Breaking News

. ಲಾಕ್ ಡೌನ್ ಬಂದೋಬಸ್ತ್ ಗೆ ಸೇನಾ ಪಡೆ ಆಗಮಿಸಲಿದೆ ಇದೊಂದು ಸುಳ್ಳು ಸುದ್ದಿ:

ಬೆಳಗಾವಿ: ಲಾಕ್ ಡೌನ್ ಬಂದೋಬಸ್ತ್ ಗೆ ಸೇನಾ ಪಡೆ ಆಗಮಿಸಲಿದೆ ಎಂಬ ವದಂತಿ ಹರಿದಾಡುತ್ತಿದ್ದು, ಈ ವಿಚಾರವಾಗಿ ಬೆಳಗಾವಿ ಡಿಸಿಪಿ ಸೀಮಾ‌ ಲಾಟ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ.‌ ಸೇನಾಪಡೆ ಆಗಮಿಸಲಿದೆ ಎಂಬುವುದನ್ನು ಅಲ್ಲಗೆಳೆದ ಅವರು, ಇದೊಂದು ಸುಳ್ಳು ಸುದ್ದಿ, ಬೆಳಗಾವಿ ಪೊಲೀಸರೆ ಇಲ್ಲಿನ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲಿದ್ದಾರೆ. ಸೇನೆ ಬಂದಿಲ್ಲ, ಬರೋದು ಇಲ್ಲ ಎಂದು ಹೇಳಿದ್ರು.‌ ಬೆಳಗಾವಿ ಜನತೆ ವದಂತಿಗಳಿಗೆ ಕಿವಿಗೊಡಬೇಡಿ. ಜಿಲ್ಲೆಗೆ ಸಮಂಧಿಸಿದ ಕೊರೊನಾ ಶಂಕಿತರ ರಿಪೋರ್ಟ್ ಗಳು …

Read More »

ಅಂಗಡಿಕಾರರು ಅನಗತ್ಯವಾಗಿ ಹೆಚ್ಚಿನ ದರ ಪಡೆದರೆ ಲೈಸೆನ್ಸನ್ನು ರದ್ದು : ಪ್ರಕಾಶ ಹೋಳೆಪ್ಪಗೋಳ

ಗೋಕಾಕ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಕಿರಾಣಿ ದಿನಸಿ ಹಾಗೂ ಅಗತ್ಯ ವಸ್ತುಗಳ ಬಗ್ಗೆ ಕೆಲವು ಅಂಗಡಿಗಳಲ್ಲಿ ತಾತ್ಕಾಲಿಕ ಕೊರತೆ ಸೃಷ್ಟಿಸುತ್ತಿರುವ ಬಗ್ಗೆ ಮತ್ತು ಅನಗತ್ಯವಾಗಿ ಹೆಚ್ಚಿನ ದರಗಳನ್ನು ಪಡೆಯುತ್ತಿರುವ ಬಗ್ಗೆ ತಿಳಿದು ಬಂದಿದೆ. ಇಂತಹ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಈ ತರಹ ಪರಿಸ್ಥಿತಿಯ ಲಾಭ ಪಡೆದು ಗ್ರಾಹಕರನ್ನು ವಂಚಿಸುವುದು ಕಾನೂನು ಪ್ರಕಾರ ಅಪರಾಧವಾಗುತ್ತದೆ. ಆದ್ದರಿಂದ ತಾಲೂಕಿನ ಎಲ್ಲ ಅಂಗಡಿಕಾರರು ಯಾವುದೇ ರೀತಿ ತಾತ್ಕಾಲಿಕ ಕೊರತೆ ಸೃಷ್ಟಿಸುವುದಾಗಲಿ ಅಥವಾ ಅನಗತ್ಯವಾಗಿ …

Read More »

ಕೌಜಲಗಿಯಲ್ಲಿ ಕೊರೋನಾ ವೈರಸ್ ಬಗ್ಗೆ ಅರಿವು ಜಾಥಾ

ಸಮೀಪದ ಗೋಸಬಾಳ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಬಗರನಾಳ, ಬಿಲಕುಂದಿ, ಗೋಸಬಾಳ ಗ್ರಾಮಗಳಲ್ಲಿ ಕೊರೊನಾ ವೈರಸ್ ತಡೆಗಟ್ಟುವ ಮುನ್ನೆಚ್ಚರಿಕೆ ಜಾಥಾ ಬಿಲಕುಂದಿ ಗ್ರಾಮದಲ್ಲಿ ಇತ್ತೀಚೆಗೆ ಜರುಗಿತು. ಗೋಸಬಾಳ ಗ್ರಾ.ಪಂ. ಅಧ್ಯಕ್ಷ ಶಿವಲಿಂಗ ಬಳಿಗಾರ ಜಾಥಾದ ನೇತೃತ್ವ ವಹಿಸಿ ಮಾತನಾಡಿ ಕೊರೊನಾ ಮಹಾಮಾರಕವಾಗಿದೆ. ಕೊರೊನಾ ಸೊಂಕು ನಮ್ಮ ನಮ್ಮ ಗ್ರಾಮಗಳಲ್ಲಿ ಹರಡದಂತೆ ಮುನ್ನೆಚ್ಚರಿಕೆಯಾಗಿ ಪ್ರತಿಯೊಬ್ಬರು ಮಾಸ್ಕ ಧರಿಸಬೇಕೆಂದು ಹೇಳಿದರು. ಊರಿನ ಪ್ರತಿಯೊಂದು ಮನೆ ಮನೆಗೆ ತೆರಳಿ ಗ್ರಾಮಸ್ಥರಿಗೆ ಮಾಸ್ಕ ವಿತರಿಸಲಾಯಿತು. ಜಾಥಾದಲ್ಲಿ …

Read More »

ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಮೂರು ಜಿಲ್ಲೆಯಲ್ಲಿಯೂ ಹಾಲು ಖರೀದಿ ಸ್ಥಗಿತಗೊಳಿಸಲಾಗುತ್ತಿದೆ.

ಶಿವಮೊಗ್ಗ: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ದೇಶಾದ್ಯಂತ ಲಾಕ್ ಡೌನ್ ಘೋಷಿಸಲಾಗಿದ್ದು, ಇಂದು ಮತ್ತು ನಾಳೆ ಶಿವಮೊಗ್ಗ, ಚಿತ್ರದುರ್ಗ ಹಾಗೂ ದಾವಣಗೆರೆ ಹಾಲು ಒಕ್ಕೂಟ ರೈತರಿಂದ ಹಾಲು ಖರೀದಿಸದಿರಲು ನಿರ್ಧರಿಸಿದೆ. ಈಗಾಗಲೇ ಡೈರಿಯಲ್ಲಿಯೆ ಹೆಚ್ಚಿನ ಪ್ರಮಾಣದ ಹಾಲು ಶೇಖರಣೆ ಆಗಿದ್ದು, ಸರಬರಾಜು ಆಗುತ್ತಿಲ್ಲ. ಈ ಹಿನ್ನಲೆಯಲ್ಲಿ ಶಿವಮೊಗ್ಗ ಹಾಲು ಒಕ್ಕೂಟದ ವ್ಯಾಪ್ತಿಗೆ ಒಳಪಡುವ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಮೂರು ಜಿಲ್ಲೆಯಲ್ಲಿಯೂ ಹಾಲು ಖರೀದಿ ಸ್ಥಗಿತಗೊಳಿಸಲಾಗುತ್ತಿದೆ. ಈ ಕುರಿತು ಹಾಲು ಒಕ್ಕೂಟದ …

Read More »

ಕೊರೋನಾ ಕುರಿತ ಸರ್ವ ಪಕ್ಷಗಳ ಸಭೆಯಲ್ಲಿ ಕೈಗೊಂಡ ನಿರ್ಣಯಗಳು ಇಲ್ಲಿವೆ “…

ಬೆಂಗಳೂರು, ಮಾ.29-ಕೊರೋನಾ ತಡೆಯಲು ತೆಗೆದುಕೊಂಡಿರುವ ಲಾಕ್ ಡೌನ್ ಕ್ರಮದಿಂದಾಗಿ ಗಡಿಗಳಲ್ಲಿ ಸಿಕ್ಕಿಕೊಂಡಿರುವ ಜನರ ವೈದ್ಯಕೀಯ ತಪಾಸಣೆ ನಡೆಸಿ, ಅವರಿಗೆ ಆಶ್ರಯ ಕಲ್ಪಿಸಲು ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ವಿಧಾನಸೌಧದಲ್ಲಿ ನಡೆದ ಸರ್ವಪಕ್ಷ ನಾಯಕರ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಂಕಿಗೆ ಒಳಗಾಗಿರುವ ಪ್ರಯಾಣಿಕರಿಗೆ ಕ್ವಾರಂಟೈನ್ ವ್ಯವಸ್ಥೆಗೆ ಒಳಪಡಿಸಲು ಹಾಗೂ ಆರೋಗ್ಯವಾಗಿರುವ ಪ್ರಯಾಣಿಕರನ್ನು ಅವರ ಸ್ಥಳಗಳಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರು, …

Read More »

ಎಚ್ಚರಿಕೆ : ಧೂಮಪಾಯಿಗಳನ್ನು ಮೊದಲು ಕಾಡಲಿದೆ ಕರೋನಾ ವೈರಸ್..!

ಕೊರೋನಾ ಸಾಂಕ್ರಾಮಿಕ ಸೋಂಕಿನ ಶಂಕಿತ ವ್ಯಕ್ತಿಗಳು ಧೂಮಪಾನಿಗಳಾಗಿದ್ದರೆ ಅವರುಗಳ ಮೇಲೆ ಸೋಂಕು ಕ್ಷಿಪ್ರವಾಗಿ ಇನ್ನಷ್ಟು ಪರಿಣಾಮ ಬೀರುತ್ತಿರುವುದಕ್ಕೆ ಸಮಗ್ರ ಪುರಾವೆ ದೊರೆತಿದೆ. ಮಪಾನಿಗಳಿಗೆ ಶ್ವಾಸಕೋಶ ಮತ್ತು ಹೃದಯ ಸೋಂಕಿನ ಅಪಾಯದ ತೀವ್ರತೆಗಳು ಹೆಚ್ಚಿವೆ, ಇದರಿಂದ ಅವರುಗಳು ಉಸಿರಾಟದ ತೊಂದರೆಗಳಿಗೂ ಸಿಲುಕಲಿದ್ದಾರೆ. ಸೋಂಕಿನಿಂದ ಅವರು ಕ್ಷಯರೋಗದಂತಹ ರೋಗಗಳಿಗೂ ತುತ್ತಾಗುತ್ತಿದ್ದಾರೆ. ಇದರರ್ಥ ಧೂಮಪಾನ ಮಾಡದ ವ್ಯಕ್ತಿಗಳಿಗೆ ಹೋಲಿಸಿದರೆ ಧೂಮಪಾನಿಗಳು ಕೋವಿಡ್-19ಗೆ ತುತ್ತಾಗುವ ಸಾಧ್ಯತೆಗಳು ಹೆಚ್ಚಿವೆ. ಧೂಮಪಾನಿಗಳಿಗೆ ಮೊದಲೇ ಶ್ವಾಸಕೋಶಗಳು ಹಾನಿಗೊಳಗಾಗಿರುವುದರಿಂದ ಅವರಿಗೆ ಕೊರೋನಾ …

Read More »

ಅಥಣಿ-ಅನಗತ್ಯ ಓಡಾಡುವವರ ಬೈಕ್ ಗಳನ್ನು ವಶಪಡಿಸಿಕೊಂಡು ಲಾಕ್ ಮಾಡಿದ್ದಾರೆ.

ಅಥಣಿ- ಅಥಣಿ ನಗರದಲ್ಲಿ  ಲಾಕ್ ಡೌನ್ ಹಿನ್ನೆಲೆಯಲ್ಲಿ ಮನೆಯಿಂದ ಹೊರಗಡೆ ತಿರುಗಾಡುವವರಿಗೆ ಲಾಠಿ ಬಿಸುವ ಬದಲು ಪೊಲೀಸರು ಹೊಸ ಪಾಠ ಕಲಿಸುತ್ತಿದ್ದಾರೆ. ಅನಗತ್ಯ ಓಡಾಡುವವರ ಬೈಕ್ ಗಳನ್ನು ವಶಪಡಿಸಿಕೊಂಡು ಲಾಕ್ ಮಾಡಿದ್ದಾರೆ. ಸುಮ್ಮನೆ ವ್ಯರ್ಥವಾಗಿ ದ್ವಿಚಕ್ರ ವಾಹನದ ಮೇಲೆ  ತಿರುಗಾಡುವವರಿಗೆ ಪಾಠ ಕಲಿಸಲು ನಗರ ಪೊಲೀಸರು ಅವರ ವಾಹನಗಳನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ವಶಪಡಿಸಿಕೊಂಡಿರುವ ಬೈಕ್ ಗಳನ್ನು ಲಾಕ್‌ಡೌನ್ ಮುಗಿಯುವರೆಗೆ ಅವರಿಗೆ ಹಸ್ತಾಂತರಿಸದಿರಲು ನಿರ್ಧರಿಸಿದ್ದಾರೆ. ಈಗಾಗಲೇ ಸುಮಾರು 40ಕ್ಕಿಂತಲೂ ಅಧಿಕ …

Read More »

ಸ್ವಗ್ರಾಮಗಳತ್ತ ಕಾರ್ಮಿಕರ ವಲಸೆ : ಬೆಂಗಳೂರಲ್ಲೂ ದೆಹಲಿ ಪರಿಸ್ಥಿತಿ ನಿರ್ಮಾಣವಾಗದಂತೆ ಇಚ್ಛೆತ್ತ ಜಿಲ್ಲಾಡಳಿತ

ಬೆಂಗಳೂರು, ಮಾ.28- ದೆಹಲಿಯಲ್ಲಿ ಕಾರ್ಮಿಕರು ಸಾಮೂಹಿಕವಾಗಿ ವಲಸೆ ಹೋಗುತ್ತಿರುವ ದೃಶ್ಯಗಳು ಕರಳು ಕಿವುಚುತ್ತಿವೆ. ಬೆಂಗಳೂರಿನಲ್ಲೂ ಆ ರೀತಿಯ ಸನ್ನಿವೇಶ ಸೃಷ್ಟಿಯಾಗಬಾರದು ಎಂಬ ಕಾರಣಕ್ಕೆ ಬೆಂಗಳೂರು ಜಿಲ್ಲಾಡಳಿತ ಕೂಲಿ ಕಾರ್ಮಿಕರಿಗೆ ತಾತ್ಕಾಲಿಕ ವಾಸ್ತವ್ಯದ ವ್ಯವಸ್ಥೆ ಮಾಡುತ್ತಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಶಿವಮೂರ್ತಿ ಮತ್ತವರ ತಂಡ ನಿನ್ನೆಯಿಂದ ಕಾರ್ಯಾಚರಣೆ ನಡೆಸುತ್ತಿದ್ದು, ಪ್ರಥಮ ಹಂತದಲ್ಲಿ ಬೆಂಗಳೂರಿನ ಹೊರ ವಲಯದಲ್ಲಿರುವ ಮೂರು ಅಪಾರ್ಟ್ ಮೆಂಟ್ ಮತ್ತು ಎರಡು ಹಾಸ್ಟೇಲ್ ಗಳನ್ನು ಗುರುತಿಸಿದೆ. ಹೊಸದಾಗಿ ನಿರ್ಮಿಸಲಾದ ಅಪಾರ್ಟ್ …

Read More »

ಜನರ ಮುಂದೆ ಏಕಾಏಕಿ ಇಂತಹ ಸ್ಥಿತಿ ಬಂದಿದೆ ಒಂದು ಸಲ ಬಿಟ್ಟು ಮೂರು ಬಾರಿ ತಿಳಿ ಹೇಳಿ:ಗೋಕಾಕ ಪೊಲೀಸರಿಗೆ ಸತೀಶ ಜಾರಕಿಹೊಳಿ‌ ಸಲಹೆ

ಗೋಕಾಕ: ಒಂದು ಸಲ‌ ಬಿಟ್ಟು ಮೂರು ಬಾರಿ ತಿಳಿಸಿ ಹೇಳಿ. ಹೊಡೆಯುವದರಲ್ಲಿ ಏನೂ ಅರ್ಥವಿಲ್ಲ ಅದರಿಂದ ಪರಿಹಾರವೂ ಇಲ್ಲ. ಜನರಿಗೆ ತಿಳುವಳಿಕೆ ಹೇಳುವುದು ಮೊದಲು ಅಗತ್ಯವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಇಂದು‌‌ ನಗರದಲ್ಲಿ ಮಾತನಾಡಿ ಜನರು ಕೂಡ ಪದೇ ಪದೇ ನಿಯಮಗಳನ್ನು ‌ಉಲ್ಲಂಘಿಸಿದರೆ ಕ್ರಮ ತೆಗೆದುಕೊಳ್ಳಿ, ಬಡೆಯುವಂತ ಅವಕಶ್ಯಕತೆಯಿಲ್ಲ. ಜನರು ನೀರು ಮತ್ತು ದಿನನಿತ್ಯದ ವಸ್ತುಗಳಿಗಾಗಿ ಪರದಾಡುತ್ತಿದ್ದಾರೆ. ಏಕಾಏಕಿ ಬಂದ ಇಂತಹ ಸ್ಥಿತಿ ಇದೇ ಮೊದಲ …

Read More »

ಆರೋಗ್ಯಇಲಾಖೆ ಸಿಬ್ಬಂದಿಯ ಮೇಲೆ ಪೋಲೀಸರ ಹಲ್ಲೆ ಖಂಡಿಸಿ ಜಿಲ್ಲಾಧಿಕಾರಿಗೆ ಮನವಿ

ಬೆಳಗಾವಿ  ಆರೋಗ್ಯಇಲಾಖೆ  ಸಿಬ್ಬಂದಿಯ ಮೇಲೆ ಪೋಲೀಸರ ಹಲ್ಲೆ ಖಂಡಿಸಿ ಆರೋಗ್ಯ ಮೇಲ್ವಿಚಾರಕರು ಹಾಗೂ ಆರೋಗ್ಯ ಸಹಾಯಕರ ಜಿಲ್ಲಾ ಸಂಘದ ವತಿಯಿಂದ ಮಾನ್ಯ ಜಿಲ್ಲಾಧಿಕಾರಿಗಳಿಗೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ, ಪೋಲೀಸ್ ಆಯುಕ್ತರಿಗೆ, ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.         

Read More »