Breaking News

ಸುಶಾಂತ್ ಆತ್ಮಹತ್ಯೆ ಬೆನ್ನಲ್ಲೇ ಮುಂಬೈನ ಖ್ಯಾತ ಕಿರುತೆರೆ ನಟ ಸಮೀರ್ ಶರ್ಮಾ (44) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮುಂಬೈ: ಸುಶಾಂತ್ ಆತ್ಮಹತ್ಯೆ ಬೆನ್ನಲ್ಲೇ ಮುಂಬೈನ ಖ್ಯಾತ ಕಿರುತೆರೆ ನಟ ಸಮೀರ್ ಶರ್ಮಾ (44) ಆತ್ಮಹತ್ಯೆಗೆ ಶರಣಾಗಿದ್ದಾರೆ. ಮುಂಬೈನಲ್ಲಿರುವ ತಮ್ಮ ಬಾಡಿಗೆ ಮನೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಇವರ ಅಸಹಜ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕಳೆದ ಎರಡು ದಿನಗಳ ಹಿಂದೆ ಮೃತಪಟ್ಟಿರಬಹುದು ಅಂತಾ ತಿಳಿದು ಬಂದಿದ್ದು, ಸ್ಥಳೀಯರಿಗೆ ವಾಸನೆ ಬಂದು ಪೊಲೀಸರಿಗೆ ಮಾಹಿತಿ ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಸಮೀರ್ ಆತ್ಮಹತ್ಯೆ …

Read More »

ಮಳೆಯಿಂದ‌ ಹಾನಿಗೊಳಗಾದ ಕುಟುಂಬಗಳಿಗೆ ತಕ್ಷಣ ಪರಿಹಾರವಾಗಿ 10 ಸಾವಿರ ರೂ.ಗಳು ಪೂರ್ಣ ಮನೆ ಹಾನಿಯಾಗಿದ್ದರೆ 5 ಲಕ್ಷ ರೂ.ಗಳ ಪರಿಹಾರ,

ಬೆಂಗಳೂರು- ರಾಜ್ಯಾದ್ಯಂತ ಮಳೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸಂತ್ರಸ್ತರಿಗೆ ಈ ಹಿಂದಿನ‌ ರೀತಿಯೇ ಪರಿಹಾರವನ್ನು ವಿತರಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.‌ ಮಳೆಯಿಂದ‌ ಹಾನಿಗೊಳಗಾದ ಕುಟುಂಬಗಳಿಗೆ ತಕ್ಷಣ ಪರಿಹಾರವಾಗಿ 10 ಸಾವಿರ ರೂ.ಗಳು ಪೂರ್ಣ ಮನೆ ಹಾನಿಯಾಗಿದ್ದರೆ 5 ಲಕ್ಷ ರೂ.ಗಳ ಪರಿಹಾರ, ಭಾಗಶಃ ಹಾನಿಯಾಗಿದ್ದಾರೆ ಹಾನಿಗೆ ಅನುಗುಣವಾಗಿ ಪರಿಹಾರ ವಿತರಿಸಬೇಕು‌ ಎಂದು ಅವರು ಸೂಚಿಸಿದರು.   ಜಿಲ್ಲಾ ಕೇಂದ್ರಗಳ ಹಾಸ್ಟೆಲ್, ಶಾಲಾ ಕಾಲೇಜುಗಳು ಕೋವಿಡ್ ಕೇಂದ್ರಗಳಾಗಿ ಈಗಾಗಲೇ …

Read More »

ಕೃಷ್ಣಾ ನದಿ ತೀರದ ಪ್ರದೇಶಗಳಲ್ಲಿ ಕಟ್ಟೆಚ್ಚರ

ಯಾದಗಿರಿ: ಮಹಾರಾಷ್ಟ್ರದಲ್ಲಿ ಭಾರೀ ಪ್ರಮಾಣದ ಮಳೆಯಾಗುತ್ತಿರುವ ಹಿನ್ನೆಲೆ ಇಂದು ಬಸವಸಾಗರ ಜಲಾಶಯದಿಂದ 50 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ನಾಳೆ ವೇಳೆಗೆ ನೀರಿನ ಹೊರ ಹರಿವು ಜಾಸ್ತಿಯಾಗುವ ಸಾಧ್ಯತೆಯಿದೆ.ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದಲ್ಲಿರುವ ಬಸವಸಾಗರ ಜಲಾಶಯ ಇದಾಗಿದ್ದು, ಈಗಾಗಲೇ ಜಲಾಶಯ ಭರ್ತಿಯಾಗಿದೆ. ಇನ್ನೂ ಮತ್ತೆ ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನದವಾಗುತ್ತಿದ್ದು, ಕೃಷ್ಣಾ ನದಿ ತೀರಕ್ಕೆ ಜನರು ತೆರಳದಂತೆ ಯಾದಗಿರಿ ಜಿಲ್ಲಾಡಳಿತ ಸೂಚನೆ ನೀಡಿದೆ. ಈಗಾಗಲೇ ನದಿ …

Read More »

ಪಾಕಿಸ್ತಾನದ ಟೀಕೆಗೆ ಭಾರತ ಖಡಕ್ ವಾರ್ನಿಂಗ್…………..

ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬುಧವಾರ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಮಾಡಿದ್ದು, ಈ ಕುರಿತು ಪಾಕಿಸ್ತಾನದ ಟೀಕೆಗೆ ಭಾರತ ಖಡಕ್ ವಾರ್ನಿಂಗ್ ನೀಡಿದೆ.   ದೇಶದ ಆಂತರಿಕ ವಿಚಾರದಲ್ಲಿ ನೀವು ತಲೆ ಹಾಕಬೇಡಿ ಎಂದು ಭಾರತ ಎಚ್ಚರಿಸಿದೆ. ಈ ಬಗ್ಗೆ ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಪ್ರತಿಕ್ರಿಯಿಸಿ, ಭಾರತದ ಆಂತರಿಕ ವಿಷಯದ ಬಗ್ಗೆ ‘ಇಸ್ಲಾಮಿಕ್ ರಿಪಬ್ಲಿಕ್ ಆಫ್ ಪಾಕಿಸ್ತಾನ’ದ ಪತ್ರಿಕಾ ಹೇಳಿಕೆ ಗಮನಕ್ಕೆ ಬಂದಿದೆ. ಪಾಕಿಸ್ತಾನವು ಭಾರತದ …

Read More »

ಆಲಮಟ್ಟಿ, ಬಸವಸಾಗರ ಜಲಾಶಯದಿಂದ ಭಾರೀ ಪ್ರಮಾಣದಲ್ಲಿ ನೀರು ಬಿಡುಗಡೆ, ಪ್ರವಾಹ ಭೀತಿ

ವಿಜಯಪುರ/ ಯಾದಗಿರಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ‌ ಮಳೆಯಿಂದ ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ.ಆಲಮಟ್ಟಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ಒಳಹರಿವು ಹೆಚ್ಚಳವಾಗಿದ್ದು 26 ಗೇಟ್ ಗಳ ಪೈಕಿ 22 ಗೇಟ್ ಗಳ ಮೂಲಕ ಅಪಾರ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ.1.47 ಲಕ್ಷ ಕ್ಯುಸೆಕ್‌ ಒಳ ಹರಿವು ದಾಖಲಾಗಿದ್ದು,1.50 ಲಕ್ಷ ಕ್ಯುಸೆಕ್‌ ನೀರನ್ನ ಹೊರಬಿಡಲಾಗುತ್ತಿದೆ. ಕ್ಷಣ ಕ್ಷಣಕ್ಕೂ ನೀರು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದ ಹತ್ತಿರದ ಗ್ರಾಮಗಳ ಮೀನುಗಾರರು, ಗ್ರಾಮಸ್ಥರು ನದಿಗೆ ಇಳಿಯದಂತೆ ಜಿಲ್ಲಾಡಳಿತ …

Read More »

ಚೋಟಾ ಮುಂಬೈ ಹುಬ್ಬಳ್ಳಿಯಲ್ಲಿ ಮತ್ತೆ ಗುಂಡಿನ ಸದ್ದು

ಹುಬ್ಬಳ್ಳಿ: ಚೋಟಾ ಮುಂಬೈ ಹುಬ್ಬಳ್ಳಿಯಲ್ಲಿ ಮತ್ತೆ ಗುಂಡಿನ ಸದ್ದು ಜೋರಾಗಿದೆ. ಮೂವರು ಯುವಕರು ಬುಲೆಟ್ ಬೈಕಿನಲ್ಲಿ ಆಗಮಿಸಿ ಮಗನ ಮದುವೆ ಸಂಭ್ರಮದಲ್ಲಿದ್ದ ರೌಡಿ ಶೀಟರ್ ಮೇಲೆ ನಾಲ್ಕು ಸುತ್ತು ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ದಾಳಿಯಲ್ಲಿ ಮೂರು ಗುಂಡು ರೌಡಿ ಶೀಟರ್ ಫ್ರೋಟ್ ಇರ್ಫಾನ್‍ಗೆ ತಗುಲಿದ ಪರಿಣಾಮ ರೌಡಿ ಶೀಟರ್ ಸ್ಥಿತಿ ಗಂಭೀರವಾಗಿದೆ. ಧಾರವಾಡದ ರೌಡಿಶೀಟರ್ ಇರ್ಫಾನ್ ಮೇಲೆಯೇ ಅಪರಿಚಿತರು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಹಳೇ ಹುಬ್ಬಳ್ಳಿಯ ವಿಶಾಲ …

Read More »

ರೈಲ್ವೆ ಸುರಂಗ ಗೋಡೆ ಕುಸಿತ ಹಿನ್ನೆಲೆಯಲ್ಲಿ ಕೊಂಕಣ ರೈಲ್ವೆ ಮಾರ್ಗ ಸಂಚಾರ ಬಂದ್

ಕಾರವಾರ: ಮುಂಡ್ರೆ -ಪೆರ್ಣೆ ಮಾರ್ಗದಲ್ಲಿ ರೈಲ್ವೆ ಸುರಂಗ ಗೋಡೆ ಕುಸಿತ ಹಿನ್ನೆಲೆಯಲ್ಲಿ ಕೊಂಕಣ ರೈಲ್ವೆ ಮಾರ್ಗ ಸಂಚಾರ ಬಂದ್ ಮಾಡಲಾಗಿದೆ.ಇಂದಿನಿಂದ ಮುಂದಿನ ಆದೇಶ ಬರುವವರೆಗೂ ಎರ್ನಾಕುಲಮ್ -ಹಜರತ್ ನಿಜಾಮುದ್ದೀನ್ ಸೂಪರ್ ಪಾಸ್ಟ್ ಟ್ರೈನ್ (ಮಡಗಾಂ, ಮೀರಜ್, ಪುಣೆ, ಪನ್ನವೇಲ್ ಮಾರ್ಗ) ತಿರುವಂತಪುರಂ ಲೋಕಮಾನ್ಯ ತಿಲಕ್ ಟ್ರೈನ್ (ಮಡಗಾಂ, ಲೋಂಡ, ನೀರಜ್, ಪುಣೆ, ಪನ್ನವೇಲ್ ಮಾರ್ಗ), ನ್ಯೂ ಡೆಲ್ಲಿ ತಿರುವನಂತಪುರಂ ಸೆಂಟ್ರಲ್ ರಾಜಧಾನಿ ಎಕ್ಸ್ ಪ್ರೆಸ್(ಪನ್ನವೇಲ್, ಪುಣೆ, ಮೀರಜ್ ,ಲೋಂಡ, ಮಡಗಾಂ …

Read More »

ಬ್ರಾಹ್ಮಣರಿಗೆ ಜಾತಿ ಹಾಗೂ ಆದಾಯ ಪತ್ರ ನೀಡುತ್ತಿರುವುದಕ್ಕೆ ಯಡಿಯೂರಪ್ಪ ಅವರಿಗೆ ಕೃತಜ್ಞತೆ

ಕೋಲಾರ: ಎಂಎಲ್‍ಸಿ ಆಕಾಂಕ್ಷಿಯಾಗಿದ್ದ ನನಗೆ ಮಂಡಳಿ ಅದ್ಯಕ್ಷರನ್ನಾಗಿ ಮಾಡಿದ್ದು, ಪ್ರಾರಂಭದಲ್ಲಿ ಇಷ್ವವಿರಲಿಲ್ಲ. ಆದರೆ ಇದೀಗ ತೃಪ್ತಿ ತಂದಿದೆ ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಕೋಲಾರದಲ್ಲಿ ಹೇಳಿದ್ದಾರೆ.ಕೋಲಾರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಕಳೆದ 40 ವರ್ಷಗಳಿಂದ ರಾಜಕೀಯದಲ್ಲಿ ಸಕ್ರಿಯ ಕಾರ್ಯಕರ್ತನಾಗಿದ್ದು, ಶಾಸಕನಾಗಿ, ಎಂಎಲ್‍ಸಿ ಆಗಬೇಕೆಂಬುವ ಆಸೆ ಇತ್ತು. ಆದರೆ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಮಾಡಿದ್ದು, ಇದೀಗ ತೃಪ್ತಿತಂದಿದೆ ಎಂದರು. ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣರಿಗೆ ಯಡಿಯೂರಪ್ಪ …

Read More »

ಕೊಡಗಿಗೆ ಈ ವರ್ಷವು ಮಹಾಮಳೆಯ ಆತಂಕ ಎದುರಾಗಿದೆ.

ಮಡಿಕೇರಿ: ಕೊಡಗಿಗೆ ಮತ್ತೆ ಜಲಗಂಡಾಂತರ ಎದುರಾಗಿದೆ. ಎರಡು ವರ್ಷದ ಹಿಂದೆ ಭಾರೀ ಮಳೆಯಿಂದಾಗಿ ನಡೆದಿದ್ದ ಭೂಕುಸಿತ ಮತ್ತೆ ಮರುಕಳಿಸುವಂತ ಲಕ್ಷಣ ದಟ್ಟವಾಗಿದೆ.ಕೊಡಗು ಜಿಲ್ಲೆಯಾದ್ಯಂತ ಎಡಬಿಡೆ ಸುರಿಯತ್ತಿರುವ ಮಳೆ ಇನ್ನೂ ಎರಡು ದಿನಗಳ ಕಾಲ ತನ್ನ ಅಬ್ಬರ ಮುಂದುವರಿಸುವ ಸಾಧ್ಯತೆ ಇದೆ. ಕೊಡಗಿನಲ್ಲಿ ಹಲವು ಗುಡ್ಡಗಳು ಕುಸಿಯುವುದು ಬಹುತೇಕ ಸ್ಪಷ್ಟವಾಗಿದ್ದು, ಎರಡು ದಿನಗಳ ಮಳೆಗೆ 40 ಪ್ರದೇಶದಲ್ಲಿ ಈಗಾಗಲೇ ಗುಡ್ಡ ಕುಸಿತವಾಗಿದೆ. ಹಲವು ಕಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಗ್ರಾಮಗಳ ಸಂಪರ್ಕ …

Read More »

ಗಣಿ ಕಾರ್ಮಿಕನಿಗೆ ಸಿಕ್ತು 35 ಲಕ್ಷ ಮೌಲ್ಯದ ವಜ್ರ…………..

ಭೋಪಾಲ್: ಕಾರ್ಮಿಕರೊಬ್ಬನಿಗೆ 35 ಲಕ್ಷ ಮೌಲ್ಯದ ವಜ್ರಗಳು ಸಿಕ್ಕಿರುವ ಘಟನೆ ಮಧ್ಯಪ್ರದೇಶದ ಪನ್ನಾ ಜಿಲ್ಲೆಯ ವಜ್ರ ಗಣಿಯೊಂದರಲ್ಲಿ ನಡೆದಿದೆ.   ಪನ್ನಾ ವಜ್ರ ಗಣಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಸುಬಲ್ ಎಂಬವರಿಗೆ ಅಂದಾಜು 30 ಲಕ್ಷದಿಂದ 35 ಲಕ್ಷ ಮೌಲ್ಯದ ಮೂರು ವಜ್ರಗಳನ್ನು ಸಿಕ್ಕಿವೆ. 7.5 ಕ್ಯಾರೆಟ್ ನಿವ್ವಳ ತೂಕದ ಮೂರು ವಜ್ರಗಳನ್ನು ಗಣಿಯಲ್ಲಿ ಸಿಕ್ಕಿವೆ ಎಂದು ಪನ್ನಾ ಜಿಲ್ಲೆಯ ವಜ್ರಾಧಿಕಾರಿ ಆರ್.ಕೆ.ಪಾಂಡೆ ತಿಳಿಸಿದ್ದಾರೆ. ಈ ವಜ್ರಗಳನ್ನು ಕಾರ್ಮಿಕರ ಸುಬಲ್ …

Read More »