Breaking News

ಬೆಳಗಾವಿಗೆ ರೈಲ್ವೆ ಸೌಲಭ್ಯಕ್ಕೆ ವಿಶೇಷ ಗಮನ ನೀಡಬೇಕೆಂದು ಮನವಿ

ಮೂಡಲಗಿ: ಕುಂದಾನಗರಿ ಬೆಳಗಾವಿ ಜಿಲ್ಲೆ ಹಾಗೂ ಸುತ್ತಲಿನ ವಿವಿಧ ಜಿಲ್ಲೆಗಳ ಸಾರ್ವಜನಿಕರ ಅನುಕೂಲಕ್ಕಾಗಿ ಗೋವಾ-ಮಂಗಳೂರ ಮತ್ತು ಮೈಸೂರ ಈ ಮೂರು ನಗರಗಳಿಗೆ ರೈಲು ಓಡಾಟ ಶೀಘ್ರ ಆರಂಭಿಸಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಕೇಂದ್ರ ರೈಲ್ವೆ ಸಚಿವ ಪಿಯೂಷ ಗೊಯಲ್ ಅವರಿಗೆ ಮನವಿ ಪತ್ರ ನೀಡಿ ಒತ್ತಾಯಿಸಿದರು. ಮಂಗಳವಾರ (ಫೆ.೨) ದಂದು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೊಯಲ್ ಅವರ ನವದೆಹಲಿ ಕಛೇರಿಗೆ ಭೇಟಿ ನೀಡಿದ ಅವರು, …

Read More »

ಬಡ ಮಹಿಳೆಯಿಂದ 15 ಸಾವಿರ ರೂ ಡಿಸೇಲ್ ಹಾಕಿಸಿಕೊಂಡ ಯುಪಿ ಪೊಲೀಸರು

ಉತ್ತರಪ್ರದೇಶ : ಮಗಳನ್ನ ಹುಡುಕಿಕೊಡಿ ಎಂದು ಠಾಣೆಗೆ ಬಂದ ಮಹಿಳೆಯಿಂದ ಪೊಲೀಸರು 15 ಸಾವಿರ ರೂಪಾಯಿ ಮೌಲ್ಯದಷ್ಟು ಡಿಸೇಲ್ ತುಂಬಿಸಿಕೊಂಡಿರುವ ಘಟನೆ ಉತ್ತರಪ್ರದೇಶದ ಲಕ್ನೋದಲ್ಲಿ ನಡೆದಿದೆ. ಈ ಕುರಿತು ನೊಂದ ಮಹಿಳೆ ಎಸ್ ಪಿ ಕಚೇರಿಗೆ ತೆರಳಿ ದೂರು ಸಲ್ಲಿಸಿದ್ದಾರೆ. ಏನಿದು ಘಟನೆ..? ತಿಂಗಳ ಹಿಂದೆ ಅಂಗವಿಕಲೆ ಗುಡಿಯಾ ಎಂಬುವರ ಮಗಳು ನಾಪತ್ತೆಯಾಗಿದ್ದರು. ಈ ಕುರಿತು ಗುಡಿಯಾ, ತನ್ನ ಅಪ್ರಾಪ್ತ ಮಗಳನ್ನ ಠಾಕೂರ್ ಎಂಬಾತ ಅಪಹರಿಸಿದ್ದಾನೆ ಎಂದು ಠಾಣೆಯಲ್ಲಿ ದೂರು …

Read More »

ಮಾಜಿ ಸಚಿವ ವಿನಯ ಕುಲಕರ್ಣಿ ವಿರುದ್ಧ ಸಿಬಿಐ ʼಆರೋಪ ಪಟ್ಟಿʼ ನ್ಯಾಯಾಲಯಕ್ಕೆ ಸಲ್ಲಿಕೆ..!

ನವದೆಹಲಿ: ಧಾರವಾಡದಲ್ಲಿರುವ ವಿಶೇಷ ಕೋರ್ಟ್ʼನಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಮತ್ತು ಇತರ ಇಬ್ಬರ ವಿರುದ್ಧ ಆರೋಪ ಪಟ್ಟಿಯನ್ನ ಸಲ್ಲಿಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ, ವಿನಯ ಕುಲಕರ್ಣಿ ಚಂದ್ರಶೇಖರ ಇಂಡಿ ಮತ್ತು ಶಿವಾನಂದ ಬಿರಾದಾರ್ ವಿರುದ್ಧ ಆರೋಪಪ‌ಟ್ಟಿ ದಾಖಲಿಸಲಾಗಿದೆ. 2016ರಲ್ಲಿ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿ ಆರೋಪಿಗಳು ಮೃತನ ಜೊತೆಗೆ ರಾಜಕೀಯ ಮತ್ತು …

Read More »

ಗ್ರಾಹಕರಿಗೆ ಬಿಗ್‌ ಶಾಕ್:‌ ವಾಣಿಜ್ಯ ‌ʼLPG ಸಿಲೆಂಡರ್ʼ ಬೆಲೆ ಏರಿಕೆ, ಹೊಸ ದರದ ಮಾಹಿತಿ ಇಲ್ಲಿದೆ..!

ತೈಲ ಮಾರುಕಟ್ಟೆ ಕಂಪನಿಗಳು ಎಲ್ ಪಿಜಿ ಸಿಲಿಂಡರ್ ಫೆಬ್ರವರಿ ತಿಂಗಳ ಬೆಲೆಯನ್ನ ಬಿಡುಗಡೆ ಮಾಡಿದ್ದು, ವಾಣಿಜ್ಯ ಎಲ್ ಪಿಜಿ ಸಿಲಿಂಡರ್ (19ಕೆಜಿ) ಬೆಲೆ 190 ರೂ ಹೆಚ್ಚಳವಾಗಿದೆ. ಆದರೆ, ಗೃಹ ಬಳಕೆಯ ಎಲ್ ಪಿಜಿ ಸಿಲಿಂಡರ್ (14.2ಕೆ.ಜಿ) ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಈ ಹೊಸ ದರಗಳು ಫೆಬ್ರವರಿ 1ರಿಂದ ಜಾರಿಗೆ ಬಂದಿವೆ. ಡಿಸೆಂಬರ್ ತಿಂಗಳಲ್ಲಿ ಐಒಸಿ ದೇಶೀಯ ಎಲ್ ಪಿಜಿ ದರವನ್ನ ಎರಡು ಬಾರಿ ಏರಿಸಿತ್ತು. ಈ ಹಿಂದೆ ಡಿಸೆಂಬರ್ …

Read More »

ಕುರುಬ ಸಮುದಾಯಕ್ಕೆ ಎಸ್‍ಟಿ ಮೀಸಲಾತಿಗೆ ಒತ್ತಾಯ ವಿಧಾನಸಭೆಯಲ್ಲಿ ಧರಣಿ

ಬೆಂಗಳೂರು,ಫೆ.2-ಪಂಚಮಸಾಲಿ ಸಮುದಾಯಕ್ಕೆ 2ಎ ಹಾಗೂ ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ಕಲ್ಪಿಸಬೇಕು ಎಂಬ ವಿಚಾರ ವಿಧಾನಸಭೆಯಲ್ಲಿಂದು ಪ್ರತಿಧ್ವನಿಸಿ ಪಕ್ಷ ಬೇಧ ಮರೆತು ಕೆಲ ಕಾಲ ಧರಣಿ ನಡೆಸಿದ ಘಟನೆ ಜರುಗಿತು. ಶೂನ್ಯವೇಳೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಪ್ರಸ್ತಾಪಿಸಿದ ವಿಚಾರಕ್ಕೆ ಪಕ್ಷ ಬೇಧ ಮರೆತು ಶಾಸಕರು ಧ್ವನಿಗೂಡಿಸಿ ಸರ್ಕಾರದಿಂದ ಸ್ಪಷ್ಟ ಉತ್ತರಕ್ಕೆ ಆಗ್ರಹಿಸಿ ಸಭಾಧ್ಯಕ್ಷರ ಪೀಠದ ಮುಂದಿನ ಬಾವಿಗಿಳಿದು ಧರಣಿ ನಡೆಸಿದರು. ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಬಸವನಗೌಡ ಪಾಟೀಲ್ …

Read More »

ಎಟಿಎಂ ನಲ್ಲಿ ಮಹಿಳೆ ಮೇಲೆ ಹಲ್ಲೆ ಮಾಡಿದ್ದ ಮಧುಕರ್ ರೆಡ್ಡಿಗೆ 12 ವರ್ಷ ಜೈಲು ಶಿಕ್ಷೆ 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಇಂದು ತೀರ್ಪು

ಬೆಂಗಳೂರು: 2013ರಲ್ಲಿ ಜ್ಯೋತಿ ಉದಯ ಎಂಬುವರ ಮೇಲೆ ಎಟಿಎಂ ನಲ್ಲಿ ಭೀಕರವಾಗಿ ಹಲ್ಲೆ ಮಾಡಿದ್ದ ಮಧುಕರ್ ರೆಡ್ಡಿಗೆ ಒಟ್ಟು 12 ವರ್ಷ ಜೈಲು ಶಿಕ್ಷೆ ವಿಧಿಸಿ ಸಿಸಿಎಚ್ ಕೋರ್ಟ್‌ ಮಂಗಳವಾರ ತೀರ್ಪು ನೀಡಿದೆ.   ಅಪರಾಧಿ ಮಧುಕರ್ ಗೆ ದರೋಡೆ ಆರೋಪದಡಿ 10 ವರ್ಷ ಶಿಕ್ಷೆ ವಿಧಿಸಿದ ಕೋರ್ಟ್,​ ಸಾಕ್ಷ್ಯ ನಾಶ ಮಾಡಿದ್ದಕ್ಕೆ 2 ವರ್ಷ ಶಿಕ್ಷೆ ಸಹ ವಿಧಿಸಿದೆ. ಆದರೆ, ಎರಡೂ ಶಿಕ್ಷೆಯನ್ನು ಜೊತೆಯಲ್ಲೇ ಅನುಭವಿಸಬೇಕಾಗಿರುವುದರಿಂದ ಮಧುಕರ್​ ರೆಡ್ಡಿ …

Read More »

ಇಂಜಿನಿಯರ್ ಖಜಾನೆ‌ ಬಗೆದಷ್ಟು ಬಯಲು: ಕಂತೆ ಕಂತೆ ಹಣ ಕಂದು ದಂಗಾದ ಅಧಿಕಾರಿಗಳು!

ಹುಬ್ಬಳ್ಳಿ: ಸಣ್ಣ ನೀರಾವರಿ ಇಲಾಖೆಯ ಇಇ ದೇವರಾಜ ಕೆ. ಶಿಗ್ಗಾಂವಿ ನಿವಾಸದ ಮೇಲೆ ದಾಳಿ ನಡೆಸಿದ ಅಧಿಕಾರಿಗಳೇ ಒಂದು ದಂಗಾಗಿದ್ದಾರೆ. ಅಧಿಕಾರಿಯ ಖಜಾನೆ‌ ಬಗೆದಷ್ಟು ಬಯಲಾಗಯತ್ತಿದ್ದು, ಬ್ಯಾಂಕ್ ಲಾಕರ್​ನಲ್ಲಿ ಲಕ್ಷಾಂತರ ಮೌಲ್ಯದ ಗರಿ ಗರಿ ನೋಟುಗಳು ಪತ್ತೆ‌ಯಾಗಿವೆ. ಎಇಇ ದೇವರಾಜ ಕೆ. ಶಿಗ್ಗಾಂವಿ ಮನೆ ಮತ್ತು ತಾಯಿ ಹಾಗೂ ಮಾವನ ಮನೆಗಳ ಮೇಲೂ ಎಸಿಬಿ ದಾಳಿ ಮಾಡಿದೆ. ಈ ವೇಳೆ 27 ಎಕರೆ ಆಸ್ತಿ ಖರೀದಿ ಮಾಡಿದ ದಾಖಲೆ ಪತ್ತೆ‌ಯಾಗಿದೆ. …

Read More »

ಗೋಕಾಕ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶಾಸಕ ಸತೀಶ್ ಜಾರಕಿಹೊಳಿ ಭೇಟಿ

ಗೋಕಾಕ : ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ  ಸುಧಾರಣ ಸಮಿತಿ ಅಧ್ಯಕ್ಷ, ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಮಂಗಳವಾರ ಭೇಟಿ ನೀಡಿ, ಪರಿಶೀಲಿಸಿದರು. ಕಾಲೇಜು ಪ್ರಾಂಶುಪಾಲರು, ಸಿಬ್ಬಂದಿಯೊಂದಿಗೆ ವಿದ್ಯಾರ್ಥಿಗಳ ವಿದ್ಯಾಭ್ಯಾಸ ಹಾಗೂ ಪ್ರವೇಶ ಪಡೆದಿರುವ ಕುರಿತು ಮಾಹಿತಿ ಪಡೆದರು. ಬಳಿಕ ನೂತನ ಕಟ್ಟಡದ ಗುಣಮಟ್ಟವನ್ನು ಪರಿಶೀಲನೆ ಮಾಡಿದರು. ತದನಂತರ ಕಾಲೇಜು ಅಭಿವೃದ್ಧಿಗೆ ಮಾಡಬೇಕಾದ ಯೋಜನೆಗಳ ಕುರಿತು ಪ್ರಾಂಶುಪಾಲರೊಂದಿಗೆ ಚರ್ಚಿಸಿ, ಹಲವು ಸಲಹೆಗಳನ್ನು ನೀಡಿದರು. ಇದೇ ವೇಳೆ ಕಾಲೇಜ್ ಸಿಬ್ಬಂದಿ …

Read More »

ಸೈನಿಕನ ಕುಟುಂಬಸ್ಥರ ಮೇಲೆ ಬೆಳಗಾವಿ ಬಿಜೆಪಿ ಮುಖಂಡನ ದರ್ಪ : ಕಬ್ಬಿಣ ರಾಡ್ ನಿಂದ ಹಲ್ಲೆ !

  ಬೆಳಗಾವಿ : ಆಸ್ತಿ ವಿಚಾರವಾಗಿ ಬೆಳಗಾವಿ ಮಹಾನಗರ ಘಟಕದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮುರುಘೇಂದ್ರಗೌಡ ಪಾಟೀಲ ನಮ್ಮ ಕುಟುಂಬದ ಮೇಲೆ ಹಲ್ಲೆ ಮಾಡಿದ್ದಾನೆ. ಪೊಲೀಸ್ ಠಾಣೆಗೆ ದೂರು ನೀಡಲು ಹೋದರೆ ಅಧಿಕಾರಿಗಳು ಕೇಸ್ ತೆಗೆದುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ಸೈನಿಕ ಭೀಮ್ಮಪ್ಪಾ ನರಸಗೌಡ ಕುಟುಂಬಸ್ಥರು ಆರೋಪಿಸಿದ್ದಾರೆ. ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಾಧ್ಯಮದವರ ಮುಂದೆ ಅಳಲು ತೊಡಿಕೊಂಡ ಸೈನಿಕ ಕುಟುಂಬ ನ್ಯಾಯಕ್ಕಾಗಿ ಅಂಗಲಾಚಿದ್ದಾರೆ. ಅತ್ತ ಸೇನೆಯಲ್ಲಿ ಸೈನಿಕ ಸೇವೆ …

Read More »

ಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಿದ ಬಿಜೆಪಿ ಸದಸ್ಯ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಕೆ. ಪ್ರತಾಪ್ ಚಂದ್ರ ಶೆಟ್ಟಿ ವಿರುದ್ಧ ಪದಚ್ಯುತಿ ಸಂಬಂಧ ಮಂಗಳವಾರ ಮಧ್ಯಾಹ್ನ ಬಿಜೆಪಿ ಸದಸ್ಯ ಆಯನೂರು ಮಂಜುನಾಥ್ ಅವಿಶ್ವಾಸ ನಿರ್ಣಯ ಮಂಡಿಸಿದರು.   ಭೋಜನ ವಿರಾಮದ ನಂತರ ಕಲಾಪ ಸೇರುತ್ತಿದ್ದಂತೆ ಪದಚ್ಯುತಿ ವಿಚಾರವನ್ನು ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರು ಪ್ರಸ್ತಾಪಿಸಿದರು. ಸದಸ್ಯ ಆಯನೂರು ಮಂಜುನಾಥ್ ಅವರಿಗೆ ನಿರ್ಣಯ ಮಂಡಿಸುವಂತೆ ಆಹ್ವಾನಿಸಿದರು.   ಬಿಜೆಪಿಯ ಸದಸ್ಯ ಆಯನೂರು ಮಂಜುನಾಥ್ ನಿರ್ಣಯ ಮಂಡಿಸುತ್ತಿದ್ದಂತೆಯೇ, ಇದರ ಪರವಾಗಿ …

Read More »