Breaking News

ರಾಜಕೀಯ ವೈರತ್ವವನ್ನು ಮರೆತು ಸ್ವತಃ ಯಡಿಯೂರಪ್ಪನವರೆ ಇಂದಿರಾ ಕ್ಯಾಂಟೀನಲ್ಲಿ‌ ಹಸಿದವರಿಗೆ ಹೊಟ್ಟೆ ತುಂಬಿಸುವ ಕೆಲಸ ಮಾಡ್ತಿದಾರೆ

ರಾಜಕೀಯ ವೈರತ್ವವನ್ನು ಮರೆತು ಸ್ವತಃ ಯಡಿಯೂರಪ್ಪನವರೆ ಇಂದಿರಾ ಕ್ಯಾಂಟೀನಲ್ಲಿ‌ ಹಸಿದವರಿಗೆ ಹೊಟ್ಟೆ ತುಂಬಿಸುವ ಕೆಲಸ ಮಾಡ್ತಿದಾರೆ. ಈ ಸಮಯದಲ್ಲಿ ಮೋದಿ ಹೇಳಿದ್ಕೆ ನಾನ್ ಚಪ್ಪಾಳೆ ತಟ್ಟಲ್ಲ, ಆವತ್ತು ಸಿದ್ದು ಕ್ಯಾಂಟೀನ್ ಮಾಡಿದ್ಕೆ ಇವತ್ತು ಊಟ ಸಿಕ್ತಿರೋದು ಅಂತ ಕೆಳಮಟ್ಟದ ರಾಜಕೀಯ ಮಾಡೋದು ಬಿಟ್ಟು ‌ಎಲ್ಲರು ಒಂದಾಗಿ. ಇವತ್ತು ನೀವು ಸೋಲಿಸಬೇಕಿರುವುದು ಮೋದಿನೊ, ಸಿದ್ದುನೊ, ಕಾಂಗ್ರೆಸ್ಸೊ, ಬಿಜೆಪಿನೊ ಅಲ್ಲ…. ಇಡೀ ದೇಶಕ್ಕೆ ಮಾರಕವಾಗಿರೊ ಕೊರೊನವನ್ನ! ?

Read More »

ಕೊರೊನಾ: ಶಂಕಿತರ ಐವರಲ್ಲಿ, 2 ವರದಿಗಳು ನೆಗೆಟಿವ್: ಡಾ.ಎಸ್.ಬಿ. ಬೊಮ್ಮನಹಳ್ಳಿ

ಬೆಳಗಾವಿ : ಕೊರೊನಾ ಶಂಕಿತರನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು. ಅವರಲ್ಲಿ ಇಬ್ಬರ ವರದಿ ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಯೋಗಾಲಯಕ್ಕೆ ಕಳಿಸಲಾದ ವರದಿಗಳ ಪೈಕಿ ಒಂದು ಮಾದರಿಯನ್ನು ಪರೀಕ್ಷೆಗೆ ಪರಿಗಣಿಸಿರುವುದಿಲ್ಲ. ಒಂದು ನೆಗೆಟಿವ್ ಬಂದಿರುತ್ತದೆ. ಆದ್ದರಿಂದ ಐದು ಮಾದರಿಗಳ ಪೈಕಿ ಎರಡು ಮಾದರಿಗಳು ನೆಗೆಟಿವ್ ಎಂದು ಅಧಿಕೃತ ಪ್ರಕಟಿಸಲಾಗಿದೆ. ಇನ್ನುಳಿದ 3 ಮಾದರಿಗಳ ವರದಿ‌ ನಿರೀಕ್ಷಿಸಲಾಗಿದೆ. ಹೊಸದಾಗಿ ಮತ್ತೊಂದು ಮಾದರಿಯನ್ನು ಪ್ರಯೋಗಾಲಯಕ್ಕೆ …

Read More »

ಕರ್ನಾಟಕ ವಿಧಾನಸಭೆಯ ಉಪಸಭಾಪತಿಯಾಗಿ ಸವದತ್ತಿ ಕ್ಷೇತ್ರದ ಶಾಸಕ ಆನಂದ ಮಾಮನಿ ಆಯ್ಕೆ

ಕರ್ನಾಟಕ ವಿಧಾನಸಭೆಯ ಉಪಸಭಾಪತಿಯಾಗಿ ಸವದತ್ತಿ ಕ್ಷೇತ್ರದ ಶಾಸಕ ಆನಂದ ಮಾಮನಿ ಆಯ್ಕೆಯಾಗಿದ್ದಾರೆ. ಡೆಪ್ಯುಟಿ ಸ್ಪೀಕರ್ ಸ್ಥಾನಕ್ಕೆ ಮಾಮನಿ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಅವರ ಆಯ್ಕೆ ಖಚಿತವಾಗಿದೆ. ಮಂಗಳವಾರ ಈ ಕುರಿತು ಅಧಿಕೃತ ಘೋಷಣೆಯಾಗಲಿದ್ದು, ಅಂದೇ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ತಮ್ಮ ತಂದೆಯೂ ಉಪಸಭಾಪತಿಯಾಗಿ ಕೆಲಸ ಮಾಡಿದ್ದರಿಂದ ತಮ್ಮನ್ನೂ ಉಪಸಭಾಪತಿ ಮಾಡಬೇಕೆನ್ನುವ ಬೇಡಿಕೆಯನ್ನು ಮಾಮನಿ ಮುಂದಿಟ್ಟಿದ್ದರು. ಆದರೆ ಅರಗ ಜ್ಞಾನೇಂದ್ರ ಕೂಡ ಈ ಸ್ಥಾನದ ಮೇಲೆ ಕಣ್ಣಿಟ್ಟಿದ್ದರಿಂದ ತೊಡಕಾಗಿತ್ತು. …

Read More »

ನಗರದಲ್ಲಿನ ಇಂದಿರಾ ಕ್ಯಾಂಟೀನ್ ನಲ್ಲಿ ಬಡವರಿಗೆ ಉಚಿತ  ಊಟ, ತಿಂಡಿ   ನೀಡಲಾಗುವುದು:B.S.Y.

ಬೆಂಗಳೂರು: ನಗರದಲ್ಲಿನ ಇಂದಿರಾ ಕ್ಯಾಂಟೀನ್ ನಲ್ಲಿ ಬಡವರಿಗೆ ಉಚಿತ  ಊಟ, ತಿಂಡಿ   ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ವಿಧಾನಸೌಧದಲ್ಲಿ  ಇಂದು ಸುದ್ದಿಗೋಷ್ಠಿ ನಡೆಸಿ  ಮಾತನಾಡಿದ ಅವರು, ಮಾ. 31ರೆವರೆಗೆ ಬಂದ್ ಮುಂದುವರೆಸಲಾಗುವುದು.  ಕೊರೊನಾ ವೈರಸ್ ವಿರುದ್ದ  ಹೋರಾಟ ನಡೆಸಲು ಸರ್ಕಾರ ಸನ್ನದ್ಧವಾಗಿದೆ. ವೈದ್ಯರೊಂದಿಗೆ ಸಭೆ ನಡೆಸಿದ್ದೇವೆ. ವೈದ್ಯರು ಸಲಹೆಗಳನ್ನು ನೀಡಿದ್ದು, ಅವುಗಳನ್ನು ಕಾರ್ಯರೂಪಕ್ಕೆ ತರಲಾಗುವುದು  ಎಂದು ತಿಳಿಸಿದರು. 30 ಫೀಮರ್ ಕ್ಲಿನಿಕ್ ತೆರೆಯಲಾಗುವುದು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ …

Read More »

ಜನರ ಜೀವದ ಜತೆಗೆ ಚೆಲ್ಲಾಟವಾಡಿ ಪರಿಸ್ಥಿತಿ ಲಾಭ ಪಡೆದುಕೊಳ್ಳವವರಿಗೆ ತಕ್ಕ ಶಾಸ್ತಿ:ಲಕ್ಷ್ಮಣ ಸವದಿ

ಬೆಂಗಳೂರು : ಜನರ ಜೀವದ ಜತೆಗೆ ಚೆಲ್ಲಾಟವಾಡಿ ಪರಿಸ್ಥಿತಿ ಲಾಭ ಪಡೆದುಕೊಳ್ಳವವರಿಗೆ ತಕ್ಕ ಶಾಸ್ತಿ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಖಾಸಗಿ ವಾಹನಗಳ ಮಾಲೀಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕೊರೊನಾ ವೈರಸ್ ತಡೆಗೆ ಮುನ್ನೆಚ್ಚರಿಕಾ ಕ್ರಮವಾಗಿ ಸಾರಿಗೆ ಸಂಸ್ಥೆಗಳ ಬಸ್ಸುಗಳ ಮತ್ತು ರೈಲು ಸಂಚಾರಗಳನ್ನು ಕಡಿಮೆಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಖಾಸಗಿ ವಾಹನಗಳ ಮಾಲೀಕರು ಪ್ರಯಾಣಿಕರಿಂದ ಹೆಚ್ಚಿನ ಹಣ ಪಡೆದು …

Read More »

ನಾಳೆಯಿಂದ ಸಂಪೂರ್ಣ ರಾಜ್ಯ ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ?.bsy

27 ಕ್ಕೇರಿದ ಕೊರೋನಾ ಸೊಂಕೀತರ ಸಂಖ್ಯೆ: ನಾಳೆಯಿಂದ ಇಡೀ ರಾಜ್ಯ ಸಂಪೂರ್ಣ ಲಾಕಡೌನ್ ಸಾಧ್ಯತೆ ಬೆಂಗಳೂರು: ಕೊರೋನಾ ವೈರಸ್ ಸೋಂಕು ನಿಗ್ರಹಿಸಲು ರಾಜ್ಯ ಸರ್ಕಾರ ಕಠಿಣ ಕ್ರಮಗಳನ್ನ ತೆಗೆದುಕೊಂಡಿದೆ. ಕೇಂದ್ರ ಸರ್ಕಾರದ ಸೂಚನೆಯಂತೆ ರಾಜ್ಯದ 9 ಜಿಲ್ಲೆಗಳಲ್ಲಿ ಇಂದಿನಿಂದ ಬಂದ್​ ಆದೇಶ ಹೊರಡಿಸಿದೆ. ಇನ್ನು, ನಾಳೆಯಿಂದ ಸಂಪೂರ್ಣ ರಾಜ್ಯ ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಎನ್ನಲಾಗಿದೆ. ಇಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ಈ ಬಗ್ಗೆ ನಿರ್ಧಾರ …

Read More »

144 ಉಲ್ಲಂಘಿಸಿದರೆ ಕ್ರಿಮಿನಲ್  ಕೇಸ್!!

ಬೆಳಗಾವಿ: ಬೈಲಹೊಂಗಲದಲ್ಲಿ ಒಬ್ಬರಿಗೆ ಕೊರೊನಾ ಸೋಂಕು ತಗುಲಿದೆ ಎಂದು ಮಾಧ್ಯಮಗಳಲ್ಲಿ ಪ್ರಕಟವಾದ ಸುದ್ದಿ ಸತ್ಯಕ್ಕೆ ದೂರುವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ  ಸ್ಪಷ್ಟ ಪಡಿಸಿದ್ದಾರೆ. ಈ ವಿಚಾರವಾಗಿ ಸ್ಪಷ್ಟನೆ ನೀಡಿದ ಅವರು, ಆ ಭಾಗದ ವರದಿ ನೆಗೆಟಿವ್ ಬಂದಿರುವುದರಿಂದ ಜನರು ಆತಂಕಪಡಬೇಕಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. 144 ಉಲ್ಲಂಘಿಸಿದರೆ ಕ್ರಿಮಿನಲ್  ಕೇಸ್!! ಈಗಾಗಲೇ 144  ಕಲಂ ಮೇರೆಗೆ ಐದಕ್ಕಿಂತ ಹೆಚ್ಚು ಜನರು ಗುಂಪುಗೂಡುವುದು ಅಥವಾ ಒಟ್ಟಾಗಿ ಸಂಚರಿಸುವುದನ್ನು ಈಗಾಗಲೇ ನಿರ್ಬಂಧಿಸಲಾಗಿದೆ. ಒಂದು …

Read More »

ನಾಗರಿಕರ ವೇದಿಕೆ ಕಾರ್ಯಕರ್ತರು ಇಂದು ಸಾರ್ವಜನಿಕರಿಗೆ 10 ಸಾವಿರ ಮಾಸ್ಕ್ ಗಳನ್ನು ವಿತರಿಸಿದರು.

ಶಹಾಪುರ: ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿನ ನಾಗರಿಕರ ವೇದಿಕೆ ಕಾರ್ಯಕರ್ತರು ಇಂದು ಸಾರ್ವಜನಿಕರಿಗೆ 10 ಸಾವಿರ ಮಾಸ್ಕ್ ಗಳನ್ನು ವಿತರಿಸಿದರು. ಮಾಹಾಮಾರಿ ಕೊರೊನಾ ವೈರಸ್ ಸೋಂಕು ಹರಡುವಿಕೆ ನಿರಂತರ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುಂಜಾಗೃತ ಕ್ರಮವಾಗಿ ಮಾಸ್ಕ್ , ಕೈಗಳಿಗೆ ಗ್ಲೌಸ್ ಧರಿಸಬೇಕು. ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಅಧ್ಯಕ್ಷ ಗುರು ಕಾಮಾ ಹೇಳಿದರು. ಶಹಾಪುರ ನಾಗರಿಕರ ವೇದಿಕೆ ಕಾರ್ಯಕರ್ತರು ಇದ್ದರು.

Read More »

ಕೊರೊನಾ ಪೀಡಿತರಲ್ಲಿ ಶೇ.80 ಮಂದಿಗೆ ಅಲ್ಪಜ್ವರ, ನೆಗಡಿ :ಭಯ ಮತ್ತು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ

ನವದೆಹಲಿ, ಮಾ.23-ದೇಶದಲ್ಲಿ ಕೊರೊನಾ ಪೀಡಿತರದಲ್ಲಿ ಶೇಕಡ 80ರಷ್ಟು ಜನರಿಗೆಅಲ್ಪಜ್ವತ ಮತ್ತು ನೆಗಡಿ (ಶೀತ) ಮಾತ್ರ ಕಂಡು ಬಂದಿದೆ. ಹೀಗಾಗಿ ಜನರು ಭಯ ಮತ್ತು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಇಂಡಿಯನ್‍ಕೌನ್ಸಿಲ್‍ಆಫ್ ಮೆಡಿಕಲ್ ರಿಸರ್ಚ್-ಐಸಿಎಂಆರ್) ಸ್ಪಷ್ಟಪಡಿಸಿದೆ. ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿರುವ ಐಸಿಎಂಆರ್ ಮಹಾ ನಿರ್ದೇಶಕ ಬಲರಾಂ ಭಾರ್ಗವ, ಕೋವಿಡ್-19 ವೈರಾಣು ಸೋಂಕು ಹಬ್ಬದಂತೆ ತಡೆಗಟ್ಟಲುಅಗತ್ಯವಾದಎಲ್ಲ ಮುನ್ನೆಚ್ಚರಿಕೆಗಳು ಮತ್ತು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ವಿವರಿಸಿದರು.ನಾವು ಈಗಾಗಲೇ …

Read More »

ಚಾಮರಾಜನಗರಕ್ಕೆ ಭೇಟಿ ನೀಡಲು ನನಗೆ ಮೂಢನಂಬಿಕೆ ಕಾಡಲ್ಲ : ಕಾರಜೋಳ

ಈ ಸುದ್ದಿಯನ್ನು ಶೇರ್ ಮಾಡಿ ಬೆಂಗಳೂರು,ಮಾ.23- ಚಾಮರಾಜನಗರಕ್ಕೆ ಭೇಟಿ ನೀಡಲು ತಮಗೆ ಯಾವುದೇ ಮೂಢನಂಬಿಕೆ ಕಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು, ನೀವು ನಮ್ಮ ಜಿಲ್ಲೆಗೆ ಬರುತ್ತಿರೋ ಇಲ್ಲವೋ ಆಗ ಯಾವುದೇ ಮೂಢನಂಬಿಕೆ ಕಾಡುವುದಿಲ್ಲ. ಎಲ್ಲ ಕಡೆಗೂ ಬರುತ್ತೇನೆ ಎಂದು ಹೇಳಿದರು. ಚಾಮರಾಜನಗರ ಪಟ್ಟಣ ಪರಿಮಿತಿಯಲ್ಲಿ ಚತುಷ್ಪದ ರಸ್ತೆಯನ್ನಾಗಿ ಅಗಲೀಕರಣಗೊಳಿಸುವ ಕಾಮಗಾರಿ ಪ್ರಾರಂಭಿಸಲಾಗಿದ್ದು, ಕಳೆದ 2019ರ ಮಾರ್ಚ್ ಅಂತ್ಯಕ್ಕೆ ಮುಕ್ತಾಯವಾಗಬೇಕಿತ್ತು. …

Read More »