ಶಿವಮೊಗ್ಗ : ಆನ್ಲೈನ್ ಶಿಕ್ಷಣಕ್ಕೆ ಮಲೆನಾಡಿನ ಗ್ರಾಮೀಣ ಭಾಗದಲ್ಲಿ ಸಮಸ್ಯೆ ಎದುರಾಗಿದೆ. ಆನ್ಲೈನ್ ಶಿಕ್ಷಣಕ್ಕೆ ಪವರ್ ಹಾಗೂ ಟವರ್ ಈ ಎರಡೂ ಅತೀ ಮುಖ್ಯವಾಗಿದೆ. ಆದ್ರೆ ಮಲೆನಾಡಿನಲ್ಲಿ ಪವರ್ ಹಾಗೂ ಟವರ್ ಎರಡರದ್ದು ಸಮಸ್ಯೆ ಇದೆ. ಹೀಗಾಗಿ ಇಲ್ಲಿನ ವಿದ್ಯಾರ್ಥಿಗಳು ಆನ್ಲೈನ್ ಕ್ಲಾಸ್ ಬಗ್ಗೆ ಒಲವು ತೋರುತ್ತಿಲ್ಲ. ನೆಟ್ ವರ್ಕ್ ಸಿಗಬೇಕು ಅಂದ್ರೆ ಊರಿಂದ ಆಚೆ ಹೋಗಬೇಕಿದೆ. ದೇಶದೆಲ್ಲೆಡೆ ಕೊರೊನಾ ಮಹಾಮಾರಿ ಎಲ್ಲಾ ವ್ಯವಸ್ಥೆಯನ್ನು ಬುಡಮೇಲು ಮಾಡಿದೆ. ಈ ಮಹಾಮಾರಿಯಿಂದ …
Read More »ಪ್ರೀತಿಸಿದ ಯುವತಿಯನ್ನು ಹಾಡಹಗಲೇಸಿನಿಮಾ ಸ್ಟೈಲ್ ನಲ್ಲಿ ಕಿಡ್ನಾಪ್
ಕೋಲಾರ: ಪ್ರೀತಿಸಿದ ಯುವತಿಯನ್ನು ಹಾಡಹಗಲೇ ನಡುರಸ್ತೆಯಲ್ಲಿ ಯುವಕ ಅಪಹರಿಸಿದ ಘಟನೆ ಇಂದು ಕೋಲಾರದಲ್ಲಿ ನಡೆದಿದೆ.ಶಿವ ಯುವತಿಯನ್ನು ಅಪಹರಿಸಿದ ಯುವಕ. ಪ್ರೀತಿಸಿ ಇನ್ನೇನು ಮದುವೆಯಾಗಬೇಕು ಎಂದುಕೊಂಡಿದ್ದ ವೇಳೆ ಯುವತಿಯ ಕುಟುಂಬಸ್ಥರು ನಿರಾಕರಿಸಿದ್ದರು. ಈ ಹಿನ್ನೆಲೆ ಸಿನಿಮಾ ಸ್ಟೈಲ್ನಲ್ಲಿ ಪ್ರಿಯಕರ ತನ್ನ ಪ್ರಿಯತಮೆಯನ್ನ ಕಿಡ್ನಾಪ್ ಮಾಡಿದ್ದಾನೆ. ಜನ ನಿಬಿಡ ಪ್ರದೇಶದಲ್ಲಿ ಹಾಡ ಹಗಲೆ ಪ್ರೀತಿಸಿದ ಯುವತಿಯನ್ನ ಕಿಡ್ನಾಪ್ ಮಾಡಿದ ಯುವಕನ ಕೈ ಚಳಕಕ್ಕೆ ಈಡೀ ಕೋಲಾರ ನಗರ ಬೆಚ್ಚಿ ಬಿದ್ದಿದೆ. ಕೋಲಾರ ನಗರದ …
Read More »“ಡಿ.ಜೆ.ಹಳ್ಳಿ ಗಲಭೆಗೆ ಕಾರಣನಾದ ನವೀನ್ ಕಾಂಗ್ರೆಸ್ ಕಾರ್ಯಕರ್ತನಾಗಿದ್ದ”
ಬೆಂಗಳೂರು: ನಗರದ ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಮತ್ತು ಕಾವಲ್ ಭೈರಸಂದ್ರದಲ್ಲಿ ನಡೆದ ಗಲಭೆ ಸದ್ಯಕ್ಕೆ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿದೆ ಎಂದಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ, ಫೇಸ್ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವ ಯುವಕ ಕಾಂಗ್ರೆಸ್ ಕಾರ್ಯಕರ್ತ ಎಂದು ಹೇಳಿದರು. ಬೆಂಗಳೂರಿನಲ್ಲಿ ಗುರುವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಬಗ್ಗೆ ಬಿಜೆಪಿ ವಿರುದ್ಧ ಆರೋಪ ಮಾಡುತ್ತಿರುವ ಕಾಂಗ್ರೆಸ್ಸಿಗರ ನಡೆ ಸರಿ ಇಲ್ಲ. ನವೀನ್ ಬಿಜೆಪಿ …
Read More »ರಾಜ್ಯದ ನಾಲ್ವರು ಪೊಲೀಸರಿಗೆ ಕೇಂದ್ರ ಗೃಹ ಸಚಿವರ ಪದಕ
ಬೆಂಗಳೂರು, ಆ.13- ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಪೊಲೀಸರಿಗೆ ನೀಡುವ ಗಣ್ಯ ಪ್ರಶಸ್ತಿಗೆ ರಾಜ್ಯದ ನಾಲ್ವರು ಅಕಾರಿಗಳು ಪಾತ್ರರಾಗಿದ್ದಾರೆ. ಉತ್ತಮ ತನಿಖೆಗಾಗಿ ಕೇಂದ್ರ ಗೃಹ ಸಚಿವರ ಗೌರವಾನ್ವಿತ ಪ್ರಶಸ್ತಿಗೆ ಡಿವೈಎಸ್ಪಿ ದರ್ಜೆಯ ಇಬ್ಬರು ಅಕಾರಿಗಳು ಸೇರಿದಂತೆ ನಾಲ್ವರಿಗೆ ಪ್ರಶಸ್ತಿ ಲಭಿಸಿದೆ.ಬೆಂಗಳೂರಿನ ಮೈಕೋ ಲೇಔಟ್ ಎಸಿಪಿ ಸುದೀರ್ ಎಂ ಹೆಗಡೆ, ರೈಲ್ವೆ ಉಪವಿಭಾಗದ ಡಿವೈಎಸ್ಪಿ ಡಿ.ಅಶೋಕ್, ಬೆಂಗಳೂರು ಸಿಸಿಬಿಯ ಪೊಲೀಸ್ ಇನ್ಸ್ಪೆಕ್ಟರ್ ಡಿ.ಎಂ.ಪ್ರಶಾಂತ್ ಬಾಬು, ಅಶೋಕ್ನಗರ ಪೊಲೀಸ್ ಠಾಣೆಯ ಸಿಎಚ್ಸಿ …
Read More »ಆರ್ ಎಸ್ ಎಸ್, ಸಂಘ ಪರಿವಾರ ಎಸ್ಡಿಪಿಐ ಎಲ್ಲವೂ ಒಂದೇಹೆಡ್, ಟೈಲ್ ಎರಡೂ ಅವರೇ ಆಗಿದ್ದಾರೆ:ರಾಮಲಿಂಗಾ ರೆಡ್ಡಿ
ಬೆಂಗಳೂರು: ಆರ್ ಎಸ್ ಎಸ್, ಸಂಘ ಪರಿವಾರ ಎಸ್ಡಿಪಿಐ ಎಲ್ಲವೂ ಒಂದೇ. ಅವರು ಒಂದೇ ನಾಣ್ಯದ ಮುಖಗಳಿದ್ದಂತೆ. ಹೆಡ್, ಟೈಲ್ ಎರಡೂ ಅವರೇ ಆಗಿದ್ದಾರೆ. ದಕ್ಷಿಣ ಕನ್ನಡದಲ್ಲಿ ಏನ್ಮಾಡಿದ್ದರು. ಬೆಂಗಳೂರಿನಲ್ಲಿ ಏನು ಮಾಡುತ್ತಿದ್ದಾರೆಂದು ನಮಗೂ ತಿಳಿದಿದೆ. ನಾನು ಸಹ ರಾಜ್ಯದ ಗೃಹ ಸಚಿವನಾಗಿ ಕೆಲಸ ಮಾಡಿದ್ದೇನೆ. ತಮಗೂ ಇದರ ಬಗ್ಗೆ ಮಾಹಿತಿ ಇದೆ ಎಂದು ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …
Read More »ಸತತ ಪ್ರಯತ್ನ ಹಾಗೂ ಓದುವ ಹವ್ಯಾಸ ರೂಪಿಸಿಕೊಂಡೆರೆ ಯಶಸ್ಸು ಕಟ್ಟಿಟ್ಟ ಬುತ್ತಿ
ಕಾಗವಾಡ : ಸತತ ಪ್ರಯತ್ನ ಹಾಗೂ ಓದುವ ಹವ್ಯಾಸ ರೂಪಿಸಿಕೊಂಡೆರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂಬುವುದನ್ನು ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೋಳೆ ಗ್ರಾಮದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ನಿರೂಪಿಸಿದ್ದಾಳೆ. ಇಂಗ್ಲೀಷ ಮಾಧ್ಯಮದಲ್ಲಿ 625 ಕ್ಕೆ 604 ಅಂಕ ಗಳಿಸಿ ಅಥಣಿ ಕಿತ್ತೂರ ರಾಣಿ ಚನ್ನಮ್ನ ವಸತಿ ಶಾಲೆಗೆ ಪ್ರಥಮ ಸ್ಥಾನ ಪಡೆಯುವ ಮೂಲಕ ಪೋಷಕರ ಹಾಗೂ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾಳೆ. ಕಾಗವಾಡ ತಾಲೂಕಿನ ಮೋಳೆ ಗ್ರಾಮದ ಪೂಜಾ ಎಂಬ …
Read More »ರಾಮ ಮಂದಿರ ಭೂಮಿ ಪೂಜೆಯಲ್ಲಿ ಪಾಲ್ಗೊಂಡಿದ್ದ ರಾಮ ಮಂದಿರ ಟ್ರಸ್ಟ್ ಮುಖ್ಯಸ್ಥರಿಗೆ ಕೊರೋನಾ ವೈರಸ್ ದೃಢ
ಹೊಸದಿಲ್ಲಿ: ಅಯೋಧ್ಯೆ ರಾಮ ಮಂದಿರ ಭೂಮಿ ಪೂಜೆಯಲ್ಲಿ ಪಾಲ್ಗೊಂಡಿದ್ದ ರಾಮ ಮಂದಿರ ಟ್ರಸ್ಟ್ ಮುಖ್ಯಸ್ಥರಿಗೆ ಕೊರೋನಾ ವೈರಸ್ ದೃಢಪಟ್ಟಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ರಾಮ ಮಂದಿರ ಟ್ರಸ್ಟ್ ಮುಖ್ಯಸ್ಥರಾಗಿರುವ ಮಹಂತ್ ನೃತ್ಯ ಗೋಪಾಲ್ ದಾಲ್ ಅವರಿಗೆ ಕೊರೋನಾ ವೈರಸ್ ದೃಢಪಟ್ಟಿದೆ ಎಂದು ವರದಿಗಳಿ ತಿಳಿಸಿವೆ. ಕೋಟ್ಯಾಂತ ಭಾರತೀಯರ ಕನಸ್ಸಾಗಿದ್ದ ಅಯೋಧ್ಯೆ ರಾಮಮಂದಿರದ ಭೂಮಿ ಪೂಜೆ ಆಗಸ್ಟ್ 5 ರಂದು ನೆರವೇರಿಸಲಾಗಿತ್ತು. ಕಾರ್ಯಕ್ರಮದಲ್ಲಿ ಐವರು ಪ್ರಮುಖ ನಾಯಕರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. …
Read More »ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮಗಳಿಲ್ಲದೆ ಸ್ವಾತಂತ್ರ್ಯೋತ್ಸವ ಆಚರಣೆ
ಬೆಂಗಳೂರು, ಆ.13- ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಾಂಸ್ಕøತಿಕ ಕಾರ್ಯಕ್ರಮಗಳಿಲ್ಲದೆ ಅತ್ಯಂತ ಸರಳವಾಗಿ ಆಚರಿಸಲಾಗುತ್ತಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಯಾವುದೇ ಪಥ ಸಂಚಲನ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳಿಲ್ಲದೆ ಬೆಳಗ್ಗೆ 9 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತ್ರಿವರ್ಣ ಧ್ವಜ ಹಾರಿಸಲಿದ್ದಾರೆ ಎಂದು ಹೇಳಿದರು.ಈ ಬಾರಿ ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿ ಕಾರ್ಯವೂ ಇರುವುದಿಲ್ಲ. …
Read More »ಲಾರಿ, ಕಾರು ಡಿಕ್ಕಿ- ಓರ್ವ ಸಾವು, ನಾಲ್ವರಿಗೆ ಗಂಭೀರ ಗಾಯ
ಹುಬ್ಬಳ್ಳಿ: ಲಾರಿ ಮತ್ತು ಕಾರು ಡಿಕ್ಕಿಯಾಗಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿ ನಾಲ್ಕು ಜನರು ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿ ಸಮೀಪದ ಅದರಗುಂಚಿ ಕ್ರಾಸ್ ಬಳಿ ನಡೆದಿದೆ.ರಸ್ತೆ ಪಕ್ಕ ನಿಲ್ಲಿಸಿದ ಲಾರಿಗೆ ಹಿಂಬದಿಯಿಂದ ಬಂದು ಕಾರು ಡಿಕ್ಕಿಯಾಗಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿಯನ್ನು ತಮಿಳುನಾಡು ಮೂಲದ ಅಯ್ಯನಾರ್(35) ಎಂದು ಗುರುತಿಸಲಾಗಿದೆ. ಅಪಘಾತ ನಡೆದ ಸ್ಥಳದಲ್ಲಿದ್ದ ಜನರು ನಾಲ್ಕು ಜನರ ಪ್ರಾಣ ಉಳಿಸಿದ್ದಾರೆ. ಕಾರಿನ ಗ್ಲಾಸ್ ಒಡೆದು ಕಾರಿನಲ್ಲಿದ್ದವರ …
Read More »ಡಿಸಿಎಂ ಅಶ್ವಥ್ ನಾರಾಯಣ್ ಜೊತೆ ಚರ್ಚೆ ನಡೆಸಿದ ಟಗರು ಶಿವರಾಜ್ಕುಮಾರ್
ಬೆಂಗಳೂರು: ಕೊರೊನಾ ವೈರಸ್ ಕಾರಣದಿಂದ ಚಿತ್ರರಂಗಕ್ಕೆ ಬಹಳ ನಷ್ಟವಾಗಿದೆ. ಇದರ ಬಗ್ಗೆ ನಟ ಶಿವರಾಜ್ಕುಮಾರ್ ಅವರು ಡಿಸಿಎಂ ಅಶ್ವಥ್ ನಾರಾಯಣ್ ಅವರನ್ನು ಭೇಟಿ ಮಾಡಿ ಮಾತನಾಡಿದ್ದಾರೆ.ಇಂದು ರೇಸ್ ಕೋರ್ಸ್ ರಸ್ತೆಯಲ್ಲಿರುವ ಅಶ್ವಥ್ ನಾರಾಯಣ್ ಅವರ ನಿವಾಸಕ್ಕೆ ಬಂದ ಶಿವಣ್ಣ, ಚಿತ್ರರಂಗದ ಹಲವಾರು ತೊಂದರೆಗಳ ಬಗ್ಗೆ ಡಿಸಿಎಂ ಅವರ ಜೊತೆ ಚರ್ಚೆ ಮಾಡಿದ್ದಾರೆ. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೊನಾ ಹಿನ್ನೆಲೆಯಲ್ಲಿ ಚಿತ್ರರಂಗದ ಕೆಲಸ ಸ್ಥಗಿತವಾಗಿದೆ. ದೇಶದಲ್ಲಿ ಇದೇ ಪರಿಸ್ಥಿತಿ ಆಗಿದೆ. …
Read More »