Breaking News

ಬಸವರಾಜ ಬೊಮ್ಮಾಯಿ ಗಡಿ ಉಸ್ತುವಾರಿ ಸಚಿವರಾಗಲಿ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಪತ್ರೆ

ಬೆಳಗಾವಿ – ಗಡಿ ಉಸ್ತುವಾರಿ ಸಚಿವರನ್ನಾಗಿ ಬಸವರಾಜ ಬೊಮ್ಮಾಯಿ ಅವರನ್ನು ನೇಮಕ ಮಾಡಬೇಕು ಎಂದು ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ. ಜೊತೆಗೆ, ಮಹಾರಾಷ್ಟ್ರದ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದೆ. ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಈ ಪತ್ರ ಬರೆದಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಣ ಗಡಿ ವಿವಾದ ಪ್ರಕರಣವನ್ನು ಮಹಾರಾಷ್ಟ್ರ ಸರಕಾರ ಪದೇ ಪದೇ ಕೆಣಕುತ್ತಿದೆ. ಅಲ್ಲಿಯ ಮುಖ್ಯಮಂತ್ರಿಗಳು ಸಾಧ್ಯವಿರುವ ಎಲ್ಲ …

Read More »

ಕನ್ನಡ ಶಾಲೆಗಳ ಪುನಶ್ಚೇತನಕ್ಕೆ ಹೋರಾಟ ಅಗತ್ಯ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಮಂಡ್ಯ: ಕನ್ನಡ ಶಾಲೆಗಳು ಮುಚ್ಚುವ ಸ್ಥಿತಿಗೆ ತಲುಪುತ್ತಿದ್ದು, ಕನ್ನಡ ಶಾಲೆಗಳ ಪುನಶ್ಚೇತನಕ್ಕೆ ಪ್ರತಿಯೊಬ್ಬರು ಹೋರಾಟ ಮಾಡಬೇಕಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದಲ್ಲಿ ಶುಕ್ರವಾರ ಜಯ ಕರ್ನಾಟಕ ಸಂಘಟನೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕನ್ನಡ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕನ್ನಡವನ್ನು ಪ್ರತಿಯೊಬ್ಬರು ನಿರಂತರವಾಗಿ ಪ್ರೀತಿಸಿ, ಪ್ರೋತ್ಸಾಹಿಸಬೇಕು. ರಾಜ್ಯ, ಹೊರ ರಾಜ್ಯಗಳಲ್ಲಿಯೂ ಕನ್ನಡ ಕ್ರಾಂತಿಯಾಗಬೇಕು. ನಾಡು, ನುಡಿ ವಿಷಯಕ್ಕೆ ಬಂದಾಗ ಪಕ್ಷಾತೀತ ಹೋರಾಟ …

Read More »

ಬಾಯಿ ಚಪ್ಪರಿಸಿಕೊಂಡು ಫಾಸ್ಟ್ ಫುಡ್’ ತಿನ್ನೋ ಮುನ್ನಾ ಈ ಸುದ್ದಿ ತಪ್ಪದೇ ಓದಿ.!

ಬೆಂಗಳೂರು : ಬಹುತೇಕರು ಸಂಜೆ ಆದ್ರೆ ಸಾಕು, ಫಾಸ್ಟ್ ಫುಡ್ ತಿನಿಸುಗಳ ಮೊರೆ ಹೋಗುತ್ತಾರೆ. ಬಾಯಿ ಚಪ್ಪರಿಸಿಕೊಂಡು ಗೋಭಿ, ನೂಡಲ್ಸ್ ಸೇರಿದಂತೆ ಫ್ರೈಡ್ ಪುಡ್ ತಿನ್ನುತ್ತಾರೆ. ಆದ್ರೇ.. ಇದೀಗ ಇವೇ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಿ, ಶ್ವಾಸಕೋಶದ ಕ್ಯಾನ್ಸರ್ ಗೂ ಕಾರಣವಾಗುತ್ತಿದೆ ಎಂಬ ಆಘಾತಕಾರಿ ಮಾಹಿತಿ ಹೊರ ಬಿದ್ದಿದೆ. ಈ ಕುರಿತಂತೆ ಕಿದ್ವಾಯಿ ಆಸ್ಪತ್ರೆಯ ವೈದ್ಯರೊಬ್ಬರು ಮಾಹಿತಿ ನೀಡಿದ್ದು, ಬೆಂಗಳೂರಿನಲ್ಲಿ ಹೆಚ್ಚು ಹೆಚ್ಚು ಜನರು ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದಾರೆ. …

Read More »

ಕೆಎಲ್ಇ ಸಂಸ್ಥೆಯ ಆಸ್ಪತ್ರೆಯಲ್ಲಿ ಉಚಿತ ಹೆರಿಗೆ

ಮಾಂಜರಿ –  ಶಿಕ್ಷಣದ ಜೊತೆಗೆ ಸಾಮಾನ್ಯ ಜನರ ಆರೋಗ್ಯ ಕಾಪಾಡಲು ಕೆಎಲ್ಇ ಶಿಕ್ಷಣ ಸಂಸ್ಥೆ ಕಾರ್ಯನಿರ್ವಹಿಸುತ್ತಿದ್ದು ಮುಂದಿನ ದಿನಗಳಲ್ಲಿ ಎಲ್ಲರ ಆರೋಗ್ಯ ಮತ್ತು ಸದೃಢ ಸಮಾಜ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಜೊತೆಗೆ ಗ್ರಾಮೀಣ ಭಾಗದಲ್ಲಿರುವ ಮಹಿಳೆಯರ ಆರೋಗ್ಯ ಕಾಪಾಡಲು ಉಚಿತ ಆರೋಗ್ಯ ತಪಾಸಣೆ ಮತ್ತು ಬೆಳಗಾವಿಯ ಕೆಎಲ್ಇ ಸಂಸ್ಥೆಯ ಆಸ್ಪತ್ರೆಯಲ್ಲಿ ಉಚಿತ ಹೆರಿಗೆ ಮಾಡಲಾಗುವುದು ಎಂದು ಕೆಎಲ್ಇ  ಶಿಕ್ಷಣ ಸಂಸ್ಥೆಯ ಕಾರ್ಯಾಧ್ಯಕ್ಷ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ್ …

Read More »

65 ಸಾವಿರ ರೂಪಾಯಿ ಹಣದ ಬೇಡಿಕೆ ಇಟ್ಟಿದ್ದ ಇಬ್ಬರು ಸೆಕ್ಷನ್ ಅಧಿಕಾರಿಗಳು ಎಸಿಬಿ ಬಲೆಗೆ

  ಬೆಳಗಾವಿ: ಜಮೀನಿನಲ್ಲಿದ್ದ ಟಿ.ಸಿ ಬದಲಿಸಿ ಹೊಸ ಟಿ.ಸಿ ಮಂಜೂರು ಮಾಡಿಕೊಡಲು 65,000 ರೂಪಾಯಿ ಲಂಚ ಪಡೆಯುತ್ತಿದ್ದ ಹೆಸ್ಕಾಂನ ಇಬ್ಬರು ಸೆಕ್ಷನ್ ಅಧಿಕಾರಿಗಳು ಎಸಿಬಿ ಬಲೆಗೆ ಬಿದ್ದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಹೆಸ್ಕಾಂ ಲೋಳುಸರ ಸೆಕ್ಷನ್ ಆಫೀಸರ್ ಪ್ರಕಾಶ್ ವಿರೂಪಾಕ್ಷ ಪರೀಟ್ ಮತ್ತು ಮೇಲ್ವಿಚಾರಕ ಮಲ್ಲಯ್ಯ ಕುಮಾರಸ್ವಾಮಿ ಹಿರೇಮಠ ಎಸಿಬಿ ಬಲೆಗೆ ಬಿದ್ದ ಅಧಿಕಾರಿಗಳು. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕು ಅರಂಭಾವಿ ಗ್ರಾಮದ ನಿವಾಸಿ ಆನಂದ ಉದ್ದಪ್ಪ ತಮ್ಮ ಜಮೀನಿನಲ್ಲಿರುವ …

Read More »

ಲಾರಿ- ಆಟೋ ನಡುವೆ ಭೀಕರ ಅಪಘಾತ ; ಮದುವೆಗೆ ಬಟ್ಟೆ ತರಲು ಹೊರಟ್ಟಿದ್ದ ಆರು ಜನರು ಸಾವು !

ತೆಲಂಗಾಣ : ಲಾರಿ- ಆಟೋ ನಡುವೆ ಭೀಕರ ರಸ್ತೆ ಅಪಘಾತ ಸಂಭಿಸಿದ್ದು, ಸ್ಥಳದಲ್ಲೇ ಆರು ಜನರು ಮೃತಪಟ್ಟಿರುವ ಘಟನೆ ಮೆಹಬೂಬಾಬಾದ್ ಜಿಲ್ಲೆಯ ಗುಡೂರ್ ವಲಯದ ಮರ್ರಿಮಿಟ್ಟದಲ್ಲಿ ಇಂದು ನಡೆದಿದೆ. ಮೃತರು ಒಂದೇ ಕುಟುಂಬದವರಾಗಿದ್ದು, ಮದುವೆಗೆ ಬಟ್ಟೆ ತರಲು ತೆರಳುತ್ತಿದ್ದ ಸಂದರ್ಭದಲ್ಲಿ ಅವಘಡ ಸಂಭವಿಸಿದೆ. ವದು ಸೇರಿ ಆಟೋದಲ್ಲಿ ಆರು ಮಂದಿ ಇದ್ದರು ಎನ್ನಲಾಗಿದೆ. ವೇಗವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಸ್ಥಳಕ್ಕೆ ಪೊಲೀಸರು …

Read More »

ಬೆಳಗಾವಿ TAPMS ನಿರ್ದೇಶಕ ಚುನಾವಣೆ: ಆಶಿಫ್ ಮುಲ್ಲಾಗೆ ಭರ್ಜರಿ ಜಯ

ಬೆಳಗಾವಿ: ತಾಲೂಕಾ ಕೃಷಿ ಹುಟ್ಟುವಳಿ ಮಾರಾಟ ಸಹಕಾರಿ ಸಮಿತಿ(ಟಿಎಪಿಎಂಎಸ್) ದಿಂದ ಎಂಪಿಎಂಸಿಯ ನಿರ್ದೇಶಕ ಒಂದು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಾರಿಹಾಳದ ಆಶಿಫ್ ಮುಲ್ಲಾ 9 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಪ್ರತಿ ಸ್ಪರ್ಧಿ ಶಿವನಗೌಡ ಪಾಟೀಲ್ 6 ಮತಗಳ ಪಡೆದು ಪರಾಭವಗೊಂಡಿದ್ದಾರೆ. ಚುನಾವಣಾಧಿಕಾರಿಯಾಗಿ ಎಂ.ಎಸ್. ಗೌಡಪ್ಪಗೋಳ ಅವರು ಕಾರ್ಯನಿರ್ವಹಿಸಿದರು. ಚುನಾವಣೆ ಗೆಲುವಿಗೆ ಕಾರಣರಾದ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರಿಗೆ ಟಿಎಪಿಎಂಎಸ್ …

Read More »

ಮೇ.24 ರಿಂದ ಜೂ. 10ರವರೆಗೆ ದ್ವಿತಿಯ ಪಿಯುಸಿ ಪರೀಕ್ಷೆ !

ಬೆಂಗಳೂರು : ದ್ವಿತಿಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾ ಪಟ್ಟಿಯನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಶುಕ್ರವಾರ ಬಿಡುಗಡೆ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮೇ.24ರಿಂದ ಜೂನ್ 10ರವರೆಗೆ ಪರೀಕ್ಷೆ ನಡೆಯಲಿವೆ. ಈ ನಡುವೆ, ದಿನಾಂಕ ಬಗ್ಗೆ ಆಕ್ಷೆಪಣೆಗಳಿದ್ದರೆ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ. ದ್ವಿತೀಯ PU ಪರೀಕ್ಷೆ ವೇಳಾಪಟ್ಟಿ ಹೀಗಿದೆ 1) ಮೇ 24: ಭೌತಶಾಸ್ತ್ರ, ಇತಿಹಾಸ 2) ಮೇ 25: ಮೈನಾರಿಟಿ ಲಾಂಗ್​ವೇಜಸ್​ 3) ಮೇ 26: …

Read More »

ಮುಂದಿನ ಸಿಎಂ ನಾನೇ: ಶಾಸಕ ಬಸನಗೌಡ ಯತ್ನಾಳ ಘೋಷಣೆ

  ದಾವಣೆಗರೆ: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುರ್ಚಿ ಅಲುಗಾಡುತ್ತಿದೆ. ನಾನು ಮಂತ್ರಿಯಾಗಬೇಕೆಂದು ಯಾರ ಕೈಕಾಲು ಹಿಡಿಯುವವನಲ್ಲ. ”ನಮಗೆ ಬರೋದಿದೆ ಸಿಎಂ ಕುರ್ಚಿ” ಎಂದು ಹೇಳುವ ಮೂಲಕ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಬಹಿರಂಗವಾಗಿ ಹೇಳಿಕೆ ನೀಡಿದರು. ದಾವಣಗೆರೆ ಜಿಲ್ಲೆಯ ಹರಿಹರ ಪಟ್ಟಣದಲ್ಲಿ ಪಂಚಮಸಾಲಿ ಸಮುದಾಯದ 2ಎ ಮೀಸಲಾತಿಗಾಗಿ ನಡೆಯುತ್ತಿರುವ ಪಾದಯಾತ್ರೆ ಸಮಾವೇಶದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿದರು. ಮುಖ್ಯಮಂತ್ರಿ ಆಗಿದ್ದವರು ಕೈಗಾರಿಕಾ ಮಂತ್ರಿಯಾಗಿದ್ದಾರೆ. ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ …

Read More »

ಮೋಕ್ಷ ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ

ರಾಮನಗರ: ಬೆಂಗಳೂರು ದಕ್ಷಿಣ ತಾಲೂಕಿನ ತರಳು ಗ್ರಾಮದಲ್ಲಿರುವ ಮೋಕ್ಷ ಅಗರಬತ್ತಿ ಕಾರ್ಖಾನೆಯಲ್ಲಿ ಶುಕ್ರವಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಅವಘಾಡ ಸಂಭವಿಸಿದ್ದು, ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರ್ಮಿಕರು ಹೊರಗಡೆ ಓಡಿ ಹೋಗಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ, ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿಯೊಂದಿಗೆ ಕಾರ್ಖಾನೆಯ ಕಾರ್ಮಿಕರು ಸಹ ಬೆಂಕಿ ನಂದಿಸಲು ಕೈಜೋಡಿಸಿದ್ದಾರೆ. ಕಾರ್ಖಾನೆಯಲ್ಲಿನ ಕೆಲವಸ್ತುಗಳು …

Read More »