಿ ನೀಡಿದ್ದರು. ಅದೇ ವೇಳೆ ಕೊಪ್ಪರಿಗೆ ಇಡುವ ಧಾರ್ಮಿಕ ವಿಧಿ ವಿಧಾನ ನಡೆಯುತ್ತಿತ್ತು. ಹೀಗಾಗಿ ಕ್ಷೇತ್ರಾಡಳಿತ ಮಂಡಳಿಯವರು …

Read More »

ಹೊಟ್ಟೆಕಿಚ್ಚಿನಿಂದ‌ ಸರ್ಕಾರ ಇಂದಿರಾ ಕ್ಯಾಂಟೀನ್​​ಗೆ ಅನುದಾನ ಕೊಟ್ಟಿಲ್ಲ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ರಾಜ್ಯ ಸರ್ಕಾರ ವಿರುದ್ಧ  ವಾಗ್ದಾಳಿ

ಬೆಂಗಳೂರು: ಹೊಟ್ಟೆಕಿಚ್ಚಿನಿಂದ‌ ಸರ್ಕಾರ ಇಂದಿರಾ ಕ್ಯಾಂಟೀನ್​​ಗೆ ಅನುದಾನ ಕೊಟ್ಟಿಲ್ಲ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ರಾಜ್ಯ ಸರ್ಕಾರ ವಿರುದ್ಧ  ವಾಗ್ದಾಳಿ ನಡೆಸಿದ್ದಾರೆ. ಇಂದಿರಾ ಕ್ಯಾಂಟೀನ್ ಕುರಿತು  ಟ್ವೀಟ್​ ಮಾಡಿರುವ ದಿನೇಶ್ ಗುಂಡೂರಾವ್,  ಇಂದಿರಾ ಕ್ಯಾಂಟೀನ್ ನಿರ್ವಹಿಸುತ್ತಿರುವ ಬಿಬಿಎಂಪಿಗೆ ಸರ್ಕಾರ ಅನುದಾನ ನೀಡದಿರುವುದು ಹೊಟ್ಟೆಕಿಚ್ಚಿನ ರಾಜಕಾರಣ. ಇಂದಿರಾ ಕ್ಯಾಂಟೀನ್ ಮುಖಾಂತರ ಬಡವರ ಹಸಿದ ಹೊಟ್ಟೆಗಳು ತುಂಬುವುದು ⁦ಬಿಜೆಪಿಗೆ ಬೇಕಾಗಿಲ್ಲ. ಹಸಿವಿನ ಸಂಕಟ ಮತ್ತು ಅನ್ನದ ಬೆಲೆ ಗೊತ್ತಿದ್ದರೆ ಕೂಡಲೆ …

Read More »

ಯತ್ನಾಳ್ ಹೇಳಿಕೆಯನ್ನು ಪಕ್ಷವು ಗಂಭೀರವಾಗಿ ಪರಿಗಣಿಸಿದ್ದು, ಪಕ್ಷದಿಂದ ಅಮಾನತು ಇಲ್ಲವೇ ಉಚ್ಛಾಟನೆ

ಬೆಂಗಳೂರು,ಅ.22-ಪಕ್ಷದ ನಿಯುಮ ಉಲ್ಲಂಘಿಸಿ ನಾಯಕರ ವಿರುದ್ದ ಬಹಿರಂಗವಾಗಿಯೇ ಹೇಳಿಕೆ ನೀಡುವ ಮೂಲಕ ಮುಜುಗರ ಉಂಟುಮಾಡುತ್ತಿರುವ ಮಾಜಿ ಸಚಿವ ಹಾಗೂ ವಿಜಪುರದ ವಿಧಾನಸಭಾ ಕ್ಷೇತ್ರದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ದ ಬಿಜೆಪಿ ಶಿಸ್ತು ಕ್ರಮ ಜರಗಿಸಲು ಮುಂದಾಗಿದೆ. ಯತ್ನಾಳ್ ವಿರುದ್ದ ಕ್ರಮ ಕೈಗೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಉಳಿದಿರುವವರು ಇದೇ ಹಾದಿ ತುಳಿಯಬಹುದು ಎಂಬ ಹಿನ್ನಲೆಯಲ್ಲಿ ರಾಜ್ಯ ಬಿಜೆಪಿ ಘಟಕ, ಒಂದೆರೆಡು ದಿನದಲ್ಲಿ ಅವರ ಹೇಳಿಕೆ ಕುರಿತು ನೋಟಿಸ್ ಜಾರಿ ಮಾಡಲು …

Read More »

ಬೆಂಗಳೂರಿನಲ್ಲಿ ರಸ್ತೆಗಿಳಿದ ಓಲೆಕ್ಟ್ರಾ ಎಲೆಕ್ಟ್ರಿಕ್ ಬಸ್

ಬೆಂಗಳೂರು, ಅಕ್ಟೋಬರ್, 22- ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ದೇಶಿಯ ನಿರ್ಮಿತ ಓಲೆಕ್ಟ್ರಾ ಎಲೆಕ್ಟ್ರಿಕ್ ಬಸ್ ಪರೀಕ್ಷಾರ್ಥ ಸಂಚಾರಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಇಂದು ಚಾಲನೆ ನೀಡಿದರು. ಬಿಎಂಟಿಸಿಯ ಕೇಂದ್ರ ಕಚೇರಿ ಆವರಣದಲ್ಲಿ ಈ ಬಸ್‍ಗೆ ಚಾಲನೆ ನೀಡಿದ ನಂತರ ವಿಧಾನಸೌಧದವರೆಗೂ ಅದೇ ಬಸ್‍ನಲ್ಲಿ ಪ್ರಯಾಣಿಸಿದರು. ವಿಧಾನಸೌಧದ ಆವರಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ಕೂಡ ಎಲೆಕ್ಟ್ರಿಕ್ ಬಸ್‍ನ್ನು ವೀಕ್ಷಣೆ ಮಾಡಿ ನಂತರ ಉಪಮುಖ್ಯಮಂತ್ರಿಯವರಿಂದ ಮಾಹಿತಿ ಪಡೆದರು.ಈ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮಣ್ …

Read More »