Breaking News

ಕಳೆದ ಎರಡು ದಿನಗಳಿಂದ ಯುವತಿಯ ಬ್ಯಾಕ್‍ಫ್ಲಿಪ್ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು

.ನವದೆಹಲಿ: ಕಳೆದ ಎರಡು ದಿನಗಳಿಂದ ಯುವತಿಯ ಬ್ಯಾಕ್‍ಫ್ಲಿಪ್ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ. ಸೀರೆ ಧರಿಸಿ ಮಾಡಿರುವ ಕಸರತ್ತು ಕಂಡ ನೆಟ್ಟಿಗರು ಮೆಚ್ಚುಗೆ ಸೂಚಿಸಿ ಶೇರ್ ಮಾಡಿಕೊಳ್ಳುತ್ತಿದ್ದಾರೆ. ಬ್ಯಾಕ್‍ಫ್ಲಿಪ್ ಮಾಡಿರುವ ಯುವತಿಯ ಹೆಸರು ಮಿಲಿ ಸರ್ಕಾರ. ಈ ಬ್ಯಾಕ್‍ಫ್ಲಿಪ್ ಸೇರಿದಂತೆ ಹಲವು ಕಸರತ್ತಿನ ವೀಡಿಯೋಗಳನ್ನು ಮಿಲಿ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿಕೊಂಡಿದ್ದಾರೆ. ಮಿಲಿ ಓರ್ವ ಯೋಗಾಪಟು, ಕಟೆಂಪರಿ, ಡ್ಯಾನ್ಸರ್ ಆಗಿದ್ದಾರೆ. ಬಾಲಿವುಡ್ ನಟ ಟೈಗರ್ ಶ್ರಾಫ್ ಸಹ …

Read More »

ಜೈಲಿಗೆ ಹೋಗಿ ಬಂದರೂB.S.Y.ಗೆ ಬುದ್ಧಿ ಇಲ್ಲ: ವಾಟಾಳ್

ಹಾಸನ: ಜೈಲಿಗೆ ಹೋಗಿ ಬಂದರೂ ಯಡಿಯೂರಪ್ಪರಿಗೆ ಬುದ್ಧಿ ಇಲ್ಲ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಸಿಎಂ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.ಇಂದು ಹಾಸನದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪರವರೇ ನಾವು ಹೋರಾಟದ ಮೂಲಕ ಜೈಲಿಗೆ ಹೋಗುತ್ತಿದ್ದೇವೆ. ನಿಮ್ಮ ಹಾಗೆ ಬೇರೆಯದಕ್ಕೆ ಜೈಲಿಗೆ ಹೋಗಿಲ್ಲ. ನಾಳೆ ಕೇರಳ ಮತ್ತು ತಮಿಳುನಾಡಿನವರು ಪ್ರಾಧಿಕಾರ ಮಾಡಲು ಕೇಳಬಹುದು. ಎಲ್ಲರೂ ಪ್ರಾಧಿಕಾರ ಮಾಡಿ ಎಂದು ಹೇಳ್ತಾರೆ ಆಗ ಪ್ರಾಧಿಕಾರ ಮಾಡ್ತೀರಾ ಎಂದು ಪ್ರಶ್ನೆ ಮಾಡಿದರು. ಗೋವಾದಲ್ಲಿ ಶೇ …

Read More »

ರೆಡ್ಡಿ ಬ್ರದರ್ಸ್ ಮತ್ತು ರಾಮುಲು ನಡುವೆ ಬಿರುಕು

ಬಳ್ಳಾರಿ: ಗಣಿ ಜಿಲ್ಲೆ ಬಳ್ಳಾರಿ ರೆಡ್ಡಿಗಳ ಮೂಲಕ ದೇಶದಲ್ಲಿಯೇ ಗುರುತಿಸಿಕೊಳ್ಳುವಂತಾಗಿತ್ತು. ಆದರೆ ದಿನೇ ದಿನೇ ರೆಡ್ಡಿಗಳ ಪಾರುಪತ್ಯ ಜಿಲ್ಲೆಯಲ್ಲಿ ಕಡಿಮೆಯಾದಂತೆ ಕಾಣಿಸುತ್ತಿದೆ. ಅದರಲ್ಲೂ ಅಖಂಡ ಬಳ್ಳಾರಿ ಜಿಲ್ಲೆ ಇಬ್ಭಾಗವಾದ ಮೇಲಂತೂ ಈ ಸಂಶಯ ರಾಜಕೀಯ ವಲಯದಲ್ಲಿ ಮತ್ತಷ್ಟು ಜೋರಾಗಿದೆ. ಇದೆಲ್ಲದರ ನಡುವೆಯೂ ಸಚಿವ ರಾಮುಲು, ರೆಡ್ಡಿ ಬ್ರದರ್ಸ್ ಜೊತೆಗಿದ್ದರೆ ಯಾರು ಏನು ಮಾಡಿಕೊಳ್ಳಲು ಆಗಲ್ಲ ಎಂಬ ಮಾತಿತ್ತು. ಆದರೀಗ ಬದಲಾದ ರಾಜಕೀಯ ಸನ್ನಿವೇಶದಲ್ಲಿ ರೆಡ್ಡಿ ಬ್ರದರ್ಸ್ ಮತ್ತು ರಾಮುಲು ನಡುವೆ …

Read More »

ಸಕ್ಕರೆ ಗೊಂಬೆ ತಯಾರಿಕೆ ಒಂದು ಕಲೆ

ಸಕ್ಕರೆ ಆರತಿಯ ಪರಿಷೆ- ಗೌರಿಹಬ್ಗೌರಿಹಬ್ಬ ಎಂದರೆ ಅಣ್ಣ ತಂಗಿಯರ ಹಾಗೂ ಸೊಸೆ ಮಾವಂದಿರ, ಭಾವನಾತ್ಮಕ ಸಂಬಂಧಕ್ಕೆ ಬೆಸುಗೆ ಹಾಕುವ ಹಬ್ಬ ಎನ್ನಲಾಗುತ್ತಿದೆ.ಕೆಲವು ಪ್ರತಿಷ್ಠಿತ ಮನೆಗಳಲ್ಲಿ ಹಾಗೂ ದೇವಸ್ಥಾನದಲ್ಲಿ ಮಾತ್ರ, ಪ್ರತಿಷ್ಠಾಪಿಸುವ ಗೌರಮ್ಮನ ವಿಗ್ರಹಕ್ಕೆ ಗೌರಿ ಹುಣ್ಣಿಮೆ ರಾತ್ರಿಯಂದು ಸಕ್ಕರೆ ಗೊಂಬೆಗಳಿಂದ ಬೆಳಗುವ ಮೂಲಕ ಹಬ್ಬ ಪರಿಪೂರ್ಣವಾಗಲಿದೆ.ಮಕ್ಕಳು ಹೆಂಗಳೆಯರು ಗೌರಿಗೆ ಬೆಳಗಲು ಓಡಾಡುವ ಹೆಣ್ಣು ಮಕ್ಕಳ ಸಂಭ್ರಮ ಹೇಳತೀರದು. ಸಕ್ಕರೆ ಗೊಂಬೆಗಳಿರುವ ತಟ್ಟೆಯಲ್ಲಿ ದೀಪ ಹಚ್ಚಿಕೊಂಡು ಗೌರಮ್ಮನ ವಿಗ್ರಹಕ್ಕೆ ಆರತಿ ಎತ್ತಿ …

Read More »

ಬೆಳಗಾವಿ, ನಿಪ್ಪಾಣಿ ಕಾರವಾರವನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು,ಅಜಿತ್ ಪವಾರ್ ಹೇಳಿಕೆ ನೀಡಿ ಇತ್ತೀಚೆಗೆ ಕನ್ನಡಿಗರ ಆಕ್ರೋಶಕ್ಕೆ ಕಾರಣ

ಕಾರವಾರ: ಬೆಳಗಾವಿ, ನಿಪ್ಪಾಣಿ, ಕಾರವಾರವನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬುದಾಗಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿಕೆ ನೀಡಿ ಇತ್ತೀಚೆಗೆ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದ್ದರು. ಆದರೆ ಕೇಂದ್ರ ಸರ್ಕಾರಿ ಸ್ವಾಮ್ಯದ ಬಿಎಸ್‍ಎನ್‍ಎಲ್ ಕಾರವಾರವನ್ನು ಈಗಾಗಲೇ ಮಹಾರಾಷ್ಟ್ರಕ್ಕೆ ಸೇರಿಸುವ ಮೂಲಕ ಕಾರವಾರದ ತನ್ನ ಗ್ರಾಹಕರಿಗೆ ‘ವೆಲ್ ಕಮ್ ಟು ಮಹಾರಾಷ್ಟ್ರ’ ಎಂಬ ಸಂದೇಶ ರವಾನಿಸಿ ಕೆಣಕಿದೆ. ಯಾವುದೇ ಕಂಪನಿಯ ನೆಟ್‍ವರ್ಕ್ ಇರಲಿ ಗ್ರಾಹಕರು ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ತೆರಳಿದಾಗ ಆ ರಾಜ್ಯಕ್ಕೆ …

Read More »

ಫೋನ್ ಕಾಲ್, ಮೂರುಸಾವಿರಕ್ಕೆ ಕೇಸ್ ಖಲಾಸ್.!? ಪೊಲೀಸ್ ಇಲ‍ಾಖೆಯ ಕೆಲ ಭ್ರಷ್ಠ ಅಧಿಕಾರಿಗಳಿಂದಲೇ ತನಗೆ ಅನ್ಯಾಯವಾಗಿದೆ.

ಕೂಡ್ಲಿಗಿ :ಆರೋಪಿಯಿಂದಲೇ ಗಂಭೀರ ಆರೊಪನೂತನ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕು ಎಂ.ಬಿ ಅಯ್ಯನಹಳ್ಳಿಯ,ಅಕ್ರಮ ಮಧ್ಯ ಪ್ರಖರಣ ಆರೋಪಿಯೋರ್ವನು, ಪೊಲೀಸ್ ಇಲ‍ಾಖೆಯ ಕೆಲ ಭ್ರಷ್ಠ ಅಧಿಕಾರಿಗಳಿಂದಲೇ ತನಗೆ ಅನ್ಯಾಯವಾಗಿದೆ. ಅವರ ದ್ವಿಮುಖ ನೀತಿಯಿಂದಾಗಿ ಅನ್ಯಾಯವಾಗಿದೆ ಹಾಗೂ ತಾರತಮ್ಯವಾಗಿದೆ ಎಂದು ಗಂಭೀರವಾಗಿ ಆರೋಪಿಸಿದ್ದು,ತಮ್ಮ ಗ್ರಾಮಸ್ಥರೊಡಗೂಡಿ ಈ ಕುರಿತು ಹೇಳಿಕೆ ನೀಡಿದ್ದಾನೆ.ಸದರಿ ಪ್ರಕರಣದಲ್ಲಿ ತನ್ನೊಟ್ಟಿಗೆ ಬಂಧಿಸಿದ್ದ ಮೂವರು ಆರೋಪಿಗಳನ್ನುಆರೋಪದಿಂದ ಕೈಬಿಡಲಾಗಿದೆ,ಠಾಣೆಯಲ್ಲಿರುವ ಕೆಲ ಭ್ರಷ್ಠರೇ ಅವರನ್ನು ಕೇಸ್ ನಿಂದ ಖುಲಾಸೆಯಾಗಿಸಿದ್ದಾರೆ, ಆರೋಪಿಗಳನ್ನು ಹಣ ಹಾಗೂ ಪ್ರಭಾವಿಗಳ …

Read More »

ಕೆಜಿಎಫ್ ಚಿತ್ರ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನದ ‘ಹೊಂಬಾಳೆ ಫಿಲ್ಮ್ಸ್‌’ ಬ್ಯಾನರ್‌ನಲ್ಲಿ ಪ್ರಭಾಸ್‌ ಸಿನಿಮಾ

ಬೆಂಗಳೂರು: ಕೆಜಿಎಫ್ ಚಿತ್ರ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನದ ‘ಹೊಂಬಾಳೆ ಫಿಲ್ಮ್ಸ್‌’ ಬ್ಯಾನರ್‌ನಲ್ಲಿ ಸೆಟ್ಟೇರಲಿರುವ ಹೊಸ ಸಿನಿಮಾ ಘೋಷಣೆಯಾಗಿದ್ದು, ಟಾಲಿವುಡ್‌ ನಟ ಪ್ರಭಾಸ್‌ ಜೊತೆ ಪ್ಯಾನ್‌ ಇಂಡಿಯಾ ಸಿನಿಮಾ ಮಾಡುವುದಾಗಿ ಪ್ರಶಾಂತ್ ನೀಲ್ ಘೋಷಿಸಿದ್ದಾರೆ. ಈಗಾಗಲೇ ಕೆಜಿಎಫ್ ಚಾಪ್ಟರ್-1 ಭಾರತೀಯ ಚಿತ್ರರಂಗದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿದ್ದು, ಕೆಜಿಎಫ್-2 ಚಿತ್ರ ಕೂಡ ಬಿಡುಗಡೆಗೆ ಸಜ್ಜಾಗಿದೆ. ಭಾರತೀಯ ಸಿನಿರಂಗದಲ್ಲಿ ಹೊಸ ನಿರೀಕ್ಷೆಯನ್ನು ಮೂಡಿಸಿದೆ. ಇದೇ ವೇಳೆ ಕೆಜಿಎಫ್ ಬಳಿಕ ನಿರ್ದೇಶಕ ಪ್ರಶಾಂತ್ ನೀಲ್ …

Read More »

ಗೋಕಾಕ್ ಫಾಲ್ಸ್ ಬಳಿ ನವಜಾತ ಗಂಡು ಶಿಸುವೊಂದು ಪತ್ತೆ

  ಗೋಕಾಕ್: ಗೋಕಾಕ್ ಫಾಲ್ಸ್ ಬಳಿ ನವಜಾತ ಗಂಡು ಶಿಸುವೊಂದು ಪತ್ತೆಯಾಗಿದೆ. ಗೋಕಾಕ ಫಾಲ್ಸ್ ಸಮೀಪದ ರಸ್ತೆ ಪಕ್ಕದಲ್ಲಿ ಅಂದಾಜು 3 ದಿನದ ನವಜಾತ ಗಂಡು ಶಿಶುವನ್ನು ಬಿಟ್ಟು ಹೋಗಲಾಗಿದೆ. ನವ್ಹೆಂಬರ್ 26 ರಂದು, ಗುರುವಾರ ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಶಿಶು ಪತ್ತೆಯಾಗಿದೆ. ಶಿಶುವನ್ನು ಸ್ಥಳಿಯ ಸಂಚಾರಿ ಆರೋಗ್ಯ ಘಟಕದ ಸಿಬ್ಬಂದಿ ರಕ್ಷಣೆ ಮಾಡಿ ಬೆಳಗಾವಿಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಹಸ್ತಾಂತರಿಸಿದ್ದಾರೆ. ಮಗುವಿನ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ …

Read More »

ಸನ್ನಿಡಿಯೋಲ್ ಅವರಿಗೆ ಕೊರೊನಾ ಪಾಸಿಟಿವ್

ಮುಂಬೈ,ಡಿ.2- ಇತ್ತೀಚೆಗೆ ಭುಜದ ಶಸ್ತ್ರ ಚಿಕಿತ್ಸೆಗೆ ಒಳ ಗಾಗಿದ್ದ ಬಾಲಿವುಡ್ ನಟ ಹಾಗೂ ಸಂಸದ ಸನ್ನಿಡಿಯೋಲ್ ಅವರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಸನ್ನಿಡಿಯೋಲ್ ಅವರು ತಮ್ಮ ಟ್ವಿಟ್ಟರ್ ಮೂಲಕ ಈ ಸುದ್ದಿ ತಿಳಿಸಿದ್ದು ನನಗೆ ಕೊರೊನಾ ಸೋಂಕು ಬಂದಿರುವುದು ದೃಢಪಟ್ಟಿರುವುದರಿಂದ ನಾನು ವಿಶ್ರಾಂತಿ ಪಡೆಯುತ್ತಿದ್ದೇನೆ, ನನ್ನ ಸಂಪರ್ಕದಲ್ಲಿ ಇರುವವರು ಕೂಡ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಭುಜದ ಶಸ್ತ್ರಚಿಕಿತ್ಸೆಯ ನಂತರ ಸನ್ನಿಡಿಯೋಲ್ ಮನಾಲಿ ಯಲ್ಲಿರುವ ತಮ್ಮ ಫಾರ್ಮ್‍ಹೌಸ್‍ನಲ್ಲಿ ವಿಶ್ರಾಂತಿ …

Read More »

ಹೆಚ್ಚಿದ ಅಗರಬತ್ತಿ ಬೇಡಿಕೆ, ವಿದೇಶಕ್ಕೂ ಪಸರಿಸಿದ ಪರಿಮಳ..!

ಬೆಂಗಳೂರು, ಡಿ.2- ಭಾರತೀಯ ಅಗರ್‍ಬತ್ತಿ ಉದ್ಯಮವು ದೇಶೀಯ ಮಾರುಕಟ್ಟೆಯಲ್ಲಿ ಕಳೆದ ಎರಡು ವರ್ಷಗಳಿಂದ ಕ್ಷಿಪ್ರಗತಿಯಲ್ಲಿ ರಫ್ತಿನಲ್ಲೂ ಸಕಾರಾತ್ಮಕ ಬೆಳವಣಿಗೆ ಕಾಣುತ್ತಿದೆ ಎಂದು ಅಖಿಲ ಭಾರತ ಅಗರ್‍ಬತ್ತಿ ಉತ್ಪಾದಕರ ಸಂಘದ ಅಧ್ಯಕ್ಷ ಅರ್ಜುನ್ ರಂಗಾ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷದ ಆದಾಯಕ್ಕೆ ಹೋಲಿಸಿದರೆ ಈ ವರ್ಷ ಕೇವಲ 10 ತಿಂಗಳಲ್ಲೇ ದಾಖಲೆಯ ವಹಿವಾಟು ನಡೆದಿದೆ. ಅಮೆರಿಕ, ಇಂಗ್ಲೆಂಡ್, ಮಲೇಷಿಯಾ, ನೈಜೀರಿಯಾ ರಾಷ್ಟ್ರಗಳು ಅಗರ್‍ಬತ್ತಿ ಹಾಗೂ ಸಂಬಂಧಿತ ಉತ್ಪನ್ನಗಳಿಗೆ ಹೆಚ್ಚಿನ …

Read More »