ನವದೆಹಲಿ, ಆ.13- ಮೆದುಳು ಸೂಕ್ಷ್ಮ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಮಾಜಿ ರಾಷ್ಟ್ರಪತಿ ಭಾರತ ರತ್ನ ಪ್ರಣವ್ ಮುಖರ್ಜಿ ಅವರ ಆರೋಗ್ಯ ಮತ್ತಷ್ಟು ವಿಷಮವಾಗಿದ್ದು, ಡೀಪ್ ಕೋಮಾ (ತೀವ್ರ ಪ್ರಜ್ಞಾಶೂನ್ಯ ಸ್ಥಿತಿ) ತಲುಪಿಸಿದ್ದಾರೆ. ಮೆದುಳಿನ ಸೂಕ್ಷ್ಮ ನರದಲ್ಲಿ ರಕ್ತ ಹೆಪ್ಪುಗಟ್ಟಿದ ಕಾರಣ ಮುಖರ್ಜಿ ಅವರನ್ನು ಆಗಸ್ಟ್ 10ರಂದು ದೆಹಲಿಯ ಆರ್ಮಿಸ್ ರಿಸರ್ಚ್ ಅಂಡ್ ರೆಫರೆಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅವರನ್ನು ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ವೈರಸ್ ಸೋಂಕು ಸಹ ತಗುಲಿರುವುದು ದೃಢಪಟ್ಟಿತ್ತು. ಬಳಿಕ ಅವರ ಮೆದುಳಿನಲ್ಲಿ …
Read More »ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆಯಾಗಿದ್ದು, ಉಕ್ಕಿ ಹರಿಯುತ್ತಿದ್ದ ನದಿಗಳು ಈಗ ಸಹಜ ಸ್ಥಿತಿಗೆ ಮರಳಿವೆ.
ಬೆಂಗಳೂರು: ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆಯಾಗಿದ್ದು, ಉಕ್ಕಿ ಹರಿಯುತ್ತಿದ್ದ ನದಿಗಳು ಈಗ ಸಹಜ ಸ್ಥಿತಿಗೆ ಮರಳಿವೆ. ಭಾರೀ ಮಳೆಯಿಂದ ಕಂಗೆಟ್ಟಿದ್ದ ಜನರು ಈಗ ಮಳೆಯಿಂದ ಮನೆಯ ಸುತ್ತಮುತ್ತ ಆಗಿರುವ ಅವಾಂತರಗಳನ್ನು ಸರಿಪಡಿಸಿಕೊಳ್ಳುವತ್ತ ಗಮನಹರಿಸಿದ್ದಾರೆ. ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ಮಾಹಿತಿ……. -ಘಟಪ್ರಭಾ ಜಲಾಶಯ ಗರಿಷ್ಠ ಮಟ್ಟ- 662.94 ಮೀಟರ್ ಇಂದಿನ ಮಟ್ಟ- 662 ಮೀಟರ್ ಗರಿಷ್ಠ ಸಾಮರ್ಥ್ಯ- 51 ಟಿಎಂಸಿ ಇಂದಿನ ನೀರು ಸಂಗ್ರಹ- 48.37 ಟಿಎಂಸಿ ಇಂದಿನ …
Read More »ಆರೋಗ್ಯ ಸಚಿವ ಶ್ರೀರಾಮುಲುಗೆ ಕೊರೊನಾ ಸೋಂಕು ಪತ್ತೆಯಾದ ಬೆನ್ನಲ್ಲೇ ಇದೀಗ ಅವರ ತಾಯಿ ಹಾಗೂ ತಮ್ಮನಿಗೂ ಸೋಂಕು ದೃಢ
ಬಳ್ಳಾರಿ: ಆರೋಗ್ಯ ಸಚಿವ ಶ್ರೀರಾಮುಲುಗೆ ಕೊರೊನಾ ಸೋಂಕು ಪತ್ತೆಯಾದ ಬೆನ್ನಲ್ಲೇ ಇದೀಗ ಅವರ ತಾಯಿ ಹಾಗೂ ತಮ್ಮನಿಗೂ ಸೋಂಕು ದೃಢಪಟ್ಟಿದೆ.ಇತ್ತೀಚೆಗಷ್ಟೇ ಕೊರೊನಾ ಸೋಂಕು ತಗುಲಿ ಸಚಿವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೀಗ ಅವರ ತಾಯಿ ಹಾಗೂ ತಮ್ಮನಿಗೆ ಕೊರೊನಾ ದೃಢಪಟ್ಟಿದೆ. ಇಬ್ಬರನ್ನೂ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತಾಯಿಗೆ 85 ವರ್ಷ ವಯಸ್ಸಾಗಿದ್ದು, ಅವರನ್ನೂ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಚಿವರು ಇನ್ನೂ ಸರ್ಕಾರ ಆಸ್ಪತ್ರೆಯಲ್ಲಿ ಕೊರೊನಾ ಚಿಕಿತ್ಸೆ ಡೆಯುತ್ತಿದ್ದು, ಇದರ ಮಧ್ಯೆ ಇವರಿಬ್ಬರಿಗೆ …
Read More »ಕೊರೊನಾ ಹಿನ್ನೆಲೆ ಕೋಲಾರದಲ್ಲಿ ಗಲ್ಲಿ ಗಣೇಶ ನಿಷೇಧ:
ಕೋಲಾರ: ಕೊರೊನಾ ಹಿನ್ನೆಲೆ ಈ ಬಾರಿ ಸಾರ್ವಜನಿಕವಾಗಿ ಬೀದಿಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಟಾಪನೆ ಮಾಡಲು ಅವಕಾಶವಿಲ್ಲವೆಂದು ಜಿಲ್ಲಾಧಿಕಾರಿ ಸತ್ಯಭಾಮ ತಿಳಿಸಿದರು.ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊರೊನಾ ಸಂಕಷ್ಟದ ಹಿನ್ನೆಲೆ ಗಣೇಶ ಹಬ್ಬವನ್ನು ಆಡಂಬರದಿಂದ ಆಚರಣೆ ಮಾಡದೆ, ಸರಳವಾಗಿ ಮತ್ತು ಭಕ್ತಿ-ಭಾವದಿಂದ ಆಚರಣೆ ಮಾಡುವಂತೆ ಜನರಲ್ಲಿ ಮನವಿ ಮಾಡಿದರು. ಈ ಹಿಂದೆ ಗಣೇಶ ಮೂರ್ತಿಗಳನ್ನು ಗಲ್ಲಿಗಳಲ್ಲಿ ಪ್ರತಿಷ್ಟಾಪನೆ ಮಾಡುವ ಜೊತೆಗೆ ಸಾರ್ವಜನಿಕವಾಗಿ ವಿಸರ್ಜನೆ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಕೊರೊನಾ …
Read More »ಮೆಡಿಕಲ್ ಕಾಲೇಜಿನ ಕಟ್ಟಡದಿಂದ ಜಿಗಿದ ನರ್ಸಿಂಗ್ ವಿದ್ಯಾರ್ಥಿನಿ
ಲಕ್ನೋ: ನರ್ಸಿಂಗ್ ವಿದ್ಯಾರ್ಥಿನ ಮೆಡಿಕಲ್ ಕಾಲೇಜಿನ ಕಟ್ಟಡದ ಮೊದಲ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳವಾರ ನಡೆದಿದೆ. ಬುಧವಾರ ಪೊಲೀಸರು ಘಟನೆ ಕುರಿತು ಮಾಹಿತಿ ನೀಡಿದ್ದಾರೆ.ವರುಣ್ ಅರ್ಜುನ್ ಮೆಡಿಕಲ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿಯನ್ನು ಕೋವಿಡ್-19 ರೋಗಿಗಳ ವಿಭಾಗಕ್ಕೆ ನೇಮಿಸಲಾಗಿತ್ತು. ಆದ್ರೆ ನರ್ಸಿಂಗ್ ವಿದ್ಯಾರ್ಥಿನಿಗೆ ಡ್ಯೂಟಿಗೆ ತೆರಳಲು ಸಿದ್ಧವಿರಲಿಲ್ಲ. ಅಧಿಕಾರಿಗಳ ಒತ್ತಡದಿಂದಾಗಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ವಿದ್ಯಾರ್ಥಿನಿಯ ಕುಟುಂಬಸ್ಥರು ನೀಡಿದ ದೂರಿನ ಆಧಾರದ …
Read More »ಸಿಬ್ಬಂದಿ ಆಸ್ಪತ್ರೆಗೆ ಅಂಬುಲೆನ್ಸ್ನಲ್ಲಿ ಕರ್ಕೊಂಡು ಬಂದ್ರೆ ವ್ಯಕ್ತಿ ಮರುದಿನವೇ ಬಸ್ ಹತ್ತಿ ಹೋದ!
ಧಾರವಾಡ: ಕೊರೊನಾ ಸೋಂಕಿತ ಎಂದು ವ್ಯಕ್ತಿಯೋರ್ವನನ್ನು ಅಂಬುಲೆನ್ಸ್ ನಲ್ಲಿ ಕರೆದುಕೊಂಡು ಬಂದು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ ಮರುದಿನವೇ ಆತ ಏಕಾಂಗಿಯಾಗಿ ಬಸ್ ಏರಿ ತನ್ನೂರು ಸೇರಿಕೊಂಡಿರುವ ಘಟನೆಯೊಂದು ಧಾರವಾಡದಲ್ಲಿ ನಡೆದಿದೆ.ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ನಿಯಮಿತವಾಗಿ ಡಯಾಲಿಸಿಸ್ ಒಳಗಾಗುತ್ತಿದ್ದ ಅಳ್ನಾವರ ತಾಲೂಕಿನ ಡೋರಿ ಗ್ರಾಮದ ವ್ಯಕ್ತಿಯೋರ್ವನಿಗೆ ಆಂಟಿಜನ್ ಟೆಸ್ಟಿನಲ್ಲಿ ನೆಗಟಿವ್ ರಿಪೋರ್ಟ್ ಬಂದಿದೆ. ಆದರೂ ಮುಂದೆ ಸ್ವ್ಯಾಬ್ ಟೆಸ್ಟಿನಲ್ಲಿ ಆತನಿಗೆ ಪಾಸಿಟಿವ್ ಬರುತ್ತೆ ಎಂದು ಅಂದಾಜಿಸಿಕೊಂಡ ಸ್ಥಳಿಯ ಆರೋಗ್ಯ ಇಲಾಖೆ ಸಿಬ್ಬಂದಿ, …
Read More »73ನೇ ಹುಟ್ಟುಹಬ್ಬಕ್ಕೆ ಶುಭಾಶಯಗಳ ಸುರಿಮಳೆಗಳೇ ಬಂದಿತ್ತು ಎಲ್ಲರಿಗೂ ಧನ್ಯವಾದ: ಸಿದ್ದರಾಮಯ್
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 73ನೇ ಹುಟ್ಟುಹಬ್ಬಕ್ಕೆ ಶುಭಾಶಯಗಳ ಸುರಿಮಳೆಗಳೇ ಬಂದಿತ್ತು. ಈ ಹಿನ್ನೆಲೆಯಲ್ಲಿ ಅವರು ತನಗೆ ಶುಭಕೋರಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನನ್ನ ಹುಟ್ಟುಹಬ್ಬಕ್ಕೆ ರಾಜ್ಯದಾದ್ಯಂತ ಹಿರಿಯ-ಕಿರಿಯ ಸ್ನೇಹಿತರು, ಹಿತೈಷಿಗಳು ಶುಭಾಶಯ ಕೋರಿದ್ದಾರೆ. ಅವರೆಲ್ಲರಿಗೂ ನನ್ನ ತುಂಬು ಹೃದಯದ ಧನ್ಯವಾದಗಳು. ನಿಮ್ಮ ಹಾರೈಕೆ ಜನರ ಸೇವೆ ಮಾಡುವ ನನ್ನ ಮನೋಬಲವನ್ನು ಹೆಚ್ಚಿಸಿದೆ. ನಿಮ್ಮ ಸೇವೆಯ ಮೂಲಕವೇ ನಿಮ್ಮ ಪ್ರೀತಿಯ ಋಣ ತೀರಿಸಲು …
Read More »ಬೆಂಗಳೂರು ಗಲಭೆಯ ಹಿಂದೆ ಮೂವರ ಕೈವಾಡ
ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸ್ ಮೇಲೆ ದಾಳಿಗೆ ಹಿಂದೆಯೇ ಪ್ಲಾನ್ ಮಾಡಲಾಗಿತ್ತು. ಆದರೆ ಅವಕಾಶಕ್ಕಾಗಿ ಹುಡುಕುಲಾಗುತ್ತಿತ್ತು. ಈ ಅವಕಾಶ ನಿನ್ನೆ ಸಿಕ್ಕಿತ್ತು ಎಂಬ ಮಾತುಗಳು ಈಗ ಕೇಳಿ ಬಂದಿದೆ.ಈ ಮಾತಿಗೆ ಪುಷ್ಟಿಎನ್ನುವಂತೆ ಕಂದಾಯ ಸಚಿವ ಅಶೋಕ್ ಹೇಳಿಕೆ ನೀಡಿದ್ದು ಈಗ ಭಾರೀ ಸಂಚಲನ ಮೂಡಿಸಿದೆ.ವಿಧಾನಸೌಧದಲ್ಲಿ ಕಂದಾಯ ಸಚಿವರನ್ನು ಅಖಂಡ ಶ್ರೀನಿವಾಸ ಮೂರ್ತಿ ಭೇಟಿ ಮಾಡಿ ರಾತ್ರಿಯ ಘಟನೆಯನ್ನು ವಿವರಿಸಿದರು. ಈ ವೇಳೆ ಸಿಎಂಗೆ ಕರೆ ಮಾಡಿದ ಸಚಿವರು, ಗಲಭೆಯಲ್ಲಿ ಮೂವರು …
Read More »2ನೇ ಮಗುವಿಗೆ ತಾಯಿಯಾಗುತ್ತಿದ್ದಾರೆ ಕರೀನಾ
ಮುಂಬೈ: ನಟ ಸೈಫ್ ಅಲಿ ಖಾನ್ ಹಾಗೂ ಕರೀನಾ ಕಪೂರ್ ಸಂತಸದ ಸುದ್ದಿಯನ್ನ ಹಂಚಿಕೊಂಡಿದ್ದು, ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿರುವ ಕುರಿತು ತಿಳಿಸಿದ್ದಾರೆ.ಈ ಕುರಿತು ದಂಪತಿ ಹೇಳಿಕೆ ನೀಡಿದ್ದು, ನಮ್ಮ ಕುಟುಂಬಕ್ಕೆ ಮತ್ತೊಬ್ಬ ಸದಸ್ಯನ ಆಗಮನದ ನಿರೀಕ್ಷೆಯಲ್ಲಿರುವುದು ಸಂತಸ ತಂದಿದೆ. ನಿಮ್ಮೆಲ್ಲರ ಪ್ರೀತಿ, ಹಾರೈಕೆ, ಬೆಂಬಲಕ್ಕೆ ಧನ್ಯವಾದಗಳು ಎಂದು ತಿಳಿಸಿದ್ದಾರೆ. ಡಿಸೆಂಬರ್ ರಲ್ಲಿ ಕರೀನಾ ಕಪೂರ್ ಹಾಗೂ ಸೈಫ್ ಅಲಿ ಖಾನ್ ದಂಪತಿಗೆ ತೈಮುರ್ ಅಲಿ ಖಾನ್ ಜನಸಿದ್ದಾನೆ. ಈ ಜೋಡಿಯು …
Read More »ಒಂದು ರಾತ್ರಿಯ ಬೆಂಗಳೂರು ದಂಗೆ – ಎಷ್ಟು ಕೋಟಿ ನಷ್ಟ?
ಬೆಂಗಳೂರು: ಗಲಭೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಇದೇ ಮೊದಲ ಬಾರಿಗೆ ಸಾರ್ವಜನಿಕ ಆಸ್ತಿಪಾಸ್ತಿಗೆ ಮಾಡಿರುವ ನಷ್ಟವನ್ನು ಗಲಭೆಕೋರರಿಂದಲೇ ವಸೂಲಿ ಮಾಡಲು ತೀರ್ಮಾನ ತೆಗೆದುಕೊಂಡಿದೆ. ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಈ ಸಂಬಂಧ ಪ್ರತಿಕ್ರಿಯೆ ನೀಡಿದ ಗೃಹ ಮಂತ್ರಿ ಬಸವರಾಜ ಬೊಮ್ಮಾಯಿ, ಸುಪ್ರೀಂಕೋರ್ಟ್ ಆದೇಶದ ಮೇರೆಗೆ ಈ ರೀತಿಯ ದಂಗೆಗಳಾದಾಗ ಆಗಿರುವ ನಷ್ಟವನ್ನು ಗಲಭೆಕೋರರಿಂದಲೇ ವಸೂಲಿ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು. ಈ ಕೂಡಲೇ ಪ್ರಕ್ರಿಯೆ …
Read More »