Breaking News

ಸಗಣಿ ರಾಶಿ ಹಾಕಿ ಅದರಲ್ಲಿ ಗ್ರಾಮಸ್ಥರು ಹೊರಳಾಡಿ, ಹೊಡೆದಾಡುವುದೇ ಹಬ್ಬ

ಚಾಮರಾಜನಗರ: ಜಿಲ್ಲೆಯ ಗಡಿಯಂಚಿನಲ್ಲಿರುವ ಗುಮಟಾಪುರ ಗ್ರಾಮದಲ್ಲಿ ಸಂಭ್ರಮದಿಂದ ಗೊರೆ ಹಬ್ಬ ಆಚರಿಸಲಾಯಿತು. ಸಗಣಿ ರಾಶಿ ಹಾಕಿ ಅದರಲ್ಲಿ ಗ್ರಾಮಸ್ಥರು ಹೊರಳಾಡಿ, ಹೊಡೆದಾಡುವುದೇ ಹಬ್ಬದ ವಿಶೇಷ. ಕೋವಿಡ್ ಗೆ ಡೋಂಟ್ ಕೇರ್ ಎಂದು ಗ್ರಾಮಸ್ಥರು ಗುಂಪು ಸೇರಿ ಕಣಿದು ಕುಪ್ಪಳಿಸಿದರು. ಬಲಿಪಾಢ್ಯಮಿಯ ಮಾರನೇ ದಿನ ಈ ಗೊರೆ ಹಬ್ಬವನ್ನು ಆಚರಿಸಲಾಗತ್ತದೆ. ಅಚ್ಚ ಕನ್ನಡಿಗರೆ ಇರುವ ತಮಿಳುನಾಡಿನ ತಾಳವಾಡಿ ತಾಲೂಕಿನ ಗುಮಟಾಪುರದಲ್ಲಿ ಪ್ರತಿವರ್ಷ ಗೊರೆ ಹಬ್ಬ ಆಚರಿಸಲಾಗುತ್ತದೆ. ಅದರಂತೆ ಈ ವರ್ಷವೂ ಸಹ …

Read More »

ನನ್ನಂಥವನನ್ನು ಹುಡುಕಿ ಸೀಟ್ ಕೊಟ್ಟಿದ್ದು ಬಿಜಿಪಿ ಪಕ್ಷದ ದೊಡ್ಡ ಗುಣ: ರಾಜ್ಯಸಭಾ ಅಭ್ಯರ್ಥಿ

ಬೆಂಗಳೂರು: ನನ್ನಂಥವನನ್ನು ಹುಡುಕಿ ಸೀಟ್ ಕೊಟ್ಟಿದ್ದು ಬಿಜಿಪಿ ಪಕ್ಷದ ದೊಡ್ಡ ಗುಣ ಎಂದು ಕರ್ನಾಟಕದಿಂದ ರಾಜ್ಯಸಭಾ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಡಾ.ಕೆ.ನಾರಾಯಣ್ ಹೇಳಿದ್ದಾರೆ. ಬಿಜೆಪಿ ಹೈಕಮಾಂಡ್ ರಾಜ್ಯದ ಕಮಲ ನಾಯಕರಿಗೆ ಮತ್ತೆ ಶಾಕ್ ನೀಡಿದ್ದು, ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಪಕ್ಷಕ್ಕೆ ಸಂಬಂಧಿಸಿದ ಕರಪತ್ರಗಳನ್ನು ಮುದ್ರಿಸುತ್ತಿದ್ದ ಕೆ ನಾರಾಯಣ್ ಅವರನ್ನು ಆಯ್ಕೆ ಮಾಡಿದೆ. ಈ ವಿಚಾರವಾಗಿ ಮಾತನಾಡಿರುವ ಅವರು, ದೆಹಲಿಯವರು ಯಾವುದೋ ಮೂಲೇಲಿರೋರನ್ನೂ ಗುರುತಿಸಿದ್ದು ಖುಷಿ ವಿಚಾರ …

Read More »

ಬೆಂಗಳೂರು: ರಾಜ್ಯದಲ್ಲಿ ಅಭಿವೃದ್ಧಿ ಪ್ರಾಧಿಕಾರ ರಚನೆ ಕುರಿತು ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಅಭಿವೃದ್ಧಿ ಪ್ರಾಧಿಕಾರ ರಚನೆ ಕುರಿತು ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರಾಜ್ಯದಲ್ಲಿರುವ ಮರಾಠ ಜನಾಂಗದವರ ಅಭಿವೃದ್ಧಿಗಾಗಿ ರಚಿಸಲು ಉದ್ದೇಶಿಸಲಾಗಿದೆ. ಮರಾಠಿ ಭಾಷೆಗೂ ಈ ಪ್ರಾಧಿಕಾರಕ್ಕೂ ಯಾವುದೇ ಸಂಬಂಧ ಇಲ್ಲ. ಮರಾಠ ಜನಾಂಗದವರು ತಲಾತಲಾಂತರಗಳಿಂದ ಕರ್ನಾಟಕದಲ್ಲಿಯೇ ವಾಸವಾಗಿದ್ದು, ಆರ್ಥಿಕವಾಗಿ, ಸಾಮಾಜಿಕವಾಗಿ ಅವರ ಸರ್ವತೋಮುಖ ಅಭಿವೃದ್ಧಿಯಾಗಬೇಕು ಎನ್ನುವ ಆಶಯದಿಂದ ಈ ಪ್ರಾಧಿಕಾರವನ್ನು ಸ್ಥಾಪಿಸಲು ಕ್ರಮವಹಿಸಲಾಗುತ್ತಿದೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ. ‘ಮರಾಠ ಜನಾಂಗದವರು ತಲಾತಲಾಂತರಗಳಿಂದ ಕರ್ನಾಟಕದಲ್ಲಿಯೇ …

Read More »

ಅನುದಾನ ಬಳಸದೆ ವಾಪಸ್ : ಕ್ರಮಕ್ಕೆ ಶಿಫಾರಸ್ಸು

ಬೆಳಗಾವಿ: ‘2019-20ನೇ ಸಾಲಿನಲ್ಲಿ ಬಿಡುಗಡೆಯಾದ ಅನುದಾನ ಬಳಸದೆ ವಾಪಸ್ ಆಗಲು ಕಾರಣರಾದ ಅಧಿಕಾರಿಗಳ ಕುರಿತು ತನಿಖಾ ಸಮಿತಿಯು ವರದಿ ನೀಡಿದೆ. ಅದನ್ನು ಕೂಲಂಕುಷವಾಗಿ ಪರಿಶೀಲಿಸಿ ಸದಸ್ಯರ ಒಮ್ಮತದ ಅಭಿಪ್ರಾಯದಂತೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಕಳುಹಿಸಲಾಗುವುದು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ದರ್ಶನ್ ಎಚ್.ವಿ. ತಿಳಿಸಿದರು. ಸಾಮಾನ್ಯ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸದಸ್ಯ ರಮೇಶ ದೇಶಪಾಂಡೆ, ‘ನಿಗದಿತ ದಿನಕ್ಕಿಂತ ತಡವಾಗಿ ಬಿಲ್ ಸಲ್ಲಿಸಲಾಗಿದೆ. ಜೊತೆಗೆ ತಾಂತ್ರಿಕ ನೆಪವೊಡ್ಡಿ ಬಿಲ್ ಪಾಸ್ …

Read More »

ಮಹೀಂದ್ರ ಸ್ಕಾರ್ಪಿಯೋ ಕಾರನ್ನು ಮರಕ್ಕೆ ಕಬ್ಬಿಣದ ಚೈನ್ ಮೂಲಕ ಕಟ್ಟಿ ಹಾಕಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಮುಂಬೈ: ಸೋಶಿಯಲ್ ಮೀಡಿಯಾದಲ್ಲಿ ಮಹೀಂದ್ರ ಮುಖ್ಯಸ್ಥ ಆನಂದ್ ಮಹೀಂದ್ರ ಇದೀಗ ಸ್ವಾರಸ್ಯಕರ ಮಾಹಿತಿ ಹಂಚಿಕೊಂಡಿದ್ದಾರೆ. ಮಾಲೀಕನೋರ್ವ ತನ್ನ ಮಹೀಂದ್ರ ಸ್ಕಾರ್ಪಿಯೋ ಕಾರನ್ನು ಮರಕ್ಕೆ ಕಬ್ಬಿಣದ ಚೈನ್ ಮೂಲಕ ಕಟ್ಟಿ ಹಾಕಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಫೋಟೋ ಗಮನಿಸಿದ ಆನಂದ್ ಮಹೀಂದ್ರ ವಿವರಣೆಯೊಂದಿಗೆ ಟ್ವೀಟ್ ಮಾಡಿದ್ದಾರೆ. ಇದು ಹೈಟೆಕ್ ಲಾಕಿಂಗ್ ಸಿಸ್ಟಮ್ ಅಲ್ಲ, ಇದರಲ್ಲಿ ಮಾಲೀಕರ ಪೊಸೆಸೀವ್‌ನೆಸ್ ಎದ್ದುಕಾಣುತ್ತಿದೆ. ನನಗೆ ಈ ಚಿತ್ರ ಕೆಲ ನೆನಪನ್ನು ಬಿಚ್ಚಿಡುತ್ತಿದೆ. …

Read More »

ಕೋವಿಡ್ 19 ಕುರಿತಂತೆ ಏಕಾಏಕಿ ವರದಿ ಮಾಡಿದ್ದಕ್ಕಾಗಿ ಚೀನಾದ ಪತ್ರಕರ್ತೆ ಐದು ವರ್ಷಗಳ ಜೈಲು ಶಿಕ್ಷೆ ಎದುರಿಸಬೇಕಿದೆ

ಲಂಡನ್: ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಚೀನಾದ ಮುಖ ಮತ್ತೊಮ್ಮೆ ಬಯಲಾಗಿದ್ದು ವುಹಾನ್‌ನಿಂದ ಕೋವಿಡ್ 19 ಕುರಿತಂತೆ ಏಕಾಏಕಿ ವರದಿ ಮಾಡಿದ್ದಕ್ಕಾಗಿ ಚೀನಾದ ಪತ್ರಕರ್ತೆ ಐದು ವರ್ಷಗಳ ಜೈಲು ಶಿಕ್ಷೆ ಎದುರಿಸಬೇಕಿದೆ. ಸುಳ್ಳು ಮಾಹಿತಿಯನ್ನು ಹರಡಿದ ಆರೋಪದ ಮೇಲೆ ಮಾಜಿ ವಕೀಲೆ, ಪತ್ರಕರ್ತೆ ಜಾಂಗ್ ಝಾನ್ ಅವರನ್ನು ಕಳೆದ 6 ತಿಂಗಳಿನಿಂದ ಶಾಂಫೈ ಬಂಧಿಖಾನೆಯಲ್ಲಿ ಇರಿಸಲಾಗಿದ್ದು ಇದೀಗ ಆಕೆಗೆ 5 ವರ್ಷ ಜೈಲು ಶಿಕ್ಷೆಯನ್ನು ಎದುರಿಸಬೇಕಾಗಿದೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ. …

Read More »

ಯುವತಿ ಮೇಲೆ ಅತ್ಯಾಚಾರ ಮಾಡಿರುವ ಆರೋಪ: ಚಾಮರಾಜಪೇಟೆ ಸಬ್​​ಇನ್​ಸ್ಪೆಕ್ಟರ್ ಅಮಾನತು

ಬೆಂಗಳೂರು  : ಲ್ಯಾಪ್​​ಟಾಪ್ ಕಳ್ಳತನವಾಗಿದೆ ಎಂದು ದೂರು ನೀಡಿದ ಯುವತಿಯನ್ನು ಚಾಮರಾಜಪೇಟೆ ಸಬ್​​ಇನ್​ಸ್ಪೆಕ್ಟರ್ ವಿಶ್ವನಾಥ್ ಆತ್ಯಾಚಾರ ಮಾಡಿದ ಆರೋಪದಡಿ ನಗರ ಪಶ್ಚಿಮ ವಿಭಾಗದ ಡಿಸಿಪಿ ಸಂದೀಪ್ ಪಾಟೀಲ್ ಅಮಾನತುಗೊಳಿಸಿದ್ದಾರೆ. ಕಳೆದ ಆಗಸ್ಟ್ 8ರಂದು ಲಾಪ್ ಟ್ಯಾಪ್ ಕಳ್ಳತನವಾಗಿದೆ ಎಂದು ಆರೋಪಿಸಿ ಚಾಮರಾಜಪೇಟೆ ಪೊಲೀಸ್ ಠಾಣೆಗೆ ಯುವತಿಯೊಬ್ಬರು ದೂರು‌ ನೀಡಿದ್ದರು. ಸಬ್​​ಇನ್​​ಸ್ಪೆಕ್ಟರ್ ವಿಶ್ವನಾಥ್ ಎಂಬುವರು ತನಿಖೆ ಕೈಗೊಂಡು, ತನಿಖೆ ಸೋಗಿನಲ್ಲಿ ಪ್ರತಿ‌ ದಿನ ನನಗೆ ಕರೆ ಮಾಡಿ ಚಾಟ್ ಮಾಡುತ್ತಿದ್ದರು. 12 …

Read More »

ಕಾಲೇಜಿನಲ್ಲಿ ಒಬ್ಬಳೇ ವಿದ್ಯಾರ್ಥಿನಿ ಆಗಮಿಸಿದ್ದಳು: ಪಾಠ ಮಾಡಿದ ಶಿಕ್ಷಕ

ರಾಯಚೂರು : ಇಂದಿನಿಂದ ರಾಜ್ಯದಲ್ಲಿ ಕಾಲೇಜುಗಳು ಮತ್ತೆ ತೆರೆದಿವೆ. ಆದರೆ ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸಿಲ್ಲ. ಕಾಲೇಜುಗಳು ಆರಂಭವಾದರೂ ವಿದ್ಯಾರ್ಥಿಗಳು ಕ್ಲಾಸ್ ಬಂದಿಲ್ಲ. ರಾಯಚೂರಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ಒಬ್ಬಳೇ ವಿದ್ಯಾರ್ಥಿನಿ ಆಗಮಿಸಿದ್ದು, ಆಕೆಗೆ ಉಪನ್ಯಾಸಕರು ಪಾಠ ಮಾಡಿದ್ದಾರೆ. ಒಬ್ಬ ಬಿ.ಕಾಂ. ವಿದ್ಯಾರ್ಥಿನಿಗೆ ಶಿಕ್ಷಕರು ಪಾಠ ಮಾಡಿದ್ದಾರೆ. ಮಾಸ್ಕ್ ಹಾಕಿಕೊಂಡು ಕುಳಿತ ವಿದ್ಯಾರ್ಥಿನಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಉಪನ್ಯಾಸಕರು ಸಹ ಮಾಸ್ಕ್ ಹಾಕಿಕೊಂಡು ಕೋವಿಡ್ ನಿಯಮ ಪಾಲಿಸಿ ಬೋಧನೆ ಮಾಡಿದ್ದಾರೆ. ಈ ಕಾಲೇಜಿನಲ್ಲಿ …

Read More »

ಡಿಸಿಸಿ ಬ್ಯಾಂಕಿನಿಂದ ರೈತರ ಆರ್ಥಿಕಾಭಿವೃದ್ಧಿಗೆ ಹೊಸ ಯೋಜನೆಗಳು ಅನುಷ್ಠಾನಗೊಳ್ಳಲಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬಿಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷ ರಮೇಶ ಕತ್ತಿ ಅವರು ಬಾಲಚಂದ್ರ ಜಾರಕಿಹೊಳಿ ಅವರ ನಿವಾಸಕ್ಕೆ ಭೇಟಿ ನೀಡಿ ಅಭಿನಂದನೆ ಸಲ್ಲಿಕೆ

ಗೋಕಾಕ : ಶತಮಾನೋತ್ಸವದ ಹೊಸ್ತಿಲಿನಲ್ಲಿರುವ ಬಿಡಿಸಿಸಿ ಬ್ಯಾಂಕಿನಿಂದ ರೈತರಿಗೆ ಹೆಚ್ಚಿನ ಪ್ರಮಾಣದಲ್ಲಿ ಸಾಲ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಬಿಡಿಸಿಸಿ ಬ್ಯಾಂಕಿನ ನೂತನ ಆಡಳಿತ ಮಂಡಳಿಗೆ ಸಲಹೆ ಮಾಡಿದರು. ಪ್ರತಿಷ್ಠಿತ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನೂತನ ಅಧ್ಯಕ್ಷರಾದ ಬಳಿಕ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಗೋಕಾಕ ನಿವಾಸಕ್ಕೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ, ಸತ್ಕಾರ ಮಾಡಿದ …

Read More »

ಬಿ.ವೈ.ವಿಜಯೇಂದ್ರ ಅವರನ್ನು ಕೆಲವು ಮಾಧ್ಯಮಗಳು ವೈಭವೀಕರಿಸುವ ಪ್ರಯತ್ನ ನಡೆಸುತ್ತಿವೆ.:ಈಶ್ವರಪ್ಪ

ಶಿವಮೊಗ್ಗ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಕೆಲವು ಮಾಧ್ಯಮಗಳು ವೈಭವೀಕರಿಸುವ ಪ್ರಯತ್ನ ನಡೆಸುತ್ತಿವೆ. ಇದಕ್ಕೆ ನನ್ನ ಅಭ್ಯಂತರವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.ಶಿವಮೊಗ್ಗದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಶಿರಾ ಉಪ ಚುನಾವಣೆಯಲ್ಲಿ ವಿಜಯೇಂದ್ರ ಅವರ ಪ್ರಯತ್ನದಿಂದ ಗೆಲುವು ಸಾಧ್ಯವಾಯಿತು ಎಂದು ಕೆಲವು ಮಾಧ್ಯಮಗಳಲ್ಲಿ ವೈಭವೀಕರಿಸುವ ಪ್ರಯತ್ನ ನಡೆಯಿತು. ಬಿಜೆಪಿ ಯಾವುದೇ ಒಬ್ಬ ವ್ಯಕ್ತಿಯ ಪ್ರಯತ್ನದಿಂದ ಚುನಾವಣೆ ಗೆಲ್ಲಲ್ಲ. ಸಂಘಟನೆಯ ಪ್ರಯತ್ನದಿಂದ ಚುನಾವಣೆಯಲ್ಲಿ ಗೆಲುವು ಸಾಧ್ಯವಾಯಿತು ಎಂದು …

Read More »