Breaking News

ಭಾರತದಲ್ಲಿ ಕೊರೊನಾಗೆ 196 ವೈದ್ಯರ ಸಾವು – ಪ್ರಧಾನಿ ಮೋದಿಗೆ ಐಎಂಎ ಪತ್ರ

ನವದೆಹಲಿ: ಕೊರೊನಾ ಸೋಂಕಿನಿಂದ ಈವರೆಗೂ ಭಾರತದಲ್ಲಿ 196 ವೈದ್ಯರು ಪ್ರಾಣ ಕಳೆದುಕೊಂಡಿದ್ದು, ಈ ವಿಚಾರದ ಬಗ್ಗೆ ಗಮನ ಹರಿಸುವಂತೆ ಆಗ್ರಹಿಸಿ ಭಾರತೀಯ ವೈದ್ಯಕೀಯ ಸಂಘ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದೆ. ಐಎಂಎ ಬರೆದ ಪತ್ರದಲ್ಲಿ ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ವೈದ್ಯರ ಸಾವುಗಳು ಹೆಚ್ಚುತ್ತಿರುವ ಬಗ್ಗೆ ಕಳವಳಗಳ ವ್ಯಕ್ತಪಡಿಸಲಾಗಿದೆ. ಕೊರೊನಾದಿಂದಾಗಿ ವೈದ್ಯರು ಸೋಂಕಿಗೆ ಒಳಗಾಗುವ ಮತ್ತು ಪ್ರಾಣ ಕಳೆದುಕೊಳ್ಳುವ ಪ್ರಕರಣಗಳು ಹೆಚ್ಚುತ್ತಿವೆ. ಅವರಲ್ಲಿ ಅನೇಕ ಸಾಮಾನ್ಯ ವೈದ್ಯರಿದ್ದಾರೆ ಎಂದು …

Read More »

ಪ್ರಾಣದ ಹಂಗು ತೊರೆದು ಕೊಚ್ಚಿ ಹೋಗುತ್ತಿದ್ದ ಕಾಲು ಸೇತುವೆ ಕಟ್ಟಿ, ಗಟ್ಟಿಗೊಳಿಸಿದ ಗ್ರಾಮಸ್ಥ

ಮಂಗಳೂರು: ಪಶ್ಚಿಮ ಘಟ್ಟ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಜಿಲ್ಲೆಯ ಎಲ್ಲ ಜೀವನದಿಗಳು ಉಕ್ಕಿ ಹರಿಯುತ್ತಿವೆ. ಮಳೆ, ಪ್ರವಾಹದಿಂದ ಜನ ತಮ್ಮ ಬದುಕು ಕಟ್ಟಿಕೊಳ್ಳಲು ಹರ ಸಾಹಸ ಪಡುತ್ತಿದ್ದಾರೆ. ಅದೇ ರೀತಿ ಕೊಚ್ಚಿ ಹೋಗುತ್ತಿದ್ದ ಸೇತುವೆಯನ್ನು ಪ್ರಾಣದ ಹಂಗು ತೊರೆದು ಗ್ರಾಮಸ್ಥರೊಬ್ಬರು ಕಟ್ಟಿ ನಿಲ್ಲಿಸಿದ್ದಾರೆದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ದಿಡುಪೆಯಲ್ಲಿ ಜನರೇ ನಿರ್ಮಿಸಿದ್ದ ಕಾಲು ಸೇತುವೆಯನ್ನು ಉಳಿಸಿಕೊಳ್ಳಲು ಗ್ರಾಮಸ್ಥರೊಬ್ಬರು ತಮ್ಮ ಪ್ರಾಣವನ್ನೇ ಒತ್ತೆ ಇಟ್ಟಿದ್ದಾರೆ. ರಭಸವಾಗಿ …

Read More »

ಅತ್ಯಾಚಾರಕ್ಕೊಳಗಾಗಿ ಆತ್ಮಹತ್ಯೆಗೆ ಶರಣಾದ ಬಾಲಕಿಯ ಗ್ರಾಮಕ್ಕೆ ತೆರಳಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ

ಧಾರವಾಡ: ಅತ್ಯಾಚಾರಕ್ಕೊಳಗಾಗಿ ಆತ್ಮಹತ್ಯೆಗೆ ಶರಣಾದ ಬಾಲಕಿಯ ಗ್ರಾಮಕ್ಕೆ ತೆರಳಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತೆರಳಿ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್‍ರ ಸಚಿವರು, ಬಾಲಕಿಗೆ ನ್ಯಾಯ ಕೊಡಿಸಲು ಎಲ್ಲಾ ಕ್ರಮ ಕೈಗೊಳ್ಳಲಾಗಿದೆ. ಆರೋಪಿಯನ್ನು ಪೊಲೀಸ್ ಇಲಾಖೆ ಬಂಧಿಸಿದೆ. ಸಂತ್ರಸ್ತೆಯ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. ಸಂತ್ರತ್ತೆಯ ಕುಟುಂಬಕ್ಕೆ ಪರಿಹಾರ ಧನ ನೀಡಲು ನಿಯಮಾವಳಿಗಳನ್ನು ಪರಿಶೀಲಿಸಲಾಗುವುದು, …

Read More »

ನಟ ಸಂಜಯ್ ದತ್ ಆಸ್ಪತ್ರೆಗೆ ದಾಖಲು-

ಮುಂಬೈ: ಎದೆಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಟ ಸಂಜಯ್ ದತ್ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಸಂಜಯ್ ದತ್ ಅವರನ್ನು ತೀವ್ರನಿಘಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಸಂಜಯ್ ದತ್ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಸಂಜಯ್ ದತ್ ಅವರನ್ನು ಆಂಟಿಜಿನ್ ಕಿಟ್ ಬಳಸಿ ಕೊರೊನಾ ಪೆರೀಕ್ಷೆಗೆ ಒಳಪಡಿಸಲಾಗಿತ್ತು. ವರದಿ ನೆಗೆಟಿವ್ ಬಂದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಗಂಟಲು ದ್ರವದ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಜುಲೈ …

Read More »

ವಿಮಾನ ದುರಂತದಲ್ಲಿ ಮಡಿದ ಪೈಲಟ್‍ಗೆ ಏರ್ ಇಂಡಿಯಾ ಎಕ್ಸ್‍ ಪ್ರೆಸ್ ಸಿಬ್ಬಂದಿ ಅಂತಿಮ ನಮನ

ದೆಹಲಿ/ಲಕ್ನೋ: ಕೇರಳದ ಕೋಯಿಕ್ಕೋಡ್ ಕರಿಪುರ ವಿಮಾನ ದುರಂತದಲ್ಲಿ ಮಡಿದ ಪೈಲಟ್‍ಗೆ ಏರ್ ಇಂಡಿಯಾ ಎಕ್ಸ್‍ ಪ್ರೆಸ್ ಸಿಬ್ಬಂದಿ ಅಂತಿಮ ನಮನ ಸಲ್ಲಿಸಿದರು.ಶುಕ್ರವಾರ ರಾತ್ರಿ ನಡೆದ ದುರಂತದಲ್ಲಿ ಪೈಲಟ್ ಅಖಿಲೇಶ್ ಕುಮಾರ್ ಮೃತಪಟ್ಟಿದ್ದರು. ಶನಿವಾರ ರಾತ್ರಿ ಏರ್ ಇಂಡಿಯಾ ಸಿಬ್ಬಂದಿ ಅಂತಿಮ ನಮನ ಸಲ್ಲಿಸಿ, ಮೃತದೇಹ ಇಂದು ಬೆಳಗ್ಗೆ ಹುಟ್ಟೂರು ಉತ್ತರ ಪ್ರದೇಶದ ಮಥುರಾಗೆ ತಲುಪಿದೆ. ಕೊರೊನಾ ವೈರಸ್ ಲಾಕ್‍ಡೌನ್ ಹಿನ್ನೆಲೆಯಲ್ಲಿ ದುಬೈನಲ್ಲಿ ಸಿಲುಕಿದ್ದ ಭಾರತೀಯರನ್ನು ಶುಕ್ರವಾರ ಏರ್ ಇಂಡಿಯಾ ವಿಮಾನ …

Read More »

ಕೊರೊನಾ ಕರ್ತವ್ಯಕ್ಕೆ ಬಾರದ ನೌಕರರಿಗೆ ಶಾಕ್

ಬೆಂಗಳೂರು: ಕೊರೋನಾ ಕರ್ತವ್ಯಕ್ಕೆ ನಿಯೋಜಿತರಾದ ನೌಕರರು ಕೆಲಸಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನೇಕರು ಕೊರೋನಾ ಕೆಲಸಕ್ಕೆ ಭಯದಿಂದ ಬರುತ್ತಿಲ್ಲ. ಅಂತಹ ನೌಕರರಿಗೆ ನೋಟೀಸ್ ನೀಡಲಾಗಿದ್ದು, ಅವರಿಂದ ಉತ್ತರ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಕೊರೋನಾ ಕೆಲಸಕ್ಕೆ ಬಾರದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಕೊರೋನಾಗೆ ಆತಂಕಪಡುವ ಅಗತ್ಯವಿಲ್ಲ. ಕೊರೋನಾ ವಾರಿಯರ್ಸ್ ಬೇಡಿಕೆಗೆ ಸ್ಪಂದಿಸಲಾಗಿದೆ ಎಂದು ಹೇಳಿದ್ದಾರೆ. …

Read More »

ಪಾಸಿಟಿವ್‌ ಬಂದರೂ ಜೀವಕ್ಕೆ ತೊಂದರೆ ಇಲ್ಲ

ಬಂಗಾರಪೇಟೆ: ಕೋವಿಡ್ ಪಾಸಿಟಿವ್‌ ಇದ್ದರೂ ಪ್ರಾಣಕ್ಕೆ ಯಾವುದೇ ತೊಂದರೆ ಇಲ್ಲ. ಜಿಲ್ಲೆಯಲ್ಲಿ ಇದುವರೆಗೂ 850ಕ್ಕೂ ಹೆಚ್ಚು ಜನರು ಗುಣಮುಖರಾಗಿ ಮನೆಗಳಿಗೆ ತೆರಳಿದ್ದಾರೆ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಸೋಂಕಿತರಿಗೆ ಧೈರ್ಯ ತುಂಬಿದರು.   ತಾಲೂಕಿನ ಬೂದಿಕೋಟೆ ಹೋಬಳಿಯ ಎಳೇಸಂದ್ರ ವಸತಿ ಶಾಲೆಯಲ್ಲಿ ಪ್ರಾರಂಭಿಸಲಾದ ಕೋವಿಡ್‌ ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್ ಸೋಂಕಿತರ ಜೊತೆ ಮಾತುಕತೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಕೋವಿಡ್ ಪಾಸಿಟಿವ್‌ ಬಂದ ಮೇಲೆ ಮರಣ ಗ್ಯಾರಂಟಿ ಎನ್ನುವುದನ್ನು ತಮ್ಮ ಮನಸ್ಸಿನಿಂದ …

Read More »

ಮೈದುಂಬಿ ಹರಿಯುತ್ತಿವೆ..ಗೋಕಾಕ್..ಗೋಡಚಿನಮಲ್ಕಿ ಫಾಲ್ಸ..ಪ್ರವಾಸಿಗರ ಕೈ ಬೀಸಿ ಕರೆಯುತ್ತಿವೆ..!

ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಗಡಿ ಜಿಲ್ಲೆ ಬೆಳಗಾವಿಯ ನದಿಗಳು ತುಂಬಿ ಹರಿಯುತ್ತಿದ್ದು. ಮತ್ತೆ ಪ್ರವಾಹಭೀತಿ ಎದುರಾಗಿದೆ. ಅಷ್ಟೇ ಅಲ್ಲದೇ ರಾಜ್ಯದ ಎರಡನೇ ಅತೀ ದೊಡ್ಡ ಜಲಪಾತ ಎಂದು ಕರೆಯುವ ಗೋಕಾಕ್ ಫಾಲ್ಸ್ ಮತ್ತು ಗೋಡಚಿನಮಲ್ಕಿ ಫಾಲ್ಸ ಕೂಡ ನಯನಮನೋಹರವಾಗಿ ಹರಿಯುತ್ತಿದೆ. ಮತ್ತು ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಹೌದು 180ಅಡಿಯಷ್ಟು ಎತ್ತರದಿಂದ ನೀರು ಧುಮ್ಮುಕ್ಕಿ ಬೀಳುತ್ತಿರುವ ಗೋಕಾಕ ಜಲಪಾತ ಈಗ ನೋಡುವುದೇ ಕಣ್ಣಿಗೆ ಹಬ್ಬ. ಮಳೆಗಾಲದ …

Read More »

ರಸ್ತೆಗೆ ನುಗ್ಗಿದ ಕಬಿನಿ ನೀರು; ಮೈಸೂರು ಊಟಿ ಹೆದ್ದಾರಿ ಬಂದ್​

ಮೈಸೂರು: ಕಬಿನಿ ನೀರು ಹೆದ್ದಾರಿಗೆ ಮೈಸೂರು ಊಟಿ ಹೆದ್ದಾರಿ ನುಗ್ಗಿದ ಹಿನ್ನೆಲೆಯಲ್ಲಿ ಪೊಲೀಸರು ಈ ಹೆದ್ದಾರಿಯನ್ನು ಬಂದ್​ ಮಾಡಿದ್ದಾರೆ. ಕಬಿನಿಜಲಾಶಯದಿಂದ ಹೆಚ್ಚಿನ ಪ್ರಮಾನದಲ್ಲಿ ನೀರನ್ನು ಬಿಡುಗಡೆ ಮಾಡಲಾಗಿದ್ದು, ಆ ನೀರು ಹೆದ್ದಾರಿಗೆ ನುಗ್ಗಿದೆ. ಇದರಿಂದಾಗಿ ನಂಜನಗೂಡಿನ ಮೂಲೆ ಮಠದ ಬಳಿ ಸಂಚಾರ ಅಸ್ತವ್ಯಸ್ತ ಗೊಂಡಿತ್ತು, ಊಟಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಕೆರೆಯಂತಾಗಿದೆ.   ಈ ಹಿನ್ನೆಲೆಯಲ್ಲಿ ಪೊಲೀಸರು ನಂಜನಗೂಡು ಮೈಸೂರು ನಡುವೆ ಮಾರ್ಗ ಬದಲಾವಣೆ ಮಾಡಿ ಆ ಹೆದ್ದಾರಿ ಬಂದ್​ …

Read More »

ಪ್ರವಾಹ ನಿಯಂತ್ರಣಕ್ಕೆ 5 ಪರಿಹಾರ ಕೇಂದ್ರಗಳ ಪ್ರಾರಂಭ, 25 ಬೋಟ್​ ವ್ಯವಸ್ಥೆ: ಬೆಳಗಾವಿ ಡಿ.ಸಿ

ಬೆಳಗಾವಿ: ಕಳೆದ ಬಾರಿ ಪ್ರವಾಹದ ಹಿನ್ನೆಲೆ ನಮಗೆ ಅನುಭವ ಇದೆ. ಹೀಗಾಗಿ ಈ ಬಾರಿ ಪ್ರವಾಹ ನಿಯಂತ್ರಣಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ್​ ತಿಳಿಸಿದ್ದಾರೆ. ಗ್ರಾಮ, ತಾಲೂಕು ಮಟ್ಟದಲ್ಲಿ ನೋಡಲ್ ಅಧಿಕಾರಿಗಳ ನೇಮಕ ಮಾಡಲಾಗಿದೆ. ಸದ್ಯ ಕೃಷ್ಣಾ ನದಿಯಲ್ಲಿ 1 ಲಕ್ಷ 55 ಸಾವಿರ ಕ್ಯೂಸೆಕ್​​​ ಒಳಹರಿವು ಇದ್ದು, ಅದು 2.5ಲಕ್ಷ ಕ್ಯೂಸೆಕ್​​​ಗೆ ಏರಿಕೆಯಾದ್ರೆ ಮಾತ್ರ ಜಮೀನು- ಮನೆಗೆ ನೀರು ನುಗ್ಗುವ ಆತಂಕ ಇದೆ. …

Read More »