Breaking News

ರಾಜ್ಯಸಭಾ ಕಲಾಪ ನಾಳೆಗೆ ಮುಂದೂಡಿಕೆ

ಹೊಸದಿಲ್ಲಿ: ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾನೂನುಗಳು ಮತ್ತು ರೈತರ ಹೋರಾಟ ಸಂಸತ್ ನಲ್ಲಿ ಪ್ರತಿಧ್ವನಿಸಿದ್ದು, ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.   ಕೃಷಿ ಕಾನೂನು ಮತ್ತು ರೈತರ ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ನಡೆಯನ್ನು ವಿರೋಧಿಸಿ ರಾಜ್ಯಸಭೆಯಲ್ಲಿ ವಿಪಕ್ಷಗಳು ಸಭಾತ್ಯಾಗ ಮಾಡಿದವು. ರೈತರ ಪ್ರತಿಭಟನೆ ಕುರಿತು ಚರ್ಚಿಸಲು ಅವಕಾಶ ನೀಡುವಂತೆ ಒತ್ತಾಯಿಸಿ ವಿರೋಧ ಪಕ್ಷಗಳು ಗದ್ದಲ, ಕೋಲಾಹಲ ಎಬ್ಬಿಸಿದ್ದರಿಂದ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.   ಬಜೆಟ್ ಮಂಡನೆಯ ಮರುದಿನವಾದ ಇಂದು …

Read More »

ಗೋಟೂರ ಗ್ರಾಮ ಪಂಚಾಯತಿ: ಅಧ್ಶಕ್ಷರಾಗಿ ಅಶೋಕ ಗಂಗನ್ನವರ, ಉಪಾಧ್ಶಕ್ಷರಾಗಿ ಲತಾ ಪಾಟೀಲ ಆಯ್ಕೆ

ಬೆಳಗಾವಿ: ಗೋಟೂರ ಗ್ರಾಮ ಪಂಚಾಯತಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಅಧ್ಶಕ್ಷರಾಗಿ ಅಶೋಕ ಗಂಗನ್ನವರ ಹಾಗೂ ಉಪಾಧ್ಶಕ್ಷರಾಗಿ ಲತಾ ನಿಂಗನಗೌಡ ಪಾಟೀಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.   ಶಾಸಕ ಸತೀಶ ಜಾರಕಿಹೊಳಿ ಅವರ ಸೂಚನೆಯ ಮೇರೆಗೆ ಇವರನ್ನು ಆಯ್ಕೆ ಮಾಡಲಾಗಿದೆ.   ಮುಖಂಡರಾದ ಬಸು ಜತ್ತಿ, ಪ್ರಕಾಶ ಬಸ್ಸಾಪುರಿ, ಪಪ್ಪುಗೌಡ ಪಾಟೀಲ, ತಾಲ್ಲೂಕು ಪಂಚಾಯ್ತಿ ಸದಸ್ಯರಾದ ನಿಂಗನಗೌಡ ಪಾಟೀಲ, ರವಿಂದ್ರ ಮಾಸೇವಾಡಿ, ಗುರುನಾಥ ಶಿಂದೆ, ಹನುಮಂತ ಶೇಖನವರ, ರಾಜು ನಾಯಿಕ, ಸುಭಾಸ ಘಸ್ತಿ, …

Read More »

ಸುಶಾಂತ್ ಸಿಂಗ್ ಸಂಬಂಧಿಯ ಮೇಲೆ ಗುಂಡಿನ ದಾಳಿ

ಕಳೆದ ವರ್ಷ ನಿಧನವಾದ ನಟ ಸುಶಾಂತ್ ಸಿಂಗ್ ಸಂಬಂಧಿ ಮೇಲೆ ಮೂವರು ದುಷ್ಕರ್ಮಿಗಳು ಗುಂಡಿನ ದಾಳಿ ಮಾಡಿದ್ದಾನೆ. ಸುಶಾಂತ್ ಸಿಂಗ್ ತಾಯಿಯ ಸಹೋದರನಾಗಿರುವ ರಾಜಕುಮಾರ್ ಸಿಂಗ್ ಮೇಲೆ ಮೂವರು ಅಗಂತುಕರು ನಿನ್ನೆ (ಜನವರಿ 30) ಗುಂಡು ಹಾರಿಸಿದ್ದಾನೆ. ಗುಂಡಿನ ದಾಳಿಯಿಂದ ರಾಜಕುಮಾರ್ ಸಿಂಗ್ ತೀವ್ರವಾಗಿ ಗಾಯಗೊಂಡಿದ್ದು ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಹಾರದ ಸಹರ್ಸಾ ನಲ್ಲಿ ವಾಸವಾಗಿರುವ ರಾಜಕುಮಾರ್ ಸಿಂಗ್ ಗೆ ಮೂರು ವಾಹನ ಶೋ ರೂಂ ಇದ್ದು. ಮೂರೂ …

Read More »

ರೈತರ ಪ್ರತಿಭಟನೆ ನಡೆಯುತ್ತಿರುವ ಸಿಂಘು ಗಡಿಗೆ ಶಿವಸೇನಾ ಸಂಸದ ಸಂಜಯ್ ರಾವತ್

ನವದೆಹಲಿ: ಕಳೆದ ನವೆಂಬರ್ ನಿಂದ ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ಗಳ ವಿರುದ್ಧ ರೈತರು ಪ್ರತಿಭಟನೆ ಮಾಡುತ್ತಿರುವ ಪ್ರತಿಭಟನಾ ಸ್ಥಳಗಳಲ್ಲಿ ಒಂದಾದ ದೆಹಲಿ ಮತ್ತು ಹರಿಯಾಣ ನಡುವಿನ ಸಿಂಘು ಗಡಿಗೆ ಶಿವಸೇನೆ ಸಂಸದ ಸಂಜಯ್ ರಾವುತ್ ಮಂಗಳವಾರ ಭೇಟಿ ನೀಡಲಿದ್ದಾರೆ. 60 ದಿನಗಳಿಂದ ರೈತರ ಪ್ರತಿಭಟನೆ ಕೇಂದ್ರವಾಗಿರುವ ಪ್ರತಿಭಟನಾ ಸ್ಥಳಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಹಾಗೂ ಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಸಲಹೆ ಮೇರೆಗೆ ಭೇಟಿ ನೀಡಲು ರಾವತ್ ನಿರ್ಧರಿಸಿದ್ದಾರೆ. …

Read More »

ಬೆಳ್ಳಂಬೆಳಗ್ಗೆ ಎಸಿಬಿ ಶಾಕ್: ಮಂಗಳೂರು ಸೇರಿದಂತೆ ರಾಜ್ಯದ 7 ಕಡೆಗಳಲ್ಲಿ ದಾಳಿ

ಮಂಗಳೂರು: ಮಹಾನಗರ ಪಾಲಿಕೆ ಟೌನ್ ಪ್ಲಾನಿಂಗ್ ನ ಜಂಟಿ ನಿರ್ದೇಶಕ ಜಯರಾಜ್ ಅವರ ಮನೆ ಹಾಗೂ ಪತ್ನಿ ಮನೆ ಮೇಲೆ ಇಂದು ಬೆಳ್ಳಂಬೆಳಗ್ಗೆ ಎಸಿಬಿ ದಾಳಿಯಾಗಿದ್ದು ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಬಿಜೈನ ಕಾಪಿಕಾಡ್ ನಲ್ಲಿರುವ ಜಯರಾಜ್ ಅವರ ಫ್ಲ್ಯಾಟ್, ಮಹಾನಗರ ಪಾಲಿಕೆ ಕಚೇರಿ, ಪಡೀಲ್ ನಲ್ಲಿರುವ ಅವರ ತಂದೆ ಮನೆ ಹಾಗೂ ಪಾಂಡಿಚೇರಿಯಲ್ಲಿರುವ ಅವರ ಪತ್ನಿ ಮನೆಗೂ ದಾಳಿ ನಡೆದಿದ್ದು ವಿಚಾರಣೆ ತಪಾಸಣೆ ಮುಂದುವರಿದಿದೆ. ಇಂದು ಮುಂಜಾನೆಯಿಂದಲೇ ದಾಖಲಾತಿಗಳ ಪರಿಶೀಲನೆ …

Read More »

ವಿದ್ಯುತ್, ಇಂಟರ್ನೆಟ್ ಸ್ಥಗಿತ: ಫೆ.6ರಂದು ದೇಶಾದ್ಯಂತ ರಸ್ತೆ, ತಡೆ: ರೈತ ಸಂಘಟನೆ

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ನೂತನ ಕೃಷಿ ಕಾಯ್ದೆ ವಿರುದ್ಧ ದೆಹಲಿಯ ಸಿಂಘು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳು ಶನಿವಾರ(ಫೆಬ್ರುವರಿ 06) ದೇಶಾದ್ಯಂತ “ಚಕ್ಕಾ ಜಾಮ್” (ರಸ್ತೆ ಬಂದ್) ನಡೆಸುವುದಾಗಿ ಘೋಷಿಸಿವೆ. ಮಧ್ಯಾಹ್ನ 1ಗಂಟೆಯಿಂದ 3ಗಂಟೆವರೆಗೆ ಪ್ರತಿಭಟನೆ ನಡೆಯಲಿದ್ದು, ಈ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿ ವಿರೋಧ ವ್ಯಕ್ತಪಡಿಸಲಾಗುವುದು ಎಂದು ತಿಳಿಸಿದೆ. ಸೋಮವಾರ(ಫೆ.1) ಸಂಜೆ ಸಂಸತ್ ಚಲೋ ನಡೆಸಲು ಸಂಯುಕ್ತ ಕಿಸಾನ್ ಮೋರ್ಚಾ ಸಿದ್ಧತೆ …

Read More »

ಬಿಜೆಪಿ ಜತೆ ಕೈ ಜೋಡಿಸಿ ಖೆಡ್ಡಾ ತೋಡಿಕೊಂಡ ಜೆಡಿಎಸ್‌: ಜಮೀರ್‌

ಕೆರೂರ: ಗೋಹತ್ಯೆ ಜಾರಿಗೊಳಿಸಲು ಕೋಮುವಾದಿ ಬಿಜೆಪಿ ಜತೆ ಕೈಜೋಡಿಸಿದ ಜೆಡಿಎಸ್‌ ತಾನಾಗೇ ಖೆಡ್ಡಾ ತೋಡಿಕೊಂಡಿದ್ದು, ರಾಜ್ಯದಲ್ಲಿ ಆ ಪಕ್ಷಕ್ಕೆ ಸತ್ವವೇ ಇಲ್ಲದಂತಾಗಿ ಹೋಗಿದೆ ಎಂದು ಕಾಂಗ್ರೆಸ್‌ ಶಾಸಕ ಜಮೀರ ಅಹ್ಮದ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತ್ಯತೀತ ಜನತಾದಳ ಎಂದು ಹೇಳಿಕೊಳ್ಳುವ ಜೆಡಿಎಸ್‌ನವರು ಕೋಮುವಾದಿ ಬಿಜೆಪಿ ಜತೆ ಸೇರಿ ಗೋಹತ್ಯೆ ನಿಷೇಧಕ್ಕೆ ಬೆಂಬಲ ಸೂಚಿಸಿದ ಮೇಲೆ ಅದು ಹೇಗೆ ಜಾತ್ಯತೀತ ಪಕ್ಷವಾಗುತ್ತದೆ. ಬಿಜೆಪಿಗೆ ಬೆಂಬಲ ಸೂಚಿಸಿರುವ ಜೆಡಿಎಸ್‌ ಮೊದಲು ಸೆಕ್ಯುಲರ್‌ …

Read More »

ಸದನದಲ್ಲಿ ಅಶ್ಲೀಲ ಚಿತ್ರ ವೀಕ್ಷಣೆ ಕುರಿತ ಪರಿಶೀಲನೆಗೆ ಸಮಿತಿ : ಸಭಾಪತಿ ಆದೇಶ

ಬೆಂಗಳೂರು: ವಿಧಾನ ಪರಿಷತ್ತಿನ ಸದಸ್ಯರೊಬ್ಬರು ಸದನದ ಒಳಗೆ ಜ.29ರಂದು ಕಲಾಪ ನಡೆಯುತ್ತಿರುವಾಗ ಅಶ್ಲೀಲ ಚಿತ್ರ ವೀಕ್ಷಿಸಿದ್ದಾರೆಂಬ ಕುರಿತು ಮಾಧ್ಯಮಗಳಲ್ಲಿ ಬಂದಿರುವ ವರದಿ ಬಗ್ಗೆ ತನಿಖೆ ನಡೆಸಲು ವಿಧಾನಪರಿಷತ್‌ ನೀತಿ ನಿರೂಪಣಾ ಸಮಿತಿಗೆ ಒಪ್ಪಿಸಿ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಆದೇಶಿಸಿದ್ದಾರೆ. ಸೋಮವಾರ ಕಲಾಪ ಆರಂಭವಾಗುತ್ತಿದ್ದಂತೆಯೇ ಪ್ರಕಟಣೆ ಹೊರಡಿಸಿದ ಸಭಾಪತಿಗಳು, 2020- 21ನೇ ಸಾಲಿನ ವಿಧಾನಪರಿಷತ್ತಿನ ನೀತಿ ನಿರೂಪಣಾ ಸಮಿತಿಗೆ ಬಿ.ಕೆ. ಹರಿಪ್ರಸಾದ್‌, ಡಾ.ತೇಜಸ್ವಿನಿಗೌಡ, ಕೆ.ಟಿ. ಶ್ರೀಕಂಠೇಗೌಡ, ಎಸ್‌.ವಿ. ಸಂಕನೂರ, ಎನ್‌. ಅಪ್ಪಾಜಿಗೌಡ, ಪಿ.ಆರ್‌.ರಮೇಶ್‌ …

Read More »

ಆತ್ಮನಿರ್ಭರ ಗೃಹಲಕ್ಷ್ಮೀ ಲೆಕ್ಕಾಚಾರ :ವಿತ್ತ ಸಚಿವೆ ನಿರ್ಮಲಾ ಬಜೆಟ್‌ನಲ್ಲಿ ಅನುದಾನದ ಮಹಾಪೂರ

  https://youtu.be/1PZZeFQNHLU   ಹೊಸದಿಲ್ಲಿ: ಕೊರೊನೋತ್ತರ ಕಾಲದಲ್ಲಿ ಹೆಚ್ಚು ಜನಪ್ರಿಯ ಯೋಜನೆಗಳಿಗೆ ಜೋತು ಬೀಳದೆ ಜನಪರವಾದ, ಉದ್ಯೋಗ ಸೃಷ್ಟಿ ಮತ್ತು ಆರೋಗ್ಯ ಕ್ಷೇತ್ರಗಳತ್ತ ಗಮನ ಕೇಂದ್ರೀಕರಿಸಿದ ಬಜೆಟ್‌ ಮಂಡಿಸಿದ್ದಾರೆ ನಿರ್ಮಲಾ ಸೀತಾರಾಮನ್‌. ಅವರ ಆಯ-ವ್ಯಯದಲ್ಲಿ “ಗೃಹಲಕ್ಷ್ಮಿಯ ಲೆಕ್ಕಾಚಾರದ ಎಚ್ಚರ’ ಕಂಡುಬಂದಿದ್ದರೆ ಅಚ್ಚರಿಯೇನೂ ಇಲ್ಲ! 2020ರ ವರ್ಷಾರಂಭದಲ್ಲಿ ಚೀನ ಸಹಿತ ಜಗತ್ತಿನ ಎಲ್ಲ ದೇಶಗಳಲ್ಲಿ ಕೊರೊನಾ ಕಾಣಿಸಿಕೊಂಡ ಕೂಡಲೇ ಭಾರತವೂ ಆರೋಗ್ಯ ಕ್ಷೇತ್ರದ ಮೇಲೆ ಹೆಚ್ಚಿನ ಗಮನ ಹರಿಸಿತ್ತು. ಇದನ್ನೇ ಪಾಠವಾಗಿ …

Read More »

ಈ ವರ್ಷ ಒಲಿಂಪಿಕ್ಸ್‌ ಆಯೋಜಿಸುವ ದೃಢಸಂಕಲ್ಪ: ಜಪಾನ್‌ ಪ್ರಧಾನಿ

ಟೋಕಿಯೊ: ದೇಶದಲ್ಲಿ ಕೊರೊನಾ ವೈರಾಣು ಸೋಂಕಿನ ಪ್ರಕರಣಗಳ ನಡುವೆಯೂ ಈ ವರ್ಷ ಒಲಿಂಪಿಕ್ಸ್‌ ಆಯೋಜಿಸುವ ದೃಢಸಂಕಲ್ಪ ಹೊಂದಿರುವುದಾಗಿ ಜಪಾನ್‌ ಪ್ರಧಾನಿ ಯೋ ಶಿಹಿದೆ ಸುಗಾ ಹೇಳಿದ್ದಾರೆ. ಟೋಕಿಯೊದಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯ ವರ್ಚುವಲ್‌ ಸಭೆಯೊಂದರಲ್ಲಿ ಮಾತನಾಡಿದ ಅವರು, ಜಾಗತಿಕ ಒಗ್ಗಟ್ಟು ಹಾಗೂ ಸಾಂಕ್ರಾಮಿಕ ಪಿಡುಗಿನ ವಿರುದ್ಧ ಮಾನವನ ವಿಜಯದ ಸಂಕೇತವಾಗಿ ಈ ವರ್ಷದ ಬೇಸಿಗೆಯಲ್ಲಿ ಟೋಕಿಯೊ ಒಲಿಂಪಿಕ್ಸ್‌ ಹಾಗೂ ಪ್ಯಾರಾಲಿಂಪಿಕ್ಸ್‌ ಆಯೋಜಿಸುವ ದೃಢಸಂಕಲ್ಪವನ್ನು ನಾವು ಮಾಡಿದ್ದೇವೆ. ಈ ಕೂಟವು …

Read More »