Breaking News

ಒಂದೇ ದಿನ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳಿಗೆ ಬೀಳ್ಕೊಡುಗೆ ಕವಾಯತನ್ನು ಏರ್ಪಡಿಸಲಾಗಿದೆ.

ಬೆಂಗಳೂರು, ಜ.30- ಡಿಜಿ ಮತ್ತು ಐಜಿಪಿ ನೀಲಮಣಿ ಎನ್.ರಾಜು ಹಾಗೂ ಡಿಜಿಪಿ ಗಳಾದ ಎಂ.ಎನ್.ರೆಡ್ಡಿ ಮತ್ತು ರಾಘವೇಂದ್ರ ಔರಾದ್ಕರ್ ಅವರುಗಳು ನಾಳೆ ನಿವೃತ್ತಿ ಯಾಗಲಿದ್ದಾರೆ. ಒಂದೇ ದಿನ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳಿಗೆ ಬೀಳ್ಕೊಡುಗೆ ಕವಾಯತನ್ನು ಏರ್ಪಡಿಸಲಾಗಿದೆ. ಕೋರಮಂಗಲದ ಕೆಎಸ್‍ಆರ್‍ಪಿ ಪರೇಡ್ ಮೈದಾನದಲ್ಲಿ ನಾಳೆ ಬೆಳಗ್ಗೆ 8 ಗಂಟೆಗೆ ಬೀಳ್ಕೊಡುಗೆ ಕವಾಯತು ನಡೆಯಲಿದೆ. ಹಿರಿಯ, ಕಿರಿಯ ಪೊಲೀಸ್ ಅಧಿಕಾರಿಗಳು ಈ ಬೀಳ್ಕೊಡುಗೆ ಕವಾಯತು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Read More »

ನಾಳೆಯೊಳಗೆ ಶೇ.99ರಷ್ಟು ಸಂಪುಟ ವಿಸ್ತರಣೆ ಕ್ಲಿಯರ್(ಇತ್ಯರ್ಥ) ಆಗಲಿದೆ.

ಮೂಲಗಳ ಪ್ರಕಾರ ಭಾನುವಾರ ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಸಮಯ ನಿಗದಿಪಡಿಸಿದ್ದು ಅಂದು 12 ಮಂದಿ ಶಾಸಕರು ಸಂಪುಟಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ. ಗೆದ್ದಿರುವ 11 ಮಂದಿ ಶಾಸಕರ ಪೈಕಿ 9 ಮಂದಿ ಹಾಗೂ ಮೂಲ ಬಿಜೆಪಿಯಿಂದ ಮೂವರು ಮೊದಲ ಹಂತದಲ್ಲಿ ಸಂಪುಟಕ್ಕೆ ಸೇರ್ಪಡೆಯಾಗುವ ಸಂಭವವಿದೆ. ಯಡಿಯೂರಪ್ಪ ನಾಳೆ ಬೆಂಗಳೂರಿಗೆ ಹಿಂತಿರುಗಲಿದ್ದು, ಭಾನುವಾರ ವಿಸ್ತರಣೆಗೆ ಸಮಯವನ್ನು ನಿಗದಿಪಡಿಸುವ ಸಾಧ್ಯತೆ ಇದೆ   ಬೆಂಗಳೂರು,ಜ.30- ಒಂದು ವೇಳೆ ದೆಹಲಿ ವರಿಷ್ಠರು ಅನುಮತಿ …

Read More »

ಅರ್ಧಕ್ಕೆ ನಿಂತ ಕೋಟ್ಯಾಂತರ ರೂಪಾಯಿ ಕಾಮಗಾರಿ. :3 ವರ್ಷಗಳಿಂದ ಶುರುವಾದ ಕಾಮಗಾರಿಗೆ ಇನ್ನೂ ಕೊನೆ ಯಾಗಿಲ್ಲ.

ಚಿಕ್ಕೋಡಿ, ಜ. 29: ಸಮೀಪದ ರಾಯಬಾಗ ತಾಲ್ಲೂಕಿನ ಹೊರವಲಯದಲ್ಲಿ ರೈಲ್ವೆ ಮೇಲ್ಸೇತುವೆ ಅರ್ಧಕ್ಕೆ ನಿಂತ ಕೋಟ್ಯಾಂತರ ರೂಪಾಯಿ ಕಾಮಗಾರಿ. ರಾಜ್ಯ ರೇಲ್ವೆ ಸಚಿವರಾದ ಸುರೇಶ ಅಂಗಡಿಯವರೇ ಇತ್ತ ಸ್ವಲ್ಪ ಗಮನ ಹರಿಸಿ ರಾಯಬಾಗ ಪಟ್ಟಣದ ಹೊರ ವಲಯದಲ್ಲಿ ಶುರುವಾಗಿದ್ದ ಕಾಮಗಾರಿ ಇನ್ನು ಮುಗಿಯುತ್ತಿಲ್ಲ ಸುಮಾರು 20 ಕೋಟಿ ರೂಪಾಯಿಗಳು ವೆಚ್ಚದಲ್ಲಿ ನಡೆಯುತ್ತಿರುವ ಈ ಸೇತುವೆ ಕಾಮಗಾರಿ 3 ವರ್ಷಗಳಿಂದ ಶುರುವಾದ ಕಾಮಗಾರಿಗೆ ಇನ್ನೂ ಕೊನೆ ಯಾಗಿಲ್ಲ. ಕೇವಲ ಐದು ನೂರು ಮೀಟರ್ …

Read More »

ಡಿಸಿಎಂ ಆಗುವ ನಿರೀಕ್ಷೆಯಲ್ಲಿ ರಮೇಶ ಜಾರಕಿಹೊಳಿ ಇಲ್ಲ: ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು: ಡಿಸಿಎಂ ಆಗುವ ನಿರೀಕ್ಷೆಯಲ್ಲಿ ರಮೇಶ ಜಾರಕಿಹೊಳಿ ಇಲ್ಲ ಎಂದು ಕೆ ಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಇಂದು ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡಿ ಡಿಸಿಎ ಆಗುವ ಆಸೆ ನನಗೂ ಇಲ್ಲ, ರಮೇಶ ಅವರಿಗೂ ಇಲ್ಲ, ಇದು ಮಾಧ್ಯಮಗಳ ಸೃಷ್ಠಿ ಎಂದರು. 17 ಶಾಸಕರ ತ್ಯಾಗದಿಂದ ಸರ್ಕಾರ ಬಂದಿದೆ ಇದೇ ವಿಚಾರವನ್ನು ಹಲವು ಸಲ ಸಿಎಂ ಯಡಿಯೂರಪ್ಪ ಕೂಡ ಹೇಳಿದ್ದಾರೆ. ಇದೇ ವಿಚಾರವಾಗಿ ಇಂದು ದೆಹಲಿಗೆ ಸಿಎಂ ತೆರಳಿದ್ದಾರೆ. ಶೀಘ್ರದಲ್ಲೆ …

Read More »

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿ ಟಿ ಯು) ದ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗವು ಟೆಕ್ಯೂಪ

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿ ಟಿ ಯು) ದ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗವು ಟೆಕ್ಯೂಪ ೧.೩ ಪ್ರಾಯೋಜಕತ್ವದಲ್ಲಿ “ಡೇಟಾ ಸೈನ್ಸ್ ಮತ್ತು ಅನಾಲಿಟಿಕ್ಸ್ ಗಾಗಿ ಮಷೀನ್ ಲರ್ನಿಂಗ್” ಎಂಬ ವಿಷಯದ ಕುರಿತು ಐದು ದಿನಗಳ  ಫ್ಯಾಕಲ್ಟಿ ಡೆವಲಪ್‌ಮೆಂಟ್ ಪ್ರೋಗ್ರಾಂ (ಎಫ್‌ಡಿಪಿ) ಕಾರ್ಯಾಗಾರವನ್ನು ಜನೇವರಿ 28 ರಿಂದ ಫೆಬ್ರುವರಿ 01 ರವರೆಗೆ ಆಯೋಜಿದೆ. ಇದರ ಉದ್ಘಾಟನಾ ಸಮಾರಂಭವು ಮಂಗಳವಾರ  ವಿತಾವಿಯ ಸೆನೆಟ್ ಹಾಲ್ ನಲ್ಲಿ ನಡೆಯಿತು. ಇದನ್ನು ವಿಪ್ರೊ ಲಿಮಿಟೆಡ್ ನ ಫ್ರೆಷರ್ಸ್ ಎಂಗೇಜ್ಮೆಂಟ್ ಕಾರ್ಯಕ್ರಮದ ಮುಖ್ಯಸ್ಥ ಪಿ. ಬಿ. ಕೊಟುರ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ತಾಂತ್ರಿಕವಾಗಿ ಬೆಳೆಯುತ್ತಿರುವ ಜಗತ್ತಿನಲ್ಲಿ ಇವತ್ತಿನ ಶಿಕ್ಷಕರು ತಮ್ಮ ಉಪನ್ಯಾಸದಲ್ಲಿ ಹೊಸ ರೀತಿಯ ವಿಧಾನಗಳ ಜೊತೆ ಕ್ಷಿಪ್ರ ಗತಿಯಲ್ಲಿ ಬದಲಾಗುತ್ತಿರುವ ತಂತ್ರಜ್ಞಾನ ವಿಷಯಗಳನ್ನು ಅರ್ಥೈಸಿಕೊಂಡು ತಮ್ಮ ಬೋಧನೆಯಲ್ಲಿ ಅಳವಡಿಸಿಕೊಳ್ಳಬೇಕು. ಕಾರಣ ಶಿಕ್ಷಕರೆ ವಿದ್ಯಾರ್ಥಿಗಳಿಗೆ ಬದಲಾಗುತ್ತಿರುವ ತಂತ್ರಜ್ಞಾನಗಳ ಬಗ್ಗೆ ಸರಿಯಾಗಿ ಮಾರ್ಗದರ್ಶನ ಮಾಡಬಲ್ಲರು ಮತ್ತು ಅವರೇ ಸಮಾಜದಲ್ಲಿ ಪರಿಣಾಮಕಾರಿ ಬದಲಾವಣೆಯನ್ನು ತರಬಲ್ಲರು ಎಂದು ಹೇಳಿದರು. ಸಮಾರಂಭದ ಗೌರವ್ ಅತಿಥಿಯಾಗಿದ್ದ ವಿ ತಾ ವಿ ಮೌಲ್ಯಮಾಪನ ಕುಲ ಸಚಿವರಾದ ಡಾ. ಸತೀಶ್ ಅಣ್ಣಿಗೇರಿ ಈ ಸಂದರ್ಭದಲ್ಲಿ ಮಾತನಾಡಿ ಶಿಕ್ಷಕರು ಈ ಹೊಸ ವಿಷಯಗಳ ಬಗೆಗಿನ ಆಳವಾದ ಜ್ಞಾನವನ್ನು ವಿದ್ಯಾರ್ಥಿಗಳಿಗೆ ನೀಡಬೇಕು ಎಂದು ಹೇಳಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿ ತಾ ವಿ ಕುಲಸಚಿವರಾದ ಪ್ರೊ. ಆನಂದ ದೇಶಪಾಂಡೆ ಮಾತನಾಡಿ ಈ ಮಷೀನ್ ಲರ್ನಿಂಗ್ ಇವತ್ತಿನ ತಂತ್ರಜ್ಞಾನ ಲೋಕವನ್ನು ಸಂಪೂರ್ಣವಾಗಿ ಆವರಿಸಿಕೊಂಡಿದೆ ಎಂದರೆ ತಪ್ಪಾಗಲಾರದು ಕಾರಣ ತಂತ್ರಜ್ಞಾನದ ಪ್ರತಿ ಕ್ಷೇತ್ರ ಕ್ಷಿಪ್ರ ಗತಿಯಲ್ಲಿ ಬದಲಾಗುತ್ತಿರುವುದಕ್ಕೆ ಈ ಮಷೀನ್ ಲರ್ನಿಂಗ್ ಮೂಲ ಕಾರಣ ಎಂದು ಹೇಳಿದರು. ಕಂಪ್ಯೂಟರ್ ಸೈನ್ಸ್ ವಿಭಾಗದ ಅಧ್ಯಕ್ಷರಾದ ಡಾ.ಎಸ್.ಎ.ಅಂಗಡಿ ಸ್ವಾಗತಿಸಿದರು. ಎಫ್‌ ಡಿ ಪಿ ಸಂಯೋಜಕ ಡಾ.ಆರ್. ಎಚ್. ಗೌಡರ್, ಎಫ್‌ ಡಿ ಪಿ ಯ ಮಹತ್ವ ಮತ್ತು ಉದ್ದೇಶಗಳ ಬಗ್ಗೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪ್ರೊ.ರೋಹಿತ್ ಕಲಿವಾಲ್ ವಂದಿಸಿದರು. ಪ್ರೊ.ರಂಜನಾ ನಾಡಗೌಡರ್ ನಿರೂಪಿಸಿದರು. ಇದರಲ್ಲಿ ಔದ್ಯೋಗಿಕ ಹಾಗೂ ಮತ್ತು ಸರ್ಕಾರಿ ಸಂಸ್ಥೆಯ ಪ್ರತಿನಿಧಿಗಳು ಸೇರಿದಂತೆ ವಿ ಟಿ ಯು ಸಂಲಗ್ನತೆ ಹೊಂದಿದ ಕಾಲೇಜ್ ಗಳಿಂದ ಸುಮಾರು ೫೦ ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ.

Read More »

ಇನ್ನು ಸಚಿವ ಸಂಪುಟ ವಿಸ್ತರಣೆಗೆ ದಿನಗಣನೆ ಆರಂಭವಾಗಿರುವಂತೆ ಸಂಪುಟಕ್ಕೆ ಸೇರ್ಪಡೆಯಾಗುವ ಆಕಾಂಕ್ಷಿಗಳು ತಮ್ಮ ತಮ್ಮ ಗಾಡ್‍ಫಾದರ್‍ಗಳ ಮೂಲಕ ಒತ್ತಡ ಹಾಕುತ್ತಿದ್ದಾರೆ

ಬೆಂಗಳೂರು,ಜ.30-ಕೂಸು ಹುಟ್ಟುವ ಮುನ್ನ ಕುಲಾವಿ ಹೊಲಿಸಿದರು ಎಂಬ ಗಾದೆಯಂತೆ ಸಚಿವ ಸಂಪುಟ ವಿಸ್ತರಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ.ಸಂಪುಟ ವಿಸ್ತರಣೆಗೆ ಹಸಿರು ನಿಶಾನೆ ಪಡೆಯುವ ನಿಟ್ಟಿನಲ್ಲಿ ವರಿಷ್ಠರ ಜೊತೆ ಚರ್ಚಿಸಲು ಮುಖ್ಯಮಂತ್ರಿ ಯಡಿಯೂರಪ್ಪ ದೆಹಲಿಗೆ ತೆರಳಲು ಮುಂದಾಗಿರುವಂತೆ ಸಚಿವ ಸ್ಥಾನ ಕೈ ತಪ್ಪಲಿರುವವರು ಹಾಗೂ ಆಕಾಂಕ್ಷಿಗಳು ಅಸಮಾಧಾನಗೊಂಡಿದ್ದಾರೆ. ಪಕ್ಷ ನಿಷ್ಠರನ್ನು ಕಡೆಗಣಿಸಿ ಅಧಿಕಾರದ ಆಸೆಗಾಗಿ ಬಂದವರಿಗೆ ಮಂತ್ರಿ ಸ್ಥಾನ ನೀಡುವುದು ಎಷ್ಟರ ಮಟ್ಟಿಗೆ ಸರಿ ಎಂಬುದು …

Read More »

ಯಡಿಯೂರಪ್ಪ ಹಾಲಿ ಐದು ಸಚಿವರಿಗೆ ಕೋಕ್ ನೀಡುವ ಸಾಧ್ಯತೆ ಹೆಚ್ಚಾಗಿದೆ.

ಬೆಂಗಳೂರು,ಜ.30-ಸಚಿವ ಸಂಪುಟ ವಿಸ್ತರಣೆ ಜೊತೆ ಪುನರ್ ರಚನೆಗೂ ಕೈ ಹಾಕಿರುವ ಮುಖ್ಯಮಂತ್ರಿ ಯಡಿಯೂರಪ್ಪ ಹಾಲಿ ಐದು ಸಚಿವರಿಗೆ ಕೋಕ್ ನೀಡುವ ಸಾಧ್ಯತೆ ಹೆಚ್ಚಾಗಿದೆ. ತಮಗೆ ನೀಡಿರುವ ಖಾತೆಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವಲ್ಲಿ ವಿಫಲರಾಗಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ.ಪಾಟೀಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ, ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ …

Read More »

ಇತ್ತೀಚೆಗಷ್ಟೇ ಕೀನ್ಯಾ ಕಾಡಿನಲ್ಲಿ ವೈಲ್ಡ್‌ಲೈಫ್‌ ಫೋಟೋಗಳನ್ನು ಸೆರೆಹಿಡಿದಿದ್ದ ದರ್ಶನ್

ಚಾಲೇಂಜಿಂಗ್ ಸ್ಟಾರ್ ದರ್ಶನ್ ಹಾಗೂ ಟೀಂ ಮತ್ತೆ ಕಾಡಿನತ್ತ ಮುಖಮಾಡಿದ್ದು, ಈ ಬಾರಿ ಉತ್ತರಾಖಂಡ್‍ನ ಸತ್ತಲ್ ಫಾರೆಸ್ಟ್ ನಲ್ಲಿ ವನ್ಯಜೀವಿಗಳ ಛಾಯಾಗ್ರಹಣ ಮಾಡಲಿದೆ. ಹೌದು. ಇತ್ತೀಚೆಗಷ್ಟೇ ಕೀನ್ಯಾ ಕಾಡಿನಲ್ಲಿ ವೈಲ್ಡ್‌ಲೈಫ್‌ ಫೋಟೋಗಳನ್ನು ಸೆರೆಹಿಡಿದಿದ್ದ ದರ್ಶನ್ ಈಗ ಉತ್ತರಾಖಂದದ ಕಾಡಿನತ್ತ ಕ್ಯಾಮರಾ ಹಿಡಿದು ಹೊರಟಿದ್ದಾರೆ. ದೊಡ್ಡ ಕ್ಯಾಮೆರಾ ಹೆಗಲಿಗೆ ಹಾಕೊಂಡು ವೈಲ್ಡ್‌ಲೈಫ್‌ ಫೋಟೋಗ್ರಾಫರ್ ಟೀಂ ಜೊತೆ ಕಲ್ಲು, ಬಂಡೆಯ ನಡುವೆ ಸಾಗಿ ಕಾಡು ಸುತ್ತಿದ್ದಾರೆ. ಆ ದಟ್ಟಕಾಡಿನಲ್ಲಿ ದಾಸ ಮಾಡಿರುವ ಸಾಹಸಮಯ …

Read More »

*ಕೂಡ್ಲಿಗಿ:ಕೊಲೆಯತ್ನ ಹಾಗೂ ದರೋಡೆಗೆ ಯತ್ನ ಆರೋಪಿ-ತಾಪಂ ಅಧ್ಯಕ್ಷ ವೆಂಕಟೇಶನಾಯ್ಕ ಬಳ್ಳಾರಿ ಜೈಲಿಗೆ

*ಕೂಡ್ಲಿಗಿ:ಕೊಲೆಯತ್ನ ಹಾಗೂ ದರೋಡೆಗೆ ಯತ್ನ ಆರೋಪಿ-ತಾಪಂ ಅಧ್ಯಕ್ಷ ವೆಂಕಟೇಶನಾಯ್ಕ ಬಳ್ಳಾರಿ ಜೈಲಿಗೆ..ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಪಂ ಅಧ್ಯಕ್ಷ ವೆಂಕಟೇಶನಾಯ್ಕ ಕೊಲೆಯತ್ನ ಹಾಗೂ ದರೋಡೆಯತ್ನ ಆರೋಪದಡಿ ವಿಚಾರಣಾಧೀನ ಕೈದಿಯಾಗಿದ್ದು.ನ್ಯಾಯಾಧೀಶರ ಆದೇಶದಂತೆ ಪೊಲೀಸರು ಬಂಧಿಸಿ ಬಳ್ಳಾರಿ ಜೈಲಿನಲ್ಲಿರಿಸಿದ್ದಾರೆ. *ಹಾಲಿ-ಮಾಜಿಗಳ ಮಾರಾಮಾರಿ* -ಕೂಡ್ಲಿಗಿ ತಾಪಂ ಮಾಜಿ ಅಧ್ಯಕ್ಷ ಬೆಣ್ಣೆಕೊಟ್ರೇಶ ಜನವರಿ3ರಂದು ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ತಾಪಂ ಅಧ್ಯಕ್ಷ ವೆಂಕಟೇಶನಾಯ್ಕ ವಿರುದ್ಧ ಹಲ್ಲೆ ಹಾಗೂ ಕೊಲೆಯತ್ನ ಮತ್ತು ತನ್ನಲ್ಲಿರುವ ಹಣ ದರೋಡೆಮಾಡಿರುವುದಾಗಿ ಆರೋಪಿಸಿ ಬೆಣ್ಣೆಕೊಟ್ರೇಶ ದೂರು …

Read More »

ವೀರ್ ಯೋಧ ಈರಣ್ಣ ಸೇವೆ ಸಲ್ಲಿಸಲು ಹೋಗುವ ಮಾರ್ಗದಲ್ಲಿ ಹೃದಯಾಘಾತದಿಂದ ಮರಣ

ಗೋಕಾಕದ ಮಹಾಲಿಂಗೇಶ್ವರ ನಗರದ ವೀರ್ ಯೋಧ ಈರಣ್ಣ ಬಸವರಾಜ್ ಶೀಲವಂತ ಇವರು ಭಾರತೀಯ ಸೈನ್ಯದಲ್ಲಿ ಸುಮಾರು 10 ವರ್ಷಗಳ ಕಾಲ ಸೇವೆ ಸಲ್ಲಿಸಿ ಮರುಳಿ ಸೇವೆ ಸಲ್ಲಿಸಲು ಹೋಗುವ ಮಾರ್ಗದಲ್ಲಿ ಹೃದಯಾಘಾತದಿಂದ ಮರಣ ಹೊಂದಿರುತ್ತಾರೆ, ನಾಳೆ ಬೆಳಿಗ್ಗೆ ವೀರ ಯೋಧನ ಪಾರ್ಥಿವ ಶರೀರ ಗೋಕಾಕ ಕ್ಕೆ ಬರಲಿದೆ ದೇಶ ಪ್ರೇಮಿಗಳು ಈ ಪುಣ್ಯದ ಕಾರ್ಯದಲ್ಲಿ ಭಾಗವಹಿಸಿ ಗೌರವ ವಂದನೆಗಳನು ಅರ್ಪಿಸಿರಿ ಭಾವಪೂರ್ಣ ಶ್ರದಾಂಜಲಿ

Read More »