ಸಾರಥಿ, ದಾಸ, ಡಿ ಬಾಸ್, ಚಾಲೆಂಜಿಂಗ್ ಸ್ಟಾರ್ ಎಂದೆಲ್ಲಾ ಅಭಿಮಾನಿಗಳಿಂದ ಪ್ರೀತಿಯಿಂದ ಕರೆಯಲ್ಪಡುವ ದರ್ಶನ್ ಇಂದು 44ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ದರ್ಶನ್ ಹುಟ್ಟುಹಬ್ಬದ ವಿಶೇಷವಾಗಿ ಇಂದು ‘ರಾಬರ್ಟ್’ ಚಿತ್ರದ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಟ್ರೇಲರ್ ಬಿಡುಗಡೆಯಾಗಿ 20 ನಿಮಿಷಗಳ ಅವಧಿಯಲ್ಲಿ ಸುಮಾರು 3.50 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. 2:20 ನಿಮಿಷ ಅವಧಿಯ ಟ್ರೇಲರ್ “ನನ್ನನ್ನು ಸಂಹಾರ ಮಾಡ್ತೀನಿ ಅಂತ ಬರೋನು ನನಗಿಂತ ದೊಡ್ಡ ಕ್ರಿಮಿನಲ್ ಆಗಿರಬೇಕು” ಎಂಬ ಧ್ವನಿಯಿಂದ …
Read More »ಬಾಲಿವುಡ್ಗೆ ರವಿ ಬಸ್ರೂರು
ಬೆಂಗಳೂರು: ರವಿ ಬಸ್ರೂರು ಈಗಾಗಲೇ ‘ಕೆಜಿಎಫ್’ ಚಿತ್ರಗಳ ಮೂಲಕ ಬೇರೆ ಭಾಷೆಯ ಚಿತ್ರರಂಗಗಳಿಗೂ ಪರಿಚಿತರಾಗಿದ್ದಾರೆ. ಇನ್ನು, ಈಗಾಗಲೇ ತೆಲುಗು, ಮಲಯಾಳಂ ಚಿತ್ರಗಳಿಗೆ ಕೆಲಸ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಬಾಲಿವುಡ್ಗೂ ಕಾಲಿಟ್ಟಿದ್ದಾರೆ. ಬಾಲಿವುಡ್ನ ಜನಪ್ರಿಯ ನಟ-ನಿರ್ದೇಶಕ ಫರ್ಹಾನ್ ಅಖ್ತರ್, ‘ಯುದ್ರ’ ಎಂಬ ಚಿತ್ರವನ್ನು ನಿರ್ವಿುಸುತ್ತಿದ್ದು, ಈ ಚಿತ್ರಕ್ಕೆ ರವಿ ಬಸ್ರೂರು ಹಿನ್ನೆಲೆ ಸಂಗೀತ ಸಂಯೋಜಿಸುತ್ತಿದ್ದಾರೆ. ಇನ್ನು, ಮತ್ತೊಬ್ಬ ಕನ್ನಡಿಗ ರವಿ ಉದ್ಯಾವರ ಈ ಚಿತ್ರ ನಿರ್ದೇಶಿಸುತ್ತಿದ್ದಾರೆ. ಸೋಮವಾರ ಸೋಷಿಯಲ್ ಮೀಡಿಯಾ …
Read More »ಮಧ್ಯ ಪ್ರದೇಶ: ಬಸ್ ಕಾಲುವೆಗೆ ಬಿದ್ದು 35 ಮಂದಿ ಸಾವು, ಹಲವು ಪ್ರಯಾಣಿಕರು ನಾಪತ್ತೆ
ಸಿಧಿ/ರೇವಾ/ಭೋಪಾಲ್: ಮಧ್ಯ ಪ್ರದೇಶದ ಸಿಧಿ ಜಿಲ್ಲೆಯ ಪಾಟ್ನಾ ಗ್ರಾಮದ ಬಳಿ ಮಂಗಳವಾರ ಬೆಳಗ್ಗೆ ಬಸ್ಸೊಂದು ಸೇತುವೆಯಿಂದ ಕಾಲುವೆಗೆ ಉರುಳಿ ಬಿದ್ದಿದ್ದು, ಏಳು ಮಹಿಳೆಯರು ಸೇರಿದಂತೆ ಕನಿಷ್ಠ 35 ಮಂದಿ ಸಾವನ್ನಪ್ಪಿದ್ದಾರೆ ಮತ್ತು ಇತರ ಹಲವು ಪ್ರಯಾಣಿಕರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈವರೆಗೆ ಕಾಲುವೆಯಿಂದ 35ಕ್ಕೂ ಹೆಚ್ಚು ಶವಗಳನ್ನು ಹೊರತೆಗೆಯಲಾಗಿದೆ. ಸಾವಿನ ಸಂಖ್ಯೆ 40 ದಾಟಬಹುದು ಎಂದು ಇನ್ಸ್ಪೆಕ್ಟರ್ ಜನರಲ್(ರೇವಾ ವಲಯ) ಉಮೇಶ್ ಜೋಗಾ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ …
Read More »ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಸುವ ದಿನಾಂಕ ವಿಸ್ತರಣೆ..!
ಬೆಂಗಳೂರು: 2021ನೇ ಜೂನ್ ತಿಂಗಳಲ್ಲಿ ನಡೆಯುವ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಗೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನ ರಹಿತ ಶಾಲಾ/ ಕಾಲೇಜುಗಳಿಂದ ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿಗಳು. ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳು ಇವರ ಮಾಹಿತಿಯನ್ನು ಆನ್ಲೈನ್ ಮುಖಾಂತರ ನೋಂದಾಯಿಸಲು ಹಾಗೂ ಅದರ ಶುಲ್ಕ ಪಾವತಿಸಲು ದಿನಾಂಕವನ್ನು ವಿಸ್ತರಣೆ ಮಾಡಲು ಹೊಸ ನಿಯಮವನ್ನು ತಿಳಿಸಲಾಗಿದೆ.
Read More »ಉತ್ತರ ಕನ್ನಡ ಜಿಲ್ಲಾಧಿಕಾರಿ ಆಗಿ ಮುಲ್ಲೈ ಮುಹಿಲನ್ ಅಧಿಕಾರ ಸ್ವೀಕಾರ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ. ಪಿ ಅವರು ಅಧಿಕಾರಿ ಸ್ವೀಕರಿಸಿದರು. ಮೂಲತಃ ತಮಿಳುನಾಡಿನ ಮಧುರೈ ನವರಾದ ಅವರು 2013 ರ ನೇ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿದ್ದು, ಪ್ರೋಬೆಷನರಿ ಅವಧಿಯನ್ನು ಬಳ್ಳಾಯರಿಯಲ್ಲಿ ಪೂರೈಸಿದ್ದಾರೆ. ಜಮಖಂಡಿ ಉಪವಿಭಾಗಾಧಿಕಾರಿಯಾಗಿ, ಬೆಳಗಾವಿ ಸ್ಮಾರ್ಟ್ ಸಿಟಿಯ ಎಂಡಿಯಾಗಿ, ಶಿವಮೊಗ್ಗ ಮಹಾನಗರ ಪಾಲಿಕೆಯ ಕಮಿಷನರ್ ಆಗಿ ಮತ್ತು ಶಿವಮೊಗ್ಗ ಸ್ಮಾರ್ಟ್ ಸಿಟಿಯ ಎಂಡಿ, ರಾಮನಗರ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ …
Read More »ಇನ್ಮುಂದೆ ಟ್ರಾಫಿಕ್ ಸಿಗ್ನಲ್ನಲ್ಲಿ ಭಿಕ್ಷೆ ಬೇಡಿದ್ರೆ ಹುಷಾರ್!
ಬೆಂಗಳೂರು: ಬೆಂಗಳೂರು ಸಿಗ್ನಲ್ಗಳಲ್ಲಿ ಭಿಕ್ಷೆ ಬೇಡುವ ಮಂದಿಯ ವಿರುದ್ದ ಸೂಕ್ತವಾದ ಕ್ರಮವನ್ನು ಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರು ಅವರು ಆದೇಶಿಸಿದ್ದಾರೆ. ಬೆಂಗಳೂರು ಸಿಗ್ನಲ್ಗಳಲ್ಲಿ ಭಿಕ್ಷೆ ಬೇಡುವ ಮಂದಿಯಿಂದ ಮಂದಿಯಿಂದ ವಾಹನ ಸವಾರರು ಕಿರಿಕಿರಿ ಅನುಭವಿಸುತ್ತಿದ್ದು, ಇದರಿಂದ ತೊಂದರೆ ಉಂಟಾಗುತ್ತಿದೆ ಹೀಗಾಗಿ ಇವರ ವಿರುದ್ದ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ ಅನೇಕ ಮಂದಿ ಪೊಲೀಸರಿಗೆ ಸೂಚನೆ ನೀಡಿದ್ದರು. ಟ್ರಾಫಿಕ್ ಸಿಗ್ನಲ್ಗಳಲ್ಲಿ ಭಿಕ್ಷೆ ಬೇಡುವುದನ್ನು ತಪ್ಪಿಸುವಂತೆ ಅಯಾ ವ್ಯಾಪ್ತಿಯ ಟ್ರಾಫಿಕ್ …
Read More »ಕೋವಿಡ್ ವಾರಿಯರ್ಸ್ ಗೆ ಸಿಗದ ವಿಮೆ ಪರಿಹಾರ: ಲೋಕಾಯುಕ್ತದಿಂದ ಸ್ವಯಂ ಪ್ರೇರಿತ ದೂರು ದಾಖಲು; ಸರ್ಕಾರಕ್ಕೆ ನೋಟಿಸ್
ಬೆಂಗಳೂರು: ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದ ನಡುವೆಯೇ ಕರ್ತವ್ಯ ನಿರ್ವಹಿಸಿ ಮೃತಪಟ್ಟ ಕೋವಿಡ್ ವಾರಿಯರ್ಸ್ ಗೆ ಸರ್ಕಾರ ಘೋಷಣೆ ಮಾಡಿದ್ದ ವಿಮೆ ಪರಿಹಾರ ಪಾವತಿಯಾಗದ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಸ್ವಯಂಪ್ರೇರಿತ ಅರ್ಜಿ ದಾಖಲಿಸಿಕೊಂಡು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಕೋವಿಡ್ ಕರ್ತವ್ಯದಲ್ಲಿ ಭಾಗಿಯಾಗಿ ಮೃತಪಟ್ಟ ಕೋವಿಡ್ ವಾರಿಯರ್ಸ್ ಕುಟುಂಬಗಳಿಗೆ ವಿಮಾ ಪರಿಹಾರ ಪಾವತಿಯಾಗದ ವಿಷಯವನ್ನು ಕರ್ನಾಟಕ ಲೋಕಾಯುಕ್ತ ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ ಸ್ವಯಂ ಪ್ರೇರಿತ ಅರ್ಜಿ …
Read More »‘ನೀವೇ ಸಿಎಂ ಆದಾಗ ಇಂತಹ ತುಘಲಕ್ ದರ್ಬಾರ್ ನಡೆಸಿ’ : ಸಚಿವ ಕತ್ತಿ ವಿರುದ್ಧ ಸಿದ್ದು ವಾಗ್ದಾಳಿ
ಬೆಂಗಳೂರು : ವಿಲಾಸಿ ವಸ್ತು ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದು ಮಾಡುವುದಾಗಿ ಹೇಳಿದ್ದ ಆಹಾರ ಸಚಿವ ಉಮೇಶ್ ಕತ್ತಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಇಂದು ಸಂಜೆ ( ಫೆ.15 ಸೋಮವಾರ) ಟ್ವಿಟರ್ ನಲ್ಲಿ ಉಮೇಶ್ ಕತ್ತಿ ವಿರುದ್ಧ ವಾಗ್ದಾಳಿ ನಡೆಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಚಿವ ಉಮೇಶ್ ಕತ್ತಿಯವರೇ, ನಿಮ್ಮದೇ ಒಂದು ರಾಜ್ಯ ಕಟ್ಟಿ ನೀವೇ ಮುಖ್ಯಮಂತ್ರಿಗಳಾದಾಗ ಇಂತಹ ತುಘಲಕ್ ದರ್ಬಾರ್ ನಡೆಸಿ. ಈಗ ಕಷ್ಟಪಟ್ಟು …
Read More »ಪಕ್ಷ ಬಿಟ್ಟು ಹೊದಂತಾ ಹಿರಿಯ ನಾಯಕರನ್ನು ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ : ಸತೀಶ್ ಜಾರಕಿಹೊಳಿ
ಬೆಳಗಾವಿ : ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕರು, ಜಿಲ್ಲಾ ಪಂಚಾಯಿತಿ ಸದಸ್ಯರು, ಪಕ್ಷ ಬಿಟ್ಟು ಹೊದಂತಾ ಹಿರಿಯ ನಾಯಕರನ್ನು ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ ಮಾಡಲಾಗುತ್ತಿದೆ. ಕಾಂಗ್ರೆಸ್ ಗೆ ಆಹ್ವಾನ ಮಾಡುವುದು ಪಕ್ಷ ಕಟ್ಟುವ ಒಂದು ಭಾಗವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಇಂದಿನಿಂದ ಹಿರಿಯ ನಾಯಕರನ್ನು ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ ನೀಡಲಾಗುತ್ತಿದ್ದು, ಗೋಕಾಕದಿಂದಲೇ ಆರಂಭಿಸಲಾಗಿದೆ. ಅಶೋಕ …
Read More »ಉಮೇಶ್ ಕತ್ತಿಗೆ ಐಎಎಸ್ ಲಾಬಿಯೇ ಗೊತ್ತಿಲ್ಲ : ಕತ್ತಿಯನ್ನು ತಿವಿದ ಹೊನ್ನಾಳ್ಳಿ ಓರಿ
ಬೆಂಗಳೂರು : ನಮ್ಮದು ಬಡವರ, ಶೋಷಿತರ ಪರವಾದ ಸರ್ಕಾರ. ಈ ರೀತಿ ಧ್ವಂದ್ವ ಹೇಳಿಕೆಗಳನ್ನು ನೀಡಬಾರದು. ಉಮೇಶ್ ಕತ್ತಿಗೆ ಐಎಎಸ್ ಲಾಬಿಯೇ ಗೊತ್ತಿಲ್ಲ ಎಂಬುದಾಗಿ CM ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಪಡಿತರ ಕಾರ್ಡ್ ವಿಚಾರವಾಗಿ ಸಚಿವ ಉಮೇಶ್ ಕತ್ತಿ ಗೊಂದಲದ ಹೇಳಿಕೆ ಕುರಿತಂತೆ ಮಾತನಾಡಿದಂತ ಅವರು, ಉಮೇಶ ಕತ್ತಿ, IAS ಲಾಬಿಯೇ ಗೊತ್ತಿಲ್ಲ. ನಮ್ಮದು ಬಡವರ, ಶೋಷಿತರ ಪರವಾದ ಸರ್ಕಾರ. ಈ ರೀತಿಯ ದ್ವಂದ್ವ ಹೇಳಿಕೆಗಳನ್ನು ನೀಡಬಾರದು. …
Read More »
Laxmi News 24×7