Breaking News

ಮೋಬೈಲ್ ಖರೀದಿ ಮಾಡಲು ಕಿವಿಯೊಲೆ ಮಾರಿದ ಮಹಾತಾಯಿಯ ಸಂಕಷ್ಟಕ್ಕೆ ಬೆಳಗಾವಿಯ ಬಿಜೆಪಿ ನಾಯಕನೊಬ್ಬ ಸ್ಪಂದಿಸಿ

ಬೆಳಗಾವಿ- ದೇವದಾಸಿ ಅಮ್ಮ ಈ ಅಮ್ಮನಿಗೆ ಇಬ್ಬರು ಮಕ್ಕಳು,ತಗಡಿನ ಸೆಡ್ಡಿನಲ್ಲಿ ವಾಸ,ಮಗಳ ಆನ್ ಲೈನ್ ಕ್ಲಾಸಿಗೆ ಮೋಬೈಲ್ ಖರೀದಿ ಮಾಡಲು ಕಿವಿಯೊಲೆ ಮಾರಿದ ಮಹಾತಾಯಿಯ ಸಂಕಷ್ಟಕ್ಕೆ ಬೆಳಗಾವಿಯ ಬಿಜೆಪಿ ನಾಯಕನೊಬ್ಬ ಸ್ಪಂದಿಸಿ ಬೆಳಗಾವಿಯಲ್ಲಿ ಮಾನವೀಯತೆಯ ಶಿಲನ್ಯಾಸ ಮಾಡಿದ ಅಪರೂಪದ ಪ್ರಸಂಗ ಬೆಳಗಾವಿಯಲ್ಲಿ ನಡೆಯಿತು ಇಡೀ ದೇಶವೇ ಶ್ರೀರಾಮ ಮಂದಿರದ ಶಿಲನ್ಯಾಸ ಕಾರ್ಯಕ್ರಮ ದಲ್ಲಿ ಮುಳುಗಿರುವಾಗ ಬೆಳಗಾವಿಯ ವೀರೇಶ ಕಿವಡಸಣ್ಣವರ ಸಂಕಷ್ಟದಲ್ಲಿದ್ದ ಆ ದೇವದಾಸಿ ಮಹಾತಾಯಿಗೆ ಹೊಸ ಕಿವಿಯೊಲೆ ಕೊಡಿಸಿ,ಅಗತ್ಯ ಸಾಮಗ್ರಿಗಳನ್ನು …

Read More »

ಖಾಸಗಿ ಆಸ್ಪತ್ರೆಗಳು ಕೋವೀಡ್ ಚಿಕಿತ್ಸೆ ನೀಡುವ ವಿಷಯದಲ್ಲಿ ಹೆಚ್ಚು ಹಣ ಪಡೆಯುತ್ತಿವೆ ಎನ್ನುವ ದೂರುಗಳು ಕೇಳಿ ಬಂದಿವೆ,

ಬೆಳಗಾವಿ- ಬೆಳಗಾವಿಯ ಕೆಲವು ಖಾಸಗಿ ಆಸ್ಪತ್ರೆಗಳು ಕೋವೀಡ್ ಚಿಕಿತ್ಸೆ ನೀಡುವ ವಿಷಯದಲ್ಲಿ ಹೆಚ್ಚು ಹಣ ಪಡೆಯುತ್ತಿವೆ ಎನ್ನುವ ದೂರುಗಳು ಕೇಳಿ ಬಂದಿವೆ,ಯಾವುದೇ ಮುಲಾಜಿಲ್ಲದೇ ಹೆಚ್ಚಿನ ಬಿಲ್ ಪಡೆಯುತ್ತಿರುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಭರವಸೆ ನೀಡಿದ್ದಾರೆ. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಜಿಲ್ಲೆಯ ಎಲ್ಲ ಇಲಾಖೆಗಳ ಅಧಿಕಾರಿಗಳ ಜೊತೆಗೆ ಕೋವೀಡ್ ನಿಯಂತ್ರಣ,ಮತ್ತು ಪ್ರವಾಹ ನಿರ್ವಹಣೆಯ ಕುರಿತು ಪ್ರಗತಿ ಪರಶೀಲನೆ ನಡೆಸಿದ …

Read More »

ದೇಶದ ಮೊದಲ ಕಿಸಾನ್ ರೈಲಿಗೆ ಚಾಲನೆ!:

ದೇಶದ ಮೊದಲ ಕಿಸಾನ್ ರೈಲಿಗೆ ಚಾಲನೆ! ಮಹಾರಾಷ್ಟ್ರದ ದೇವಲಾಲಿ ಮತ್ತು ಬಿಹಾರದ ದಾನಾಪುರ ನಡುವೆ ಸಂಚರಿಸಲಿರುವ ಮೊದಲ ಕಿಸಾನ್ ರೈಲಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ, ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರ ನೇತೃತ್ವದಲ್ಲಿ ಚಾಲನೆ ನೀಡಲಾಯಿತು. ಕಿಸಾನ್ ರೈಲು ಕೃಷಿ ಕ್ಷೇತ್ರದ ಪ್ರಗತಿಗೆ ಮತ್ತು ರೈತರ ಬೆಳೆಗೆ ನ್ಯಾಯಯುತ ದರ ಒದಗಿಸಲು ಹೆಚ್ಚು ಸಹಕಾರಿಯಾಗಲಿದೆ. ಹಾಗೂ ದೇಶದ ಮೂಲೆ‌ಮೂಲೆಗಳಿಗೆ ಕೃಷಿ ಉತ್ಪನ್ನಗಳ ಸುಗಮ ಸಾಗಾಣಿಕೆಗೆ ಅನುಕೂಲ ಕಲ್ಪಿಸಲು …

Read More »

ಪ್ರವಾಹ ಮತ್ತು ಕೋವಿಡ್-೧೯ ನಿಯಂತ್ರಣ: ಪರಿಶೀಲನಾ ಸಭೆ

ಪ್ರವಾಹ ಮತ್ತು ಕೋವಿಡ್-೧೯ ನಿಯಂತ್ರಣ: ಪರಿಶೀಲನಾ ಸಭೆ ನೀರು ಬಿಡುಗಡೆ ಸಮನ್ವಯತೆಗೆ ಅಧಿಕಾರಿ ನಿಯೋಜನೆ: ಸಚಿವ ಜಾರಕಿಹೊಳಿ ಬೆಳಗಾವಿ, : ಜಲಾಶಯಗಳಲ್ಲಿ ನೀರು ಪ್ರಮಾಣ ಮತ್ತು ಬಿಡುಗಡೆಗೆ ಸಂಬಂಧಿಸಿದಂತೆ ಮಾಹಿತಿ ವಿನಿಮಯ ಮತ್ತಿತರ ಸಮನ್ವಯ ಸಾಧಿಸಲು ರಾಜ್ಯದ ಒಬ್ಬ ಅಧಿಕಾರಿಯನ್ನು ಮಹಾರಾಷ್ಟ್ರದ ಜಲಾಶಯಗಳಿಗೆ ಹಾಗೂ ಅಲ್ಲಿನ ಅಧಿಕಾರಿಗಳು ಇಲ್ಲಿನ ಜಲಾಶಯಗಳಿಗೆ ನಿಯೋಜಿಸಲು ಕ್ರಮ ಕೈಗೊಳ್ಳಬೇಕು ಎಂದು ಜಲಸಂಪನ್ಮೂಲ ಇಲಾಖೆಯ ಸಚಿವರಾದ ರಮೇಶ್ ಜಾರಕಿಹೊಳಿ ಸೂಚನೆ ನೀಡಿದರು. ಕೋವಿಡ್-೧೯ ನಿಯಂತ್ರಣ ಹಾಗೂ …

Read More »

ಮಡಿಕೇರಿ -ಮೈಸೂರು ರಸ್ತೆ ಸಂಪರ್ಕ ಬಂದ್

ಮಡಿಕೇರಿ/ಮೈಸೂರು: ಕೊಡಗಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು ಮಡಿಕೇರಿ – ಮೈಸೂರು ರಸ್ತೆ ಸಂಪರ್ಕ ಕಡಿತಗೊಂಡಿದೆ. ಕುಶಾಲನಗರ ಬಳಿಯ ರಸ್ತೆಯ ಮೇಲೆ ಭಾರೀ ಪ್ರಮಾಣದಲ್ಲಿ ನೀರು ಹರಿಯುತ್ತಿರುವ ಕಾರಣ ಹೆದ್ದಾರಿ ಜಲಾವೃತವಾಗಿದೆ. ಹೆದ್ದಾರಿ ಬಂದ್‌ ಆಗಿರುವ ಕಾರಣ ಎರಡು ಕಡೆ ವಾಹನಗಳು ಸಾಲಾಗಿ ನಿಂತಿವೆ.ಭಾರೀ ಮಳೆಯಿಂದ ಸೂತ್ತೂರು ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಸೂತ್ತೂರು ಕ್ಷೇತ್ರದ ಸುತ್ತ ಮುತ್ತ ತೋಟ ಜಮೀನಿಗೆ ನೀರು ನುಗ್ಗಿದೆ.ಕಬಿನಿ ಡ್ಯಾಂನಿಂದ ನದಿಗೆ 50ಸಾವಿರ …

Read More »

ರಾಜ್ಯದ ವಕ್ಫ್ ಬೋರ್ಡ್ ಅಧ್ಯಕ್ಷ, ಮುಸ್ಲಿಂ ಸಮಾಜ ಹಿರಿಯ ನಾಯಕ ಡಾ.ಮೊಹಮ್ಮದ್ ಯೂಸುಫ್ ಇಂದು ಮುಂಜಾನೆ ನಿಧನರಾಗಿದ್ದಾರೆ

ಬೆಂಗಳೂರು: ರಾಜ್ಯದ ವಕ್ಫ್ ಬೋರ್ಡ್ ಅಧ್ಯಕ್ಷ, ಮುಸ್ಲಿಂ ಸಮಾಜ ಹಿರಿಯ ನಾಯಕ ಡಾ.ಮೊಹಮ್ಮದ್ ಯೂಸುಫ್ ಇಂದು ಮುಂಜಾನೆ ನಿಧನರಾಗಿದ್ದಾರೆ. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಯೂಸುಫ್‌ ಚಿಕಿತ್ಸೆ ಫಲಕಾರಿಯಾಗದೇ ಮಣಿಪಾಲ ಆಸ್ಪತ್ರೆಯಲ್ಲಿ ಬೆಳಗ್ಗೆ 3 ಗಂಟೆಗೆ ಕೊನೆಯುಸಿರೆಳೆದಿದ್ದಾರೆ. ನಿಧನಕ್ಕೆ ಸಿಎಂ ಯಡಿಯೂರಪ್ಪ, ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ. ಕರ್ನಾಟಕ ವಕ್ಫ್ ಬೋರ್ಡ್ ರಾಜ್ಯ ಅಧ್ಯಕ್ಷರು, ಸಮಾಜದ ಮುಖಂಡರೂ ಆಗಿದ್ದ ಜನಾಬ್ ಡಾ. ಮೊಹಮ್ಮದ್ ಯೂಸುಫ್ ರವರು ವಿಧಿವಶರಾದ ಸುದ್ದಿ …

Read More »

ಬೆಂಗಳೂರು: ಸೋಮವಾರ ಮಧ್ಯಾಹ್ನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ.

ಬೆಂಗಳೂರು: ಸೋಮವಾರ ಮಧ್ಯಾಹ್ನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಫೇಸ್‌ಬುಕ್‌ನಲ್ಲಿ ಈ ವಿಚಾರವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ತಿಳಿಸಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಸುದ್ದಿ ಗೋಷ್ಠಿ ನಡೆಸಿ ಸುರೇಶ್‌ ಕುಮಾರ್‌ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ. ಸುದ್ದಿಗೋಷ್ಠಿ ಬಳಿಕ ಇಲಾಖೆ ವೆಬ್ ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಕೊರೊನಾ ಸೋಂಕು ಭೀತಿಯ ನಡುವೆಯೂ ಸರ್ಕಾರವು ಯಶಸ್ವಿಯಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಿತ್ತು. 8.5 ಲಕ್ಷ ವಿದ್ಯಾರ್ಥಿಗಳಲ್ಲಿ ಸರಾಸರಿ ಶೇ.98 ರಷ್ಟು …

Read More »

ರಾಜ್ಯದಲ್ಲಿ ಮೊದಲ ಡ್ಯಾಂ ಭರ್ತಿ – 22 ಗೇಟ್‍ಗಳ ಮೂಲಕ ನೀರು ಹೊರಕ್ಕೆ

ಶಿವಮೊಗ್ಗ: ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಈಗಾಗಲೇ ಅನೇಕ ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದೆ. ಇದೀಗ ರಾಜ್ಯದಲ್ಲಿ ಮೊದಲ ಡ್ಯಾಂ ಭರ್ತಿ ಯಾಗಿದ್ದು, ಜಲಾಶಯದಿಂದ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ.ಶಿವಮೊಗ್ಗದ ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದ್ದು, 22 ಗೇಟ್‍ಗಳ ಮೂಲಕ 71 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಮಲೆನಾಡಿನಲ್ಲಿ ನಿರಂತರ ಮಳೆ ಹಿನ್ನೆಲೆಯಲ್ಲಿ ಡ್ಯಾಂ ನಿಂದ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ.ಶಿವಮೊಗ್ಗದ ಗಾಜನೂರಿನ ತುಂಗಾ ಜಲಾಶಯಕ್ಕೆ ಯಥೇಚ್ಛ ನೀರು ಹರಿದು ಬಂದಿದೆ. ಇದರಿಂದ …

Read More »

ಕಾಡಾನೆ ಓಡಿಸುವಾಗ ಬಂದೂಕಿನಿಂದ ಹಾರಿದ ಗುಂಡು ತಗುಲಿ ಫಾರೆಸ್ಟ್ ವಾಚರ್ ಸಾವು

ಮಂಡ್ಯ: ಕಾಡಾನೆ ಓಡಿಸುವ ವೇಳೆ ಬಂದೂಕಿನಿಂದ ಹಾರಿದ ಗುಂಡು ತಗುಲಿ ಫಾರೆಸ್ಟ್ ವಾಚರ್ ಮೃತಪಟ್ಟಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೂನನಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಶಿವನಂಜಯ್ಯ (30) ಮೃತ ಫಾರೆಸ್ಟ್ ವಾಚರ್. ಕೂನನಕೊಪ್ಪಲು ಗ್ರಾಮದಲ್ಲಿ ಬೀಡು ಬಿಟ್ಟಿದ್ದ ಕಾಡಾನೆಗಳ ಹಿಂಡನ್ನು ಓಡಿಸುವ ವೇಳೆ ಈ ಘಟನೆ ನಡೆದಿದೆ. ಫಾರೆಸ್ಟ್ ಗಾರ್ಡ್ ಪ್ರಕಾಶ್ ಅಡಚದ ಎಂಬುವರ ಬಂದೂಕಿನಿಂದ ಆಕಸ್ಮಿಕವಾಗಿ ಹಾರಿದ ಗುಂಡು ತಗುಲಿ ಶಿವನಂಜಯ್ಯ ಸಾವನ್ನಪ್ಪಿದ್ದಾರೆ. ಮೃತ ಶಿವನಂಜಯ್ಯ ಗುತ್ತಿಗೆ ಅಧಾರದ ಮೇಲೆ …

Read More »

ಸವದತ್ತಿ ಬಳಿಯ ನವಿಲುತೀರ್ಥ ಆಣೆಕಟ್ಟೆಗೆ ಹರಿದುಬರುತ್ತಿದ್ದ ಭಾರೀ ಪ್ರಮಾಣದ ನೀರಿನಲ್ಲಿ ಗುರುವಾರ ಧಿಡೀರ್ ಕುಸಿತ ಎಚ್ಚರಿಕೆಯಿಂದರಲೂ ಮುನ್ಸೂಚನೆ

ಬೆಳಗಾವಿ: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಸುರಿಯುತ್ತಿದ್ದ ಧಾರಾಕಾರ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಸವದತ್ತಿ ಬಳಿಯ ನವಿಲುತೀರ್ಥ ಆಣೆಕಟ್ಟೆಗೆ  ಹರಿದುಬರುತ್ತಿದ್ದ ಭಾರೀ ಪ್ರಮಾಣದ ನೀರಿನಲ್ಲಿ ಗುರುವಾರ ಧಿಡೀರ್ ಕುಸಿತ ಉಂಟಾಗಿದೆ. ಖಾನಾಪುರ ಮತ್ತು ಬೈಲಹೊಂಗಲದ ಸುತ್ತಮುತ್ತಲೂ  ಮಳೆಯು ನಿಂತಿದ್ದು, ಬಿಸಿಲಿನ ವಾತಾವರಣ ಉಂಟಾಗಿದ್ದರಿಂದ ಒಳಹರಿವಿನಲ್ಲಿ ಗಮನಾರ್ಹ ಬದಲಾವಣೆಯಾಗಿದೆ.    ಒಟ್ಟು 37.7 ಟಿ ಎಮ್ ಸಿ  ಸಾಮರ್ಥ್ಯದ ಆಣೆಕಟ್ಟಿನಲ್ಲಿ ಸದ್ಯ 22 ಟಿ ಎಮ್ ಸಿ ನೀರಿನ ಸಂಗ್ರಹವಿದೆ.ಒಟ್ಟು 2079.5 …

Read More »