ಮಂಗಳೂರು: ಭಾರತದ ಹೆಬ್ಬುಲಿಗಳ ಅಟ್ಟಹಾಸಕ್ಕೆ ಪತರುಗುಟ್ಟಿದ ಪಾಕಿಸ್ತಾನ ಕಾರ್ಗಿಲ್ ಬಿಟ್ಟು ಓಡಿಹೋಗಿ 21 ವರ್ಷಗಳು ಕಳೆದಿವೆ. ಭಾರತೀಯ ಯೋಧರ ಧೈರ್ಯ, ಸಾಹಸ, ದೇಶಪ್ರೇಮದ ಪ್ರತೀಕವಾಗಿ ಕಾರ್ಗಿಲ್ ಭಾರತದಲ್ಲೇ ಉಳಿದಿದೆ. ತ್ರಿವರ್ಣ ಧ್ವಜ ಸ್ವಚ್ಛಂದವಾಗಿ ಹಾರುತ್ತಿದೆ. ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಹುತಾತ್ಮರಾದವರ ಕಥೆಯೇ ರೋಮಾಂಚನಕಾರಿ ಯಾದರೆ, ಯುದ್ಧದಲ್ಲಿ ಗೆದ್ದು, ಭಾರತಮಾತೆಗೆ ವಿಜಯದ ತಿಲಕವಿಟ್ಟ ವೀರ ಸೇನಾನಿಗಳ ಹೋರಾಟ ಅದೊಂದು ಇತಿಹಾಸ. ಇಂತಹ ವೀರ ಸೇನಾನಿಗಳ ಪೈಕಿ ಕರಾವಳಿಯಲ್ಲಿ ಹೆಮ್ಮೆಯ ಯೋಧ ಪ್ರವೀಣ್ …
Read More »ಅರಣ್ಯ ಸಚಿವ ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಆನಂದ್ ಸಿಂಗ್ಗೆ ಕೊರೊನಾ ಸೋಂಕು ದೃಢವಾಗಿದೆ.
ಬಳ್ಳಾರಿ: ಅರಣ್ಯ ಸಚಿವ ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಆನಂದ್ ಸಿಂಗ್ಗೆ ಕೊರೊನಾ ಸೋಂಕು ದೃಢವಾಗಿದೆ. ಸಚಿವ ಆನಂದ್ ಸಿಂಗ್ ಶುಕ್ರವಾರ ಸ್ವಯಂ ಪ್ರೇರಿತರಾಗಿ ಕೋವಿಡ್ ಟೆಸ್ಟ್ ಮಾಡಿಸಿದ್ದರು. ಅದರ ವರದಿ ಶನಿವಾರ ರಾತ್ರಿ ಬಂದಿದ್ದು, ವರದಿಯಲ್ಲಿ ಆನಂದ್ ಸಿಂಗ್ ಅವರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಯಾವುದೇ ರೋಗ ಲಕ್ಷಣಗಳಿಲ್ಲದೇ ಆನಂದ್ ಸಿಂಗ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಎ ಸಿಂಪ್ಟಮ್ಯಾಟಿಕ್ ಕೇಸ್ ಆಗಿರುವುದರಿಂದ ಆನಂದ್ ಸಿಂಗ್ ಮನೆಯಲ್ಲೇ ಚಿಕಿತ್ಸೆ …
Read More »50 ವರ್ಷ ಮೇಲ್ಪಟ್ಟವರನ್ನು ಹಾಗೂ ಗರ್ಭಿಣಿಯರನ್ನು ಗುರುತಿಸಿ ಅವರಿಗೆ ಸಂಬಳಸಹಿತ ರಜೆ
ಬೆಂಗಳೂರು: ಕೊರೊನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವುದರ ನಡುವೆಯೂ ನಗರವನ್ನು ಸ್ವಚ್ಛವಾಗಿಡಲು ಶ್ರಮಿಸುತ್ತಿರುವ ಪೌರಕಾರ್ಮಿಕರಿಗೆ ಬಿಬಿಎಂಪಿ ಅನೇಕ ಸವಲತ್ತುಗಳನ್ನು ಪ್ರಕಟಿಸಿದೆ. ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವವವರಲ್ಲಿ 50 ವರ್ಷ ಮೇಲ್ಪಟ್ಟವರನ್ನು ಹಾಗೂ ಗರ್ಭಿಣಿಯರನ್ನು ಗುರುತಿಸಿ ಅವರಿಗೆ ಸಂಬಳಸಹಿತ ರಜೆ ನೀಡುವುದಕ್ಕೆ ಆಯಾ ವಲಯದ ಮುಖ್ಯ ಎಂಜಿನಿಯರ್ಗಳು ಹಾಗೂ ಜಂಟಿ ಆಯುಕ್ತರ ಮೂಲಕ ಕೇಂದ್ರ ಕಚೇರಿಗೆ ಪ್ರಸ್ತಾವ ಸಲ್ಲಿಸಬೇಕು ಎಂದು ವಿಶೇಷ ಆಯುಕ್ತ ಡಿ.ರಂದೀಪ್ (ಆರೋಗ್ಯ) ಸುತ್ತೋಲೆ ಹೊರಡಿಸಿದ್ದಾರೆ. ಪೌರಕಾರ್ಮಿಕರಿಗೆ, ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ …
Read More »ಬಿಜೆಪಿ ಮುಖಂಡನಿಂದ ಎರಡನೇ ಪತ್ನಿ ಹಾಗೂ ಆಕೆಯ ಸಂಬಂಧಿಕರ ಮೇಲೆ ಹಲ್ಲೆ
ಹುಬ್ಬಳ್ಳಿ: ಬಿಜೆಪಿ ಮುಖಂಡನೊಬ್ಬ ಗುಟ್ಟಾಗಿ ಎರಡನೇ ಮದುವೆಯಾಗಿದ್ದು, ಪಡೆದುಕೊಂಡ ಹಣವನ್ನು ವಾಪಸ್ ಕೇಳಿದ್ದಕ್ಕೆ ಪತ್ನಿಯನ್ನೇ ರಸ್ತೆಯಲ್ಲಿ ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಹುಬ್ಬಳ್ಳಿಯ ಅಕ್ಷಯ ಕಾಲೋನಿಯಲ್ಲಿ ಘಟನೆ ನಡೆದಿದೆ. ಕಲಘಟಗಿ ತಾಲೂಕಿನ ಹಿರೇಹೊನ್ನಳ್ಳಿ ಬಿಜೆಪಿ ಮುಖಂಡ, ಆತನ ಮೊದಲ ಪತ್ನಿ ಮತ್ತು ಮಕ್ಕಳು ಸೇರಿಕೊಂಡು ಎರಡನೇ ಪತ್ನಿ ಹಾಗೂ ಆಕೆಯ ಸಂಬಂಧಿಕರ ಮೇಲೆ ಹಲ್ಲೆ ಮಾಡಿದ್ದಾರೆ. ಮೊದಲ ಪತ್ನಿ ಇದ್ದರೂ ಆಕೆ ಮೃತಪಟ್ಟಿರುವುದಾಗಿ ನಂಬಿಸಿದ್ದ ಬಿಜೆಪಿ ಮುಖಂಡ 2012 ರಲ್ಲಿ ಎರಡನೇ ಮದುವೆಯಾಗಿದ್ದಾನೆ. …
Read More »ಮಕ್ಕಳ ಆನ್ಲೈನ್ ಶಿಕ್ಷಣಕ್ಕಾಗಿ ಮಾರಿದ ಹಸುವನ್ನು ವಾಪಸ್ ಕೊಡಿಸುವೆ: ಸೋನು ಸೂದ್
ಶಿಮ್ಲಾ: ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಾರದೆಂದು ತಾನು ಸಾಕಿದ ಹಸುವನ್ನೇ ಮಾರಿ ಆನ್ಲೈನ್ ಶಿಕ್ಷಣಕ್ಕಾಗಿ ಮೊಬೈಲ್ ಕೊಡಿಸಿದ ಸುದ್ದಿ ಭಾರೀ ವೈರಲ್ ಆಗುತ್ತಿದೆ. ಸದಾ ಮಾನವೀಯತೆಯ ಮೂಲಕ ರಿಯಲ್ ಲೈಫ್ನಲ್ಲಿ ಹೀರೋ ಆಗಿರೋ ಬಾಲಿವುಡ್ ನಟ ಸೋನು ಸೂದ್ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಹೌದು. ಹಸು ಮಾರಿದ ತಂದೆಯ ಸುದ್ದಿಗೆ ಟ್ವೀಟ್ ಮಾಡಿರುವ ಸೋನು ಸೂದ್, ಆನ್ಲೈನ್ ಶಿಕ್ಷಣಕ್ಕಾಗಿ ಮಾರಿದ ಹಸುವನ್ನು ಮಕ್ಕಳ ತಂದೆಗೆ ವಾಪಸ್ ಕೊಡಿಸುತ್ತೇನೆ. ಸದ್ಯ ನಂಗೆ ಅವರ …
Read More »ರಾಜ್ಯದ ಹಲವೆಡೆ ಧಾರಾಕಾರ ಮಳೆ
ಬೆಂಗಳೂರು: ರಾಜ್ಯದ ಹಲವೆಡೆ ಧಾರಾಕಾರ ಮಳೆ ಆಗ್ತಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬಡದಾಳ ಹಳ್ಳದಲ್ಲಿ ಕೊಚ್ಚಿಹೋಗ್ತಿದ್ದ ವಾಹನವನ್ನು ಸ್ಥಳೀಯರು ಹಗ್ಗ ಕಟ್ಟಿ ಎಳೆದಿದ್ದಾರೆ. ವಾಹನದಲ್ಲಿದ್ದ ಐವರನ್ನು ರಕ್ಷಣೆ ಮಾಡಲಾಗಿದೆ. ದಾವಣಗೆರೆ ಜಿಲ್ಲೆಯಲ್ಲೂ ಮಳೆ ಆರ್ಭಟ ಜೋರಾಗಿದೆ. ಜಗಳೂರು ತಾಲೂಕಿನ ಸಾಲಹಳ್ಳಿ-ಹಾಲಹಳ್ಳಿ ಮಧ್ಯೆ ಇರೋ ಚೆಕ್ಡ್ಯಾಂ ಕೊಚ್ಚಿಕೊಂಡು ಹೋಗಿದೆ. ದಾವಣಗೆರೆ ಬಾಡಾದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ರಾಯಚೂರು ಜಿಲ್ಲೆಯಲ್ಲೂ ಧಾರಾಕಾರ ಮಳೆ ಆಗ್ತಿದೆ. ಮಸ್ಕಿ ತಾಲೂಕಿನ ಮಾರಲದಿನ್ನಿಯಲ್ಲಿರುವ ಮಸ್ಕಿ ಜಲಾಶಯದಿಂದ …
Read More »ಕೃಷ್ಣಜನ್ಮಾಷ್ಟಮಿಗೆ ಇಸ್ಕಾನ್ನಲ್ಲಿ ನೇರ ದರ್ಶನ ಇಲ್ಲ- ಆನ್ಲೈನ್ ಮೂಲಕ ನೇರ ಪ್ರಸಾರ
ಬೆಂಗಳೂರು: ಕೊರೊನಾ ಎಫೆಕ್ಟ್ ಹಬ್ಬಹರಿದಿನಗಳಿಗೆ ತಟ್ಟಿದೆ. ವರಮಹಾಲಕ್ಷ್ಮೀಹಬ್ಬ, ಗಣೇಶ್ ಚತುರ್ಥಿ, ಶ್ರೀಕೃಷ್ಣಜನ್ಮಾಷ್ಟಮಿ ಹೀಗೆ ಸಾಲು ಸಾಲು ಹಬ್ಬಗಳು ಬರಲಿವೆ. ಶ್ರೀಕೃಷ್ಣಜನ್ಮಾಷ್ಟಮಿಗೆ ಈಗಾಗಲೇ ಇಸ್ಕಾನ್ನಲ್ಲಿ ಸಿದ್ಧತೆ ಆರಂಭಿಸಲಾಗಿದೆ. ಕೊರೊನಾದಿಂದ ಈ ಬಾರಿ ಇಸ್ಕಾನ್ನಲ್ಲಿ ನೇರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಆದರೆ ಆನ್ಲೈನ್ ಮೂಲಕ ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಆಗಸ್ಟ್ 11, 12 ರಂದು ನಡೆಯುವ ಶ್ರೀಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮಗಳನ್ನ ಯೂಟ್ಯೂಬ್, ಫೇಸ್ಬುಕ್, ಇನ್ಸ್ಟಾಗ್ರಾಮ್, ಟ್ವಿಟ್ಟರ್ ವೀಕ್ಷಿಸಬಹುದಾಗಿದೆ. ಶ್ರೀರಾಧಾಕೃಷ್ಣಚಂದ್ರ ದೇವರಿಗೆ ಮಾಡುವ ಅಭಿಷೇಕವನ್ನ ನೇರಪ್ರಸಾರ …
Read More »ಇಂದು ದೇಶಾದ್ಯಂತ ಕಾರ್ಗಿಲ್ ವಿಜಯೋತ್ಸವಸಂಭ್ರಮ……..
ನವದೆಹಲಿ: ಇಂದು ದೇಶಾದ್ಯಂತ ಕಾರ್ಗಿಲ್ ವಿಜಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಕಾರ್ಗಿಲ್ ಯುದ್ಧದಲ್ಲಿ ಮಡಿದ ಸೈನಿಕರಿಗೆ ಭಾರತೀಯರು ಗೌರವ ಸಲ್ಲಿಸುತ್ತಿದ್ದಾರೆ. ಜುಲೈ 26 ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತೀಯ ಸೈನಿಕರು ವಿಜಯಪತಾಕೆಯನ್ನು ಹಾರಿಸಿದ ದಿನವಾಗಿದೆ. ಅಂದರೆ 1999ರ ಜುಲೈ 26ರಂದು 60 ದಿನಗಳ ಕಾರ್ಗಿಲ್ ಕದನ ಅಂತ್ಯವಾಗಿತ್ತು. ಪಾಕ್ ಮೇಲೆ ಭಾರತೀಯ ಯೋಧರು ವಿಜಯ ಸಾಧಿಸಿದ ಸ್ಮರಣಾರ್ಥ ಇಂದು ದೇಶದೆಲ್ಲೆಡೆ ‘ಕಾರ್ಗಿಲ್ ವಿಜಯ್ ದಿವಸ್’ ಆಚರಣೆ ಮಾಡಲಾಗುತ್ತಿದೆ.ಭಾರತೀಯ ಸೈನ್ಯದ ಶೌರ್ಯ, …
Read More »ಗಣಿನಾಡು ಬಳ್ಳಾರಿಯಲ್ಲಿ ಮತ್ತೆ ಮಚ್ಚು ಲಾಂಗ್ ಗಳ ಸದ್ದು
ಬಳ್ಳಾರಿ: ಗಣಿನಾಡು ಬಳ್ಳಾರಿಯಲ್ಲಿ ಮತ್ತೆ ಮಚ್ಚು ಲಾಂಗ್ ಗಳ ಸದ್ದು ಮಾಡಿದ್ದು ಹಾಡಹಗಲೇ ರೌಡಿಶೀಟರ್ ಸಿಡಿ ರಮೇಶ್ (30)ನನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದಾರೆ. ಬಳ್ಳಾರಿಯ ಕೌಲ್ ಬಜಾರ್ ಪ್ರದೇಶದ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಬಳಿಯ ಟಿಬಿ ಸ್ಯಾನಿಟೆರಿಯಂ ಬಳಿ ಕೊಚ್ವಿ ಕೊಲೆ ಮಾಡಿದ್ದಾರೆ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವುದಾಗಿ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯ ಹಿಂಭಾಗದಲ್ಲಿ ಸಿಡಿ ರಮೇಶ್ ಇರುವುದನ್ನು ಗಮನಿಸಿದ ದುಷ್ಕರ್ಮಿಗಳ ತಂಡ ಆಟೋದಲ್ಲಿ ಬಂದ …
Read More »ನವಲಗುಂದ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಗುಂಡಿನ ಸದ್ದು……..
ಧಾರವಾಡ: ಜಿಲ್ಲೆಯ ನವಲಗುಂದ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಗುಂಡಿನ ಸದ್ದು ಮೊಳಗಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಮಲ್ಲಪ್ಪ ಕರಿ ಎಂಬಾತ ಅದೇ ಗ್ರಾಮದ ಶರಣಪ್ಪ ಕಾಳೆ ಎಂಬಾತನ ಮೇಲೆ ಗುಂಡು ಹಾರಿಸಿದ್ದಾನೆ. ಇಬ್ಬರ ಮಧ್ಯೆ ಹಣದ ವಿಚಾರವಾಗಿ ಜಗಳ ನಡೆದಿತ್ತು. ಈ ಹಿನ್ನೆಲೆಯಲ್ಲಿ ಕೋಪಗೊಂಡ ಮಲ್ಲಪ್ಪ ಗುಂಡು ಹಾರಿಸಿದ್ದಾನೆ. ಶರಣಪ್ಪನ ಹೊಟ್ಟೆ ಮತ್ತು ಕೈಗೆ ಗುಂಡು ತಗುಲಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ನವಲಗುಂದ ಪೊಲೀಸರು ಭೇಟಿ …
Read More »