Breaking News

ಬೆಂಗಳೂರು: ಎಲ್ಲರೂ ಎದುರು ನೋಡುತ್ತಿರುವ ಕೆಜಿಎಫ್ 2 ಸಿನಿಮಾದ ಬಿಡುಗಡೆ ದಿನಾಂಕ ಯಾವುದು ಎಂಬುದಕ್ಕೆ ಇದೀಗ ಉತ್ತರ ಸಿಕ್ಕಿದೆ.  

ಕೆಲವು ಮೂಲಗಳ ಪ್ರಕಾರ ಕೆಜಿಎಫ್ 2 ಬಹುತೇಕ ಇದೇ ವರ್ಷ ಜುಲೈ 30 ರಂದು ಬಿಡುಗಡೆಯಾಗಲಿದೆ ಎನ್ನಲಾಗಿದೆ. ಆದರೆ ಇನ್ನೂ ಚಿತ್ರೀಕರಣ ಪೂರ್ತಿಯಾಗಿಲ್ಲ. ಅಷ್ಟೇ ಅಲ್ಲದೆ, ಅಭಿಮಾನಿಗಳು ಈಗ ಟೀಸರ್ ಗಾಗಿ ಕಾತುರದಿಂದ ಕಾಯತ್ತಿದ್ದಾರೆ. ಕೆಜಿಎಫ್ 2 ನ ಎರಡು ಪೋಸ್ಟರ್ ಗಳು ಮಾತ್ರ ಇದುವರೆಗೆ ಬಿಡುಗಡೆಯಾಗಿವೆ.

Read More »

ಬೆಂಗಳೂರು: ಡಾರ್ಲಿಂಗ್ ಕೃಷ್ಣ ಮೊದಲ ಬಾರಿಗೆ ನಿರ್ದೇಶಿಸಿ ತಾವೇ ನಟಿಸಿದ ಲವ್ ಮಾಕ್ ಟೈಲ್ ಸಿನಿಮಾಗೆ ಮೊದಲ ಎರಡು ದಿನ ಜನರ ನೀರಸ ಪ್ರತಿಕ್ರಿಯೆ ನೋಡಿ ಕಿಚ್ಚ ಸುದೀಪ್ ಬೇಸರಗೊಂಡಿದ್ದರು

ಲವ್ ಮಾಕ್ ಟೈಲ್ ಬಿಡುಗಡೆಯಾದ ತಕ್ಷಣ ಜನರಿಂದ ಉತ್ತಮ ಪ್ರತಿಕ್ರಿಯೆ ಬರಲಿಲ್ಲ. ಚಿತ್ರದ ಕಲೆಕ್ಷನ್ ಡಲ್ ಆಗಿತ್ತು. ಇದರಿಂದಾಗಿ ಮಾಲ್ ಗಳಲ್ಲಿ ಶೋಗಳು ರದ್ದಾಗುವ ಸ್ಥಿತಿಗೆ ಬಂದಿತ್ತು. ಕೊನೆಗೆ ಕೃಷ್ಣ ಮಾಲ್ ಮುಖ್ಯಸ್ಥರಿಗೆ ವೀಕೆಂಡ್ ನಲ್ಲಿ ಕನಿಷ್ಠ ಒಂದು ಶೋ ಇಡುವಂತೆ ಮನವಿ ಮಾಡಿದ್ದಾರೆ. ವೀಕೆಂಡ್ ನಲ್ಲಿ ಚಿತ್ರ ಹೌಸ್ ಫುಲ್ ಪ್ರದರ್ಶನ ಕಂಡಿದ್ದು, ಇದೀಗ ಪ್ರದರ್ಶನ ಹೆಚ್ಚಿಸಲು ಮುಂದಾಗಿದ್ದಾರೆ. ಇದರಿಂದ ಡಾರ್ಲಿಂಗ್ ಕೃಷ್ಣ ಮೊಗದಲ್ಲಿ ಗೆಲುವಿನ ನಗೆ ಮೂಡಿದೆ. …

Read More »

ಯಕ್ಷಗಾನಂ ಗೆಲ್ಗೆ! ಯಕ್ಷಗಾನಂ ಬಾಳ್ಗೆ!

ಯಕ್ಷಗಾನಂ ಗೆಲ್ಗೆ! ಯಕ್ಷಗಾನಂ ಬಾಳ್ಗೆ! ಉತ್ತರ ಕನ್ನಡ ಜಿಲ್ಲೆಯ ವಿಶ್ವ ಪ್ರಸಿದ್ಧ ಬನವಾಸಿಯ ಕದಂಬೋತ್ಸವದ ನಿಮಿತ್ತ ರಾಜ್ಯಮಟ್ಟದ ಕಲಾವಿದರುಗಳಿಂದ ನಡೆದ ಸಾಂಸ್ಕೃತಿಕ ವೈಭವ, ಯಕ್ಷ ವೈಭವದ ದೃಶ್ಯಾವಳಿಗಳನ್ನು ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ವೀಕ್ಷಿಸಿದರು. …

Read More »

ಕನ್ನಡದ ಪ್ರಥಮ ರಾಜಧಾನಿ ಬನವಾಸಿಯ ವೈಭವವನ್ನು ವಿಶ್ವಕ್ಕೆ ಪರಿಚಯಿಸುವ ಕದಂಬೋತ್ಸವ – 2020 “

ಬನವಾಸಿ ” ಕನ್ನಡದ ಪ್ರಥಮ ರಾಜಧಾನಿ ಬನವಾಸಿಯ ವೈಭವವನ್ನು ವಿಶ್ವಕ್ಕೆ ಪರಿಚಯಿಸುವ ಕದಂಬೋತ್ಸವ – 2020 ” ಉತ್ತರ ಕನ್ನಡದ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ನಡೆಯುತ್ತಿರುವ ಕದಂಬೋತ್ಸವ-೨೦೨೦ ಕಾರ್ಯಕ್ರಮದ ಅಂಗವಾಗಿ ಪ್ರಚಾರದ ನಿಮಿತ್ತ ಕದಂಬೋತ್ಸವದ ಪೂರ್ವದಲ್ಲಿ ಜಿಲ್ಲೆಯ ಎಲ್ಲಾ ತಾಲೂಕು ಗಳಲ್ಲೂ ಸಂಚರಿಸಿ ಬನವಾಸಿಗೆ ಆಗಮಿಸಿದ ಕದಂಬ ಜ್ಯೋತಿಯನ್ನು ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ …

Read More »

ಫೆ.13 ಗುರುವಾರ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಬರೋಬ್ಬರೀ 400 ಕನ್ನಡ ಸಂಘಟನೆಗಳಿಂದ ಬಂದ್‍ಗೆ ಬೆಂಬಲ ವ್ಯಕ್ತಪಡಿಸಿದೆ.

  ಬೆಂಗಳೂರು: ಸರೋಜಿ ಮಹಿಷಿ ವರದಿ ಜಾರಿ ವಿಚಾರವಾಗಿ ಫೆ.13 ಗುರುವಾರ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಬರೋಬ್ಬರೀ 400 ಕನ್ನಡ ಸಂಘಟನೆಗಳಿಂದ ಬಂದ್‍ಗೆ ಬೆಂಬಲ ವ್ಯಕ್ತಪಡಿಸಿದೆ. ಯಾರೆಲ್ಲಾ ಬೆಂಬಲ ನೀಡುತ್ತಿದ್ದಾರೆ? ಬರೋಬ್ಬರಿ 400 ಕನ್ನಡ ಸಂಘಟನೆಗಳಿಂದ ಬಂದ್‍ಗೆ ಬೆಂಬಲ ವ್ಯಕ್ತಪಡಿಸಿದೆ. ಕನ್ನಡ ಸಂಘಟನೆಗಳ ಒಕ್ಕೂಟ, ಓಲಾ-ಬಬರ್ ಕಾರು ಚಾಲಕರ ಸಂಘ, ಚಾಲಕರ ಸಂಘಟನೆಗಳ ಒಕ್ಕೂಟ, ಆಟೋ-ಟ್ಯಾಕ್ಸಿ ಚಾಲಕರ ಸಂಘ ಕರ್ನಾಟಕ ಬಂದ್‍ಗೆ ಬೆಂಬಲ ಸೂಚಿಸಿದೆ. ಇತ್ತ …

Read More »

ಡಿಕೆ ಶಿವಕುಮಾರ್ ವಿರುದ್ಧ ಬಂಡಾಯ ಸಾರಿದ್ದ ರಮೇಶ್ ಜಾರಕಿಹೊಳಿ ಅವರಿಗೆ ಕೊನೆಗೂ ಡಿಕೆಶಿ ಬಳಿಯಿದ್ದ ಜಲಸಂಪನ್ಮೂಲ ಖಾತೆ ಸಿಕ್ಕಿದೆ.

ಬೆಂಗಳೂರು: ಬೆಳಗಾವಿ ರಾಜಕಾರಣ ಪ್ರವೇಶಿಸಿದ್ದಕ್ಕೆ ಅಸಮಾಧಾನಗೊಂಡು ಡಿಕೆ ಶಿವಕುಮಾರ್ ವಿರುದ್ಧ ಬಂಡಾಯ ಸಾರಿದ್ದ ರಮೇಶ್ ಜಾರಕಿಹೊಳಿ ಅವರಿಗೆ ಕೊನೆಗೂ ಡಿಕೆಶಿ ಬಳಿಯಿದ್ದ ಜಲಸಂಪನ್ಮೂಲ ಖಾತೆ ಸಿಕ್ಕಿದೆ. ಡಾ.ಕೆ.ಸುಧಾಕರ್ ಅವರಿಗೆ ವೈದ್ಯಕೀಯ ಶಿಕ್ಷಣ ಅಥವಾ ಇಂಧನ ಇಲಾಖೆ ಸಿಗಲಿದೆ ಎಂದು ಹೇಳಲಾಗುತಿತ್ತು. ಆದರೆ ಈಗ ವೈದ್ಯಕೀಯ ಶಿಕ್ಷಣ ಖಾತೆ ಫೈನಲ್ ಆಗಿದೆ ಮಂತ್ರಿಗಳಾಗಿ 10 ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸಿದ್ದರೂ ಇನ್ನು ಖಾತೆ ಹಂಚಿಕೆ ಆಗಿರಲಿಲ್ಲ. ಜಲಸಂಪನ್ಮೂಲ ಖಾತೆ ಸಿಗಬೇಕೆಂದು ಜಾರಕಿಹೊಳಿ ಪಟ್ಟು …

Read More »

7ದಿನದ ಹಸುಗೂಸಿಗೆ ಹೃದಯ ಸಮಸ್ಯೆ – ಜೀರೋ ಟ್ರಾಫಿಕ್‍ನಲ್ಲಿ ಶಿವಮೊಗ್ಗದಿಂದ ಬೆಂಗ್ಳೂರಿಗೆ ರವಾನೆ

ಶಿವಮೊಗ್ಗ: ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ 7 ದಿನದ ಹಸುಗೂಸಿನ ಜೀವ ಉಳಿಸಲು ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಿ ಶಿವಮೊಗ್ಗದಿಂದ ಬೆಂಗಳೂರಿಗೆ ಅಂಬುಲೆನ್ಸ್‌ನಲ್ಲಿ ರವಾನಿಸಲಾಗಿದೆ. ಮೆಗ್ಗಾನ್ ಆಸ್ಪತ್ರೆಯ ವೈದ್ಯರ ಸಲಹೆ ಮೇರೆಗೆ ಶಿವಮೊಗ್ಗದಿಂದ ಜೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಕಂದಮ್ಮನನ್ನು ಅಂಬುಲೆನ್ಸ್‌ನಲ್ಲಿ ಬೆಂಗಳೂರಿಗೆ ಕರೆತರಲಾಗುತ್ತಿದೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಬೇಲಿ ಮಲ್ಲೂರು ಗ್ರಾಮದ ಸ್ವಾಮಿ ಹಾಗೂ ಸುಧಾ ದಂಪತಿಗೆ ಫೆ. 4ರಂದು ಮೆಗ್ಗಾನ್ ಆಸ್ಪತ್ರೆಯಲ್ಲಿ ಗಂಡು ಮಗು ಜನಿಸಿತ್ತು. ಜನನದ ನಂತರ ಮಗುವನ್ನು …

Read More »

ತೋಳ ಗ್ರಾಮದ ನುಗ್ಗಿ ಸುಮಾರು 14 ಜನರಿಗೆ ಕಚ್ಚಿ ಗಂಭೀರ ಗಾಯ.

  ತೋಳ ಗ್ರಾಮದ ನುಗ್ಗಿ ಸುಮಾರು 14 ಜನರಿಗೆ ಕಚ್ಚಿ ಗಂಭೀರ ಗಾಯ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮ ಪಂಚಾಯತ ವ್ಯಾಪ್ತಿಯ ಚಿಲಕರಾಗಿ ಮತ್ತು ಇರಕಲ್ ಗ್ರಾಮಗಳು. ಅಡವಿಯಲ್ಲಿ ಇರಬೇಕಾದ ತೋಳ ಗ್ರಾಮಕ್ಕೆ ನುಗ್ಗಿ ಸುಮಾರು14 ಜನರಿಗೆ ಕಚ್ಚಿದ್ದು ಲಿಂಗಸೂಗೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಸ್ಕಿ ತಾಲೂಕಿನ ಪಾಮನಕಲ್ಲೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಚಿಲಕರಾಗಿ ಹಾಗೂ ಇರಕಲ್ ಗ್ರಾಮದ ಒಟ್ಟು 14 ಜನರಿಗೆ ತೋಳ ಕಚ್ಚಿದ್ದು, …

Read More »

ಕುಮಾರಸ್ವಾಮಿಯವರ ಪುತ್ರ, ನಟ ನಿಖಿಲ್‍ಕುಮಾರಸ್ವಾಮಿ ಅವರ ವಿವಾಹದ ನಿಶ್ಚಿತಾರ್ಥ ಇಂದು ಖಾಸಗಿ ಹೊಟೇಲ್‍ನಲ್ಲಿ ಅದ್ಧೂರಿಯಾಗಿ ನೆರವೇರಿತು.

ಬೆಂಗಳೂರು, ಫೆ.10-ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಶಾಸಕಿ ಅನಿತಾ ಕುಮಾರಸ್ವಾಮಿಯವರ ಪುತ್ರ, ನಟ ನಿಖಿಲ್‍ಕುಮಾರಸ್ವಾಮಿ ಅವರ ವಿವಾಹದ ನಿಶ್ಚಿತಾರ್ಥ ಇಂದು ಖಾಸಗಿ ಹೊಟೇಲ್‍ನಲ್ಲಿ ಅದ್ಧೂರಿಯಾಗಿ ನೆರವೇರಿತು. ಮಾಜಿ ಸಚಿವ ಎಂ.ಕೃಷ್ಣಪ್ಪ ಅವರ ಸಹೋದರನ ಮೊಮ್ಮಗಳಾದ ರೇವತಿ ಅವರೊಂದಿಗೆ ನಿಖಿಲ್‍ಕುಮಾರಸ್ವಾಮಿ ವಿವಾಹದ ನಿಶ್ಚಿತಾರ್ಥವು ಎರಡೂ ಕುಟುಂಬಗಳ ಬಂಧು-ಬಳಗ ಹಾಗೂ ಹಿರಿಯರ ಸಮ್ಮುಖದಲ್ಲಿ ನೆರವೇರಿತು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಸಚಿವ ಎಚ್.ಡಿ.ರೇವಣ್ಣ ಸೇರಿದಂತೆ ಕುಟುಂಬದ ಸದಸ್ಯರು ನಿಶ್ಚಿತಾರ್ಥದಲ್ಲಿ ಭಾಗವಹಿಸಿದ್ದರು.   ವಿವಿಧ …

Read More »

ಯಾವುದೇ ಕ್ಷಣದಲ್ಲಿ ನೂತನ ಸಚಿವರಿಗೆ ಖಾತೆ ಹಂಚಿಕೆ ಸಾಧ್ಯತೆಯಾರಿಗೆ ಯಾವ ಖಾತೆ ಸಾಧ್ಯತೆ?

ಯಾವುದೇ ಕ್ಷಣದಲ್ಲಿ ನೂತನ ಸಚಿವರಿಗೆ ಖಾತೆ ಹಂಚಿಕೆ ಸಾಧ್ಯತೆ ಬೆಂಗಳೂರು,ಫೆ.10- ಸಾಕಷ್ಟು ಕಸರತ್ತು ನಡೆಸಿ ಸಚಿವ ಸಂಪುಟ ವಿಸ್ತರಣೆ ಮಾಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಯಾವುದೇ ಕ್ಷಣದಲ್ಲಿ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಿದ್ದಾರೆ. ಈ ಮೊದಲೇ ತಮ್ಮ ಮಂತ್ರಿ ಮಂಡಲದಲ್ಲಿದ್ದ 17 ಸಚಿವರಿಗೂ ಹೆಚ್ಚುವರಿಯಾಗಿ ಖಾತೆಗಳ ಹಂಚಿಕೆ ಮಾಡಲಾಗಿತ್ತು. ಇದೀಗ ಹೆಚ್ಚುವರಿ ಖಾತೆಗಳನ್ನು ವಾಪಸ್ ಪಡೆದು ನೂತನ ಸಚಿವರಿಗೆ ಹಂಚಿಕೆ ಮಾಡಲಾಗುತ್ತದೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿಗಳೇ ಸ್ಪಷ್ಟನೆ …

Read More »