Breaking News

ಹೊಸಗುಡ್ಡದಹಳ್ಳಿ ದುರಂತದದಲ್ಲಿ ಬೆಂಕಿಗಾಹುತಿಯಾಯ್ತು ಬದುಕು..!

# ಶಿವಣ್ಣ ಬೆಂಗಳೂರು, ನ.13- ಸುಟ್ಟು ಹೋದ ಕಟ್ಟಡ, ಬೆಂದು ಹೋದ ಮರ, ಸುಟ್ಟು ಕರಕಲಾಗಿರುವ ವಸ್ತುಗಳು, ಬೆಂಕಿಗೆ ಆಹುತಿಯಾಗಿರುವ ಬ್ಯಾರೆಲ್‍ಗಳು… ಇವು ಕಂಡುಬಂದಿದ್ದು ನಗರದ ಮೈಸೂರು ರಸ್ತೆಯ ಹೊಸಗುಡ್ಡದಹಳ್ಳಿಯಲ್ಲಿ. ನವೆಂಬರ್ 10ರಂದು ಸಂಭವಿಸಿದ ಅಗ್ನಿ ಅವಘಡದಲ್ಲಿ ರಾಸಾಯನಿಕ ವಸ್ತುಗಳನ್ನು ಸಂಗ್ರಹಿಸಿದ್ದ ಗೋದಾಮಿ ನಲ್ಲಿ ಬೆಂಕಿ ಕಾಣಿಸಿಕೊಂಡು ಗೋದಾಮಿನಲ್ಲಿದ್ದ ರಾಸಾಯನಿಕ ವಸ್ತುಗಳೆಲ್ಲ ಆಹುತಿಯಾಗಿರುವುದಲ್ಲದೆ ಇಡೀ ಕಟ್ಟಡವನ್ನೇ ಆಪೋಷನ ತೆಗೆದು ಕೊಂಡಿದೆ. ಕಟ್ಟಡದ ಮುಂದಿದ್ದ ಎರಡು ವಿದ್ಯುತ್ ಕಂಬದ ಕೇಬಲ್‍ಗಳು, ಕಾರು, …

Read More »

ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ ರವಿ ಬೆಳಗೆರೆಗೂ ಅಭಿಮಾನಿ ಸಂಸ್ಥೆಗೂ ಅವಿನಾಭಾವ ಸಂಬಂಧ.

ಬೆಂಗಳೂರು, ನ.13- ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ ರವಿ ಬೆಳಗೆರೆಗೂ ಅಭಿಮಾನಿ ಸಂಸ್ಥೆಗೂ ಅವಿನಾಭಾವ ಸಂಬಂಧ. ಉಪನ್ಯಾಸಕ ವೃತ್ತಿ ತೊರೆದು 1987ರಲ್ಲಿ ಬೆಂಗಳೂರಿಗೆ ಬಂದಾಗ ಅವರು ಡಾ.ರಾಜ್‍ಕುಮಾರ್ ರಸ್ತೆಯ ಅಭಿಮಾನಿ ಪ್ರಕಾಶನದ ಬಳಿ ನಿಂತಿದ್ದರು. ಇಲ್ಲಿ ತಮ್ಮ ಪತ್ರಕರ್ತ ಜೀವನ ವೃತ್ತಿ ಕಟ್ಟಿಕೊಳ್ಳಲು ಭಾರೀ ಕನಸು ಕಂಡಿದ್ದರು. ಆಗ ಅಭಿಮಾನಿ ಪ್ರಕಾಶನ ವತಿಯಿಂದ ಹೊರತರಲಾಗುತ್ತಿದ್ದ ಪೊಲೀಸ್ ಫೈಲ್ ಹಾಗೂ ಹಲವು ನಿಯತಾಲಿಕೆಗಳು ಪ್ರಕಟಗೊಳ್ಳುತ್ತಿದ್ದವು. ಇಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತರೊಬ್ಬರು ರವಿಬೆಳಗೆರೆ …

Read More »

KAS ಅಧಿಕಾರಿ ಸುಧಾಗೆ ಮುಂದಿದೆ ಮಾರಿಹಬ್ಬ..!

ಬೆಂಗಳೂರು,ನ.13- ಅಕ್ರಮ ಆಸ್ತಿ ಸಂಪಾದನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದಿಂದ ದಾಳಿಗೊಳಗಾಗಿರುವ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಆಡಳಿತಾಧಿಕಾರಿ ಬಿ.ಸುಧಾಗೆ ಇನ್ನಷ್ಟು ಕಾನೂನಿನ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಎಸಿಬಿ ದಾಳಿ ಸಂದರ್ಭದಲ್ಲಿ ಸುಮಾರು ನೂರು ಕೋಟಿಗೂ ಅಧಿಕ ಆಕ್ರಮ ಆಸ್ತಿ ಸಂಪಾದನೆ ಮಾಡಿರುವುದು ಕಂಡು ಬಂದಿರುವ ಕಾರಣ ಜಾರಿ ನಿದೇರ್ಶನಾಲಯ(ಇಡಿ) ಹಾಗೂ ಆದಾಯ ತೆರಿಗೆ(ಐಟಿ) ಅಧಿಕಾರಿಗಳು ತನಿಖೆ ನಡೆಸುವ ಸಾಧ್ಯತೆ ಹೆಚ್ಚಾಗಿದೆ. ಐದು ಕೋಟಿಗೂ ಹೆಚ್ಚಿನ ಭ್ರಷ್ಟಾಚಾರದ …

Read More »

ಇಂಜಿನ್‍ನಲ್ಲಿ ತಾಂತ್ರಿಕ ದೋಷಎಪಿಎಂಸಿ ಮೈದಾನದಲ್ಲಿ ತುರ್ತು ಭೂ ಸ್ಪರ್ಶ ಮಾಡಿದ. ಎನ್-741 ಹೆಲಿಕಾಪ್ಟರ್,

ಕಾರವಾರ: ಇಂಜಿನ್‍ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ ಭಾರತೀಯ ನೌಕಾದಳಕ್ಕೆ ಸೇರಿದ ಎನ್-741 ಹೆಲಿಕಾಪ್ಟರ್, ಶಿರಸಿ ತಾಲೂಕಿನ ದಾಸನಕೊಪ್ಪ ಗ್ರಾಮದ ಎಪಿಎಂಸಿ ಮೈದಾನದಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ. ಬೆಂಗಳೂರಿನಿಂದ ಗೋವಾದತ್ತ ಹೆಲಿಕಾಪ್ಟರ್ ತೆರಳುತಿದ್ದು, ಈ ವೇಳೆ ಇಂಜಿನ್‍ನಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ನಂತರ ಪೈಲೆಟ್ ದಾಸನಕೊಪ್ಪದ ಮೈದಾನದಲ್ಲಿ ಜೀವರಕ್ಷಣೆಗಾಗಿ ಹೆಲಿಕಾಪ್ಟರ್ ಅನ್ನು ಕೆಳಗಿಳಿಸಿದ್ದಾರೆ. ಇಬ್ಬರು ಪೈಲಟ್, ಓರ್ವ ಕಮಾಂಡಿಂಗ್ ಆಫೀಸರ್ ಈ ಹೆಲಿಕಾಪ್ಟರಿನಲ್ಲಿ ಪ್ರಯಾಣಿಸುತ್ತಿದ್ದು, ಅದೃಷ್ಟವಶಾತ್ ಪೈಲೆಟ್ ಸಮಯ …

Read More »

ದೆಹಲಿಯಲ್ಲಾಗಿರುವ ಬೆಳವಣಿಗೆಗಳB.S.Y.ಗೆ ಮಾಹಿತಿ ನೀಡಿದಶಂಕರಗೌಡ ಪಾಟೀಲ್

ಬೆಳಗಾವಿ – ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ್ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ರಾಜ್ಯದ ಯೋಜನೆಗಳ ಕುರಿತು ದೆಹಲಿಯಲ್ಲಾಗಿರುವ ಬೆಳವಣಿಗೆಗಳ ಮಾಹಿತಿ ನೀಡಿದರು.             ಕಳೆದ ನಾಲ್ಕು ದಿನಗಳಿಂದ ದೆಹಲಿ ಪ್ರವಾಸದಲ್ಲಿದ್ದ ಅವರು, ಹಲವು ಕೇಂದ್ರದ ಮಂತ್ರಿಗಳ ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದ ಅಭಿವೃದ್ಧಿ ಹಾಗೂ ಯೋಜನೆಗಳ ಬಗ್ಗೆ ಚರ್ಚಿಸಿದ ನಂತರ ನಿನ್ನೆ ರಾತ್ರಿ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ರಾಜ್ಯದ …

Read More »

ಶಾಸಕರ ಸಭೆಗಳು ನಡೆಯುತ್ತೇಲೆ ಇರುತ್ತೇವೆ. ಅದಕ್ಕೂ ಸಚಿವ ಸಂಪುಟಕ್ಕೆ ಯಾವುದೇ ಸಂಬಂಧ ಇಲ್ಲ:ಪ್ರಹ್ಲಾದ್ ಜೋಶಿ

ಧಾರವಾಡ: ಶಾಸಕರ ಸಭೆಗಳು ನಡೆಯುತ್ತೇಲೆ ಇರುತ್ತೇವೆ. ಅದಕ್ಕೂ ಸಚಿವ ಸಂಪುಟಕ್ಕೆ ಯಾವುದೇ ಸಂಬಂಧ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಧಾರವಾಡದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವರು, ಸಚಿವ ಸಂಪುಟ ವಿಸ್ತರಣೆ ಸಿಎಂ ಮತ್ತು ಹೈಕಮಾಂಡ್ ಗೆ ಬಿಟ್ಟ ವಿಚಾರ. ಈ ಹಿಂದೆಯೂ ಹುಬ್ಬಳ್ಳಿಯಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆ ಸಂಬಂಧ ಸಭೆ ಆಗಿತ್ತು. ಅದನ್ನೂ ಸಹ ರಹಸ್ಯ ಸಹ ಎಂದಿದ್ದರು. ಅದೆಲ್ಲ ಏನೂ ಇರುವುದೇ ಇಲ್ಲ …

Read More »

ಪಂಚಭೂತಗಳಲ್ಲಿ ರವಿ ಬೆಳಗೆರೆ ಲೀನ-

ಬೆಂಗಳೂರು: ಹೃದಯಾಘಾತದಿಂದ ಇಂದು ಸಾವನ್ನಪ್ಪಿದ್ದ ಹಿರಿಯ ಪತ್ರಕರ್ತ ರವಿ ಬೆಳಗೆರೆ ಅವರ ಅಂತ್ಯಕ್ರಿಯೆ ಬನಶಂಕರಿ ಚಿತಾಗಾರದಲ್ಲಿ ನಡೆಯಿತು. ಮಗ ಕರ್ಣ ಮತ್ತು ಹಿಮವಂತ್, ರವಿ ಬೆಳಗೆರೆ ಅವರ ಅಂತಿಮ ಕಾರ್ಯವನ್ನು ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿಸಿದರು. ತೇಗ, ಮಾವು, ಸಾರ್ವೆ ಸೇರಿದಂತೆ ವಿವಿಧ 1 ಟನ್‍ಗೂ ಹೆಚ್ಚು ಮರದ ಸೌದೆಗಳನ್ನು ಅಂತ್ಯ ಸಂಸ್ಕಾರದ ವೇಳೆ ಬಳಕೆ ಮಾಡಲಾಗಿತ್ತು. ಶಿವರಾಂ ಅವರು ಅಂತ್ಯ ಸಂಸ್ಕಾರದ ಉಸ್ತುವಾರಿಯನ್ನು ವಹಿಸಿಕೊಂಡಿದ್ದರು. ನಿನ್ನೆ ಮಧ್ಯರಾತ್ರಿ ಸುಮಾರು 12.15ರ …

Read More »

ತಾನು ಕ್ಷಮೆ ಯಾಚಿಸುವುದಿಲ್ಲ, ದಂಡವನ್ನೂ ಪಾವತಿಸುವುದಿಲ್ಲ,:ಕುನಾಲ್ ಕಮ್ರಾ

ನವದೆಹಲಿ: ತಾನು ಕ್ಷಮೆ ಯಾಚಿಸುವುದಿಲ್ಲ, ದಂಡವನ್ನೂ ಪಾವತಿಸುವುದಿಲ್ಲ, ಸುಪ್ರೀಂಕೋರ್ಟ್ ಕಾರ್ಯವೈಖರಿ ಟೀಕಿಸಿರುವ ಟ್ವೀಟ್‍ಗಳನ್ನು ಡಿಲೀಟ್ ಮಾಡುವುದಿಲ್ಲ ಎಂದು ಸ್ಟಾಂಡ್‍ಅಪ್ ಕಾಮಿಡಿಯನ್ ಕುನಾಲ್ ಕಮ್ರಾ ಸ್ಪಷ್ಟಪಡಿಸಿದ್ದಾರೆ.   ಅರ್ನಬ್ ಗೋಸ್ವಾಮಿಗೆ ಜಾಮೀನು ನೀಡಿರುವ ಸುಪ್ರೀಂಕೋರ್ಟ್ ನಿರ್ಧಾರವನ್ನು ಕಾಮ್ರಾ ಟ್ವೀಟ್ ಮಾಡಿ ಟೀಕಿಸಿದ್ದರು. ‘ತಮಾಷೆಯ ಗೆರೆಯನ್ನು ಕಾಮ್ರಾ ದಾಟಿದ್ದಾರೆ’ ಎಂದು ಹೇಳಿದ್ದ ಅಟಾರ್ನಿ ಜನರಲ್ ವೇಣುಗೋಪಾಲ್, ಕಾಮ್ರಾ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು 8 ಮಂದಿಗೆ ಅವಕಾಶ ನೀಡಿದ್ದರು. ಕ್ಷಮಾಪಣೆ …

Read More »

ಬಿಜೆಪಿಯಲ್ಲಿ ಯಾರೂ ಶಾಸಕರಾಗಬೇಕು. ಲೋಕಸಭಾ ಸದಸ್ಯರಾಗಬೇಕು ಪ್ರಕಾಶ ಹುಕ್ಕೇರಿ ಹೇಳಿಕೆಗೆ ವಿಧಾನ ಪರಿಷತ್ ಮುಖ್ಯಸಚೇತಕ  ಮಹಾಂತೇಶ ಕವಟಗಿಮಠ ತಿರುಗೇಟು

ಚಿಕ್ಕೋಡಿ : ಸುರೇಶ ಅಂಗಡಿ ಕುಟುಂಬದವರಿಗೆ ಬೆಳಗಾವಿ ಲೋಕಸಭಾ ಟಿಕೆಟ್ ನೀಡಿದ್ರೆ , ನಾನು ಗೆಲ್ಲಿಸಲು ಪ್ರಯತ್ನಿಸುತ್ತೇನೆ ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಹೇಳಿಕೆಗೆ ವಿಧಾನ ಪರಿಷತ್ ಮುಖ್ಯಸಚೇತಕ  ಮಹಾಂತೇಶ ಕವಟಗಿಮಠ ತಿರುಗೇಟು ನೀಡಿದ್ದಾರೆ. ತಾಲ್ಲೂಕಿನ ನವಲಿಹಾಳ ಗ್ರಾಮದಲ್ಲಿ ಶುಕ್ರವಾರ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಹಿರಿಯರು. ಅವರು ತಮ್ಮ ಪಕ್ಷದಲ್ಲಿ ಯಾರು  ಅಭ್ಯರ್ಥಿಯಾಗಬೇಕು. ಯಾರನ್ನು ಲೋಕಸಭಾ ಸದಸ್ಯರಾಗಬೇಕೆಂದು ಹೇಳಿದ್ದರೇ ಅದನ್ನು ಸ್ವಾಗತಿಸುತ್ತಿದ್ದೇ. ಆದರೆ ಬಿಜೆಪಿಯಲ್ಲಿ …

Read More »

1 ಲಕ್ಷ ಲೀಟರ್ ನೀರಿನ ಸಂಗ್ರಹಣೆಯ ಸಾಮರ್ಥ್ಯವಿರುವ ಜಲಸಂಗ್ರಹಾಲಯ ಉದ್ಘಾಟನೆ: ಶಶಿಕಲಾ ಜೊಲ್ಲೆ

ಚಿಕ್ಕೋಡಿ: ಗ್ರಾಮದ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಒದಗಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. ಕ್ಷೇತ್ರದ ಪ್ರಜೆಗಳ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರು ಲಭ್ಯವಾಗಬೇಕು ಎಂಬುದು ನನ್ನ ಗುರಿಯಾಗಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ನಿಪ್ಪಾಣಿ ಮತಕ್ಷೇತ್ರದ ಸುಳಗಾಂವ, ಆಡಿ, ಮತ್ತಿವಾಡೆ ಗ್ರಾಮದಲ್ಲಿ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯಿಂದ ಮಂಜೂರಾದ ಸುಮಾರು 70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ, 1 ಲಕ್ಷ ಲೀಟರ್ …

Read More »