ಚಿಕ್ಕೋಡಿ: ಮಹಾರಾಷ್ಟ್ರ ಘಟ್ಟ ಪ್ರದೇಶ ಹಾಗೂ ಚಿಕ್ಕೋಡಿ ಉಪವಿಭಾಗದಲ್ಲಿ ಹೆಚ್ಚಾಗಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೃಷ್ಣಾನದಿಗೆ ಅಪಾರ ಪ್ರಮಾಣದ ನೀರು ಹರಿದುಬಂದಿದೆ. ರಾಜಾಪೂರ ಹಾಗೂ ಹಿಪ್ಪರಗಿ ಬ್ಯಾರೆಜ್ಗಳಿಂದ1,21,500 ಕ್ಯೂಸೆಕ್, ಕೊಯ್ನಾ, ಆಲಮಟ್ಟಿ ಜಲಾಶಯಗಳಿಂದ ಕ್ಯೂಸೆಕ್,1,51,000 ಕ್ಯೂಸೆಕ್ ಹಾಗೂ ದೂಧಗಂಗಾ ನದಿಯಿಂದ 11,616 ಕ್ಯೂಸೆಕ್ ಸೇರಿ ಒಟ್ಟು 2,84,116 ಕ್ಯೂಸೆಕ್ ನೀರನ್ನು ಕೃಷ್ಣಾನದಿಗೆ ಬಿಡಲಾಗಿದೆ. ಮಹಾರಾಷ್ಟ್ರದಲ್ಲಿ ಪ್ರದೇಶಗಳ ಮಳೆಯ ಪ್ರಮಾಣ ಕೊಯ್ನಾ – 64 ಮಿ.ಮೀ, ನವಜಾ-67 ಮಿ.ಮೀ, ಮಹಾಬಲೇಶ್ವರ -126 …
Read More »ನಾನು ಮನೆ ಬಿಟ್ಟು ಬರಲ್ಲ: 2 ದಿನದಿಂದ ಛಾವಣಿ ಮೇಲೆ ‘ಬಂಡೆ’ಯಂತೆ ಕೂತ ವೃದ್ಧೆ ಕಲ್ಲಮ್ಮ
ಕಲಬುರಗಿ: ಭೀಮಾ ನದಿಗೆ 5.5 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇದರ ಪರಿಣಾಮವಾಗಿ ಜಿಲ್ಲೆಯ ಫಿರೋಜಾಬಾದ್ಗೆ ಪ್ರವಾಹದ ನೀರು ನುಗ್ಗಿದೆ. ಹಾಗಾಗಿ, ನದಿ ಪಾತ್ರದ ಜನರನ್ನು ಸುರಕ್ಷಿತ ಸ್ಥಳಕ್ಕೆ ತೆರಳಲು ಜಿಲ್ಲಾಡಳಿತ ಮುನ್ಸೂಚನೆ ನೀಡುತ್ತಿದೆ. ಜೊತೆಗೆ, ನದಿ ಪಾತ್ರದ ಹಳ್ಳಿಗಳ ಗ್ರಾಮಸ್ಥರಿಗೆ ಕಾಳಜಿ ಕೇಂದ್ರಕ್ಕೆ ತೆರಳಲು ನೋಡಲ್ ಅಧಿಕಾರಿಗಳು ವಿನಂತಿ ಸಹ ಮಾಡುತ್ತಿದ್ದಾರೆ. ಆದರೆ, ಬಂದಿದ್ದು ಬರಲಿ ನಾನು ಇಲ್ಲೇ ಇರುವೆ …
Read More »ಸತತವಾಗಿ ಸುರಿದ ಮಳೆಯಿಂದ ತಾಲ್ಲೂಕಿನ ರೈತರ ಬೆಳೆದ ಬೆಳೆ ಸಂಪೂರ್ಣ ನೀರುಪಾಲು
ಅಥಣಿ ತಾಲ್ಲೂಕಿನಾದ್ಯಂತ ಸತತವಾಗಿ ಮೂರು ದಿನದಿಂದ ಸುರಿದ ಮಳೆಯಿಂದ ಹಲವು ಕಡೆ ರೈತರು ಬೆಳೆದ ಕಬ್ಬು ,ಮೆಕ್ಕೆಜೋಳ, ಈರುಳ್ಳಿ ನೀರಿನಲ್ಲಿ ನಿಂತು ರೈತರಿಗೆ ತುಂಬಾ ನಷ್ಟವಾಗಿದೆ , ತಾಲ್ಲೂಕಿನ ರಡ್ಡೇರಹಟ್ಟಿ ಗ್ರಾಮದಲ್ಲಿ ಹನುಮಂತ ಚಿತ್ರಟಿ ಇವರು ತಮ್ಮ ಜಮೀನಿನಲ್ಲಿ ಬೆಳೆದಂಥ ಈರುಳ್ಳಿ ಬೆಳೆದು ನೀರು ಪಾಲಾಗಿ ತುಂಬಾ ನಷ್ಟ ಅನುಭವಿಸಿದ್ದಾರೆ ಇದೇ ಸಂದರ್ಭದಲ್ಲಿ ಅವರು ಮಾತನಾಡಿ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಳೆಗೆ ಒಳ್ಳೆಯ ಬೆಲೆ ಇದೆ ಅಂತ ತಾವು ತಮ್ಮ ಎರಡು …
Read More »ರಾಜ್ಯದ ಐದು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಇಂದೂ ಸಹ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಮುಂದುವರೆಸಲಾಗಿದೆ. ಮಹಾರಾಷ್ಟ್ರ ಹಾಗೂ ರಾಜ್ಯದಲ್ಲಿ ಸತತ …
Read More »ಕರ್ನಾಟಕದ ಜಿಲ್ಲೆಗಳು ಕಲಬುರಗಿ ನಿಲ್ಲದ ಮಳೆ, ಬಾರದ ಜನಪ್ರತಿನಿಧಿ, ಕಲಬುರಗಿ ಜನ ಕಂಗಾಲು
ಕಳೆದ ಮೂರು ದಿನಗಳಿಂದ ಸತತವಾಗಿ ಮತ್ತು ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕಲಬುರಗಿ , ಯಾದಗಿರಿ , ಬಾಗಲಕೋಟೆ , ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳ ಬಹಳಷ್ಟು ಪ್ರದೇಶಗಳು ಜಲಾವೃತಗೊಂಡು ನಡುಗಡ್ಡೆಗಳಂತೆ ಗೋಚರಿಸುತ್ತಿವೆ . ಕುಂಭದ್ರೋಣದಿಂದ ಉಳಿದ ಜಿಲ್ಲೆಗಳಿಗಿಂತ ಹೆಚ್ಚು ಪ್ರಭಾವಕ್ಕೊಳಗಾಗಿರುವ ಕಲಬುರಗಿ ಜಿಲ್ಲೆಯಲ್ಲಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ . ಅನೇಕ ಕಡೆ ರಸ್ತೆ ಮತ್ತು ಸೇತುವೆಗಳು ಕೊಚ್ಚಿಹೋಗಿವೆ . ಕಮಲಾಪುರ ಹತ್ತಿರವಿರುವ ಜವಳಗಾ , ಸೇಡಂ ತಾಲುಕಿನಲ್ಲಿರುವ ಸಮಖೇಡ್ ತಾಂಡಾ …
Read More »ರನ್ ಮಳೆ ಹರಿಸುವ ಶಾರ್ಜಾದಲ್ಲಿ ಕೊಹ್ಲಿ ಬಾಯ್ಸ್ ಎಡವಿದ್ದು ಎಲ್ಲಿ?
ಶಾರ್ಜಾ ಪಂದ್ಯ RCB ಹುಡುಗ್ರು ಮತ್ತು ಕನ್ನಡಿಗರ ನಡುವಿನ ರಣ ರೋಚಕ ಕಾದಾಟವಾಗಿ ಮಾರ್ಪಟ್ಟಿತ್ತು. ರಾಯಲ್ ಹುಡುಗರಿಗೆ ಪಂಜಾಬ್ ವಿರುದ್ಧದ ಪಂದ್ಯ ಪ್ರತಿಷ್ಠೆಯ ಪಂದ್ಯವಾಗಿತ್ತು. ಕಾರಣ ಇದೇ ಸೀಸನ್ನಲ್ಲಿ ಕಳೆದ ಬಾರಿ ರಾಹುಲ್ ಹುಡುಗರ ಜೊತೆ ಸೆಣಸಾಡಿದ್ದ ಕೊಹ್ಲಿ ಆರ್ಮಿ ಹೀನಾಯವಾಗಿ ಮುಗ್ಗರಿಸಿತ್ತು. ಹೀಗಾಗಿ, ಶಾರ್ಜಾ ಸಮರದಲ್ಲಿ ಪಂಜಾಬ್ಗೆ ಸೋಲಿನ ಗುನ್ನಾ ನೀಡಬೇಕೆಂದುಕೊಂಡಿದ್ದ RCB ತಂಡ ಮತ್ತದೇ ಮಿಸ್ಟೇಕ್ ಮಾಡಿದೆ. ರನ್ಮಳೆ ಹರಿಸುವ ಶಾರ್ಜಾದಲ್ಲಿ ಕೊಹ್ಲಿ ಬಾಯ್ಸ್ ಎಡವಿದ್ದೆಲ್ಲಿ? ದುಬೈನಲ್ಲಿ …
Read More »ದಿನ ಭವಿಷ್ಯ 16/10/2020
ಮೇಷ: ಮಾನಸಿಕ ವ್ಯಥೆ, ಸಮಸ್ಯೆಗಳನ್ನು ಎಳೆದುಕೊಳ್ಳುವ ಸಾಧ್ಯತೆ, ಈಶ್ವರನಿಗೆ ಬಿಲ್ವಪತ್ರೆ ಸಮರ್ಪಿಸಿ ವೃಷಭ: ಮನಸ್ಸಿಗೆ ಸಮಾಧಾನ, ಸ್ತ್ರೀಯರಿಗೆ ಅನುಕೂಲದ ದಿನ, ಹಣ ವ್ಯಯವಿದೆ, ಸೂರ್ಯ ಪ್ರಾರ್ಥನೆ ಮಾಡಿ ಮಿಥುನ: ಸಮಾಧಾನದ ದಿನ, ಕುಟುಂಬದಲ್ಲಿ ಅನುಕೂಲದ ದಿನ, ದಾಂಪತ್ಯದಲ್ಲಿ ಕೊಂಚ ಏರುಪೇರು, ಅರ್ಧನಾರೀಶ್ವರ ಪ್ರಾರ್ಥನೆ ಮಾಡಿ ಕಟಕ: ಭಾಗ್ಯ ಸಮೃದ್ಧಿ, ಸಮಾಧಾನದ ದಿನ, ಕೊಂಚ ಕಿರಿಕಿರಿ ಅನುಭವಿಸುತ್ತೀರಿ, ಅಮ್ಮನವರಿಗೆ ಕ್ಷೀರಾಭಿಷೇಕ ಮಾಡಿ ಸಿಂಹ: ಆರೋಗ್ಯದಲ್ಲಿ ಸದೃಢತೆ, ಮಕ್ಕಳ ಬಗ್ಗೆ ಎಚ್ಚರಿಕೆ ಇರಲಿ, ಕಾರ್ಯ ಸಿದ್ಧಿ, ಆದಿತ್ಯ ಹೃದಯ ಸ್ತೋತ್ರ …
Read More »ಕಲ್ಲು ಗಣಿಗಾರಿಕೆ ಮಾಫಿಯಾ ವಿರುದ್ಧ ತೊಡೆ ತಟ್ಟಿದ್ದ KAS ಅಧಿಕಾರಿ ಟ್ರಾನ್ಸ್ಫರ್!
ದಕ್ಷಿಣ ಕನ್ನಡ: ಭೂ ಮಾಫಿಯ ವಿರುದ್ಧ ತೊಡೆ ತಟ್ಟಿದ್ದ KAS ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ ಎಂಬ ಆರೋಪ ಈ ಹಿಂದೆ ಕೇಳಿಬಂದಿತ್ತು. ಇದೀಗ, ಅಧಿಕಾರಿಯನ್ನು ವರ್ಗಾವಣೆ ಮಾಡಿಸಲು ಯತ್ನಿಸುತ್ತಿದ್ದ ಪ್ರಭಾವಿಗಳಿಗೆ ಕೋರ್ಟ್ನ ಆದೇಶವೊಂದು ಪರೋಕ್ಷವಾಗಿ ವರದಾನದಂತೆ ಪರಿಣಮಿಸಿದೆ ಎಂದು ಹೇಳಲಾಗಿದೆ. ಮಂಗಳೂರು ಉಪವಿಭಾಗಾಧಿಕಾರಿಯಾಗಿದ್ದ ಮದನ್ ಮೋಹನ್ರನ್ನು ವರ್ಗಾವಣೆ ಮಾಡಲಾಗಿದೆ. ಮದನ್ ಇತ್ತೀಚೆಗೆ ನಗರದ ಮುಡಿಪು ಬಳಿ ಕೆಂಪು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳದ ಮೇಲೆ ದಾಳಿ ಮಾಡಿದ್ದರು. ಈ ದಾಳಿ ಸಾಕಷ್ಟು …
Read More »ಶಾಂತವಾಗದ ವರುಣನ ಪ್ರತಾಪ, ಸೊಗಲ ಸೋಮೇಶ್ವರನಿಗೆ ವರುಣನ ದಿಗ್ಬಂಧನ
ಬೆಳಗಾವಿ: ವರುಣನ ರೌದ್ರಾವತಾರಕ್ಕೆ ಕರುನಾಡು ಕಂಗಾಲಾಗಿದೆ. ಕ್ಷಣ ಕ್ಷಣಕ್ಕೂ ವರುಣನ ಅವಾಂತರ ಹೆಚ್ಚಾಗ್ತಿದೆ. ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರಿ ಮಳೆಗೆ ಸೊಗಲ ಸೋಮೇಶ್ವರ ದೇವಸ್ಥಾನ ಮುಳುಗಿದೆ. ಭಾರಿ ಮಳೆಯಿಂದಾಗಿ ನಿನ್ನೆ ಸಂಜೆ ದೇವಸ್ಥಾನದ ಗರ್ಭಗುಡಿಗೆ ನೀರು ನುಗ್ಗಿತ್ತು. ಅಪಾರ ಪ್ರಮಾಣದ ನೀರು ನುಗ್ಗಿದ ಹಿನ್ನೆಲೆಯಲ್ಲಿ ಸೋಮೇಶ್ವರನ ಮೂರ್ತಿ ಕೂಡ ಭಾಗಶಃ ಜಲಾವೃತಗೊಂಡಿದೆ. ದೇವಸ್ಥಾನದ ಹೊರ ಭಾಗದಲ್ಲಿ ಮಳೆ ನೀರು ಝರಿಯಂತೆ ಉಕ್ಕಿ ಹರಿಯುತ್ತಿದೆ. ದೇವಸ್ಥಾನಕ್ಕೆ ನೀರು ನುಗ್ಗಿದ ದೃಶ್ಯ ಸಾಮಾಜಿಕ …
Read More »ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ರೈಲ್ವೆ ಟಿಕೆಟ್ ಕೌಂಟರ್ ನಾಳೆಯಿಂದ ಕಾರ್ಯಾರಂಭ, ಎಲ್ಲೆಲ್ಲಿ?
ಬೆಂಗಳೂರು: ರಾಜ್ಯದ ರೈಲು ಪ್ರಯಾಣಿಕರ ಅನುಕೂಲಕ್ಕಾಗಿ ನೈರುತ್ಯ ರೈಲ್ವೇ ವಿಭಾಗವು ಹೆಚ್ಚುವರಿ ಟಿಕೆಟ್ ಕಾಯ್ದಿರಿಸುವ ಕೇಂದ್ರಗಳನ್ನು ಕಾರ್ಯಾರಂಭಗೊಳಿಸಲಿದೆ. ಇವೆಲ್ಲಾ ಕೇಂದ್ರಗಳು ನಾಳೆಯಿಂದ ಕಾರ್ಯಾರಂಭವಾಗಲಿದೆ. ಬೆಂಗಳೂರಿನಲ್ಲಿ ಮಲ್ಲೇಶ್ವರ, ಚಿಕ್ಕಬಾಣಾವರ, ಬಾಣಸವಾಡಿ, ಬೆಂಗಳೂರು ಪೂರ್ವ, ಕಾರ್ಮೆಲರಾಂ ಮತ್ತು ವೈಟ್ಫೀಲ್ಡ್ ರೈಲು ನಿಲ್ದಾಣಗಳಲ್ಲಿ ಈ ಹೆಚ್ಚುವರಿ ಕೌಂಟರ್ಗಳನ್ನು ಕಾರ್ಯಾರಂಭಗೊಳಿಸಲಾಗುವುದು. ಜೊತೆಗೆ, ಕುಪ್ಪಂ, ಪೆನುಕೊಂಡ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಗೌರಿಬಿದನೂರು ಮತ್ತು ಮದ್ದೂರು ರೈಲ್ವೇ ನಿಲ್ದಾಣಗಳಲ್ಲಿ ಸಹ ಈ ಕೇಂದ್ರಗಳನ್ನು ಕಾರ್ಯಾರಂಭಗೊಳಿಸಲಾಗುವುದು. ಅಕ್ಟೋಬರ್ 20 ರಿಂದ ನವೆಂಬರ್ 30ರವರೆಗೆ …
Read More »