Breaking News

ಕೊರೊನಾ ಮಹಾಮಾರಿಗೆ ಬಲಿಯಾದ ವ್ಯಕ್ತಿಗಳ ಅಂತಿಮ ಸಂಸ್ಕಾರವನ್ನು ಅವರ ಧರ್ಮದ ವಿಧಿ ವಿಧಾನಗಳಂತೆ ನೆರೆವೇರಿಸಿದರು.

ಗೋಕಾಕ: ನಗರದ ಅಂಬಿಗೇರ ಗಲ್ಲಿಯ ನಿವೃತ ಮುಖ್ಯೋಪಾದ್ಯರೊಬ್ಬರು ಕೊರೊನಾ ಮಹಾಮಾರಿಗೆ ಗುರುವಾರ ಬಲಿಯಾಗಿದ್ದು ,ಅವರ ಅಂತ್ಯ ಸಂಸ್ಕಾರವನ್ನು ನಗರಸಭೆ ಸಿಬ್ಬಂದ್ದಿ ಮತ್ತು  ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ನೆರೆವೇರಿಸಿದರು. ಕೊರೊನಾ ಮಹಾಮಾರಿಗೆ ಬಲಿಯಾದ ಮುಖ್ಯೋಪಾದ್ಯಯರ ಅಂತಿಮ ಸಂಸ್ಕಾರವನ್ನು ಅವರ ಧರ್ಮದ ವಿಧಿ ವಿಧಾನಗಳಂತೆ  ನೆರೆವೇರಿಸಿದರು. ಪಿಏಫ್ಐ ಕಾರ್ಯಕರ್ತರು ಸ್ವಯಂ ಪ್ರೇರಣೆಯಿಂದ ಮುಖ್ಯೋಪಾದ್ಯಯವರ ಅಂತ್ಯ ಸಂಸ್ಕಾರ ನೆರೆವೇರಿಸಲು ನಗರಸಭೆ ಸಿಬ್ಬಂದ್ದಿಯೊಂದಿಗೆ ಮುಂದೆ ಬಂದು ಅಂತ್ಯ ಸಂಸ್ಕಾರ ಮಾಡಿರುವುದರಿಂದ ಪಿಎಫ್ಐ ಕಾರ್ಯಕರ್ತರು …

Read More »

ಕೊವಾಕ್ಸಿನ್‌ನ ಕ್ಲಿನಿಕಲ್ ಟ್ರಯಲ್ ಬೆಳಗಾವಿ ಆಸ್ಪತ್ರೆಯಲ್ಲಿ ಆರಂಭ

ಬೆಳಗಾವಿ, ಜುಲೈ 30: ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಆಯ್ಕೆ ಮಾಡಿದ 12 ಕೇಂದ್ರಗಳಲ್ಲಿ ಒಂದಾದ ಬೆಳಗಾವಿ ಮೂಲದ ಜೀವನ್ ರೇಖಾ ಆಸ್ಪತ್ರೆಯಲ್ಲಿ ಬಿಬಿವಿ 152 ಕೋವಿಡ್ -19 ಲಸಿಕೆ ಅಥವಾ ಕೊವಾಕ್ಸಿನ್‌ನ ಮಾನವ ಕ್ಲಿನಿಕಲ್ ಪ್ರಯೋಗ ಪ್ರಾರಂಭವಾಗಿದೆ. ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಕೋವಿಡ್ ಲಸಿಕೆಯಾದ ಕೊವಾಕ್ಸಿನ್‌ನ ಕ್ಲಿನಿಕಲ್ ಪರೀಕ್ಷೆಗಳು ಈಗಾಗಲೇ ಏಮ್ಸ್ ಸೇರಿದಂತೆ 12 ಕೇಂದ್ರಗಳಲ್ಲಿ ಪ್ರಾರಂಭವಾಗಿವೆ. ಜೀವನ್ ರೇಖಾ ನಿರ್ದೇಶಕ ಟಿ.ಎನ್.ಐ.ಇ ಅವರೊಂದಿಗೆ ಮಾತನಾಡಿದ ಡಾ.ಅಮಿತ್ ಭಾಟೆ, …

Read More »

ಲೇಖಕಿಯರ ಸಂಘ: ಅಧಿಕಾರ ಹಸ್ತಾಂತರ

ಬೆಳಗಾವಿ: ಜಿಲ್ಲಾ ಲೇಖಕಿಯರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಡಾ‌.ಹೇಮಾವತಿ ಸೋನೊಳಿ ಅವರಿಗೆ ನಿರ್ಗಮಿತ ಅಧ್ಯಕ್ಷೆ ಜ್ಯೋತಿ ಬದಾಮಿ ಅಧಿಕಾರ ಹಸ್ತಾಂತರಿಸಿದರು. ‘ತಮ್ಮ ಎರಡು ವರ್ಷಗಳ ಅಧಿಕಾರದ ಅವಧಿಯಲ್ಲಿ ಸಾಕಷ್ಟು ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲಾಯಿತು. ಕುಪ್ಪಳ್ಳಿ ಹಾಗೂ ನಿಡಸೋಸಿಯ ಶ್ರೀಮಠದ ಸಾಹಿತ್ಯ ಚಿಂತನ ಕವಿಗೋಷ್ಠಿ ಕಾರ್ಯಕ್ರಮ ಯಶಸ್ವಿಯಾಗಿ ಜನಪ್ರಿಯತೆ ಗಳಿಸಿತು’ ಎಂದು ಜ್ಯೋತಿ ತಿಳಿಸಿದರು. ಉಡುಪಿಯ ಉಪನ್ಯಾಸಕಿ ಸಂಧ್ಯಾ ಶೆಣೈ, ’20 ವರ್ಷಗಳ ಗಟ್ಟಿ ಹೆಜ್ಜೆಗುರುತು ಮೂಡಿಸುತ್ತಾ ಹಿರಿಯ …

Read More »

ಅಂಜುಮನ್ ಸಂಸ್ಥೆಯಿಂದ ಆರೋಗ್ಯ ಸೇವೆ

ಬೆಳಗಾವಿ: ಇಲ್ಲಿನ ಅಂಜುಮನ್ ಎ ಇಸ್ಲಾಂ ಸಮಿತಿಯು ಸಾರ್ವಜನಿಕರಿಗೆ ಉಚಿತವಾಗಿ ಆರೋಗ್ಯ ಸೇವೆ ಒದಗಿಸುವ ಮೂಲಕ ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಸರ್ಕಾರದೊಂದಿಗೆ ಕೈ ಜೋಡಿಸಲು ಸಿದ್ಧತೆ ಮಾಡಿಕೊಂಡಿದೆ. ಲಕ್ಷಣಗಳಿಲ್ಲದಿದ್ದರೂ ಕೋವಿಡ್ ಪಾಸಿಟಿವ್ ಬಂದು ಮನೆಗಳಲ್ಲಿ ಆರೈಕೆಯಲ್ಲಿರುವವರಿಗೆ ಅಥವಾ ಇತರ ಆರೋಗ್ಯ ಸಂಬಂಧಿ ಸಮಸ್ಯೆಯಿಂದ ಉಸಿರಾಟದ ತೊಂದರೆ ಕಾಣಿಸಿಕೊಂಡವರಿಗೆ ಚಿಕಿತ್ಸಾ ಸೇವೆ ನೀಡಲಿದೆ. ರೋಗಿಗಳ ಮನೆಗಳಿಗೇ ಕಳುಹಿಸುವುದಕ್ಕೆಂದು ಈಗಾಗಲೇ 120 ಆಕ್ಸಿಜನ್ ಸಿಲಿಂಡರ್‌ಗಳನ್ನು ಖರೀದಿಸಿ ಸಂಗ್ರಹಿಸಿದೆ. ಸಿಲಿಂಡರ್‌ ಒಂದನ್ನು ₹ 9,500ಕ್ಕೆ ಖರೀದಿಸಲಾಗಿದೆ. …

Read More »

ಕೆಮ್ಮುತ್ತಿದ್ದ ಹುಡುಗಿಯನ್ನು ನೋಡಿ ಕೊರೊನಾ, ಕೊರೊನಾ ಎಂದೆ… ಆದರೆ!

ಮೈಸೂರು: ನಾನು ಕೋವಿಡ್-19 ಪೀಡಿತನಾಗಿದ್ದು ನನ್ನ ತಪ್ಪಿನಿಂದಲೇ. ನಮ್ಮ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಹುಡುಗಿಯೊಬ್ಬಳು ಕೆಮ್ಮುತ್ತಿದ್ದಳು. ಮೊಬೈಲ್‌ನಲ್ಲಿ ಮಾತನಾಡುತ್ತಲೇ ಆಕೆಯನ್ನು ರೇಗಿಸಿದೆ. ಕೊರೊನಾ… ಕೊರೊನಾ… ಎಂದೆ. ಇದರಿಂದ ಸಿಟ್ಟಾದ ಆಕೆ ನೇರವಾಗಿ ನನ್ನ ಬಳಿ ಬಂದು ಕೆಮ್ಮಿದಳು. ನನಗೆ ಬಂದಿದ್ದರೆ, ನಿಮಗೂ ಬರಲಿ ಅಂದಳು. ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ ಕಾರಣ ನಾನು ಮಾಸ್ಕ್‌ಅನ್ನು ಕುತ್ತಿಗೆಗೆ ಇಳಿಸಿಕೊಂಡಿದ್ದೆ. ಅದೇ ಪರಿಸರದಲ್ಲಿ ಉಸಿರಾಡಿದ್ದೆ. ಎರಡ್ಮೂರು ದಿನ ಕಳೆಯೋದರೊಳಗೆ ಕೊರೊನಾ ವೈರಸ್ ಸೋಂಕಿನ ಲಕ್ಷಣ ಕಾಣಿಸಿಕೊಂಡವು. ನನಗೆಲ್ಲಿ …

Read More »

ಆಗಸ್ಟ್ 31 ರವರೆಗೆ ಮಹಾರಾಷ್ಟ್ರ ಲಾಕ್‌-ಡೌನ್ ವಿಸ್ತರಣೆ

  ಮುಂಬೈ: ಹೆಚ್ಚುತ್ತಿರುವ ಕೊರೊನಾವೈರಸ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಮಹಾರಾಷ್ಟ್ರ ಸರ್ಕಾರ ಬುಧವಾರ ಲಾಕ್ ಡೌನ್ ಅನ್ನು ರಾಜ್ಯದಲ್ಲಿ ಆಗಸ್ಟ್ 31 ರವರೆಗೆ ವಿಸ್ತರಿಸಿದೆ. ಕೋವಿಡ್-19 ಹರಡುವುದನ್ನು ತಡೆಗಟ್ಟಲು ಒಳಗೊಂಡಿರುವ ತುರ್ತು ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಸಂಜಯ್ ಕುಮಾರ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.   ಮಿಷನ್ ಬಿಗಿನ್ ಎಗೇನ್ ಉಪಕ್ರಮದ ಭಾಗವಾಗಿ, ಚಿತ್ರಮಂದಿರಗಳು, ಆಹಾರ ಮಳಿಗೆಗಳು, ನ್ಯಾಯಾಲಯಗಳು, ರೆಸ್ಟೋರೆಂಟ್‌ಗಳಿಲ್ಲದ ಮಾಲ್‌ಗಳು ಮತ್ತು ಮಾರುಕಟ್ಟೆ ಸಂಕೀರ್ಣಗಳು ಆಗಸ್ಟ್ …

Read More »

ಚೀನಕ್ಕೆ ಭಾರತದ ತಿರುಗೇಟು..

ಹೊಸದಿಲ್ಲಿ: ಲಡಾಖ್‌ನಲ್ಲಿ ತಿಂಗಳುಗಳಿಂದ ಭಾರತಕ್ಕೆ ಕಿರಿಕಿರಿ ಉಂಟು ಮಾಡಿದ್ದ ಚೀನ, ಈಗ ದಕ್ಷಿಣದ ಹಿಂದೂ ಮಹಾ ಸಾಗರದಲ್ಲಿ ತನ್ನ ಆಧಿಪತ್ಯ ಸ್ಥಾಪಿಸಲು ಮುಂದಾಗಿದೆ. ಇದಕ್ಕೆ ಪ್ರತಿಯಾಗಿ, ಭಾರತೀಯ ನೌಕಾಪಡೆ ತನ್ನ ಸಮರ ನೌಕೆಗಳನ್ನು ಹಿಂದೂ ಮಹಾ ಸಾಗರ ಪ್ರಾಂತ್ಯದಲ್ಲಿ (ಐಒಆರ್‌) ನಿಯೋಜಿಸಿ, ಚೀನಕ್ಕೆ ಸೆಡ್ಡು ಹೊಡೆದಿದೆ.   ಚೀನಕ್ಕೆ ಆಮದಾಗುವ ಕಚ್ಚಾ ತೈಲದಲ್ಲಿ ಶೇ. 80ರಷ್ಟು ಸರಕು ಹಿಂದೂ ಮಹಾ ಸಾಗರದ ಮೂಲಕವೇ ಹಾದು ಹೋಗುವುದರಿಂದ ಆ ಸಮುದ್ರ ಭಾಗವನ್ನು ತನ್ನ …

Read More »

50ಕ್ಕೂ ಹೆಚ್ಚು ಜನರನ್ನ ಕೊಲೆಗೈದ ಆರೋಪದಲ್ಲಿ ಆಯುರ್ವೇದ ವೈದ್ಯನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಹೊಸದಿಲ್ಲಿ: ದಿಲ್ಲಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ 50ಕ್ಕೂ ಹೆಚ್ಚು ಜನರನ್ನ ಕೊಲೆಗೈದ ಆರೋಪದಲ್ಲಿ ಆಯುರ್ವೇದ ವೈದ್ಯನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಆಲಿಘರ್ ನಿವಾಸಿಯಾಗಿದ್ದ ದೇವೇಂದರ್ ಶರ್ಮಾ(62) ಬಂಧಿತ. ಹಲವು ಅಪಹರಣ ಮತ್ತು ಕೊಲೆ ಪ್ರಕರಣಗಳಲ್ಲಿ ದೋಷಿ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ನಕಲಿ ಗ್ಯಾಸ್ ಏಜೆನ್ಸಿ ನಡೆಸುತ್ತಿದ್ದದ್ದಕ್ಕಾಗಿ ಬಂಧಿಸಲಾಗಿತ್ತು . ಕಿಡ್ನಿ ದಂಧೆ ಪ್ರಕರಣದಲ್ಲಿ ಜೈಪುರದ ಸೆಂಟ್ರಲ್ ಜೈಲಿನಲ್ಲಿ ಆತ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ. ಬಳಿ ತಪ್ಪಿಸಿಕೊಂಡಿದ್ದನು …

Read More »

ಬಕ್ರೀದ್ ಸಂಭ್ರಮಕ್ಕೆ ಕೊರೊನಾ ಅಡ್ಡಗಾಲು – ಬೆಳಗಾವಿ ಕುರಿಗಾಹಿಗಳಿಗೆ ಉಡುಪಿಯಲ್ಲಿ ಟೆನ್ಶನ್

ಉಡುಪಿ: ಜಿಲ್ಲೆಯ ಬಕ್ರೀದ್ ಆಚರಣೆಗೆ ಕೊರೊನ ಮಹಾಮಾರಿ ಅಡ್ಡಗಾಲು ಇಟ್ಟಿದೆ. ಮುಸಲ್ಮಾನರ ಪವಿತ್ರ ಮತ್ತು ಅದ್ಧೂರಿ ಹಬ್ಬ ಬಕ್ರೀದ್ ಈ ಬಾರಿ ಕಳೆ ಕಟ್ಟಿಲ್ಲ. ಆರ್ಥಿಕವಾಗಿ ಸಂಕಷ್ಟದಲ್ಲಿರುವ ಮುಸಲ್ಮಾನರು ಈ ಬಾರಿ ಸರಳವಾಗಿ ಬಕ್ರೀದ್ ಆಚರಿಸಲು ನಿರ್ಧಾರ ಮಾಡಿದಂತಿದೆ. ಪ್ರತಿ ವರ್ಷ ಬಕ್ರೀದ್ ಬಂದಾಗ ಉಡುಪಿ ನಗರದ ಬೀಡಿನಗುಡ್ಡೆ ಮೈದಾನದಲ್ಲಿ ನಾಲ್ಕು ದಿನದಲ್ಲಿ ಸಾವಿರದ ಇನ್ನೂರು ಆಡು ಮತ್ತು ಕುರಿ ವ್ಯಾಪಾರ ಆಗುತ್ತಿತ್ತು. ಈ ಬಾರಿ ಕೇವಲ 250 ರಿಂದ …

Read More »

ಆ್ಯಂಟಿಜೆನ್ ಟೆಸ್ಟ್‌ಗೆ ಹೆದರಿ ಮಾರುಕಟ್ಟೆಯನ್ನೇ ಬಂದ್ ಮಾಡಿದ ವ್ಯಾಪಾರಸ್ಥರು!

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಹಾವಳಿ ಜೋರಾಗುತ್ತಿದಂತೆ ಜಿಲ್ಲಾಡಳಿತ ಆ್ಯಂಟಿಜೆನ್ ಟೆಸ್ಟ್‍ಗೆ ಮುಂದಾಗಿದೆ. ನಗರದ ಜನನಿಬಿಡ ಪ್ರದೇಶ, ಮಾರುಕಟ್ಟೆಗಳಲ್ಲಿ ಆ್ಯಂಟಿಜೆನ್ ಟೆಸ್ಟ್ ಮಾಡಲಾಗುತ್ತಿದೆ. ಆದರೆ ಈ ಟೆಸ್ಟ್ ಗೆ ಹೆದರಿ ಹುಬ್ಬಳ್ಳಿಯಲ್ಲಿ ವ್ಯಾಪಾರಸ್ಥರು ಅಂಗಡಿ-ಮುಂಗಟ್ಟುಗಳನ್ನ ಬಂದ್ ಮಾಡಿದ್ದಾರೆ.   ಹುಬ್ಬಳ್ಳಿಯ ದುರ್ಗದ ಬೈಲ್ ಸೇರಿದಂತೆ ಅವಳಿನಗರದ 15 ಕಡೆಗಳಲ್ಲಿ ಧಾರವಾಡ ಜಿಲ್ಲಾಡಳಿತ ಇಂದಿನಿಂದ ರ‍್ಯಾಪಿಡ್ ಟೆಸ್ಟ್ ಆರಂಭಿಸಿದೆ. ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹುಬ್ಬಳ್ಳಿಯ ದುರ್ಗದ ಬೈಲ್ ಗೆ ಭೇಟಿ …

Read More »