Breaking News

ಡ್ರಗ್ಸ್​ ಪ್ರಕರಣ ಸಂಬಂಧ ಜೈಲು ಸೇರಿರುವ ‘ನಶೆ’ರಾಣಿಯರಿಂದ ಹೊಸ ಕಿರಿಕ್ ಶುರುವಾಗಿದೆ.

ಬೆಂಗಳೂರು: ಡ್ರಗ್ಸ್​ ಪ್ರಕರಣ ಸಂಬಂಧ ಜೈಲು ಸೇರಿರುವ ‘ನಶೆ’ರಾಣಿಯರಿಂದ ಹೊಸ ಕಿರಿಕ್ ಶುರುವಾಗಿದೆ. ರಾಗಿಣಿ ಮತ್ತು ಸಂಜಳಾನ ಪ್ರತ್ಯೇಕ ಸೆಲ್​ಗಳಲ್ಲಿಟ್ಟರೂ ಪರಪ್ಪನ ಅಗ್ರಹಾರ ಜೈಲು ಸಿಬ್ಬಂದಿಗೆ ತಲೆನೋವು ಕಮ್ಮಿಯಾಗಿಲ್ಲ. ಜೈಲೂಟ ಅಡ್ಜೆಸ್ಟ್ ಆಗ್ತಿಲ್ಲ ಅಂತಾ ನಟಿ ರಾಗಿಣಿ ಹೊಸ ಕ್ಯಾತೆ ತೆಗೆದಿದ್ದಾರೆ. ಸೌತ್ ಇಂಡಿಯನ್ ಸಾಕಾಗಿದೆ, ನಾರ್ತ್ ಇಂಡಿಯನ್ ಫುಡ್ ಕೊಡಿ: ನಾರ್ಥ್​ ಇಂಡಿಯನ್ ಸ್ಟೈಲ್ ಊಟ ಕೊಡಿ ಎಂದು ದುಂಬಾಲು ಬಿದ್ದಿದ್ದಾರೆ. ರಾಗಿಣಿಗೆ ಪ್ರತಿದಿನ ಅನ್ನ ತಿಂದು ತೂಕ …

Read More »

ಪ್ರಧಾನಮಂತ್ರಿಗಳ ಮನವಿಯಂತೆ ಮೈಮರೆಯದೇ ಹಬ್ಬಗಳನ್ನು ಆಚರಿಸಿ – ಜಲಸಂಪನ್ಮೂಲ ಸಚಿವರ ಕರೆ.

  ಪ್ರಧಾನ ಮಂತ್ರಿಗಳಾದ *ಶ್ರೀ ನರೇಂದ್ರ ಮೋದಿ* ಯವರು ನಿನ್ನೆ ದೇಶವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಜನತೆ ಕೋವಿಡ್ ನಿಯಮಾವಳಿಗಳನ್ನು ಸರಿಯಾಗಿ ಪಾಲಿಸದೇ ಇರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಅನೇಕ ಹಬ್ಬಗಳ ಆಚರಣೆಯ ಸಂಭ್ರಮದಲ್ಲಿ ಮೈ ಮರೆಯದೇ ಎಚ್ಚರಿಕೆ ಮತ್ತು ಸುರಕ್ಷತೆಯಿಂದ ಹಬ್ಬಗಳನ್ನು ಆಚರಿಸುವಂತೆ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ‌* ಅವರು ಜನತೆಗೆ ಕರೆ ನೀಡಿದ್ದಾರೆ. ಪ್ರಧಾನಿ ಮೋದಿಯವರು ಹೇಳಿದಂತೆ ಅಗತ್ಯ ಅರೋಗ್ಯ ನಿಯಮಗಳನ್ನು ಪಾಲಿಸಿ, ಮಾಸ್ಕ್ ಧರಿಸಿ, …

Read More »

ನಗರದ ಹಲವು ಕಡೆ ಭಾರಿ ಮಳೆ ಸುರಿಯುತ್ತಿದೆ.

ಹೈದರಾಬಾದ್​: ನಗರದ ಹಲವು ಕಡೆ ಭಾರಿ ಮಳೆ ಸುರಿಯುತ್ತಿದೆ. ಹಳೆಬಸ್ತಿ, ಸರೂರನಗರ, ಮೀರ್‌ಪೇಟ, ಕರ್ಮನ್ ಘಾಟ್, ಉಪ್ಪಲ್, ನಾಗೋಲ್, ಜುಬ್ಲಿ ಹಿಲ್ಸ್, ಎಲ್.ಬಿ.‌ನಗರ‌ ಸೇರಿದಂತೆ ಹಲವಾರು ಕಡೆಗಳಲ್ಲಿ‌ ವರುಣನ ನರ್ತನ ಹೆಚ್ಚಾಗಿದೆ. ಹಳೆ‌ಬಸ್ತಿಯಲ್ಲಿ ಭಾರಿ ಮಳೆಯ ಕಾರಣ ಮೀರ ಆಲಂ‌ ಕೆರೆ ತುಂಬಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ಜನರನ್ನು ಈ ಪ್ರದೇಶದಿಂದ‌ ತೆರವು‌ ಮಾಡಿ ಸುರಕ್ಷಿತ ಸ್ಥಳಕ್ಕೆ‌ ಹೋಗಲು ಸೂಚಿಸಿದ್ದಾರೆ. ಕಿಷನ್‌ ಭಾಗ್ ಪ್ರದೇಶ ಮೂಸಿ‌ ನದಿಯಲ್ಲಿ ಕಿಚ್ಚಿಕೊಂಡು …

Read More »

ನಿಗದಿತ ಅವಧಿಯಲ್ಲಿ ಲೋಕಾಯುಕ್ತ ಸಂಸ್ಥೆಗೆ ಈವರೆಗೂ ತಮ್ಮ ಆಸ್ತಿ ವಿವರ ಸಲ್ಲಿಕೆ ಮಾಡದೆ ನಿರ್ಲಕ್ಷ್ಯ ಧೋರಣೆ ತಳೆದಿದ್ದಾರೆ.

ಬೆಂಗಳೂರು : ವಿಧಾನಸಭೆಯ 74 ಸದಸ್ಯರು ಮತ್ತು ವಿಧಾನಪರಿಷತ್‌ನ 44 ಸದಸ್ಯರು (ಒಟ್ಟು 118 ಶಾಸಕರು) ನಿಗದಿತ ಅವಧಿಯಲ್ಲಿ ಲೋಕಾಯುಕ್ತ ಸಂಸ್ಥೆಗೆ ಈವರೆಗೂ ತಮ್ಮ ಆಸ್ತಿ ವಿವರ ಸಲ್ಲಿಕೆ ಮಾಡದೆ ನಿರ್ಲಕ್ಷ್ಯ ಧೋರಣೆ ತಳೆದಿದ್ದಾರೆ. ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಬಿ.ಸಿ.ಪಾಟೀಲ್‌, ಕೆ.ಎಸ್‌.ಈಶ್ವರಪ್ಪ, ಬಿ.ಶ್ರೀರಾಮುಲು, ಎಚ್‌.ನಾಗೇಶ್‌, ಎಸ್‌.ಟಿ.ಸೋಮಶೇಖರ್‌, ಗೋಪಾಲಯ್ಯ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸೇರಿದ್ದಾರೆ. ವಿಧಾನಸಭೆಯ 74 ಸದಸ್ಯರ ಪೈಕಿ 34 ಬಿಜೆಪಿ, 25 ಕಾಂಗ್ರೆಸ್‌, 12 …

Read More »

ಬಸ್ ಪ್ರಯಾಣಿಕರಿಗೆ ಗುಡ್‌ ನ್ಯೂಸ್..!

ಬೆಂಗಳೂರು : ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಕೊರೋನಾ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಟಿಕೆಟ್‌ಗಳಲ್ಲಿ ಮುದ್ರಿಸಿ ಪ್ರಯಾಣಿಕರಲ್ಲಿ ಜಾಗೃತಿ ಮೂಡಿಸುತ್ತಿದೆ. ರಾಜ್ಯ ಹಾಗೂ ಹೊರರಾಜ್ಯದ ವಿವಿಧ ಸ್ಥಳಗಳಿಗೆ ಪ್ರತಿ ನಿತ್ಯ ಲಕ್ಷಾಂತರ ಪ್ರಯಾಣಿಕರು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಸುತ್ತಾರೆ. ಈ ಹಿನ್ನೆಲೆಯಲ್ಲಿ ನಿಗಮ ನೀಡುವ ಪ್ರತಿ ಟಿಕೆಟ್‌ನಲ್ಲಿ ‘ಮಾಸ್ಕ್‌ ಧರಿಸಿ’, ‘ದೈಹಿಕ ಅಂತರ ಪಾಲಿಸಿ’, ‘ಕೈಗಳ ಸ್ವಚ್ಛತೆ ಕಾಪಾಡಿ’, ‘ಆರಂಭಿಕ ಕೋವಿಡ್‌-19 …

Read More »

ಅರಮನೆಯಲ್ಲಿ ಇಂದು 5ನೇ ದಿನದ ನವರಾತ್ರಿ ಉತ್ಸವ ನಡೆಯಲಿದೆ.

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ ಅರಮನೆಯಲ್ಲಿ ಇಂದು 5ನೇ ದಿನದ ನವರಾತ್ರಿ ಉತ್ಸವ ನಡೆಯಲಿದೆ. ಅರಮನೆಯ ಚಾಮುಂಡಿ ತೊಟ್ಟಿಯಲ್ಲಿ ರಾಜವಂಶಸ್ಥ ಯದುವೀರ್ ಒಡೆಯರ್‌ರಿಂದ ಸರಸ್ವತಿಗೆ ಪೂಜೆ ನಡೆಯಲಿದೆ. ಬೆಳ್ಳಿಗ್ಗೆ 9.45ರ ಸಮಯಕ್ಕೆ ಅರಮನೆ ಪುರೋಹಿತರಿಂದ ಪೂಜೆ ಪ್ರಾರಂಭವಾಗಲಿದೆ. ಅರಮನೆ‌ ಸಂಪ್ರದಾಯದಂತೆ ರಾಜಮನೆತನದ ಪುರಾತನ ಗ್ರಂಥಗಳು, ಸಂಗೀತ ಉಪಕರಣಗಳಿಗೆ ಹಾಗೂ ಸರಳವಾಗಿ ಸರಸ್ವತಿ ಪೂಜೆ ಮಾಡಲಾಗುತ್ತೆ. ಸದ್ಯ ರಾಜವಂಶಸ್ಥರು ಹಾಗೂ ಪುರೋಹಿತರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಇರುತ್ತದೆ. *ಹೆಚ್ಚಿನ …

Read More »

ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು ಎಂದು

ಹುಬ್ಬಳ್ಳಿ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ ಸಂಕನೂರು ಅವರ ಪರ ಪ್ರಚಾರದಲ್ಲಿ ಕೈಗೊಂಡ ನಂತರ ಮಾತನಾಡಿದ ಅವರು, ಯಡಿಯೂರಪ್ಪ ಅವರು ನಮ್ಮ ನಾಯಕ ಮತ್ತು ಪಕ್ಷವೇ ಅವರನ್ನು ಆಯ್ಕೆ ಮಾಡಿದೆ, ಸಿಎಂ ವಿರುದ್ಧ ಯತ್ನಾಳ್ ಯಾವುದೇ …

Read More »

ರಾಜ್ಯದ ಆರ್ಥಿಕ ಅಭಿವೃದ್ಧಿಗೆ ಮತ್ತು ಉದ್ಯೋಗ ಸೃಷ್ಟಿಗೆ ಅನುಕೂಲವಾಗಿದೆ’ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಗೋಕಾಕ: ‘ಕೇಂದ್ರ ಸರ್ಕಾರ ರೂಪಿಸಿರುವ ಕೃಷಿ ಸಂಬಂಧಿತ ತಿದ್ದುಪಡಿ ಮಸೂದೆಗಳಿಂದ ಕೃಷಿ ಭೂಮಿ ಖರೀದಿಗೆ ಹೆಚ್ಚಿನ ಅವಕಾಶವಿದೆ. ರಾಜ್ಯದ ಆರ್ಥಿಕ ಅಭಿವೃದ್ಧಿಗೆ ಮತ್ತು ಉದ್ಯೋಗ ಸೃಷ್ಟಿಗೆ ಅನುಕೂಲವಾಗಿದೆ’ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಅರಭಾವಿ ಮಂಡಲ ಬಿಜೆಪಿ ರೈತ ಮೋರ್ಚಾದಿಂದ ಹೊರವಲಯದ ಬಸವೇಶ್ವರ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ‘ಕೃಷಿ ಉತ್ಪನ್ನಗಳು, ವ್ಯಾಪಾರ ಮತ್ತು ವಾಣಿಜ್ಯ ಮಸೂದೆ, ರೈತರ ಬೆಲೆ …

Read More »

ರಾಜ್ಯದಲ್ಲಿ 7,76,901 ಜನರಿಗೆ ಸೋಂಕು, 10,608 ಬಲಿ!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಅಟ್ಟಹಾಸವಂತೂ ಕಡಿಮೆಯಾಗೋ ಯಾವ ಲಕ್ಷಣಗಳೂ ಕಾಣ್ತಿಲ್ಲ. ಬದಲಾಗಿ ಪರಿಸ್ಥಿತಿ ಕೈ ಮೀರಿ ಹೋಗೋ ಎಲ್ಲಾ ಲಕ್ಷಣಗಳೂ ಎದ್ದು ಕಾಣ್ತಿದೆ. ಯಾಕಂದ್ರೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಲ್ಲಿ ವೈರಸ್ ಎಲ್ಲೆ ಮೀರಿ ಅರ್ಭಟಿಸ್ತಿದೆ. ಅಟ್ಯಾಕ್.. ಡೆಡ್ಲಿ ಅಟ್ಯಾಕ್‌.. ಯಾರೂ ಊಹಿಸಿಕೊಳ್ಳಲಾಗದಂತಹ ಅಟ್ಯಾಕ್‌.. ಜಿಲ್ಲೆ ಜಿಲ್ಲೆಗಳಲ್ಲಿ.. ನಗರ ನಗರಗಳಲ್ಲಿ.. ಗಲ್ಲಿ ಗಲ್ಲಿಯಲ್ಲಿ ಹೆಮ್ಮಾರಿಯ ಡೆಡ್ಲಿ ದಾಳಿ. ಕರುನಾಡಲ್ಲಿ ಹೆಮ್ಮಾರಿ ವೈರಸ್​ನ ಅಟ್ಟಹಾಸ ಮಿತಿ ಮೀರ್ತಿದೆ. ಸೋಂಕಿನ ವಿಷ …

Read More »

ಹಲವೆಡೆ ರಾತ್ರಿ ಸುರಿದ ಮಳೆ ಭಾರಿ ಅವಾಂತರವನ್ನೇ ಸೃಷ್ಟಿಸಿದೆ.

ಬೆಂಗಳೂರು: ನಗರದ ಹಲವೆಡೆ ರಾತ್ರಿ ಸುರಿದ ಮಳೆ ಭಾರಿ ಅವಾಂತರವನ್ನೇ ಸೃಷ್ಟಿಸಿದೆ. ಆರ್.ಆರ್.ನಗರದ ಮೀನಾಕ್ಷಿ ಕಲ್ಯಾಣ ಮಂಟಪ ಜಲಾವೃತಗೊಂಡಿದೆ. ನೀರು ಹೊರಹಾಕಲು ಕಲ್ಯಾಣ ಮಂಟಪ ಸಿಬ್ಬಂದಿ ಪರದಾಡುತ್ತಿದ್ದಾರೆ. ಇನ್ನು ಕಲ್ಯಾಣ ಮಂಟಪಕ್ಕೆ ನೀರು ನುಗ್ಗಿ ನಿನ್ನೆ ನಡೆಯಬೇಕಿದ್ದ ರಿಸೆಪ್ಷನ್ ರದ್ದಾಗಿತ್ತು. ಆದರೆ ಇಂದೂ ಕೂಡ ಇದೇ ಪರಿಸ್ಥಿತಿ ಇದ್ದು, ಡೈನಿಂಗ್ ಹಾಲ್​ನಲ್ಲಿ ನಿಂತಿರುವ ನೀರನ್ನು ಸಿಬ್ಬಂದಿ ಹೊರ ಹಾಕುವ ಪ್ರಯತ್ನದಲ್ಲಿರುವ ದೃಶ್ಯ ಕಂಡು ಬಂದಿದೆ. ಬೈಕ್ ಸವಾರ ಅಪಾಯದಿಂದ ಪಾರು: …

Read More »