Breaking News

ದೇಶೀಯ ಲಸಿಕೆ ಕೋವ್ಯಾಕ್ಸಿನ್ ದರ ನಿಗದಿ

ಹೈದರಾಬಾದ್: ದೇಶಾದ್ಯಂತ ಕೊರೊನಾ 2ನೇ ಅಲೆ ತಾಂಡವಾಡುತ್ತಿದ್ದು, ಹತೋಟಿಗೆ ತರಲು ಸರ್ಕಾರಗಳು ಇನ್ನಿಲ್ಲದ ಪ್ರಯತ್ನ ನಡೆಸಿವೆ. ಇದರ ಭಾಗವಾಗಿ ಮೇ ತಿಂಗಳಿನಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ನೀಡಲು ಅನುಮತಿ ನೀಡಲಾಗಿದೆ. ಹೀಗಿರುವಾಗಲೇ ದೇಶೀಯ ಕೊರೊನಾ ಲಸಿಕೆ ಕೋವ್ಯಾಕ್ಸಿನ್‍ಗೆ ದರ ನಿಗದಿಪಡಿಸಲಾಗಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತಿ ಡೋಸ್‍ಗೆ 600 ರೂ. ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 1,200 ರೂ. ದರ ನಿಗದಿಪಡಿಸಲಾಗಿದೆ. ಈ ಕುರಿತು ಹೈದರಾಬಾದ್ ಮೂಲದ ಕೋವ್ಯಾಕ್ಸಿನ್ …

Read More »

ಗಂಟೆಗೆ 700 ಜನಕ್ಕೆ ಕೊರೊನಾ ಸೋಂಕು5 ದಿನ ಬೆಂಗಳೂರು ನಗರವನ್ನ ಸಂಪೂರ್ಣವಾಗಿ ಲಾಕ್‍ಡೌನ್: ತಜ್ಞರ ಮಹತ್ವದ ಸಲಹೆ

ಬೆಂಗಳೂರು: 15 ದಿನ ಬೆಂಗಳೂರು ನಗರವನ್ನ ಸಂಪೂರ್ಣವಾಗಿ ಲಾಕ್‍ಡೌನ್ ಮಾಡುವಂತೆ ಸರ್ಕಾರಕ್ಕೆ ತಜ್ಞರು ಮಹತ್ವದ ಸಲಹೆ ನೀಡಿದ್ದಾರೆ. ವೀಕೆಂಡ್ ಲಾಕ್‍ಡೌನ್ ಸೋಮವಾರ ಬೆಳಗ್ಗೆ 6 ಗಂಟೆಗೆ ಅಂತ್ಯವಾಗಲಿದೆ. ಎರಡು ವಾರ ಲಾಕ್‍ಡೌನ್ ಮಾಡದಿದ್ರೆ ಕೊರೊನಾ ನಿಯಂತ್ರಣ ಅಸಾಧ್ಯ. ಕೊರೊನಾ ಕ್ಷಣ ಕ್ಷಣಕ್ಕೂ ಭೀಕರ ಸ್ವರೂಪ ಪಡೆದುಕೊಳ್ಳುತ್ತಿದೆ. ಕೇವಲ ವೀಕೆಂಡ್ ಲಾಕ್ ಮಾಡಿ ಇನ್ನುಳಿದ ಫ್ರೀ ಬಿಟ್ಟರೆ ಅಪಾಯ ಕಟ್ಟಿಟ್ಟ ಬುತ್ತಿ. ಅವಶ್ಯಕವಿದ್ರೆ ಲಾಕ್‍ಡೌನ್ ಮಾಡಬಹುದು ಎಂದು ಪ್ರಧಾನಿಗಳು ಹೇಳಿದ್ದಾರೆ. ಸದ್ಯ …

Read More »

ಪಾರ್ಕ್ ಗಳಲ್ಲಿ ನಡೆಯಲಿದೆ ಅಂತ್ಯಸಂಸ್ಕಾರ

ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ಕೊರೊನಾ ಮರಣ ಮೃದಂಗ ಮುಂದುವರಿದಿದೆ. ಸ್ಮಶಾನಗಳಲ್ಲಿ ಅಂತ್ಯಕ್ರಿಯೆಗೆ ಸ್ಥಳ ಇಕ್ಕಟ್ಟಾದ ಹಿನ್ನೆಲೆ ಅಂತ್ಯಸಂಸ್ಕಾರಕ್ಕೆ ಪಾರ್ಕ್ ಗಳಲ್ಲಿ ವ್ಯವಸ್ಥೆ ಮಾಡಲಾಗುತ್ತಿದೆ. ದೆಹಲಿಯ ಸರಾಯ ಕಾಲೇಂ ಖಾಂ ಪಾರ್ಕ್ ಸ್ಮಶಾನವಾಗಿ ಬದಲಾಗಿದೆ. ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ಮೃತದೇಹ ಬರುತ್ತಿರೋದರಿಂದ ಜನರು ಕ್ಯೂ ಹಚ್ಚುವಂತಾಗಿದೆ. ಈ ಸಮಸ್ಯೆ ಪರಿಹಾರಕ್ಕೆ ಮುಂದಾಗಿರುವ ದೆಹಲಿ ಸರ್ಕಾರ ಅಲ್ಲಿರುವ ಪಾರ್ಕ್ ನಲ್ಲಿ ಅಂತ್ಯ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಿಕೊಟ್ಟಿದೆ. ಸರಾಯ ಕಾಲೇಂ ಖಾಂನಲ್ಲಿ ಏಕಕಾಲದಲ್ಲಿ …

Read More »

ಹಿಂದೆಲ್ಲ 3 ತಿಂಗಳು ಲಾಕ್‍ಡೌನ್ ಇತ್ತು, ಈಗ ಕೇವಲ 8-10 ದಿನದ ಲಾಕ್‍ಡೌನ್ ಅಷ್ಟೇ ಇದೆ: ಜಗದೀಶ್ ಶೆಟ್ಟರ್

ಧಾರವಾಡ: ಸದ್ಯ ಮೇ 4ರ ವರೆಗೆ ಕಠಿಣ ನಿಯಮ ಜಾರಿಯಲ್ಲಿರುತ್ತದೆ. ಮುಂದಿನ ವಾರವೂ ವೀಕೆಂಡ್ ಕಫ್ರ್ಯೂ ಇರುತ್ತದೆ. ಉಳಿದ ದಿನದ ಕಫ್ರ್ಯೂ, ಲಾಕ್‍ಡೌನ್ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ನಾಳೆಯ ಕ್ಯಾಬಿನೆಟ್ ಸಭೆಯಲ್ಲಿ ಈ ಬಗ್ಗೆ ವಿಸ್ತøತವಾಗಿ ಚರ್ಚೆ ನಡೆಯಲಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಬೆಳಗ್ಗೆ 11ಕ್ಕೆ ಸಚಿವ ಸಂಪುಟ ಸಭೆ ಇದೆ. ಕ್ಯಾಬಿನೆಟ್‍ನಲ್ಲಿ ಚರ್ಚಿಸಿದ ಬಳಿಕ ಸಿಎಂ ಮುಂದಿನ …

Read More »

ಭಾರತ; 24 ಗಂಟೆಯಲ್ಲಿ 3,49,691 ಹೊಸ ಕೋವಿಡ್ ಪ್ರಕರಣ ದಾಖಲು

ನವದೆಹಲಿ, ಏಪ್ರಿಲ್ 25; ಭಾರತದಲ್ಲಿ 24 ಗಂಟೆಯಲ್ಲಿ 3,49,691 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. 24 ಗಂಟೆಯಲ್ಲಿ 2,767 ಜನರು ಸಾವನ್ನಪ್ಪಿದ್ದು, 2,17,113 ಜನರು ಡಿಸ್ಚಾರ್ಜ್ ಆಗಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಭಾರತದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 1,69,60,172ಕ್ಕೆ ಏರಿಕೆಯಾಗಿದೆ. ದೇಶದಲ್ಲಿನ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 26,82,751.   ದೇಶದಲ್ಲಿ ಇದುವರೆಗೂ 1,40,85,110 ಜನರು ಗುಣಮುಖಗೊಂಡಿದ್ದಾರೆ. ಒಟ್ಟು ಮೃತಪಟ್ಟವರ ಸಂಖ್ಯೆ 1,92,311. ಇದುವರೆಗೂ …

Read More »

ಸ್ವಂತ ಟಿವಿ ಚಾನೆಲ್ ಆರಂಭಿಸಿದ ‘ಕಾಂಗ್ರೆಸ್’

ದೇಶದ ಜನತೆಯನ್ನು ತಲುಪಲು ಕಾಂಗ್ರೆಸ್ ಪಕ್ಷ ಇದೀಗ ತನ್ನ ಸ್ವಂತ ಟಿವಿ ಚಾನೆಲ್ ಆರಂಭಿಸಿದೆ. ಐ.ಎನ್.ಸಿ. ಟಿವಿಗೆ ‘ರಾಷ್ಟ್ರೀಯ ಪಂಚಾಯತ್ ರಾಜ್ ದಿನ’ (ಏಪ್ರಿಲ್ 24)ವಾದ ಶನಿವಾರದಂದು ಚಾಲನೆ ನೀಡಲಾಗಿದೆ. ದೇಶದಲ್ಲಿ ವಿವಿಧ ಸಂಸ್ಥೆಗಳ ಮೇಲೆ ದಾಳಿ ನಡೆಯುತ್ತಿದ್ದರೂ ಸಹ ಇದು ಬಹಳಷ್ಟು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿಲ್ಲ. ಹೀಗಾಗಿ ನೈಜ ವಿಷಯವನ್ನು ಜನರಿಗೆ ತಲುಪಿಸಲು ಟಿವಿ ಚಾನೆಲ್ ಆರಂಭಿಸಿರುವುದಾಗಿ ಕಾಂಗ್ರೆಸ್ ಮುಖಂಡರೊಬ್ಬರು ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಈ ನೂತನ ಟಿವಿ ಚಾನೆಲ್ …

Read More »

ಸಂಸದರನ್ನು ದಿಲ್ಲಿಗೆ ಅಟ್ಟಿ ಪ್ರಧಾನಿ ಮನೆ ಮುಂದೆ ಧರಣಿ ಕೂರಿಸಿ: ಸಿದ್ದರಾಮಯ್ಯ

ಬೆಂಗಳೂರು, ಎ.25: ಔಷಧಿ,‌ ಆಮ್ಲಜನಕ, ವೆಂಟಿಲೇಟರ್ ಕೊಡಿ ಎಂದು‌ ಪ್ರಧಾನಿ ನರೇಂದ್ರ ಮೋದಿಯವರನ್ನು ಬೇಡುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ಕಂಡಾಗ‌ ಕನಿಕರ ಮೂಡುತ್ತಿದೆ. ರಾಜ್ಯದಿಂದ ಆಯ್ಕೆಯಾಗಿರುವ 25 ಬಿಜೆಪಿ ಸಂಸದರು ಎಲ್ಲಿ ಅಡಗಿ ಕೂತಿದ್ದಾರೆ? ಅವರನ್ನು ದಿಲ್ಲಿಗೆ ಅಟ್ಟಿ ರಾಜ್ಯದ ನ್ಯಾಯಬದ್ಧ ಪಾಲಿಗಾಗಿ ಪ್ರಧಾನಿ ಮನೆ ಮುಂದೆ ಧರಣಿ ಕೂರಿಸಿ ಎಂದು ಪ್ರತಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ರಾಜ್ಯದಲ್ಲಿ …

Read More »

ಪಲ್ಸ್ ಪೋಲಿಯೋ ಮಾದರಿಯಲ್ಲಿ ಉಚಿತವಾಗಿ ಕೊರೋನಾ ಲಸಿಕೆ ನೀಡಿ : ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಹೆಚ್ ಡಿಕೆ ಒತ್ತಾಯ

ಬೆಂಗಳೂರು : ರಾಜ್ಯದ ಪ್ರತಿಯೊಬ್ಬರಿಗೂ ಪಲ್ಸ್ ಪೋಲಿಯೋ ಲಸಿಕೆ ನೀಡಿದ ಮಾದರಿಯಲ್ಲಿ ಉಚಿತ ಕೊರೊನಾ ಲಸಿಕೆ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯದ ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡುವಂತೆ ಒಂದುವರೆ ತಿಂಗಳ ಹಿಂದೆಯೇ ಸರ್ಕಾರಕ್ಕೆ ಸಲಹೆ ನೀಡಿದ್ದೆ. ಪಲ್ಸ್ ಪೋಲಿಯೋ ಲಸಿಕೆ ನೀಡಿದ ಮಾದರಿಯಲ್ಲಿ ಎಲ್ಲರಿಗೂ ಉಚಿತವಾಗಿ ಕೊರೋನಾ ಲಸಿಕೆ ನೀಡುವ ನಿರ್ಧಾರ ಕೈಗೊಂಡರೆ ಅದು ಅಭಿನಂದನಾರ್ಹ …

Read More »

ಬಿಎಸ್ ವೈ ಅವರೇ ಈ ಕೆಲಸಗಳಿಗೆ ಅಡ್ಡಗಾಲು ಹಾಕಿದರೆ ಬಡವರ ಶಾಪ ತಟ್ಟದೆ ಇರದು: ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕವನ್ನು ಹಸಿವು ಮುಕ್ತ ರಾಜ್ಯ ಮಾಡುವ ಉದ್ದೇಶದಿಂದ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್, ಮಾತೃಪೂರ್ಣ ಮೊದಲಾದ ಯೋಜನೆಗಳನ್ನು ಜಾರಿಗೆ ತಂದಿದ್ದೆ. ಅವೆಲ್ಲವನ್ನೂ ಬಡವರ ವಿರೋಧಿ ಬಿಜೆಪಿ ಸರ್ಕಾರ ನಿಲ್ಲಿಸಲು ಹೊರಟಿದೆ. ಅವುಗಳಿಗೆ ಅಡ್ಡಗಾಲು ಹಾಕಿದರೆ ಬಡವರ ಶಾಪ ತಟ್ಟದೆ ಇರದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಅನ್ನಭಾಗ್ಯ ಯೋಜನೆ ಎಂದರೆ ಉರ್ಕೊಳ್ಳುತ್ತಿದ್ದ ಮತ್ತು ಆ ಯೋಜನೆಗೆ ಕಲ್ಲು ಹಾಕಲು ಪ್ರಯತ್ನಿಸುತ್ತಿರುವ …

Read More »

ಮೂಗಿಗೆ ನಿಂಬೆ ರಸ ಹಾಕಿದರೆ ಉಸಿರಾಟದ ಸಮಸ್ಯೆ ಪರಿಹಾರವಾಗುತ್ತದೆ: ವಿಜಯ ಸಂಕೇಶ್ವರ

ಹುಬ್ಬಳ್ಳಿ: ಕೋವಿಡ್-19 ಸಂದರ್ಭದಲ್ಲಿ ನಿಂಬೆ ಹಣ್ಣಿನ ರಸವನ್ನು ಮೂಗಿಗೆ ಹಾಕಿಕೊಳ್ಳುವುದಿಂದ ಅರ್ಧ ಗಂಟೆಯಲ್ಲಿ ಶ್ವಾಸಕೋಶದಲ್ಲಿ ಸಂಗ್ರಹವಾಗಿರುವ ಕಫ ಹೊರ ಬಂದು ಉಸಿರಾಟದ ಸಮಸ್ಯೆ ಸರಿ ಹೋಗಲಿದೆ, ಇದನ್ನು ನಾನು, ನನ್ನ ಕುಟುಂಬ ಹಾಗೂ ಸುಮಾರು 200 ಜನರಿಗೆ ಸೂಚಿಸಿದ್ದೆ ಇದರಿಂದ ಪರಿಣಾಮಕಾರಿ ಫಲಿತಾಂಶ ಬಂದಿದೆ ಎಂದು ವಿ.ಆರ್.ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ ತಿಳಿಸಿದರು. ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಂಬೆ ಹಣ್ಣಿನ ರಸ ಹಾಕಿಕೊಳ್ಳುವುದರಿಂದ ಉತ್ತಮ …

Read More »